Skip to main content

ಬೂದಗುಂಬಳ ಅಮೃತ ಸಮಾನ, ಇದರ ಸಿಪ್ಪೆ, ಬೀಜ, ತಿರಳು, ರಸ, ಹೂವು ಮತ್ತು ಚಿಗುರು ಆಹಾರವಾಗಿ ಬಳಕೆ, ಇದರಲ್ಲಿರುವ ಔಷದ ಗುಣ ಪರಿಣಾಮಕಾರಿ, ವರ್ಷದಲ್ಲಿ ನಾಕಾರು ಬಾರಿಯಾದರೂ ಇದರ ರಸ ಸೇವನೆ ಮಾಡಬೇಕು.

#ಬೂದುಗುಂಬಳ_ಸರ್ವ_ಶ್ರೇಷ್ಟ_ಆಹಾರ_ಔಷದಿ

#ಬೂದಗುಂಬಳದ_ಚಿಗುರು_ಹೂವು_ಕಾಯಿ_ಸಿಪ್ಪೆ_ತಿರಳು_ಬೀಜ_ಎಲ್ಲವೂ_ಬಳಕೆಗೆ 

#ಇದರಲ್ಲಿರುವ_ಔಷದ_ಗುಣವೂ_ಅಪರಿಮಿತ.

#ಇವತ್ತು_ಕುಡಿಯಲು_ಬೂದಗುಂಬಳದ_ರಸ_ಮತ್ತು_ಹಲ್ವ_ಮಾಡಿದ್ದೆ 

  ನನ್ನ ಡಿಪ್ಲೋಮೋ ಸಹಪಾಠಿ ಗೆಳೆಯರೊಬ್ಬರು ಸೊಯಾ೯ಸೀಸ್ ನಿಂದ ಬಳಲುತ್ತಿದ್ದರು, ದೇಹದ ಚರ್ಮದ ಕಾಯಿಲೆ, ಇದರಿಂದ ಅವರು ಜೀವನದಲ್ಲಿ ಜಿಗುಪ್ಸೆಗೆ ಒಳಗಾಗಿದ್ದರು, ಈ ಕಾಯಿಲೆಯಿಂದ ಊರು ಬಿಟ್ಟು ಬೆಂಗಳೂರು ಸೇರಿದ್ದರು, ಬಿಸಿಲಿಗೆ ಹೊರಗಡೆ ಹೋದರೆ ಇನ್ನೂ ಹೆಚ್ಚು ಇದಕ್ಕೆ ಅವರು ಮಾಡದ ಔಷದಿ ಇಲ್ಲ, ಆದರೆ ಪರಿಣಾಮ ಶೂನ್ಯ.
 ಬೆಂಗಳೂರಿನ ಚಿಕ್ಕಪೇಟೆ ಪ್ರದೇಶದಲ್ಲಿ ಅವರು ಕೆಲಸ ಮಾಡುವ ಕಂಪನಿಯ ವಸೂಲಿಗೆ ಹೋದಾಗ ಅಲ್ಲೊಂದು ಸಣ್ಣ ಆಯುರ್ವೇದ ಚಿಕಿತ್ಸಾಲಯ ನೋಡಿ ಸುಮ್ಮನೆ ಒಳ ಹೋದಾಗ ಅಲ್ಲಿ ವೈದ್ಯರೋರ್ವರು ಯಾವುದೇ ರೋಗಿ ಇಲ್ಲದೆ ವಿರಾಮವಾಗಿ ಪೇಪರ್ ಓದುತ್ತಾ ಕುಳಿತಿದ್ದವರ ಹತ್ತಿರ ತಮ್ಮ ಸಮಸ್ಯೆ ಹೇಳಿಕೊಂಡಾಗ, ಆ ವೈದ್ಯರು ಹೇಳಿದ ಪರಿಹಾರ ಪ್ರತಿ ದಿನ ಒಂದು ಲೋಟ ಬೂದಗುಂಬಳ ತುರಿದು ಹಿಂಡಿ ರಸ ಕುಡಿಯಿರಿ, ಬೇರೆ ಯಾವ ಔಷದಿಯೂ ಬೇಡ ಅಂದರಂತೆ. ಈ ವೈದ್ಯರು ಇಷ್ಟು ಸರಳವಾಗಿ ಹೇಳಿದರಲ್ಲ ಅಂತ ನನ್ನ ಗೆಳೆಯರು ನಿರ್ಲಕ್ಷ ಮಾಡಿದರಂತೆ.
  ಊರಿಗೆ ಬಂದಾಗ ಪತ್ನಿ ಹತ್ತಿರ ಹೇಳಿದ್ದಾರೆ, ಇವರ ಪತ್ನಿ ದಿನಾ ಒತ್ತಾಯದಿಂದ ಬೂದಗುಂಬಳದ ನೀರು ಕುಡಿಸುತ್ತಾ ಬಂದಿದ್ದಾರೆ ಸ್ವಲ್ಪ ದಿನದ ನಂತರ ಇವರಿಗೆ ಅರಿವೆಗೆ ಬರದಂತೆ ಸೊರ್ಯಾಸೀಸ್ ಕಡಿಮೆ ಆಗಿದೆ! ನಂತರ ಸತತ ಈ ಚಿಕಿತ್ಸೆಯಿಂದ ಈಗ ಸಂಪೂರ್ಣ ಗುಣ ಆಗಿ ಊರಲ್ಲಿ ಅಡಿಕೆ ಕೃಷಿ ಮಾಡಿಕೊಂಡಿದ್ದಾರೆ.
  ಪ್ಯಾರಲಿಸಿಸ್ ಆದವರು ಪ್ರತಿ ದಿನ ಬೂದಗುಂಬಳದ ರಸ ಕುಡಿಯಬೇಕೆಂದು ನಮ್ಮ ಊರಲ್ಲಿ ಇದಕ್ಕೆ ಚಿಕಿತ್ಸೆ ನೀಡುತ್ತಿದ್ದ ನಮ್ಮ ತಂದೆಯ ಆಪ್ತ ಗೆಳೆಯರಾಗಿದ್ದ ಹಮೀದ್ ಸಾಹೇಬರು ಹೇಳುತ್ತಿದ್ದರು ಇವರ ಚಿಕಿತ್ಸೆಯಿಂದ ನಮ್ಮ ತಂದೆ ಚೇತರಿಸಿಕೊಂಡಿದ್ದರು.
  ನಾನು ವರ್ಷಕ್ಕೆ ನಾಕಾರು ಬಾರಿ ಬೂದ ಕುಂಬಳ ತುರಿದು ರಸ ಹಿಂಡಿ ನೀರು ಕುಡಿಯುವ ಅಭ್ಯಾಸ ಮಾಡಿಕೊಂಡಿದ್ದೆ ಆದರೆ ಇತ್ತೀಚೆಗೆ ಸೋಮಾರಿತನ, ಬೂದಗುಂಬಳ ತುರಿಯಲು (ಇದು ಸ್ವಲ್ಪ ಶ್ರಮದ ಕೆಲಸ)
   ಇವತ್ತು ಒಂದು ಬೂದಗುಂಬಳ ಕಾಯಿ ತುಂಡರಿಸಿ, ತಿರುಳು ಬೀಜ ತೆಗೆದು, ಸಿಪ್ಪೆ ತೆಗೆದು ಬೂದಗುಂಬಳದ ತುಂಡುಗಳನ್ನು ತುರಿಯದೇ ಮಿಕ್ಸಿ ಮಾಡಿ ರಸ ತೆಗೆದೆ ಇದು ಅತ್ಯಂತ ಸುಲಭ ಅನ್ನಿಸಿತು.
  ನಾನು ನನ್ನ ಪತ್ನಿ ಮತ್ತು ಮಗನಿಗೆ ಆಗುವಷ್ಟು ಮೂರು ದೊಡ್ಡ ಗ್ಲಾಸ್ ರಸ ಸಿಕ್ಕಿತು.
  ಸಿಪ್ಪೆಗಳನ್ನು ಉದ್ದವಾಗಿ ತುಂಡರಿಸಿ ಉಪ್ಪು ಮತ್ತು ಮಜ್ಜಿಗೆಯಲ್ಲಿ ಸಂಡಿಗೆಗೆ ನೆನಸಿದೆ, ರಸ ಹಿಂಡಿದ ತುರಿಯನ್ನು ತುಪ್ಪ, ಬೆಲ್ಲ, ಏಲಕ್ಕಿ ಮಿಶ್ರಣದೊಂದಿಗೆ ಹಲ್ವಾ ಕೂಡ ಮಾಡಿದೆ.
 ಬೀಜ ತೆಗೆದು ಒಣಗಿಸಿ ಮುಂದೆ ಅದರಿಂದ ಜ್ಯೂಸ್ ಮಾಡಬಹುದು (ಹೊಟ್ಟೆ ಹುಳ ನಿವಾರಣೆ ಮಾಡುತ್ತದೆ), ತಿರುಳಿನಿಂದ ತಂಬಳಿ- ಗೊಜ್ಜು ಮಾಡಬಹುದು, ಇದರ ಬಳ್ಳಿಯ ಚಿಗುರಿನಿಂದ ಪಲ್ಯ, ಹೂವಿನಿಂದ ತಂಬಳಿ ಸಾಸುವೆ ಮಾಡಬಹುದು ಅಂದರೆ ಬೂದ ಗುಂಬಳ ಸರ್ವ ರೀತಿಯ ಬಳಕೆ ಆಗುವ ಏಕೈಕ ತರಕಾರಿ ಅನ್ನಿಸುತ್ತೆ.
   ಬೂದಗುಂಬಳ ಮೆಕ್ಸಿಕೊ ಮೂಲದಂತೆ, ನಾಲ್ಕು ಸಾವಿರ ವಷ೯ದಿಂದ ಬಳಕೆಯಲ್ಲಿದೆಯಂತೆ ಇದರಲ್ಲಿನ ಔಷದ ಗುಣ ಕೂಡ ವಿಶೇಷ,ಚರ್ಮದ ಕಾಯಿಲೆ, ಮೂತ್ರಕೋಶದ ಕಾಯಿಲೆ, ಮೆದುಳಿನಲ್ಲಿ ರಕ್ತ ಹೆಪ್ಪುಗಟ್ಟುವುದಕ್ಕೆ ರಾಮಬಾಣ.
  ವರ್ಷದಲ್ಲಿ ನಾಲ್ಕಾರು ಬಾರಿಯಾದರೂ ಇದರ ನೀರು ಸೇವಿಸುವುದು ಆರೋಗ್ಯಕ್ಕೆ ಒಳ್ಳೆಯದು.
  ನೀವು ಬಳಸಿ ನೋಡಿ

Comments

Popular posts from this blog

# ಜುಟ್ಟು ಕಾಳಿಂಗ ಸಪ೯ದ ಆಸ್ತಿತ್ವದ ಮಲೆನಾಡಿನ ಮಿಥ್ಯೆ#

  # ಕಾಳಿ೦ಗ ಸಪ೯ದಲ್ಲಿ ಜುಟ್ಟು ಕಾಳಿಂಗ ಸಪ೯ ಅಂತ ಇದೇ ಅನ್ನುವ ಯಾರು ನೋಡದ ಸಪ೯ದ ಅಸ್ತಿತ್ವ#    ಮಲೆನಾಡಿನ ಹಳ್ಳಿಗಳಲ್ಲಿ, ಅದು ಕಾಳಿ೦ಗ ಸಪ೯ದ ವಾಸಸ್ಥಳದ ಪರಿಸರದಲ್ಲಿ ಜುಟ್ಟು ಕಾಳಿಂಗ ಸಪ೯ ಇದೆ ಅನ್ನುವ ಮಾತು ಆಗಾಗ್ಗೆ ಕೇಳುತ್ತಿರುತ್ತೇವೆ. ಆದರೆ ಆ ರೀತಿಯ ಹಾವು ಇಲ್ಲ ಎಂದು ಹಾವಿನ ಬಗ್ಗೆ ಸಂಶೋದನೆ ಮಾಡುವವರು, ಅರಣ್ಯ ಇಲಾಖೆಯವರು, ಹಾವು ಹಿಡಿಯುವವರು ಖಡಾಖಂಡಿತವಾಗಿ ಹೇಳುತ್ತಾರಾದರು, ಈ ವದಂತಿ ಹೇಗೆ ಹರಡಿದೆ?.    ಇದು ಒಂದು ಊರು ಹಳ್ಳಿಯಲ್ಲ ನಾನು ನೋಡಿದಂತೆ ಮಹಾರಾಷ್ಟ್ರದ ರತ್ನಗಿರಿಯಿ೦ದ ಕೇರಳದ ಕಾಸರಗೋಡಿನ ತನಕ ಜುಟ್ಟು ಕಾಳಿಂಗದ ಅನೇಕ ರೋಚಕ ಕಥೆ ಕೇಳಿದ್ದೇನೆ.   ಪ್ರತ್ಯಕ್ಷ ನೋಡಿದವರು ತಾವು ಎನ್ನುವ ಅನೇಕರಲ್ಲಿ ಮಾತಾಡಿದ್ದೇನೆ ಆದರೆ ಅದು ನಂಬಲಹ೯ ಮಾಹಿತಿ ಅನಿಸಲಿಲ್ಲ, ಒಂದು ರೀತಿ ಕಾಲ್ಪನಿಕ ತ್ರಿಲ್ಲರ್ ಕಥೆ ಅಷ್ಟೇ ಅನ್ನಬಹುದು.    ಜಡೆ ಕಾಳಿಂಗ ಸಪ೯ಕ್ಕೆ ರೋಷ ಜಾಸ್ತಿ, ಹೆಡೆ ಮೇಲೆ ಕೂದಲಿನ ಜುಟ್ಟು ಇರುತ್ತೆ, ಮನುಷ್ಯರನ್ನ ಕಂಡರೆ ಓಡಿಸಿಕೊಂಡು ಬರುತ್ತೆ, ಅದರಿಂದ ತಪ್ಪಿಸಿಕೊಳ್ಳಲು ಒಂದೇ ದಾರಿ ಅದೇನೆಂದರೆ ತಗ್ಗಿನ ಪ್ರದೇಶದಲ್ಲಿ ಓಡುವುದು.     ಯಾಕೆ೦ದರೆ ಓಡಿಸಿಕೊಂಡು ಬರುವ ಜುಟ್ಟು ಕಾಳಿಂಗದ ಜುಟ್ಟು, ಇಳಿಜಾರಿನಲ್ಲಿ ಅದರ ತಲೆಯಿ೦ದ ಇಳಿಜಾರಿಗೆ ಸರಿಯುವುದರಿಂದ  ಕಣ್ಣಿನ ಮೇಲೆ ಕೂದಲ ಜುಟ್ಟು ಮುಚ್ಚುವುದರಿಂದ ಕಣ್ಣು ಕಾಣುವುದಿಲ್ಲ, ಆಗಲೇ ತಪ್...

ಶರಾವತಿ ನದಿ ಉಗಮ ಸ್ಥಾನ ಅಂಬುತೀಥ೯.

ಇಡೀ ರಾಜ್ಯಕ್ಕೆ ವಿದ್ಯುತ್ ನೀಡುವ ಶರಾವತಿ ನದಿಯ ಉಗಮ ಸ್ಥಾನ ಅಂಬುತೀಥ೯, ಆರಗ ಸಮೀಪದ ತೀಥ೯ಳ್ಳಿ ತಾಲ್ಲೂಕಿನಲ್ಲಿದೆ( ಶಿವಮೊಗ್ಗ ಜಿಲ್ಲೆ)    ಅಂಬು ತೀಥ೯ದಲ್ಲಿ ಶ್ರೀ ರಾಮ ವನವಾಸದಲ್ಲಿದ್ದಾಗ ಸೀತಾ ಮಾತೆಗೆ ಪೂಜೆಗೆ ನೀರು ಸಿಗದಿದ್ದಾಗ ರಾಮ ತನ್ನ ಅಂಬಿನಿಂದ (ಬಿಲ್ಲಿನ ಬಾಣದಿಂದ) ನೆಲ ಸೀಳಿ ನೀರು ತಂದರೆ೦ದು ರಾಮಾಯಣದಲ್ಲಿ ಉಲ್ಲೇಖವಿದೆ, ಹಾಗಾಗಿ ಈ ಸ್ಥಳಕ್ಕೆ ಅಂಬುತೀಥ೯ ಎಂಬ ಹೆಸರು ಬ೦ತು ಎಂಬುದು ಸ್ಥಳ ಪುರಾಣ.    ಇಲ್ಲಿ ಸಣ್ಣ ತೊರೆಯಾಗಿ ಹುಟ್ಟುವ ನದಿ ಬಾಣದಿಂದ ಹುಟ್ಟಿದ್ದರಿಂದ ಶರಾವತಿ ಎ೦ಬ ಹೆಸರು ಪಡೆದು ಪೂವ೯ಕ್ಕೆ ಹರಿದು ನಂತರ ಪಶ್ಚಿಮ ಮುಖವಾಗಿ ತಿರುಗಿ ಹೊಸನಗರ ತಾಲ್ಲೂಕನ್ನ ದಾಟಿ ಸಾಗರ ತಾಲ್ಲೂಕಿನ ಜೋಗದಲ್ಲಿ ಜಲಪಾತವಾಗಿ ದಟ್ಟ ಕಾನನದ ಕಣಿವೆ ಮುಖಾಂತರ ಹರಿದು ಹೊನ್ನಾವರದಲ್ಲಿ ಅರಬ್ಬಿ ಸಮುದ್ರ ಸೇರುತ್ತದೆ.   ಈ ನದಿಗೆ ಮೊದಲಿಗೆ ಹೀರೇ ಬಾಸ್ಕರ ಎಂಬಲ್ಲಿ ನಂತರ ಲಿಂಗನಮಕ್ಕಿಯಲ್ಲಿ ಆಣೆಕಟ್ಟು ಕಟ್ಟಿ ರಾಜ್ಯಕ್ಕೆ ಜಲ ವಿದ್ಯುತ್ ನೀಡುತ್ತಿರುವುದರಿಂದ ಲಕ್ಷಾಂತರ ಎಕರೆ ಕಾಡು, ಜಮೀನು ಅನೇಕ ಊರು ಮುಳುಗಡೆ ಆಯಿತು ಸಾವಿರಾರು ಕುಟುಂಬಗಳು ಸಂತ್ರಸ್ಥರಾದದ್ದು ಇತಿಹಾಸ.    ಈ ನದಿ ಜೋಗದಲ್ಲಿ ದುಮುಕುವ ಜಲಪಾತ ವಿಶ್ವದ ಸುಂದರ ಜಲಪಾತದಲ್ಲಿ ಒಂದಾಗಿದೆ.    ಹಾಗಾಗಿ ಶರಾವತಿ ನದಿಯ ಉಗಮ ಸ್ಥಾನಕ್ಕೆ ಮಹತ್ವವಿದೆ, ಒಮ್ಮೆಯಾದರೂ ಈ ನದಿ ಮೂಲ ಸಂದಶಿ೯ಸಬೇಕು ಆದರೆ ಇಲ್ಲಿ ಶರಾವತಿ ವ...

HISTORICAL SAGAR MARIKAMBA JATRA.ಐತಿಹಾಸಿಕ ಸಾಗರದ ಮಾರಿಕಾಂಬಾ ಜಾತ್ರೆ

     ಸಾಗರದ ಮಾರಿಕಾಂಬಾ ಜಾತ್ರೆ ಐತಿಹಾಸಿಕ ಚರಿತ್ರೆಯಲ್ಲಿ ದಾಖಲೆ.        ಕನಾ೯ಟಕ ರಾಜ್ಯದಲ್ಲಿ ಎರೆಡು ಮಾರಿಕಾಂಬಾ ಜಾತ್ರೆಗಳು ಪ್ರಸಿದ್ಧಿ ಪಡೆದಿದೆ ಅದು ಉತ್ತರ ಕನ್ನಡ ಜಿಲ್ಲೆಯ ಸಿಸಿ೯ಯದ್ದು ಮತ್ತು ಶಿವಮೊಗ್ಗ ಜಿಲ್ಲೆಯ ಸಾಗರದ್ದು.    ಪ್ರತಿ ಮೂರು ವಷ೯ಕೆ ಈ ಜಾತ್ರೆ ಆಚರಿಸಲಾಗುತ್ತೆ ಶೂದ್ರ ವಗ೯ದವರು ಭಯ ಮತ್ತು ಭಕ್ತಿಯಿಂದ ಕುರಿ ಕೋಳಿ ಬಲಿ ನೀಡುವ ಪರಂಪರೆ ಇದೆ.ಮಂಗಳವಾರ ಮೇಲು ಜಾತಿಯ ಜನರ ಪೂಜೆ ದೇವಿಯ ತವರು ಮನೆಯಲ್ಲಿ ನಡೆಯುತ್ತದೆ ನಂತರ ರಾತ್ರಿ ಗಂಡನ ಸೇರುವ ಮಾರಿಗೆ ಶೂದ್ರರ ಪೂಜೆ, ಬಲಿ ಮೀಸಲು.    ಮೊದಲೆಲ್ಲ ಮಾರಿಯಮ್ಮನಿಗೆ ಕೊಣನ ಬಲಿ ನೀಡುತ್ತಿದ್ದರು ಈಗ ಇದು ಕಾನೂನು ಪ್ರಕಾರ ನಿಷಿದ್ಧ ಆದರೆ ಈ ಆಚಾರಣೆ ಗುಪ್ತವಾಗಿ ಬೇರೆ ಕಡೆ ನಡೆಸಲಾಗುತ್ತೆ ಅನ್ನುತ್ತಾರೆ.    ಸಾಗರದ ಮಾರಿಕಾ0ಬಾ ಜಾತ್ರೆ ಜಾತ್ರೆಯಿ೦ದ ಜಾತ್ರೆಗೆ ಅದೂರಿಯಾಗಿ ನಡೆಯುತ್ತದೆ, ಕೋಟ್ಯಾoತರ ಹಣದ ವಹಿವಾಟು ಕೂಡ, ಮೊದಲೆಲ್ಲ ಹಣದ ಅಪರಾ ತಪರ ಆಗುತ್ತಿದೆ ಎಂಬ ಗುಲ್ಲು ಇತ್ತು ಆದರೆ ಈಗೆಲ್ಲ ಪಾರದಶ೯ಕವಾಗಿದೆ ಆದರೂ ಈ ಬಾರಿಯ 2017ರ ಜಾತ್ರೆಯಲ್ಲಿ ಅವ್ಯವಹಾರದ ಆರೋಪ ಮಾಡಲಾಗಿದೆ ಈ ವಿಚಾರ ಇಲ್ಲಿ ಅಪ್ರಸ್ತುತ ಆದರೂ ಈ ಬಗ್ಗೆ ಬರೆಯಲು ಕಾರಣ ಕೆಳದಿ ಅರಸರ ಕಾಲದಲ್ಲಿ ಅಂದರೆ 350 ವಷ೯ದ ಹಿಂದೆಯೂ ರಾಜರಿಗೆ ಸಾಗರದ ಮಾರಿಕಾಂಬಾ ಜಾತ್ರೆಯಲ್ಲಿ ಸಾವ೯ಜನಿಕರಿಂದ ಸಂಗ್ರಹಿಸಿದ ಜಾತ...