Skip to main content

ಬೂದಗುಂಬಳ ಅಮೃತ ಸಮಾನ, ಇದರ ಸಿಪ್ಪೆ, ಬೀಜ, ತಿರಳು, ರಸ, ಹೂವು ಮತ್ತು ಚಿಗುರು ಆಹಾರವಾಗಿ ಬಳಕೆ, ಇದರಲ್ಲಿರುವ ಔಷದ ಗುಣ ಪರಿಣಾಮಕಾರಿ, ವರ್ಷದಲ್ಲಿ ನಾಕಾರು ಬಾರಿಯಾದರೂ ಇದರ ರಸ ಸೇವನೆ ಮಾಡಬೇಕು.

#ಬೂದುಗುಂಬಳ_ಸರ್ವ_ಶ್ರೇಷ್ಟ_ಆಹಾರ_ಔಷದಿ

#ಬೂದಗುಂಬಳದ_ಚಿಗುರು_ಹೂವು_ಕಾಯಿ_ಸಿಪ್ಪೆ_ತಿರಳು_ಬೀಜ_ಎಲ್ಲವೂ_ಬಳಕೆಗೆ 

#ಇದರಲ್ಲಿರುವ_ಔಷದ_ಗುಣವೂ_ಅಪರಿಮಿತ.

#ಇವತ್ತು_ಕುಡಿಯಲು_ಬೂದಗುಂಬಳದ_ರಸ_ಮತ್ತು_ಹಲ್ವ_ಮಾಡಿದ್ದೆ 

  ನನ್ನ ಡಿಪ್ಲೋಮೋ ಸಹಪಾಠಿ ಗೆಳೆಯರೊಬ್ಬರು ಸೊಯಾ೯ಸೀಸ್ ನಿಂದ ಬಳಲುತ್ತಿದ್ದರು, ದೇಹದ ಚರ್ಮದ ಕಾಯಿಲೆ, ಇದರಿಂದ ಅವರು ಜೀವನದಲ್ಲಿ ಜಿಗುಪ್ಸೆಗೆ ಒಳಗಾಗಿದ್ದರು, ಈ ಕಾಯಿಲೆಯಿಂದ ಊರು ಬಿಟ್ಟು ಬೆಂಗಳೂರು ಸೇರಿದ್ದರು, ಬಿಸಿಲಿಗೆ ಹೊರಗಡೆ ಹೋದರೆ ಇನ್ನೂ ಹೆಚ್ಚು ಇದಕ್ಕೆ ಅವರು ಮಾಡದ ಔಷದಿ ಇಲ್ಲ, ಆದರೆ ಪರಿಣಾಮ ಶೂನ್ಯ.
 ಬೆಂಗಳೂರಿನ ಚಿಕ್ಕಪೇಟೆ ಪ್ರದೇಶದಲ್ಲಿ ಅವರು ಕೆಲಸ ಮಾಡುವ ಕಂಪನಿಯ ವಸೂಲಿಗೆ ಹೋದಾಗ ಅಲ್ಲೊಂದು ಸಣ್ಣ ಆಯುರ್ವೇದ ಚಿಕಿತ್ಸಾಲಯ ನೋಡಿ ಸುಮ್ಮನೆ ಒಳ ಹೋದಾಗ ಅಲ್ಲಿ ವೈದ್ಯರೋರ್ವರು ಯಾವುದೇ ರೋಗಿ ಇಲ್ಲದೆ ವಿರಾಮವಾಗಿ ಪೇಪರ್ ಓದುತ್ತಾ ಕುಳಿತಿದ್ದವರ ಹತ್ತಿರ ತಮ್ಮ ಸಮಸ್ಯೆ ಹೇಳಿಕೊಂಡಾಗ, ಆ ವೈದ್ಯರು ಹೇಳಿದ ಪರಿಹಾರ ಪ್ರತಿ ದಿನ ಒಂದು ಲೋಟ ಬೂದಗುಂಬಳ ತುರಿದು ಹಿಂಡಿ ರಸ ಕುಡಿಯಿರಿ, ಬೇರೆ ಯಾವ ಔಷದಿಯೂ ಬೇಡ ಅಂದರಂತೆ. ಈ ವೈದ್ಯರು ಇಷ್ಟು ಸರಳವಾಗಿ ಹೇಳಿದರಲ್ಲ ಅಂತ ನನ್ನ ಗೆಳೆಯರು ನಿರ್ಲಕ್ಷ ಮಾಡಿದರಂತೆ.
  ಊರಿಗೆ ಬಂದಾಗ ಪತ್ನಿ ಹತ್ತಿರ ಹೇಳಿದ್ದಾರೆ, ಇವರ ಪತ್ನಿ ದಿನಾ ಒತ್ತಾಯದಿಂದ ಬೂದಗುಂಬಳದ ನೀರು ಕುಡಿಸುತ್ತಾ ಬಂದಿದ್ದಾರೆ ಸ್ವಲ್ಪ ದಿನದ ನಂತರ ಇವರಿಗೆ ಅರಿವೆಗೆ ಬರದಂತೆ ಸೊರ್ಯಾಸೀಸ್ ಕಡಿಮೆ ಆಗಿದೆ! ನಂತರ ಸತತ ಈ ಚಿಕಿತ್ಸೆಯಿಂದ ಈಗ ಸಂಪೂರ್ಣ ಗುಣ ಆಗಿ ಊರಲ್ಲಿ ಅಡಿಕೆ ಕೃಷಿ ಮಾಡಿಕೊಂಡಿದ್ದಾರೆ.
  ಪ್ಯಾರಲಿಸಿಸ್ ಆದವರು ಪ್ರತಿ ದಿನ ಬೂದಗುಂಬಳದ ರಸ ಕುಡಿಯಬೇಕೆಂದು ನಮ್ಮ ಊರಲ್ಲಿ ಇದಕ್ಕೆ ಚಿಕಿತ್ಸೆ ನೀಡುತ್ತಿದ್ದ ನಮ್ಮ ತಂದೆಯ ಆಪ್ತ ಗೆಳೆಯರಾಗಿದ್ದ ಹಮೀದ್ ಸಾಹೇಬರು ಹೇಳುತ್ತಿದ್ದರು ಇವರ ಚಿಕಿತ್ಸೆಯಿಂದ ನಮ್ಮ ತಂದೆ ಚೇತರಿಸಿಕೊಂಡಿದ್ದರು.
  ನಾನು ವರ್ಷಕ್ಕೆ ನಾಕಾರು ಬಾರಿ ಬೂದ ಕುಂಬಳ ತುರಿದು ರಸ ಹಿಂಡಿ ನೀರು ಕುಡಿಯುವ ಅಭ್ಯಾಸ ಮಾಡಿಕೊಂಡಿದ್ದೆ ಆದರೆ ಇತ್ತೀಚೆಗೆ ಸೋಮಾರಿತನ, ಬೂದಗುಂಬಳ ತುರಿಯಲು (ಇದು ಸ್ವಲ್ಪ ಶ್ರಮದ ಕೆಲಸ)
   ಇವತ್ತು ಒಂದು ಬೂದಗುಂಬಳ ಕಾಯಿ ತುಂಡರಿಸಿ, ತಿರುಳು ಬೀಜ ತೆಗೆದು, ಸಿಪ್ಪೆ ತೆಗೆದು ಬೂದಗುಂಬಳದ ತುಂಡುಗಳನ್ನು ತುರಿಯದೇ ಮಿಕ್ಸಿ ಮಾಡಿ ರಸ ತೆಗೆದೆ ಇದು ಅತ್ಯಂತ ಸುಲಭ ಅನ್ನಿಸಿತು.
  ನಾನು ನನ್ನ ಪತ್ನಿ ಮತ್ತು ಮಗನಿಗೆ ಆಗುವಷ್ಟು ಮೂರು ದೊಡ್ಡ ಗ್ಲಾಸ್ ರಸ ಸಿಕ್ಕಿತು.
  ಸಿಪ್ಪೆಗಳನ್ನು ಉದ್ದವಾಗಿ ತುಂಡರಿಸಿ ಉಪ್ಪು ಮತ್ತು ಮಜ್ಜಿಗೆಯಲ್ಲಿ ಸಂಡಿಗೆಗೆ ನೆನಸಿದೆ, ರಸ ಹಿಂಡಿದ ತುರಿಯನ್ನು ತುಪ್ಪ, ಬೆಲ್ಲ, ಏಲಕ್ಕಿ ಮಿಶ್ರಣದೊಂದಿಗೆ ಹಲ್ವಾ ಕೂಡ ಮಾಡಿದೆ.
 ಬೀಜ ತೆಗೆದು ಒಣಗಿಸಿ ಮುಂದೆ ಅದರಿಂದ ಜ್ಯೂಸ್ ಮಾಡಬಹುದು (ಹೊಟ್ಟೆ ಹುಳ ನಿವಾರಣೆ ಮಾಡುತ್ತದೆ), ತಿರುಳಿನಿಂದ ತಂಬಳಿ- ಗೊಜ್ಜು ಮಾಡಬಹುದು, ಇದರ ಬಳ್ಳಿಯ ಚಿಗುರಿನಿಂದ ಪಲ್ಯ, ಹೂವಿನಿಂದ ತಂಬಳಿ ಸಾಸುವೆ ಮಾಡಬಹುದು ಅಂದರೆ ಬೂದ ಗುಂಬಳ ಸರ್ವ ರೀತಿಯ ಬಳಕೆ ಆಗುವ ಏಕೈಕ ತರಕಾರಿ ಅನ್ನಿಸುತ್ತೆ.
   ಬೂದಗುಂಬಳ ಮೆಕ್ಸಿಕೊ ಮೂಲದಂತೆ, ನಾಲ್ಕು ಸಾವಿರ ವಷ೯ದಿಂದ ಬಳಕೆಯಲ್ಲಿದೆಯಂತೆ ಇದರಲ್ಲಿನ ಔಷದ ಗುಣ ಕೂಡ ವಿಶೇಷ,ಚರ್ಮದ ಕಾಯಿಲೆ, ಮೂತ್ರಕೋಶದ ಕಾಯಿಲೆ, ಮೆದುಳಿನಲ್ಲಿ ರಕ್ತ ಹೆಪ್ಪುಗಟ್ಟುವುದಕ್ಕೆ ರಾಮಬಾಣ.
  ವರ್ಷದಲ್ಲಿ ನಾಲ್ಕಾರು ಬಾರಿಯಾದರೂ ಇದರ ನೀರು ಸೇವಿಸುವುದು ಆರೋಗ್ಯಕ್ಕೆ ಒಳ್ಳೆಯದು.
  ನೀವು ಬಳಸಿ ನೋಡಿ

Comments

Popular posts from this blog

Blog number 1782. ಅರಳಸುರಳಿಯ ರಾಘವೇಂದ್ರ ಕೇಕೋಡರ ಕುಟುಂಬದ ತಪ್ಪು ನಿರ್ದಾರದ ದುರಂತ.

#ತೀರ್ಥಹಳ್ಳಿಯ_ಅರಳಸುರಳಿಯ_ಒಂದೇ_ಕುಟುಂಬದ_ನಾಲ್ವರು_ಮೃತರಾದ_ರಹಸ್ಯವೇನು? #ಈ_ಬಗ್ಗೆ_ಆ_ಊರಿನ_ಸಮೀಪದ_ಈ_ಕುಟುಂಬದ_ಪರಿಚಯ_ಇರುವವರಿಗೆ_ವಿಚಾರಿಸಿದ್ದೆ. #ಅವರು_ಈ_ಘಟನೆ_ಬಗ್ಗೆ_ಸವಿಸ್ತಾರವಾಗಿ_ಲಿಖಿತ_ಲೇಖನ_ಬರೆದಿದ್ದಾರೆ. #ಅವರ_ವಿನಂತಿ_ಅವರ_ಹೆಸರು_ಬಹಿರಂಗಗೊಳಿಸ_ಬಾರದು. #ಆದ್ದರಿಂದ_ಈ_ಲೇಖನ_ಪೋಸ್ಟ್_ಮಾಡಬಾರದೆಂದಿದ್ದೆ_ಆದರೆ_ಇದು_ಮಲೆನಾಡಿಗರ_ಮನೆ_ಮನೆಯ_ಕಥೆ #ಆದ್ದರಿಂದ_ಇಲ್ಲಿ_ಪೋಸ್ಟ್_ಮಾಡಿದೆ.    ಇಲ್ಲಿ ತಪ್ಪು ಯಾರದ್ದೂ ಇಲ್ಲ... ಪಶ್ಚಾತ್ತಾಪದ ಪ್ರಾಯಶ್ಚಿತ ಕೇಳಲು ಅವರಾರು ಇಲ್ಲ .....ಆದರೆ ಈ ರೀತಿ ಜೀವ ತ್ಯಾಗ ಮಾಡುವ ಆತುರದ ಕೆಟ್ಟ ನಿರ್ದಾರ ಮಾತ್ರ ಸರಿ ಅಲ್ಲ.     ಇವರ ಅಣ್ಣ ಆರ್.ಎಸ್.ಎಸ್. ಪ್ರಚಾರಕರಾಗಿ ದೆಹಲಿಯಲ್ಲಿ ಏಳು ವಷ೯ ಮೋದಿ ಜೊತೆ ಒಂದೇ ಕೋಣೆ ಹಂಚಿಕೊಂಡವರು, ಇನ್ನೊಬ್ಬ ಸಹೋದರ ಮೂಳೆ ತಜ್ಞರಾಗಿ ಶಿವಮೊಗ್ಗದಲ್ಲಿ ಆಸ್ಪತ್ರೆ ಮಾಡಿಕೊಂಡಿದ್ದಾರೆ.   #ದೀರ್ಘವಾದರೂ_ಪೂರ್ಣ_ಲೇಖನ_ಓದಿ   #ಹೀಗೊಂದು_ಸುಕುಟುಂಬ_ಆತ್ಮಾಘಾತ_ಮತ್ತು_ತದನಂತರದ_ಸಹಾಗಮನ.... ಮೂಡಣದಲ್ಲಿ ರವಿ ಮೂಡಲು ಅಣಿ ಯಾಗುತ್ತಿಧ್ದ .. ಹಾದಿಗಣಪತಿ ದೇವರು ಗರ್ಭಗುಡಿಯ ನಂದಾದೀಪದ ಮಂದ ಬೆಳಕಿನಲ್ಲಿ ತನ್ನ ಗುಡಿಯ ಎದುರಿನ ತಗ್ಗಿನಲ್ಲಿದ್ದ  ರಾಘವೇಂದ್ರ ಕೇಕೋಡರ ಮನೆಯನ್ನು ಎವೆಯಕ್ಕದೇ ನೋಡುತ್ತಲಿದ್ದ... ಊರ ಎಲ್ಲಾ ಮನೆಯಂತೆ ಆ ಮನೆಯಲ್ಲೂ ಆ ಬೆಳಗಿನಲ್ಲಿ ಮನೆಯೊಡತಿ ನಾಗರತ್ನಕ್ಕ ಆ ಸಮಯದಲ್ಲಿ ದೇವರಿಗೆ ದೀಪ ಹಚ್ಚಿ ಹೊಸ್ತಿಲು ಪೂಜೆ ಮಾಡ

Blog number 1037. ರಾಜಕುಮಾರಿ ಶಾಂತವ್ವ ಮತ್ತು ದಲಿತ ಯುವಕ ಸಿದ್ದೇಶ್ವರರ ಅಮರ ಪ್ರೇಮದ ಸ್ಮಾರಕ, ಅನ್ಯ ಜಾತಿ ವಿವಾಹವಾದ್ದರಿಂದ ರಾಜಕುಮಾರಿಗೆ ಸೂಳೆ ಪಟ್ಟ ನೀಡಿದ ಸಮಾಜ. ಸಮಾಜದ ಒಳಿತಿಗಾಗಿ ಶಾಂತವ್ವ ಕಟ್ಟಿಸಿದ ಬೃಹತ್ ಕೆರೆಗೆ ಜನ ಕರೆದದ್ದು ಸೂಳೆ ಕಟ್ಟಿಸಿದ ಕೆರೆ ಅದೇ ಸೂಳೆಕೆರೆ / ಶಾಂತಿ ಸಾಗರ

# ಸೂಳೆಕೆರೆ (ಶಾಂತಿ ಸಾಗರ) ಅಂತರ್ ಜಾತಿ ಪ್ರೇಮ ವಿವಾಹದ ದುರOತ ಕಥೆ. #ಅಕ್ಟೋಬರ್ 2019 ರಲ್ಲಿ ತುಂಬಿ ತುಳುಕಿತ್ತು.  ಚಿತ್ರದುಗ೯, ದಾವಣಗೆರೆ ಬಳ್ಳಾರಿ ಮುಂತಾದ ಮಳೆ ಕಡಿಮೆ ಆಗುತ್ತಿದ್ದ ಜಿಲ್ಲೆಗಳಲ್ಲಿ ಅದೂ ಅಕ್ಟೋಬರ್ ತಿಂಗಳ 2019 ರಲ್ಲಿ  ಬಂದಿದ್ದ ಬಾರಿ ಮಳೆ ಎಲ್ಲಾ ಕೆರೆ, ಹೊಂಡಗಳು ತುಂಬಿ ತುಳುಕಿದೆ, ಸಾಮಾಜಿಕ ಜಾಲ ತಾಣದಲ್ಲಿ 40 ವಷ೯ದಲ್ಲಿ ಇಂತ ಮಳೆ ಬಂದಿಲ್ಲ ಅಂತ ಸುದ್ದಿ ಹರಿದಾಡುತ್ತಿತ್ತು ಮತ್ತು  ಸೂಳೆಕೆರೆ ತುಂಬಿ ಕೋಡಿ ಬಿದ್ದಿದೆ ಅಂತೆಲ್ಲ Post ನೋಡಿ ಬೆಂಗಳೂರಿಂದ ಬರುವಾಗ ಚಿತ್ರದುಗ೯ ಮಾಗ೯ವಾಗಿ ಚನ್ನಗಿರಿ ತಲುಪಿ ಸೂಳೆಕೆರೆ ನೋಡಲು ಹೋಗಿದ್ದೆ.  11ನೇ ಶತಮಾನದಲ್ಲಿ (1128ರಲ್ಲಿ)ಕೇವಲ 3 ವಷ೯ದಲ್ಲಿ ಈ ಕೆರೆ ನಿಮಾ೯ಣ ಮಾಡಿಸಿದ್ದು ಶಾಂತವ್ವ ಎಂಬ ರಾಜ ಕುಮಾರಿ ಅವಳು ಸ್ವಣ೯ವತಿ ಪಟ್ಟಣದ ದೊರೆ ವಿಕ್ರಮ ರಾಜನ ಮಗಳು, ಸಿದ್ದೇಶ್ವರ ಎಂಬ ಅನ್ಯ ಜಾತಿಯ ಯುವಕನೊ೦ದಿಗೆ ಗಾಂದವ೯ ವಿವಾಹ ಆಗುತ್ತಾಳೆ ಇದನ್ನ ಸಹಿಸದ ಮತ್ತು ಒಪ್ಪದ ಜನತೆ ಸೂಳೆ ಎಂದು ಮೂದಲಿಸುತ್ತಾರOತೆ ಈ ರೀತಿ ತನಗೆ ಬಂದ ಕಳಂಕ ಕಳೆಯಲು ಈ ಬೃಹತ್ ಕೆರೆ ತನ್ನ ಪತಿ ಸಿದ್ದೇಶ್ವರನ ಜೊತೆ ಸೇರಿ ನಿಮಿ೯ಸಿ ಕೆರೆಗೆ ಹಾರವಾದಳೆoಬ ಇತಿಹಾಸ ಇದೆ ಇದರಿಂದ ನೊಂದ ಪತಿ ಸಿದ್ಧೇಶ್ವರ ಕೂಡ ಎದುರಿನ ಗುಡ್ಡದಲ್ಲಿ ಜೀವ ತ್ಯಾಗ ಮಾಡುತ್ತಾನೆ ಈಗ ಅಲ್ಲಿ ಸಿದ್ದೇಶ್ವರ ದೇವಸ್ಥಾನವಿದೆ.   ಈ ಕೆರೆ ಈಗಲೂ ಸೂಳೆಕೆರೆ ಎಂದೆ ಹೆಸರಾಗಿದೆ ಈ

# ಜುಟ್ಟು ಕಾಳಿಂಗ ಸಪ೯ದ ಆಸ್ತಿತ್ವದ ಮಲೆನಾಡಿನ ಮಿಥ್ಯೆ#

  # ಕಾಳಿ೦ಗ ಸಪ೯ದಲ್ಲಿ ಜುಟ್ಟು ಕಾಳಿಂಗ ಸಪ೯ ಅಂತ ಇದೇ ಅನ್ನುವ ಯಾರು ನೋಡದ ಸಪ೯ದ ಅಸ್ತಿತ್ವ#    ಮಲೆನಾಡಿನ ಹಳ್ಳಿಗಳಲ್ಲಿ, ಅದು ಕಾಳಿ೦ಗ ಸಪ೯ದ ವಾಸಸ್ಥಳದ ಪರಿಸರದಲ್ಲಿ ಜುಟ್ಟು ಕಾಳಿಂಗ ಸಪ೯ ಇದೆ ಅನ್ನುವ ಮಾತು ಆಗಾಗ್ಗೆ ಕೇಳುತ್ತಿರುತ್ತೇವೆ. ಆದರೆ ಆ ರೀತಿಯ ಹಾವು ಇಲ್ಲ ಎಂದು ಹಾವಿನ ಬಗ್ಗೆ ಸಂಶೋದನೆ ಮಾಡುವವರು, ಅರಣ್ಯ ಇಲಾಖೆಯವರು, ಹಾವು ಹಿಡಿಯುವವರು ಖಡಾಖಂಡಿತವಾಗಿ ಹೇಳುತ್ತಾರಾದರು, ಈ ವದಂತಿ ಹೇಗೆ ಹರಡಿದೆ?.    ಇದು ಒಂದು ಊರು ಹಳ್ಳಿಯಲ್ಲ ನಾನು ನೋಡಿದಂತೆ ಮಹಾರಾಷ್ಟ್ರದ ರತ್ನಗಿರಿಯಿ೦ದ ಕೇರಳದ ಕಾಸರಗೋಡಿನ ತನಕ ಜುಟ್ಟು ಕಾಳಿಂಗದ ಅನೇಕ ರೋಚಕ ಕಥೆ ಕೇಳಿದ್ದೇನೆ.   ಪ್ರತ್ಯಕ್ಷ ನೋಡಿದವರು ತಾವು ಎನ್ನುವ ಅನೇಕರಲ್ಲಿ ಮಾತಾಡಿದ್ದೇನೆ ಆದರೆ ಅದು ನಂಬಲಹ೯ ಮಾಹಿತಿ ಅನಿಸಲಿಲ್ಲ, ಒಂದು ರೀತಿ ಕಾಲ್ಪನಿಕ ತ್ರಿಲ್ಲರ್ ಕಥೆ ಅಷ್ಟೇ ಅನ್ನಬಹುದು.    ಜಡೆ ಕಾಳಿಂಗ ಸಪ೯ಕ್ಕೆ ರೋಷ ಜಾಸ್ತಿ, ಹೆಡೆ ಮೇಲೆ ಕೂದಲಿನ ಜುಟ್ಟು ಇರುತ್ತೆ, ಮನುಷ್ಯರನ್ನ ಕಂಡರೆ ಓಡಿಸಿಕೊಂಡು ಬರುತ್ತೆ, ಅದರಿಂದ ತಪ್ಪಿಸಿಕೊಳ್ಳಲು ಒಂದೇ ದಾರಿ ಅದೇನೆಂದರೆ ತಗ್ಗಿನ ಪ್ರದೇಶದಲ್ಲಿ ಓಡುವುದು.     ಯಾಕೆ೦ದರೆ ಓಡಿಸಿಕೊಂಡು ಬರುವ ಜುಟ್ಟು ಕಾಳಿಂಗದ ಜುಟ್ಟು, ಇಳಿಜಾರಿನಲ್ಲಿ ಅದರ ತಲೆಯಿ೦ದ ಇಳಿಜಾರಿಗೆ ಸರಿಯುವುದರಿಂದ  ಕಣ್ಣಿನ ಮೇಲೆ ಕೂದಲ ಜುಟ್ಟು ಮುಚ್ಚುವುದರಿಂದ ಕಣ್ಣು ಕಾಣುವುದಿಲ್ಲ, ಆಗಲೇ ತಪ್ಪಿಸಿಕೊಳ್ಳಬೇಕು ಅಂತ ಬಿದನೂರು ನಗರ ಸಮೀಪದ ದೇವಗಂಗೆ ಎಂಬ ಕೆಳದಿ