Skip to main content

ನಮ್ಮ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಘಂಟಿನಕೊಪ್ಪದಲ್ಲಿ ಮೊದಲ ಬಾರಿಗೆ ಕಾಣಿಸಿದ ಕಾಳಿಂಗ ಸರ್ಪ ಸಂರಕ್ಷಿಸಿ ಅರಣ್ಯಕ್ಕೆ ಬಿಡಲಾಗಿದೆ.

#ಸಾಗರ_ತಾಲ್ಲೂಕಿನ_ಯಡೇಹಳ್ಳಿ_ಗ್ರಾಮಪಂಚಾಯತ್_ವ್ಯಾಪ್ತಿಯ_ಘಂಟಿನಕೊಪ್ಪದಲ್ಲಿ_ಕಾಳಿಂಗ_ಸರ್ಪ.

#ಅರಣ್ಯ_ಇಲಾಖೆಯವರು_ಸಾಗರದಿಂದ_ಹಾವುಸಂರಕ್ಷಕ_ಸ್ನೇಕ್_ಇಮ್ರಾನ್_ಕರೆತಂದು_ರಕ್ಷಣೆ.

#ಈ_ಭಾಗದಲ್ಲಿ_ಇದೇ_ಮೊದಲ_ಕಾಳಿಂಗ_ದರ್ಶನ

  ಸಾಗರ ತಾಲ್ಲೂಕಿನ ಆನಂದಪುರಂ ಹೋಬಳಿಯ ಹೆಗ್ಗೋಡು ಭಾಗದಲ್ಲಿ ಕಾಳಿಂಗ ಸರ್ಪ ಇರುವುದು ಸಹಜ ಆದರೆ ಆನಂದಪುರಂ - ಯಡೇಹಳ್ಳಿ ಗ್ರಾಮ ಪಂಚಾಯತ್ ಭಾಗದಲ್ಲಿ ಈ ವರೆಗೆ ಕಾಳಿಂಗ ಸರ್ಪ ನೋಡಿದವರಿರಲಿಲ್ಲ.
  ನಿನ್ನೆ ಮಧ್ಯಾಹ್ನ ಘಂಟಿನ ಕೊಪ್ಪದ ಉತ್ಸಾಹಿ ತರುಣ ಟ್ರಾಕ್ಟರ್ ಮಾಲಿಕ #ಗಜೇಂದ್ರ ಪೋನ್ ಮಾಡಿ ತಮ್ಮ ಊರಲ್ಲಿ  ಕಾಳಿಂಗ ಸರ್ಪ ಬಂದಿದೆ ಅಂದಾಗ ಆಶ್ಚಯ೯ ಆಯಿತು.
 ಊರವರ ಮನೆಯ ಹತ್ತಿರ ಬಂದದ್ದು ಜನರ ಗದ್ದಲದಿಂದ ಮರ ಹತ್ತುತ್ತಿದೆ ಅರಣ್ಯ ಇಲಾಖೆಯವರಿಗೆ ಮಾಹಿತಿ ನೀಡಿದ್ದೇವೆ ಅಂದರು.
  ಆನಂದಪುರ೦ ಭಾಗದಲ್ಲಿ ಕಾಳಿಂಗ ಸರ್ಪ ಈವರೆಗೆ ಗೋಚರಿಸಿರಲಿಲ್ಲ ನಿಮ್ಮ ಊರಲ್ಲಿ ಇವತ್ತು ಬಂದಿದ್ದರೆ ಬಹುಶಃ ಇದು ಮೊದಲ ಕಾಳಿಂಗ ಸರ್ಪ ಅಂದೆ, ನನ್ನ ಖಾತ್ರಿ ಗಾಗಿ ಮರ ಏರಲು ಹವಣಿಸುವ ವಿಡಿಯೋ - ಪೋಟೋ ಕಳಿಸಿದ್ದರು.
  ಸಂಜೆ ಅವರು ಕಳಿಸಿದ ಪೋಟೋ 13 ಅಡಿ ಉದ್ದದ ದೊಡ್ಡ ಕಾಳಿಂಗ ಸರ್ಪ ಇದನ್ನು ಸಾಗರದ ಸ್ನೇಕ್ ಇಮ್ರಾನ್ ಅವರು ಹಿಡಿದರೆಂದು ತಿಳಿಸಿದರು.
  ಸ್ನೇಕ್ ಇಮ್ರಾನ್ ಈ ಕಾಳಿಂಗ ಸರ್ಪ ಹಿಡಿದ ವಿಡಿಯೋ ನೋಡಿದೆ, ಯಾವುದೇ ಸ್ಟಿಕ್ ಇತ್ಯಾದಿ ಬಳಸದೆ ಗೋಣಿ ಚೀಲ ಅಲುಗಾಡಿಸುತ್ತಾ ಅದರ ಗಮನ ಆಕಡೆ ಹರಿಸಿ ಈ ಬೃಹತ್ ಕಾಳಿಂಗ ಸರ್ಪ ನೇರವಾಗಿ ಅದರ ತಲೆ ಹಿಡಿದಿದ್ದಾರೆ ಇದು ವಿಶೇಷವೇ ಮತ್ತು ಅಪಾಯಕಾರಿಯೂ ಹೌದು ಅವರ ಸಾಹಸಕ್ಕೆ ಹಳ್ಳಿಯ ಜನ ಕೃತಜ್ಞತೆ ತಿಳಿಸಿದ್ದಾರೆ.
  ಈ ಭಾಗದ ಒಂದು ಕಾಲದ ಬೃಹತ್ ಅರಣ್ಯ ಪ್ರದೇಶ ನೂರು ವರ್ಷದಲ್ಲಿ ನಿರ್ನಾಮವಾಗಿ ವನ್ಯ ಮೃಗಗಳೂ ಕಾಡು ಸೇರಿ ಅವಸಾನದ ಅಂಚು ಸಲುಪಿತ್ತು ಈಗ ವನ್ಯ ಪ್ರಾಣಿ ಸಂರಕ್ಷಣೆಯ ಕಠಿನ ಕಾನೂನುಗಳು ವನ್ಯ ಪ್ರಾಣಿ ಸಂತತಿ ವೃದ್ದಿಗೆ ಕಾರಣವಾಗಿ ಅವುಗಳ ಜನರ ವಾಸಸ್ಥಾನಗಳಲ್ಲಿ ಗೋಚರಿಸುತ್ತಿದೆ.
  ನಮ್ಮ ಭಾಗದ ಮೊದಲ ಕಾಳಿಂಗ ಸರ್ಪ ಸಂರಕ್ಷಿಸಿ ಕಾಡಿಗೆ ಬಿಟ್ಟ ಅರಣ್ಯ ಇಲಾಖೆಗೆ, ಸ್ನೇಕ್ ಇಮ್ರಾನ್ ಗೆ ಮತ್ತು ಮಾಹಿತಿ ನೀಡಿ ಅವರಿಗೆ ಸಹಕರಿಸಿದ ಘಂಟಿನ ಕೊಪ್ಪದ ಗ್ರಾಮಸ್ಥರಿಗೆ ಅಭಿನಂದನೆ ಸಲ್ಲಿಸುತ್ತೇನೆ.

Comments

Popular posts from this blog

# ಜುಟ್ಟು ಕಾಳಿಂಗ ಸಪ೯ದ ಆಸ್ತಿತ್ವದ ಮಲೆನಾಡಿನ ಮಿಥ್ಯೆ#

  # ಕಾಳಿ೦ಗ ಸಪ೯ದಲ್ಲಿ ಜುಟ್ಟು ಕಾಳಿಂಗ ಸಪ೯ ಅಂತ ಇದೇ ಅನ್ನುವ ಯಾರು ನೋಡದ ಸಪ೯ದ ಅಸ್ತಿತ್ವ#    ಮಲೆನಾಡಿನ ಹಳ್ಳಿಗಳಲ್ಲಿ, ಅದು ಕಾಳಿ೦ಗ ಸಪ೯ದ ವಾಸಸ್ಥಳದ ಪರಿಸರದಲ್ಲಿ ಜುಟ್ಟು ಕಾಳಿಂಗ ಸಪ೯ ಇದೆ ಅನ್ನುವ ಮಾತು ಆಗಾಗ್ಗೆ ಕೇಳುತ್ತಿರುತ್ತೇವೆ. ಆದರೆ ಆ ರೀತಿಯ ಹಾವು ಇಲ್ಲ ಎಂದು ಹಾವಿನ ಬಗ್ಗೆ ಸಂಶೋದನೆ ಮಾಡುವವರು, ಅರಣ್ಯ ಇಲಾಖೆಯವರು, ಹಾವು ಹಿಡಿಯುವವರು ಖಡಾಖಂಡಿತವಾಗಿ ಹೇಳುತ್ತಾರಾದರು, ಈ ವದಂತಿ ಹೇಗೆ ಹರಡಿದೆ?.    ಇದು ಒಂದು ಊರು ಹಳ್ಳಿಯಲ್ಲ ನಾನು ನೋಡಿದಂತೆ ಮಹಾರಾಷ್ಟ್ರದ ರತ್ನಗಿರಿಯಿ೦ದ ಕೇರಳದ ಕಾಸರಗೋಡಿನ ತನಕ ಜುಟ್ಟು ಕಾಳಿಂಗದ ಅನೇಕ ರೋಚಕ ಕಥೆ ಕೇಳಿದ್ದೇನೆ.   ಪ್ರತ್ಯಕ್ಷ ನೋಡಿದವರು ತಾವು ಎನ್ನುವ ಅನೇಕರಲ್ಲಿ ಮಾತಾಡಿದ್ದೇನೆ ಆದರೆ ಅದು ನಂಬಲಹ೯ ಮಾಹಿತಿ ಅನಿಸಲಿಲ್ಲ, ಒಂದು ರೀತಿ ಕಾಲ್ಪನಿಕ ತ್ರಿಲ್ಲರ್ ಕಥೆ ಅಷ್ಟೇ ಅನ್ನಬಹುದು.    ಜಡೆ ಕಾಳಿಂಗ ಸಪ೯ಕ್ಕೆ ರೋಷ ಜಾಸ್ತಿ, ಹೆಡೆ ಮೇಲೆ ಕೂದಲಿನ ಜುಟ್ಟು ಇರುತ್ತೆ, ಮನುಷ್ಯರನ್ನ ಕಂಡರೆ ಓಡಿಸಿಕೊಂಡು ಬರುತ್ತೆ, ಅದರಿಂದ ತಪ್ಪಿಸಿಕೊಳ್ಳಲು ಒಂದೇ ದಾರಿ ಅದೇನೆಂದರೆ ತಗ್ಗಿನ ಪ್ರದೇಶದಲ್ಲಿ ಓಡುವುದು.     ಯಾಕೆ೦ದರೆ ಓಡಿಸಿಕೊಂಡು ಬರುವ ಜುಟ್ಟು ಕಾಳಿಂಗದ ಜುಟ್ಟು, ಇಳಿಜಾರಿನಲ್ಲಿ ಅದರ ತಲೆಯಿ೦ದ ಇಳಿಜಾರಿಗೆ ಸರಿಯುವುದರಿಂದ  ಕಣ್ಣಿನ ಮೇಲೆ ಕೂದಲ ಜುಟ್ಟು ಮುಚ್ಚುವುದರಿಂದ ಕಣ್ಣು ಕಾಣುವುದಿಲ್ಲ, ಆಗಲೇ ತಪ್...

HISTORICAL SAGAR MARIKAMBA JATRA.ಐತಿಹಾಸಿಕ ಸಾಗರದ ಮಾರಿಕಾಂಬಾ ಜಾತ್ರೆ

     ಸಾಗರದ ಮಾರಿಕಾಂಬಾ ಜಾತ್ರೆ ಐತಿಹಾಸಿಕ ಚರಿತ್ರೆಯಲ್ಲಿ ದಾಖಲೆ.        ಕನಾ೯ಟಕ ರಾಜ್ಯದಲ್ಲಿ ಎರೆಡು ಮಾರಿಕಾಂಬಾ ಜಾತ್ರೆಗಳು ಪ್ರಸಿದ್ಧಿ ಪಡೆದಿದೆ ಅದು ಉತ್ತರ ಕನ್ನಡ ಜಿಲ್ಲೆಯ ಸಿಸಿ೯ಯದ್ದು ಮತ್ತು ಶಿವಮೊಗ್ಗ ಜಿಲ್ಲೆಯ ಸಾಗರದ್ದು.    ಪ್ರತಿ ಮೂರು ವಷ೯ಕೆ ಈ ಜಾತ್ರೆ ಆಚರಿಸಲಾಗುತ್ತೆ ಶೂದ್ರ ವಗ೯ದವರು ಭಯ ಮತ್ತು ಭಕ್ತಿಯಿಂದ ಕುರಿ ಕೋಳಿ ಬಲಿ ನೀಡುವ ಪರಂಪರೆ ಇದೆ.ಮಂಗಳವಾರ ಮೇಲು ಜಾತಿಯ ಜನರ ಪೂಜೆ ದೇವಿಯ ತವರು ಮನೆಯಲ್ಲಿ ನಡೆಯುತ್ತದೆ ನಂತರ ರಾತ್ರಿ ಗಂಡನ ಸೇರುವ ಮಾರಿಗೆ ಶೂದ್ರರ ಪೂಜೆ, ಬಲಿ ಮೀಸಲು.    ಮೊದಲೆಲ್ಲ ಮಾರಿಯಮ್ಮನಿಗೆ ಕೊಣನ ಬಲಿ ನೀಡುತ್ತಿದ್ದರು ಈಗ ಇದು ಕಾನೂನು ಪ್ರಕಾರ ನಿಷಿದ್ಧ ಆದರೆ ಈ ಆಚಾರಣೆ ಗುಪ್ತವಾಗಿ ಬೇರೆ ಕಡೆ ನಡೆಸಲಾಗುತ್ತೆ ಅನ್ನುತ್ತಾರೆ.    ಸಾಗರದ ಮಾರಿಕಾ0ಬಾ ಜಾತ್ರೆ ಜಾತ್ರೆಯಿ೦ದ ಜಾತ್ರೆಗೆ ಅದೂರಿಯಾಗಿ ನಡೆಯುತ್ತದೆ, ಕೋಟ್ಯಾoತರ ಹಣದ ವಹಿವಾಟು ಕೂಡ, ಮೊದಲೆಲ್ಲ ಹಣದ ಅಪರಾ ತಪರ ಆಗುತ್ತಿದೆ ಎಂಬ ಗುಲ್ಲು ಇತ್ತು ಆದರೆ ಈಗೆಲ್ಲ ಪಾರದಶ೯ಕವಾಗಿದೆ ಆದರೂ ಈ ಬಾರಿಯ 2017ರ ಜಾತ್ರೆಯಲ್ಲಿ ಅವ್ಯವಹಾರದ ಆರೋಪ ಮಾಡಲಾಗಿದೆ ಈ ವಿಚಾರ ಇಲ್ಲಿ ಅಪ್ರಸ್ತುತ ಆದರೂ ಈ ಬಗ್ಗೆ ಬರೆಯಲು ಕಾರಣ ಕೆಳದಿ ಅರಸರ ಕಾಲದಲ್ಲಿ ಅಂದರೆ 350 ವಷ೯ದ ಹಿಂದೆಯೂ ರಾಜರಿಗೆ ಸಾಗರದ ಮಾರಿಕಾಂಬಾ ಜಾತ್ರೆಯಲ್ಲಿ ಸಾವ೯ಜನಿಕರಿಂದ ಸಂಗ್ರಹಿಸಿದ ಜಾತ...

ರಿಪ್ಪನ್ ಪೇಟೆ ( ಶಿವಮೊಗ್ಗ ಜಿಲ್ಲೆ) ಹೆಸರು ಬಂದಿದ್ದಾದರು ಹೇಗೆ?

#  ರಿಪ್ಪನ್ ಪೇಟೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಪ್ರಮುಖ ಹೋಬಳಿ ಕೇಂದ್ರ ಈ ಆಂಗ್ಲ ಅಧಿಕಾರಿಯ ಹೆಸರು ಇಡಲು ಕಾರಣವಾದ ಘಟನೆ ತುಂಬಾ ಕುತೂಹಲಕಾರಿ# ಸ್ವಲ್ಪ ಕಾಲ ನೀವು ಈ ಲೇಖನ ಓದಿದರೆ ಕಾರಣ ಗೊತ್ತಾಗುತ್ತೆ.    ಆಗ ಬ್ರಿಟಿಷ್ ಸಕಾ೯ರರಕ್ಕೆ ಆಡಳಿತ ಸುಗುಮಕ್ಕೆ ರೈಲು ಮಾಗ೯ ಅತ್ಯಗತ್ಯ ಎಂಬ ಸಕಾರಣ ಮನವರಿಕೆ ಆದ ಕಾಲ ಏಕೆಂದರೆ ಬ್ರಿಟಿಷರು ಅಮೆರಿಕಾ ವಲಸೆಯಲ್ಲಿ ಇದನ್ನ ಮನಗOಡಿದ್ದರು, ಬೆಂಗಳೂಳಿ ರಿಂದ ಶಿವಮೊಗ್ಗ ತಲುಪುವ ರೈಲು ಮಾಗ೯ ತಾಳಗುಪ್ಪಾ ತಲುಪಿದರೆ ಜೋಗ ಜಲಪಾತ ವೀಕ್ಷಣೆಗೆ ಅನುಕೂಲ ಎಂಬುದು ಹಾಗೆ ಮತ್ತೊಂದು ಮ್ಯಸೂರು ಸಕಾ೯ರ ಶರಾವತಿ ನದಿಗೆ ಆಣೆಕಟ್ಟು ಕಟ್ಟಿ.ಜಲ ವಿದ್ಯುತ್ ತಯಾರಿಸಲು ಸಾಮಗ್ರಿ ಸಾಗಾಣಿಕೆಗೆ ಅನುಕೂಲ ಎಂಬ ಕಾರಣದಿಂದ ಶಿವಮೊಗ್ಗದಿಂದ ತಾಳಗುಪ್ಪ ರೈಲು ಮಾಗ೯ ಯೋಜನೆ ಮಾಡಲಾಯಿತು.    ಆಗ ಪ್ಲೇಗ್ ಮಾರಿಯ ಕಾಲ, ಎಲ್ಲೆಲ್ಲೂ ಜನ ಸಾಯುತ್ತಿದ್ದರು ಆಗಲೇ ಈ ರೈಲು ಮಾಗ೯ ಶಿವಮೊಗ್ಗ ಆರಸಾಳಿOದ ದೊಡ್ಡಿನ ಕೊಪ್ಪ (ಈಗಿನ ರಿಪ್ಪನ್ ಪೇಟೆ) ಆನಂದಪುರಂ ಮಾಗ೯ ನಿಗದಿ ಆಗಿತ್ತು ಆದರೆ ಈ ಭಾಗದಲ್ಲಿ ಒಂದು  ವದಂತಿ ಈ ಬಾಗದಲ್ಲಿ ಹರಡಿತ್ತು ಅದೇನೆಂದರೆ ರೈಲು ಬಂದರೆ ಪ್ಲೇ ಗು ಬರುತ್ತೆ  ಅಂತ.    ಹಾಗಾಗಿ ಈ ಭಾಗದಲ್ಲಿನ ಜಾಗೃತ ಜನ ನಾಯಕರುಗಳು ಹೇಗಾದರು ಮಾಡಿ ರೈಲು ಬರದಂತೆ ಮಾಡಲು ಎಲ್ಲಾ ರೀತಿಯ ಪ್ರಯತ್ನ ಮಾಡಲು ಪ್ರಾರಂಭಿಸಿದರು.     ಇದೇ ಸಂದಭ೯ದಲ್ಲ...