Skip to main content

ಜನ ಸಾಮಾನ್ಯರ ಜನನಾಯಕ ಕರ್ಕಿಕೊಪ್ಪದ ಮಹಾದೇವರ ಅಗಲಿಕೆ ಈ ಭಾಗದಲ್ಲಿಯ ಜನತೆಗೆ ವಿಷಾದ ಮತ್ತು ಮೌನಕ್ಕೆ ಕಾರಣವಾಗಿದೆ.

#ಕರ್ಕಿಕೊಪ್ಪದ_ಮಹಾದೇವ_ಜನಸಾಮಾನ್ಯರ_ಆಪತ್ಕಾಲದ_ಬಂಧು_ಆಗಿದ್ದರು.

#ಕರಾವಳಿಯಿಂದ_ಉದ್ಯೋಗ_ಹುಡುಕಿ_ವಲಸೆ_ಬಂದ_ಕುಟುಂಬದವರು.

#ಈ_ಸಾವು_ನ್ಯಾಯವೆ?

  ಮೊನ್ನೆ ಮಾರ್ಚ್ 9 ರ ತನಕ ಎಡಜಿಗಳೆಮನೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಬಡವರ, ಕೂಲಿಕಾರ್ಮಿಕರ ಆಪತ್ಕಾಲಕ್ಕೆ ಸದಾ ಸಹಾಯಕ್ಕೆ ಮುಂದಾಗುತ್ತಿದ್ದ ಕರ್ಕಿಕೊಪ್ಪದ ಮಹಾದೇವ ಸಣ್ಣವಯಸ್ಸಲ್ಲಿ ಇಹಲೋಕ ತ್ಯಜಿಸಿದ ಸುದ್ದಿ ಆ ಭಾಗದಲ್ಲಿ ಇವತ್ತಿನ ತನಕ ಜನಮಾನಸದಲ್ಲಿ ಒ0ದು ರೀತಿಯ ವಿಷಾದ ಮತ್ತು ಮೌನ ಉಂಟಾಗಿದೆ.
  1993 ರಲ್ಲಿ ಸಾಗರ ತಾಲೂಕಿನ ಗ್ರಾಮ ಪಂಚಾಯತ್ ಚುನಾವಣೆಗಳು ಹೊಸ ಮುಖಗಳ ಆಯ್ಕೆಯಲ್ಲಿ ಮಹಾದೇವ ಆಯ್ಕೆ ಆಗಿ ಯಡಜಿಗಳೆಮನೆ ಅಧ್ಯಕ್ಷರಾದರು ಆಗ ನಾನು ಯಡೇಹಳ್ಳಿ ಗ್ರಾಮ ಪಂಚಾಯತ್ ನಿಂದ ಆಯ್ಕೆ ಆಗಿದ್ದೆ ನಾವೆಲ್ಲ ಸೇರಿ ಸಾಗರ ತಾಲ್ಲೂಕ್ ಗ್ರಾಮ ಪಂಚಾಯತ್ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಒಕ್ಕೂಟ ಒಂದನ್ನು ಮಾಡಿಕೊಂಡಿದ್ದೆವು.
  ನಂತರ 1995ರಲ್ಲಿ ನಾನು ಜಿಲ್ಲಾ ಪಂಚಾಯತ್ ಸದಸ್ಯನಾದಾಗ ಇವರ ಭಾಗದಿಂದ ಸಜ್ಜನ ಎಂ.ಜಿ.ಕೃಷ್ಣಮೂರ್ತಿ ಜಿಲ್ಲಾ ಪಂಚಾಯತ್ ಸದಸ್ಯರಾದರು, ಮಹಾದೇವ ಮತ್ತು ಎಂ.ಜಿ. ಜೊತೆ ಜೊತೆಗೆ ಅಭಿವೃದ್ಧಿ ಕೆಲಸದಲ್ಲಿ ಮುಂದುವರಿದಾಗ ನಮ್ಮ ಸಂಬಂದ ಕೂಡ ಮುಂದುವರಿದಿತ್ತು.
  ಈ ಸಂದರ್ಭದಲ್ಲಿಯೇ ಇವರ ಸಹೋದರ ಲಾರಿ ಮಾಲಿಕ ರಾಜು ಕೂಡ ಅಕಾಲ ಮೃತ್ಯುವಶವಾದಾಗ ನಾನು ಮತ್ತು ಬೀಮನೇರಿ ಶಿವಪ್ಪ ಅಂತ್ಯ ಸಂಸ್ಕಾರಕ್ಕೆ ಹೋಗಿದ್ದ ನೆನಪು.
  ಕರ್ಕಿಕೊಪ್ಪ ಒಂದು ರೀತಿ ಮಿನಿ ಕುಂದಾಪುರ ಏಕೆಂದರೆ ಅಲ್ಲಿ ಕರಾವಳಿಯ ಎಲ್ಲಾ ಜಾತಿಯ ಜನ ವಾಸವಾಗಿದ್ದಾರೆ ಇದಕ್ಕೆ ಕಾರಣ ಎಂ.ಆರ್.ಶೇಷಗಿರಿ ಭಟ್ಟರು ಅಂತ ಎಲ್ಲರೂ ಸ್ಮರಿಸುತ್ತಾರೆ, ಇವರು ಎಲ್.ಬಿ.ಕಾಲೇಜ್ ಉಪನ್ಯಾಸಕರು ಮತ್ತು ಸಾಹಿತಿಗಳಾದ ತಿರುಮಲ ಮಾವಿನಕುಳಿಯವರ ಸಹೋದರರು.
   ಹೊಟ್ಟೆಪಾಡಿಗಾಗಿ ಕರಾವಳಿಯಿಂದ ಮಲೆನಾಡ ಸಾಗರದ ಸುತ್ತಾ ಮುತ್ತಾ ಅಡಿಕೆ ತೋಟದ ಕೃಷಿ ಕೆಲಸ ಮಾಡಿಕೊಂಡಿದ್ದ ಈ ಜನರನ್ನು ಕರ್ಕಿಕೊಪ್ಪದಲ್ಲಿ ಸ್ವಂತ ಜಾಗ ಮನೆ ಮಾಡಿ ಬದುಕು ಕಟ್ಟಿಕೊಳ್ಳಲು ಎಂ.ಆರ್.ಶೇಷಗಿರಿ ಭಟ್ಟರು ಶ್ರಮಿಸುತ್ತಾರೆ ಆದ್ದರಿಂದಲೇ ಕರಾವಳಿಯ ಈ ಶ್ರಮಿಕರು ಶೇರೆಗಾರರ ಬಿಡಾರದಿಂದ ಸ್ವಂತ ನೆರಳಿಗೆ ಬಂದು ಕರ್ಕಿಕೊಪ್ಪದಲ್ಲಿ ನೆಲೆಸಿದರು. ಈಗಲೂ ಈ ಜನರು ಶೇಷಗಿರಿ ಭಟ್ಟರ ಸಹಾಯ ನೆನಪಿಸುತ್ತಾರೆ.
  ಇಂತಹ ಸಂದರ್ಭದಲ್ಲಿ ಇಲ್ಲಿಗೆ ಬಂದು ನೆಲೆ ನಿಂತ ಶೇರೆಗಾರ ಕೃಷ್ಣ ಪೂಜಾರಿಯ ಆರು ಗಂಡು ಮಕ್ಕಳಲ್ಲಿ ಮಹಾದೇವ ನಾಲ್ಕನೆಯವರು.
  ರಾಜು, ಕೊಪ್ಪ, ಚಂದ್ರು, ಮಹಾದೇವ, ಸಹದೇವ ಮತ್ತು ವಾಸುದೇವರಲ್ಲಿ ರಾಜು ಈಗಿಲ್ಲ.
  ಈ ಸಹೋದರರಲ್ಲಿ ಚಂದ್ರು (ಕರ್ಕಿಕೊಪ್ಪದ ಚಂದ್ರು) ಇವತ್ತು ಜಿಲ್ಲೆಯ ಪ್ರಮುಖ ಗುತ್ತಿಗೆದಾರರು ಮತ್ತು ಉದ್ಯಮಿಗಳಾಗಿದ್ದಾರೆ.
  ಯಾವುದೇ ಸಮಸ್ಯೆ ಆಗಲಿ ಈ ಭಾಗದ ಜನತೆ ಮಹಾದೇವರನ್ನು ಅವಲಂಬಿಸಿದ್ದರು ಮಹಾದೇವ ಕೂಡ ಅಧಿಕಾರ ಇರಲಿ ಇಲ್ಲದಿರಲಿ ಸದಾ ಈ ಜನರಿಗೆ ಸಹಾಯ ಮಾಡುತ್ತಿದ್ದರು.
  ಕರ್ಕಿಕೊಪ್ಪದ ಮಹಾದೇವ ಸಣ್ಣವಯಸ್ಸಲ್ಲಿ ಹೃದಯಾಘಾತದಿಂದ ಅಗಲಿದ್ದು ವಿಷಾದನೀಯ ವಿಚಾರ.
  ದೇವರು ಇವರ ಕುಟುಂಬಕ್ಕೆ ಇವರ ಅಗಲಿಕೆಯ ದುಃಖ ಭರಿಸುವ ಶಕ್ತಿ ನೀಡಲಿ ಮತ್ತು ಇವರ ಆತ್ಮಕ್ಕೆ ಸದ್ಗತಿ ಮತ್ತು ಸ್ಪರ್ಗ ಪ್ರಾಪ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ.

Comments

Popular posts from this blog

Blog number 1782. ಅರಳಸುರಳಿಯ ರಾಘವೇಂದ್ರ ಕೇಕೋಡರ ಕುಟುಂಬದ ತಪ್ಪು ನಿರ್ದಾರದ ದುರಂತ.

#ತೀರ್ಥಹಳ್ಳಿಯ_ಅರಳಸುರಳಿಯ_ಒಂದೇ_ಕುಟುಂಬದ_ನಾಲ್ವರು_ಮೃತರಾದ_ರಹಸ್ಯವೇನು? #ಈ_ಬಗ್ಗೆ_ಆ_ಊರಿನ_ಸಮೀಪದ_ಈ_ಕುಟುಂಬದ_ಪರಿಚಯ_ಇರುವವರಿಗೆ_ವಿಚಾರಿಸಿದ್ದೆ. #ಅವರು_ಈ_ಘಟನೆ_ಬಗ್ಗೆ_ಸವಿಸ್ತಾರವಾಗಿ_ಲಿಖಿತ_ಲೇಖನ_ಬರೆದಿದ್ದಾರೆ. #ಅವರ_ವಿನಂತಿ_ಅವರ_ಹೆಸರು_ಬಹಿರಂಗಗೊಳಿಸ_ಬಾರದು. #ಆದ್ದರಿಂದ_ಈ_ಲೇಖನ_ಪೋಸ್ಟ್_ಮಾಡಬಾರದೆಂದಿದ್ದೆ_ಆದರೆ_ಇದು_ಮಲೆನಾಡಿಗರ_ಮನೆ_ಮನೆಯ_ಕಥೆ #ಆದ್ದರಿಂದ_ಇಲ್ಲಿ_ಪೋಸ್ಟ್_ಮಾಡಿದೆ.    ಇಲ್ಲಿ ತಪ್ಪು ಯಾರದ್ದೂ ಇಲ್ಲ... ಪಶ್ಚಾತ್ತಾಪದ ಪ್ರಾಯಶ್ಚಿತ ಕೇಳಲು ಅವರಾರು ಇಲ್ಲ .....ಆದರೆ ಈ ರೀತಿ ಜೀವ ತ್ಯಾಗ ಮಾಡುವ ಆತುರದ ಕೆಟ್ಟ ನಿರ್ದಾರ ಮಾತ್ರ ಸರಿ ಅಲ್ಲ.     ಇವರ ಅಣ್ಣ ಆರ್.ಎಸ್.ಎಸ್. ಪ್ರಚಾರಕರಾಗಿ ದೆಹಲಿಯಲ್ಲಿ ಏಳು ವಷ೯ ಮೋದಿ ಜೊತೆ ಒಂದೇ ಕೋಣೆ ಹಂಚಿಕೊಂಡವರು, ಇನ್ನೊಬ್ಬ ಸಹೋದರ ಮೂಳೆ ತಜ್ಞರಾಗಿ ಶಿವಮೊಗ್ಗದಲ್ಲಿ ಆಸ್ಪತ್ರೆ ಮಾಡಿಕೊಂಡಿದ್ದಾರೆ.   #ದೀರ್ಘವಾದರೂ_ಪೂರ್ಣ_ಲೇಖನ_ಓದಿ   #ಹೀಗೊಂದು_ಸುಕುಟುಂಬ_ಆತ್ಮಾಘಾತ_ಮತ್ತು_ತದನಂತರದ_ಸಹಾಗಮನ.... ಮೂಡಣದಲ್ಲಿ ರವಿ ಮೂಡಲು ಅಣಿ ಯಾಗುತ್ತಿಧ್ದ .. ಹಾದಿಗಣಪತಿ ದೇವರು ಗರ್ಭಗುಡಿಯ ನಂದಾದೀಪದ ಮಂದ ಬೆಳಕಿನಲ್ಲಿ ತನ್ನ ಗುಡಿಯ ಎದುರಿನ ತಗ್ಗಿನಲ್ಲಿದ್ದ  ರಾಘವೇಂದ್ರ ಕೇಕೋಡರ ಮನೆಯನ್ನು ಎವೆಯಕ್ಕದೇ ನೋಡುತ್ತಲಿದ್ದ... ಊರ ಎಲ್ಲಾ ಮನೆಯಂತೆ ಆ ಮನೆಯಲ್ಲೂ ಆ ಬೆಳಗಿನಲ್ಲಿ ಮನೆಯೊಡತಿ ನಾಗರತ್ನಕ್ಕ ಆ ಸಮಯದಲ್ಲಿ ದೇವರಿಗೆ ದೀಪ ಹಚ್ಚಿ ಹೊಸ್ತಿಲು ಪೂಜೆ ಮಾಡ

Blog number 1037. ರಾಜಕುಮಾರಿ ಶಾಂತವ್ವ ಮತ್ತು ದಲಿತ ಯುವಕ ಸಿದ್ದೇಶ್ವರರ ಅಮರ ಪ್ರೇಮದ ಸ್ಮಾರಕ, ಅನ್ಯ ಜಾತಿ ವಿವಾಹವಾದ್ದರಿಂದ ರಾಜಕುಮಾರಿಗೆ ಸೂಳೆ ಪಟ್ಟ ನೀಡಿದ ಸಮಾಜ. ಸಮಾಜದ ಒಳಿತಿಗಾಗಿ ಶಾಂತವ್ವ ಕಟ್ಟಿಸಿದ ಬೃಹತ್ ಕೆರೆಗೆ ಜನ ಕರೆದದ್ದು ಸೂಳೆ ಕಟ್ಟಿಸಿದ ಕೆರೆ ಅದೇ ಸೂಳೆಕೆರೆ / ಶಾಂತಿ ಸಾಗರ

# ಸೂಳೆಕೆರೆ (ಶಾಂತಿ ಸಾಗರ) ಅಂತರ್ ಜಾತಿ ಪ್ರೇಮ ವಿವಾಹದ ದುರOತ ಕಥೆ. #ಅಕ್ಟೋಬರ್ 2019 ರಲ್ಲಿ ತುಂಬಿ ತುಳುಕಿತ್ತು.  ಚಿತ್ರದುಗ೯, ದಾವಣಗೆರೆ ಬಳ್ಳಾರಿ ಮುಂತಾದ ಮಳೆ ಕಡಿಮೆ ಆಗುತ್ತಿದ್ದ ಜಿಲ್ಲೆಗಳಲ್ಲಿ ಅದೂ ಅಕ್ಟೋಬರ್ ತಿಂಗಳ 2019 ರಲ್ಲಿ  ಬಂದಿದ್ದ ಬಾರಿ ಮಳೆ ಎಲ್ಲಾ ಕೆರೆ, ಹೊಂಡಗಳು ತುಂಬಿ ತುಳುಕಿದೆ, ಸಾಮಾಜಿಕ ಜಾಲ ತಾಣದಲ್ಲಿ 40 ವಷ೯ದಲ್ಲಿ ಇಂತ ಮಳೆ ಬಂದಿಲ್ಲ ಅಂತ ಸುದ್ದಿ ಹರಿದಾಡುತ್ತಿತ್ತು ಮತ್ತು  ಸೂಳೆಕೆರೆ ತುಂಬಿ ಕೋಡಿ ಬಿದ್ದಿದೆ ಅಂತೆಲ್ಲ Post ನೋಡಿ ಬೆಂಗಳೂರಿಂದ ಬರುವಾಗ ಚಿತ್ರದುಗ೯ ಮಾಗ೯ವಾಗಿ ಚನ್ನಗಿರಿ ತಲುಪಿ ಸೂಳೆಕೆರೆ ನೋಡಲು ಹೋಗಿದ್ದೆ.  11ನೇ ಶತಮಾನದಲ್ಲಿ (1128ರಲ್ಲಿ)ಕೇವಲ 3 ವಷ೯ದಲ್ಲಿ ಈ ಕೆರೆ ನಿಮಾ೯ಣ ಮಾಡಿಸಿದ್ದು ಶಾಂತವ್ವ ಎಂಬ ರಾಜ ಕುಮಾರಿ ಅವಳು ಸ್ವಣ೯ವತಿ ಪಟ್ಟಣದ ದೊರೆ ವಿಕ್ರಮ ರಾಜನ ಮಗಳು, ಸಿದ್ದೇಶ್ವರ ಎಂಬ ಅನ್ಯ ಜಾತಿಯ ಯುವಕನೊ೦ದಿಗೆ ಗಾಂದವ೯ ವಿವಾಹ ಆಗುತ್ತಾಳೆ ಇದನ್ನ ಸಹಿಸದ ಮತ್ತು ಒಪ್ಪದ ಜನತೆ ಸೂಳೆ ಎಂದು ಮೂದಲಿಸುತ್ತಾರOತೆ ಈ ರೀತಿ ತನಗೆ ಬಂದ ಕಳಂಕ ಕಳೆಯಲು ಈ ಬೃಹತ್ ಕೆರೆ ತನ್ನ ಪತಿ ಸಿದ್ದೇಶ್ವರನ ಜೊತೆ ಸೇರಿ ನಿಮಿ೯ಸಿ ಕೆರೆಗೆ ಹಾರವಾದಳೆoಬ ಇತಿಹಾಸ ಇದೆ ಇದರಿಂದ ನೊಂದ ಪತಿ ಸಿದ್ಧೇಶ್ವರ ಕೂಡ ಎದುರಿನ ಗುಡ್ಡದಲ್ಲಿ ಜೀವ ತ್ಯಾಗ ಮಾಡುತ್ತಾನೆ ಈಗ ಅಲ್ಲಿ ಸಿದ್ದೇಶ್ವರ ದೇವಸ್ಥಾನವಿದೆ.   ಈ ಕೆರೆ ಈಗಲೂ ಸೂಳೆಕೆರೆ ಎಂದೆ ಹೆಸರಾಗಿದೆ ಈ

# ಜುಟ್ಟು ಕಾಳಿಂಗ ಸಪ೯ದ ಆಸ್ತಿತ್ವದ ಮಲೆನಾಡಿನ ಮಿಥ್ಯೆ#

  # ಕಾಳಿ೦ಗ ಸಪ೯ದಲ್ಲಿ ಜುಟ್ಟು ಕಾಳಿಂಗ ಸಪ೯ ಅಂತ ಇದೇ ಅನ್ನುವ ಯಾರು ನೋಡದ ಸಪ೯ದ ಅಸ್ತಿತ್ವ#    ಮಲೆನಾಡಿನ ಹಳ್ಳಿಗಳಲ್ಲಿ, ಅದು ಕಾಳಿ೦ಗ ಸಪ೯ದ ವಾಸಸ್ಥಳದ ಪರಿಸರದಲ್ಲಿ ಜುಟ್ಟು ಕಾಳಿಂಗ ಸಪ೯ ಇದೆ ಅನ್ನುವ ಮಾತು ಆಗಾಗ್ಗೆ ಕೇಳುತ್ತಿರುತ್ತೇವೆ. ಆದರೆ ಆ ರೀತಿಯ ಹಾವು ಇಲ್ಲ ಎಂದು ಹಾವಿನ ಬಗ್ಗೆ ಸಂಶೋದನೆ ಮಾಡುವವರು, ಅರಣ್ಯ ಇಲಾಖೆಯವರು, ಹಾವು ಹಿಡಿಯುವವರು ಖಡಾಖಂಡಿತವಾಗಿ ಹೇಳುತ್ತಾರಾದರು, ಈ ವದಂತಿ ಹೇಗೆ ಹರಡಿದೆ?.    ಇದು ಒಂದು ಊರು ಹಳ್ಳಿಯಲ್ಲ ನಾನು ನೋಡಿದಂತೆ ಮಹಾರಾಷ್ಟ್ರದ ರತ್ನಗಿರಿಯಿ೦ದ ಕೇರಳದ ಕಾಸರಗೋಡಿನ ತನಕ ಜುಟ್ಟು ಕಾಳಿಂಗದ ಅನೇಕ ರೋಚಕ ಕಥೆ ಕೇಳಿದ್ದೇನೆ.   ಪ್ರತ್ಯಕ್ಷ ನೋಡಿದವರು ತಾವು ಎನ್ನುವ ಅನೇಕರಲ್ಲಿ ಮಾತಾಡಿದ್ದೇನೆ ಆದರೆ ಅದು ನಂಬಲಹ೯ ಮಾಹಿತಿ ಅನಿಸಲಿಲ್ಲ, ಒಂದು ರೀತಿ ಕಾಲ್ಪನಿಕ ತ್ರಿಲ್ಲರ್ ಕಥೆ ಅಷ್ಟೇ ಅನ್ನಬಹುದು.    ಜಡೆ ಕಾಳಿಂಗ ಸಪ೯ಕ್ಕೆ ರೋಷ ಜಾಸ್ತಿ, ಹೆಡೆ ಮೇಲೆ ಕೂದಲಿನ ಜುಟ್ಟು ಇರುತ್ತೆ, ಮನುಷ್ಯರನ್ನ ಕಂಡರೆ ಓಡಿಸಿಕೊಂಡು ಬರುತ್ತೆ, ಅದರಿಂದ ತಪ್ಪಿಸಿಕೊಳ್ಳಲು ಒಂದೇ ದಾರಿ ಅದೇನೆಂದರೆ ತಗ್ಗಿನ ಪ್ರದೇಶದಲ್ಲಿ ಓಡುವುದು.     ಯಾಕೆ೦ದರೆ ಓಡಿಸಿಕೊಂಡು ಬರುವ ಜುಟ್ಟು ಕಾಳಿಂಗದ ಜುಟ್ಟು, ಇಳಿಜಾರಿನಲ್ಲಿ ಅದರ ತಲೆಯಿ೦ದ ಇಳಿಜಾರಿಗೆ ಸರಿಯುವುದರಿಂದ  ಕಣ್ಣಿನ ಮೇಲೆ ಕೂದಲ ಜುಟ್ಟು ಮುಚ್ಚುವುದರಿಂದ ಕಣ್ಣು ಕಾಣುವುದಿಲ್ಲ, ಆಗಲೇ ತಪ್ಪಿಸಿಕೊಳ್ಳಬೇಕು ಅಂತ ಬಿದನೂರು ನಗರ ಸಮೀಪದ ದೇವಗಂಗೆ ಎಂಬ ಕೆಳದಿ