Skip to main content

ಶಿಕ್ಷಕ ವೃತ್ತಿಯಲ್ಲಿ ವಿಶಿಷ್ಟವಾಗಿ ಸೇವೆ ಸಲ್ಲಿಸುತ್ತಿರುವ ಯುವ ಶಿಕ್ಷಕ ಚೋರಡಿ ಸಮೀಪದ ತುಪ್ಪೂರಿನ ಆರ್.ಸಿ ಮಂಜುನಾಥ್ ತಮ್ಮ ಪ್ರೌಡ ಶಾಲಾ ಶಿಕ್ಷಣ ಆನಂದಪುರಂನಲ್ಲಿ ಪಡೆದವರು, 2000 ಇಸವಿಯ SSLC ಬ್ಯಾಚಿನ ಗುರುವಂದನೆ ಮತ್ತು ಸ್ನೇಹ ಸಮ್ಮಿಲನ ಕಾರ್ಯಕ್ರಮ ಹಮ್ಮಿಕೊಂಡು 22 ವರ್ಷದ ನಂತರ ಅವರೆಲ್ಲ ಒಂದಾಗಿ ಸೇರಲಿದ್ದಾರೆ ಇದೇ 17ನೇ ತಾರೀಖು ಭಾನುವಾರ

#ಈ_ವಷ೯ದ_ಮೊದಲ_ಮಾವಿನಹಣ್ಣು_ಅಂಕೋಲದಿಂದ.

#ಪತ್ರಕರ್ತ_ಬಿ_ಡಿ_ರವಿ_ತಂದು_ಕೊಟ್ಟಿದ್ದಾರೆ.

#ನಮ್ಮ_ಊರಿನ_ಪ್ರೌಡಶಾಲ_2000_ಬ್ಯಾಚಿನ_ಗುರುವಂದನೆ_ಸ್ನೇಹಸಮ್ಮಿಲನಕ್ಕೆ.

#ಮಾದರಿ_ಶಿಕ್ಷಕ_ಆರ್_ಸಿ_ಮಂಜುನಾಥರ_ವಿಶೇಷ_ಪ್ರಯತ್ನ.
 
   ನಮ್ಮ ಊರು ಆನಂದಪುರಂನ ಸರ್ಕಾರಿ ಪ್ರೌಡ ಶಾಲೆಯಲ್ಲಿ ವಿದ್ಯಾಬ್ಯಾಸ ಮಾಡಿ ಶಿಕ್ಷಕ ವೃತ್ತಿಯಲ್ಲಿರುವ ಚೋರಡಿ ಸಮೀಪದ ತುಪ್ಪೂರಿನ R.C. ಮಂಜುನಾಥರು ಸಾಗರ ತಾಲ್ಲೂಕಿನ ತುಟ್ಟ ತುದಿಯಾದ ಕೊಲ್ಲೂರು ಸಮೀಪದ ಪಶ್ಚಿಮ ಘಟ್ಟದ ಅತಿ ಎತ್ತರದ ಅಂಬಾರಗುಡ್ಡದ ಮುರಳ್ಳಿಯ ಗುಡ್ಡಗಾಡು ವಾಸಿಗಳಾದ ಕುಣುಬಿ ಜನಾಂಗದ ಏಕ ಶಿಕ್ಷಕ ಶಾಲೆಯಲ್ಲಿ ಅತ್ಯುತ್ತಮವಾಗಿ ಶಿಕ್ಷಣ ನೀಡಿ ಅಲ್ಲಿನ ಮಕ್ಕಳು ವಿದ್ಯಾವಂತರಾಗಿ ಮುಂದಿನ ಶಿಕ್ಷಣಕ್ಕೆ ದಾರಿ ದೀಪ ಆಗಿದ್ದವರು.
   ಮುರಳ್ಳಿಗೆ ಬಸ್ ಸೌಲಭ್ಯವಿಲ್ಲ, ವಿದ್ಯುತ್ ಇಲ್ಲದ ಆರು ತಿಂಗಳು ಮಳೆ, ಮೂರು ತಿಂಗಳು ವಿಪರೀತ ಚಳಿ, ಇಂಬುಳಗಳ ಕಾಟ ಅಲ್ಲಿ ಆದ್ದರಿಂದ ಅಲ್ಲಿನ ಶಾಲೆಗೆ ಶಿಕ್ಷಕರು ಹೋಗಲು ಒಪ್ಪುವುದಿಲ್ಲ.
  ನಂತರ ವರ್ಗ ಆದಲ್ಲೆಲ್ಲ ಅಲ್ಲಿನ ಶಾಲೆ ನಂದ ಗೋಕುಲವಾಗಿಸಿ ಅಲ್ಲಿನ ವಿದ್ಯಾರ್ಥಿ ವೃಂದ ಮತ್ತು ಪೋಷಕರ ಪ್ರೀತಿ ಪಾತ್ರವಾಗುವ R C ಮಂಜುನಾಥ ಯಾವುದೇ ರಾಷ್ಟ್ರ ಪ್ರಶಸ್ತಿಗಿಂತ ದೊಡ್ಡ ಅರ್ಹತೆಯ ಯುವ ಶಿಕ್ಷಕರು.
   ಇವರು ತಾವು ವಿದ್ಯಾಬ್ಯಾಸ ಮಾಡಿದ ಆನಂದಪುರಂನಲ್ಲಿ 2000 ಇಸವಿಯಲ್ಲಿ SSLC ಓದಿದ ಇವರ ಸಹ ವಿದ್ಯಾರ್ಥಿಗಳನ್ನು ಸೇರಿಸಿ ಗುರುವಂದನೆ ಮತ್ತು ಸ್ನೇಹ ಸಮ್ಮಿಲನ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ (ದಿನಾಂಕ 17- ಏಪ್ರಿಲ್ - 2022 ರ ಭಾನುವಾರ) ಅವತ್ತು ಇವರ ಮಧ್ಯಾಹ್ನದ ಊಟಕ್ಕೆ ಪ್ರಗತಿ ಪರ ಕೃಷಿಕರಾದ #ನಾಗೇಂದ್ರ_ಸಾಗರ್ ರಿಂದ ಅನಾನಸ್ ಹೋಳಿಗೆ ಖರೀದಿಸಿದ್ದೇನೆ ಮತ್ತು ಮಾವಿನ ಹಣ್ಣಿನ ರಸಾಯನಕ್ಕೆ ಪತ್ರಕರ್ತ ಗೆಳೆಯ ಬಿ.ಡಿ. ರವಿ ಅಂಕೋಲೆಗೆ ಕಾಗೋಡು ಹೋರಾಟದ ನೇತಾರ ಗಣಪತಿಯಪ್ಪ ಪ್ರಶಸ್ತಿಗೆ ಆಯ್ಕೆ ಆಗಿರುವ ಅಂಕೋಲೆಯ ವಿಷ್ಣು ನಾಯಕರನ್ನು ಆಹ್ವಾನಿಸಲು ಸಾಗರ ತಾಲ್ಲೂಕಿನ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ವಿ.ಟಿ. ಸ್ವಾಮಿ ಮತ್ತು ಗಣಪತಿಯಪ್ಪ ಟ್ರಸ್ಟ್ ಅಧ್ಯಕ್ಷರಾದ ಉಮೇಶ್ ಹಿರೆನೆಲ್ಲೂರ್ ಜೊತೆ     ಅಂಕೋಲೆಗೆ ಹೋದವರಿಂದ  ಅಲ್ಲಿನ ಗುಡ್ಡಗಾಡು ವಾಸಿ ಹಾಲಕ್ಕಿ ಗೌಡರ ಸಮಾಜದ ಮಹಿಳೆಯರಿಂದ ಮಾವಿನ ಹಣ್ಣು ಖರೀದಿಸಿ ತರಿಸಿದ್ದೇನೆ.
   2000 ಇಸವಿಯಲ್ಲಿ ಆನಂದಪುರಂನ ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳ ಸ್ನೇಹ ಮಿಲನ ಸುಮಾರು 22 ವರ್ಷದ ನಂತರ ಆನಂದಪುರಂನಲ್ಲಿ ನಡೆಯುತ್ತಿದ್ದು ಅವತ್ತು 22 ವರ್ಷದ ನಂತರದ ಜೀವನವನ್ನು ಅವರೆಲ್ಲ ತಿರುಗಿ ನೋಡಿ ವಿಮರ್ಷಿಸಿಕೊಳ್ಳುವ, ಪರಸ್ಪರ ಅವತ್ತಿನ ದಿನಗಳ ನೆನಪಿಸಿಕೊಳ್ಳುವ ಈ ಸ್ನೇಹ ಮಿಲನ ಸುಮುದುರ ಆಗಲಿ, R. C. ಮಂಜುನಾಥ್ ಮತ್ತು ಅವರ ಜೊತೆ ಇಂತಹ ಕಾರ್ಯಕ್ರಮಕ್ಕೆ ಕೈ ಜೋಡಿಸಿದ ಅವರ ಗೆಳೆಯರೆಲ್ಲರಿಗೂ ಶುಭ ಹಾರೈಸುತ್ತೇನೆ.

Comments

Popular posts from this blog

# ಜುಟ್ಟು ಕಾಳಿಂಗ ಸಪ೯ದ ಆಸ್ತಿತ್ವದ ಮಲೆನಾಡಿನ ಮಿಥ್ಯೆ#

  # ಕಾಳಿ೦ಗ ಸಪ೯ದಲ್ಲಿ ಜುಟ್ಟು ಕಾಳಿಂಗ ಸಪ೯ ಅಂತ ಇದೇ ಅನ್ನುವ ಯಾರು ನೋಡದ ಸಪ೯ದ ಅಸ್ತಿತ್ವ#    ಮಲೆನಾಡಿನ ಹಳ್ಳಿಗಳಲ್ಲಿ, ಅದು ಕಾಳಿ೦ಗ ಸಪ೯ದ ವಾಸಸ್ಥಳದ ಪರಿಸರದಲ್ಲಿ ಜುಟ್ಟು ಕಾಳಿಂಗ ಸಪ೯ ಇದೆ ಅನ್ನುವ ಮಾತು ಆಗಾಗ್ಗೆ ಕೇಳುತ್ತಿರುತ್ತೇವೆ. ಆದರೆ ಆ ರೀತಿಯ ಹಾವು ಇಲ್ಲ ಎಂದು ಹಾವಿನ ಬಗ್ಗೆ ಸಂಶೋದನೆ ಮಾಡುವವರು, ಅರಣ್ಯ ಇಲಾಖೆಯವರು, ಹಾವು ಹಿಡಿಯುವವರು ಖಡಾಖಂಡಿತವಾಗಿ ಹೇಳುತ್ತಾರಾದರು, ಈ ವದಂತಿ ಹೇಗೆ ಹರಡಿದೆ?.    ಇದು ಒಂದು ಊರು ಹಳ್ಳಿಯಲ್ಲ ನಾನು ನೋಡಿದಂತೆ ಮಹಾರಾಷ್ಟ್ರದ ರತ್ನಗಿರಿಯಿ೦ದ ಕೇರಳದ ಕಾಸರಗೋಡಿನ ತನಕ ಜುಟ್ಟು ಕಾಳಿಂಗದ ಅನೇಕ ರೋಚಕ ಕಥೆ ಕೇಳಿದ್ದೇನೆ.   ಪ್ರತ್ಯಕ್ಷ ನೋಡಿದವರು ತಾವು ಎನ್ನುವ ಅನೇಕರಲ್ಲಿ ಮಾತಾಡಿದ್ದೇನೆ ಆದರೆ ಅದು ನಂಬಲಹ೯ ಮಾಹಿತಿ ಅನಿಸಲಿಲ್ಲ, ಒಂದು ರೀತಿ ಕಾಲ್ಪನಿಕ ತ್ರಿಲ್ಲರ್ ಕಥೆ ಅಷ್ಟೇ ಅನ್ನಬಹುದು.    ಜಡೆ ಕಾಳಿಂಗ ಸಪ೯ಕ್ಕೆ ರೋಷ ಜಾಸ್ತಿ, ಹೆಡೆ ಮೇಲೆ ಕೂದಲಿನ ಜುಟ್ಟು ಇರುತ್ತೆ, ಮನುಷ್ಯರನ್ನ ಕಂಡರೆ ಓಡಿಸಿಕೊಂಡು ಬರುತ್ತೆ, ಅದರಿಂದ ತಪ್ಪಿಸಿಕೊಳ್ಳಲು ಒಂದೇ ದಾರಿ ಅದೇನೆಂದರೆ ತಗ್ಗಿನ ಪ್ರದೇಶದಲ್ಲಿ ಓಡುವುದು.     ಯಾಕೆ೦ದರೆ ಓಡಿಸಿಕೊಂಡು ಬರುವ ಜುಟ್ಟು ಕಾಳಿಂಗದ ಜುಟ್ಟು, ಇಳಿಜಾರಿನಲ್ಲಿ ಅದರ ತಲೆಯಿ೦ದ ಇಳಿಜಾರಿಗೆ ಸರಿಯುವುದರಿಂದ  ಕಣ್ಣಿನ ಮೇಲೆ ಕೂದಲ ಜುಟ್ಟು ಮುಚ್ಚುವುದರಿಂದ ಕಣ್ಣು ಕಾಣುವುದಿಲ್ಲ, ಆಗಲೇ ತಪ್...

ಶರಾವತಿ ನದಿ ಉಗಮ ಸ್ಥಾನ ಅಂಬುತೀಥ೯.

ಇಡೀ ರಾಜ್ಯಕ್ಕೆ ವಿದ್ಯುತ್ ನೀಡುವ ಶರಾವತಿ ನದಿಯ ಉಗಮ ಸ್ಥಾನ ಅಂಬುತೀಥ೯, ಆರಗ ಸಮೀಪದ ತೀಥ೯ಳ್ಳಿ ತಾಲ್ಲೂಕಿನಲ್ಲಿದೆ( ಶಿವಮೊಗ್ಗ ಜಿಲ್ಲೆ)    ಅಂಬು ತೀಥ೯ದಲ್ಲಿ ಶ್ರೀ ರಾಮ ವನವಾಸದಲ್ಲಿದ್ದಾಗ ಸೀತಾ ಮಾತೆಗೆ ಪೂಜೆಗೆ ನೀರು ಸಿಗದಿದ್ದಾಗ ರಾಮ ತನ್ನ ಅಂಬಿನಿಂದ (ಬಿಲ್ಲಿನ ಬಾಣದಿಂದ) ನೆಲ ಸೀಳಿ ನೀರು ತಂದರೆ೦ದು ರಾಮಾಯಣದಲ್ಲಿ ಉಲ್ಲೇಖವಿದೆ, ಹಾಗಾಗಿ ಈ ಸ್ಥಳಕ್ಕೆ ಅಂಬುತೀಥ೯ ಎಂಬ ಹೆಸರು ಬ೦ತು ಎಂಬುದು ಸ್ಥಳ ಪುರಾಣ.    ಇಲ್ಲಿ ಸಣ್ಣ ತೊರೆಯಾಗಿ ಹುಟ್ಟುವ ನದಿ ಬಾಣದಿಂದ ಹುಟ್ಟಿದ್ದರಿಂದ ಶರಾವತಿ ಎ೦ಬ ಹೆಸರು ಪಡೆದು ಪೂವ೯ಕ್ಕೆ ಹರಿದು ನಂತರ ಪಶ್ಚಿಮ ಮುಖವಾಗಿ ತಿರುಗಿ ಹೊಸನಗರ ತಾಲ್ಲೂಕನ್ನ ದಾಟಿ ಸಾಗರ ತಾಲ್ಲೂಕಿನ ಜೋಗದಲ್ಲಿ ಜಲಪಾತವಾಗಿ ದಟ್ಟ ಕಾನನದ ಕಣಿವೆ ಮುಖಾಂತರ ಹರಿದು ಹೊನ್ನಾವರದಲ್ಲಿ ಅರಬ್ಬಿ ಸಮುದ್ರ ಸೇರುತ್ತದೆ.   ಈ ನದಿಗೆ ಮೊದಲಿಗೆ ಹೀರೇ ಬಾಸ್ಕರ ಎಂಬಲ್ಲಿ ನಂತರ ಲಿಂಗನಮಕ್ಕಿಯಲ್ಲಿ ಆಣೆಕಟ್ಟು ಕಟ್ಟಿ ರಾಜ್ಯಕ್ಕೆ ಜಲ ವಿದ್ಯುತ್ ನೀಡುತ್ತಿರುವುದರಿಂದ ಲಕ್ಷಾಂತರ ಎಕರೆ ಕಾಡು, ಜಮೀನು ಅನೇಕ ಊರು ಮುಳುಗಡೆ ಆಯಿತು ಸಾವಿರಾರು ಕುಟುಂಬಗಳು ಸಂತ್ರಸ್ಥರಾದದ್ದು ಇತಿಹಾಸ.    ಈ ನದಿ ಜೋಗದಲ್ಲಿ ದುಮುಕುವ ಜಲಪಾತ ವಿಶ್ವದ ಸುಂದರ ಜಲಪಾತದಲ್ಲಿ ಒಂದಾಗಿದೆ.    ಹಾಗಾಗಿ ಶರಾವತಿ ನದಿಯ ಉಗಮ ಸ್ಥಾನಕ್ಕೆ ಮಹತ್ವವಿದೆ, ಒಮ್ಮೆಯಾದರೂ ಈ ನದಿ ಮೂಲ ಸಂದಶಿ೯ಸಬೇಕು ಆದರೆ ಇಲ್ಲಿ ಶರಾವತಿ ವ...

HISTORICAL SAGAR MARIKAMBA JATRA.ಐತಿಹಾಸಿಕ ಸಾಗರದ ಮಾರಿಕಾಂಬಾ ಜಾತ್ರೆ

     ಸಾಗರದ ಮಾರಿಕಾಂಬಾ ಜಾತ್ರೆ ಐತಿಹಾಸಿಕ ಚರಿತ್ರೆಯಲ್ಲಿ ದಾಖಲೆ.        ಕನಾ೯ಟಕ ರಾಜ್ಯದಲ್ಲಿ ಎರೆಡು ಮಾರಿಕಾಂಬಾ ಜಾತ್ರೆಗಳು ಪ್ರಸಿದ್ಧಿ ಪಡೆದಿದೆ ಅದು ಉತ್ತರ ಕನ್ನಡ ಜಿಲ್ಲೆಯ ಸಿಸಿ೯ಯದ್ದು ಮತ್ತು ಶಿವಮೊಗ್ಗ ಜಿಲ್ಲೆಯ ಸಾಗರದ್ದು.    ಪ್ರತಿ ಮೂರು ವಷ೯ಕೆ ಈ ಜಾತ್ರೆ ಆಚರಿಸಲಾಗುತ್ತೆ ಶೂದ್ರ ವಗ೯ದವರು ಭಯ ಮತ್ತು ಭಕ್ತಿಯಿಂದ ಕುರಿ ಕೋಳಿ ಬಲಿ ನೀಡುವ ಪರಂಪರೆ ಇದೆ.ಮಂಗಳವಾರ ಮೇಲು ಜಾತಿಯ ಜನರ ಪೂಜೆ ದೇವಿಯ ತವರು ಮನೆಯಲ್ಲಿ ನಡೆಯುತ್ತದೆ ನಂತರ ರಾತ್ರಿ ಗಂಡನ ಸೇರುವ ಮಾರಿಗೆ ಶೂದ್ರರ ಪೂಜೆ, ಬಲಿ ಮೀಸಲು.    ಮೊದಲೆಲ್ಲ ಮಾರಿಯಮ್ಮನಿಗೆ ಕೊಣನ ಬಲಿ ನೀಡುತ್ತಿದ್ದರು ಈಗ ಇದು ಕಾನೂನು ಪ್ರಕಾರ ನಿಷಿದ್ಧ ಆದರೆ ಈ ಆಚಾರಣೆ ಗುಪ್ತವಾಗಿ ಬೇರೆ ಕಡೆ ನಡೆಸಲಾಗುತ್ತೆ ಅನ್ನುತ್ತಾರೆ.    ಸಾಗರದ ಮಾರಿಕಾ0ಬಾ ಜಾತ್ರೆ ಜಾತ್ರೆಯಿ೦ದ ಜಾತ್ರೆಗೆ ಅದೂರಿಯಾಗಿ ನಡೆಯುತ್ತದೆ, ಕೋಟ್ಯಾoತರ ಹಣದ ವಹಿವಾಟು ಕೂಡ, ಮೊದಲೆಲ್ಲ ಹಣದ ಅಪರಾ ತಪರ ಆಗುತ್ತಿದೆ ಎಂಬ ಗುಲ್ಲು ಇತ್ತು ಆದರೆ ಈಗೆಲ್ಲ ಪಾರದಶ೯ಕವಾಗಿದೆ ಆದರೂ ಈ ಬಾರಿಯ 2017ರ ಜಾತ್ರೆಯಲ್ಲಿ ಅವ್ಯವಹಾರದ ಆರೋಪ ಮಾಡಲಾಗಿದೆ ಈ ವಿಚಾರ ಇಲ್ಲಿ ಅಪ್ರಸ್ತುತ ಆದರೂ ಈ ಬಗ್ಗೆ ಬರೆಯಲು ಕಾರಣ ಕೆಳದಿ ಅರಸರ ಕಾಲದಲ್ಲಿ ಅಂದರೆ 350 ವಷ೯ದ ಹಿಂದೆಯೂ ರಾಜರಿಗೆ ಸಾಗರದ ಮಾರಿಕಾಂಬಾ ಜಾತ್ರೆಯಲ್ಲಿ ಸಾವ೯ಜನಿಕರಿಂದ ಸಂಗ್ರಹಿಸಿದ ಜಾತ...