Skip to main content

ಶಿಕ್ಷಕ ವೃತ್ತಿಯಲ್ಲಿ ವಿಶಿಷ್ಟವಾಗಿ ಸೇವೆ ಸಲ್ಲಿಸುತ್ತಿರುವ ಯುವ ಶಿಕ್ಷಕ ಚೋರಡಿ ಸಮೀಪದ ತುಪ್ಪೂರಿನ ಆರ್.ಸಿ ಮಂಜುನಾಥ್ ತಮ್ಮ ಪ್ರೌಡ ಶಾಲಾ ಶಿಕ್ಷಣ ಆನಂದಪುರಂನಲ್ಲಿ ಪಡೆದವರು, 2000 ಇಸವಿಯ SSLC ಬ್ಯಾಚಿನ ಗುರುವಂದನೆ ಮತ್ತು ಸ್ನೇಹ ಸಮ್ಮಿಲನ ಕಾರ್ಯಕ್ರಮ ಹಮ್ಮಿಕೊಂಡು 22 ವರ್ಷದ ನಂತರ ಅವರೆಲ್ಲ ಒಂದಾಗಿ ಸೇರಲಿದ್ದಾರೆ ಇದೇ 17ನೇ ತಾರೀಖು ಭಾನುವಾರ

#ಈ_ವಷ೯ದ_ಮೊದಲ_ಮಾವಿನಹಣ್ಣು_ಅಂಕೋಲದಿಂದ.

#ಪತ್ರಕರ್ತ_ಬಿ_ಡಿ_ರವಿ_ತಂದು_ಕೊಟ್ಟಿದ್ದಾರೆ.

#ನಮ್ಮ_ಊರಿನ_ಪ್ರೌಡಶಾಲ_2000_ಬ್ಯಾಚಿನ_ಗುರುವಂದನೆ_ಸ್ನೇಹಸಮ್ಮಿಲನಕ್ಕೆ.

#ಮಾದರಿ_ಶಿಕ್ಷಕ_ಆರ್_ಸಿ_ಮಂಜುನಾಥರ_ವಿಶೇಷ_ಪ್ರಯತ್ನ.
 
   ನಮ್ಮ ಊರು ಆನಂದಪುರಂನ ಸರ್ಕಾರಿ ಪ್ರೌಡ ಶಾಲೆಯಲ್ಲಿ ವಿದ್ಯಾಬ್ಯಾಸ ಮಾಡಿ ಶಿಕ್ಷಕ ವೃತ್ತಿಯಲ್ಲಿರುವ ಚೋರಡಿ ಸಮೀಪದ ತುಪ್ಪೂರಿನ R.C. ಮಂಜುನಾಥರು ಸಾಗರ ತಾಲ್ಲೂಕಿನ ತುಟ್ಟ ತುದಿಯಾದ ಕೊಲ್ಲೂರು ಸಮೀಪದ ಪಶ್ಚಿಮ ಘಟ್ಟದ ಅತಿ ಎತ್ತರದ ಅಂಬಾರಗುಡ್ಡದ ಮುರಳ್ಳಿಯ ಗುಡ್ಡಗಾಡು ವಾಸಿಗಳಾದ ಕುಣುಬಿ ಜನಾಂಗದ ಏಕ ಶಿಕ್ಷಕ ಶಾಲೆಯಲ್ಲಿ ಅತ್ಯುತ್ತಮವಾಗಿ ಶಿಕ್ಷಣ ನೀಡಿ ಅಲ್ಲಿನ ಮಕ್ಕಳು ವಿದ್ಯಾವಂತರಾಗಿ ಮುಂದಿನ ಶಿಕ್ಷಣಕ್ಕೆ ದಾರಿ ದೀಪ ಆಗಿದ್ದವರು.
   ಮುರಳ್ಳಿಗೆ ಬಸ್ ಸೌಲಭ್ಯವಿಲ್ಲ, ವಿದ್ಯುತ್ ಇಲ್ಲದ ಆರು ತಿಂಗಳು ಮಳೆ, ಮೂರು ತಿಂಗಳು ವಿಪರೀತ ಚಳಿ, ಇಂಬುಳಗಳ ಕಾಟ ಅಲ್ಲಿ ಆದ್ದರಿಂದ ಅಲ್ಲಿನ ಶಾಲೆಗೆ ಶಿಕ್ಷಕರು ಹೋಗಲು ಒಪ್ಪುವುದಿಲ್ಲ.
  ನಂತರ ವರ್ಗ ಆದಲ್ಲೆಲ್ಲ ಅಲ್ಲಿನ ಶಾಲೆ ನಂದ ಗೋಕುಲವಾಗಿಸಿ ಅಲ್ಲಿನ ವಿದ್ಯಾರ್ಥಿ ವೃಂದ ಮತ್ತು ಪೋಷಕರ ಪ್ರೀತಿ ಪಾತ್ರವಾಗುವ R C ಮಂಜುನಾಥ ಯಾವುದೇ ರಾಷ್ಟ್ರ ಪ್ರಶಸ್ತಿಗಿಂತ ದೊಡ್ಡ ಅರ್ಹತೆಯ ಯುವ ಶಿಕ್ಷಕರು.
   ಇವರು ತಾವು ವಿದ್ಯಾಬ್ಯಾಸ ಮಾಡಿದ ಆನಂದಪುರಂನಲ್ಲಿ 2000 ಇಸವಿಯಲ್ಲಿ SSLC ಓದಿದ ಇವರ ಸಹ ವಿದ್ಯಾರ್ಥಿಗಳನ್ನು ಸೇರಿಸಿ ಗುರುವಂದನೆ ಮತ್ತು ಸ್ನೇಹ ಸಮ್ಮಿಲನ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ (ದಿನಾಂಕ 17- ಏಪ್ರಿಲ್ - 2022 ರ ಭಾನುವಾರ) ಅವತ್ತು ಇವರ ಮಧ್ಯಾಹ್ನದ ಊಟಕ್ಕೆ ಪ್ರಗತಿ ಪರ ಕೃಷಿಕರಾದ #ನಾಗೇಂದ್ರ_ಸಾಗರ್ ರಿಂದ ಅನಾನಸ್ ಹೋಳಿಗೆ ಖರೀದಿಸಿದ್ದೇನೆ ಮತ್ತು ಮಾವಿನ ಹಣ್ಣಿನ ರಸಾಯನಕ್ಕೆ ಪತ್ರಕರ್ತ ಗೆಳೆಯ ಬಿ.ಡಿ. ರವಿ ಅಂಕೋಲೆಗೆ ಕಾಗೋಡು ಹೋರಾಟದ ನೇತಾರ ಗಣಪತಿಯಪ್ಪ ಪ್ರಶಸ್ತಿಗೆ ಆಯ್ಕೆ ಆಗಿರುವ ಅಂಕೋಲೆಯ ವಿಷ್ಣು ನಾಯಕರನ್ನು ಆಹ್ವಾನಿಸಲು ಸಾಗರ ತಾಲ್ಲೂಕಿನ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ವಿ.ಟಿ. ಸ್ವಾಮಿ ಮತ್ತು ಗಣಪತಿಯಪ್ಪ ಟ್ರಸ್ಟ್ ಅಧ್ಯಕ್ಷರಾದ ಉಮೇಶ್ ಹಿರೆನೆಲ್ಲೂರ್ ಜೊತೆ     ಅಂಕೋಲೆಗೆ ಹೋದವರಿಂದ  ಅಲ್ಲಿನ ಗುಡ್ಡಗಾಡು ವಾಸಿ ಹಾಲಕ್ಕಿ ಗೌಡರ ಸಮಾಜದ ಮಹಿಳೆಯರಿಂದ ಮಾವಿನ ಹಣ್ಣು ಖರೀದಿಸಿ ತರಿಸಿದ್ದೇನೆ.
   2000 ಇಸವಿಯಲ್ಲಿ ಆನಂದಪುರಂನ ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳ ಸ್ನೇಹ ಮಿಲನ ಸುಮಾರು 22 ವರ್ಷದ ನಂತರ ಆನಂದಪುರಂನಲ್ಲಿ ನಡೆಯುತ್ತಿದ್ದು ಅವತ್ತು 22 ವರ್ಷದ ನಂತರದ ಜೀವನವನ್ನು ಅವರೆಲ್ಲ ತಿರುಗಿ ನೋಡಿ ವಿಮರ್ಷಿಸಿಕೊಳ್ಳುವ, ಪರಸ್ಪರ ಅವತ್ತಿನ ದಿನಗಳ ನೆನಪಿಸಿಕೊಳ್ಳುವ ಈ ಸ್ನೇಹ ಮಿಲನ ಸುಮುದುರ ಆಗಲಿ, R. C. ಮಂಜುನಾಥ್ ಮತ್ತು ಅವರ ಜೊತೆ ಇಂತಹ ಕಾರ್ಯಕ್ರಮಕ್ಕೆ ಕೈ ಜೋಡಿಸಿದ ಅವರ ಗೆಳೆಯರೆಲ್ಲರಿಗೂ ಶುಭ ಹಾರೈಸುತ್ತೇನೆ.

Comments

Popular posts from this blog

Blog number 1782. ಅರಳಸುರಳಿಯ ರಾಘವೇಂದ್ರ ಕೇಕೋಡರ ಕುಟುಂಬದ ತಪ್ಪು ನಿರ್ದಾರದ ದುರಂತ.

#ತೀರ್ಥಹಳ್ಳಿಯ_ಅರಳಸುರಳಿಯ_ಒಂದೇ_ಕುಟುಂಬದ_ನಾಲ್ವರು_ಮೃತರಾದ_ರಹಸ್ಯವೇನು? #ಈ_ಬಗ್ಗೆ_ಆ_ಊರಿನ_ಸಮೀಪದ_ಈ_ಕುಟುಂಬದ_ಪರಿಚಯ_ಇರುವವರಿಗೆ_ವಿಚಾರಿಸಿದ್ದೆ. #ಅವರು_ಈ_ಘಟನೆ_ಬಗ್ಗೆ_ಸವಿಸ್ತಾರವಾಗಿ_ಲಿಖಿತ_ಲೇಖನ_ಬರೆದಿದ್ದಾರೆ. #ಅವರ_ವಿನಂತಿ_ಅವರ_ಹೆಸರು_ಬಹಿರಂಗಗೊಳಿಸ_ಬಾರದು. #ಆದ್ದರಿಂದ_ಈ_ಲೇಖನ_ಪೋಸ್ಟ್_ಮಾಡಬಾರದೆಂದಿದ್ದೆ_ಆದರೆ_ಇದು_ಮಲೆನಾಡಿಗರ_ಮನೆ_ಮನೆಯ_ಕಥೆ #ಆದ್ದರಿಂದ_ಇಲ್ಲಿ_ಪೋಸ್ಟ್_ಮಾಡಿದೆ.    ಇಲ್ಲಿ ತಪ್ಪು ಯಾರದ್ದೂ ಇಲ್ಲ... ಪಶ್ಚಾತ್ತಾಪದ ಪ್ರಾಯಶ್ಚಿತ ಕೇಳಲು ಅವರಾರು ಇಲ್ಲ .....ಆದರೆ ಈ ರೀತಿ ಜೀವ ತ್ಯಾಗ ಮಾಡುವ ಆತುರದ ಕೆಟ್ಟ ನಿರ್ದಾರ ಮಾತ್ರ ಸರಿ ಅಲ್ಲ.     ಇವರ ಅಣ್ಣ ಆರ್.ಎಸ್.ಎಸ್. ಪ್ರಚಾರಕರಾಗಿ ದೆಹಲಿಯಲ್ಲಿ ಏಳು ವಷ೯ ಮೋದಿ ಜೊತೆ ಒಂದೇ ಕೋಣೆ ಹಂಚಿಕೊಂಡವರು, ಇನ್ನೊಬ್ಬ ಸಹೋದರ ಮೂಳೆ ತಜ್ಞರಾಗಿ ಶಿವಮೊಗ್ಗದಲ್ಲಿ ಆಸ್ಪತ್ರೆ ಮಾಡಿಕೊಂಡಿದ್ದಾರೆ.   #ದೀರ್ಘವಾದರೂ_ಪೂರ್ಣ_ಲೇಖನ_ಓದಿ   #ಹೀಗೊಂದು_ಸುಕುಟುಂಬ_ಆತ್ಮಾಘಾತ_ಮತ್ತು_ತದನಂತರದ_ಸಹಾಗಮನ.... ಮೂಡಣದಲ್ಲಿ ರವಿ ಮೂಡಲು ಅಣಿ ಯಾಗುತ್ತಿಧ್ದ .. ಹಾದಿಗಣಪತಿ ದೇವರು ಗರ್ಭಗುಡಿಯ ನಂದಾದೀಪದ ಮಂದ ಬೆಳಕಿನಲ್ಲಿ ತನ್ನ ಗುಡಿಯ ಎದುರಿನ ತಗ್ಗಿನಲ್ಲಿದ್ದ  ರಾಘವೇಂದ್ರ ಕೇಕೋಡರ ಮನೆಯನ್ನು ಎವೆಯಕ್ಕದೇ ನೋಡುತ್ತಲಿದ್ದ... ಊರ ಎಲ್ಲಾ ಮನೆಯಂತೆ ಆ ಮನೆಯಲ್ಲೂ ಆ ಬೆಳಗಿನಲ್ಲಿ ಮನೆಯೊಡತಿ ನಾಗರತ್ನಕ್ಕ ಆ ಸಮಯದಲ್ಲಿ ದೇವರಿಗೆ ದೀಪ ಹಚ್ಚಿ ಹೊಸ್ತಿಲು ಪೂಜೆ ಮಾಡ

Blog number 1037. ರಾಜಕುಮಾರಿ ಶಾಂತವ್ವ ಮತ್ತು ದಲಿತ ಯುವಕ ಸಿದ್ದೇಶ್ವರರ ಅಮರ ಪ್ರೇಮದ ಸ್ಮಾರಕ, ಅನ್ಯ ಜಾತಿ ವಿವಾಹವಾದ್ದರಿಂದ ರಾಜಕುಮಾರಿಗೆ ಸೂಳೆ ಪಟ್ಟ ನೀಡಿದ ಸಮಾಜ. ಸಮಾಜದ ಒಳಿತಿಗಾಗಿ ಶಾಂತವ್ವ ಕಟ್ಟಿಸಿದ ಬೃಹತ್ ಕೆರೆಗೆ ಜನ ಕರೆದದ್ದು ಸೂಳೆ ಕಟ್ಟಿಸಿದ ಕೆರೆ ಅದೇ ಸೂಳೆಕೆರೆ / ಶಾಂತಿ ಸಾಗರ

# ಸೂಳೆಕೆರೆ (ಶಾಂತಿ ಸಾಗರ) ಅಂತರ್ ಜಾತಿ ಪ್ರೇಮ ವಿವಾಹದ ದುರOತ ಕಥೆ. #ಅಕ್ಟೋಬರ್ 2019 ರಲ್ಲಿ ತುಂಬಿ ತುಳುಕಿತ್ತು.  ಚಿತ್ರದುಗ೯, ದಾವಣಗೆರೆ ಬಳ್ಳಾರಿ ಮುಂತಾದ ಮಳೆ ಕಡಿಮೆ ಆಗುತ್ತಿದ್ದ ಜಿಲ್ಲೆಗಳಲ್ಲಿ ಅದೂ ಅಕ್ಟೋಬರ್ ತಿಂಗಳ 2019 ರಲ್ಲಿ  ಬಂದಿದ್ದ ಬಾರಿ ಮಳೆ ಎಲ್ಲಾ ಕೆರೆ, ಹೊಂಡಗಳು ತುಂಬಿ ತುಳುಕಿದೆ, ಸಾಮಾಜಿಕ ಜಾಲ ತಾಣದಲ್ಲಿ 40 ವಷ೯ದಲ್ಲಿ ಇಂತ ಮಳೆ ಬಂದಿಲ್ಲ ಅಂತ ಸುದ್ದಿ ಹರಿದಾಡುತ್ತಿತ್ತು ಮತ್ತು  ಸೂಳೆಕೆರೆ ತುಂಬಿ ಕೋಡಿ ಬಿದ್ದಿದೆ ಅಂತೆಲ್ಲ Post ನೋಡಿ ಬೆಂಗಳೂರಿಂದ ಬರುವಾಗ ಚಿತ್ರದುಗ೯ ಮಾಗ೯ವಾಗಿ ಚನ್ನಗಿರಿ ತಲುಪಿ ಸೂಳೆಕೆರೆ ನೋಡಲು ಹೋಗಿದ್ದೆ.  11ನೇ ಶತಮಾನದಲ್ಲಿ (1128ರಲ್ಲಿ)ಕೇವಲ 3 ವಷ೯ದಲ್ಲಿ ಈ ಕೆರೆ ನಿಮಾ೯ಣ ಮಾಡಿಸಿದ್ದು ಶಾಂತವ್ವ ಎಂಬ ರಾಜ ಕುಮಾರಿ ಅವಳು ಸ್ವಣ೯ವತಿ ಪಟ್ಟಣದ ದೊರೆ ವಿಕ್ರಮ ರಾಜನ ಮಗಳು, ಸಿದ್ದೇಶ್ವರ ಎಂಬ ಅನ್ಯ ಜಾತಿಯ ಯುವಕನೊ೦ದಿಗೆ ಗಾಂದವ೯ ವಿವಾಹ ಆಗುತ್ತಾಳೆ ಇದನ್ನ ಸಹಿಸದ ಮತ್ತು ಒಪ್ಪದ ಜನತೆ ಸೂಳೆ ಎಂದು ಮೂದಲಿಸುತ್ತಾರOತೆ ಈ ರೀತಿ ತನಗೆ ಬಂದ ಕಳಂಕ ಕಳೆಯಲು ಈ ಬೃಹತ್ ಕೆರೆ ತನ್ನ ಪತಿ ಸಿದ್ದೇಶ್ವರನ ಜೊತೆ ಸೇರಿ ನಿಮಿ೯ಸಿ ಕೆರೆಗೆ ಹಾರವಾದಳೆoಬ ಇತಿಹಾಸ ಇದೆ ಇದರಿಂದ ನೊಂದ ಪತಿ ಸಿದ್ಧೇಶ್ವರ ಕೂಡ ಎದುರಿನ ಗುಡ್ಡದಲ್ಲಿ ಜೀವ ತ್ಯಾಗ ಮಾಡುತ್ತಾನೆ ಈಗ ಅಲ್ಲಿ ಸಿದ್ದೇಶ್ವರ ದೇವಸ್ಥಾನವಿದೆ.   ಈ ಕೆರೆ ಈಗಲೂ ಸೂಳೆಕೆರೆ ಎಂದೆ ಹೆಸರಾಗಿದೆ ಈ

# ಜುಟ್ಟು ಕಾಳಿಂಗ ಸಪ೯ದ ಆಸ್ತಿತ್ವದ ಮಲೆನಾಡಿನ ಮಿಥ್ಯೆ#

  # ಕಾಳಿ೦ಗ ಸಪ೯ದಲ್ಲಿ ಜುಟ್ಟು ಕಾಳಿಂಗ ಸಪ೯ ಅಂತ ಇದೇ ಅನ್ನುವ ಯಾರು ನೋಡದ ಸಪ೯ದ ಅಸ್ತಿತ್ವ#    ಮಲೆನಾಡಿನ ಹಳ್ಳಿಗಳಲ್ಲಿ, ಅದು ಕಾಳಿ೦ಗ ಸಪ೯ದ ವಾಸಸ್ಥಳದ ಪರಿಸರದಲ್ಲಿ ಜುಟ್ಟು ಕಾಳಿಂಗ ಸಪ೯ ಇದೆ ಅನ್ನುವ ಮಾತು ಆಗಾಗ್ಗೆ ಕೇಳುತ್ತಿರುತ್ತೇವೆ. ಆದರೆ ಆ ರೀತಿಯ ಹಾವು ಇಲ್ಲ ಎಂದು ಹಾವಿನ ಬಗ್ಗೆ ಸಂಶೋದನೆ ಮಾಡುವವರು, ಅರಣ್ಯ ಇಲಾಖೆಯವರು, ಹಾವು ಹಿಡಿಯುವವರು ಖಡಾಖಂಡಿತವಾಗಿ ಹೇಳುತ್ತಾರಾದರು, ಈ ವದಂತಿ ಹೇಗೆ ಹರಡಿದೆ?.    ಇದು ಒಂದು ಊರು ಹಳ್ಳಿಯಲ್ಲ ನಾನು ನೋಡಿದಂತೆ ಮಹಾರಾಷ್ಟ್ರದ ರತ್ನಗಿರಿಯಿ೦ದ ಕೇರಳದ ಕಾಸರಗೋಡಿನ ತನಕ ಜುಟ್ಟು ಕಾಳಿಂಗದ ಅನೇಕ ರೋಚಕ ಕಥೆ ಕೇಳಿದ್ದೇನೆ.   ಪ್ರತ್ಯಕ್ಷ ನೋಡಿದವರು ತಾವು ಎನ್ನುವ ಅನೇಕರಲ್ಲಿ ಮಾತಾಡಿದ್ದೇನೆ ಆದರೆ ಅದು ನಂಬಲಹ೯ ಮಾಹಿತಿ ಅನಿಸಲಿಲ್ಲ, ಒಂದು ರೀತಿ ಕಾಲ್ಪನಿಕ ತ್ರಿಲ್ಲರ್ ಕಥೆ ಅಷ್ಟೇ ಅನ್ನಬಹುದು.    ಜಡೆ ಕಾಳಿಂಗ ಸಪ೯ಕ್ಕೆ ರೋಷ ಜಾಸ್ತಿ, ಹೆಡೆ ಮೇಲೆ ಕೂದಲಿನ ಜುಟ್ಟು ಇರುತ್ತೆ, ಮನುಷ್ಯರನ್ನ ಕಂಡರೆ ಓಡಿಸಿಕೊಂಡು ಬರುತ್ತೆ, ಅದರಿಂದ ತಪ್ಪಿಸಿಕೊಳ್ಳಲು ಒಂದೇ ದಾರಿ ಅದೇನೆಂದರೆ ತಗ್ಗಿನ ಪ್ರದೇಶದಲ್ಲಿ ಓಡುವುದು.     ಯಾಕೆ೦ದರೆ ಓಡಿಸಿಕೊಂಡು ಬರುವ ಜುಟ್ಟು ಕಾಳಿಂಗದ ಜುಟ್ಟು, ಇಳಿಜಾರಿನಲ್ಲಿ ಅದರ ತಲೆಯಿ೦ದ ಇಳಿಜಾರಿಗೆ ಸರಿಯುವುದರಿಂದ  ಕಣ್ಣಿನ ಮೇಲೆ ಕೂದಲ ಜುಟ್ಟು ಮುಚ್ಚುವುದರಿಂದ ಕಣ್ಣು ಕಾಣುವುದಿಲ್ಲ, ಆಗಲೇ ತಪ್ಪಿಸಿಕೊಳ್ಳಬೇಕು ಅಂತ ಬಿದನೂರು ನಗರ ಸಮೀಪದ ದೇವಗಂಗೆ ಎಂಬ ಕೆಳದಿ