Skip to main content

ಆನಂದಪುರಂ ಇತಿಹಾಸ ಭಾಗ-73. ಕೆರೆ ಹಿತ್ತಲು ಗ್ರಾಮದ ದಲಿತ ಶತಾಯುಷಿ ಗುಮ್ಮಿ ನಾಗಣ್ಣ ಊರಿನ ಮಕ್ಕಳ ವಿಧ್ಯಾಬ್ಯಾಸಕ್ಕಾಗಿ ತಮ್ಮ ಒಂದು ಎಕರೆ ಭೂಮಿ (ಕೋಟಿಗೆ ಮೀರಿದ ಬೆಲೆಯ) ಭೂದಾನ ಮಾಡಿ ಆನಂದಪುರಂನ ಇತಿಹಾಸದಲ್ಲಿ ಅವರು ಚಿರಸ್ಥಾಯಿ ಆಗಿದ್ದಾರೆ

#ಆನಂದಪುರಂ_ಇತಿಹಾಸ_ಭಾಗ_73.

#ಶತಾಯುಷಿ_ಕೆರೆಹಿತ್ತಲು_ಗ್ರಾಮದ_ಗುಮ್ಮಿ_ನಾಗಣ್ಣ

#ಊರಿನ_ಮಕ್ಕಳ_ವಿದ್ಯಾಬ್ಯಾಸಕ್ಕಾಗಿ_ಭೂದಾನ_ಮಾಡಿದ_ಪರಿಶಿಷ್ಟ_ಜಾತಿಯ_ದಯಾಳು.

#ಊರ_ಒಳಗಿನ_ಈ_ಜಾಗದ_ಮೌಲ್ಯ_ಕೋಟಿ_ಇದೆ.

  1906 ರಲ್ಲಿ ಜನಿಸಿ 2011ರಲ್ಲಿ ಇಹಲೋಕ ತ್ಯಜಿಸಿದ ಆನಂದಪುರಂ ಹೋಬಳಿಯ ಆಚಾಪುರ ಗ್ರಾಮ ಪಂಚಾಯತನ ದಲಿತ ಕೃಷಿಕ ಗುಮ್ಮಿ ನಾಗಣ್ಣ ಶತಾಯುಷಿಗಳು, 105 ವರ್ಷ ಬದುಕಿದವರು.
  ಶುದ್ಧ ಬಿಳಿ ಜುಬ್ಬಾ, ಬಿಳಿ ಕಚ್ಚೆ ಪಂಜೆ, ಹೆಗಲ ಮೇಲೆ ಶಲ್ಯ, ಕಾಲಿಗೆ ಚರ್ಮದ ಚಡಾವು, ಎರೆಡೂ ಕಿವಿಗೆ ಬಂಗಾರದ ಓಲೆ, ಮುಖದ ಮೇಲಿನ ಪೈಲ್ವಾನ್ ಮೀಸೆಯ ಗುಮ್ಮಿ ನಾಗಣ್ಣ ಎಲ್ಲೇ ಹೋದರೂ ಗೌರವದಿಂದ ಜನ ಕಾಣುತ್ತಿದ್ದ ಗೌರವಾನ್ವಿತರು.
   ಗುಮ್ಮಿ ನಾಗಣ್ಣ ಸಹೋದರರು ಇಲ್ಲಿಯ ಮೂಲ ನಿವಾಸಿಗಳಲ್ಲ, ಶಿವಮೊಗ್ಗ - ಆನಂದಪುರಂ - ತಾಳಗುಪ್ಪ ರೈಲು ಮಾರ್ಗ ಆಗುವಾಗ ಈ ಭಾಗದಲ್ಲಿ ಚಾರ್ ಕೋಲ್ ತಯಾರಿಸಲು ಬಂದವರು ನಂತರ ಕೆರೆಹಿತ್ತಲಿನಲ್ಲಿ ನಿಂತರು.
  ಇವರ ದೊಡ್ಡ ಮಗಳು ಜಯಮ್ಮ ಅಳಿಯ ಬೆಂಗಳೂರಿನ ಆಡಿಟರ್ ಜನರಲ್ ಆಫೀಸಿನಲ್ಲಿ ದೊಡ್ಡ ಹುದ್ದೆಯಲ್ಲಿದ್ದು ನಿವೃತ್ತರಾಗಿ ಬೆಂಗಳೂರಲ್ಲಿ ನೆಲೆಸಿದ್ದಾರೆ, ಎರಡನೆ ಮಗಳು ಚಂದ್ರಮ್ಮ ತಮ್ಮ ಕುಟುಂಬದ ಜೊತೆ ಇದೇ ಊರಲ್ಲಿ ನೆಲೆಸಿದ್ದಾರೆ, ಏಕೈಕ ಪುತ್ರ ನಾಗರಾಜ್ ಭೂ ನ್ಯಾಯ ಮಂಡಳಿ ಸದಸ್ಯರಾಗಿದ್ದರು.
  ಗುಮ್ಮಿ ನಾಗಣ್ಣ ಈಗಿಲ್ಲ ಆದರೆ ಅವರನ್ನು ಆನಂದಪುರಂ ಜನತೆ ಮರೆಯಲಾರರು ಏಕೆಂದರೆ ಕೆರೆಹಿತ್ತಲು ಗ್ರಾಮದ ಮಕ್ಕಳ ವಿದ್ಯಾಬ್ಯಾಸಕ್ಕಾಗಿ ಪ್ರಾಥಮಿಕ ಶಾಲಾ ಕಟ್ಟಡ ಕಟ್ಟಲು ಊರ ಮಧ್ಯದ ಇವರ ಆಸ್ತಿಯಲ್ಲಿ ಒಂದು ಎಕರೆ ಜಮೀನು ದಾನ ಮಾಡಿದ್ದಾರೆ ಸುಮಾರು 1988ರಿಂದ ಇಲ್ಲಿನ   ಸರ್ಕಾರಿ ಶಾಲೆ ಗುಮ್ಮಿನಾಗಣ್ಣ ದಾನ ನೀಡಿದ ಜಾಗದಲ್ಲಿ ನಡೆಯುತ್ತಿದೆ.
  ಶಿಕ್ಷಣ ಇಲಾಖೆಗೆ ಪುನಃ ಪುನಃ ಒತ್ತಾಯಿಸಿ ದಿನಾಂಕ 22- ಸೆಪ್ಟೆಂಬರ್ -1998 ರಲ್ಲಿ ಕೆರೆಹಿತ್ತಲು ಗ್ರಾಮದ ಸ.ನಂ.34 ರಲ್ಲಿ ಒಂದು ಎಕರೆ ಜಾಗ ಶಾಲೆಗೆ ರಿಜಿಸ್ಟ್ರೇಷನ್ ಮಾಡಿಸಿ ಕೊಟ್ಟಿದ್ದಾರೆ ಇವತ್ತಿನ ಈ ಜಾಗದ ಮೌಲ್ಯ ಕೋಟಿಗೂ ಮೀರಿದ್ದು.
  ಈ ಊರಿನ ದೊಡ್ಡ ದೊಡ್ಡ ಭೂಮಾಲಿಕರಿದ್ದರೂ ಊರ ಮಕ್ಕಳ ಶಿಕ್ಷಣಕ್ಕಾಗಿ ದಲಿತ ಶ್ರಮಿಕ ಕೃಷಿಕರಾದ ಗುಮ್ಮಿ ನಾಗಣ್ಣ ಭೂದಾನ ಮಾಡಿದ್ದು ದೊಡ್ಡ ವಿಚಾರ.
  ಸಂತೃಪ್ತ ಜೀವನ ನಡೆಸಿ 105 ವರ್ಷ ಪೂರೈಸಿದ ಶತಾಯುಷಿ ಗುಮ್ಮಿ ನಾಗಣ್ಣರ ಈ ಸಿಸ್ವಾರ್ಥ ಸೇವೆ ಸದಾ ಸ್ಮರಣೀಯ ಮತ್ತು ಆನಂದಪುರಂ ಇತಿಹಾಸದಲ್ಲಿ ಗುಮ್ಮಿ ನಾಗಣ್ಣರ ಹೆಸರು ಚಿರಸ್ಥಾಯಿಗೊಳಿಸಿದೆ.
  ಇತ್ತೀಚೆಗೆ ಶಿವಮೊಗ್ಗ ಜಿಲ್ಲಾ ಪಂಚಾಯತ್ ನ ಉಪ ಕಾರ್ಯದರ್ಶಿಯಾದ ಮಲ್ಲಿಕಾರ್ಜುನ ತೊದಲಬಾಗಿ ಅನ್ನುವವರು ಈ ಶಾಲೆಗೆ ಅವರ ಸ್ವಂತ ಹಣದಲ್ಲಿ ಸುಣ್ಣ ಬಣ್ಣ ಮಾಡಿಸಿದ ಪತ್ರಿಕಾ ವರದಿ ಕೂಡ ಇಲ್ಲಿ ಲಗತ್ತಿಸಿದೆ.

Comments

Popular posts from this blog

# ಜುಟ್ಟು ಕಾಳಿಂಗ ಸಪ೯ದ ಆಸ್ತಿತ್ವದ ಮಲೆನಾಡಿನ ಮಿಥ್ಯೆ#

  # ಕಾಳಿ೦ಗ ಸಪ೯ದಲ್ಲಿ ಜುಟ್ಟು ಕಾಳಿಂಗ ಸಪ೯ ಅಂತ ಇದೇ ಅನ್ನುವ ಯಾರು ನೋಡದ ಸಪ೯ದ ಅಸ್ತಿತ್ವ#    ಮಲೆನಾಡಿನ ಹಳ್ಳಿಗಳಲ್ಲಿ, ಅದು ಕಾಳಿ೦ಗ ಸಪ೯ದ ವಾಸಸ್ಥಳದ ಪರಿಸರದಲ್ಲಿ ಜುಟ್ಟು ಕಾಳಿಂಗ ಸಪ೯ ಇದೆ ಅನ್ನುವ ಮಾತು ಆಗಾಗ್ಗೆ ಕೇಳುತ್ತಿರುತ್ತೇವೆ. ಆದರೆ ಆ ರೀತಿಯ ಹಾವು ಇಲ್ಲ ಎಂದು ಹಾವಿನ ಬಗ್ಗೆ ಸಂಶೋದನೆ ಮಾಡುವವರು, ಅರಣ್ಯ ಇಲಾಖೆಯವರು, ಹಾವು ಹಿಡಿಯುವವರು ಖಡಾಖಂಡಿತವಾಗಿ ಹೇಳುತ್ತಾರಾದರು, ಈ ವದಂತಿ ಹೇಗೆ ಹರಡಿದೆ?.    ಇದು ಒಂದು ಊರು ಹಳ್ಳಿಯಲ್ಲ ನಾನು ನೋಡಿದಂತೆ ಮಹಾರಾಷ್ಟ್ರದ ರತ್ನಗಿರಿಯಿ೦ದ ಕೇರಳದ ಕಾಸರಗೋಡಿನ ತನಕ ಜುಟ್ಟು ಕಾಳಿಂಗದ ಅನೇಕ ರೋಚಕ ಕಥೆ ಕೇಳಿದ್ದೇನೆ.   ಪ್ರತ್ಯಕ್ಷ ನೋಡಿದವರು ತಾವು ಎನ್ನುವ ಅನೇಕರಲ್ಲಿ ಮಾತಾಡಿದ್ದೇನೆ ಆದರೆ ಅದು ನಂಬಲಹ೯ ಮಾಹಿತಿ ಅನಿಸಲಿಲ್ಲ, ಒಂದು ರೀತಿ ಕಾಲ್ಪನಿಕ ತ್ರಿಲ್ಲರ್ ಕಥೆ ಅಷ್ಟೇ ಅನ್ನಬಹುದು.    ಜಡೆ ಕಾಳಿಂಗ ಸಪ೯ಕ್ಕೆ ರೋಷ ಜಾಸ್ತಿ, ಹೆಡೆ ಮೇಲೆ ಕೂದಲಿನ ಜುಟ್ಟು ಇರುತ್ತೆ, ಮನುಷ್ಯರನ್ನ ಕಂಡರೆ ಓಡಿಸಿಕೊಂಡು ಬರುತ್ತೆ, ಅದರಿಂದ ತಪ್ಪಿಸಿಕೊಳ್ಳಲು ಒಂದೇ ದಾರಿ ಅದೇನೆಂದರೆ ತಗ್ಗಿನ ಪ್ರದೇಶದಲ್ಲಿ ಓಡುವುದು.     ಯಾಕೆ೦ದರೆ ಓಡಿಸಿಕೊಂಡು ಬರುವ ಜುಟ್ಟು ಕಾಳಿಂಗದ ಜುಟ್ಟು, ಇಳಿಜಾರಿನಲ್ಲಿ ಅದರ ತಲೆಯಿ೦ದ ಇಳಿಜಾರಿಗೆ ಸರಿಯುವುದರಿಂದ  ಕಣ್ಣಿನ ಮೇಲೆ ಕೂದಲ ಜುಟ್ಟು ಮುಚ್ಚುವುದರಿಂದ ಕಣ್ಣು ಕಾಣುವುದಿಲ್ಲ, ಆಗಲೇ ತಪ್...

ಶರಾವತಿ ನದಿ ಉಗಮ ಸ್ಥಾನ ಅಂಬುತೀಥ೯.

ಇಡೀ ರಾಜ್ಯಕ್ಕೆ ವಿದ್ಯುತ್ ನೀಡುವ ಶರಾವತಿ ನದಿಯ ಉಗಮ ಸ್ಥಾನ ಅಂಬುತೀಥ೯, ಆರಗ ಸಮೀಪದ ತೀಥ೯ಳ್ಳಿ ತಾಲ್ಲೂಕಿನಲ್ಲಿದೆ( ಶಿವಮೊಗ್ಗ ಜಿಲ್ಲೆ)    ಅಂಬು ತೀಥ೯ದಲ್ಲಿ ಶ್ರೀ ರಾಮ ವನವಾಸದಲ್ಲಿದ್ದಾಗ ಸೀತಾ ಮಾತೆಗೆ ಪೂಜೆಗೆ ನೀರು ಸಿಗದಿದ್ದಾಗ ರಾಮ ತನ್ನ ಅಂಬಿನಿಂದ (ಬಿಲ್ಲಿನ ಬಾಣದಿಂದ) ನೆಲ ಸೀಳಿ ನೀರು ತಂದರೆ೦ದು ರಾಮಾಯಣದಲ್ಲಿ ಉಲ್ಲೇಖವಿದೆ, ಹಾಗಾಗಿ ಈ ಸ್ಥಳಕ್ಕೆ ಅಂಬುತೀಥ೯ ಎಂಬ ಹೆಸರು ಬ೦ತು ಎಂಬುದು ಸ್ಥಳ ಪುರಾಣ.    ಇಲ್ಲಿ ಸಣ್ಣ ತೊರೆಯಾಗಿ ಹುಟ್ಟುವ ನದಿ ಬಾಣದಿಂದ ಹುಟ್ಟಿದ್ದರಿಂದ ಶರಾವತಿ ಎ೦ಬ ಹೆಸರು ಪಡೆದು ಪೂವ೯ಕ್ಕೆ ಹರಿದು ನಂತರ ಪಶ್ಚಿಮ ಮುಖವಾಗಿ ತಿರುಗಿ ಹೊಸನಗರ ತಾಲ್ಲೂಕನ್ನ ದಾಟಿ ಸಾಗರ ತಾಲ್ಲೂಕಿನ ಜೋಗದಲ್ಲಿ ಜಲಪಾತವಾಗಿ ದಟ್ಟ ಕಾನನದ ಕಣಿವೆ ಮುಖಾಂತರ ಹರಿದು ಹೊನ್ನಾವರದಲ್ಲಿ ಅರಬ್ಬಿ ಸಮುದ್ರ ಸೇರುತ್ತದೆ.   ಈ ನದಿಗೆ ಮೊದಲಿಗೆ ಹೀರೇ ಬಾಸ್ಕರ ಎಂಬಲ್ಲಿ ನಂತರ ಲಿಂಗನಮಕ್ಕಿಯಲ್ಲಿ ಆಣೆಕಟ್ಟು ಕಟ್ಟಿ ರಾಜ್ಯಕ್ಕೆ ಜಲ ವಿದ್ಯುತ್ ನೀಡುತ್ತಿರುವುದರಿಂದ ಲಕ್ಷಾಂತರ ಎಕರೆ ಕಾಡು, ಜಮೀನು ಅನೇಕ ಊರು ಮುಳುಗಡೆ ಆಯಿತು ಸಾವಿರಾರು ಕುಟುಂಬಗಳು ಸಂತ್ರಸ್ಥರಾದದ್ದು ಇತಿಹಾಸ.    ಈ ನದಿ ಜೋಗದಲ್ಲಿ ದುಮುಕುವ ಜಲಪಾತ ವಿಶ್ವದ ಸುಂದರ ಜಲಪಾತದಲ್ಲಿ ಒಂದಾಗಿದೆ.    ಹಾಗಾಗಿ ಶರಾವತಿ ನದಿಯ ಉಗಮ ಸ್ಥಾನಕ್ಕೆ ಮಹತ್ವವಿದೆ, ಒಮ್ಮೆಯಾದರೂ ಈ ನದಿ ಮೂಲ ಸಂದಶಿ೯ಸಬೇಕು ಆದರೆ ಇಲ್ಲಿ ಶರಾವತಿ ವ...

Blog number 1037. ರಾಜಕುಮಾರಿ ಶಾಂತವ್ವ ಮತ್ತು ದಲಿತ ಯುವಕ ಸಿದ್ದೇಶ್ವರರ ಅಮರ ಪ್ರೇಮದ ಸ್ಮಾರಕ, ಅನ್ಯ ಜಾತಿ ವಿವಾಹವಾದ್ದರಿಂದ ರಾಜಕುಮಾರಿಗೆ ಸೂಳೆ ಪಟ್ಟ ನೀಡಿದ ಸಮಾಜ. ಸಮಾಜದ ಒಳಿತಿಗಾಗಿ ಶಾಂತವ್ವ ಕಟ್ಟಿಸಿದ ಬೃಹತ್ ಕೆರೆಗೆ ಜನ ಕರೆದದ್ದು ಸೂಳೆ ಕಟ್ಟಿಸಿದ ಕೆರೆ ಅದೇ ಸೂಳೆಕೆರೆ / ಶಾಂತಿ ಸಾಗರ

# ಸೂಳೆಕೆರೆ (ಶಾಂತಿ ಸಾಗರ) ಅಂತರ್ ಜಾತಿ ಪ್ರೇಮ ವಿವಾಹದ ದುರOತ ಕಥೆ. #ಅಕ್ಟೋಬರ್ 2019 ರಲ್ಲಿ ತುಂಬಿ ತುಳುಕಿತ್ತು.  ಚಿತ್ರದುಗ೯, ದಾವಣಗೆರೆ ಬಳ್ಳಾರಿ ಮುಂತಾದ ಮಳೆ ಕಡಿಮೆ ಆಗುತ್ತಿದ್ದ ಜಿಲ್ಲೆಗಳಲ್ಲಿ ಅದೂ ಅಕ್ಟೋಬರ್ ತಿಂಗಳ 2019 ರಲ್ಲಿ  ಬಂದಿದ್ದ ಬಾರಿ ಮಳೆ ಎಲ್ಲಾ ಕೆರೆ, ಹೊಂಡಗಳು ತುಂಬಿ ತುಳುಕಿದೆ, ಸಾಮಾಜಿಕ ಜಾಲ ತಾಣದಲ್ಲಿ 40 ವಷ೯ದಲ್ಲಿ ಇಂತ ಮಳೆ ಬಂದಿಲ್ಲ ಅಂತ ಸುದ್ದಿ ಹರಿದಾಡುತ್ತಿತ್ತು ಮತ್ತು  ಸೂಳೆಕೆರೆ ತುಂಬಿ ಕೋಡಿ ಬಿದ್ದಿದೆ ಅಂತೆಲ್ಲ Post ನೋಡಿ ಬೆಂಗಳೂರಿಂದ ಬರುವಾಗ ಚಿತ್ರದುಗ೯ ಮಾಗ೯ವಾಗಿ ಚನ್ನಗಿರಿ ತಲುಪಿ ಸೂಳೆಕೆರೆ ನೋಡಲು ಹೋಗಿದ್ದೆ.  11ನೇ ಶತಮಾನದಲ್ಲಿ (1128ರಲ್ಲಿ)ಕೇವಲ 3 ವಷ೯ದಲ್ಲಿ ಈ ಕೆರೆ ನಿಮಾ೯ಣ ಮಾಡಿಸಿದ್ದು ಶಾಂತವ್ವ ಎಂಬ ರಾಜ ಕುಮಾರಿ ಅವಳು ಸ್ವಣ೯ವತಿ ಪಟ್ಟಣದ ದೊರೆ ವಿಕ್ರಮ ರಾಜನ ಮಗಳು, ಸಿದ್ದೇಶ್ವರ ಎಂಬ ಅನ್ಯ ಜಾತಿಯ ಯುವಕನೊ೦ದಿಗೆ ಗಾಂದವ೯ ವಿವಾಹ ಆಗುತ್ತಾಳೆ ಇದನ್ನ ಸಹಿಸದ ಮತ್ತು ಒಪ್ಪದ ಜನತೆ ಸೂಳೆ ಎಂದು ಮೂದಲಿಸುತ್ತಾರOತೆ ಈ ರೀತಿ ತನಗೆ ಬಂದ ಕಳಂಕ ಕಳೆಯಲು ಈ ಬೃಹತ್ ಕೆರೆ ತನ್ನ ಪತಿ ಸಿದ್ದೇಶ್ವರನ ಜೊತೆ ಸೇರಿ ನಿಮಿ೯ಸಿ ಕೆರೆಗೆ ಹಾರವಾದಳೆoಬ ಇತಿಹಾಸ ಇದೆ ಇದರಿಂದ ನೊಂದ ಪತಿ ಸಿದ್ಧೇಶ್ವರ ಕೂಡ ಎದುರಿನ ಗುಡ್ಡದಲ್ಲಿ ಜೀವ ತ್ಯಾಗ ಮಾಡುತ್ತಾನೆ ಈಗ ಅಲ್ಲಿ ಸಿದ್ದೇಶ್ವರ ದೇವಸ್ಥಾನವಿದೆ.   ಈ ಕೆರೆ ಈಗಲೂ ಸೂ...