Skip to main content

Blog number 831.ಹೆಣ್ಣು ನಾಯಿ ಸಂತಾನ ಹರಣ ಚಿಕಿತ್ಸೆ ಮತ್ತು ಬೀದಿ ನಾಯಿ ಸಂರಕ್ಷಣೆ ಸಹೃದಯ ವೈದ್ಯರ ತಂಡದಿಂದ ಇದನ್ನು ವ್ಯವಸ್ಥೆಗೊಳಿಸಿದ ಹಿರಿಯ ಸಮಾಜವಾದಿ ಪಿ.ಪುಟ್ಟಯ್ಯನವರು ಮತ್ತು ಸಾಕ್ಷಿಯಾದ ಜಿಲ್ಲಾ ಕಾಂಗ್ರೇಸ್ ಮಾಜಿ ಅಧ್ಯಕ್ಷರಾದ ತೀ.ನಾ. ಶ್ರೀನಿವಾಸ್

#ಬಹುದಿನದ_ನಿರೀಕ್ಷೆ_ಈಡೇರಿದ_ದಿನ.

#ಕಾರಣಕರ್ತರು_ಹಿರಿಯ_ಸಮಾಜವಾದಿ_ಪುಟ್ಟಯ್ಯನವರು

#ಸಾಕ್ಷಿ_ಜಿಲ್ಲಾ_ಕಾಂಗ್ರೇಸ್_ಮಾಜಿ_ಅಧ್ಯಕ್ಷರಾದ_ತೀ_ನಾ_ಶ್ರೀನಿವಾಸ್.

   ನನ್ನ ಮಗಳು ಸಾಕಿದ ಅನಾಥ ಹೆಣ್ಣು ನಾಯಿಗಳಾದ ಜಾನ್ಸಿ, ಚಿಂಗೂ, ಜಾನ್ಸಿ ಮಗಳು ಕಾಳು, ಚೊಂಗು ಮಗಳು ಕೆಂಪು ಇವುರುಗಳೆಲ್ಲ ನಮ್ಮ ಕುಟುಂಬ ಸದಸ್ಯರು.
  ಇವರುಗಳನ್ನು ಸಂತಾನಹರಣ ಚಿಕಿತ್ಸೆ ಮಾಡಿಸಬೇಕೆಂಬ ಮೂರು ವರ್ಷದ ಪ್ರಯತ್ನ ಇವತ್ತು ಈಡೇರಿಸಿದವರು ಹಿರಿಯ ಸಮಾಜವಾದಿಗಳಾದ ಪ್ರಕೃತಿ ಪಿ. ಪುಟ್ಟಯ್ಯನವರು.
  ಇವರು ಸ್ವತಃ ಅನೇಕ ಅನಾಥ ಬೀದಿ ನಾಯಿಗಳ ಪೋಷಕರು ಮತ್ತು ಇವರಂತ ಸಮಾನ ಮನಸ್ಕರು ಸೇರಿ ಅನೇಕ ವರ್ಷದಿಂದ ಅನಾಥಬೀದಿ ನಾಯಿಗಳ ಸಂರಕ್ಷಣೆ ಮಾಡುತ್ತಾರೆ.
  ಈ ವಿಚಾರದಲ್ಲಿ ನನಗೆ ಸಲಹೆ ಸಹಕಾರ ನೀಡುವ ಅವರು ನಮ್ಮಲ್ಲಿರುವ ನಾಲ್ಕು ಹೆಣ್ಣು ನಾಯಿಗಳಿಗೆ ಸಂತಾನ ಹರಣ ಚಿಕಿತ್ಸೆಯ ವ್ಯವಸ್ಥೆ ಮಾಡಿದರು.
  ಇದಕ್ಕಾಗಿ ಇವರಿಗೆ ಸಹಕರಿಸುವ ಪಶು ವೈದ್ಯ ಶಸ್ತ್ರಚಿಕಿತ್ಸಕರುಗಳ ತಂಡ ಇವತ್ತು ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ 2 ರ ವರೆಗೆ ಕಾರ್ಯನಿರ್ವಹಿಸಿತು.
  ಜಾನ್ಸಿ ಮತ್ತು ಅವಳ ಮಗಳು ನಮ್ಮ ಮನೇನಲ್ಲಿ ನಮ್ಮ ಜೊತೆ ಇರುವುದರಿಂದ ತೊಂದರೆ ಆಗಲಿಲ್ಲ ಆದರೆ ನಮ್ಮ ಲಾಡ್ಜ್ ಸುತ್ತಮುತ್ತ ಕಾಯುವ ಮತ್ತು ರಬ್ಬರ್ ತೋಟದ ಇಬ್ಬರನ್ನು ಹಿಡಿದು ತರುವ ಅವರಿಬ್ಬರನ್ನು ಶಸ್ತ್ರಚಿಕಿತ್ಸೆಗೆ ಒಳಪಡಿಸುವ ಶ್ರಮದ ಕೆಲಸ ಕೂಡ ಸವಾಲಾಗಿತ್ತು.
  ಯಶಸ್ವಿಯಾಗಿ ನಾಲ್ಕು ನಮ್ಮ ಹೆಣ್ಣು ನಾಯಿಗಳ ಸಂತಾನ ಹರಣ ಚಿಕಿತ್ಸೆ ನಡೆಸಿದ ಸಹೃದಯಿ ವೈದ್ಯರ ತಂಡಕ್ಕೆ ಮತ್ತು ಅವರನ್ನು ಕರೆತಂದ ಹಿರಿಯ ಸಮಾಜವಾದಿ ದುರೀಣರಾದ ಪುಟ್ಟಯ್ಯನವರಿಗೆ, ಸಾಕ್ಷಿಗಳಾದ ತೀನಾ. ಶ್ರೀನಿವಾಸರಿಗೆ ಕೃತಜ್ಞತೆ ಸಲ್ಲಿಸುತ್ತೇನೆ.
  ಈ ರೀತಿ ಸಂತಾನ ಹರಣ ಚಿಕಿತ್ಸೆಯಿಂದ ಅವುಗಳು ಮರಿ ಹಾಕದಂತೆ ಆಗುತ್ತದೆ, ಈ ಚಿಕಿತ್ಸೆ ನಂತರ ದಷ್ಟ ಪುಷ್ಟ ಆಗುವ ಹೆಣ್ಣು ನಾಯಿಗಳು ತುಂಬಾ ಪೆರೋಷಿಯಸ್ ಆಗಿ ಮನೆ ಕಾಯುತ್ತದೆ ಆದ್ದರಿಂದ ಹೆಣ್ಣು ನಾಯಿ ಅಂತ ಪೇಟೆಯಲ್ಲಿ ತಂದು ಬಿಡುವ ಕೆಟ್ಟ ಸಂಪ್ರದಾಯ ಕಡಿಮೆ ಆಗುವ ನಿರೀಕ್ಷೆ ನನ್ನದು.
  ಸ್ಥಳಿಯ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ವರ್ಷಕ್ಕೊಮ್ಮೆ ಇಂತಹ ಅಭಿಯಾನ ಹಮ್ಮಿಕೊಂಡರೆ ನಾಯಿ ಸಾಕುವವರಿಗೆ ಹೆಚ್ಚು ಅನುಕೂಲ ಆದರೆ ಅದು ಯಾವಾಗ ಆದೀತೆಂಬುದು ಮರೀಚಿಕೆ ಅಷ್ಟೆ.
  ಹೆಣ್ಣು ನಾಯಿಯನ್ನು ಸಾಕುವವವರು, ಬೀದಿ ನಾಯಿ ಸಂರಕ್ಷಕರು ಆಗಾಗ್ಗೆ ತಮ್ಮ ತಮ್ಮ ಊರಲ್ಲೇ ಇಂತಹ ಕ್ಯಾಂಪ್ ಮಾಡಿಸಬಹುದು.

Comments

Popular posts from this blog

# ಜುಟ್ಟು ಕಾಳಿಂಗ ಸಪ೯ದ ಆಸ್ತಿತ್ವದ ಮಲೆನಾಡಿನ ಮಿಥ್ಯೆ#

  # ಕಾಳಿ೦ಗ ಸಪ೯ದಲ್ಲಿ ಜುಟ್ಟು ಕಾಳಿಂಗ ಸಪ೯ ಅಂತ ಇದೇ ಅನ್ನುವ ಯಾರು ನೋಡದ ಸಪ೯ದ ಅಸ್ತಿತ್ವ#    ಮಲೆನಾಡಿನ ಹಳ್ಳಿಗಳಲ್ಲಿ, ಅದು ಕಾಳಿ೦ಗ ಸಪ೯ದ ವಾಸಸ್ಥಳದ ಪರಿಸರದಲ್ಲಿ ಜುಟ್ಟು ಕಾಳಿಂಗ ಸಪ೯ ಇದೆ ಅನ್ನುವ ಮಾತು ಆಗಾಗ್ಗೆ ಕೇಳುತ್ತಿರುತ್ತೇವೆ. ಆದರೆ ಆ ರೀತಿಯ ಹಾವು ಇಲ್ಲ ಎಂದು ಹಾವಿನ ಬಗ್ಗೆ ಸಂಶೋದನೆ ಮಾಡುವವರು, ಅರಣ್ಯ ಇಲಾಖೆಯವರು, ಹಾವು ಹಿಡಿಯುವವರು ಖಡಾಖಂಡಿತವಾಗಿ ಹೇಳುತ್ತಾರಾದರು, ಈ ವದಂತಿ ಹೇಗೆ ಹರಡಿದೆ?.    ಇದು ಒಂದು ಊರು ಹಳ್ಳಿಯಲ್ಲ ನಾನು ನೋಡಿದಂತೆ ಮಹಾರಾಷ್ಟ್ರದ ರತ್ನಗಿರಿಯಿ೦ದ ಕೇರಳದ ಕಾಸರಗೋಡಿನ ತನಕ ಜುಟ್ಟು ಕಾಳಿಂಗದ ಅನೇಕ ರೋಚಕ ಕಥೆ ಕೇಳಿದ್ದೇನೆ.   ಪ್ರತ್ಯಕ್ಷ ನೋಡಿದವರು ತಾವು ಎನ್ನುವ ಅನೇಕರಲ್ಲಿ ಮಾತಾಡಿದ್ದೇನೆ ಆದರೆ ಅದು ನಂಬಲಹ೯ ಮಾಹಿತಿ ಅನಿಸಲಿಲ್ಲ, ಒಂದು ರೀತಿ ಕಾಲ್ಪನಿಕ ತ್ರಿಲ್ಲರ್ ಕಥೆ ಅಷ್ಟೇ ಅನ್ನಬಹುದು.    ಜಡೆ ಕಾಳಿಂಗ ಸಪ೯ಕ್ಕೆ ರೋಷ ಜಾಸ್ತಿ, ಹೆಡೆ ಮೇಲೆ ಕೂದಲಿನ ಜುಟ್ಟು ಇರುತ್ತೆ, ಮನುಷ್ಯರನ್ನ ಕಂಡರೆ ಓಡಿಸಿಕೊಂಡು ಬರುತ್ತೆ, ಅದರಿಂದ ತಪ್ಪಿಸಿಕೊಳ್ಳಲು ಒಂದೇ ದಾರಿ ಅದೇನೆಂದರೆ ತಗ್ಗಿನ ಪ್ರದೇಶದಲ್ಲಿ ಓಡುವುದು.     ಯಾಕೆ೦ದರೆ ಓಡಿಸಿಕೊಂಡು ಬರುವ ಜುಟ್ಟು ಕಾಳಿಂಗದ ಜುಟ್ಟು, ಇಳಿಜಾರಿನಲ್ಲಿ ಅದರ ತಲೆಯಿ೦ದ ಇಳಿಜಾರಿಗೆ ಸರಿಯುವುದರಿಂದ  ಕಣ್ಣಿನ ಮೇಲೆ ಕೂದಲ ಜುಟ್ಟು ಮುಚ್ಚುವುದರಿಂದ ಕಣ್ಣು ಕಾಣುವುದಿಲ್ಲ, ಆಗಲೇ ತಪ್...

HISTORICAL SAGAR MARIKAMBA JATRA.ಐತಿಹಾಸಿಕ ಸಾಗರದ ಮಾರಿಕಾಂಬಾ ಜಾತ್ರೆ

     ಸಾಗರದ ಮಾರಿಕಾಂಬಾ ಜಾತ್ರೆ ಐತಿಹಾಸಿಕ ಚರಿತ್ರೆಯಲ್ಲಿ ದಾಖಲೆ.        ಕನಾ೯ಟಕ ರಾಜ್ಯದಲ್ಲಿ ಎರೆಡು ಮಾರಿಕಾಂಬಾ ಜಾತ್ರೆಗಳು ಪ್ರಸಿದ್ಧಿ ಪಡೆದಿದೆ ಅದು ಉತ್ತರ ಕನ್ನಡ ಜಿಲ್ಲೆಯ ಸಿಸಿ೯ಯದ್ದು ಮತ್ತು ಶಿವಮೊಗ್ಗ ಜಿಲ್ಲೆಯ ಸಾಗರದ್ದು.    ಪ್ರತಿ ಮೂರು ವಷ೯ಕೆ ಈ ಜಾತ್ರೆ ಆಚರಿಸಲಾಗುತ್ತೆ ಶೂದ್ರ ವಗ೯ದವರು ಭಯ ಮತ್ತು ಭಕ್ತಿಯಿಂದ ಕುರಿ ಕೋಳಿ ಬಲಿ ನೀಡುವ ಪರಂಪರೆ ಇದೆ.ಮಂಗಳವಾರ ಮೇಲು ಜಾತಿಯ ಜನರ ಪೂಜೆ ದೇವಿಯ ತವರು ಮನೆಯಲ್ಲಿ ನಡೆಯುತ್ತದೆ ನಂತರ ರಾತ್ರಿ ಗಂಡನ ಸೇರುವ ಮಾರಿಗೆ ಶೂದ್ರರ ಪೂಜೆ, ಬಲಿ ಮೀಸಲು.    ಮೊದಲೆಲ್ಲ ಮಾರಿಯಮ್ಮನಿಗೆ ಕೊಣನ ಬಲಿ ನೀಡುತ್ತಿದ್ದರು ಈಗ ಇದು ಕಾನೂನು ಪ್ರಕಾರ ನಿಷಿದ್ಧ ಆದರೆ ಈ ಆಚಾರಣೆ ಗುಪ್ತವಾಗಿ ಬೇರೆ ಕಡೆ ನಡೆಸಲಾಗುತ್ತೆ ಅನ್ನುತ್ತಾರೆ.    ಸಾಗರದ ಮಾರಿಕಾ0ಬಾ ಜಾತ್ರೆ ಜಾತ್ರೆಯಿ೦ದ ಜಾತ್ರೆಗೆ ಅದೂರಿಯಾಗಿ ನಡೆಯುತ್ತದೆ, ಕೋಟ್ಯಾoತರ ಹಣದ ವಹಿವಾಟು ಕೂಡ, ಮೊದಲೆಲ್ಲ ಹಣದ ಅಪರಾ ತಪರ ಆಗುತ್ತಿದೆ ಎಂಬ ಗುಲ್ಲು ಇತ್ತು ಆದರೆ ಈಗೆಲ್ಲ ಪಾರದಶ೯ಕವಾಗಿದೆ ಆದರೂ ಈ ಬಾರಿಯ 2017ರ ಜಾತ್ರೆಯಲ್ಲಿ ಅವ್ಯವಹಾರದ ಆರೋಪ ಮಾಡಲಾಗಿದೆ ಈ ವಿಚಾರ ಇಲ್ಲಿ ಅಪ್ರಸ್ತುತ ಆದರೂ ಈ ಬಗ್ಗೆ ಬರೆಯಲು ಕಾರಣ ಕೆಳದಿ ಅರಸರ ಕಾಲದಲ್ಲಿ ಅಂದರೆ 350 ವಷ೯ದ ಹಿಂದೆಯೂ ರಾಜರಿಗೆ ಸಾಗರದ ಮಾರಿಕಾಂಬಾ ಜಾತ್ರೆಯಲ್ಲಿ ಸಾವ೯ಜನಿಕರಿಂದ ಸಂಗ್ರಹಿಸಿದ ಜಾತ...

ರಿಪ್ಪನ್ ಪೇಟೆ ( ಶಿವಮೊಗ್ಗ ಜಿಲ್ಲೆ) ಹೆಸರು ಬಂದಿದ್ದಾದರು ಹೇಗೆ?

#  ರಿಪ್ಪನ್ ಪೇಟೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಪ್ರಮುಖ ಹೋಬಳಿ ಕೇಂದ್ರ ಈ ಆಂಗ್ಲ ಅಧಿಕಾರಿಯ ಹೆಸರು ಇಡಲು ಕಾರಣವಾದ ಘಟನೆ ತುಂಬಾ ಕುತೂಹಲಕಾರಿ# ಸ್ವಲ್ಪ ಕಾಲ ನೀವು ಈ ಲೇಖನ ಓದಿದರೆ ಕಾರಣ ಗೊತ್ತಾಗುತ್ತೆ.    ಆಗ ಬ್ರಿಟಿಷ್ ಸಕಾ೯ರರಕ್ಕೆ ಆಡಳಿತ ಸುಗುಮಕ್ಕೆ ರೈಲು ಮಾಗ೯ ಅತ್ಯಗತ್ಯ ಎಂಬ ಸಕಾರಣ ಮನವರಿಕೆ ಆದ ಕಾಲ ಏಕೆಂದರೆ ಬ್ರಿಟಿಷರು ಅಮೆರಿಕಾ ವಲಸೆಯಲ್ಲಿ ಇದನ್ನ ಮನಗOಡಿದ್ದರು, ಬೆಂಗಳೂಳಿ ರಿಂದ ಶಿವಮೊಗ್ಗ ತಲುಪುವ ರೈಲು ಮಾಗ೯ ತಾಳಗುಪ್ಪಾ ತಲುಪಿದರೆ ಜೋಗ ಜಲಪಾತ ವೀಕ್ಷಣೆಗೆ ಅನುಕೂಲ ಎಂಬುದು ಹಾಗೆ ಮತ್ತೊಂದು ಮ್ಯಸೂರು ಸಕಾ೯ರ ಶರಾವತಿ ನದಿಗೆ ಆಣೆಕಟ್ಟು ಕಟ್ಟಿ.ಜಲ ವಿದ್ಯುತ್ ತಯಾರಿಸಲು ಸಾಮಗ್ರಿ ಸಾಗಾಣಿಕೆಗೆ ಅನುಕೂಲ ಎಂಬ ಕಾರಣದಿಂದ ಶಿವಮೊಗ್ಗದಿಂದ ತಾಳಗುಪ್ಪ ರೈಲು ಮಾಗ೯ ಯೋಜನೆ ಮಾಡಲಾಯಿತು.    ಆಗ ಪ್ಲೇಗ್ ಮಾರಿಯ ಕಾಲ, ಎಲ್ಲೆಲ್ಲೂ ಜನ ಸಾಯುತ್ತಿದ್ದರು ಆಗಲೇ ಈ ರೈಲು ಮಾಗ೯ ಶಿವಮೊಗ್ಗ ಆರಸಾಳಿOದ ದೊಡ್ಡಿನ ಕೊಪ್ಪ (ಈಗಿನ ರಿಪ್ಪನ್ ಪೇಟೆ) ಆನಂದಪುರಂ ಮಾಗ೯ ನಿಗದಿ ಆಗಿತ್ತು ಆದರೆ ಈ ಭಾಗದಲ್ಲಿ ಒಂದು  ವದಂತಿ ಈ ಬಾಗದಲ್ಲಿ ಹರಡಿತ್ತು ಅದೇನೆಂದರೆ ರೈಲು ಬಂದರೆ ಪ್ಲೇ ಗು ಬರುತ್ತೆ  ಅಂತ.    ಹಾಗಾಗಿ ಈ ಭಾಗದಲ್ಲಿನ ಜಾಗೃತ ಜನ ನಾಯಕರುಗಳು ಹೇಗಾದರು ಮಾಡಿ ರೈಲು ಬರದಂತೆ ಮಾಡಲು ಎಲ್ಲಾ ರೀತಿಯ ಪ್ರಯತ್ನ ಮಾಡಲು ಪ್ರಾರಂಭಿಸಿದರು.     ಇದೇ ಸಂದಭ೯ದಲ್ಲ...