Skip to main content

Blog number 843. ಪದ್ಮಶ್ರೀ ಮಾತಾ ಮಂಜಮ್ಮ ಜೋಗತಿಯವರ ನೂತನ ಗೃಹ ಪ್ರವೇಶಕ್ಕೆ ಶುಭ ಹಾರೈಕೆಗಳು

#ಪದ್ಮಶ್ರೀ_ಮಂಜಮ್ಮಜೋಗತಿಯವರ_ಸ್ವಂತ_ಮನೆಯ_ಕನಸು_ನನಸಾಗಿದೆ.

#ಮುಂದಿನ_ತಿಂಗಳು_ಮೇ_3ಕ್ಕೆ_ಗೃಹಪ್ರವೇಶ

#ನಾವೆಲ್ಲರೂ_ಅವರಿಗೆ_ಶುಭ_ಹಾರೈಸೋಣ.

  ರಾಜ್ಯ ಜಾನಪದ ಅಕಾಡಮಿ ಅಧ್ಯಕ್ಷೆ, ಪ್ರತಿಷ್ಠಿತ ಪದ್ಮಶ್ರೀ ಪುರಸ್ಕಾರ ಪಡೆದ ಮಾತಾ ಮಂಜಮ್ಮ ಜೋಗತಿಯವರ ಜೀವನದ ಬಗ್ಗೆ ತಿಳಿಯಬೇಕಾದರೆ ಅರುಣ್ ಜೋಳದಕೂಡ್ಲಿಗಿ ಬರೆದ "ನಡುವೆ ಸುಳಿವ ಹೆಣ್ಣು" ಪುಸ್ತಕ ಓದಲೇ ಬೇಕು ಓದಿದವರೆಲ್ಲರ ಹೃದಯ ಕಲಕಿ ಕಣ್ಣೀರಾಗದೆ ಇರುವುದಿಲ್ಲ.
  ಕಲ್ಲು ಮುಳ್ಳಿನ ಜೀವನದ ಹಾದಿಯಲ್ಲಿ ಯಾವುದೇ ನಿರೀಕ್ಷೆ ಇಲ್ಲದೆ, ತನ್ನವರೆಂಬುವವರೆಲ್ಲ ದೂರವಾಗಿದ್ದ ಮಂಜಮ್ಮ ಜೋಗತಿ ಹೊಟ್ಟೆಪಾಡಿಗಾಗಿ ಜಾನಪದ ನೃತ್ಯ ಒಂದೇ ಕಸುಬಾಗಿತ್ತು, ದೈವ ಕೃಪೆಯಿಂದ ಜಾನಪದ ಅಕಾಡೆಮಿ ಸದಸ್ಯರಾಗಿ ಸರ್ಕಾರ ನೇಮಿಸಿತ್ತು ನಂತರ ಮುಖ್ಯಮಂತ್ರಿ ಆಗಿದ್ದ ಯಡೂರಪ್ಪ ಸರ್ಕಾರ ಇವರನ್ನು ಅಧ್ಯಕ್ಷರಾಗಿಸಿತು. 
 ಪದ್ಮಶ್ರೀ ಪ್ರಶಸ್ತಿಯ ಸಮ್ಮಾನವೂ ಆಗಿ ಮಂಜಮ್ಮ ಜೋಗತಿ ಕನ್ನಡಿಗರ ಅಚ್ಚುಮೆಚ್ಚಿನ ಪದ್ಮಶ್ರೀ ಮಾತಾ ಮಂಜಮ್ಮ ಜೋಗಿ ಆದರು, ಅವರಂತೆಯೇ ಸಮಾಜದಲ್ಲಿ ತಿರಸ್ಕಾರಕ್ಕೆ ಒಳಗಾದವರಿಗೆ ತಲೆ ಎತ್ತಿ ಜೀವಿಸಲು ಮತ್ತು ಅವರ ಹಕ್ಕುಗಳ ಕೇಳಲು ಇವರು ಪ್ರೇರಕರಾಗಿದ್ದಾರೆ.
  ಪ್ರತಿಯೊಬ್ಬರೂ ತಮ್ಮ ಜೀವನದಲ್ಲಿ ಕನಸು ಕಾಣುವುದು ಸ್ವಂತದ್ದಾದ ಮನೆ ಮಾಡಿಕೊಳ್ಳಬೇಕೆಂದು ಅದರಂತೆ ಮಂಜಮ್ಮ ಜೋಗತಿ ಅವರ ಕನಸು ನನಸಾಗಿದೆ ಇದೇ ಮುಂದಿನ ತಿಂಗಳು 3 ರಂದು (3 - ಮೇ -2022) ಸ್ವಂತ ಊರಾದ ಬಳ್ಳಾರಿ ಜಿಲ್ಲೆಯ ಮರಿಯಮ್ಮನ ಹಳ್ಳಿಯಲ್ಲಿ ಗೃಹ ಪ್ರವೇಶದ ಆಹ್ವಾನ ನೀಡಿದ್ದಾರೆ.
  ಜಾನಪದ ಕಲೆಯಂತೆ ಮಂಜಮ್ಮ ಜೋಗತಿ ಕನ್ನಡದ ಪುಸ್ತಕಗಳ ಓದುವ ಹವ್ಯಾಸದವರು, ನನ್ನ ಕಾದಂಬರಿ ಕೆಳದಿ ಇತಿಹಾಸ ಮರೆತ #ಬೆಸ್ತರ_ರಾಣಿಚಂಪಕಾ (ಕೆಳದಿ ರಾಜ ವೆಂಕಟಪ್ಪ ನಾಯಕರ ಮತ್ತು ರಾಣಿ ಚಂಪಕಾಳ ದುರಂತ ಪ್ರೇಮ ಕಥೆ )ಓದಿ ಕಣ್ಣೀರಾಗಿದ್ದರು, ಅದನ್ನು ವಿಡಿಯೋದಲ್ಲಿ ಪ್ರತಿಕ್ರಿಯಿಸಿದ್ದು ತುಂಬಾ ವೈರಲ್ ಆಗಿತ್ತು ಈ ಲಿಂಕ್ ತೆರೆದು ನೋಡಿ.
   https://youtu.be/eFBnvRL2ud8

ನೂತನ ಗೃಹ ಪ್ರವೇಶಿಸುತ್ತಿರುವ ಈ ಶುಭ ಸಂದರ್ಭದಲ್ಲಿ ಮಂಜಮ್ಮ ಜೋಗತಿಯವರಿಗೆ ಇಡೀ ನಾಡೇ ದೇವರು ಆಯುರಾರೋಗ್ಯ - ಆಯುಸ್ಸು- ಐಶ್ವರ್ಯ ನೀಡಲಿ ಎಂದು ಹಾರೈಸುತ್ತದೆ.

Comments

Popular posts from this blog

# ಜುಟ್ಟು ಕಾಳಿಂಗ ಸಪ೯ದ ಆಸ್ತಿತ್ವದ ಮಲೆನಾಡಿನ ಮಿಥ್ಯೆ#

  # ಕಾಳಿ೦ಗ ಸಪ೯ದಲ್ಲಿ ಜುಟ್ಟು ಕಾಳಿಂಗ ಸಪ೯ ಅಂತ ಇದೇ ಅನ್ನುವ ಯಾರು ನೋಡದ ಸಪ೯ದ ಅಸ್ತಿತ್ವ#    ಮಲೆನಾಡಿನ ಹಳ್ಳಿಗಳಲ್ಲಿ, ಅದು ಕಾಳಿ೦ಗ ಸಪ೯ದ ವಾಸಸ್ಥಳದ ಪರಿಸರದಲ್ಲಿ ಜುಟ್ಟು ಕಾಳಿಂಗ ಸಪ೯ ಇದೆ ಅನ್ನುವ ಮಾತು ಆಗಾಗ್ಗೆ ಕೇಳುತ್ತಿರುತ್ತೇವೆ. ಆದರೆ ಆ ರೀತಿಯ ಹಾವು ಇಲ್ಲ ಎಂದು ಹಾವಿನ ಬಗ್ಗೆ ಸಂಶೋದನೆ ಮಾಡುವವರು, ಅರಣ್ಯ ಇಲಾಖೆಯವರು, ಹಾವು ಹಿಡಿಯುವವರು ಖಡಾಖಂಡಿತವಾಗಿ ಹೇಳುತ್ತಾರಾದರು, ಈ ವದಂತಿ ಹೇಗೆ ಹರಡಿದೆ?.    ಇದು ಒಂದು ಊರು ಹಳ್ಳಿಯಲ್ಲ ನಾನು ನೋಡಿದಂತೆ ಮಹಾರಾಷ್ಟ್ರದ ರತ್ನಗಿರಿಯಿ೦ದ ಕೇರಳದ ಕಾಸರಗೋಡಿನ ತನಕ ಜುಟ್ಟು ಕಾಳಿಂಗದ ಅನೇಕ ರೋಚಕ ಕಥೆ ಕೇಳಿದ್ದೇನೆ.   ಪ್ರತ್ಯಕ್ಷ ನೋಡಿದವರು ತಾವು ಎನ್ನುವ ಅನೇಕರಲ್ಲಿ ಮಾತಾಡಿದ್ದೇನೆ ಆದರೆ ಅದು ನಂಬಲಹ೯ ಮಾಹಿತಿ ಅನಿಸಲಿಲ್ಲ, ಒಂದು ರೀತಿ ಕಾಲ್ಪನಿಕ ತ್ರಿಲ್ಲರ್ ಕಥೆ ಅಷ್ಟೇ ಅನ್ನಬಹುದು.    ಜಡೆ ಕಾಳಿಂಗ ಸಪ೯ಕ್ಕೆ ರೋಷ ಜಾಸ್ತಿ, ಹೆಡೆ ಮೇಲೆ ಕೂದಲಿನ ಜುಟ್ಟು ಇರುತ್ತೆ, ಮನುಷ್ಯರನ್ನ ಕಂಡರೆ ಓಡಿಸಿಕೊಂಡು ಬರುತ್ತೆ, ಅದರಿಂದ ತಪ್ಪಿಸಿಕೊಳ್ಳಲು ಒಂದೇ ದಾರಿ ಅದೇನೆಂದರೆ ತಗ್ಗಿನ ಪ್ರದೇಶದಲ್ಲಿ ಓಡುವುದು.     ಯಾಕೆ೦ದರೆ ಓಡಿಸಿಕೊಂಡು ಬರುವ ಜುಟ್ಟು ಕಾಳಿಂಗದ ಜುಟ್ಟು, ಇಳಿಜಾರಿನಲ್ಲಿ ಅದರ ತಲೆಯಿ೦ದ ಇಳಿಜಾರಿಗೆ ಸರಿಯುವುದರಿಂದ  ಕಣ್ಣಿನ ಮೇಲೆ ಕೂದಲ ಜುಟ್ಟು ಮುಚ್ಚುವುದರಿಂದ ಕಣ್ಣು ಕಾಣುವುದಿಲ್ಲ, ಆಗಲೇ ತಪ್...

HISTORICAL SAGAR MARIKAMBA JATRA.ಐತಿಹಾಸಿಕ ಸಾಗರದ ಮಾರಿಕಾಂಬಾ ಜಾತ್ರೆ

     ಸಾಗರದ ಮಾರಿಕಾಂಬಾ ಜಾತ್ರೆ ಐತಿಹಾಸಿಕ ಚರಿತ್ರೆಯಲ್ಲಿ ದಾಖಲೆ.        ಕನಾ೯ಟಕ ರಾಜ್ಯದಲ್ಲಿ ಎರೆಡು ಮಾರಿಕಾಂಬಾ ಜಾತ್ರೆಗಳು ಪ್ರಸಿದ್ಧಿ ಪಡೆದಿದೆ ಅದು ಉತ್ತರ ಕನ್ನಡ ಜಿಲ್ಲೆಯ ಸಿಸಿ೯ಯದ್ದು ಮತ್ತು ಶಿವಮೊಗ್ಗ ಜಿಲ್ಲೆಯ ಸಾಗರದ್ದು.    ಪ್ರತಿ ಮೂರು ವಷ೯ಕೆ ಈ ಜಾತ್ರೆ ಆಚರಿಸಲಾಗುತ್ತೆ ಶೂದ್ರ ವಗ೯ದವರು ಭಯ ಮತ್ತು ಭಕ್ತಿಯಿಂದ ಕುರಿ ಕೋಳಿ ಬಲಿ ನೀಡುವ ಪರಂಪರೆ ಇದೆ.ಮಂಗಳವಾರ ಮೇಲು ಜಾತಿಯ ಜನರ ಪೂಜೆ ದೇವಿಯ ತವರು ಮನೆಯಲ್ಲಿ ನಡೆಯುತ್ತದೆ ನಂತರ ರಾತ್ರಿ ಗಂಡನ ಸೇರುವ ಮಾರಿಗೆ ಶೂದ್ರರ ಪೂಜೆ, ಬಲಿ ಮೀಸಲು.    ಮೊದಲೆಲ್ಲ ಮಾರಿಯಮ್ಮನಿಗೆ ಕೊಣನ ಬಲಿ ನೀಡುತ್ತಿದ್ದರು ಈಗ ಇದು ಕಾನೂನು ಪ್ರಕಾರ ನಿಷಿದ್ಧ ಆದರೆ ಈ ಆಚಾರಣೆ ಗುಪ್ತವಾಗಿ ಬೇರೆ ಕಡೆ ನಡೆಸಲಾಗುತ್ತೆ ಅನ್ನುತ್ತಾರೆ.    ಸಾಗರದ ಮಾರಿಕಾ0ಬಾ ಜಾತ್ರೆ ಜಾತ್ರೆಯಿ೦ದ ಜಾತ್ರೆಗೆ ಅದೂರಿಯಾಗಿ ನಡೆಯುತ್ತದೆ, ಕೋಟ್ಯಾoತರ ಹಣದ ವಹಿವಾಟು ಕೂಡ, ಮೊದಲೆಲ್ಲ ಹಣದ ಅಪರಾ ತಪರ ಆಗುತ್ತಿದೆ ಎಂಬ ಗುಲ್ಲು ಇತ್ತು ಆದರೆ ಈಗೆಲ್ಲ ಪಾರದಶ೯ಕವಾಗಿದೆ ಆದರೂ ಈ ಬಾರಿಯ 2017ರ ಜಾತ್ರೆಯಲ್ಲಿ ಅವ್ಯವಹಾರದ ಆರೋಪ ಮಾಡಲಾಗಿದೆ ಈ ವಿಚಾರ ಇಲ್ಲಿ ಅಪ್ರಸ್ತುತ ಆದರೂ ಈ ಬಗ್ಗೆ ಬರೆಯಲು ಕಾರಣ ಕೆಳದಿ ಅರಸರ ಕಾಲದಲ್ಲಿ ಅಂದರೆ 350 ವಷ೯ದ ಹಿಂದೆಯೂ ರಾಜರಿಗೆ ಸಾಗರದ ಮಾರಿಕಾಂಬಾ ಜಾತ್ರೆಯಲ್ಲಿ ಸಾವ೯ಜನಿಕರಿಂದ ಸಂಗ್ರಹಿಸಿದ ಜಾತ...

ರಿಪ್ಪನ್ ಪೇಟೆ ( ಶಿವಮೊಗ್ಗ ಜಿಲ್ಲೆ) ಹೆಸರು ಬಂದಿದ್ದಾದರು ಹೇಗೆ?

#  ರಿಪ್ಪನ್ ಪೇಟೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಪ್ರಮುಖ ಹೋಬಳಿ ಕೇಂದ್ರ ಈ ಆಂಗ್ಲ ಅಧಿಕಾರಿಯ ಹೆಸರು ಇಡಲು ಕಾರಣವಾದ ಘಟನೆ ತುಂಬಾ ಕುತೂಹಲಕಾರಿ# ಸ್ವಲ್ಪ ಕಾಲ ನೀವು ಈ ಲೇಖನ ಓದಿದರೆ ಕಾರಣ ಗೊತ್ತಾಗುತ್ತೆ.    ಆಗ ಬ್ರಿಟಿಷ್ ಸಕಾ೯ರರಕ್ಕೆ ಆಡಳಿತ ಸುಗುಮಕ್ಕೆ ರೈಲು ಮಾಗ೯ ಅತ್ಯಗತ್ಯ ಎಂಬ ಸಕಾರಣ ಮನವರಿಕೆ ಆದ ಕಾಲ ಏಕೆಂದರೆ ಬ್ರಿಟಿಷರು ಅಮೆರಿಕಾ ವಲಸೆಯಲ್ಲಿ ಇದನ್ನ ಮನಗOಡಿದ್ದರು, ಬೆಂಗಳೂಳಿ ರಿಂದ ಶಿವಮೊಗ್ಗ ತಲುಪುವ ರೈಲು ಮಾಗ೯ ತಾಳಗುಪ್ಪಾ ತಲುಪಿದರೆ ಜೋಗ ಜಲಪಾತ ವೀಕ್ಷಣೆಗೆ ಅನುಕೂಲ ಎಂಬುದು ಹಾಗೆ ಮತ್ತೊಂದು ಮ್ಯಸೂರು ಸಕಾ೯ರ ಶರಾವತಿ ನದಿಗೆ ಆಣೆಕಟ್ಟು ಕಟ್ಟಿ.ಜಲ ವಿದ್ಯುತ್ ತಯಾರಿಸಲು ಸಾಮಗ್ರಿ ಸಾಗಾಣಿಕೆಗೆ ಅನುಕೂಲ ಎಂಬ ಕಾರಣದಿಂದ ಶಿವಮೊಗ್ಗದಿಂದ ತಾಳಗುಪ್ಪ ರೈಲು ಮಾಗ೯ ಯೋಜನೆ ಮಾಡಲಾಯಿತು.    ಆಗ ಪ್ಲೇಗ್ ಮಾರಿಯ ಕಾಲ, ಎಲ್ಲೆಲ್ಲೂ ಜನ ಸಾಯುತ್ತಿದ್ದರು ಆಗಲೇ ಈ ರೈಲು ಮಾಗ೯ ಶಿವಮೊಗ್ಗ ಆರಸಾಳಿOದ ದೊಡ್ಡಿನ ಕೊಪ್ಪ (ಈಗಿನ ರಿಪ್ಪನ್ ಪೇಟೆ) ಆನಂದಪುರಂ ಮಾಗ೯ ನಿಗದಿ ಆಗಿತ್ತು ಆದರೆ ಈ ಭಾಗದಲ್ಲಿ ಒಂದು  ವದಂತಿ ಈ ಬಾಗದಲ್ಲಿ ಹರಡಿತ್ತು ಅದೇನೆಂದರೆ ರೈಲು ಬಂದರೆ ಪ್ಲೇ ಗು ಬರುತ್ತೆ  ಅಂತ.    ಹಾಗಾಗಿ ಈ ಭಾಗದಲ್ಲಿನ ಜಾಗೃತ ಜನ ನಾಯಕರುಗಳು ಹೇಗಾದರು ಮಾಡಿ ರೈಲು ಬರದಂತೆ ಮಾಡಲು ಎಲ್ಲಾ ರೀತಿಯ ಪ್ರಯತ್ನ ಮಾಡಲು ಪ್ರಾರಂಭಿಸಿದರು.     ಇದೇ ಸಂದಭ೯ದಲ್ಲ...