Skip to main content

Blog number 848, ಗೆಳೆತನದ ಸವಿ ನೆನಪಿಗಾಗಿ ಕಲಾವಿದ ನೀಡಿದ ಕಿನ್ನರಿ ವಾದ್ಯದ ಕೊಡುಗೆಗೆ ಬೆಲೆ ಕಟ್ಟಲು ಸಾಧ್ಯವೆ?

#ಕಿನ್ನರಿ_ಸ್ವತಃ_ತಯಾರಿಸಿ_ಕೊಡುಗೆಯಾಗಿ_ಕೊಟ್ಟ_ಕಲಾವಿದ_ನಾಗರಾಜತೊಂಬ್ರಿ

#ಅದ್ಬುತ_ಸ್ಟರ_ಕಲೆ_ಒಲಿದಿರುವ_ಕಲಾವಿದ.

#ಕಳೆದು_ಹೋಗಿದ್ದ_ಕೆಳದಿ_ರಾಜ_ವೆಂಕಟಪ್ಪನಾಯಕ_ಮತ್ತು_ರಾಣಿ_ಚಂಪಕಾರ_ದುರಂತ_ಪ್ರೇಮದ
#ಕಳೆದು_ಹೋದ_ಲಾವಣಿಗೆ_ಪುನರ್_ರೂಪ_ಕೊಟ್ಟವರು

   ಚಂಪಕ ಸರಸ್ಸು ಸ್ಮಾರಕ ನಿಮಿ೯ಸಲು ಕಾರಣವಾದ ಕೆಳದಿ ರಾಜ ವೆಂಕಟಪ್ಪ ನಾಯಕರು  ಆಕಷ೯ಕ ರಂಗೋಲಿಯ ಮೂಲಕ ಚಂಪಕಾಳ ಮೇಲೆ ಪ್ರೇಮಾ೦ಕುರವಾಗಿ ನಂತರ ಅವರ ವಿವಾಹವಾಗಿ ಪಟ್ಟದ ರಾಣಿ ಭದ್ರಮ್ಮರ ನೆಮ್ಮದಿಗೆ ಭಂಗವಾಗಿ ಅವರು ಜೀವ ತ್ಯಾಗ ಮಾಡಿದಾಗ ಪ್ರಜೆಗಳಲ್ಲಿ ಉಂಟಾದ ಅಸಹನೆಯಿಂದ ರಾಜ ವೆಂಕಟಪ್ಪ ನಾಯಕರ ಮೇಲೆ ದೊಡ್ಡ ಅಪಾದನೆ ಉಂಟಾದಾಗ ಚಂಪಕ ಹಾಲಿನೊಡನೆ ವಜ್ರದ ಪುಡಿ ಬೆರೆಸಿ ಆತ್ಮಹತ್ಯೆ ಮಾಡಿಕೊಳ್ಳುತ್ತಾಳೆ.
   ಚಂಪಕಳ ಸ್ಮರಣಾರ್ಥ ಆನಂದಪುರಂನಲ್ಲಿ ಚಂಪಕ ಸರಸ್ಸು ನಿರ್ಮಿಸಿ ಈ ಪ್ರದೇಶಕ್ಕೆ ಚಂಪಕಳ ನೆನಪಿಗಾಗಿ ಆನಂದಪುರ ಎಂದು ನಾಮಕರಣ ರಾಜ ವೆಂಕಟಪ್ಪ ನಾಯಕರು ಮಾಡುತ್ತಾರೆ ಮತ್ತು ಅವರೇ ಈಗಿನ ಸಾಗರ ಪಟ್ಟಣ ಕಟ್ಟಿ ಅದಕ್ಕೆ ಸದಾಶಿವ ಸಾಗರ ಎಂದು ನಾಮಕರಣ ಮಾಡುತ್ತಾರೆ.
  ಇದರ ಸಂಪೂರ್ಣ ಕಥೆಯ ಲಾವಣಿ 400 ವರ್ಷದಲ್ಲಿ ಕಳೆದು ಹೋಗಿದೆ, ಮೈಸೂರು ರಾಜರ ದಸರಾ ದರ್ಭಾರಿನಲ್ಲಿ ಕೋಲಾಟ ಪ್ರದರ್ಶನ ನೀಡಿದ್ದ ದಲಿತ ಕಲಾವಿದ ನಮ್ಮ ಊರಿನ ಸಮೀಪದ ಬಸವನ ಕೊಪ್ಪದ ಹೊಳೆ ಬಸಣ್ಣ ಈ ಲಾವಣಿ ಹಾಡುತ್ತಿದ್ದ ಕೊನೆಯ ಕಲಾವಿದರು, ಇವರು ಶಿವಮೊಗ್ಗ ತಾಳಗುಪ್ಪ ರೈಲು ಮಾರ್ಗ ಹಾಕುವಾಗ ರೈಲ್ವೆ ಕಾರ್ಮಿಕರನ್ನು ಸಾಗಿಸುತ್ತಿದ್ದ ರೈಲು ಆನಂದಪುರಂ ಸಮೀಪದ ಹೊಸೂರಿನ ಚೆನ್ನಶೆಟ್ಟಿ ಕೊಪ್ಪದಲ್ಲಿ ಅಪಘಾತವಾಗಿ ಅನೇಕ ಆಂಧ್ರ ಪ್ರದೇಶದ ಕೂಲಿ ಕಾರ್ಮಿಕರು ಮತಪಟ್ಟ ಘಟನೆಯ ಲಾವಣಿ ಕೂಡ ಹಾಡುತ್ತಿದ್ದರು.
    ರಾಣಿ ಚಂಪಕಾಳ ಲಾವಣಿ ಎಳೆ ಹಿಡಿದು ಹುಡುಕಿ ಅದಕ್ಕೆ ಧ್ವನಿ ಕೊಟ್ಟು ಲಾವಣಿಗೆ ಪುನರ್ಜನ್ಮ ನೀಡಿದ ಕಲಾವಿದ ಈ ನಾಗರಾಜ ತೊಂಬ್ರಿ.
  ಅನೇಕ ಕಾರಣದಿಂದ ಈ ಜನಪದ ಕಲಾವಿದರ ಕುಟುಂಬಗಳು ನನಗೆ ಆಪ್ತರು ಆ ಕಾರಣದಿಂದ ಇವತ್ತು ನಾಗರಾಜ ತೊಂಬ್ರಿ ಅವರ ಕೈಯಾರೆ ತಯಾರಿಸಿದ ಸೋರೆಕಾಯಿ ಬುರುಡೆ, ಬಿದಿರು ಮತ್ತು ತಂತಿಯಿಂದ ಅವರ ಸಂಪ್ರದಾಯದಂತೆ ತಯಾರಿಸಿದ ಕಿನ್ನರಿಯನ್ನು ನನಗೆ ನೆನಪಿನ ಕಾಣಿಕೆ ಆಗಿ ತಂದು ಕೊಟ್ಟಿದ್ದಾರೆ.
  ಜನಪದ ಕಲಾವಿದರು ನೀಡಿದ ಈ ನೆನಪಿನ ಕಾಣಿಕೆ ಮನೆಯ ಹಜಾರದಲ್ಲಿ ಅಥವ ನನ್ನ ಕಛೇರಿಯಲ್ಲಿ ಸುರಕ್ಷಿತವಾಗಿ ಇಡುವ ಯೋಚನೆ ನನ್ನದಾಗಿದೆ.

Comments

Popular posts from this blog

# ಜುಟ್ಟು ಕಾಳಿಂಗ ಸಪ೯ದ ಆಸ್ತಿತ್ವದ ಮಲೆನಾಡಿನ ಮಿಥ್ಯೆ#

  # ಕಾಳಿ೦ಗ ಸಪ೯ದಲ್ಲಿ ಜುಟ್ಟು ಕಾಳಿಂಗ ಸಪ೯ ಅಂತ ಇದೇ ಅನ್ನುವ ಯಾರು ನೋಡದ ಸಪ೯ದ ಅಸ್ತಿತ್ವ#    ಮಲೆನಾಡಿನ ಹಳ್ಳಿಗಳಲ್ಲಿ, ಅದು ಕಾಳಿ೦ಗ ಸಪ೯ದ ವಾಸಸ್ಥಳದ ಪರಿಸರದಲ್ಲಿ ಜುಟ್ಟು ಕಾಳಿಂಗ ಸಪ೯ ಇದೆ ಅನ್ನುವ ಮಾತು ಆಗಾಗ್ಗೆ ಕೇಳುತ್ತಿರುತ್ತೇವೆ. ಆದರೆ ಆ ರೀತಿಯ ಹಾವು ಇಲ್ಲ ಎಂದು ಹಾವಿನ ಬಗ್ಗೆ ಸಂಶೋದನೆ ಮಾಡುವವರು, ಅರಣ್ಯ ಇಲಾಖೆಯವರು, ಹಾವು ಹಿಡಿಯುವವರು ಖಡಾಖಂಡಿತವಾಗಿ ಹೇಳುತ್ತಾರಾದರು, ಈ ವದಂತಿ ಹೇಗೆ ಹರಡಿದೆ?.    ಇದು ಒಂದು ಊರು ಹಳ್ಳಿಯಲ್ಲ ನಾನು ನೋಡಿದಂತೆ ಮಹಾರಾಷ್ಟ್ರದ ರತ್ನಗಿರಿಯಿ೦ದ ಕೇರಳದ ಕಾಸರಗೋಡಿನ ತನಕ ಜುಟ್ಟು ಕಾಳಿಂಗದ ಅನೇಕ ರೋಚಕ ಕಥೆ ಕೇಳಿದ್ದೇನೆ.   ಪ್ರತ್ಯಕ್ಷ ನೋಡಿದವರು ತಾವು ಎನ್ನುವ ಅನೇಕರಲ್ಲಿ ಮಾತಾಡಿದ್ದೇನೆ ಆದರೆ ಅದು ನಂಬಲಹ೯ ಮಾಹಿತಿ ಅನಿಸಲಿಲ್ಲ, ಒಂದು ರೀತಿ ಕಾಲ್ಪನಿಕ ತ್ರಿಲ್ಲರ್ ಕಥೆ ಅಷ್ಟೇ ಅನ್ನಬಹುದು.    ಜಡೆ ಕಾಳಿಂಗ ಸಪ೯ಕ್ಕೆ ರೋಷ ಜಾಸ್ತಿ, ಹೆಡೆ ಮೇಲೆ ಕೂದಲಿನ ಜುಟ್ಟು ಇರುತ್ತೆ, ಮನುಷ್ಯರನ್ನ ಕಂಡರೆ ಓಡಿಸಿಕೊಂಡು ಬರುತ್ತೆ, ಅದರಿಂದ ತಪ್ಪಿಸಿಕೊಳ್ಳಲು ಒಂದೇ ದಾರಿ ಅದೇನೆಂದರೆ ತಗ್ಗಿನ ಪ್ರದೇಶದಲ್ಲಿ ಓಡುವುದು.     ಯಾಕೆ೦ದರೆ ಓಡಿಸಿಕೊಂಡು ಬರುವ ಜುಟ್ಟು ಕಾಳಿಂಗದ ಜುಟ್ಟು, ಇಳಿಜಾರಿನಲ್ಲಿ ಅದರ ತಲೆಯಿ೦ದ ಇಳಿಜಾರಿಗೆ ಸರಿಯುವುದರಿಂದ  ಕಣ್ಣಿನ ಮೇಲೆ ಕೂದಲ ಜುಟ್ಟು ಮುಚ್ಚುವುದರಿಂದ ಕಣ್ಣು ಕಾಣುವುದಿಲ್ಲ, ಆಗಲೇ ತಪ್...

HISTORICAL SAGAR MARIKAMBA JATRA.ಐತಿಹಾಸಿಕ ಸಾಗರದ ಮಾರಿಕಾಂಬಾ ಜಾತ್ರೆ

     ಸಾಗರದ ಮಾರಿಕಾಂಬಾ ಜಾತ್ರೆ ಐತಿಹಾಸಿಕ ಚರಿತ್ರೆಯಲ್ಲಿ ದಾಖಲೆ.        ಕನಾ೯ಟಕ ರಾಜ್ಯದಲ್ಲಿ ಎರೆಡು ಮಾರಿಕಾಂಬಾ ಜಾತ್ರೆಗಳು ಪ್ರಸಿದ್ಧಿ ಪಡೆದಿದೆ ಅದು ಉತ್ತರ ಕನ್ನಡ ಜಿಲ್ಲೆಯ ಸಿಸಿ೯ಯದ್ದು ಮತ್ತು ಶಿವಮೊಗ್ಗ ಜಿಲ್ಲೆಯ ಸಾಗರದ್ದು.    ಪ್ರತಿ ಮೂರು ವಷ೯ಕೆ ಈ ಜಾತ್ರೆ ಆಚರಿಸಲಾಗುತ್ತೆ ಶೂದ್ರ ವಗ೯ದವರು ಭಯ ಮತ್ತು ಭಕ್ತಿಯಿಂದ ಕುರಿ ಕೋಳಿ ಬಲಿ ನೀಡುವ ಪರಂಪರೆ ಇದೆ.ಮಂಗಳವಾರ ಮೇಲು ಜಾತಿಯ ಜನರ ಪೂಜೆ ದೇವಿಯ ತವರು ಮನೆಯಲ್ಲಿ ನಡೆಯುತ್ತದೆ ನಂತರ ರಾತ್ರಿ ಗಂಡನ ಸೇರುವ ಮಾರಿಗೆ ಶೂದ್ರರ ಪೂಜೆ, ಬಲಿ ಮೀಸಲು.    ಮೊದಲೆಲ್ಲ ಮಾರಿಯಮ್ಮನಿಗೆ ಕೊಣನ ಬಲಿ ನೀಡುತ್ತಿದ್ದರು ಈಗ ಇದು ಕಾನೂನು ಪ್ರಕಾರ ನಿಷಿದ್ಧ ಆದರೆ ಈ ಆಚಾರಣೆ ಗುಪ್ತವಾಗಿ ಬೇರೆ ಕಡೆ ನಡೆಸಲಾಗುತ್ತೆ ಅನ್ನುತ್ತಾರೆ.    ಸಾಗರದ ಮಾರಿಕಾ0ಬಾ ಜಾತ್ರೆ ಜಾತ್ರೆಯಿ೦ದ ಜಾತ್ರೆಗೆ ಅದೂರಿಯಾಗಿ ನಡೆಯುತ್ತದೆ, ಕೋಟ್ಯಾoತರ ಹಣದ ವಹಿವಾಟು ಕೂಡ, ಮೊದಲೆಲ್ಲ ಹಣದ ಅಪರಾ ತಪರ ಆಗುತ್ತಿದೆ ಎಂಬ ಗುಲ್ಲು ಇತ್ತು ಆದರೆ ಈಗೆಲ್ಲ ಪಾರದಶ೯ಕವಾಗಿದೆ ಆದರೂ ಈ ಬಾರಿಯ 2017ರ ಜಾತ್ರೆಯಲ್ಲಿ ಅವ್ಯವಹಾರದ ಆರೋಪ ಮಾಡಲಾಗಿದೆ ಈ ವಿಚಾರ ಇಲ್ಲಿ ಅಪ್ರಸ್ತುತ ಆದರೂ ಈ ಬಗ್ಗೆ ಬರೆಯಲು ಕಾರಣ ಕೆಳದಿ ಅರಸರ ಕಾಲದಲ್ಲಿ ಅಂದರೆ 350 ವಷ೯ದ ಹಿಂದೆಯೂ ರಾಜರಿಗೆ ಸಾಗರದ ಮಾರಿಕಾಂಬಾ ಜಾತ್ರೆಯಲ್ಲಿ ಸಾವ೯ಜನಿಕರಿಂದ ಸಂಗ್ರಹಿಸಿದ ಜಾತ...

ರಿಪ್ಪನ್ ಪೇಟೆ ( ಶಿವಮೊಗ್ಗ ಜಿಲ್ಲೆ) ಹೆಸರು ಬಂದಿದ್ದಾದರು ಹೇಗೆ?

#  ರಿಪ್ಪನ್ ಪೇಟೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಪ್ರಮುಖ ಹೋಬಳಿ ಕೇಂದ್ರ ಈ ಆಂಗ್ಲ ಅಧಿಕಾರಿಯ ಹೆಸರು ಇಡಲು ಕಾರಣವಾದ ಘಟನೆ ತುಂಬಾ ಕುತೂಹಲಕಾರಿ# ಸ್ವಲ್ಪ ಕಾಲ ನೀವು ಈ ಲೇಖನ ಓದಿದರೆ ಕಾರಣ ಗೊತ್ತಾಗುತ್ತೆ.    ಆಗ ಬ್ರಿಟಿಷ್ ಸಕಾ೯ರರಕ್ಕೆ ಆಡಳಿತ ಸುಗುಮಕ್ಕೆ ರೈಲು ಮಾಗ೯ ಅತ್ಯಗತ್ಯ ಎಂಬ ಸಕಾರಣ ಮನವರಿಕೆ ಆದ ಕಾಲ ಏಕೆಂದರೆ ಬ್ರಿಟಿಷರು ಅಮೆರಿಕಾ ವಲಸೆಯಲ್ಲಿ ಇದನ್ನ ಮನಗOಡಿದ್ದರು, ಬೆಂಗಳೂಳಿ ರಿಂದ ಶಿವಮೊಗ್ಗ ತಲುಪುವ ರೈಲು ಮಾಗ೯ ತಾಳಗುಪ್ಪಾ ತಲುಪಿದರೆ ಜೋಗ ಜಲಪಾತ ವೀಕ್ಷಣೆಗೆ ಅನುಕೂಲ ಎಂಬುದು ಹಾಗೆ ಮತ್ತೊಂದು ಮ್ಯಸೂರು ಸಕಾ೯ರ ಶರಾವತಿ ನದಿಗೆ ಆಣೆಕಟ್ಟು ಕಟ್ಟಿ.ಜಲ ವಿದ್ಯುತ್ ತಯಾರಿಸಲು ಸಾಮಗ್ರಿ ಸಾಗಾಣಿಕೆಗೆ ಅನುಕೂಲ ಎಂಬ ಕಾರಣದಿಂದ ಶಿವಮೊಗ್ಗದಿಂದ ತಾಳಗುಪ್ಪ ರೈಲು ಮಾಗ೯ ಯೋಜನೆ ಮಾಡಲಾಯಿತು.    ಆಗ ಪ್ಲೇಗ್ ಮಾರಿಯ ಕಾಲ, ಎಲ್ಲೆಲ್ಲೂ ಜನ ಸಾಯುತ್ತಿದ್ದರು ಆಗಲೇ ಈ ರೈಲು ಮಾಗ೯ ಶಿವಮೊಗ್ಗ ಆರಸಾಳಿOದ ದೊಡ್ಡಿನ ಕೊಪ್ಪ (ಈಗಿನ ರಿಪ್ಪನ್ ಪೇಟೆ) ಆನಂದಪುರಂ ಮಾಗ೯ ನಿಗದಿ ಆಗಿತ್ತು ಆದರೆ ಈ ಭಾಗದಲ್ಲಿ ಒಂದು  ವದಂತಿ ಈ ಬಾಗದಲ್ಲಿ ಹರಡಿತ್ತು ಅದೇನೆಂದರೆ ರೈಲು ಬಂದರೆ ಪ್ಲೇ ಗು ಬರುತ್ತೆ  ಅಂತ.    ಹಾಗಾಗಿ ಈ ಭಾಗದಲ್ಲಿನ ಜಾಗೃತ ಜನ ನಾಯಕರುಗಳು ಹೇಗಾದರು ಮಾಡಿ ರೈಲು ಬರದಂತೆ ಮಾಡಲು ಎಲ್ಲಾ ರೀತಿಯ ಪ್ರಯತ್ನ ಮಾಡಲು ಪ್ರಾರಂಭಿಸಿದರು.     ಇದೇ ಸಂದಭ೯ದಲ್ಲ...