Skip to main content

Blog 850, ಸಾಗರ ಜಂಬಗಾರು ಎಂಬ ರೈಲು ನಿಲ್ದಾಣದ ಹೆಸರು ಕಾಗೋಡು ಹೋರಾಟದಲ್ಲಿ ಭಾಗವಹಿಸಲು ಬಂದಾಗ ಈ ರೈಲು ನಿಲ್ದಾಣದಲ್ಲಿ ಬಂದನಕ್ಕೆ ಒಳಗಾದ ಸಮಾಜವಾದಿ ದುರೀಣ ಡಾ.ರಾಮಮನೋಹರ ಲೋಹಿಯ ರೈಲು ನಿಲ್ದಾಣ ಎಂದು ಮರುನಾಮಕರಣ ರೈಲ್ವೆ ಇಲಾಖೆ ಉದ್ದೇಶ ಪೂರ್ವಕವಾಗಿ ತಡೆ ಹಿಡಿದಿರುವುದನ್ನು ಜನತೆ ಪ್ರತಿಭಟಿಸ ಬೇಕಾಗಿದೆ.

#ನಿನ್ನೆ_ನಾಡಿನ_ಹೆಸರಾಂತ_ಸಾಹಿತಿ_ಕಾಳೇಗೌಡನಾಗವಾರರು_ರಾಜ್ಯದ_ಪ್ರಗತಿಪರ_ಕೃಷಿತಜ್ಞ_ನಾಗೇಂದ್ರಸಾಗರ್_ಮನೆಗೆ_ಬಂದಾಗ
#ಸಾಗರಜ೦ಬಗಾರು_ಎಂಬ_ಸಾಗರದ_ರೈಲುನಿಲ್ದಾಣ_ಡಾಕ್ಟರ್_ರಾಮಮನೋಹರ_ಲೋಹಿಯಾ_ಎ೦ದು_ಮರುನಾಮಕರಣ_ವಿಳಂಬದ_ಬಗ್ಗೆ_ಚಚಿ೯ಸಿದರಂತೆ.

#ಈ_ಸಂದರ್ಭದಲ್ಲಿ_ಮರುನಾಮಕರಣಕ್ಕೆ_ಪಕ್ಷಾತೀತವಾಗಿ_ಒತ್ತಾಯಿಸುವ_ಕಾಯ೯ಕ್ರಮಗಳು_ನಡೆಯಬೇಕಾಗಿದೆ

   ಆಗಿನ ಕೇಂದ್ರ ಮಂತ್ರಿ ಶ್ರೀನಿವಾಸ ಪ್ರಸಾದ್, ಜಾರ್ಜ್ ಪನಾ೯ಂಡೀಸ್, ರಾಜ್ಯಸಭಾ ಸದಸ್ಯರಾದ ಜವರೇಗೌಡರ ಪ್ರಯತ್ನದಿಂದ ಮತ್ತು ಕಾಗೋಡು ಹೋರಾಟದ ನೇತಾರ ಗಣಪತಿಯಪ್ಪ, ಜಿ.ಆರ್.ಜಿ.ನಗರ್, ಕೆ.ವಿ.ಸುಬ್ಬಣ್ಣ, ಸಾಹಿತಿ ನಾ.ಡಿಸೋಜ, ಸಮಜವಾದಿ ಸಾಹಿತಿ ಕೋಣಂದೂರು ವೆಂಕಪ್ಪಗೌಡರು, ಮಾಜಿ ವಿದಾನ ಪರಿಷತ್ ಸದಸ್ಯರಾದ ಮಾದಪ್ಪ, ಪ್ರಪುಲ್ಲಾ ಮದುಕರ್ ,ರೈತ ಮುಖಂಡರಾದ ಪ್ರೋ. ನಂಜುಂಡ ಸ್ವಾಮಿ, ಕೆ.ಟಿ.ಗಂಗಾಧರ್, ಸಾಗರದ ವಸಂತ ಕುಮಾರ್, ಸೊರಬ ಮಂಜುನಾಥ ಗೌಡರು, ಕಲ್ಲೂರ್ ಮೇಘರಾಜ್ ಮತ್ತು ಜಿಲ್ಲೆಯ ಅನೇಕರು (ಇದಕ್ಕಾಗಿ ದೆಹಲಿ ಚಲೋ ಮಾಡಿದ ನೂರಾರು ಹೋರಾಟಗಾರರೂ ಸೇರಿ) ಸಾಗರ ಜಂಬಗಾರು ರೈಲು ನಿಲ್ದಾಣ ಎಂಬ ಹೆಸರು ಬದಲಿಸಿ ಡಾ.ರಾಮಮನೋಹರ ಲೋಹಿಯಾ ಎಂದು ಮರುನಾಮಕರಣ ಮಾಡಲು ರೈಲ್ವೆ ಮಂತ್ರಿ ನಿತೀಶ್ ಕುಮಾರರಿಗೆ ನೀಡಿದ ಮನವಿ ಆಕಾಲದಲ್ಲಿನ ಕಾನೂನು ರೀತ್ಯ ಆಗಿನ ಉಪ ಪ್ರಧಾನಿ ಲಾಲ್ ಅಡ್ವಾನಿ ಅವರಿಗೆ ಹೋಗಿ ಅಲ್ಲಿಂದ ಅದು ರಾಜ್ಯ ಸಕಾ೯ರದ ಅನುಮೋದನೆಗೆ ಬಂತು, ರಾಜ್ಯ ಸರ್ಕಾರದಿಂದ ಶಿವಮೊಗ್ಗ ಜಿಲ್ಲಾಧಿಕಾರಿಗಳಿಗೆ ಅಲ್ಲಿಂದ ಸಾಗರ ನಗರಸಭೆಗೆ ಬಂದು, ಸಾಗರದ ನಗರಸಭೆ ಡಾ.ರಾಮಮನೋಹರ ಲೋಹಿಯಾ ಎ೦ದು ಮರುನಾಮಕರಣ ಮಾಡಲು ಒಪ್ಪಿಗೆ ಪತ್ರ ನೀಡಿದ ಆದಾರದ ಮೇಲೆ ಶಿವಮೊಗ್ಗ ಜಿಲ್ಲಾ ಕಚೇರಿ ನಿರಾಕ್ಷೇಪಣಾ ಪತ್ರ ನೀಡಿದ್ದರಿಂದ ರಾಜ್ಯ ಸರ್ಕಾರ ಉಪ ಪ್ರಧಾನಿಯವರ ಕಛೇರಿಗೆ ತನ್ನ ಅನುಮತಿ ರವಾನಿಸಿತ್ತು ಈ ಎಲ್ಲಾ ಹಿನ್ನೆಲೆಯಲ್ಲಿ ಉಪ ಪ್ರದಾನಿ ಕಾಯಾ೯ಲಯ ಸಾಗರ ಜಂಬಗಾರು ರೈಲು ನಿಲ್ದಾಣವನ್ನು ಡಾ.ರಾಮಮನೋಹರ ರೈಲು ನಿಲ್ದಾಣ ಎಂದು ಮರುನಾಮಕರಣ ಮಾಡಲು ಕೇಂದ್ರ ರೈಲ್ವೆ ಇಲಾಖೆಗೆ ಆದೇಶಿಸಿದೆ ಆದರೆ ರೈಲ್ವೆ ಇಲಾಖೆಯ ಅಧಿಕಾರಿಗಳ ಪ್ರಕಾರ ಈ ಆದೇಶ ಜಾರಿಗೆ ಕಾಣದ ಕೈಗಳು ತಡೆಹಿಡಿದಿದೆ ಮತ್ತು ಬೇರೆ ಹೆಸರು ಇಡುವ ಪ್ರಯತ್ನವೂ ಇದೆಯಂತೆ.
https://arunprasadhombuja.blogspot.com/2022/03/22.html?m=1
  ಸದರಿ ಬೋರ್ಡ್ ದುರಸ್ತಿ ಮಾಡಿಸಿ, ಬಣ್ಣ ಮಾಡಿ ಹೊಸದಾಗಿ ಬರೆಸಿ ಸ್ಥಳಿಯ ಲೋಕಸಭಾ ಸದಸ್ಯರಿಗೆ ಇನ್ನೊಮ್ಮೆ ನೆನಪಿಸುವ ಕೆಲಸ ಸಾಗರ ತಾಲ್ಲೂಕಿನ ಆಸಕ್ತರು ಪಕ್ಷಾತೀತವಾಗಿ ಮಾಡಬೇಕಾಗಿದೆ.
  ಮುಂದಿನ ವರ್ಷ ನಡೆಯಲಿರುವ ವಿಧಾನಸಭಾ ಚುನಾವಣೆ ಮತ್ತು ಅದರ ಮುಂದಿನ ವರ್ಷ ನಡೆಯಲಿರುವ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಈಗಲೇ ಈ ಪ್ರಯತ್ನ ಪ್ರಾರಂಬಿಸಿದರೆ ಚುನಾವಣೆ ಒಳಗೆ ಡಾ. ಮನೋಹರ ಲೋಹಿಯ ರೈಲು ನಿಲ್ದಾಣ ಮರು ನಾಮಕರಣ ಮಾಡಬಹುದು.
  ಇದಕ್ಕಾಗಿ ಲೋಕಸಭಾ ಸದಸ್ಯರಿಗೆ ಜ್ಞಾಪಿಸುವ ಕೆಲಸ ಆಗಬೇಕಾಗಿದೆ.

Comments

Popular posts from this blog

Blog number 1782. ಅರಳಸುರಳಿಯ ರಾಘವೇಂದ್ರ ಕೇಕೋಡರ ಕುಟುಂಬದ ತಪ್ಪು ನಿರ್ದಾರದ ದುರಂತ.

#ತೀರ್ಥಹಳ್ಳಿಯ_ಅರಳಸುರಳಿಯ_ಒಂದೇ_ಕುಟುಂಬದ_ನಾಲ್ವರು_ಮೃತರಾದ_ರಹಸ್ಯವೇನು? #ಈ_ಬಗ್ಗೆ_ಆ_ಊರಿನ_ಸಮೀಪದ_ಈ_ಕುಟುಂಬದ_ಪರಿಚಯ_ಇರುವವರಿಗೆ_ವಿಚಾರಿಸಿದ್ದೆ. #ಅವರು_ಈ_ಘಟನೆ_ಬಗ್ಗೆ_ಸವಿಸ್ತಾರವಾಗಿ_ಲಿಖಿತ_ಲೇಖನ_ಬರೆದಿದ್ದಾರೆ. #ಅವರ_ವಿನಂತಿ_ಅವರ_ಹೆಸರು_ಬಹಿರಂಗಗೊಳಿಸ_ಬಾರದು. #ಆದ್ದರಿಂದ_ಈ_ಲೇಖನ_ಪೋಸ್ಟ್_ಮಾಡಬಾರದೆಂದಿದ್ದೆ_ಆದರೆ_ಇದು_ಮಲೆನಾಡಿಗರ_ಮನೆ_ಮನೆಯ_ಕಥೆ #ಆದ್ದರಿಂದ_ಇಲ್ಲಿ_ಪೋಸ್ಟ್_ಮಾಡಿದೆ.    ಇಲ್ಲಿ ತಪ್ಪು ಯಾರದ್ದೂ ಇಲ್ಲ... ಪಶ್ಚಾತ್ತಾಪದ ಪ್ರಾಯಶ್ಚಿತ ಕೇಳಲು ಅವರಾರು ಇಲ್ಲ .....ಆದರೆ ಈ ರೀತಿ ಜೀವ ತ್ಯಾಗ ಮಾಡುವ ಆತುರದ ಕೆಟ್ಟ ನಿರ್ದಾರ ಮಾತ್ರ ಸರಿ ಅಲ್ಲ.     ಇವರ ಅಣ್ಣ ಆರ್.ಎಸ್.ಎಸ್. ಪ್ರಚಾರಕರಾಗಿ ದೆಹಲಿಯಲ್ಲಿ ಏಳು ವಷ೯ ಮೋದಿ ಜೊತೆ ಒಂದೇ ಕೋಣೆ ಹಂಚಿಕೊಂಡವರು, ಇನ್ನೊಬ್ಬ ಸಹೋದರ ಮೂಳೆ ತಜ್ಞರಾಗಿ ಶಿವಮೊಗ್ಗದಲ್ಲಿ ಆಸ್ಪತ್ರೆ ಮಾಡಿಕೊಂಡಿದ್ದಾರೆ.   #ದೀರ್ಘವಾದರೂ_ಪೂರ್ಣ_ಲೇಖನ_ಓದಿ   #ಹೀಗೊಂದು_ಸುಕುಟುಂಬ_ಆತ್ಮಾಘಾತ_ಮತ್ತು_ತದನಂತರದ_ಸಹಾಗಮನ.... ಮೂಡಣದಲ್ಲಿ ರವಿ ಮೂಡಲು ಅಣಿ ಯಾಗುತ್ತಿಧ್ದ .. ಹಾದಿಗಣಪತಿ ದೇವರು ಗರ್ಭಗುಡಿಯ ನಂದಾದೀಪದ ಮಂದ ಬೆಳಕಿನಲ್ಲಿ ತನ್ನ ಗುಡಿಯ ಎದುರಿನ ತಗ್ಗಿನಲ್ಲಿದ್ದ  ರಾಘವೇಂದ್ರ ಕೇಕೋಡರ ಮನೆಯನ್ನು ಎವೆಯಕ್ಕದೇ ನೋಡುತ್ತಲಿದ್ದ... ಊರ ಎಲ್ಲಾ ಮನೆಯಂತೆ ಆ ಮನೆಯಲ್ಲೂ ಆ ಬೆಳಗಿನಲ್ಲಿ ಮನೆಯೊಡತಿ ನಾಗರತ್ನಕ್ಕ ಆ ಸಮಯದಲ್ಲಿ ದೇವರಿಗೆ ದೀಪ ಹಚ್ಚಿ ಹೊಸ್ತಿಲು ಪೂಜೆ ಮಾಡ

Blog number 1037. ರಾಜಕುಮಾರಿ ಶಾಂತವ್ವ ಮತ್ತು ದಲಿತ ಯುವಕ ಸಿದ್ದೇಶ್ವರರ ಅಮರ ಪ್ರೇಮದ ಸ್ಮಾರಕ, ಅನ್ಯ ಜಾತಿ ವಿವಾಹವಾದ್ದರಿಂದ ರಾಜಕುಮಾರಿಗೆ ಸೂಳೆ ಪಟ್ಟ ನೀಡಿದ ಸಮಾಜ. ಸಮಾಜದ ಒಳಿತಿಗಾಗಿ ಶಾಂತವ್ವ ಕಟ್ಟಿಸಿದ ಬೃಹತ್ ಕೆರೆಗೆ ಜನ ಕರೆದದ್ದು ಸೂಳೆ ಕಟ್ಟಿಸಿದ ಕೆರೆ ಅದೇ ಸೂಳೆಕೆರೆ / ಶಾಂತಿ ಸಾಗರ

# ಸೂಳೆಕೆರೆ (ಶಾಂತಿ ಸಾಗರ) ಅಂತರ್ ಜಾತಿ ಪ್ರೇಮ ವಿವಾಹದ ದುರOತ ಕಥೆ. #ಅಕ್ಟೋಬರ್ 2019 ರಲ್ಲಿ ತುಂಬಿ ತುಳುಕಿತ್ತು.  ಚಿತ್ರದುಗ೯, ದಾವಣಗೆರೆ ಬಳ್ಳಾರಿ ಮುಂತಾದ ಮಳೆ ಕಡಿಮೆ ಆಗುತ್ತಿದ್ದ ಜಿಲ್ಲೆಗಳಲ್ಲಿ ಅದೂ ಅಕ್ಟೋಬರ್ ತಿಂಗಳ 2019 ರಲ್ಲಿ  ಬಂದಿದ್ದ ಬಾರಿ ಮಳೆ ಎಲ್ಲಾ ಕೆರೆ, ಹೊಂಡಗಳು ತುಂಬಿ ತುಳುಕಿದೆ, ಸಾಮಾಜಿಕ ಜಾಲ ತಾಣದಲ್ಲಿ 40 ವಷ೯ದಲ್ಲಿ ಇಂತ ಮಳೆ ಬಂದಿಲ್ಲ ಅಂತ ಸುದ್ದಿ ಹರಿದಾಡುತ್ತಿತ್ತು ಮತ್ತು  ಸೂಳೆಕೆರೆ ತುಂಬಿ ಕೋಡಿ ಬಿದ್ದಿದೆ ಅಂತೆಲ್ಲ Post ನೋಡಿ ಬೆಂಗಳೂರಿಂದ ಬರುವಾಗ ಚಿತ್ರದುಗ೯ ಮಾಗ೯ವಾಗಿ ಚನ್ನಗಿರಿ ತಲುಪಿ ಸೂಳೆಕೆರೆ ನೋಡಲು ಹೋಗಿದ್ದೆ.  11ನೇ ಶತಮಾನದಲ್ಲಿ (1128ರಲ್ಲಿ)ಕೇವಲ 3 ವಷ೯ದಲ್ಲಿ ಈ ಕೆರೆ ನಿಮಾ೯ಣ ಮಾಡಿಸಿದ್ದು ಶಾಂತವ್ವ ಎಂಬ ರಾಜ ಕುಮಾರಿ ಅವಳು ಸ್ವಣ೯ವತಿ ಪಟ್ಟಣದ ದೊರೆ ವಿಕ್ರಮ ರಾಜನ ಮಗಳು, ಸಿದ್ದೇಶ್ವರ ಎಂಬ ಅನ್ಯ ಜಾತಿಯ ಯುವಕನೊ೦ದಿಗೆ ಗಾಂದವ೯ ವಿವಾಹ ಆಗುತ್ತಾಳೆ ಇದನ್ನ ಸಹಿಸದ ಮತ್ತು ಒಪ್ಪದ ಜನತೆ ಸೂಳೆ ಎಂದು ಮೂದಲಿಸುತ್ತಾರOತೆ ಈ ರೀತಿ ತನಗೆ ಬಂದ ಕಳಂಕ ಕಳೆಯಲು ಈ ಬೃಹತ್ ಕೆರೆ ತನ್ನ ಪತಿ ಸಿದ್ದೇಶ್ವರನ ಜೊತೆ ಸೇರಿ ನಿಮಿ೯ಸಿ ಕೆರೆಗೆ ಹಾರವಾದಳೆoಬ ಇತಿಹಾಸ ಇದೆ ಇದರಿಂದ ನೊಂದ ಪತಿ ಸಿದ್ಧೇಶ್ವರ ಕೂಡ ಎದುರಿನ ಗುಡ್ಡದಲ್ಲಿ ಜೀವ ತ್ಯಾಗ ಮಾಡುತ್ತಾನೆ ಈಗ ಅಲ್ಲಿ ಸಿದ್ದೇಶ್ವರ ದೇವಸ್ಥಾನವಿದೆ.   ಈ ಕೆರೆ ಈಗಲೂ ಸೂಳೆಕೆರೆ ಎಂದೆ ಹೆಸರಾಗಿದೆ ಈ

# ಜುಟ್ಟು ಕಾಳಿಂಗ ಸಪ೯ದ ಆಸ್ತಿತ್ವದ ಮಲೆನಾಡಿನ ಮಿಥ್ಯೆ#

  # ಕಾಳಿ೦ಗ ಸಪ೯ದಲ್ಲಿ ಜುಟ್ಟು ಕಾಳಿಂಗ ಸಪ೯ ಅಂತ ಇದೇ ಅನ್ನುವ ಯಾರು ನೋಡದ ಸಪ೯ದ ಅಸ್ತಿತ್ವ#    ಮಲೆನಾಡಿನ ಹಳ್ಳಿಗಳಲ್ಲಿ, ಅದು ಕಾಳಿ೦ಗ ಸಪ೯ದ ವಾಸಸ್ಥಳದ ಪರಿಸರದಲ್ಲಿ ಜುಟ್ಟು ಕಾಳಿಂಗ ಸಪ೯ ಇದೆ ಅನ್ನುವ ಮಾತು ಆಗಾಗ್ಗೆ ಕೇಳುತ್ತಿರುತ್ತೇವೆ. ಆದರೆ ಆ ರೀತಿಯ ಹಾವು ಇಲ್ಲ ಎಂದು ಹಾವಿನ ಬಗ್ಗೆ ಸಂಶೋದನೆ ಮಾಡುವವರು, ಅರಣ್ಯ ಇಲಾಖೆಯವರು, ಹಾವು ಹಿಡಿಯುವವರು ಖಡಾಖಂಡಿತವಾಗಿ ಹೇಳುತ್ತಾರಾದರು, ಈ ವದಂತಿ ಹೇಗೆ ಹರಡಿದೆ?.    ಇದು ಒಂದು ಊರು ಹಳ್ಳಿಯಲ್ಲ ನಾನು ನೋಡಿದಂತೆ ಮಹಾರಾಷ್ಟ್ರದ ರತ್ನಗಿರಿಯಿ೦ದ ಕೇರಳದ ಕಾಸರಗೋಡಿನ ತನಕ ಜುಟ್ಟು ಕಾಳಿಂಗದ ಅನೇಕ ರೋಚಕ ಕಥೆ ಕೇಳಿದ್ದೇನೆ.   ಪ್ರತ್ಯಕ್ಷ ನೋಡಿದವರು ತಾವು ಎನ್ನುವ ಅನೇಕರಲ್ಲಿ ಮಾತಾಡಿದ್ದೇನೆ ಆದರೆ ಅದು ನಂಬಲಹ೯ ಮಾಹಿತಿ ಅನಿಸಲಿಲ್ಲ, ಒಂದು ರೀತಿ ಕಾಲ್ಪನಿಕ ತ್ರಿಲ್ಲರ್ ಕಥೆ ಅಷ್ಟೇ ಅನ್ನಬಹುದು.    ಜಡೆ ಕಾಳಿಂಗ ಸಪ೯ಕ್ಕೆ ರೋಷ ಜಾಸ್ತಿ, ಹೆಡೆ ಮೇಲೆ ಕೂದಲಿನ ಜುಟ್ಟು ಇರುತ್ತೆ, ಮನುಷ್ಯರನ್ನ ಕಂಡರೆ ಓಡಿಸಿಕೊಂಡು ಬರುತ್ತೆ, ಅದರಿಂದ ತಪ್ಪಿಸಿಕೊಳ್ಳಲು ಒಂದೇ ದಾರಿ ಅದೇನೆಂದರೆ ತಗ್ಗಿನ ಪ್ರದೇಶದಲ್ಲಿ ಓಡುವುದು.     ಯಾಕೆ೦ದರೆ ಓಡಿಸಿಕೊಂಡು ಬರುವ ಜುಟ್ಟು ಕಾಳಿಂಗದ ಜುಟ್ಟು, ಇಳಿಜಾರಿನಲ್ಲಿ ಅದರ ತಲೆಯಿ೦ದ ಇಳಿಜಾರಿಗೆ ಸರಿಯುವುದರಿಂದ  ಕಣ್ಣಿನ ಮೇಲೆ ಕೂದಲ ಜುಟ್ಟು ಮುಚ್ಚುವುದರಿಂದ ಕಣ್ಣು ಕಾಣುವುದಿಲ್ಲ, ಆಗಲೇ ತಪ್ಪಿಸಿಕೊಳ್ಳಬೇಕು ಅಂತ ಬಿದನೂರು ನಗರ ಸಮೀಪದ ದೇವಗಂಗೆ ಎಂಬ ಕೆಳದಿ