Skip to main content

Blog number 882, 2014ರ ಲೋಕಸಭಾ ಚುನಾವಣೆಯಲ್ಲಿ ನಾನು ಮಾಜಿ ಶಾಸಕರಾದ ಗೋಪಾಲಕೃಷ್ಣ ಬೇಳೂರು ಜೊತೆಗೆ ಜೆಡಿಎಸ್ ಪಕ್ಷ ತೊರೆದು ಬಿಜೆಪಿ ಪಕ್ಷ ಸೇರಿ ಮೋದಿ ಪ್ರದಾನಿಯಾಗಬೇಕೆಂದು ಈ ಮೂಲಕ ಲಂಚಮುಕ್ತ ಭಾರತದ ಕನಸು ಕಂಡು 8 ವರ್ಷ ಆಯಿತು.

# ಎಂಟು_ವರ್ಷದ_ಹಿಂದಿನ_ನೆನಪಿನ_ರಾಜಕಾರಣದ_ಚಿತ್ರ.

#ಮೋದಿ_ಸರ್ಕಾರಕ್ಕೆ_ಎಂಟು_ವರ್ಷ.

   ಆಗಷ್ಟೆ ವಿಧಾನ ಸಭಾ ಚುನಾವಣೆ ಮುಗಿದಿತ್ತು, ಆ ಚುನಾವಣೆಯಲ್ಲಿ ನಾನು ಸಾಗರ ವಿಧಾನ ಸಭಾ ಕ್ಷೇತ್ರದ ಜಾತ್ಯಾತೀತ ಜನತಾದಳದ ಅಧ್ಯಕ್ಷನಾಗಿದ್ದೆ. (ಎರಡನೆ ಬಾರಿಗೆ , ಅದೂ ವಿಧಾನ ಸಭಾ ಚುನಾವಣೆ ನಂತರ ವೈಯಕ್ತಿಕ ಕಾರಣದಿಂದ ರಾಜಕೀಯದಿಂದ ದೂರ ಇರುವ ಕರಾರಿನ ಮೇಲೆ) ಈ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೇಸ್ ಕಾಗೋಡು ತಿಮ್ಮಪ್ಪನವರು ಗೆದ್ದು ನಮ್ಮ ಅಭ್ಯಥಿ೯ ಬೇಳೂರು ಗೋಪಾಲಕೃಷ್ಣ ( ಎರೆಡು ಬಾರಿ ಬಿಜೆಪಿ ಶಾಸಕರಾಗಿದ್ದವರು) ವೈಯಕ್ತಿಕ ಸಾಮರ್ಥ್ಯದಿಂದ ಎರಡನೆ ಸ್ಥಾನದಲ್ಲಿ ಪರಾಜಿತರಾದರು, ನಂತರ ನಾನು ರಾಜಕೀಯ ಬಿಟ್ಟು ಬಿಟ್ಟಿದ್ದೆ.
  ಹೀಗಿದ್ದಾಗಲೇ 2014ರ ಲೋಕಸಭಾ ಚುನಾವಣೆ ಘೋಷಣೆ ಆಯಿತು, ಯಡೂರಪ್ಪನವರು ಬಿಜೆಪಿಯಿಂದ ಶಿವಮೊಗ್ಗ ಲೋಕಸಭಾ ಅಭ್ಯರ್ಥಿ ಆದರು, ಆಗ ಬೇಳೂರು ಗೋಪಾಲಕೃಷ್ಣ ಪುನಃ ಮಾತೃ ಪಕ್ಷದ ಸೇರ್ಪಡೆ ತೀರ್ಮಾನಗಳಾಯಿತು.
  ಈ ಸಂದರ್ಭದಲ್ಲಿ ತಾಲ್ಲೂಕ್ ಜೆಡಿಎಸ್ ಅಧ್ಯಕ್ಷನಾದ ನಾನು ಮತ್ತು ಸಾಗರ ಟವನ್ ಜೆಡಿಎಸ್ ಅಧ್ಯಕ್ಷರಾದ ಮಂಜುನಾಥರು ಗೋಪಾಲಕೃಷ್ಣರ ಗೆಳೆತನದ ಒತ್ತಾಯದಿಂದ ಬಿಜೆಪಿ ಸೇರಿದೆವು, ಆಗ ನಮ್ಮ ಮನಸ್ಸಿನಲ್ಲೂ ಮೋದಿ ಪ್ರದಾನಿ ಆದರೆ 24 ಗಂಟೆ ವಿದ್ಯುತ್, ನಿರುದ್ಯೋಗ ನಿವಾರಣೆ, ಒಂದು ರೂಪಾಯಿ ಲಂಚ ಇಲ್ಲದ ಸರ್ಕಾರಿ ಕಚೇರಿ, ಎಲ್ಲರಿಗೂ ಉಚಿತ ಚಿಕಿತ್ಸೆ, ಬಡವರ ಮಕ್ಕಳಿಗೆ ಉಚಿತವಾಗಿ ಇಂಜಿನಿಯರ್, ವೈದ್ಯಕೀಯ ಸೀಟು ಇತ್ಯಾದಿ ಭರವಸೆ ಮೂಡಿಸುವಂತೆ ಜನಾಕರ್ಷಿಸುವ ಮೋಡಿ ಉಂಟು ಮಾಡುವ ಮಾತುಗಾರ ಆಯನೂರು ಮಂಜುನಾಥ ರ ಪ್ರಚಾರದ ಭಾಷಣದಿಂದ ಕನಸು ಕಂಡಿದ್ದು ಸತ್ಯ.
  ಸಾಗರ ತಾಲ್ಲೂಕಿನಾದ್ಯಂತ ಮಾಜಿ ಉಪ ಮುಖ್ಯಮ೦ತ್ರಿ ಈಶ್ವರಪ್ಪರ ಜೊತೆ ಅನೇಕ ಸಾರ್ವಜನಿಕ ಪ್ರಚಾರ ಸಭೆಗಳನ್ನು ಬೇಳೂರು ಗೋಪಾಲಕೃಷ್ಣರ ಸಂಗಡ ನಾವೆಲ್ಲ (ಆಗಿನ ನಗರಸಭಾ ಸದಸ್ಯ ಮಂಜುನಾಥ, ಬಿ.ಆರ್. ಜಯಂತ್ ) ಭಾಗವಹಿಸಿದ್ದು ನೆನಪುಗಳು.
  ಯಡೂರಪ್ಪನವರು ದಾಖಲೆಯ ಅಂತರದಲ್ಲಿ ಗೆದ್ದರು ಮೋದಿಯವರು ಪ್ರದಾನಿ ಆದರು ನಾನು ಮೊದಲೇ ನಿರ್ದರಿಸಿದಂತೆ ನನ್ನ ಕ್ಷೇತ್ರ ರಾಜಕೀಯ ಹೊರತು ಪಡಿಸಿ ಬದಲಿಸಿಕೊಂಡೆ.
   ಇವತ್ತು 8 ವರ್ಷದ ಹಿಂದಿನ ಈ ಚುನಾವಣಾ ಪ್ರಚಾರದ ಪೋಟೋ ಆ ದಿನ ನೆನಪಿಸಿತು (ಯಡಜಿಗಳೆಮನೆ ಪ್ರಚಾರ ಸಭೆ ) ಅವತ್ತು ಮಧ್ಯಾಹ್ನ ವಾ ಶಂ ರಾಮಚಂದ್ರರ (ಈಗಿನ ಬೀಮನ ಕೋಣೆ PLDB ಅಧ್ಯಕ್ಷರು) ಸಹೋದರರ ಮನೆಯಲ್ಲಿ ಬೋಜನ ಮುಗಿಸಿದ ನಂತರದ ಪ್ರಚಾರ ಸಭೆ ಇದು.
  ಈಗ ಬೇಳೂರು ಕಾಂಗ್ರೇಸ್ ಸೇರಿ ಮುಂದಿನ ಚುನಾವಣೆ ತಯಾರಿಯಲ್ಲಿದ್ದಾರೆ, ಸಾಗರದ ಮಾಜಿ ನಗರ ಸಭಾ ಸದಸ್ಯ ಕೆ.ಎಲ್.ಮಂಜುನಾಥ್ ತಟಸ್ಥರಾಗಿದ್ದಾರೆ, ಯಡೂರಪ್ಪರು ಮುಖ್ಯಮಂತ್ರಿ ಆಗಿ ನಿವೃತ್ತರಾಗಿದ್ದಾರೆ, ಈಶ್ವರಪ್ಪನವರು ಮಾಜಿ ಮಂತ್ರಿಗಳಾಗಿದ್ದಾರೆ, ಅಯನೂರು ಮಂಜುನಾಥ ವಿದಾನಪರಿಷತ್ ಸದಸ್ಯರಾಗಿದ್ದಾರೆ, ಬಿ.ಆರ್.ಜಯಂತ್ ಕಾಂಗ್ರೇಸ್ ಸೇರಿ ತಾಲ್ಲೂಕ್ ಅಧ್ಯಕ್ಷರಾಗಿದ್ದಾರೆ.
  ಇದು ಎಂಟು ವರ್ಷದ ರಾಜಕೀಯ ಚಿತ್ರಣ.

Comments

Popular posts from this blog

# ಜುಟ್ಟು ಕಾಳಿಂಗ ಸಪ೯ದ ಆಸ್ತಿತ್ವದ ಮಲೆನಾಡಿನ ಮಿಥ್ಯೆ#

  # ಕಾಳಿ೦ಗ ಸಪ೯ದಲ್ಲಿ ಜುಟ್ಟು ಕಾಳಿಂಗ ಸಪ೯ ಅಂತ ಇದೇ ಅನ್ನುವ ಯಾರು ನೋಡದ ಸಪ೯ದ ಅಸ್ತಿತ್ವ#    ಮಲೆನಾಡಿನ ಹಳ್ಳಿಗಳಲ್ಲಿ, ಅದು ಕಾಳಿ೦ಗ ಸಪ೯ದ ವಾಸಸ್ಥಳದ ಪರಿಸರದಲ್ಲಿ ಜುಟ್ಟು ಕಾಳಿಂಗ ಸಪ೯ ಇದೆ ಅನ್ನುವ ಮಾತು ಆಗಾಗ್ಗೆ ಕೇಳುತ್ತಿರುತ್ತೇವೆ. ಆದರೆ ಆ ರೀತಿಯ ಹಾವು ಇಲ್ಲ ಎಂದು ಹಾವಿನ ಬಗ್ಗೆ ಸಂಶೋದನೆ ಮಾಡುವವರು, ಅರಣ್ಯ ಇಲಾಖೆಯವರು, ಹಾವು ಹಿಡಿಯುವವರು ಖಡಾಖಂಡಿತವಾಗಿ ಹೇಳುತ್ತಾರಾದರು, ಈ ವದಂತಿ ಹೇಗೆ ಹರಡಿದೆ?.    ಇದು ಒಂದು ಊರು ಹಳ್ಳಿಯಲ್ಲ ನಾನು ನೋಡಿದಂತೆ ಮಹಾರಾಷ್ಟ್ರದ ರತ್ನಗಿರಿಯಿ೦ದ ಕೇರಳದ ಕಾಸರಗೋಡಿನ ತನಕ ಜುಟ್ಟು ಕಾಳಿಂಗದ ಅನೇಕ ರೋಚಕ ಕಥೆ ಕೇಳಿದ್ದೇನೆ.   ಪ್ರತ್ಯಕ್ಷ ನೋಡಿದವರು ತಾವು ಎನ್ನುವ ಅನೇಕರಲ್ಲಿ ಮಾತಾಡಿದ್ದೇನೆ ಆದರೆ ಅದು ನಂಬಲಹ೯ ಮಾಹಿತಿ ಅನಿಸಲಿಲ್ಲ, ಒಂದು ರೀತಿ ಕಾಲ್ಪನಿಕ ತ್ರಿಲ್ಲರ್ ಕಥೆ ಅಷ್ಟೇ ಅನ್ನಬಹುದು.    ಜಡೆ ಕಾಳಿಂಗ ಸಪ೯ಕ್ಕೆ ರೋಷ ಜಾಸ್ತಿ, ಹೆಡೆ ಮೇಲೆ ಕೂದಲಿನ ಜುಟ್ಟು ಇರುತ್ತೆ, ಮನುಷ್ಯರನ್ನ ಕಂಡರೆ ಓಡಿಸಿಕೊಂಡು ಬರುತ್ತೆ, ಅದರಿಂದ ತಪ್ಪಿಸಿಕೊಳ್ಳಲು ಒಂದೇ ದಾರಿ ಅದೇನೆಂದರೆ ತಗ್ಗಿನ ಪ್ರದೇಶದಲ್ಲಿ ಓಡುವುದು.     ಯಾಕೆ೦ದರೆ ಓಡಿಸಿಕೊಂಡು ಬರುವ ಜುಟ್ಟು ಕಾಳಿಂಗದ ಜುಟ್ಟು, ಇಳಿಜಾರಿನಲ್ಲಿ ಅದರ ತಲೆಯಿ೦ದ ಇಳಿಜಾರಿಗೆ ಸರಿಯುವುದರಿಂದ  ಕಣ್ಣಿನ ಮೇಲೆ ಕೂದಲ ಜುಟ್ಟು ಮುಚ್ಚುವುದರಿಂದ ಕಣ್ಣು ಕಾಣುವುದಿಲ್ಲ, ಆಗಲೇ ತಪ್...

ಶರಾವತಿ ನದಿ ಉಗಮ ಸ್ಥಾನ ಅಂಬುತೀಥ೯.

ಇಡೀ ರಾಜ್ಯಕ್ಕೆ ವಿದ್ಯುತ್ ನೀಡುವ ಶರಾವತಿ ನದಿಯ ಉಗಮ ಸ್ಥಾನ ಅಂಬುತೀಥ೯, ಆರಗ ಸಮೀಪದ ತೀಥ೯ಳ್ಳಿ ತಾಲ್ಲೂಕಿನಲ್ಲಿದೆ( ಶಿವಮೊಗ್ಗ ಜಿಲ್ಲೆ)    ಅಂಬು ತೀಥ೯ದಲ್ಲಿ ಶ್ರೀ ರಾಮ ವನವಾಸದಲ್ಲಿದ್ದಾಗ ಸೀತಾ ಮಾತೆಗೆ ಪೂಜೆಗೆ ನೀರು ಸಿಗದಿದ್ದಾಗ ರಾಮ ತನ್ನ ಅಂಬಿನಿಂದ (ಬಿಲ್ಲಿನ ಬಾಣದಿಂದ) ನೆಲ ಸೀಳಿ ನೀರು ತಂದರೆ೦ದು ರಾಮಾಯಣದಲ್ಲಿ ಉಲ್ಲೇಖವಿದೆ, ಹಾಗಾಗಿ ಈ ಸ್ಥಳಕ್ಕೆ ಅಂಬುತೀಥ೯ ಎಂಬ ಹೆಸರು ಬ೦ತು ಎಂಬುದು ಸ್ಥಳ ಪುರಾಣ.    ಇಲ್ಲಿ ಸಣ್ಣ ತೊರೆಯಾಗಿ ಹುಟ್ಟುವ ನದಿ ಬಾಣದಿಂದ ಹುಟ್ಟಿದ್ದರಿಂದ ಶರಾವತಿ ಎ೦ಬ ಹೆಸರು ಪಡೆದು ಪೂವ೯ಕ್ಕೆ ಹರಿದು ನಂತರ ಪಶ್ಚಿಮ ಮುಖವಾಗಿ ತಿರುಗಿ ಹೊಸನಗರ ತಾಲ್ಲೂಕನ್ನ ದಾಟಿ ಸಾಗರ ತಾಲ್ಲೂಕಿನ ಜೋಗದಲ್ಲಿ ಜಲಪಾತವಾಗಿ ದಟ್ಟ ಕಾನನದ ಕಣಿವೆ ಮುಖಾಂತರ ಹರಿದು ಹೊನ್ನಾವರದಲ್ಲಿ ಅರಬ್ಬಿ ಸಮುದ್ರ ಸೇರುತ್ತದೆ.   ಈ ನದಿಗೆ ಮೊದಲಿಗೆ ಹೀರೇ ಬಾಸ್ಕರ ಎಂಬಲ್ಲಿ ನಂತರ ಲಿಂಗನಮಕ್ಕಿಯಲ್ಲಿ ಆಣೆಕಟ್ಟು ಕಟ್ಟಿ ರಾಜ್ಯಕ್ಕೆ ಜಲ ವಿದ್ಯುತ್ ನೀಡುತ್ತಿರುವುದರಿಂದ ಲಕ್ಷಾಂತರ ಎಕರೆ ಕಾಡು, ಜಮೀನು ಅನೇಕ ಊರು ಮುಳುಗಡೆ ಆಯಿತು ಸಾವಿರಾರು ಕುಟುಂಬಗಳು ಸಂತ್ರಸ್ಥರಾದದ್ದು ಇತಿಹಾಸ.    ಈ ನದಿ ಜೋಗದಲ್ಲಿ ದುಮುಕುವ ಜಲಪಾತ ವಿಶ್ವದ ಸುಂದರ ಜಲಪಾತದಲ್ಲಿ ಒಂದಾಗಿದೆ.    ಹಾಗಾಗಿ ಶರಾವತಿ ನದಿಯ ಉಗಮ ಸ್ಥಾನಕ್ಕೆ ಮಹತ್ವವಿದೆ, ಒಮ್ಮೆಯಾದರೂ ಈ ನದಿ ಮೂಲ ಸಂದಶಿ೯ಸಬೇಕು ಆದರೆ ಇಲ್ಲಿ ಶರಾವತಿ ವ...

HISTORICAL SAGAR MARIKAMBA JATRA.ಐತಿಹಾಸಿಕ ಸಾಗರದ ಮಾರಿಕಾಂಬಾ ಜಾತ್ರೆ

     ಸಾಗರದ ಮಾರಿಕಾಂಬಾ ಜಾತ್ರೆ ಐತಿಹಾಸಿಕ ಚರಿತ್ರೆಯಲ್ಲಿ ದಾಖಲೆ.        ಕನಾ೯ಟಕ ರಾಜ್ಯದಲ್ಲಿ ಎರೆಡು ಮಾರಿಕಾಂಬಾ ಜಾತ್ರೆಗಳು ಪ್ರಸಿದ್ಧಿ ಪಡೆದಿದೆ ಅದು ಉತ್ತರ ಕನ್ನಡ ಜಿಲ್ಲೆಯ ಸಿಸಿ೯ಯದ್ದು ಮತ್ತು ಶಿವಮೊಗ್ಗ ಜಿಲ್ಲೆಯ ಸಾಗರದ್ದು.    ಪ್ರತಿ ಮೂರು ವಷ೯ಕೆ ಈ ಜಾತ್ರೆ ಆಚರಿಸಲಾಗುತ್ತೆ ಶೂದ್ರ ವಗ೯ದವರು ಭಯ ಮತ್ತು ಭಕ್ತಿಯಿಂದ ಕುರಿ ಕೋಳಿ ಬಲಿ ನೀಡುವ ಪರಂಪರೆ ಇದೆ.ಮಂಗಳವಾರ ಮೇಲು ಜಾತಿಯ ಜನರ ಪೂಜೆ ದೇವಿಯ ತವರು ಮನೆಯಲ್ಲಿ ನಡೆಯುತ್ತದೆ ನಂತರ ರಾತ್ರಿ ಗಂಡನ ಸೇರುವ ಮಾರಿಗೆ ಶೂದ್ರರ ಪೂಜೆ, ಬಲಿ ಮೀಸಲು.    ಮೊದಲೆಲ್ಲ ಮಾರಿಯಮ್ಮನಿಗೆ ಕೊಣನ ಬಲಿ ನೀಡುತ್ತಿದ್ದರು ಈಗ ಇದು ಕಾನೂನು ಪ್ರಕಾರ ನಿಷಿದ್ಧ ಆದರೆ ಈ ಆಚಾರಣೆ ಗುಪ್ತವಾಗಿ ಬೇರೆ ಕಡೆ ನಡೆಸಲಾಗುತ್ತೆ ಅನ್ನುತ್ತಾರೆ.    ಸಾಗರದ ಮಾರಿಕಾ0ಬಾ ಜಾತ್ರೆ ಜಾತ್ರೆಯಿ೦ದ ಜಾತ್ರೆಗೆ ಅದೂರಿಯಾಗಿ ನಡೆಯುತ್ತದೆ, ಕೋಟ್ಯಾoತರ ಹಣದ ವಹಿವಾಟು ಕೂಡ, ಮೊದಲೆಲ್ಲ ಹಣದ ಅಪರಾ ತಪರ ಆಗುತ್ತಿದೆ ಎಂಬ ಗುಲ್ಲು ಇತ್ತು ಆದರೆ ಈಗೆಲ್ಲ ಪಾರದಶ೯ಕವಾಗಿದೆ ಆದರೂ ಈ ಬಾರಿಯ 2017ರ ಜಾತ್ರೆಯಲ್ಲಿ ಅವ್ಯವಹಾರದ ಆರೋಪ ಮಾಡಲಾಗಿದೆ ಈ ವಿಚಾರ ಇಲ್ಲಿ ಅಪ್ರಸ್ತುತ ಆದರೂ ಈ ಬಗ್ಗೆ ಬರೆಯಲು ಕಾರಣ ಕೆಳದಿ ಅರಸರ ಕಾಲದಲ್ಲಿ ಅಂದರೆ 350 ವಷ೯ದ ಹಿಂದೆಯೂ ರಾಜರಿಗೆ ಸಾಗರದ ಮಾರಿಕಾಂಬಾ ಜಾತ್ರೆಯಲ್ಲಿ ಸಾವ೯ಜನಿಕರಿಂದ ಸಂಗ್ರಹಿಸಿದ ಜಾತ...