Skip to main content

Blog number 898. ತಲವಾಟ ಪುರುಶೋತ್ತಮ್ ಶಿವಮೊಗ್ಗ ಜಿಲ್ಲೆಯೆ ಎಲೆ ಮರೆಯ ಕಾಯಿಯಂತ ಪ್ರತಿಬಾನ್ಸಿತ ರಂಗಕರ್ಮಿ, ನಟ ಮತ್ತು ಸಹೃದಯಿ ಕಲಾವಿದರು, ಇವತ್ತು ನನ್ನ ಅತಿಥಿ.

#ಇವತ್ತಿನ_ನನ್ನ_ಅತಿಥಿ_ನೀನಾಸಂ_ಶಿಕ್ಷಕರಾಗಿದ್ದ_ಖ್ಯಾತ_ರಂಗಭೂಮಿ_ಸಿನಿಮಾ_ಕಲಾವಿದ_ತಲವಾಟ_ಪುರುಶೋತ್ತಮ್ 

#ಕನ್ನಡದ_ಎಲ್ಲಾ_ಪ್ರಖ್ಯಾತ_ಸಿನಿ_ನಟ_ನಿರ್ದೇಶಕರ_ಆಪ್ತರು.

#ಪ್ರಖ್ಯಾತಿ_ರಂಗಕರ್ಮಿ_ಖ್ಯಾತನಟಿ_ಮಾಲತಿ_ಮೇಡಂರ_ಪತಿ.

  ಪ್ರಖ್ಯಾತ ರಂಗಕರ್ಮಿ, ನಟಿ  ದೆಹಲಿ NSD ನಾಟಕ ಶಾಲೆ ಪಧವೀದರೆ ಸಾಗರದ ಜೈ ಹಿಂದ್ ಬೇಕರಿ ಕುಟುಂಬದ ಮಾಲತಿ ಮೇಡಂ ಸಾಗರದಿಂದ ಶಿವಮೊಗ್ಗ ಮಾರ್ಗದಲ್ಲಿ ಸಂಚರಿಸುವ ಸಂದರ್ಭದಲ್ಲಿ ಅವರು ಕಾಫಿಗಾಗಿ ನಮ್ಮ ಸಂಸ್ಥೆಯ ಮಲ್ಲಿಕಾ ವೆಜ್ ಗೆ ಬರುತ್ತಿದ್ದರು.
  ಅವರಿಗೆ ಎಲ್ಲಾ ರೀತಿಯ ಸಹಕಾರ ನೀಡುವಂತೆ ನನ್ನ ಎಲ್ಲಾ ಸಿಬ್ಬಂದಿಗೆ ಮೊದಲೇ ತಿಳಿಸಿದ್ದರಿಂದ ಮಾಲತಿ ಮೇಡಂ ನಮ್ಮ ಕಾಟೇಜ್, ಗಾರ್ಡನ್ ಅಥವ ಲಾಡ್ಜ್ ಆಫೀಸ್, ಕಲ್ಯಾಣ ಮಂಟಪ ಅಲ್ಲೆಲ್ಲ ಓಡಾಡುತ್ತಿದ್ದರು ಅವರಿಗೆ ಇಷ್ಟವಾದ ಜಾಗದಲ್ಲಿ ಕುರ್ಚಿ ಹಾಕಿ ಕೊಡುತ್ತಿದ್ದರು ಮತ್ತು ಅವರಿಷ್ಟದ ಸಕ್ಕರೆ ರಹಿತ ಕಾಫಿ ಅಲ್ಲಿಗೆ ತಲುಪಿಸುತ್ತಿದ್ದರು, ಮಾಲತಿ ಮೇಡಂ ನನ್ನ ಸಿಬ್ಬಂದಿ ಕಷ್ಟ ಸುಖ ವಿಚಾರಿಸಿ ಕೈ ತುಂಬಾ ಟಿಪ್ಸ್ ನೀಡುವ ದಾರಾಳಿ ಕೂಡ.
  ಕೆಲವೊಮ್ಮೆ ಪತಿ ತಲವಾಟ ಪುರುಶೋತ್ತಮರೂ ಜೊತೆಯಾಗಿ ಬರುತ್ತಿದ್ದರು, ನನ್ನ ಲಾಡ್ಜ್ ಹಿಂಬಾಗದ ಕಾಟೇಜ್ ನೋಡಿ ಪುರುಶೋತ್ತಮರು ಹೇಳಿದ್ದು ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲೇ ಹಳ್ಳಿಯನ್ನು ನಿರ್ಮಿಸಿದ್ದೀರಿ ಅಂದಿದ್ದರು.
  ಮಾಲತಿ ಮೇಡಂರ ನಿರ್ಗಮನ ಸಹೃದಯಿ ತಲವಾಟ ಪುರುಷೋತ್ತಮರಿಗೆ ಅವರಿಗೆ ಅವರ ಜೀವನದಲ್ಲಿ ದೊಡ್ಡ ನಿರ್ವಾತ ಸೃಷ್ಠಿ ಮಾಡಿತು.
  ಡಾ. ಮಾವಿನ ಕುರ್ವೆ ಸಂಪಾದಕತ್ವದಲ್ಲಿ ಎಸ್.ಮಾಲತಿ ನೆನಪಿನಲ್ಲಿ #ಬಹುಮುಖಿ ಎಂಬ ಪುಸ್ತಕ ಪುರುಶೋತ್ತಮರೇ ನನಗೆ ತಲುಪಿಸಿದ್ದರು.
  ಇವತ್ತು ಇವರ ಊರಿನ ಇವರ ಮಿತ್ರ ನಿವೃತ್ತ ಬ್ಯಾಂಕ್ ವ್ಯವಸ್ಥಾಪಕರಾದ #ಮೃತ್ಯುಂಜಯ_ತಲವಾಟರ ಜೊತೆ ಶಿವಮೊಗ್ಗದಿಂದ ಬರುವಾಗ ಬೇಟಿ ಆದರು.
  ಅವರ ಇತ್ತೀಚಿನ ಸಿನೆಮಾ ರವಿಚಂದ್ರನ್ ಜೊತೆ ಆಭಿನಯಿಸಿದ್ದು ತಿಳಿಸಿದರು.
  ನನ್ನ ಕಥಾ ಸಂಕಲನ #ಬಿಲಾಲಿ_ಬಿಲ್ಲಿ_ಅಭ್ಯಂಜನ ಇವರಿಗೆ ನೀಡಿದೆ ಅವರ ಜೀವನದ ಬಗ್ಗೆ ಅವರೇ ಮಾತಾಡಿದ ವಿಡಿಯೋ ಮಾಡಿ ಇಲ್ಲಿ ಲಗತ್ತಿಸಿದ್ದೇನೆ ಅದರಲ್ಲಿ ಅವರು ಅವರ ಜೀವನದ ಹೆಜ್ಜೆಗಳ ಸಂಕ್ಷಿಪ್ತ ವಿವರ ನೀಡಿದ್ದಾರೆ.
  ಅವರ ಸಂಪರ್ಕ ಸಂಖ್ಯೆ 94803 96217

Comments

Popular posts from this blog

# ಜುಟ್ಟು ಕಾಳಿಂಗ ಸಪ೯ದ ಆಸ್ತಿತ್ವದ ಮಲೆನಾಡಿನ ಮಿಥ್ಯೆ#

  # ಕಾಳಿ೦ಗ ಸಪ೯ದಲ್ಲಿ ಜುಟ್ಟು ಕಾಳಿಂಗ ಸಪ೯ ಅಂತ ಇದೇ ಅನ್ನುವ ಯಾರು ನೋಡದ ಸಪ೯ದ ಅಸ್ತಿತ್ವ#    ಮಲೆನಾಡಿನ ಹಳ್ಳಿಗಳಲ್ಲಿ, ಅದು ಕಾಳಿ೦ಗ ಸಪ೯ದ ವಾಸಸ್ಥಳದ ಪರಿಸರದಲ್ಲಿ ಜುಟ್ಟು ಕಾಳಿಂಗ ಸಪ೯ ಇದೆ ಅನ್ನುವ ಮಾತು ಆಗಾಗ್ಗೆ ಕೇಳುತ್ತಿರುತ್ತೇವೆ. ಆದರೆ ಆ ರೀತಿಯ ಹಾವು ಇಲ್ಲ ಎಂದು ಹಾವಿನ ಬಗ್ಗೆ ಸಂಶೋದನೆ ಮಾಡುವವರು, ಅರಣ್ಯ ಇಲಾಖೆಯವರು, ಹಾವು ಹಿಡಿಯುವವರು ಖಡಾಖಂಡಿತವಾಗಿ ಹೇಳುತ್ತಾರಾದರು, ಈ ವದಂತಿ ಹೇಗೆ ಹರಡಿದೆ?.    ಇದು ಒಂದು ಊರು ಹಳ್ಳಿಯಲ್ಲ ನಾನು ನೋಡಿದಂತೆ ಮಹಾರಾಷ್ಟ್ರದ ರತ್ನಗಿರಿಯಿ೦ದ ಕೇರಳದ ಕಾಸರಗೋಡಿನ ತನಕ ಜುಟ್ಟು ಕಾಳಿಂಗದ ಅನೇಕ ರೋಚಕ ಕಥೆ ಕೇಳಿದ್ದೇನೆ.   ಪ್ರತ್ಯಕ್ಷ ನೋಡಿದವರು ತಾವು ಎನ್ನುವ ಅನೇಕರಲ್ಲಿ ಮಾತಾಡಿದ್ದೇನೆ ಆದರೆ ಅದು ನಂಬಲಹ೯ ಮಾಹಿತಿ ಅನಿಸಲಿಲ್ಲ, ಒಂದು ರೀತಿ ಕಾಲ್ಪನಿಕ ತ್ರಿಲ್ಲರ್ ಕಥೆ ಅಷ್ಟೇ ಅನ್ನಬಹುದು.    ಜಡೆ ಕಾಳಿಂಗ ಸಪ೯ಕ್ಕೆ ರೋಷ ಜಾಸ್ತಿ, ಹೆಡೆ ಮೇಲೆ ಕೂದಲಿನ ಜುಟ್ಟು ಇರುತ್ತೆ, ಮನುಷ್ಯರನ್ನ ಕಂಡರೆ ಓಡಿಸಿಕೊಂಡು ಬರುತ್ತೆ, ಅದರಿಂದ ತಪ್ಪಿಸಿಕೊಳ್ಳಲು ಒಂದೇ ದಾರಿ ಅದೇನೆಂದರೆ ತಗ್ಗಿನ ಪ್ರದೇಶದಲ್ಲಿ ಓಡುವುದು.     ಯಾಕೆ೦ದರೆ ಓಡಿಸಿಕೊಂಡು ಬರುವ ಜುಟ್ಟು ಕಾಳಿಂಗದ ಜುಟ್ಟು, ಇಳಿಜಾರಿನಲ್ಲಿ ಅದರ ತಲೆಯಿ೦ದ ಇಳಿಜಾರಿಗೆ ಸರಿಯುವುದರಿಂದ  ಕಣ್ಣಿನ ಮೇಲೆ ಕೂದಲ ಜುಟ್ಟು ಮುಚ್ಚುವುದರಿಂದ ಕಣ್ಣು ಕಾಣುವುದಿಲ್ಲ, ಆಗಲೇ ತಪ್...

ಶರಾವತಿ ನದಿ ಉಗಮ ಸ್ಥಾನ ಅಂಬುತೀಥ೯.

ಇಡೀ ರಾಜ್ಯಕ್ಕೆ ವಿದ್ಯುತ್ ನೀಡುವ ಶರಾವತಿ ನದಿಯ ಉಗಮ ಸ್ಥಾನ ಅಂಬುತೀಥ೯, ಆರಗ ಸಮೀಪದ ತೀಥ೯ಳ್ಳಿ ತಾಲ್ಲೂಕಿನಲ್ಲಿದೆ( ಶಿವಮೊಗ್ಗ ಜಿಲ್ಲೆ)    ಅಂಬು ತೀಥ೯ದಲ್ಲಿ ಶ್ರೀ ರಾಮ ವನವಾಸದಲ್ಲಿದ್ದಾಗ ಸೀತಾ ಮಾತೆಗೆ ಪೂಜೆಗೆ ನೀರು ಸಿಗದಿದ್ದಾಗ ರಾಮ ತನ್ನ ಅಂಬಿನಿಂದ (ಬಿಲ್ಲಿನ ಬಾಣದಿಂದ) ನೆಲ ಸೀಳಿ ನೀರು ತಂದರೆ೦ದು ರಾಮಾಯಣದಲ್ಲಿ ಉಲ್ಲೇಖವಿದೆ, ಹಾಗಾಗಿ ಈ ಸ್ಥಳಕ್ಕೆ ಅಂಬುತೀಥ೯ ಎಂಬ ಹೆಸರು ಬ೦ತು ಎಂಬುದು ಸ್ಥಳ ಪುರಾಣ.    ಇಲ್ಲಿ ಸಣ್ಣ ತೊರೆಯಾಗಿ ಹುಟ್ಟುವ ನದಿ ಬಾಣದಿಂದ ಹುಟ್ಟಿದ್ದರಿಂದ ಶರಾವತಿ ಎ೦ಬ ಹೆಸರು ಪಡೆದು ಪೂವ೯ಕ್ಕೆ ಹರಿದು ನಂತರ ಪಶ್ಚಿಮ ಮುಖವಾಗಿ ತಿರುಗಿ ಹೊಸನಗರ ತಾಲ್ಲೂಕನ್ನ ದಾಟಿ ಸಾಗರ ತಾಲ್ಲೂಕಿನ ಜೋಗದಲ್ಲಿ ಜಲಪಾತವಾಗಿ ದಟ್ಟ ಕಾನನದ ಕಣಿವೆ ಮುಖಾಂತರ ಹರಿದು ಹೊನ್ನಾವರದಲ್ಲಿ ಅರಬ್ಬಿ ಸಮುದ್ರ ಸೇರುತ್ತದೆ.   ಈ ನದಿಗೆ ಮೊದಲಿಗೆ ಹೀರೇ ಬಾಸ್ಕರ ಎಂಬಲ್ಲಿ ನಂತರ ಲಿಂಗನಮಕ್ಕಿಯಲ್ಲಿ ಆಣೆಕಟ್ಟು ಕಟ್ಟಿ ರಾಜ್ಯಕ್ಕೆ ಜಲ ವಿದ್ಯುತ್ ನೀಡುತ್ತಿರುವುದರಿಂದ ಲಕ್ಷಾಂತರ ಎಕರೆ ಕಾಡು, ಜಮೀನು ಅನೇಕ ಊರು ಮುಳುಗಡೆ ಆಯಿತು ಸಾವಿರಾರು ಕುಟುಂಬಗಳು ಸಂತ್ರಸ್ಥರಾದದ್ದು ಇತಿಹಾಸ.    ಈ ನದಿ ಜೋಗದಲ್ಲಿ ದುಮುಕುವ ಜಲಪಾತ ವಿಶ್ವದ ಸುಂದರ ಜಲಪಾತದಲ್ಲಿ ಒಂದಾಗಿದೆ.    ಹಾಗಾಗಿ ಶರಾವತಿ ನದಿಯ ಉಗಮ ಸ್ಥಾನಕ್ಕೆ ಮಹತ್ವವಿದೆ, ಒಮ್ಮೆಯಾದರೂ ಈ ನದಿ ಮೂಲ ಸಂದಶಿ೯ಸಬೇಕು ಆದರೆ ಇಲ್ಲಿ ಶರಾವತಿ ವ...

HISTORICAL SAGAR MARIKAMBA JATRA.ಐತಿಹಾಸಿಕ ಸಾಗರದ ಮಾರಿಕಾಂಬಾ ಜಾತ್ರೆ

     ಸಾಗರದ ಮಾರಿಕಾಂಬಾ ಜಾತ್ರೆ ಐತಿಹಾಸಿಕ ಚರಿತ್ರೆಯಲ್ಲಿ ದಾಖಲೆ.        ಕನಾ೯ಟಕ ರಾಜ್ಯದಲ್ಲಿ ಎರೆಡು ಮಾರಿಕಾಂಬಾ ಜಾತ್ರೆಗಳು ಪ್ರಸಿದ್ಧಿ ಪಡೆದಿದೆ ಅದು ಉತ್ತರ ಕನ್ನಡ ಜಿಲ್ಲೆಯ ಸಿಸಿ೯ಯದ್ದು ಮತ್ತು ಶಿವಮೊಗ್ಗ ಜಿಲ್ಲೆಯ ಸಾಗರದ್ದು.    ಪ್ರತಿ ಮೂರು ವಷ೯ಕೆ ಈ ಜಾತ್ರೆ ಆಚರಿಸಲಾಗುತ್ತೆ ಶೂದ್ರ ವಗ೯ದವರು ಭಯ ಮತ್ತು ಭಕ್ತಿಯಿಂದ ಕುರಿ ಕೋಳಿ ಬಲಿ ನೀಡುವ ಪರಂಪರೆ ಇದೆ.ಮಂಗಳವಾರ ಮೇಲು ಜಾತಿಯ ಜನರ ಪೂಜೆ ದೇವಿಯ ತವರು ಮನೆಯಲ್ಲಿ ನಡೆಯುತ್ತದೆ ನಂತರ ರಾತ್ರಿ ಗಂಡನ ಸೇರುವ ಮಾರಿಗೆ ಶೂದ್ರರ ಪೂಜೆ, ಬಲಿ ಮೀಸಲು.    ಮೊದಲೆಲ್ಲ ಮಾರಿಯಮ್ಮನಿಗೆ ಕೊಣನ ಬಲಿ ನೀಡುತ್ತಿದ್ದರು ಈಗ ಇದು ಕಾನೂನು ಪ್ರಕಾರ ನಿಷಿದ್ಧ ಆದರೆ ಈ ಆಚಾರಣೆ ಗುಪ್ತವಾಗಿ ಬೇರೆ ಕಡೆ ನಡೆಸಲಾಗುತ್ತೆ ಅನ್ನುತ್ತಾರೆ.    ಸಾಗರದ ಮಾರಿಕಾ0ಬಾ ಜಾತ್ರೆ ಜಾತ್ರೆಯಿ೦ದ ಜಾತ್ರೆಗೆ ಅದೂರಿಯಾಗಿ ನಡೆಯುತ್ತದೆ, ಕೋಟ್ಯಾoತರ ಹಣದ ವಹಿವಾಟು ಕೂಡ, ಮೊದಲೆಲ್ಲ ಹಣದ ಅಪರಾ ತಪರ ಆಗುತ್ತಿದೆ ಎಂಬ ಗುಲ್ಲು ಇತ್ತು ಆದರೆ ಈಗೆಲ್ಲ ಪಾರದಶ೯ಕವಾಗಿದೆ ಆದರೂ ಈ ಬಾರಿಯ 2017ರ ಜಾತ್ರೆಯಲ್ಲಿ ಅವ್ಯವಹಾರದ ಆರೋಪ ಮಾಡಲಾಗಿದೆ ಈ ವಿಚಾರ ಇಲ್ಲಿ ಅಪ್ರಸ್ತುತ ಆದರೂ ಈ ಬಗ್ಗೆ ಬರೆಯಲು ಕಾರಣ ಕೆಳದಿ ಅರಸರ ಕಾಲದಲ್ಲಿ ಅಂದರೆ 350 ವಷ೯ದ ಹಿಂದೆಯೂ ರಾಜರಿಗೆ ಸಾಗರದ ಮಾರಿಕಾಂಬಾ ಜಾತ್ರೆಯಲ್ಲಿ ಸಾವ೯ಜನಿಕರಿಂದ ಸಂಗ್ರಹಿಸಿದ ಜಾತ...