Skip to main content

Blog number 905. ಕರ್ನಾಟಕ ಸರ್ಕಾರದ ಸರ್ಕಾರಿ ನೌಕರರಿಗೆ ನೀಡುವ ಜಿಲ್ಲಾವಾರು ಸರ್ವೋತ್ತಮ ಪ್ರಶಸ್ತಿಗೆ ಭಾಜನರಾಗಿರುವ ಶಿವಮೊಗ್ಗ ಜಿಲ್ಲಾ ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ನಾಗೇಂದ್ರ ಎಪ್ ಹೊನ್ನಾಳಿ ಅವರಿಗೆ ಅಭಿನಂದನೆಗಳು

#ಅಬಿನಂದನೆಗಳು_ಡಾಕ್ಟರ್_ನಾಗೇಂದ್ರ_ಹೊನ್ನಾಳಿಯವರಿಗೆ.

#ಈ_ಸಾಲಿನ_ಸರ್ಕಾರದ_ಸವೋ೯ತ್ತಮ_ಪ್ರಶಸ್ತಿ_ಶಿವಮೊಗ್ಗದಅಡಿಷನಲ್_ಡೆಪ್ಯೂಟಿಕಮಿಷನರ್_ನಾಗೇಂದ್ರ_ಹೊನ್ನಾಳಿಯವರಿಗೆ.

#ಮುಖ್ಯಮಂತ್ರಿಗಳಿಂದ_ಪ್ರಶಸ್ತಿಫಲಕ_ಸ್ಪೀಕರಿಸಲಿದ್ದಾರೆ.

#ಇವರು_ಸೇವೆ_ಸಲ್ಲಿಸಿದ_ಎಲ್ಲಾಕಡೆಯೂ_ಅತ್ಯುತ್ತಮ_ಕೆಲಸಗಾರರೆಂದೇ_ಜನ_ಗುರುತಿಸುತ್ತಾರೆ.

    ಕರ್ನಾಟಕ ರಾಜ್ಯ ಸರ್ಕಾರ ಪ್ರತಿ ಜಿಲ್ಲೆಯ ಒಬ್ಬ ಅತ್ಯುತ್ತಮವಾಗಿ ಸೇವೆ ಸಲ್ಲಿಸುವ ಸರ್ಕಾರಿ ನೌಕರರನ್ನು ಸರ್ವೋತ್ತಮ ಪ್ರಶಸ್ತಿಗೆ ಆಯ್ಕೆ ಮಾಡುತ್ತದೆ.
   ಐವತ್ತು ಸಾವಿರ ನಗದು, ಪ್ರಶಸ್ತಿ - ಪಲಕದ ಈ ಪುರಸ್ಕಾರ ಸರ್ಕಾರಿ ನೌಕರರಲ್ಲಿ ಒಂದು ಪ್ರತಿಷ್ಠಿತ ಪ್ರಶಸ್ತಿ ಇದನ್ನು ಸ್ವತಃ ಮುಖ್ಯಮಂತ್ರಿಗಳೇ ಸರ್ವೋತ್ತಮ ಪ್ರಶಸ್ತಿಗೆ ಆಯ್ಕೆ ಆದವರಿಗೆ ಸನ್ಮಾನಿಸಿ ವಿತರಿಸಲಿದ್ದಾರೆ.
  ಶಿವಮೊಗ್ಗ ಜಿಲ್ಲೆಯ ಹೆಚ್ಚುವರಿ ಜಿಲ್ಲಾದಿಕಾರಿ (Additional Deputy Commissioner) ಡಾ.ನಾಗೇಂದ್ರ ಎಪ್. ಹೊನ್ನಾಳಿಯವರನ್ನು ಈ ಸಾಲಿನ ಸರ್ವೋತ್ತಮ ಪ್ರಶಸ್ತಿಗೆ ಆಯ್ಕೆ ಮಾಡಿದ್ದಾರೆ.
   ಹಾವೇರಿ ಜಿಲ್ಲೆಯ ಅತ್ಯಂತ ಬಡ ಕುಟುಂಬದ ಪಕೀರಪ್ಪ ಈರಪ್ಪರ ಪುತ್ರ, ವಿದ್ಯಾರ್ಥಿ ಜೀವನದಲ್ಲಿ ಪ್ರತಿಭಾವಂತ ವಿದ್ಯಾರ್ಥಿ ಆಗಿದ್ದ ನಾಗೇಂದ್ರ ಹೊನ್ನಾಳಿಗೆ ಯಾವುದೇ ಅನುಕೂಲ ಇರಲಿಲ್ಲ ಅಷ್ಟೇಕೆ ಇವರಿಗೆ ಸರಿಯಾದ ಮಾರ್ಗದರ್ಶನ ನೀಡುವವರೂ ಇರಲಿಲ್ಲ.
   ಸ್ವಂತ ಪರಿಶ್ರಮದಿಂದ ವ್ಯಾಸಂಗ ಮಾಡಿ ದೆಹಲಿಯ ಜೆ.ಎನ್.ಯೂ ನಲ್ಲಿ ಪಿ.ಹೆಚ್.ಡಿ ಮಾಡಿದವರು.
  ಇವರಿಗೆ ಐ.ಎ.ಎಸ್ ಮಾಡಬೇಕೆಂಬ ಅದಮ್ಯ ಆಸೆಯ ಗುರಿ ಇತ್ತು ಆದರೆ ಕೆ.ಎ.ಎಸ್.ಮಾಡಿ ತಹಸೀಲ್ದಾರ್ ಹುದ್ದೆ ಅಲಂಕರಿಸಿದ ಮೇಲೆ ಸಮಯಾವಕಾಶದ ಕೊರತೆ ಮತ್ತು ಕೆಲಸದ ಒತ್ತಡದಲ್ಲಿ ಸಾಧ್ಯವಾಗಲಿಲ್ಲ.
    ತಹಸೀಲ್ದಾರ್ ನಂತರ ಅನೇಕ ವಿವಿದ ಹುದ್ದೆಗಳನ್ನು ಕಳಂಕ ರಹಿತವಾಗಿ ನಿರ್ವಹಿಸಿದರು, ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನಲ್ಲಿ ತಹಸೀಲ್ದಾರ್, ಶಿವಮೊಗ್ಗದ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ ಚೀಪ್ ಅಡ್ಮಿನಿಸ್ಟ್ರೇಷನ್ ಆಫೀಸರ್, ಮಲೆನಾಡು ಅಭಿವೃದ್ದಿ ಮಂಡಳಿ ಕಾಯ೯ದರ್ಶಿಗಳಾಗಿ, ಶಿವಮೊಗ್ಗ ಜಿಲ್ಲಾ ನಗರ ಯೋಜನಾ ಕೇಂದ್ರದ ಜಿಲ್ಲಾ ಯೋಜನಾಧಿಕಾರಿಗಳಾಗಿ, ಉತ್ತರಕನ್ನಡ ಜಿಲ್ಲೆಯ ಸಿರ್ಸಿಯಲ್ಲಿ ಉಪ ವಿಭಾಗಧಿಕಾರಿಗಳಾಗಿ, ಹುಕ್ಕೇರಿ, ಹಾನಗಲ್ ನಲ್ಲಿಯೂ ಕೆಲಸ ನಿರ್ವಹಿಸಿದ್ದಾರೆ.
   ಇವರ ವಿಶೇಷ ಅಂದರೆ ಜನಪ್ರತಿನಿಧಿಗಳನ್ನು, ತಮ್ಮ ಮೇಲಾಧಿಕಾರಿಗಳನ್ನು, ತಮ್ಮ ಸಿಬ್ಬಂದಿಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಸಾವ೯ಜನಿಕರ ಮತ್ತು ಪತ್ರಕರ್ತರ ಅಭಿಪ್ರಾಯಕ್ಕೆ ಒತ್ತುಕೊಟ್ಟು ಸರ್ಕಾರದ ಕೆಲಸ ಸುರಳಿತವಾಗಿ ನಡೆಸುವ ಇವರು ಕಾನೂನು ಕಾಯ್ದೆಗೆ ಯಾವ ರೀತಿಯಲ್ಲೂ ಚ್ಯುತಿ ಬಾರದಂತೆ ಜವಾಬ್ದಾರಿ ವಹಿಸುತ್ತಾರಾದ್ದರಿಂದ ಇವರ ಮೇಲೆ ಕಪ್ಪು ಚುಕ್ಕೆ ಇಲ್ಲ.
   ಈ ಸಾಲಿನ ರಾಜ್ಯ ಸರ್ಕಾರದ ಪುರುಶೋತ್ತಮ ಪ್ರಶಸ್ತಿಗೆ ಇವರ ಆಯ್ಕೆ ಸರ್ವೋತ್ತಮ ಆಯ್ಕೆ.
  ಪ್ರತಿಷ್ಟಿತ ಪುರುಶೋತ್ತಮ ಪ್ರಶಸ್ತಿ ವಿಜೇತ ಡಾ.ನಾಗೇಂದ್ರ ಎಪ್ ಹೊನ್ನಾಳಿಯವರಿಗೆ ಅಭಿನಂದನೆಗಳು.

Comments

Popular posts from this blog

Blog number 1782. ಅರಳಸುರಳಿಯ ರಾಘವೇಂದ್ರ ಕೇಕೋಡರ ಕುಟುಂಬದ ತಪ್ಪು ನಿರ್ದಾರದ ದುರಂತ.

#ತೀರ್ಥಹಳ್ಳಿಯ_ಅರಳಸುರಳಿಯ_ಒಂದೇ_ಕುಟುಂಬದ_ನಾಲ್ವರು_ಮೃತರಾದ_ರಹಸ್ಯವೇನು? #ಈ_ಬಗ್ಗೆ_ಆ_ಊರಿನ_ಸಮೀಪದ_ಈ_ಕುಟುಂಬದ_ಪರಿಚಯ_ಇರುವವರಿಗೆ_ವಿಚಾರಿಸಿದ್ದೆ. #ಅವರು_ಈ_ಘಟನೆ_ಬಗ್ಗೆ_ಸವಿಸ್ತಾರವಾಗಿ_ಲಿಖಿತ_ಲೇಖನ_ಬರೆದಿದ್ದಾರೆ. #ಅವರ_ವಿನಂತಿ_ಅವರ_ಹೆಸರು_ಬಹಿರಂಗಗೊಳಿಸ_ಬಾರದು. #ಆದ್ದರಿಂದ_ಈ_ಲೇಖನ_ಪೋಸ್ಟ್_ಮಾಡಬಾರದೆಂದಿದ್ದೆ_ಆದರೆ_ಇದು_ಮಲೆನಾಡಿಗರ_ಮನೆ_ಮನೆಯ_ಕಥೆ #ಆದ್ದರಿಂದ_ಇಲ್ಲಿ_ಪೋಸ್ಟ್_ಮಾಡಿದೆ.    ಇಲ್ಲಿ ತಪ್ಪು ಯಾರದ್ದೂ ಇಲ್ಲ... ಪಶ್ಚಾತ್ತಾಪದ ಪ್ರಾಯಶ್ಚಿತ ಕೇಳಲು ಅವರಾರು ಇಲ್ಲ .....ಆದರೆ ಈ ರೀತಿ ಜೀವ ತ್ಯಾಗ ಮಾಡುವ ಆತುರದ ಕೆಟ್ಟ ನಿರ್ದಾರ ಮಾತ್ರ ಸರಿ ಅಲ್ಲ.     ಇವರ ಅಣ್ಣ ಆರ್.ಎಸ್.ಎಸ್. ಪ್ರಚಾರಕರಾಗಿ ದೆಹಲಿಯಲ್ಲಿ ಏಳು ವಷ೯ ಮೋದಿ ಜೊತೆ ಒಂದೇ ಕೋಣೆ ಹಂಚಿಕೊಂಡವರು, ಇನ್ನೊಬ್ಬ ಸಹೋದರ ಮೂಳೆ ತಜ್ಞರಾಗಿ ಶಿವಮೊಗ್ಗದಲ್ಲಿ ಆಸ್ಪತ್ರೆ ಮಾಡಿಕೊಂಡಿದ್ದಾರೆ.   #ದೀರ್ಘವಾದರೂ_ಪೂರ್ಣ_ಲೇಖನ_ಓದಿ   #ಹೀಗೊಂದು_ಸುಕುಟುಂಬ_ಆತ್ಮಾಘಾತ_ಮತ್ತು_ತದನಂತರದ_ಸಹಾಗಮನ.... ಮೂಡಣದಲ್ಲಿ ರವಿ ಮೂಡಲು ಅಣಿ ಯಾಗುತ್ತಿಧ್ದ .. ಹಾದಿಗಣಪತಿ ದೇವರು ಗರ್ಭಗುಡಿಯ ನಂದಾದೀಪದ ಮಂದ ಬೆಳಕಿನಲ್ಲಿ ತನ್ನ ಗುಡಿಯ ಎದುರಿನ ತಗ್ಗಿನಲ್ಲಿದ್ದ  ರಾಘವೇಂದ್ರ ಕೇಕೋಡರ ಮನೆಯನ್ನು ಎವೆಯಕ್ಕದೇ ನೋಡುತ್ತಲಿದ್ದ... ಊರ ಎಲ್ಲಾ ಮನೆಯಂತೆ ಆ ಮನೆಯಲ್ಲೂ ಆ ಬೆಳಗಿನಲ್ಲಿ ಮನೆಯೊಡತಿ ನಾಗರತ್ನಕ್ಕ ಆ ಸಮಯದಲ್ಲಿ ದೇವರಿಗೆ ದೀಪ ಹಚ್ಚಿ ಹೊಸ್ತಿಲು ಪೂಜೆ ಮಾಡ

Blog number 1037. ರಾಜಕುಮಾರಿ ಶಾಂತವ್ವ ಮತ್ತು ದಲಿತ ಯುವಕ ಸಿದ್ದೇಶ್ವರರ ಅಮರ ಪ್ರೇಮದ ಸ್ಮಾರಕ, ಅನ್ಯ ಜಾತಿ ವಿವಾಹವಾದ್ದರಿಂದ ರಾಜಕುಮಾರಿಗೆ ಸೂಳೆ ಪಟ್ಟ ನೀಡಿದ ಸಮಾಜ. ಸಮಾಜದ ಒಳಿತಿಗಾಗಿ ಶಾಂತವ್ವ ಕಟ್ಟಿಸಿದ ಬೃಹತ್ ಕೆರೆಗೆ ಜನ ಕರೆದದ್ದು ಸೂಳೆ ಕಟ್ಟಿಸಿದ ಕೆರೆ ಅದೇ ಸೂಳೆಕೆರೆ / ಶಾಂತಿ ಸಾಗರ

# ಸೂಳೆಕೆರೆ (ಶಾಂತಿ ಸಾಗರ) ಅಂತರ್ ಜಾತಿ ಪ್ರೇಮ ವಿವಾಹದ ದುರOತ ಕಥೆ. #ಅಕ್ಟೋಬರ್ 2019 ರಲ್ಲಿ ತುಂಬಿ ತುಳುಕಿತ್ತು.  ಚಿತ್ರದುಗ೯, ದಾವಣಗೆರೆ ಬಳ್ಳಾರಿ ಮುಂತಾದ ಮಳೆ ಕಡಿಮೆ ಆಗುತ್ತಿದ್ದ ಜಿಲ್ಲೆಗಳಲ್ಲಿ ಅದೂ ಅಕ್ಟೋಬರ್ ತಿಂಗಳ 2019 ರಲ್ಲಿ  ಬಂದಿದ್ದ ಬಾರಿ ಮಳೆ ಎಲ್ಲಾ ಕೆರೆ, ಹೊಂಡಗಳು ತುಂಬಿ ತುಳುಕಿದೆ, ಸಾಮಾಜಿಕ ಜಾಲ ತಾಣದಲ್ಲಿ 40 ವಷ೯ದಲ್ಲಿ ಇಂತ ಮಳೆ ಬಂದಿಲ್ಲ ಅಂತ ಸುದ್ದಿ ಹರಿದಾಡುತ್ತಿತ್ತು ಮತ್ತು  ಸೂಳೆಕೆರೆ ತುಂಬಿ ಕೋಡಿ ಬಿದ್ದಿದೆ ಅಂತೆಲ್ಲ Post ನೋಡಿ ಬೆಂಗಳೂರಿಂದ ಬರುವಾಗ ಚಿತ್ರದುಗ೯ ಮಾಗ೯ವಾಗಿ ಚನ್ನಗಿರಿ ತಲುಪಿ ಸೂಳೆಕೆರೆ ನೋಡಲು ಹೋಗಿದ್ದೆ.  11ನೇ ಶತಮಾನದಲ್ಲಿ (1128ರಲ್ಲಿ)ಕೇವಲ 3 ವಷ೯ದಲ್ಲಿ ಈ ಕೆರೆ ನಿಮಾ೯ಣ ಮಾಡಿಸಿದ್ದು ಶಾಂತವ್ವ ಎಂಬ ರಾಜ ಕುಮಾರಿ ಅವಳು ಸ್ವಣ೯ವತಿ ಪಟ್ಟಣದ ದೊರೆ ವಿಕ್ರಮ ರಾಜನ ಮಗಳು, ಸಿದ್ದೇಶ್ವರ ಎಂಬ ಅನ್ಯ ಜಾತಿಯ ಯುವಕನೊ೦ದಿಗೆ ಗಾಂದವ೯ ವಿವಾಹ ಆಗುತ್ತಾಳೆ ಇದನ್ನ ಸಹಿಸದ ಮತ್ತು ಒಪ್ಪದ ಜನತೆ ಸೂಳೆ ಎಂದು ಮೂದಲಿಸುತ್ತಾರOತೆ ಈ ರೀತಿ ತನಗೆ ಬಂದ ಕಳಂಕ ಕಳೆಯಲು ಈ ಬೃಹತ್ ಕೆರೆ ತನ್ನ ಪತಿ ಸಿದ್ದೇಶ್ವರನ ಜೊತೆ ಸೇರಿ ನಿಮಿ೯ಸಿ ಕೆರೆಗೆ ಹಾರವಾದಳೆoಬ ಇತಿಹಾಸ ಇದೆ ಇದರಿಂದ ನೊಂದ ಪತಿ ಸಿದ್ಧೇಶ್ವರ ಕೂಡ ಎದುರಿನ ಗುಡ್ಡದಲ್ಲಿ ಜೀವ ತ್ಯಾಗ ಮಾಡುತ್ತಾನೆ ಈಗ ಅಲ್ಲಿ ಸಿದ್ದೇಶ್ವರ ದೇವಸ್ಥಾನವಿದೆ.   ಈ ಕೆರೆ ಈಗಲೂ ಸೂಳೆಕೆರೆ ಎಂದೆ ಹೆಸರಾಗಿದೆ ಈ

# ಜುಟ್ಟು ಕಾಳಿಂಗ ಸಪ೯ದ ಆಸ್ತಿತ್ವದ ಮಲೆನಾಡಿನ ಮಿಥ್ಯೆ#

  # ಕಾಳಿ೦ಗ ಸಪ೯ದಲ್ಲಿ ಜುಟ್ಟು ಕಾಳಿಂಗ ಸಪ೯ ಅಂತ ಇದೇ ಅನ್ನುವ ಯಾರು ನೋಡದ ಸಪ೯ದ ಅಸ್ತಿತ್ವ#    ಮಲೆನಾಡಿನ ಹಳ್ಳಿಗಳಲ್ಲಿ, ಅದು ಕಾಳಿ೦ಗ ಸಪ೯ದ ವಾಸಸ್ಥಳದ ಪರಿಸರದಲ್ಲಿ ಜುಟ್ಟು ಕಾಳಿಂಗ ಸಪ೯ ಇದೆ ಅನ್ನುವ ಮಾತು ಆಗಾಗ್ಗೆ ಕೇಳುತ್ತಿರುತ್ತೇವೆ. ಆದರೆ ಆ ರೀತಿಯ ಹಾವು ಇಲ್ಲ ಎಂದು ಹಾವಿನ ಬಗ್ಗೆ ಸಂಶೋದನೆ ಮಾಡುವವರು, ಅರಣ್ಯ ಇಲಾಖೆಯವರು, ಹಾವು ಹಿಡಿಯುವವರು ಖಡಾಖಂಡಿತವಾಗಿ ಹೇಳುತ್ತಾರಾದರು, ಈ ವದಂತಿ ಹೇಗೆ ಹರಡಿದೆ?.    ಇದು ಒಂದು ಊರು ಹಳ್ಳಿಯಲ್ಲ ನಾನು ನೋಡಿದಂತೆ ಮಹಾರಾಷ್ಟ್ರದ ರತ್ನಗಿರಿಯಿ೦ದ ಕೇರಳದ ಕಾಸರಗೋಡಿನ ತನಕ ಜುಟ್ಟು ಕಾಳಿಂಗದ ಅನೇಕ ರೋಚಕ ಕಥೆ ಕೇಳಿದ್ದೇನೆ.   ಪ್ರತ್ಯಕ್ಷ ನೋಡಿದವರು ತಾವು ಎನ್ನುವ ಅನೇಕರಲ್ಲಿ ಮಾತಾಡಿದ್ದೇನೆ ಆದರೆ ಅದು ನಂಬಲಹ೯ ಮಾಹಿತಿ ಅನಿಸಲಿಲ್ಲ, ಒಂದು ರೀತಿ ಕಾಲ್ಪನಿಕ ತ್ರಿಲ್ಲರ್ ಕಥೆ ಅಷ್ಟೇ ಅನ್ನಬಹುದು.    ಜಡೆ ಕಾಳಿಂಗ ಸಪ೯ಕ್ಕೆ ರೋಷ ಜಾಸ್ತಿ, ಹೆಡೆ ಮೇಲೆ ಕೂದಲಿನ ಜುಟ್ಟು ಇರುತ್ತೆ, ಮನುಷ್ಯರನ್ನ ಕಂಡರೆ ಓಡಿಸಿಕೊಂಡು ಬರುತ್ತೆ, ಅದರಿಂದ ತಪ್ಪಿಸಿಕೊಳ್ಳಲು ಒಂದೇ ದಾರಿ ಅದೇನೆಂದರೆ ತಗ್ಗಿನ ಪ್ರದೇಶದಲ್ಲಿ ಓಡುವುದು.     ಯಾಕೆ೦ದರೆ ಓಡಿಸಿಕೊಂಡು ಬರುವ ಜುಟ್ಟು ಕಾಳಿಂಗದ ಜುಟ್ಟು, ಇಳಿಜಾರಿನಲ್ಲಿ ಅದರ ತಲೆಯಿ೦ದ ಇಳಿಜಾರಿಗೆ ಸರಿಯುವುದರಿಂದ  ಕಣ್ಣಿನ ಮೇಲೆ ಕೂದಲ ಜುಟ್ಟು ಮುಚ್ಚುವುದರಿಂದ ಕಣ್ಣು ಕಾಣುವುದಿಲ್ಲ, ಆಗಲೇ ತಪ್ಪಿಸಿಕೊಳ್ಳಬೇಕು ಅಂತ ಬಿದನೂರು ನಗರ ಸಮೀಪದ ದೇವಗಂಗೆ ಎಂಬ ಕೆಳದಿ