Skip to main content

Blog number 915. ಸ್ಥಳಿಯ ಮತ್ತು ಆಯಾ ಊರಿನ ಸಮೀಪದ ಪ್ರವಾಸಿ ತಾಣಗಳ ಮಾಹಿತಿ ಕೈಪಿಡಿ ಆಯಾ ಊರುಗಳ ಉಪಹಾರ ಮತ್ತು ವಸತಿ ಗೃಹಗಳ ಮಾಲಿಕರು ತಮ್ಮಲ್ಲಿಗೆ ಬರುವ ಪ್ರವಾಸಿಗಳಿಗೆ ನೀಡಿ ಪ್ರವಾಸೋದ್ಯಮ ಅಭಿವೃದ್ದಿಗೆ ಕೈ ಜೋಡಿಸಬಹುದು.

#ಪ್ರತಿ_ಊರಿನ_ಸಮೀಪದ_ಪ್ರವಾಸಿ_ತಾಣಗಳ_ಮಾಹಿತಿ_ಪ್ರವಾಸಿಗಳಿಗೆ_ಸಿಗಬೇಕು.

#ನಮ್ಮ_ಲಾಡ್ಜ್_ಕೇಂದ್ರವಾಗಿಸಿ_ಸಮೀಪದ_ಪ್ರವಾಸಿತಾಣಗಳ_ಕೈಪಿಡಿ.

#ಸಮೀಪದ_50_ಕೀಮಿ_ಒಳಗಿನ_50ರಿಂದ_100ಕಿಮಿ_ಮತ್ತು_100ಕಿಮಿ_ನಂತರದ_ಪ್ರವಾಸಿಕೇಂದ್ರ_ಗುರುತಿಸಿದೆ.

#ಸ್ಥಳಿಯ_ಲಾಡ್ಜ್_ರೆಸ್‌ಟೋರೆಂಟಲ್ಲಿ_ಇದು_ಪ್ರವಾಸಿಗಳಿಗೆ_ಉಚಿತವಾಗಿ_ಸುಲಭವಾಗಿ_ಸಿಗುವಂತಾಗಬೇಕು.

   ನಮ್ಮ ನಮ್ಮ ಊರ ಸಮೀಪದಲ್ಲಿ ಏನಿದೆ ಎಂಬುದು ನಮಗೆ ಗೊತ್ತಿರುತ್ತದೆ ಆದರೆ ದೂರದಿಂದ ಪ್ರವಾಸ ಬಂದವರಿಗೆ ಇದು ಗೊತ್ತಿರುವುದಿಲ್ಲ ಆದರೆ ಅವರಿಗೆ ನಾವು ಸುಲಭವಾಗಿ ಈ ಮಾಹಿತಿ ನೀಡುವ ಕೈಪಿಡಿ ಅಚ್ಚುಹಾಕಿಸಿ ಆಸಕ್ತರಿಗೆ ಸಿಗುವಂತೆ ಮಾಡುವ ಕೆಲಸ ಆಯಾ ಊರಿನ ಲಾಡ್ಜ್ ಮತ್ತು ರೆಸ್ಟೋರೆಂಟ್ ಗಳು ಮಾಡಬೇಕು ಯಾಕೆಂದರೆ ಪ್ರವಾಸಿಗಳು ತಮ್ಮ ವಸತಿ ಮತ್ತು ಆಹಾರಕ್ಕೆ ಈ ಕೇಂದ್ರಗಳನ್ನೆ ಅವಲಂಬಿಸುತ್ತಾರೆ.
  ನಮ್ಮ ಲಾಡ್ಜ್ #ಹೊಂಬುಜ_ರೆಸಿಡೆನ್ಸಿ ಮತ್ತು ಹೊಸ ಬ್ಲಾಕ್ #ಹೊಂಬುಜ_ಗಾರ್ಡನೀಯ, ಸಸ್ಯ ಹಾರಿ #ಮಲ್ಲಿಕಾ_ವೆಜ್ ರೆಸ್ಟೋರೆಂಟ್,#ಚಂಪಕಾ_ಪ್ಯಾರಾಡೈಸ್ ನಾನ್ ವೆಜ್ ಹೋಟೆಲ್,#ಕೃಷ್ಣ_ಸರಸ_ಕನ್ವೆನ್ಷನ್_ಹಾಲ್ ಮತ್ತು #ವಿಕ್ಟೋರಿಯಾ_ಕಾಟೇಜ್,ಶಿರೋದಾರ_ಚಿಕಿತ್ಸಾ_ಕೇಂದ್ರಗಳು ಶಿವಮೊಗ್ಗದಿಂದ ಜೋಗ್ ಫಾಲ್ಸ್ ಮಾರ್ಗದಲ್ಲಿ 50 ಕಿ.ಮಿ.ದೂರದ ಆನಂದಪುರಂನ ಪ್ರಾರಂಭದಲ್ಲಿ ಸಿಗುವ #ಯಡೇಹಳ್ಳಿ_ವೃತ್ತದಲ್ಲಿ ರಾಷ್ಟ್ರೀಯ ಹೆದ್ದಾರಿ 206 ನಲ್ಲಿ ಎಡ ಬಾಗದಲ್ಲಿ ವಿಶಾಲವಾದ ಪಾರ್ಕಿಂಗ್, ಆರೋಗ್ಯಕರ ಸ್ವಚ್ಚತೆಯನ್ನು 24X7 ಕಾಪಾಡಿರುವ ಶೌಚಾಲಯ ವ್ಯವಸ್ಥೆ (ಮಹಿಳೆಯರಿಗೆ ಪ್ರತ್ಯೇಕವಾಗಿದೆ) ಇರುವ ರೆಸ್ಟೋರೆಂಟ್ ಗಳು, AC & Non AC ಸುಸಜ್ಜಿತ ರೂಂ ಗಳ ಲಾಡ್ಜ್ ಇದೆ.
  ಇಲ್ಲಿಂದ 50 ಕಿ.ಮಿ. ಜೋಗ ಜಲಪಾತವಿದೆ ಅನೇಕ ಪ್ರವಾಸಿ ತಾಣಗಳ ಕೈಪಿಡಿ ತಯಾರಿಸಿದ್ದೇವೆ ಇದರಲ್ಲಿ ಮೂರು ಭಾಗಗಳಿವೆ, 50 ಕಿ.ಮಿ. ಒಳಗಿನ ಸಮೀಪದ ಪ್ರವಾಸಿ ತಾಣ, 50 ಕಿ.ಮಿ ನಂತರ 100 ಕಿ.ಮಿ. ಒಳಗಿನ ಪ್ರವಾಸಿ ಕೇಂದ್ರಗಳು ಮತ್ತು 100 ಕಿ.ಮಿ. ನಂತರದ ತಾಣಗಳ ಮಾಹಿತಿ ಇದರಲ್ಲಿದೆ.
  ಅವರದೇ ವಾಹನಗಳಲ್ಲಿ ಈ ಸ್ಥಳಗಳಿಗೆ ಹೋಗಿ ಬರಬಹುದು ಅಥವ ನಮ್ಮ ಟ್ರಾವೆಲರ್ ಡೆಸ್ಕ್ ನಲ್ಲಿ ಎಲ್ಲಾ ರೀತಿಯ ವಾಹನ ಬಾಡಿಗೆಗೆ ದೊರೆಯುತ್ತದೆ ಅದನ್ನು ಬಳಸಿಕೊಳ್ಳಬಹುದು.
   ಈ ರೀತಿ ಎಲ್ಲಾ ಊರಿನ ಸ್ಥಳಿಯ ಲಾಡ್ಜ್ ಮತ್ತು ರೆಸ್ಟೋರಾಂಟ್ ಮಾಲಿಕರು ತಮ್ಮ ಲಾಡ್ಜ್ ಅಥವ ರೆಸ್ಟೋರಾಂಟ್ ನಿಂದ ಸಮೀಪದ ಪ್ರವಾಸಿ ತಾಣಗಳ ಕೈಪಿಡಿ ಮುದ್ರಿಸಿ ಸ್ಥಳಿಯ ಪ್ರವಾಸೋದ್ಯಕ್ಕೆ ಸಹಾಯ ಮಾಡಬಹುದಾಗಿದೆ.

Comments

Popular posts from this blog

# ಜುಟ್ಟು ಕಾಳಿಂಗ ಸಪ೯ದ ಆಸ್ತಿತ್ವದ ಮಲೆನಾಡಿನ ಮಿಥ್ಯೆ#

  # ಕಾಳಿ೦ಗ ಸಪ೯ದಲ್ಲಿ ಜುಟ್ಟು ಕಾಳಿಂಗ ಸಪ೯ ಅಂತ ಇದೇ ಅನ್ನುವ ಯಾರು ನೋಡದ ಸಪ೯ದ ಅಸ್ತಿತ್ವ#    ಮಲೆನಾಡಿನ ಹಳ್ಳಿಗಳಲ್ಲಿ, ಅದು ಕಾಳಿ೦ಗ ಸಪ೯ದ ವಾಸಸ್ಥಳದ ಪರಿಸರದಲ್ಲಿ ಜುಟ್ಟು ಕಾಳಿಂಗ ಸಪ೯ ಇದೆ ಅನ್ನುವ ಮಾತು ಆಗಾಗ್ಗೆ ಕೇಳುತ್ತಿರುತ್ತೇವೆ. ಆದರೆ ಆ ರೀತಿಯ ಹಾವು ಇಲ್ಲ ಎಂದು ಹಾವಿನ ಬಗ್ಗೆ ಸಂಶೋದನೆ ಮಾಡುವವರು, ಅರಣ್ಯ ಇಲಾಖೆಯವರು, ಹಾವು ಹಿಡಿಯುವವರು ಖಡಾಖಂಡಿತವಾಗಿ ಹೇಳುತ್ತಾರಾದರು, ಈ ವದಂತಿ ಹೇಗೆ ಹರಡಿದೆ?.    ಇದು ಒಂದು ಊರು ಹಳ್ಳಿಯಲ್ಲ ನಾನು ನೋಡಿದಂತೆ ಮಹಾರಾಷ್ಟ್ರದ ರತ್ನಗಿರಿಯಿ೦ದ ಕೇರಳದ ಕಾಸರಗೋಡಿನ ತನಕ ಜುಟ್ಟು ಕಾಳಿಂಗದ ಅನೇಕ ರೋಚಕ ಕಥೆ ಕೇಳಿದ್ದೇನೆ.   ಪ್ರತ್ಯಕ್ಷ ನೋಡಿದವರು ತಾವು ಎನ್ನುವ ಅನೇಕರಲ್ಲಿ ಮಾತಾಡಿದ್ದೇನೆ ಆದರೆ ಅದು ನಂಬಲಹ೯ ಮಾಹಿತಿ ಅನಿಸಲಿಲ್ಲ, ಒಂದು ರೀತಿ ಕಾಲ್ಪನಿಕ ತ್ರಿಲ್ಲರ್ ಕಥೆ ಅಷ್ಟೇ ಅನ್ನಬಹುದು.    ಜಡೆ ಕಾಳಿಂಗ ಸಪ೯ಕ್ಕೆ ರೋಷ ಜಾಸ್ತಿ, ಹೆಡೆ ಮೇಲೆ ಕೂದಲಿನ ಜುಟ್ಟು ಇರುತ್ತೆ, ಮನುಷ್ಯರನ್ನ ಕಂಡರೆ ಓಡಿಸಿಕೊಂಡು ಬರುತ್ತೆ, ಅದರಿಂದ ತಪ್ಪಿಸಿಕೊಳ್ಳಲು ಒಂದೇ ದಾರಿ ಅದೇನೆಂದರೆ ತಗ್ಗಿನ ಪ್ರದೇಶದಲ್ಲಿ ಓಡುವುದು.     ಯಾಕೆ೦ದರೆ ಓಡಿಸಿಕೊಂಡು ಬರುವ ಜುಟ್ಟು ಕಾಳಿಂಗದ ಜುಟ್ಟು, ಇಳಿಜಾರಿನಲ್ಲಿ ಅದರ ತಲೆಯಿ೦ದ ಇಳಿಜಾರಿಗೆ ಸರಿಯುವುದರಿಂದ  ಕಣ್ಣಿನ ಮೇಲೆ ಕೂದಲ ಜುಟ್ಟು ಮುಚ್ಚುವುದರಿಂದ ಕಣ್ಣು ಕಾಣುವುದಿಲ್ಲ, ಆಗಲೇ ತಪ್...

ಶರಾವತಿ ನದಿ ಉಗಮ ಸ್ಥಾನ ಅಂಬುತೀಥ೯.

ಇಡೀ ರಾಜ್ಯಕ್ಕೆ ವಿದ್ಯುತ್ ನೀಡುವ ಶರಾವತಿ ನದಿಯ ಉಗಮ ಸ್ಥಾನ ಅಂಬುತೀಥ೯, ಆರಗ ಸಮೀಪದ ತೀಥ೯ಳ್ಳಿ ತಾಲ್ಲೂಕಿನಲ್ಲಿದೆ( ಶಿವಮೊಗ್ಗ ಜಿಲ್ಲೆ)    ಅಂಬು ತೀಥ೯ದಲ್ಲಿ ಶ್ರೀ ರಾಮ ವನವಾಸದಲ್ಲಿದ್ದಾಗ ಸೀತಾ ಮಾತೆಗೆ ಪೂಜೆಗೆ ನೀರು ಸಿಗದಿದ್ದಾಗ ರಾಮ ತನ್ನ ಅಂಬಿನಿಂದ (ಬಿಲ್ಲಿನ ಬಾಣದಿಂದ) ನೆಲ ಸೀಳಿ ನೀರು ತಂದರೆ೦ದು ರಾಮಾಯಣದಲ್ಲಿ ಉಲ್ಲೇಖವಿದೆ, ಹಾಗಾಗಿ ಈ ಸ್ಥಳಕ್ಕೆ ಅಂಬುತೀಥ೯ ಎಂಬ ಹೆಸರು ಬ೦ತು ಎಂಬುದು ಸ್ಥಳ ಪುರಾಣ.    ಇಲ್ಲಿ ಸಣ್ಣ ತೊರೆಯಾಗಿ ಹುಟ್ಟುವ ನದಿ ಬಾಣದಿಂದ ಹುಟ್ಟಿದ್ದರಿಂದ ಶರಾವತಿ ಎ೦ಬ ಹೆಸರು ಪಡೆದು ಪೂವ೯ಕ್ಕೆ ಹರಿದು ನಂತರ ಪಶ್ಚಿಮ ಮುಖವಾಗಿ ತಿರುಗಿ ಹೊಸನಗರ ತಾಲ್ಲೂಕನ್ನ ದಾಟಿ ಸಾಗರ ತಾಲ್ಲೂಕಿನ ಜೋಗದಲ್ಲಿ ಜಲಪಾತವಾಗಿ ದಟ್ಟ ಕಾನನದ ಕಣಿವೆ ಮುಖಾಂತರ ಹರಿದು ಹೊನ್ನಾವರದಲ್ಲಿ ಅರಬ್ಬಿ ಸಮುದ್ರ ಸೇರುತ್ತದೆ.   ಈ ನದಿಗೆ ಮೊದಲಿಗೆ ಹೀರೇ ಬಾಸ್ಕರ ಎಂಬಲ್ಲಿ ನಂತರ ಲಿಂಗನಮಕ್ಕಿಯಲ್ಲಿ ಆಣೆಕಟ್ಟು ಕಟ್ಟಿ ರಾಜ್ಯಕ್ಕೆ ಜಲ ವಿದ್ಯುತ್ ನೀಡುತ್ತಿರುವುದರಿಂದ ಲಕ್ಷಾಂತರ ಎಕರೆ ಕಾಡು, ಜಮೀನು ಅನೇಕ ಊರು ಮುಳುಗಡೆ ಆಯಿತು ಸಾವಿರಾರು ಕುಟುಂಬಗಳು ಸಂತ್ರಸ್ಥರಾದದ್ದು ಇತಿಹಾಸ.    ಈ ನದಿ ಜೋಗದಲ್ಲಿ ದುಮುಕುವ ಜಲಪಾತ ವಿಶ್ವದ ಸುಂದರ ಜಲಪಾತದಲ್ಲಿ ಒಂದಾಗಿದೆ.    ಹಾಗಾಗಿ ಶರಾವತಿ ನದಿಯ ಉಗಮ ಸ್ಥಾನಕ್ಕೆ ಮಹತ್ವವಿದೆ, ಒಮ್ಮೆಯಾದರೂ ಈ ನದಿ ಮೂಲ ಸಂದಶಿ೯ಸಬೇಕು ಆದರೆ ಇಲ್ಲಿ ಶರಾವತಿ ವ...

Blog number 1037. ರಾಜಕುಮಾರಿ ಶಾಂತವ್ವ ಮತ್ತು ದಲಿತ ಯುವಕ ಸಿದ್ದೇಶ್ವರರ ಅಮರ ಪ್ರೇಮದ ಸ್ಮಾರಕ, ಅನ್ಯ ಜಾತಿ ವಿವಾಹವಾದ್ದರಿಂದ ರಾಜಕುಮಾರಿಗೆ ಸೂಳೆ ಪಟ್ಟ ನೀಡಿದ ಸಮಾಜ. ಸಮಾಜದ ಒಳಿತಿಗಾಗಿ ಶಾಂತವ್ವ ಕಟ್ಟಿಸಿದ ಬೃಹತ್ ಕೆರೆಗೆ ಜನ ಕರೆದದ್ದು ಸೂಳೆ ಕಟ್ಟಿಸಿದ ಕೆರೆ ಅದೇ ಸೂಳೆಕೆರೆ / ಶಾಂತಿ ಸಾಗರ

# ಸೂಳೆಕೆರೆ (ಶಾಂತಿ ಸಾಗರ) ಅಂತರ್ ಜಾತಿ ಪ್ರೇಮ ವಿವಾಹದ ದುರOತ ಕಥೆ. #ಅಕ್ಟೋಬರ್ 2019 ರಲ್ಲಿ ತುಂಬಿ ತುಳುಕಿತ್ತು.  ಚಿತ್ರದುಗ೯, ದಾವಣಗೆರೆ ಬಳ್ಳಾರಿ ಮುಂತಾದ ಮಳೆ ಕಡಿಮೆ ಆಗುತ್ತಿದ್ದ ಜಿಲ್ಲೆಗಳಲ್ಲಿ ಅದೂ ಅಕ್ಟೋಬರ್ ತಿಂಗಳ 2019 ರಲ್ಲಿ  ಬಂದಿದ್ದ ಬಾರಿ ಮಳೆ ಎಲ್ಲಾ ಕೆರೆ, ಹೊಂಡಗಳು ತುಂಬಿ ತುಳುಕಿದೆ, ಸಾಮಾಜಿಕ ಜಾಲ ತಾಣದಲ್ಲಿ 40 ವಷ೯ದಲ್ಲಿ ಇಂತ ಮಳೆ ಬಂದಿಲ್ಲ ಅಂತ ಸುದ್ದಿ ಹರಿದಾಡುತ್ತಿತ್ತು ಮತ್ತು  ಸೂಳೆಕೆರೆ ತುಂಬಿ ಕೋಡಿ ಬಿದ್ದಿದೆ ಅಂತೆಲ್ಲ Post ನೋಡಿ ಬೆಂಗಳೂರಿಂದ ಬರುವಾಗ ಚಿತ್ರದುಗ೯ ಮಾಗ೯ವಾಗಿ ಚನ್ನಗಿರಿ ತಲುಪಿ ಸೂಳೆಕೆರೆ ನೋಡಲು ಹೋಗಿದ್ದೆ.  11ನೇ ಶತಮಾನದಲ್ಲಿ (1128ರಲ್ಲಿ)ಕೇವಲ 3 ವಷ೯ದಲ್ಲಿ ಈ ಕೆರೆ ನಿಮಾ೯ಣ ಮಾಡಿಸಿದ್ದು ಶಾಂತವ್ವ ಎಂಬ ರಾಜ ಕುಮಾರಿ ಅವಳು ಸ್ವಣ೯ವತಿ ಪಟ್ಟಣದ ದೊರೆ ವಿಕ್ರಮ ರಾಜನ ಮಗಳು, ಸಿದ್ದೇಶ್ವರ ಎಂಬ ಅನ್ಯ ಜಾತಿಯ ಯುವಕನೊ೦ದಿಗೆ ಗಾಂದವ೯ ವಿವಾಹ ಆಗುತ್ತಾಳೆ ಇದನ್ನ ಸಹಿಸದ ಮತ್ತು ಒಪ್ಪದ ಜನತೆ ಸೂಳೆ ಎಂದು ಮೂದಲಿಸುತ್ತಾರOತೆ ಈ ರೀತಿ ತನಗೆ ಬಂದ ಕಳಂಕ ಕಳೆಯಲು ಈ ಬೃಹತ್ ಕೆರೆ ತನ್ನ ಪತಿ ಸಿದ್ದೇಶ್ವರನ ಜೊತೆ ಸೇರಿ ನಿಮಿ೯ಸಿ ಕೆರೆಗೆ ಹಾರವಾದಳೆoಬ ಇತಿಹಾಸ ಇದೆ ಇದರಿಂದ ನೊಂದ ಪತಿ ಸಿದ್ಧೇಶ್ವರ ಕೂಡ ಎದುರಿನ ಗುಡ್ಡದಲ್ಲಿ ಜೀವ ತ್ಯಾಗ ಮಾಡುತ್ತಾನೆ ಈಗ ಅಲ್ಲಿ ಸಿದ್ದೇಶ್ವರ ದೇವಸ್ಥಾನವಿದೆ.   ಈ ಕೆರೆ ಈಗಲೂ ಸೂ...