Skip to main content

Blog number 908, ಜಾರ್ಜ್ ಪರ್ನಾ೦ಡೀಸರನ್ನು ಮಂಗಳೂರಿನಲ್ಲಿ ಅವರ ತಂದೆ ಮನೆಯಿಂದ ಹೊರ ಹಾಕಿದ ರಾತ್ರಿಯ ಅವರ ಅನುಭವ ಅವರೇ ಹೇಳಿದ್ದು ....

#ಪೇಸ್_ಬುಕ್_ಗೆಳೆಯ_ಕಾರ್ತಿಕ್_ಆದಿತ್ಯ_ಬೆಳಗೋಡು
ಅವರು ಬೆಂಗಳೂರಲ್ಲಿನ ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ ರಾತ್ರಿ ಅನಿವಾಯ೯ವಾಗಿ ಮಲಗಬೇಕಾದ ಪರಿಸ್ಥಿತಿಯನ್ನು ಪೋಸ್ಟ್ ಮಾಡಿದ್ದಾರೆ https://m.facebook.com/story.php?story_fbid=5420769207985908&id=100001586475082
ಅದಕ್ಕೆ ಈ ಘಟನೆ ನೆನಪಾಗಿ ಪ್ರತಿಕ್ರಿಯಿಸಿದ್ದೆ.@karthikadityabelagodu

#ಜಾರ್ಜ್_ಪರ್ನಾಂಡೀಸರ_ಮಂಗಳೂರಿನ_ಕಡೆಯ_ರಾತ್ರಿ

ಇನ್ನೊಂದು ಅಸಮಾನ್ಯ ವ್ಯಕ್ತಿ ಹೇಳಿದ ಘಟನೆ ಮರೆತಿದ್ದೆ ಪುನಃ ಪ್ರತಿಕ್ರಿಯಿಸಿದ್ದಕ್ಕೆ ಬೇಸರಿಸಬೇಡಿ.
 ಸ್ವತಃ ಜಾರ್ಜ್ ಪನಾ೯೦ಡೀಸರೆ ಹೇಳಿದ್ದು, ಇವರ ಸಮಾಜ ಸೇವೆ ಹೋರಾಟದಿಂದ ಇವರ ತಂದೆ ಇವರನ್ನು ಒಂದು ರಾತ್ರಿ ಮನೆಯಿಂದ ಹೊರ ಹಾಕುತ್ತಾರೆ, ಮಂಗಳೂರಿನ ಪಾರ್ಕ್ ನಲ್ಲಿ ಕಲ್ಲು ಬೆಂಚಿನ ಮೇಲೆ ಮಲಗಿರುತ್ತಾರೆ... ಆಗ ಒಳ್ಳೆಯ ನಿದ್ದೆಯ ಮಧ್ಯರಾತ್ರಿ ಪೋಲಿಸರು ಬೆನ್ನಿನ ಮೇಲೆ ಲಾಠಿ ರುಚಿ ತೋರಿಸಿ ಎಬ್ಬಿಸುತ್ತಾರೆ, ಆಗ ಜಾರ್ಜ್ ರು ತಮ್ಮ ಸಮಸ್ಯೆ ಹೇಳಿ ಕೊಳ್ಳುತ್ತಾರೆ ಆದರೆ ಪೋಲಿಸರು ಕೇಳುವುದಿಲ್ಲ ತಮ್ಮ ಬೀಟಿನ ಪ್ರದೇಶದಲ್ಲಿ ಇದಕ್ಕೆಲ್ಲ ಅವಕಾಶವೇ ಇಲ್ಲ ಅನ್ನುತ್ತಾರೆ ಅನಿವಾರ್ಯವಾಗಿ ಜಾರ್ಜ್ ರು ಮಂಗಳೂರಿನ ಹಂಪನಕಟ್ಟೆ ಸಮೀಪದ ಬಸ್ ಶೆಲ್ಟರ್ ಗೆ ಹೋಗಿ ಮಲಗುತ್ತಾರೆ ಅಲ್ಲೂ ಇನ್ನಿಬ್ಬರು ಪೋಲಿಸರು ಬಂದು ಪಾರ್ಕ್ ನಲ್ಲಿ ಎಬ್ಬಿಸಿ ಕಳಿಸಿದಂತೆ ಎಬ್ಬಿಸುತ್ತಾರೆ, ಇನ್ನು ಎಲ್ಲಿಗೆ ಹೋಗಲಿ? ಅಂತ ಸ್ವಲ್ಪ ಮಾತು ನಿಲ್ಲಿಸಿದ ಜಾರ್ಜ್ "ಆಗಷ್ಟೆ ಬೆಳಗು ಬೆಳಗು ಆಗುತ್ತಿತ್ತು, ಆ ಸಮಯದಲ್ಲಿ ಆ ಮಾರ್ಗದಲ್ಲಿ ಬಂದ ಲಾರಿಗೆ ಕೈ ತೋರಿಸಿದೆ, ಲಾರಿಯಲ್ಲಿದ್ದ ಕ್ಲೀನರ್ ಎಲ್ಲಿಗೆ? ಎಂದಾಗ ನನಗೇ ಎಲ್ಲಿಗೆ ಅಂತ ಗೊತ್ತಿಲ್ಲವಾದ್ದರಿಂದ ಅವನಿಗೆ ಕೇಳಿದೆ ನಿಮ್ಮ ಲಾರಿ ಎಲ್ಲಿಗೆ ಹೋಗುತ್ತೆ? ಅಂತ, ಆತ ಬೊಂಬಾಯಿ ಅಂದಾಗ ನಾನು ಅಲ್ಲಿಗೇ" ಅಂತ ಲಾರಿ ಹತ್ತಿ ಮುಂಬಾಯಿ ಸೇರಿ ಮಾಡಿದ ಹೋರಾಟಗಳು ನನ್ನನ್ನು ರಾಜಕಾರಣಿ ಮಾಡಿತು ಅಂದಾಗ ಅಲ್ಲಿದ್ದ ನಾವೇ ಕೆಲವೇ ಕೆಲವು ಜನರಿಗೆ ಏನನ್ನಿಸಿರಬೇಡ? ಇದು ದೇಶದ ಅವತ್ತಿನ ರಕ್ಷಣಾ ಸಚಿವ ಜಾರ್ಜ್ ಪರ್ನಾಂಡೀಸ್ ಬೆಂಗಳೂರಿನ ಬಸವೇಶ್ವರ ನಗರದಲ್ಲಿನ ಉಡುಪಿ ಲೋಕಸಭಾ ಮಾಜಿ ಸದಸ್ಯರಾದ ಐ.ಎಂ ಜಯರಾಂ ಶೆಟ್ಟರ ಮನೆಯಲ್ಲಿ (ಆಗ ಐ.ಎಂ.ಜಯರಾಂ ಶೆಟ್ಟರು ಜಾರ್ಜರ ಸಮತಾ ಪಾರ್ಟಿ ರಾಜ್ಯದ್ಯಕ್ಷರು) ಹೇಳಿದ್ದು ಇನ್ನೂ ಕಿವಿಯಲ್ಲಿ ಗುಣುಗುಣುಗುತ್ತಿದೆ.

Comments

Popular posts from this blog

# ಜುಟ್ಟು ಕಾಳಿಂಗ ಸಪ೯ದ ಆಸ್ತಿತ್ವದ ಮಲೆನಾಡಿನ ಮಿಥ್ಯೆ#

  # ಕಾಳಿ೦ಗ ಸಪ೯ದಲ್ಲಿ ಜುಟ್ಟು ಕಾಳಿಂಗ ಸಪ೯ ಅಂತ ಇದೇ ಅನ್ನುವ ಯಾರು ನೋಡದ ಸಪ೯ದ ಅಸ್ತಿತ್ವ#    ಮಲೆನಾಡಿನ ಹಳ್ಳಿಗಳಲ್ಲಿ, ಅದು ಕಾಳಿ೦ಗ ಸಪ೯ದ ವಾಸಸ್ಥಳದ ಪರಿಸರದಲ್ಲಿ ಜುಟ್ಟು ಕಾಳಿಂಗ ಸಪ೯ ಇದೆ ಅನ್ನುವ ಮಾತು ಆಗಾಗ್ಗೆ ಕೇಳುತ್ತಿರುತ್ತೇವೆ. ಆದರೆ ಆ ರೀತಿಯ ಹಾವು ಇಲ್ಲ ಎಂದು ಹಾವಿನ ಬಗ್ಗೆ ಸಂಶೋದನೆ ಮಾಡುವವರು, ಅರಣ್ಯ ಇಲಾಖೆಯವರು, ಹಾವು ಹಿಡಿಯುವವರು ಖಡಾಖಂಡಿತವಾಗಿ ಹೇಳುತ್ತಾರಾದರು, ಈ ವದಂತಿ ಹೇಗೆ ಹರಡಿದೆ?.    ಇದು ಒಂದು ಊರು ಹಳ್ಳಿಯಲ್ಲ ನಾನು ನೋಡಿದಂತೆ ಮಹಾರಾಷ್ಟ್ರದ ರತ್ನಗಿರಿಯಿ೦ದ ಕೇರಳದ ಕಾಸರಗೋಡಿನ ತನಕ ಜುಟ್ಟು ಕಾಳಿಂಗದ ಅನೇಕ ರೋಚಕ ಕಥೆ ಕೇಳಿದ್ದೇನೆ.   ಪ್ರತ್ಯಕ್ಷ ನೋಡಿದವರು ತಾವು ಎನ್ನುವ ಅನೇಕರಲ್ಲಿ ಮಾತಾಡಿದ್ದೇನೆ ಆದರೆ ಅದು ನಂಬಲಹ೯ ಮಾಹಿತಿ ಅನಿಸಲಿಲ್ಲ, ಒಂದು ರೀತಿ ಕಾಲ್ಪನಿಕ ತ್ರಿಲ್ಲರ್ ಕಥೆ ಅಷ್ಟೇ ಅನ್ನಬಹುದು.    ಜಡೆ ಕಾಳಿಂಗ ಸಪ೯ಕ್ಕೆ ರೋಷ ಜಾಸ್ತಿ, ಹೆಡೆ ಮೇಲೆ ಕೂದಲಿನ ಜುಟ್ಟು ಇರುತ್ತೆ, ಮನುಷ್ಯರನ್ನ ಕಂಡರೆ ಓಡಿಸಿಕೊಂಡು ಬರುತ್ತೆ, ಅದರಿಂದ ತಪ್ಪಿಸಿಕೊಳ್ಳಲು ಒಂದೇ ದಾರಿ ಅದೇನೆಂದರೆ ತಗ್ಗಿನ ಪ್ರದೇಶದಲ್ಲಿ ಓಡುವುದು.     ಯಾಕೆ೦ದರೆ ಓಡಿಸಿಕೊಂಡು ಬರುವ ಜುಟ್ಟು ಕಾಳಿಂಗದ ಜುಟ್ಟು, ಇಳಿಜಾರಿನಲ್ಲಿ ಅದರ ತಲೆಯಿ೦ದ ಇಳಿಜಾರಿಗೆ ಸರಿಯುವುದರಿಂದ  ಕಣ್ಣಿನ ಮೇಲೆ ಕೂದಲ ಜುಟ್ಟು ಮುಚ್ಚುವುದರಿಂದ ಕಣ್ಣು ಕಾಣುವುದಿಲ್ಲ, ಆಗಲೇ ತಪ್...

HISTORICAL SAGAR MARIKAMBA JATRA.ಐತಿಹಾಸಿಕ ಸಾಗರದ ಮಾರಿಕಾಂಬಾ ಜಾತ್ರೆ

     ಸಾಗರದ ಮಾರಿಕಾಂಬಾ ಜಾತ್ರೆ ಐತಿಹಾಸಿಕ ಚರಿತ್ರೆಯಲ್ಲಿ ದಾಖಲೆ.        ಕನಾ೯ಟಕ ರಾಜ್ಯದಲ್ಲಿ ಎರೆಡು ಮಾರಿಕಾಂಬಾ ಜಾತ್ರೆಗಳು ಪ್ರಸಿದ್ಧಿ ಪಡೆದಿದೆ ಅದು ಉತ್ತರ ಕನ್ನಡ ಜಿಲ್ಲೆಯ ಸಿಸಿ೯ಯದ್ದು ಮತ್ತು ಶಿವಮೊಗ್ಗ ಜಿಲ್ಲೆಯ ಸಾಗರದ್ದು.    ಪ್ರತಿ ಮೂರು ವಷ೯ಕೆ ಈ ಜಾತ್ರೆ ಆಚರಿಸಲಾಗುತ್ತೆ ಶೂದ್ರ ವಗ೯ದವರು ಭಯ ಮತ್ತು ಭಕ್ತಿಯಿಂದ ಕುರಿ ಕೋಳಿ ಬಲಿ ನೀಡುವ ಪರಂಪರೆ ಇದೆ.ಮಂಗಳವಾರ ಮೇಲು ಜಾತಿಯ ಜನರ ಪೂಜೆ ದೇವಿಯ ತವರು ಮನೆಯಲ್ಲಿ ನಡೆಯುತ್ತದೆ ನಂತರ ರಾತ್ರಿ ಗಂಡನ ಸೇರುವ ಮಾರಿಗೆ ಶೂದ್ರರ ಪೂಜೆ, ಬಲಿ ಮೀಸಲು.    ಮೊದಲೆಲ್ಲ ಮಾರಿಯಮ್ಮನಿಗೆ ಕೊಣನ ಬಲಿ ನೀಡುತ್ತಿದ್ದರು ಈಗ ಇದು ಕಾನೂನು ಪ್ರಕಾರ ನಿಷಿದ್ಧ ಆದರೆ ಈ ಆಚಾರಣೆ ಗುಪ್ತವಾಗಿ ಬೇರೆ ಕಡೆ ನಡೆಸಲಾಗುತ್ತೆ ಅನ್ನುತ್ತಾರೆ.    ಸಾಗರದ ಮಾರಿಕಾ0ಬಾ ಜಾತ್ರೆ ಜಾತ್ರೆಯಿ೦ದ ಜಾತ್ರೆಗೆ ಅದೂರಿಯಾಗಿ ನಡೆಯುತ್ತದೆ, ಕೋಟ್ಯಾoತರ ಹಣದ ವಹಿವಾಟು ಕೂಡ, ಮೊದಲೆಲ್ಲ ಹಣದ ಅಪರಾ ತಪರ ಆಗುತ್ತಿದೆ ಎಂಬ ಗುಲ್ಲು ಇತ್ತು ಆದರೆ ಈಗೆಲ್ಲ ಪಾರದಶ೯ಕವಾಗಿದೆ ಆದರೂ ಈ ಬಾರಿಯ 2017ರ ಜಾತ್ರೆಯಲ್ಲಿ ಅವ್ಯವಹಾರದ ಆರೋಪ ಮಾಡಲಾಗಿದೆ ಈ ವಿಚಾರ ಇಲ್ಲಿ ಅಪ್ರಸ್ತುತ ಆದರೂ ಈ ಬಗ್ಗೆ ಬರೆಯಲು ಕಾರಣ ಕೆಳದಿ ಅರಸರ ಕಾಲದಲ್ಲಿ ಅಂದರೆ 350 ವಷ೯ದ ಹಿಂದೆಯೂ ರಾಜರಿಗೆ ಸಾಗರದ ಮಾರಿಕಾಂಬಾ ಜಾತ್ರೆಯಲ್ಲಿ ಸಾವ೯ಜನಿಕರಿಂದ ಸಂಗ್ರಹಿಸಿದ ಜಾತ...

ರಿಪ್ಪನ್ ಪೇಟೆ ( ಶಿವಮೊಗ್ಗ ಜಿಲ್ಲೆ) ಹೆಸರು ಬಂದಿದ್ದಾದರು ಹೇಗೆ?

#  ರಿಪ್ಪನ್ ಪೇಟೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಪ್ರಮುಖ ಹೋಬಳಿ ಕೇಂದ್ರ ಈ ಆಂಗ್ಲ ಅಧಿಕಾರಿಯ ಹೆಸರು ಇಡಲು ಕಾರಣವಾದ ಘಟನೆ ತುಂಬಾ ಕುತೂಹಲಕಾರಿ# ಸ್ವಲ್ಪ ಕಾಲ ನೀವು ಈ ಲೇಖನ ಓದಿದರೆ ಕಾರಣ ಗೊತ್ತಾಗುತ್ತೆ.    ಆಗ ಬ್ರಿಟಿಷ್ ಸಕಾ೯ರರಕ್ಕೆ ಆಡಳಿತ ಸುಗುಮಕ್ಕೆ ರೈಲು ಮಾಗ೯ ಅತ್ಯಗತ್ಯ ಎಂಬ ಸಕಾರಣ ಮನವರಿಕೆ ಆದ ಕಾಲ ಏಕೆಂದರೆ ಬ್ರಿಟಿಷರು ಅಮೆರಿಕಾ ವಲಸೆಯಲ್ಲಿ ಇದನ್ನ ಮನಗOಡಿದ್ದರು, ಬೆಂಗಳೂಳಿ ರಿಂದ ಶಿವಮೊಗ್ಗ ತಲುಪುವ ರೈಲು ಮಾಗ೯ ತಾಳಗುಪ್ಪಾ ತಲುಪಿದರೆ ಜೋಗ ಜಲಪಾತ ವೀಕ್ಷಣೆಗೆ ಅನುಕೂಲ ಎಂಬುದು ಹಾಗೆ ಮತ್ತೊಂದು ಮ್ಯಸೂರು ಸಕಾ೯ರ ಶರಾವತಿ ನದಿಗೆ ಆಣೆಕಟ್ಟು ಕಟ್ಟಿ.ಜಲ ವಿದ್ಯುತ್ ತಯಾರಿಸಲು ಸಾಮಗ್ರಿ ಸಾಗಾಣಿಕೆಗೆ ಅನುಕೂಲ ಎಂಬ ಕಾರಣದಿಂದ ಶಿವಮೊಗ್ಗದಿಂದ ತಾಳಗುಪ್ಪ ರೈಲು ಮಾಗ೯ ಯೋಜನೆ ಮಾಡಲಾಯಿತು.    ಆಗ ಪ್ಲೇಗ್ ಮಾರಿಯ ಕಾಲ, ಎಲ್ಲೆಲ್ಲೂ ಜನ ಸಾಯುತ್ತಿದ್ದರು ಆಗಲೇ ಈ ರೈಲು ಮಾಗ೯ ಶಿವಮೊಗ್ಗ ಆರಸಾಳಿOದ ದೊಡ್ಡಿನ ಕೊಪ್ಪ (ಈಗಿನ ರಿಪ್ಪನ್ ಪೇಟೆ) ಆನಂದಪುರಂ ಮಾಗ೯ ನಿಗದಿ ಆಗಿತ್ತು ಆದರೆ ಈ ಭಾಗದಲ್ಲಿ ಒಂದು  ವದಂತಿ ಈ ಬಾಗದಲ್ಲಿ ಹರಡಿತ್ತು ಅದೇನೆಂದರೆ ರೈಲು ಬಂದರೆ ಪ್ಲೇ ಗು ಬರುತ್ತೆ  ಅಂತ.    ಹಾಗಾಗಿ ಈ ಭಾಗದಲ್ಲಿನ ಜಾಗೃತ ಜನ ನಾಯಕರುಗಳು ಹೇಗಾದರು ಮಾಡಿ ರೈಲು ಬರದಂತೆ ಮಾಡಲು ಎಲ್ಲಾ ರೀತಿಯ ಪ್ರಯತ್ನ ಮಾಡಲು ಪ್ರಾರಂಭಿಸಿದರು.     ಇದೇ ಸಂದಭ೯ದಲ್ಲ...