Skip to main content

Blog number 932. ಗೆಳೆಯ ಹಾವೇರಿ ಜಿಲ್ಲಾ ಪಂಚಾಯತ್ ನ ಮಾಜಿ ಅಧ್ಯಕ್ಷ, ಭಾರತೀಯ ಸೈನ್ಯದಲ್ಲಿ ಸೇವೆ ಸಲ್ಲಿಸಿದ ರೈತರ ಒಡನಾಡಿ ರಾಜೇಂದ್ರ ಹಾವೇರಣ್ಣ ವಿಧಾನಸಭಾ ಸದಸ್ಯರಾಗಲಿ ಎಂದು ಹಾರೈಸಿದೆ.

#ಹಾವೇರಿ_ಜಿಲ್ಲಾಪಂಚಾಯತ್_ಮಾಜಿ_ಅಧ್ಯಕ್ಷರು_ಹಾಲಿ_ಸದಸ್ಯರು.

#ಜಿಲ್ಲಾ_ಬಿಜೆಪಿ_ಉಪಾದ್ಯಕ್ಷರು

#ಕುರುಬ_ಸಮಾಜದ_ಯುವ_ಮುಂದಾಳು

#ಗೆಳೆಯ_ರಾಜೇಂದ್ರಹಾವೇರಣ್ಣನವರು_ನನ್ನ_ಅತಿಥಿ

#ಮುಂದಿನ_ವರ್ಷ_ಇವರು_ವಿಧಾನಸಭೆಗೆ_ಪ್ರವೇಶಿಸಲಿ_ಎಂದು_ಹಾರೈಸುತ್ತೇನೆ.

   ರಾಜೇಂದ್ರ ಹಾವೇರಣ್ಣನವರು 2013ರಲ್ಲಿ ಹಾವೇರಿ ಜಿಲ್ಲೆಯ ಜಿಲ್ಲಾ ಪಂಚಾಯತ್ ಅಧ್ಯಕ್ಷರು, ಈಗಲೂ ಹಾಲಿ ಜಿಲ್ಲಾ ಪಂಚಾಯತ್ ಸದಸ್ಯರಾಗಿದ್ದಾರೆ ಮತ್ತು ಹಾವೇರಿ ಜಿಲ್ಲಾ ಬಿಜೆಪಿ ಉಪಾದ್ಯಕ್ಷರು.
   ಇವರ ಕ್ಷೇತ್ರದಲ್ಲಿಯೇ ಕಾಗಿನೆಲೆ ಕನಕದಾಸರ ಹುಟ್ಟೂರು ಬಾಡಾ ಮತ್ತು ಕನಕದಾಸರ ಸಮಾದಿ ಸ್ಮಾರಕಗಳು ಇದೆ, ಕುರುಬ ಸಮಾಜ ಪರಿಶಿಷ್ಟ ಪಂಗಡದ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದವರು.
    ಸ್ವಾಮೀಜಿಗಳ ಆಪ್ತ ವಲಯದವರು ಈಗಿನ ಇನ್ನೊಂದು ಅವದಿಗೆ ಜಿಲ್ಲಾ ಪಂಚಾಯತ್ ಅಧ್ಯಕ್ಷರಾಗುವ ಅಥವ ಸರ್ಕಾರದ ನಿಗಮ ಮಂಡಳಿ ಅಧ್ಯಕ್ಷರಾಗುತ್ತಾರೆ ಅಂತ ಹಾವೇರಿಯ ರಾಜಕೀಯ ವಲಯದಲ್ಲಿ ಸುದ್ದಿ ಇದೆ.
   ರಾಜೇಂದ್ರ ಹಾವೇರಣ್ಣನವರು ಭಾರತೀಯ ಸೇನೆಯಲ್ಲಿ ಕಾಶ್ಮೀರದಲ್ಲಿ ಸೇವೆ ಸಲ್ಲಿಸಿದ ವೀರ ಯೋದರು ಕೂಡ.
  ಇವರು ತುಂಬಾ ಕಷ್ಟದಲ್ಲಿ ಮೇಲೆ ಬಂದವರು ಒಟ್ಟು ಕುಟುಂಬದಲ್ಲಿ 15 ಎಕರೆ ಜಮೀನು ಮತ್ತು ಒಂದು ಬೋರ್ ವೆಲ್ ನೀರಿದ್ದರೂ ಇಡೀ ಕುಟುಂಬ ಕೃಷಿಯಲ್ಲಿ ನಿರಾಸಕ್ತಿ ತೋರಿದ್ದರಿಂದ ಎಲ್ಲರೂ ಇವರಿಗೆ  ಸೇನೆಯಲ್ಲಿ ಬರುವ ಸಂಬಳ ನಿರೀಕ್ಷಿಸುವಂತಾದ ಕಾಲವಾಗಿತ್ತು ಇದರಿಂದ ಹೊರಬರಲು ಸೇನೆಯಿಂದ ಸ್ವಯ೦ ನಿವೃತ್ತಿ ಪಡೆದು ಕೃಷಿಯಲ್ಲಿ ತೊಡಗಿ ನಂತರ ಬೀಜ ಉತ್ಪಾದನಾ ಸಂಸ್ಥೆಯಲ್ಲಿ ದಾಖಲೆ ಮಾಡಿ ಕೈ ತುಂಬಾ ಹಣ ಮತ್ತು ದೇಶ-ವಿದೇಶ ಪ್ರವಾಸಗಳೂ ಮಾಡಿದವರು.
   ಈಗ ಸುಮಾರು 50 ಎಕರೆಯಲ್ಲಿ ಕೃಷಿ ಮಾಡುತ್ತಾರೆ ಇವರ ಕೃಷಿ ಭೂಮಿಯಲ್ಲಿ ಹತ್ತಕ್ಕೂ ಹೆಚ್ಚು ಬೋರ್ ವೆಲ್ ಗಳಿದೆ ಜೊತೆಗೆ ರಾಜಕೀಯ ಸಮಾಜ ಸೇವೆಯಲ್ಲಿದ್ದಾರೆ.
  ಒಬ್ಬ ಮಗ ಆಳ್ವಾಸ್ ನಲ್ಲಿ ಡಿಸ್ಕಸ್ ಥ್ರೋ ನಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ಕ್ರೀಡಾಪಟು ಈಗ ದಾರವಾಡದ ಕಾನೂನು ವಿಶ್ವವಿದ್ಯಾಲಯದಲ್ಲಿ ಕಾನೂನು ಪದವಿ ಓದುತ್ತಿದ್ದಾರೆ, ಇನ್ನೊಬ್ಬ ಮಗ ಕೂಡ ಆಳ್ವಾಸ್ ನಲ್ಲಿ ಪದವಿ  ಶಿಕ್ಷಣ ಕೊಡಿಸುತ್ತಿದ್ದಾರೆ, ಕೊನೆಯ ಪುತ್ರ ಹಾವೇರಿಯಲ್ಲಿ ಪಿಯುಸಿ ಶಿಕ್ಷಣ ವ್ಯಾಸಂಗ.
   ಮೊನ್ನೆ ದಂಪತಿ ಸಮೇತ ನಮ್ಮಲ್ಲಿಗೆ ಬಂದಿದ್ದರು ಅವರಿಗೆ ಕೇಳಿದೆ "ನಿಮ್ಮ ಹಿತೈಷಿಗಳು ಪುನಃ ಜಿಲ್ಲಾ ಪಂಚಾಯತ್ ಅಧ್ಯಕ್ಷರಾಗುತ್ತಾರೆ ಅನ್ನುತ್ತಾರೆ, ಇನ್ನು ಕೆಲವರು ಜಿಲ್ಲಾ ಪಂಚಾಯತ್ ಒಮ್ಮೆ ಅಧ್ಯಕ್ಷರಾಗಿದ್ದರು ಈಗ ಅದು ಬೇಡ ನಿಗಮ ಮಂಡಳಿ ಅಧ್ಯಕ್ಷರಾಗಲಿ ಅನ್ನುತ್ತಾರೆ, ಇನ್ನೂ ಕೆಲವರು ಇದಾವುದು ಬೇಡ ಬ್ಯಾಡಗಿ ವಿದಾನ ಸಭಾ ಕ್ಷೇತ್ರದಿಂದ ಶಾಸಕರಾಗಲಿ ಅನ್ನುತ್ತಾರೆ ನಿಮ್ಮ ನಿರ್ದಾರ ಏನು?" ಅದಕ್ಕೆ ಅವರ ಉತ್ತರ, ದೇಶದ ಸೈನಿಕನಾಗಿ ಈಗ ಈ ಮಟ್ಟಕ್ಕೆ ಬರಲು ನನ್ನ ಪ್ರಯತ್ನಕ್ಕಿಂತ ನನ್ನ ವಿಧಿ ಬರಹ ಕಾರಣವಾಗಿದೆ, ಯಾವುದೂ ನಿರ್ದಾರ ಮಾಡಿಲ್ಲ ಆದರೆ ಕನಕದಾಸ ಪೀಠದ ಸ್ವಾಮೀಜಿಯವರು ಏನು ಮಾರ್ಗದರ್ಶನ ಮಾಡುತ್ತಾರೆ ಅದರಂತೆ ನಡೆಯುತ್ತೇನೆ ಅಂದರು.
   ರಾಜ್ಯ ಬಿಜೆಪಿಯಲ್ಲಿ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಹೊಸ ಮುಖಗಳಿಗೆ ಅವಕಾಶ ನೀಡಿದರೆ ಭಾರತೀಯ ಸೈನ್ಯದಲ್ಲಿ ಸೇವೆ ಸಲ್ಲಿಸಿದ, ರೈತರ ಮದ್ಯದಲ್ಲಿ ಬೀಜೋತ್ಪನ್ನ ಉದ್ಯಮದಲ್ಲಿರುವ,ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷರಾಗಿದ್ದ ಗೆಳೆಯ ರಾಜೇಂದ್ರ ಹಾವೇರಣ್ಣನವರಿಗೆ ಕನಕದಾಸರ ಹುಟ್ಟೂರಿನ ಕ್ಷೇತ್ರವಾದ ಬ್ಯಾಡಗಿ ವಿದಾನ ಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಅವಕಾಶ ಸಿಗಲಿ ಎಂದು ಹಾರೈಸಿದೆ.
ಹಾಗೇನಾದರು ಅವಕಾಶ ಸಿಕ್ಕರೆ, ನನಗೆ ಈ ಭಾಗದ ಹೆಚ್ಚು ಪರಿಚಯ ಇರುವುದರಿಂದ ಅತಿ ಹೆಚ್ಚು ಮತಗಳಿಂದ ಜನ ಇವರನ್ನು ಆಯ್ಕೆ ಮಾಡುವುದು ಮಾತ್ರ ಖಚಿತ.

Comments

Popular posts from this blog

# ಜುಟ್ಟು ಕಾಳಿಂಗ ಸಪ೯ದ ಆಸ್ತಿತ್ವದ ಮಲೆನಾಡಿನ ಮಿಥ್ಯೆ#

  # ಕಾಳಿ೦ಗ ಸಪ೯ದಲ್ಲಿ ಜುಟ್ಟು ಕಾಳಿಂಗ ಸಪ೯ ಅಂತ ಇದೇ ಅನ್ನುವ ಯಾರು ನೋಡದ ಸಪ೯ದ ಅಸ್ತಿತ್ವ#    ಮಲೆನಾಡಿನ ಹಳ್ಳಿಗಳಲ್ಲಿ, ಅದು ಕಾಳಿ೦ಗ ಸಪ೯ದ ವಾಸಸ್ಥಳದ ಪರಿಸರದಲ್ಲಿ ಜುಟ್ಟು ಕಾಳಿಂಗ ಸಪ೯ ಇದೆ ಅನ್ನುವ ಮಾತು ಆಗಾಗ್ಗೆ ಕೇಳುತ್ತಿರುತ್ತೇವೆ. ಆದರೆ ಆ ರೀತಿಯ ಹಾವು ಇಲ್ಲ ಎಂದು ಹಾವಿನ ಬಗ್ಗೆ ಸಂಶೋದನೆ ಮಾಡುವವರು, ಅರಣ್ಯ ಇಲಾಖೆಯವರು, ಹಾವು ಹಿಡಿಯುವವರು ಖಡಾಖಂಡಿತವಾಗಿ ಹೇಳುತ್ತಾರಾದರು, ಈ ವದಂತಿ ಹೇಗೆ ಹರಡಿದೆ?.    ಇದು ಒಂದು ಊರು ಹಳ್ಳಿಯಲ್ಲ ನಾನು ನೋಡಿದಂತೆ ಮಹಾರಾಷ್ಟ್ರದ ರತ್ನಗಿರಿಯಿ೦ದ ಕೇರಳದ ಕಾಸರಗೋಡಿನ ತನಕ ಜುಟ್ಟು ಕಾಳಿಂಗದ ಅನೇಕ ರೋಚಕ ಕಥೆ ಕೇಳಿದ್ದೇನೆ.   ಪ್ರತ್ಯಕ್ಷ ನೋಡಿದವರು ತಾವು ಎನ್ನುವ ಅನೇಕರಲ್ಲಿ ಮಾತಾಡಿದ್ದೇನೆ ಆದರೆ ಅದು ನಂಬಲಹ೯ ಮಾಹಿತಿ ಅನಿಸಲಿಲ್ಲ, ಒಂದು ರೀತಿ ಕಾಲ್ಪನಿಕ ತ್ರಿಲ್ಲರ್ ಕಥೆ ಅಷ್ಟೇ ಅನ್ನಬಹುದು.    ಜಡೆ ಕಾಳಿಂಗ ಸಪ೯ಕ್ಕೆ ರೋಷ ಜಾಸ್ತಿ, ಹೆಡೆ ಮೇಲೆ ಕೂದಲಿನ ಜುಟ್ಟು ಇರುತ್ತೆ, ಮನುಷ್ಯರನ್ನ ಕಂಡರೆ ಓಡಿಸಿಕೊಂಡು ಬರುತ್ತೆ, ಅದರಿಂದ ತಪ್ಪಿಸಿಕೊಳ್ಳಲು ಒಂದೇ ದಾರಿ ಅದೇನೆಂದರೆ ತಗ್ಗಿನ ಪ್ರದೇಶದಲ್ಲಿ ಓಡುವುದು.     ಯಾಕೆ೦ದರೆ ಓಡಿಸಿಕೊಂಡು ಬರುವ ಜುಟ್ಟು ಕಾಳಿಂಗದ ಜುಟ್ಟು, ಇಳಿಜಾರಿನಲ್ಲಿ ಅದರ ತಲೆಯಿ೦ದ ಇಳಿಜಾರಿಗೆ ಸರಿಯುವುದರಿಂದ  ಕಣ್ಣಿನ ಮೇಲೆ ಕೂದಲ ಜುಟ್ಟು ಮುಚ್ಚುವುದರಿಂದ ಕಣ್ಣು ಕಾಣುವುದಿಲ್ಲ, ಆಗಲೇ ತಪ್...

HISTORICAL SAGAR MARIKAMBA JATRA.ಐತಿಹಾಸಿಕ ಸಾಗರದ ಮಾರಿಕಾಂಬಾ ಜಾತ್ರೆ

     ಸಾಗರದ ಮಾರಿಕಾಂಬಾ ಜಾತ್ರೆ ಐತಿಹಾಸಿಕ ಚರಿತ್ರೆಯಲ್ಲಿ ದಾಖಲೆ.        ಕನಾ೯ಟಕ ರಾಜ್ಯದಲ್ಲಿ ಎರೆಡು ಮಾರಿಕಾಂಬಾ ಜಾತ್ರೆಗಳು ಪ್ರಸಿದ್ಧಿ ಪಡೆದಿದೆ ಅದು ಉತ್ತರ ಕನ್ನಡ ಜಿಲ್ಲೆಯ ಸಿಸಿ೯ಯದ್ದು ಮತ್ತು ಶಿವಮೊಗ್ಗ ಜಿಲ್ಲೆಯ ಸಾಗರದ್ದು.    ಪ್ರತಿ ಮೂರು ವಷ೯ಕೆ ಈ ಜಾತ್ರೆ ಆಚರಿಸಲಾಗುತ್ತೆ ಶೂದ್ರ ವಗ೯ದವರು ಭಯ ಮತ್ತು ಭಕ್ತಿಯಿಂದ ಕುರಿ ಕೋಳಿ ಬಲಿ ನೀಡುವ ಪರಂಪರೆ ಇದೆ.ಮಂಗಳವಾರ ಮೇಲು ಜಾತಿಯ ಜನರ ಪೂಜೆ ದೇವಿಯ ತವರು ಮನೆಯಲ್ಲಿ ನಡೆಯುತ್ತದೆ ನಂತರ ರಾತ್ರಿ ಗಂಡನ ಸೇರುವ ಮಾರಿಗೆ ಶೂದ್ರರ ಪೂಜೆ, ಬಲಿ ಮೀಸಲು.    ಮೊದಲೆಲ್ಲ ಮಾರಿಯಮ್ಮನಿಗೆ ಕೊಣನ ಬಲಿ ನೀಡುತ್ತಿದ್ದರು ಈಗ ಇದು ಕಾನೂನು ಪ್ರಕಾರ ನಿಷಿದ್ಧ ಆದರೆ ಈ ಆಚಾರಣೆ ಗುಪ್ತವಾಗಿ ಬೇರೆ ಕಡೆ ನಡೆಸಲಾಗುತ್ತೆ ಅನ್ನುತ್ತಾರೆ.    ಸಾಗರದ ಮಾರಿಕಾ0ಬಾ ಜಾತ್ರೆ ಜಾತ್ರೆಯಿ೦ದ ಜಾತ್ರೆಗೆ ಅದೂರಿಯಾಗಿ ನಡೆಯುತ್ತದೆ, ಕೋಟ್ಯಾoತರ ಹಣದ ವಹಿವಾಟು ಕೂಡ, ಮೊದಲೆಲ್ಲ ಹಣದ ಅಪರಾ ತಪರ ಆಗುತ್ತಿದೆ ಎಂಬ ಗುಲ್ಲು ಇತ್ತು ಆದರೆ ಈಗೆಲ್ಲ ಪಾರದಶ೯ಕವಾಗಿದೆ ಆದರೂ ಈ ಬಾರಿಯ 2017ರ ಜಾತ್ರೆಯಲ್ಲಿ ಅವ್ಯವಹಾರದ ಆರೋಪ ಮಾಡಲಾಗಿದೆ ಈ ವಿಚಾರ ಇಲ್ಲಿ ಅಪ್ರಸ್ತುತ ಆದರೂ ಈ ಬಗ್ಗೆ ಬರೆಯಲು ಕಾರಣ ಕೆಳದಿ ಅರಸರ ಕಾಲದಲ್ಲಿ ಅಂದರೆ 350 ವಷ೯ದ ಹಿಂದೆಯೂ ರಾಜರಿಗೆ ಸಾಗರದ ಮಾರಿಕಾಂಬಾ ಜಾತ್ರೆಯಲ್ಲಿ ಸಾವ೯ಜನಿಕರಿಂದ ಸಂಗ್ರಹಿಸಿದ ಜಾತ...

ರಿಪ್ಪನ್ ಪೇಟೆ ( ಶಿವಮೊಗ್ಗ ಜಿಲ್ಲೆ) ಹೆಸರು ಬಂದಿದ್ದಾದರು ಹೇಗೆ?

#  ರಿಪ್ಪನ್ ಪೇಟೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಪ್ರಮುಖ ಹೋಬಳಿ ಕೇಂದ್ರ ಈ ಆಂಗ್ಲ ಅಧಿಕಾರಿಯ ಹೆಸರು ಇಡಲು ಕಾರಣವಾದ ಘಟನೆ ತುಂಬಾ ಕುತೂಹಲಕಾರಿ# ಸ್ವಲ್ಪ ಕಾಲ ನೀವು ಈ ಲೇಖನ ಓದಿದರೆ ಕಾರಣ ಗೊತ್ತಾಗುತ್ತೆ.    ಆಗ ಬ್ರಿಟಿಷ್ ಸಕಾ೯ರರಕ್ಕೆ ಆಡಳಿತ ಸುಗುಮಕ್ಕೆ ರೈಲು ಮಾಗ೯ ಅತ್ಯಗತ್ಯ ಎಂಬ ಸಕಾರಣ ಮನವರಿಕೆ ಆದ ಕಾಲ ಏಕೆಂದರೆ ಬ್ರಿಟಿಷರು ಅಮೆರಿಕಾ ವಲಸೆಯಲ್ಲಿ ಇದನ್ನ ಮನಗOಡಿದ್ದರು, ಬೆಂಗಳೂಳಿ ರಿಂದ ಶಿವಮೊಗ್ಗ ತಲುಪುವ ರೈಲು ಮಾಗ೯ ತಾಳಗುಪ್ಪಾ ತಲುಪಿದರೆ ಜೋಗ ಜಲಪಾತ ವೀಕ್ಷಣೆಗೆ ಅನುಕೂಲ ಎಂಬುದು ಹಾಗೆ ಮತ್ತೊಂದು ಮ್ಯಸೂರು ಸಕಾ೯ರ ಶರಾವತಿ ನದಿಗೆ ಆಣೆಕಟ್ಟು ಕಟ್ಟಿ.ಜಲ ವಿದ್ಯುತ್ ತಯಾರಿಸಲು ಸಾಮಗ್ರಿ ಸಾಗಾಣಿಕೆಗೆ ಅನುಕೂಲ ಎಂಬ ಕಾರಣದಿಂದ ಶಿವಮೊಗ್ಗದಿಂದ ತಾಳಗುಪ್ಪ ರೈಲು ಮಾಗ೯ ಯೋಜನೆ ಮಾಡಲಾಯಿತು.    ಆಗ ಪ್ಲೇಗ್ ಮಾರಿಯ ಕಾಲ, ಎಲ್ಲೆಲ್ಲೂ ಜನ ಸಾಯುತ್ತಿದ್ದರು ಆಗಲೇ ಈ ರೈಲು ಮಾಗ೯ ಶಿವಮೊಗ್ಗ ಆರಸಾಳಿOದ ದೊಡ್ಡಿನ ಕೊಪ್ಪ (ಈಗಿನ ರಿಪ್ಪನ್ ಪೇಟೆ) ಆನಂದಪುರಂ ಮಾಗ೯ ನಿಗದಿ ಆಗಿತ್ತು ಆದರೆ ಈ ಭಾಗದಲ್ಲಿ ಒಂದು  ವದಂತಿ ಈ ಬಾಗದಲ್ಲಿ ಹರಡಿತ್ತು ಅದೇನೆಂದರೆ ರೈಲು ಬಂದರೆ ಪ್ಲೇ ಗು ಬರುತ್ತೆ  ಅಂತ.    ಹಾಗಾಗಿ ಈ ಭಾಗದಲ್ಲಿನ ಜಾಗೃತ ಜನ ನಾಯಕರುಗಳು ಹೇಗಾದರು ಮಾಡಿ ರೈಲು ಬರದಂತೆ ಮಾಡಲು ಎಲ್ಲಾ ರೀತಿಯ ಪ್ರಯತ್ನ ಮಾಡಲು ಪ್ರಾರಂಭಿಸಿದರು.     ಇದೇ ಸಂದಭ೯ದಲ್ಲ...