Skip to main content

Blog number 936. ಕೆರೆಹಿತ್ತಲು ಶಾಲೆಗೆ ಭೂದಾನ ಮಾಡಿದ ಗುಮ್ಮಿ ನಾಗಣ್ಣರ ಪುತ್ರಿ ಶ್ರೀಮತಿ ಜಯಮ್ಮ ರುದ್ರಪ್ಪ ನನ್ನ ಕಛೇರಿಗೆ ಕೃತಜ್ಞತೆ ತಿಳಿಸಲು ಬಂದಿದ್ದರು.

ತಂದೆಯ_ಬಗ್ಗೆ_ಹೆಣ್ಣುಮಕ್ಕಳ_ಪ್ರೀತಿ_ವರ್ಣಿಸಲು_ಸಾಧ್ಯವಾ?

#ನಮ್ಮಊರಿನ_ಸಮೀಪದ_ಗುಮ್ಮಿನಾಗಣ್ಣರ_ಬಗ್ಗೆ_ಆನಂದಪುರಂ_ಇತಿಹಾಸದಲ್ಲಿ_ಉಲ್ಲೇಖ_ಮಾಡಿದ್ದೆ

#ಕೃತಜ್ಞತೆ_ಹೇಳಲು_ಬೆಂಗಳೂರಿಂದ_ಬಂದ_ಅವರ_ಪುತ್ರಿ_ಜಯಮ್ಮ.

   ಸಾಮಾಜಿಕ ಜಾಲ ತಾಣದ ವಿಸ್ಮಯದ ಬಗ್ಗೆ ಏನು ಹೇಳಲಿ? ನಿನ್ನೆ ಸಂಜೆ ನನ್ನ ಕಛೇರಿಗೆ ಬಂದವರು ಶ್ರೀಮತಿ ಜಯಮ್ಮ ಇವರು ಬಂದ ಉದ್ದೇಶ, ಇವರ ತಂದೆ ದಿವಂಗತ ಗುಮ್ಮಿ ನಾಗಣ್ಣ ಆನಂದಪುರಂ ಸಮೀಪದ ಆಚಾಪುರ ಗ್ರಾಮ ಪಂಚಾಯತ್ ನ ಕೆರೆಹಿತ್ತಲು ಗ್ರಾಮದಲ್ಲಿ ಊರಿನ ಪ್ರಾಥಮಿಕ ಶಾಲೆಗೆ ಬೆಲೆ ಬಾಳುವ ಜಮೀನು ದಾನ ಮಾಡಿದ್ದಾರೆ ಈ ಬಗ್ಗೆ ಒಂದು ಲೇಖನ ಆನಂದಪುರಂ ಇತಿಹಾಸ ಪುಸ್ತಕಕ್ಕಾಗಿ ಬರೆದಿದ್ದೆ (ಜನವರಿ 2023ರಲ್ಲಿ ಪುಸ್ತಕ ಬಿಡುಗಡೆ ಆಗಲಿದೆ) ಮತ್ತು ಅದನ್ನು ಪೇಸ್ ಬುಕ್ ನಲ್ಲಿ ಪ್ರಕಟಿಸಿದ್ದೆ ಇದನ್ನು ಓದಿದ ಇವರು ನನಗೆ ಕೃತಜ್ಞತೆ ಹೇಳಲು ಬಂದಿದ್ದರು.
  ಗುಮ್ಮಿ ನಾಗಣ್ಣರ ಶಾಲಾ ಭೂಮಿ ದಾನದ ಲೇಖನ ಈ ಲಿಂಕ್ ಕ್ಲಿಕ್ ಮಾಡಿ ನೋಡಬಹುದು https://arunprasadhombuja.blogspot.com/se
  ಗುಮ್ಮಿ ನಾಗಣ್ಣರ ಪುತ್ರಿ ಜಯಮ್ಮನವರು ಆನಂದಪುರಂನಲ್ಲೆ 5ನೇ ತರಗತಿಯಿಂದ ವ್ಯಾಸಂಗ ಮಾಡಿದವರು. ಇವರ ಪತಿ ರುದ್ರಪ್ಪನವರು ಬೆಂಗಳೂರಿನ ಅಕೌ೦ಟೆಂಟ್ ಜನರಲ್ (AG) ಆಫೀಸಿನ ಉನ್ನತ ಅಧಿಕಾರಿಯಾಗಿ ನಿವೃತ್ತರಾಗಿದ್ದಾರೆ ಅವರು ನಮ್ಮ ಆನಂದಪುರಂ ಸಮೀಪದ ಅಂದಾಸುರದವರು.
  ಇವರ ಜೊತೆ ಕಿರಿಯ ಪುತ್ರ ಪ್ರಶಾಂತ್ ಬಂದಿದ್ದರು ಅವರು ಪ್ಯಾರಾ ಒಲಂಪಿಕ್ ನಲ್ಲಿ ಅಥ್ಲೇಟಿಕ್ ನಲ್ಲಿ ಗೊಲ್ಡನ್ ಮೆಡಲ್ ಪಡೆದವರು, ನಮ್ಮ ಊರಿನ ಹುಡುಗನ ಈ ಸಾಧನೆ ನಮ್ಮ ಊರಿಗೆ ಗೊತ್ತೇ ಇಲ್ಲ.
  ಬೆಂಗಳೂರಿನ ಮೆಜೆಸ್ಟಿಕ್ ನಲ್ಲಿ ಇವರ ಸೊಸೆ ಪಾಲುದಾರಿಕೆಯಲ್ಲಿ ನಾಲ್ಕು ಅಂತಸ್ತಿನ ಕಟ್ಟಡದಲ್ಲಿ GFC ರೆಸ್ಟೋರೆಂಟ್ ತೆರೆದಿದ್ದಾರೆ (ಕೃಷ್ಣಪ್ಪ ಗೌಡರ ಪ್ರೈಡ್ ಚಿಕನ್ ಪ್ರಾಂಚೈಸಿ).
   ತಂದೆಯ ಬಗ್ಗೆ ಹೆಣ್ಣು ಮಕ್ಕಳಲ್ಲಿರುವ ಪ್ರೀತಿಗೆ ಬೆಲೆ ಕಟ್ಟಲಾಗದು, ನನ್ನ ಒಳಿತಿಗಾಗಿ ಆಶ್ರೀವದಿಸಿ ಹೋಗಿದ್ದಾರೆ ನಾನೂ ಅವರ ಆರೋಗ್ಯ ಆಯಸ್ಸಿಗಾಗಿ ಹಾರೈಸಿದೆ.

Comments

Popular posts from this blog

# ಜುಟ್ಟು ಕಾಳಿಂಗ ಸಪ೯ದ ಆಸ್ತಿತ್ವದ ಮಲೆನಾಡಿನ ಮಿಥ್ಯೆ#

  # ಕಾಳಿ೦ಗ ಸಪ೯ದಲ್ಲಿ ಜುಟ್ಟು ಕಾಳಿಂಗ ಸಪ೯ ಅಂತ ಇದೇ ಅನ್ನುವ ಯಾರು ನೋಡದ ಸಪ೯ದ ಅಸ್ತಿತ್ವ#    ಮಲೆನಾಡಿನ ಹಳ್ಳಿಗಳಲ್ಲಿ, ಅದು ಕಾಳಿ೦ಗ ಸಪ೯ದ ವಾಸಸ್ಥಳದ ಪರಿಸರದಲ್ಲಿ ಜುಟ್ಟು ಕಾಳಿಂಗ ಸಪ೯ ಇದೆ ಅನ್ನುವ ಮಾತು ಆಗಾಗ್ಗೆ ಕೇಳುತ್ತಿರುತ್ತೇವೆ. ಆದರೆ ಆ ರೀತಿಯ ಹಾವು ಇಲ್ಲ ಎಂದು ಹಾವಿನ ಬಗ್ಗೆ ಸಂಶೋದನೆ ಮಾಡುವವರು, ಅರಣ್ಯ ಇಲಾಖೆಯವರು, ಹಾವು ಹಿಡಿಯುವವರು ಖಡಾಖಂಡಿತವಾಗಿ ಹೇಳುತ್ತಾರಾದರು, ಈ ವದಂತಿ ಹೇಗೆ ಹರಡಿದೆ?.    ಇದು ಒಂದು ಊರು ಹಳ್ಳಿಯಲ್ಲ ನಾನು ನೋಡಿದಂತೆ ಮಹಾರಾಷ್ಟ್ರದ ರತ್ನಗಿರಿಯಿ೦ದ ಕೇರಳದ ಕಾಸರಗೋಡಿನ ತನಕ ಜುಟ್ಟು ಕಾಳಿಂಗದ ಅನೇಕ ರೋಚಕ ಕಥೆ ಕೇಳಿದ್ದೇನೆ.   ಪ್ರತ್ಯಕ್ಷ ನೋಡಿದವರು ತಾವು ಎನ್ನುವ ಅನೇಕರಲ್ಲಿ ಮಾತಾಡಿದ್ದೇನೆ ಆದರೆ ಅದು ನಂಬಲಹ೯ ಮಾಹಿತಿ ಅನಿಸಲಿಲ್ಲ, ಒಂದು ರೀತಿ ಕಾಲ್ಪನಿಕ ತ್ರಿಲ್ಲರ್ ಕಥೆ ಅಷ್ಟೇ ಅನ್ನಬಹುದು.    ಜಡೆ ಕಾಳಿಂಗ ಸಪ೯ಕ್ಕೆ ರೋಷ ಜಾಸ್ತಿ, ಹೆಡೆ ಮೇಲೆ ಕೂದಲಿನ ಜುಟ್ಟು ಇರುತ್ತೆ, ಮನುಷ್ಯರನ್ನ ಕಂಡರೆ ಓಡಿಸಿಕೊಂಡು ಬರುತ್ತೆ, ಅದರಿಂದ ತಪ್ಪಿಸಿಕೊಳ್ಳಲು ಒಂದೇ ದಾರಿ ಅದೇನೆಂದರೆ ತಗ್ಗಿನ ಪ್ರದೇಶದಲ್ಲಿ ಓಡುವುದು.     ಯಾಕೆ೦ದರೆ ಓಡಿಸಿಕೊಂಡು ಬರುವ ಜುಟ್ಟು ಕಾಳಿಂಗದ ಜುಟ್ಟು, ಇಳಿಜಾರಿನಲ್ಲಿ ಅದರ ತಲೆಯಿ೦ದ ಇಳಿಜಾರಿಗೆ ಸರಿಯುವುದರಿಂದ  ಕಣ್ಣಿನ ಮೇಲೆ ಕೂದಲ ಜುಟ್ಟು ಮುಚ್ಚುವುದರಿಂದ ಕಣ್ಣು ಕಾಣುವುದಿಲ್ಲ, ಆಗಲೇ ತಪ್...

ಶರಾವತಿ ನದಿ ಉಗಮ ಸ್ಥಾನ ಅಂಬುತೀಥ೯.

ಇಡೀ ರಾಜ್ಯಕ್ಕೆ ವಿದ್ಯುತ್ ನೀಡುವ ಶರಾವತಿ ನದಿಯ ಉಗಮ ಸ್ಥಾನ ಅಂಬುತೀಥ೯, ಆರಗ ಸಮೀಪದ ತೀಥ೯ಳ್ಳಿ ತಾಲ್ಲೂಕಿನಲ್ಲಿದೆ( ಶಿವಮೊಗ್ಗ ಜಿಲ್ಲೆ)    ಅಂಬು ತೀಥ೯ದಲ್ಲಿ ಶ್ರೀ ರಾಮ ವನವಾಸದಲ್ಲಿದ್ದಾಗ ಸೀತಾ ಮಾತೆಗೆ ಪೂಜೆಗೆ ನೀರು ಸಿಗದಿದ್ದಾಗ ರಾಮ ತನ್ನ ಅಂಬಿನಿಂದ (ಬಿಲ್ಲಿನ ಬಾಣದಿಂದ) ನೆಲ ಸೀಳಿ ನೀರು ತಂದರೆ೦ದು ರಾಮಾಯಣದಲ್ಲಿ ಉಲ್ಲೇಖವಿದೆ, ಹಾಗಾಗಿ ಈ ಸ್ಥಳಕ್ಕೆ ಅಂಬುತೀಥ೯ ಎಂಬ ಹೆಸರು ಬ೦ತು ಎಂಬುದು ಸ್ಥಳ ಪುರಾಣ.    ಇಲ್ಲಿ ಸಣ್ಣ ತೊರೆಯಾಗಿ ಹುಟ್ಟುವ ನದಿ ಬಾಣದಿಂದ ಹುಟ್ಟಿದ್ದರಿಂದ ಶರಾವತಿ ಎ೦ಬ ಹೆಸರು ಪಡೆದು ಪೂವ೯ಕ್ಕೆ ಹರಿದು ನಂತರ ಪಶ್ಚಿಮ ಮುಖವಾಗಿ ತಿರುಗಿ ಹೊಸನಗರ ತಾಲ್ಲೂಕನ್ನ ದಾಟಿ ಸಾಗರ ತಾಲ್ಲೂಕಿನ ಜೋಗದಲ್ಲಿ ಜಲಪಾತವಾಗಿ ದಟ್ಟ ಕಾನನದ ಕಣಿವೆ ಮುಖಾಂತರ ಹರಿದು ಹೊನ್ನಾವರದಲ್ಲಿ ಅರಬ್ಬಿ ಸಮುದ್ರ ಸೇರುತ್ತದೆ.   ಈ ನದಿಗೆ ಮೊದಲಿಗೆ ಹೀರೇ ಬಾಸ್ಕರ ಎಂಬಲ್ಲಿ ನಂತರ ಲಿಂಗನಮಕ್ಕಿಯಲ್ಲಿ ಆಣೆಕಟ್ಟು ಕಟ್ಟಿ ರಾಜ್ಯಕ್ಕೆ ಜಲ ವಿದ್ಯುತ್ ನೀಡುತ್ತಿರುವುದರಿಂದ ಲಕ್ಷಾಂತರ ಎಕರೆ ಕಾಡು, ಜಮೀನು ಅನೇಕ ಊರು ಮುಳುಗಡೆ ಆಯಿತು ಸಾವಿರಾರು ಕುಟುಂಬಗಳು ಸಂತ್ರಸ್ಥರಾದದ್ದು ಇತಿಹಾಸ.    ಈ ನದಿ ಜೋಗದಲ್ಲಿ ದುಮುಕುವ ಜಲಪಾತ ವಿಶ್ವದ ಸುಂದರ ಜಲಪಾತದಲ್ಲಿ ಒಂದಾಗಿದೆ.    ಹಾಗಾಗಿ ಶರಾವತಿ ನದಿಯ ಉಗಮ ಸ್ಥಾನಕ್ಕೆ ಮಹತ್ವವಿದೆ, ಒಮ್ಮೆಯಾದರೂ ಈ ನದಿ ಮೂಲ ಸಂದಶಿ೯ಸಬೇಕು ಆದರೆ ಇಲ್ಲಿ ಶರಾವತಿ ವ...

HISTORICAL SAGAR MARIKAMBA JATRA.ಐತಿಹಾಸಿಕ ಸಾಗರದ ಮಾರಿಕಾಂಬಾ ಜಾತ್ರೆ

     ಸಾಗರದ ಮಾರಿಕಾಂಬಾ ಜಾತ್ರೆ ಐತಿಹಾಸಿಕ ಚರಿತ್ರೆಯಲ್ಲಿ ದಾಖಲೆ.        ಕನಾ೯ಟಕ ರಾಜ್ಯದಲ್ಲಿ ಎರೆಡು ಮಾರಿಕಾಂಬಾ ಜಾತ್ರೆಗಳು ಪ್ರಸಿದ್ಧಿ ಪಡೆದಿದೆ ಅದು ಉತ್ತರ ಕನ್ನಡ ಜಿಲ್ಲೆಯ ಸಿಸಿ೯ಯದ್ದು ಮತ್ತು ಶಿವಮೊಗ್ಗ ಜಿಲ್ಲೆಯ ಸಾಗರದ್ದು.    ಪ್ರತಿ ಮೂರು ವಷ೯ಕೆ ಈ ಜಾತ್ರೆ ಆಚರಿಸಲಾಗುತ್ತೆ ಶೂದ್ರ ವಗ೯ದವರು ಭಯ ಮತ್ತು ಭಕ್ತಿಯಿಂದ ಕುರಿ ಕೋಳಿ ಬಲಿ ನೀಡುವ ಪರಂಪರೆ ಇದೆ.ಮಂಗಳವಾರ ಮೇಲು ಜಾತಿಯ ಜನರ ಪೂಜೆ ದೇವಿಯ ತವರು ಮನೆಯಲ್ಲಿ ನಡೆಯುತ್ತದೆ ನಂತರ ರಾತ್ರಿ ಗಂಡನ ಸೇರುವ ಮಾರಿಗೆ ಶೂದ್ರರ ಪೂಜೆ, ಬಲಿ ಮೀಸಲು.    ಮೊದಲೆಲ್ಲ ಮಾರಿಯಮ್ಮನಿಗೆ ಕೊಣನ ಬಲಿ ನೀಡುತ್ತಿದ್ದರು ಈಗ ಇದು ಕಾನೂನು ಪ್ರಕಾರ ನಿಷಿದ್ಧ ಆದರೆ ಈ ಆಚಾರಣೆ ಗುಪ್ತವಾಗಿ ಬೇರೆ ಕಡೆ ನಡೆಸಲಾಗುತ್ತೆ ಅನ್ನುತ್ತಾರೆ.    ಸಾಗರದ ಮಾರಿಕಾ0ಬಾ ಜಾತ್ರೆ ಜಾತ್ರೆಯಿ೦ದ ಜಾತ್ರೆಗೆ ಅದೂರಿಯಾಗಿ ನಡೆಯುತ್ತದೆ, ಕೋಟ್ಯಾoತರ ಹಣದ ವಹಿವಾಟು ಕೂಡ, ಮೊದಲೆಲ್ಲ ಹಣದ ಅಪರಾ ತಪರ ಆಗುತ್ತಿದೆ ಎಂಬ ಗುಲ್ಲು ಇತ್ತು ಆದರೆ ಈಗೆಲ್ಲ ಪಾರದಶ೯ಕವಾಗಿದೆ ಆದರೂ ಈ ಬಾರಿಯ 2017ರ ಜಾತ್ರೆಯಲ್ಲಿ ಅವ್ಯವಹಾರದ ಆರೋಪ ಮಾಡಲಾಗಿದೆ ಈ ವಿಚಾರ ಇಲ್ಲಿ ಅಪ್ರಸ್ತುತ ಆದರೂ ಈ ಬಗ್ಗೆ ಬರೆಯಲು ಕಾರಣ ಕೆಳದಿ ಅರಸರ ಕಾಲದಲ್ಲಿ ಅಂದರೆ 350 ವಷ೯ದ ಹಿಂದೆಯೂ ರಾಜರಿಗೆ ಸಾಗರದ ಮಾರಿಕಾಂಬಾ ಜಾತ್ರೆಯಲ್ಲಿ ಸಾವ೯ಜನಿಕರಿಂದ ಸಂಗ್ರಹಿಸಿದ ಜಾತ...