Skip to main content

Blog number 941. ನನಗೆ ಕಡೆಗೋಲು ಕೃಷ್ಣನ ಪಂಚಲೋಹದ ವಿಗ್ರಹ ನೀಡಿದ ಪ್ರದೀಪ್ ಕುಮಾರ್ ಕಲ್ಕೂರರು ಪ್ರತಿ ವರ್ಷ ಮಂಗಳೂರಿನಲ್ಲಿನ ಕದ್ರಿ ದೇವಸ್ಥಾನದಲ್ಲಿ ನಡೆಸುವ ಕೃಷ್ಣ ವೇಷ ಸ್ಪರ್ದೆ ತುಂಬಾ ಪ್ರಸಿದ್ಧಿ ಪಡೆದಿದೆ.

#ಕೃಷ್ಣ_ಜನ್ಮಾಷ್ಟಮಿ_ನನ್ನ_ನೆನಪುಗಳು.

#ಮ೦ಗಳೂರಿನ_ಪ್ರದೀಪ್_ಕುಮಾರ್_ಕಲ್ಕೂರರು_ನೀಡಿದ_ಕಡಗೋಲು_ಕೃಷ್ಣ_ಪಂಚಲೋಹ_ವಿಗ್ರಹ

#ಮ೦ಗಳೂರಿನ_ಕದ್ರಿ_ದೇವಸ್ತಾನದಲ್ಲಿ_ಇವರ_ಪ್ರತಿಷ್ಠಾನ_ನಡೆಸುವ_ಕೃಷ್ಣವೇಷ_ಸ್ಪರ್ದೆ_ಪ್ರಖ್ಯಾತ 

#ಪಂಜಾಬಿನ_ಜಲಂದರ್_ಲ್ಲಿ_ನಡೆಯುವ_ಕೃಷ್ಣ_ಜನ್ಮಾಷ್ಟಮಿ_ಅತ್ಯಂತ_ವೈಭವದ್ದು.

   ಕೃಷ್ಣ ನನ್ನ ಅತ್ಯಂತ ಪ್ರೀತಿಯ ದೇವರು, ನಮ್ಮ ತಂದೆ ಹೆಸರು, ಭಾವನ ಹೆಸರು ಅಷ್ಟೇಕೆ ನನ್ನ ಮಗನ ಹೆಸರೂ ಕೃಷ್ಣ , ಉಡುಪಿ ಕೃಷ್ಣನು ಒಲಿದ ಕನಕದಾಸರ ಭಕ್ತನೂ ನಾನು, ಕನಕದಾಸರ ಹುಟ್ಟಿದ ಸ್ಥಳ, ಅವರ ಕೋಟೆ, ಅವರು ನೆಟ್ಟಿದ ಅರಳಿ ಮರ, ಅವರು ಬಳಸಿದ ಶಂಖ, ಮರದ ಬಿಕ್ಷಾಪಾತ್ರೆ ಮತ್ತು ಅವರ ಸಮಾದಿಯನ್ನು ಸಂದರ್ಶಿಸಿದ್ದೇನೆ.
   ಪಂಜಾಬಿನ ಜಲಂದರ್ ಪಟ್ಟಣದಲ್ಲಿ ನಾನು ನೋಡಿದ ಜನ್ಮಾಷ್ಟಮಿಯಷ್ಟು ದೊಡ್ಡ ವೈಭವ ನಾನು ಬೇರೆಲ್ಲೂ ನೋಡಿಲ್ಲ, ಆ ದಿನ ಜಲಂದರ್ ನ ಮುಖ್ಯ ರಸ್ತೆಯಲ್ಲಿ ಸಾಗುವ ಬೃಹತ್ ಮೆರವಣಿಗೆಯಿಂದ ರಸ್ತೆ ದಾಟಲು ಗಂಟೆಗಟ್ಟಲೆ ಕಾಯಬೇಕು, ಅತಿ ಹೆಚ್ಚು ಸರ್ದಾರ್ಜಿಗಳು ಈ ಮೆರವಣಿಗೆಯಲ್ಲಿ ಭಾಗವಹಿಸುವುದು ನಾನು ಕಣ್ಣಾರೆ ನೋಡಿದ್ದೇನೆ.
   ನಾನು ಪ್ರತಿ ದಿನ ಪೂಜಿಸುವ ಪಂಚಲೋಹದ ಕಡೆಗೋಲು ಕೃಷ್ಣ ವಿಗ್ರಹ ನೀಡಿದವರು ಮಂಗಳೂರಿನ ಪ್ರದೀಪ್ ಕುಮಾರ್ ಕಲ್ಕೂರರು, ಕಾಸರಗೋಡಿನಲ್ಲಿ ನಡೆದ ದಾಸ ಸಾಹಿತ್ಯದ ಒ0ದು ಸಭೆಯಲ್ಲಿ ಕಾಸರಗೋಡಿನ ಕನ್ನಡ ಸಂಘಟನೆಯ ಶಿವರಾಂ ಕಾಸರಗೋಡು ನನ್ನನ್ನು ಆಗಿನ ದ.ಕ.ಜಿಲ್ಲೆಯ ಸಾಹಿತ್ಯ ಪರಿಷತ್ ಅಧ್ಯಕ್ಷರ ಜೊತೆ ವೇದಿಕೆಯಲ್ಲಿ ಕುಳ್ಳಿರಿಸಿದಾಗ ಪ್ರದೀಪ್ ಕುಮಾರ್ ಕಲ್ಕೂರರು ನನಗೆ ನೀಡಿದ ನೆನಪಿನ ಕಾಣಿಕೆ ಇದು.
  ಪ್ರದೀಪ್ ಕುಮಾರ್ ಕಲ್ಕೂರರು ಮಂಗಳೂರಿನ ಪ್ರತಿಷ್ಠಿತ ಜಾಹಿರಾತು ಸಂಸ್ಥೆ ಮುಖ್ಯಸ್ಥರು, ಇವರ ಕಲ್ಕೂರ್ ಪ್ರಕಾಶನದಿಂದ ಕನ್ನಡ ಮತ್ತು ತುಳು ಭಾಷೆಯ ಅನೇಕ ಯಕ್ಷಗಾನ ಪುಸ್ತಕ ಪ್ರಕಟಿಸಿದ್ದಾರೆ.
  ಇವರ ನೇತೃತ್ವದಲ್ಲಿ ಇವರ ಕಲ್ಕೂರ್ ಪ್ರತಿಷ್ಟಾನದಿಂದ ಪ್ರತಿ ವರ್ಷ ಕೃಷ್ಣ ಜನ್ಮಾಷ್ಟಮಿಗೆ ಮಂಗಳೂರಿನ ಕದ್ರಿ ದೇವಾಲಯದಲ್ಲಿ ಇವರು ನಡೆಸುವ ಮಕ್ಕಳ ಕೃಷ್ಣ ವೇಷ ಸ್ಪರ್ದೆ ತುಂಬಾ ಪ್ರಸಿದ್ದಿ ಪಡೆದಿದೆ ಇವತ್ತು ಮಂಗಳೂರಲ್ಲಿ ಇವರ ಪ್ರತಿಷ್ಟಾನದ ಕಾಯ೯ಕ್ರಮ ತುಂಬಾ ಅದ್ದೂರಿಯಾಗಿ ನಡೆದ ವರದಿಗಳು ಇದೆ.
  ಪ್ರತಿ ವರ್ಷ ಕೃಷ್ಣಾಷ್ಟಮಿಯಂದು ಪ್ರದೀಪ್ ಕುಮಾರ್ ಕಲ್ಕೂರರು ಈ ರೀತಿ ನೆನಪಾಗುತ್ತಾರೆ

Comments

Popular posts from this blog

# ಜುಟ್ಟು ಕಾಳಿಂಗ ಸಪ೯ದ ಆಸ್ತಿತ್ವದ ಮಲೆನಾಡಿನ ಮಿಥ್ಯೆ#

  # ಕಾಳಿ೦ಗ ಸಪ೯ದಲ್ಲಿ ಜುಟ್ಟು ಕಾಳಿಂಗ ಸಪ೯ ಅಂತ ಇದೇ ಅನ್ನುವ ಯಾರು ನೋಡದ ಸಪ೯ದ ಅಸ್ತಿತ್ವ#    ಮಲೆನಾಡಿನ ಹಳ್ಳಿಗಳಲ್ಲಿ, ಅದು ಕಾಳಿ೦ಗ ಸಪ೯ದ ವಾಸಸ್ಥಳದ ಪರಿಸರದಲ್ಲಿ ಜುಟ್ಟು ಕಾಳಿಂಗ ಸಪ೯ ಇದೆ ಅನ್ನುವ ಮಾತು ಆಗಾಗ್ಗೆ ಕೇಳುತ್ತಿರುತ್ತೇವೆ. ಆದರೆ ಆ ರೀತಿಯ ಹಾವು ಇಲ್ಲ ಎಂದು ಹಾವಿನ ಬಗ್ಗೆ ಸಂಶೋದನೆ ಮಾಡುವವರು, ಅರಣ್ಯ ಇಲಾಖೆಯವರು, ಹಾವು ಹಿಡಿಯುವವರು ಖಡಾಖಂಡಿತವಾಗಿ ಹೇಳುತ್ತಾರಾದರು, ಈ ವದಂತಿ ಹೇಗೆ ಹರಡಿದೆ?.    ಇದು ಒಂದು ಊರು ಹಳ್ಳಿಯಲ್ಲ ನಾನು ನೋಡಿದಂತೆ ಮಹಾರಾಷ್ಟ್ರದ ರತ್ನಗಿರಿಯಿ೦ದ ಕೇರಳದ ಕಾಸರಗೋಡಿನ ತನಕ ಜುಟ್ಟು ಕಾಳಿಂಗದ ಅನೇಕ ರೋಚಕ ಕಥೆ ಕೇಳಿದ್ದೇನೆ.   ಪ್ರತ್ಯಕ್ಷ ನೋಡಿದವರು ತಾವು ಎನ್ನುವ ಅನೇಕರಲ್ಲಿ ಮಾತಾಡಿದ್ದೇನೆ ಆದರೆ ಅದು ನಂಬಲಹ೯ ಮಾಹಿತಿ ಅನಿಸಲಿಲ್ಲ, ಒಂದು ರೀತಿ ಕಾಲ್ಪನಿಕ ತ್ರಿಲ್ಲರ್ ಕಥೆ ಅಷ್ಟೇ ಅನ್ನಬಹುದು.    ಜಡೆ ಕಾಳಿಂಗ ಸಪ೯ಕ್ಕೆ ರೋಷ ಜಾಸ್ತಿ, ಹೆಡೆ ಮೇಲೆ ಕೂದಲಿನ ಜುಟ್ಟು ಇರುತ್ತೆ, ಮನುಷ್ಯರನ್ನ ಕಂಡರೆ ಓಡಿಸಿಕೊಂಡು ಬರುತ್ತೆ, ಅದರಿಂದ ತಪ್ಪಿಸಿಕೊಳ್ಳಲು ಒಂದೇ ದಾರಿ ಅದೇನೆಂದರೆ ತಗ್ಗಿನ ಪ್ರದೇಶದಲ್ಲಿ ಓಡುವುದು.     ಯಾಕೆ೦ದರೆ ಓಡಿಸಿಕೊಂಡು ಬರುವ ಜುಟ್ಟು ಕಾಳಿಂಗದ ಜುಟ್ಟು, ಇಳಿಜಾರಿನಲ್ಲಿ ಅದರ ತಲೆಯಿ೦ದ ಇಳಿಜಾರಿಗೆ ಸರಿಯುವುದರಿಂದ  ಕಣ್ಣಿನ ಮೇಲೆ ಕೂದಲ ಜುಟ್ಟು ಮುಚ್ಚುವುದರಿಂದ ಕಣ್ಣು ಕಾಣುವುದಿಲ್ಲ, ಆಗಲೇ ತಪ್...

HISTORICAL SAGAR MARIKAMBA JATRA.ಐತಿಹಾಸಿಕ ಸಾಗರದ ಮಾರಿಕಾಂಬಾ ಜಾತ್ರೆ

     ಸಾಗರದ ಮಾರಿಕಾಂಬಾ ಜಾತ್ರೆ ಐತಿಹಾಸಿಕ ಚರಿತ್ರೆಯಲ್ಲಿ ದಾಖಲೆ.        ಕನಾ೯ಟಕ ರಾಜ್ಯದಲ್ಲಿ ಎರೆಡು ಮಾರಿಕಾಂಬಾ ಜಾತ್ರೆಗಳು ಪ್ರಸಿದ್ಧಿ ಪಡೆದಿದೆ ಅದು ಉತ್ತರ ಕನ್ನಡ ಜಿಲ್ಲೆಯ ಸಿಸಿ೯ಯದ್ದು ಮತ್ತು ಶಿವಮೊಗ್ಗ ಜಿಲ್ಲೆಯ ಸಾಗರದ್ದು.    ಪ್ರತಿ ಮೂರು ವಷ೯ಕೆ ಈ ಜಾತ್ರೆ ಆಚರಿಸಲಾಗುತ್ತೆ ಶೂದ್ರ ವಗ೯ದವರು ಭಯ ಮತ್ತು ಭಕ್ತಿಯಿಂದ ಕುರಿ ಕೋಳಿ ಬಲಿ ನೀಡುವ ಪರಂಪರೆ ಇದೆ.ಮಂಗಳವಾರ ಮೇಲು ಜಾತಿಯ ಜನರ ಪೂಜೆ ದೇವಿಯ ತವರು ಮನೆಯಲ್ಲಿ ನಡೆಯುತ್ತದೆ ನಂತರ ರಾತ್ರಿ ಗಂಡನ ಸೇರುವ ಮಾರಿಗೆ ಶೂದ್ರರ ಪೂಜೆ, ಬಲಿ ಮೀಸಲು.    ಮೊದಲೆಲ್ಲ ಮಾರಿಯಮ್ಮನಿಗೆ ಕೊಣನ ಬಲಿ ನೀಡುತ್ತಿದ್ದರು ಈಗ ಇದು ಕಾನೂನು ಪ್ರಕಾರ ನಿಷಿದ್ಧ ಆದರೆ ಈ ಆಚಾರಣೆ ಗುಪ್ತವಾಗಿ ಬೇರೆ ಕಡೆ ನಡೆಸಲಾಗುತ್ತೆ ಅನ್ನುತ್ತಾರೆ.    ಸಾಗರದ ಮಾರಿಕಾ0ಬಾ ಜಾತ್ರೆ ಜಾತ್ರೆಯಿ೦ದ ಜಾತ್ರೆಗೆ ಅದೂರಿಯಾಗಿ ನಡೆಯುತ್ತದೆ, ಕೋಟ್ಯಾoತರ ಹಣದ ವಹಿವಾಟು ಕೂಡ, ಮೊದಲೆಲ್ಲ ಹಣದ ಅಪರಾ ತಪರ ಆಗುತ್ತಿದೆ ಎಂಬ ಗುಲ್ಲು ಇತ್ತು ಆದರೆ ಈಗೆಲ್ಲ ಪಾರದಶ೯ಕವಾಗಿದೆ ಆದರೂ ಈ ಬಾರಿಯ 2017ರ ಜಾತ್ರೆಯಲ್ಲಿ ಅವ್ಯವಹಾರದ ಆರೋಪ ಮಾಡಲಾಗಿದೆ ಈ ವಿಚಾರ ಇಲ್ಲಿ ಅಪ್ರಸ್ತುತ ಆದರೂ ಈ ಬಗ್ಗೆ ಬರೆಯಲು ಕಾರಣ ಕೆಳದಿ ಅರಸರ ಕಾಲದಲ್ಲಿ ಅಂದರೆ 350 ವಷ೯ದ ಹಿಂದೆಯೂ ರಾಜರಿಗೆ ಸಾಗರದ ಮಾರಿಕಾಂಬಾ ಜಾತ್ರೆಯಲ್ಲಿ ಸಾವ೯ಜನಿಕರಿಂದ ಸಂಗ್ರಹಿಸಿದ ಜಾತ...

ರಿಪ್ಪನ್ ಪೇಟೆ ( ಶಿವಮೊಗ್ಗ ಜಿಲ್ಲೆ) ಹೆಸರು ಬಂದಿದ್ದಾದರು ಹೇಗೆ?

#  ರಿಪ್ಪನ್ ಪೇಟೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಪ್ರಮುಖ ಹೋಬಳಿ ಕೇಂದ್ರ ಈ ಆಂಗ್ಲ ಅಧಿಕಾರಿಯ ಹೆಸರು ಇಡಲು ಕಾರಣವಾದ ಘಟನೆ ತುಂಬಾ ಕುತೂಹಲಕಾರಿ# ಸ್ವಲ್ಪ ಕಾಲ ನೀವು ಈ ಲೇಖನ ಓದಿದರೆ ಕಾರಣ ಗೊತ್ತಾಗುತ್ತೆ.    ಆಗ ಬ್ರಿಟಿಷ್ ಸಕಾ೯ರರಕ್ಕೆ ಆಡಳಿತ ಸುಗುಮಕ್ಕೆ ರೈಲು ಮಾಗ೯ ಅತ್ಯಗತ್ಯ ಎಂಬ ಸಕಾರಣ ಮನವರಿಕೆ ಆದ ಕಾಲ ಏಕೆಂದರೆ ಬ್ರಿಟಿಷರು ಅಮೆರಿಕಾ ವಲಸೆಯಲ್ಲಿ ಇದನ್ನ ಮನಗOಡಿದ್ದರು, ಬೆಂಗಳೂಳಿ ರಿಂದ ಶಿವಮೊಗ್ಗ ತಲುಪುವ ರೈಲು ಮಾಗ೯ ತಾಳಗುಪ್ಪಾ ತಲುಪಿದರೆ ಜೋಗ ಜಲಪಾತ ವೀಕ್ಷಣೆಗೆ ಅನುಕೂಲ ಎಂಬುದು ಹಾಗೆ ಮತ್ತೊಂದು ಮ್ಯಸೂರು ಸಕಾ೯ರ ಶರಾವತಿ ನದಿಗೆ ಆಣೆಕಟ್ಟು ಕಟ್ಟಿ.ಜಲ ವಿದ್ಯುತ್ ತಯಾರಿಸಲು ಸಾಮಗ್ರಿ ಸಾಗಾಣಿಕೆಗೆ ಅನುಕೂಲ ಎಂಬ ಕಾರಣದಿಂದ ಶಿವಮೊಗ್ಗದಿಂದ ತಾಳಗುಪ್ಪ ರೈಲು ಮಾಗ೯ ಯೋಜನೆ ಮಾಡಲಾಯಿತು.    ಆಗ ಪ್ಲೇಗ್ ಮಾರಿಯ ಕಾಲ, ಎಲ್ಲೆಲ್ಲೂ ಜನ ಸಾಯುತ್ತಿದ್ದರು ಆಗಲೇ ಈ ರೈಲು ಮಾಗ೯ ಶಿವಮೊಗ್ಗ ಆರಸಾಳಿOದ ದೊಡ್ಡಿನ ಕೊಪ್ಪ (ಈಗಿನ ರಿಪ್ಪನ್ ಪೇಟೆ) ಆನಂದಪುರಂ ಮಾಗ೯ ನಿಗದಿ ಆಗಿತ್ತು ಆದರೆ ಈ ಭಾಗದಲ್ಲಿ ಒಂದು  ವದಂತಿ ಈ ಬಾಗದಲ್ಲಿ ಹರಡಿತ್ತು ಅದೇನೆಂದರೆ ರೈಲು ಬಂದರೆ ಪ್ಲೇ ಗು ಬರುತ್ತೆ  ಅಂತ.    ಹಾಗಾಗಿ ಈ ಭಾಗದಲ್ಲಿನ ಜಾಗೃತ ಜನ ನಾಯಕರುಗಳು ಹೇಗಾದರು ಮಾಡಿ ರೈಲು ಬರದಂತೆ ಮಾಡಲು ಎಲ್ಲಾ ರೀತಿಯ ಪ್ರಯತ್ನ ಮಾಡಲು ಪ್ರಾರಂಭಿಸಿದರು.     ಇದೇ ಸಂದಭ೯ದಲ್ಲ...