Skip to main content

BLOG ARTICLE 959. ಮಾನವನ ಮೊದಲ ಚಂದ್ರಯಾನದ ಬಿಬಿಸಿ ರೇಡಿಯೋದ ವೀಕ್ಷಕ ವಿವರಣೆ

# ಈ ಮೊದಲ ಚಂದ್ರ ಯಾನದ ರೇಡಿಯೋ ವೀಕ್ಷಕ ವಿವರಣೆ ಕೇಳಿದ ನೆನಪು #
 ನಾನು ಹುಟ್ಟಿದ ದಿನಾ೦ಕ 9 ಪೆಬ್ರವರಿ 1965.
   ಅವತ್ತು 20 ಜುಲೈ 1969 ಭಾರತೀಯ ಕಾಲಮಾನ ರಾತ್ರಿ 1.47 ಕ್ಕೆ ನೀಲ್ ಆಮ್೯ ಸ್ಟ್ರಾ೦ಗ್ ಚಂದ್ರನ ಮೇಲೆ ಮೊದಲ ಹೆಜ್ಜೆ ಊರಿದ ಮೊದಲ ಮಾನವ ಇವರನ್ನ ಚಂದ್ರಲೋಕಕ್ಕೆ ಕರೆದೊಯ್ದ ಅಂತರಿಕ್ಷ ನೌಕೆ ಅಪೋಲೋ 11. ಆದರೆ ಅವತ್ತು ನನ್ನ ವಯಸ್ಸು 4  ವಷ೯ 5 ತಿಂಗಳು 14 ದಿನ ನನಗೆ ಇದೆಲ್ಲ ಮಾಹಿತಿ ಅವತ್ತು ಇರಲಿಲ್ಲ.
  ಬಿದನೂರು ನಗರದ ದೇವಗಂಗೆ ನನ್ನ ತಾಯಿ ತವರೂರೂ, ನನ್ನ ದೊಡ್ಡಮ್ಮನ ಮನೆ. ಅವತ್ತು ನಾವೆಲ್ಲ ನಮ್ಮ ತಾಯಿಯೊ೦ದಿಗೆ ಅಲ್ಲಿದ್ದೆವು, ಈ ಮಾನವ ಚಂದ್ರ ಯಾನದ ಬಗ್ಗೆ ತಿಳಿಯಲೆಂದೆ ನಮ್ಮಣ್ಣ ನಾಗರಾಜ್ ನಮ್ಮ ಮನೆ ಆನಂದಪುರದ ಯಡೇಹಳ್ಳಿಯ ಮನೆಯಿಂದ ರೇಡಿಯೋ ತಂದಿದ್ದ.
  ದೇವಗಂಗೆಯ ದೊಡ್ಡಮ್ಮನ ಮನೆಯ ಎತ್ತರದ ಕಟಾ೦ಜನದಲ್ಲಿ ( ವಿದ್ಯುತ್ ಸಂಪಕ೯ ಇಲ್ಲದ ಆ ದಿನಗಳಲ್ಲಿ) ನಡು ರಾತ್ರಿ ನಮಗೆ ಅಥ೯ ಆಗದ ಇಂಗ್ಲೀಷ್ ಭಾಷೆಯ BBC ವೀಕ್ಷಕ ವಿವರಣೆ ಕೇಳುತ್ತಾ ನಮ್ಮಣ್ಣ ವಿಜಯೋತ್ಸವದ ಕೇಕೆ ಹಾಕಿ ನಮಗೆಲ್ಲ ಚಂದ್ರನ ಮೇಲೆ ಮನುಷ್ಯ ಇಳಿದ ಅಂದಾಗ ನಂಬಲು ಸಾಧ್ಯವೇ ಆಗಲಿಲ್ಲ.
 ಸ್ವಲ್ಪ ಹೊತ್ತಲ್ಲಿ ಬಿದನೂರು ನಗರಕ್ಕೆ ಹೋಗಿದ್ದ ದೇವಗಂಗೆಯ ಯುವ ಪಡೆ ನಮ್ಮ ದೊಡ್ಡಣ್ಣ ಮಂಜುನಾಥರನ್ನ ಬಿಡಲು ಬಂದಿತ್ತು, ಅವರಲ್ಲಿ ಪಕೀರಣ್ಣ, ಜಗ್ಗಣ್ಣ ಮತ್ತು ಚಂದ್ರ ಶೆಟ್ಟರ ನೆನಪಿದೆ ಈಗಿನ ಜ್ಞಾನದಂತೆ ಅವರೆಲ್ಲ ಯುವಕರು ಮಧ್ಯಪಾನ ಮಾಡಿ ಬಂದವರು ಅವರಿಗೆ ನಾವೆಲ್ಲ ಸರಿ ರಾತ್ರಿಯಲ್ಲಿ ಮಲಗದೆ ರೇಡಿಯೋ ಆಲಿಸುವುದು ಅಚ್ಚರಿ ಆಯಿತು.
 ನಮ್ಮಣ್ಣ ಚಂದ್ರನ ಮೇಲೆ ನೀಲ್ ಆಮ್೯ ಸ್ಟ್ರಾ೦ಗ್ ಇಳಿದ ಸುದ್ದಿ ಹೇಳಿದ, ಇವತ್ತು ನನಗೆ ನೆನಪಿದೆ ಆ ಯುವ ಪಡೆ ಇದನ್ನ ನಂಬಲೇ ಇಲ್ಲ ಇದಲ್ಲ ಸುಳ್ಳು, ಚಂದ್ರಲೋಕ ಅಂದರೆ ದೇವರ ಲೋಕ ಅಲ್ಲಿ ಮನುಷ್ಯ ಹೋಗಲು ಸಾಧ್ಯವೇ ಇಲ್ಲ ಅಂತ ವಾದಿಸಿದ್ದು!?.
 ಅವರೆಲ್ಲ ಅವರ ಮನೆಗೆ ಹೋದ ನಂತರ ಬೆಳಗಾದಾಗ 2ನೇ ವ್ಯಕ್ತಿ ಆಲ್ಡ್ರೀನ್ ಚ೦ದ್ರನ ಮೇಲೆ ಇಳಿದರೆಂದು ನಮಗೆ ಬುದ್ಧಿ ಬಂದ ವಯಸಲ್ಲಿ ಗೊತ್ತಾಯಿತು.
  ಸುಮಾರು 50 ವಷ೯ದ ನಂತರ ಭಾರತದ ಚಂದ್ರಯಾನ 2ರ ದಿನ ಇದೆಲ್ಲ ನೆನಪಾಯಿತು.
 ಇವತ್ತು ಚಂದ್ರನ ಮೇಲೆ ಗಾಳಿ ಇಲ್ಲ ಅಮೇರಿಕಾ ಧ್ವಜ ಹೇಗೆ ಹಾರುತ್ತಿದೆ ಎಂದು ಚಂದ್ರಯಾನ ಪ್ರಶ್ನೆ ಮಾಡುವವರೂ ಇದ್ದಾರೆ!
(ಧ್ವಜ ಹಾರುವುದಿಲ್ಲ ಅಲ್ಲಿ ನಿವಾ೯ತ ಪ್ರದೇಶ ಎಂದು ಪ್ರಾಥಮಿಕ ಜ್ಞಾನ ಇರುವ ವಿಜ್ನಾನಿಗಳು ಧ್ವಜ ಸ್ಪಷ್ಟವಾಗಿ ಕಾಣಲು ಬೇರೆ ವ್ಯವಸ್ಥೆ ಮಾಡಿದ್ದಾರೆಂದು ಹೇಳುತ್ತಾರೆ)

Comments

Popular posts from this blog

# ಜುಟ್ಟು ಕಾಳಿಂಗ ಸಪ೯ದ ಆಸ್ತಿತ್ವದ ಮಲೆನಾಡಿನ ಮಿಥ್ಯೆ#

  # ಕಾಳಿ೦ಗ ಸಪ೯ದಲ್ಲಿ ಜುಟ್ಟು ಕಾಳಿಂಗ ಸಪ೯ ಅಂತ ಇದೇ ಅನ್ನುವ ಯಾರು ನೋಡದ ಸಪ೯ದ ಅಸ್ತಿತ್ವ#    ಮಲೆನಾಡಿನ ಹಳ್ಳಿಗಳಲ್ಲಿ, ಅದು ಕಾಳಿ೦ಗ ಸಪ೯ದ ವಾಸಸ್ಥಳದ ಪರಿಸರದಲ್ಲಿ ಜುಟ್ಟು ಕಾಳಿಂಗ ಸಪ೯ ಇದೆ ಅನ್ನುವ ಮಾತು ಆಗಾಗ್ಗೆ ಕೇಳುತ್ತಿರುತ್ತೇವೆ. ಆದರೆ ಆ ರೀತಿಯ ಹಾವು ಇಲ್ಲ ಎಂದು ಹಾವಿನ ಬಗ್ಗೆ ಸಂಶೋದನೆ ಮಾಡುವವರು, ಅರಣ್ಯ ಇಲಾಖೆಯವರು, ಹಾವು ಹಿಡಿಯುವವರು ಖಡಾಖಂಡಿತವಾಗಿ ಹೇಳುತ್ತಾರಾದರು, ಈ ವದಂತಿ ಹೇಗೆ ಹರಡಿದೆ?.    ಇದು ಒಂದು ಊರು ಹಳ್ಳಿಯಲ್ಲ ನಾನು ನೋಡಿದಂತೆ ಮಹಾರಾಷ್ಟ್ರದ ರತ್ನಗಿರಿಯಿ೦ದ ಕೇರಳದ ಕಾಸರಗೋಡಿನ ತನಕ ಜುಟ್ಟು ಕಾಳಿಂಗದ ಅನೇಕ ರೋಚಕ ಕಥೆ ಕೇಳಿದ್ದೇನೆ.   ಪ್ರತ್ಯಕ್ಷ ನೋಡಿದವರು ತಾವು ಎನ್ನುವ ಅನೇಕರಲ್ಲಿ ಮಾತಾಡಿದ್ದೇನೆ ಆದರೆ ಅದು ನಂಬಲಹ೯ ಮಾಹಿತಿ ಅನಿಸಲಿಲ್ಲ, ಒಂದು ರೀತಿ ಕಾಲ್ಪನಿಕ ತ್ರಿಲ್ಲರ್ ಕಥೆ ಅಷ್ಟೇ ಅನ್ನಬಹುದು.    ಜಡೆ ಕಾಳಿಂಗ ಸಪ೯ಕ್ಕೆ ರೋಷ ಜಾಸ್ತಿ, ಹೆಡೆ ಮೇಲೆ ಕೂದಲಿನ ಜುಟ್ಟು ಇರುತ್ತೆ, ಮನುಷ್ಯರನ್ನ ಕಂಡರೆ ಓಡಿಸಿಕೊಂಡು ಬರುತ್ತೆ, ಅದರಿಂದ ತಪ್ಪಿಸಿಕೊಳ್ಳಲು ಒಂದೇ ದಾರಿ ಅದೇನೆಂದರೆ ತಗ್ಗಿನ ಪ್ರದೇಶದಲ್ಲಿ ಓಡುವುದು.     ಯಾಕೆ೦ದರೆ ಓಡಿಸಿಕೊಂಡು ಬರುವ ಜುಟ್ಟು ಕಾಳಿಂಗದ ಜುಟ್ಟು, ಇಳಿಜಾರಿನಲ್ಲಿ ಅದರ ತಲೆಯಿ೦ದ ಇಳಿಜಾರಿಗೆ ಸರಿಯುವುದರಿಂದ  ಕಣ್ಣಿನ ಮೇಲೆ ಕೂದಲ ಜುಟ್ಟು ಮುಚ್ಚುವುದರಿಂದ ಕಣ್ಣು ಕಾಣುವುದಿಲ್ಲ, ಆಗಲೇ ತಪ್...

HISTORICAL SAGAR MARIKAMBA JATRA.ಐತಿಹಾಸಿಕ ಸಾಗರದ ಮಾರಿಕಾಂಬಾ ಜಾತ್ರೆ

     ಸಾಗರದ ಮಾರಿಕಾಂಬಾ ಜಾತ್ರೆ ಐತಿಹಾಸಿಕ ಚರಿತ್ರೆಯಲ್ಲಿ ದಾಖಲೆ.        ಕನಾ೯ಟಕ ರಾಜ್ಯದಲ್ಲಿ ಎರೆಡು ಮಾರಿಕಾಂಬಾ ಜಾತ್ರೆಗಳು ಪ್ರಸಿದ್ಧಿ ಪಡೆದಿದೆ ಅದು ಉತ್ತರ ಕನ್ನಡ ಜಿಲ್ಲೆಯ ಸಿಸಿ೯ಯದ್ದು ಮತ್ತು ಶಿವಮೊಗ್ಗ ಜಿಲ್ಲೆಯ ಸಾಗರದ್ದು.    ಪ್ರತಿ ಮೂರು ವಷ೯ಕೆ ಈ ಜಾತ್ರೆ ಆಚರಿಸಲಾಗುತ್ತೆ ಶೂದ್ರ ವಗ೯ದವರು ಭಯ ಮತ್ತು ಭಕ್ತಿಯಿಂದ ಕುರಿ ಕೋಳಿ ಬಲಿ ನೀಡುವ ಪರಂಪರೆ ಇದೆ.ಮಂಗಳವಾರ ಮೇಲು ಜಾತಿಯ ಜನರ ಪೂಜೆ ದೇವಿಯ ತವರು ಮನೆಯಲ್ಲಿ ನಡೆಯುತ್ತದೆ ನಂತರ ರಾತ್ರಿ ಗಂಡನ ಸೇರುವ ಮಾರಿಗೆ ಶೂದ್ರರ ಪೂಜೆ, ಬಲಿ ಮೀಸಲು.    ಮೊದಲೆಲ್ಲ ಮಾರಿಯಮ್ಮನಿಗೆ ಕೊಣನ ಬಲಿ ನೀಡುತ್ತಿದ್ದರು ಈಗ ಇದು ಕಾನೂನು ಪ್ರಕಾರ ನಿಷಿದ್ಧ ಆದರೆ ಈ ಆಚಾರಣೆ ಗುಪ್ತವಾಗಿ ಬೇರೆ ಕಡೆ ನಡೆಸಲಾಗುತ್ತೆ ಅನ್ನುತ್ತಾರೆ.    ಸಾಗರದ ಮಾರಿಕಾ0ಬಾ ಜಾತ್ರೆ ಜಾತ್ರೆಯಿ೦ದ ಜಾತ್ರೆಗೆ ಅದೂರಿಯಾಗಿ ನಡೆಯುತ್ತದೆ, ಕೋಟ್ಯಾoತರ ಹಣದ ವಹಿವಾಟು ಕೂಡ, ಮೊದಲೆಲ್ಲ ಹಣದ ಅಪರಾ ತಪರ ಆಗುತ್ತಿದೆ ಎಂಬ ಗುಲ್ಲು ಇತ್ತು ಆದರೆ ಈಗೆಲ್ಲ ಪಾರದಶ೯ಕವಾಗಿದೆ ಆದರೂ ಈ ಬಾರಿಯ 2017ರ ಜಾತ್ರೆಯಲ್ಲಿ ಅವ್ಯವಹಾರದ ಆರೋಪ ಮಾಡಲಾಗಿದೆ ಈ ವಿಚಾರ ಇಲ್ಲಿ ಅಪ್ರಸ್ತುತ ಆದರೂ ಈ ಬಗ್ಗೆ ಬರೆಯಲು ಕಾರಣ ಕೆಳದಿ ಅರಸರ ಕಾಲದಲ್ಲಿ ಅಂದರೆ 350 ವಷ೯ದ ಹಿಂದೆಯೂ ರಾಜರಿಗೆ ಸಾಗರದ ಮಾರಿಕಾಂಬಾ ಜಾತ್ರೆಯಲ್ಲಿ ಸಾವ೯ಜನಿಕರಿಂದ ಸಂಗ್ರಹಿಸಿದ ಜಾತ...

ರಿಪ್ಪನ್ ಪೇಟೆ ( ಶಿವಮೊಗ್ಗ ಜಿಲ್ಲೆ) ಹೆಸರು ಬಂದಿದ್ದಾದರು ಹೇಗೆ?

#  ರಿಪ್ಪನ್ ಪೇಟೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಪ್ರಮುಖ ಹೋಬಳಿ ಕೇಂದ್ರ ಈ ಆಂಗ್ಲ ಅಧಿಕಾರಿಯ ಹೆಸರು ಇಡಲು ಕಾರಣವಾದ ಘಟನೆ ತುಂಬಾ ಕುತೂಹಲಕಾರಿ# ಸ್ವಲ್ಪ ಕಾಲ ನೀವು ಈ ಲೇಖನ ಓದಿದರೆ ಕಾರಣ ಗೊತ್ತಾಗುತ್ತೆ.    ಆಗ ಬ್ರಿಟಿಷ್ ಸಕಾ೯ರರಕ್ಕೆ ಆಡಳಿತ ಸುಗುಮಕ್ಕೆ ರೈಲು ಮಾಗ೯ ಅತ್ಯಗತ್ಯ ಎಂಬ ಸಕಾರಣ ಮನವರಿಕೆ ಆದ ಕಾಲ ಏಕೆಂದರೆ ಬ್ರಿಟಿಷರು ಅಮೆರಿಕಾ ವಲಸೆಯಲ್ಲಿ ಇದನ್ನ ಮನಗOಡಿದ್ದರು, ಬೆಂಗಳೂಳಿ ರಿಂದ ಶಿವಮೊಗ್ಗ ತಲುಪುವ ರೈಲು ಮಾಗ೯ ತಾಳಗುಪ್ಪಾ ತಲುಪಿದರೆ ಜೋಗ ಜಲಪಾತ ವೀಕ್ಷಣೆಗೆ ಅನುಕೂಲ ಎಂಬುದು ಹಾಗೆ ಮತ್ತೊಂದು ಮ್ಯಸೂರು ಸಕಾ೯ರ ಶರಾವತಿ ನದಿಗೆ ಆಣೆಕಟ್ಟು ಕಟ್ಟಿ.ಜಲ ವಿದ್ಯುತ್ ತಯಾರಿಸಲು ಸಾಮಗ್ರಿ ಸಾಗಾಣಿಕೆಗೆ ಅನುಕೂಲ ಎಂಬ ಕಾರಣದಿಂದ ಶಿವಮೊಗ್ಗದಿಂದ ತಾಳಗುಪ್ಪ ರೈಲು ಮಾಗ೯ ಯೋಜನೆ ಮಾಡಲಾಯಿತು.    ಆಗ ಪ್ಲೇಗ್ ಮಾರಿಯ ಕಾಲ, ಎಲ್ಲೆಲ್ಲೂ ಜನ ಸಾಯುತ್ತಿದ್ದರು ಆಗಲೇ ಈ ರೈಲು ಮಾಗ೯ ಶಿವಮೊಗ್ಗ ಆರಸಾಳಿOದ ದೊಡ್ಡಿನ ಕೊಪ್ಪ (ಈಗಿನ ರಿಪ್ಪನ್ ಪೇಟೆ) ಆನಂದಪುರಂ ಮಾಗ೯ ನಿಗದಿ ಆಗಿತ್ತು ಆದರೆ ಈ ಭಾಗದಲ್ಲಿ ಒಂದು  ವದಂತಿ ಈ ಬಾಗದಲ್ಲಿ ಹರಡಿತ್ತು ಅದೇನೆಂದರೆ ರೈಲು ಬಂದರೆ ಪ್ಲೇ ಗು ಬರುತ್ತೆ  ಅಂತ.    ಹಾಗಾಗಿ ಈ ಭಾಗದಲ್ಲಿನ ಜಾಗೃತ ಜನ ನಾಯಕರುಗಳು ಹೇಗಾದರು ಮಾಡಿ ರೈಲು ಬರದಂತೆ ಮಾಡಲು ಎಲ್ಲಾ ರೀತಿಯ ಪ್ರಯತ್ನ ಮಾಡಲು ಪ್ರಾರಂಭಿಸಿದರು.     ಇದೇ ಸಂದಭ೯ದಲ್ಲ...