Skip to main content

BLOG ARTICLES 961. ನಿಜವಾದ ಬಡವರ ಗುರುತಿಸುವಲ್ಲಿ ಎಡವಿದ ಸರ್ಕಾರ, ಸೊಸೈಟಿ ಅಕ್ಕಿ ಮಾರಿ ಸೋನಾ ಮಸೂರಿ ಅಕ್ಕಿ ಖರೀದಿಸುವ ಮಂದಿ, ಸೊಸೈಟಿ ಅಕ್ಕಿ ತಿನ್ನುವುದಿಲ್ಲ ಎಂಬ ಹೆಗ್ಗಳಿಕೆಯ ಪಾಲ್ಸ್ ಪ್ರಿಸ್ಟೇಜ್, ಸರ್ಕಾರದಿಂದ ನೂರಾರು ಕೋಟಿ ಅನುದಾನ ಪಡೆಯುವ ಮಠಾದೀಶ ಅನ್ನ ಬಾಗ್ಯದಿಂದ ಸೋಮಾರಿ ವರ್ಗ ಸೃಷ್ಟಿ ಆಗುತ್ತದೆನ್ನುವ ಹೇಳಿಕೆ !

#ವಿಬಿನ್ನ_ಮನಸ್ಥಿತಿಯ_ಅಂತಸ್ಥಿನ_ಸ್ಥಾನಮಾನ

#ಅನ್ನಬಾಗ್ಯ_ಅಕ್ಕಿ_x_ಸೋನಾಮಸೂರಿ

#ರಾಜ್ಯದಲ್ಲಿ_130_ಲಕ್ಷ_ಕುಟುಂಬಗಳಲ್ಲಿ_100_ಲಕ್ಷ_ಬಿಪಿಎಲ್

#ಸೊಸೈಟಿ_ಅಕ್ಕಿ_ತಿನ್ನುವುದಿಲ್ಲ_ಎನ್ನುವುದು_ದೊಡ್ಡಸ್ಥಿಕೆ.

#ಪಾಲ್ಸ್_ಪ್ರಿಸ್ಟೇಜ್_ಸರ್ಕಾರಿ_ಶಾಲಾ_ಶಿಕ್ಷಕರು_ತಮ್ಮ_ಮಕ್ಕಳಿಗೆ_ಕಾನ್ವೆಂಟ್_ಹುಡುಕಿದಂತೆ.

   ನುಚ್ಚಕ್ಕಿ - ನೆಲ್ಲಕ್ಕಿ - ಮುಗ್ಗುಲಕ್ಕಿಗಳಿಗೆಲ್ಲ ಒಂದು ಕಾಲದಲ್ಲಿ ಬೇದವಿರಲಿಲ್ಲ ಅದೆಲ್ಲದರ ಅನ್ನ ತಿಂದೇ ನಾವೆಲ್ಲ ದೊಡ್ಡವರಾಗಿದ್ದು ಮರೆತಿಲ್ಲ ,#ಅನ್ನ_ದೇವರ_ಮುಂದೆ_ಅನ್ಯ_ದೇವರಿಲ್ಲ ಎಂಬ ಸರ್ವಜ್ಞ ವಚನ ಜನ ಮನದಲ್ಲಿತ್ತು.
   ಈಗ ಮೇಲಿನ ಅಕ್ಕಿ ಬಿಡಿ, ಸೊಸೈಟಿ ಅಕ್ಕಿ ಎಂಬ ಅನ್ವರ್ಥ ನಾಮದ ಅನ್ನ ಭಾಗ್ಯದ ಅಕ್ಕಿ ಅಂದರೆ ಮೂಗು ಮುರಿಯುವ ಕಾಲ ಇದಾಗಿದೆ.
   ಅನ್ನಭಾಗ್ಯದಿಂದ ಸೋಮಾರಿಗಳು ಸೃಷ್ಟಿ ಆಗುತ್ತಾರೆ ಅಂತ ಒಬ್ಬ ಮಠದ ಸ್ವಾಮಿಯ ಹೇಳಿಕೆ ನೋಡಿದೆ ಆತ ಸರ್ಕಾರದಿಂದ ನೂರಾರು ಕೋಟಿ ರೂಪಾಯಿ ಪಡೆಯುವ  ಹೈಟೆಕ್ ಬಿಪಿಎಲ್ ಕಾರ್ಡ್ ದಾರ 😀.
  ರಾಜ್ಯದಲ್ಲಿರುವ 1.3 ಕೋಟಿ ಕುಟುಂಬಗಳಲ್ಲಿ ಒಂದು ಕೋಟಿಗೂ ಹೆಚ್ಚಿನ ಕುಟುಂಬ ಬಿಪಿಎಲ್ ಕಾರ್ಡ್ ಹೊಂದಿವೆ ಅಂದರೆ  ಕರ್ನಾಟಕ ರಾಜ್ಯದ ಶೇಕಡ 83% ರಷ್ಟು ಜನ ಬಡತನ ರೇಖೆಗಿಂತ ಕೆಳಗಿದ್ದಾರೆ ಅಂತ ಅರ್ಥ.ಆದರೆ ಇದರಲ್ಲಿ ಸತ್ಯಾಂಶ ಎಷ್ಟು?
  ದಿನಕ್ಕೆ 150 ರೂಪಾಯಿಗಿಂತ ಕಡಿಮೆ ಆದಾಯದವರು ಬಡತನ ರೇಖೆಗಿಂತ ಕೆಳಗಿನವರೆಂಬ ಮಾನದಂಡದಲ್ಲಿ ಭಾರತದಲ್ಲಿ ಶೇಕಡಾ 12.4% ಬಡತನ ರೇಖೆಗಿಂತ ಕೆಳಗಿರುವ ಕುಟುಂಬಗಳ ಸಂಖ್ಯೆ !!.
   ಇದರ ಮಧ್ಯ ಬಡವರಿಗೆ ಅಕ್ಕಿ ನೀಡಿದ್ದು ನಮ್ಮ ಪಕ್ಷ ಅಂತೆಲ್ಲ ರಾಜಕೀಯ ಪಕ್ಷಗಳ ಮೇಲಾಟಗಳಿದ್ದರೂ ವಾಸ್ತವವಾಗಿ ಅನ್ನ ಬಾಗ್ಯ ಯೋಜನೆ 15-6-2013ರಲ್ಲಿ ಜಾರಿಗೆ ತಂದಿದ್ದು ಸಿದ್ದರಾಮಯ್ಯನವರು,3 ಕ್ಕಿಂತ ಹೆಚ್ಚಿನ ಸದಸ್ಯರಿರುವ ಬಿಪಿಎಲ್ ಕುಟುಂಬಕ್ಕೆ ಮಾಸಿಕ 30 kg ಅಕ್ಕಿ ವಿತರಣೆ ಅದು ಕೆಜೆಗೆ ಒಂದು ರೂಪಾಯಿಯಂತೆ, ಅದಕ್ಕೂ ಮೊದಲು 4 kg ಅಕ್ಕಿ ಮತ್ತು 1ಕೆಜಿ ಗೋದಿ ವಿತರಣೆ ಆಗುತ್ತಿತ್ತು.
  ನಮ್ಮ ಕೆಲಸದ ಹೆಣ್ಣು ಮಕ್ಕಳು ಪ್ರತಿ ತಿಂಗಳು ಅವರಿಗೆ ಸಿಗುವ ರೇಷನ್ ಅಕ್ಕಿ ಮಾರಾಟ ಮಾಡಿ ಸೋನಾ ಮಸೂರಿ ಸ್ಟೀಮ್ ಅಕ್ಕಿ ಒಯ್ಯುತ್ತಾರೆಂಬ ಸುದ್ದಿ ಮೊನ್ನೆ ಕೇಳಿ ಬೇಸರ ಆಯಿತು, ಅದೂ ಕೇಜಿಗೆ 10 ರೂ ನಂತೆ ಮಾರಾಟ ಮಾಡಿ 40 ರೂ ನ ಸೋನಾ ಮಸ್ಸೂರಿ ಖರೀದಿಸುತ್ತಾರಂತೆ !?. ಸಕಾ೯ರ 30 ರೂ ನಂತೆ ಅಕ್ಕಿ ಖರೀದಿಸಿ ಅದನ್ನು ಈ ಯೋಜನೆಗೆ ಹೆಚ್ಚು ಕಡಿಮೆ ಉಚಿತವಾಗಿ ಸಹಾಯಧನದಿಂದ ನೀಡುವ ಈ ಯೋಜನೆ ದಾರಿ ತಪ್ಪಿತಾ? ಅಥವ ಅಕ್ಕಿ ಗುಣಮಟ್ಟ ಇಲ್ಲವಾ? ಎಂಬ ಪ್ರಶ್ನೆ ಮೂಡುತ್ತದೆ ಆದರೆ ಅದಾವುದು ಅಲ್ಲ, ಎಲ್ಲರಿಗೂ ಈಗ ಅಂತಸ್ಥಿನ ಘನತೆ ಎಂಬ ಭ್ರಮೆಯಲ್ಲಿದ್ದಾರೆ.
   ನಾನು ಈ ಅಕ್ಕಿ ಅವರಿಂದ ತರಿಸಿ ನೋಡಿದೆ ಅಕ್ಕಿ ಸ್ವಚ್ಚವಾಗಿತ್ತು, ಅನ್ನ ಮಾಡಿ ಊಟ ಮಾಡಿದೆ ನಂಬರ್ ಒನ್ - ಸ್ವಲ್ಪ ಗಾತ್ರ ದೊಡ್ಡದು ಅಷ್ಟೆ.
   ಯಾಕೆ ಸೊಸೈಟಿ ಅಕ್ಕಿ ನೀವು ಬಳಸುವುದಿಲ್ಲ . ಕೇಳಿದರೆ "ನಾವು ಸೊಸೈಟಿ ಅಕ್ಕಿ ಇಡ್ಲಿ ದೋಸೆಗೆ ಮಾತ್ರ", "ಹೊಟ್ಟೆ ನೋವು ಬರುತ್ತೆ", "ನನ್ನ ಮಗ ತಿನ್ನುವುದಿಲ್ಲ" ಹೀಗೆ ನೂರಾರು ಕಾರಣಗಳು.
  ಇದು ಪಾಲ್ಸ್ ಪ್ರಿಸ್ಟೇಜ್ ನ ಒಂದು ರೂಪವೇ ಆಗಿದೆ, ಸರ್ಕಾರಿ ಶಾಲಾ ಶಿಕ್ಷಕರುಗಳು ಅವರ ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸದೆ ಕಾನ್ವೆಂಟ್ ಹುಡುಕಿದಂತೆ.
   ನಿಜವಾಗಿ ಹಸಿದ ಹಸಿವಿನ ಹೊಟ್ಟೆಯ ಬಡತನ ರೇಖೆಯ ಕೆಳಗಿನ ಕುಟುಂಬಕ್ಕೆ ಈ ಯೋಜನೆ ವರದಾನ ಆದರೆ ನಿಜವಾದ ಬಿಪಿಎಲ್ ದಾರನ ಗುರುತಿಸುವಲ್ಲಿ ಸರ್ಕಾರಗಳು ಎಡವಿದೆ.  
  ಈಗಿನ ಸರ್ಕಾರ ಕಾರ್ ಇದ್ದರೂ ಬಿಪಿಎಲ್ ಕಾರ್ಡ್ ದಾರನಿಗೆ ಅನ್ನಭಾಗ್ಯ ನೀಡುತ್ತೇನೆ ಅನ್ನುತ್ತಿರುವುದು ನೋಡಿದರೆ ಇಡೀ ರಾಜ್ಯ ಬಿಪಿಎಲ್ ಅಂದರೆ ಬಡತನ ರೇಖೆಗಿಂತ ಕೆಳಗಿರುವರೆಂದೆ ಬಾವಿಸಬೇಕು ಆದರೆ ಇದು ಅತ್ಯುತ್ತಮವಾದ ಯೋಜನೆ ಹಳ್ಳ ಹಿಡಿದಿದೆ ಎಂಬುದು ಸಾಬೀತಾಗಿದೆ.

Comments

Popular posts from this blog

# ಜುಟ್ಟು ಕಾಳಿಂಗ ಸಪ೯ದ ಆಸ್ತಿತ್ವದ ಮಲೆನಾಡಿನ ಮಿಥ್ಯೆ#

  # ಕಾಳಿ೦ಗ ಸಪ೯ದಲ್ಲಿ ಜುಟ್ಟು ಕಾಳಿಂಗ ಸಪ೯ ಅಂತ ಇದೇ ಅನ್ನುವ ಯಾರು ನೋಡದ ಸಪ೯ದ ಅಸ್ತಿತ್ವ#    ಮಲೆನಾಡಿನ ಹಳ್ಳಿಗಳಲ್ಲಿ, ಅದು ಕಾಳಿ೦ಗ ಸಪ೯ದ ವಾಸಸ್ಥಳದ ಪರಿಸರದಲ್ಲಿ ಜುಟ್ಟು ಕಾಳಿಂಗ ಸಪ೯ ಇದೆ ಅನ್ನುವ ಮಾತು ಆಗಾಗ್ಗೆ ಕೇಳುತ್ತಿರುತ್ತೇವೆ. ಆದರೆ ಆ ರೀತಿಯ ಹಾವು ಇಲ್ಲ ಎಂದು ಹಾವಿನ ಬಗ್ಗೆ ಸಂಶೋದನೆ ಮಾಡುವವರು, ಅರಣ್ಯ ಇಲಾಖೆಯವರು, ಹಾವು ಹಿಡಿಯುವವರು ಖಡಾಖಂಡಿತವಾಗಿ ಹೇಳುತ್ತಾರಾದರು, ಈ ವದಂತಿ ಹೇಗೆ ಹರಡಿದೆ?.    ಇದು ಒಂದು ಊರು ಹಳ್ಳಿಯಲ್ಲ ನಾನು ನೋಡಿದಂತೆ ಮಹಾರಾಷ್ಟ್ರದ ರತ್ನಗಿರಿಯಿ೦ದ ಕೇರಳದ ಕಾಸರಗೋಡಿನ ತನಕ ಜುಟ್ಟು ಕಾಳಿಂಗದ ಅನೇಕ ರೋಚಕ ಕಥೆ ಕೇಳಿದ್ದೇನೆ.   ಪ್ರತ್ಯಕ್ಷ ನೋಡಿದವರು ತಾವು ಎನ್ನುವ ಅನೇಕರಲ್ಲಿ ಮಾತಾಡಿದ್ದೇನೆ ಆದರೆ ಅದು ನಂಬಲಹ೯ ಮಾಹಿತಿ ಅನಿಸಲಿಲ್ಲ, ಒಂದು ರೀತಿ ಕಾಲ್ಪನಿಕ ತ್ರಿಲ್ಲರ್ ಕಥೆ ಅಷ್ಟೇ ಅನ್ನಬಹುದು.    ಜಡೆ ಕಾಳಿಂಗ ಸಪ೯ಕ್ಕೆ ರೋಷ ಜಾಸ್ತಿ, ಹೆಡೆ ಮೇಲೆ ಕೂದಲಿನ ಜುಟ್ಟು ಇರುತ್ತೆ, ಮನುಷ್ಯರನ್ನ ಕಂಡರೆ ಓಡಿಸಿಕೊಂಡು ಬರುತ್ತೆ, ಅದರಿಂದ ತಪ್ಪಿಸಿಕೊಳ್ಳಲು ಒಂದೇ ದಾರಿ ಅದೇನೆಂದರೆ ತಗ್ಗಿನ ಪ್ರದೇಶದಲ್ಲಿ ಓಡುವುದು.     ಯಾಕೆ೦ದರೆ ಓಡಿಸಿಕೊಂಡು ಬರುವ ಜುಟ್ಟು ಕಾಳಿಂಗದ ಜುಟ್ಟು, ಇಳಿಜಾರಿನಲ್ಲಿ ಅದರ ತಲೆಯಿ೦ದ ಇಳಿಜಾರಿಗೆ ಸರಿಯುವುದರಿಂದ  ಕಣ್ಣಿನ ಮೇಲೆ ಕೂದಲ ಜುಟ್ಟು ಮುಚ್ಚುವುದರಿಂದ ಕಣ್ಣು ಕಾಣುವುದಿಲ್ಲ, ಆಗಲೇ ತಪ್...

HISTORICAL SAGAR MARIKAMBA JATRA.ಐತಿಹಾಸಿಕ ಸಾಗರದ ಮಾರಿಕಾಂಬಾ ಜಾತ್ರೆ

     ಸಾಗರದ ಮಾರಿಕಾಂಬಾ ಜಾತ್ರೆ ಐತಿಹಾಸಿಕ ಚರಿತ್ರೆಯಲ್ಲಿ ದಾಖಲೆ.        ಕನಾ೯ಟಕ ರಾಜ್ಯದಲ್ಲಿ ಎರೆಡು ಮಾರಿಕಾಂಬಾ ಜಾತ್ರೆಗಳು ಪ್ರಸಿದ್ಧಿ ಪಡೆದಿದೆ ಅದು ಉತ್ತರ ಕನ್ನಡ ಜಿಲ್ಲೆಯ ಸಿಸಿ೯ಯದ್ದು ಮತ್ತು ಶಿವಮೊಗ್ಗ ಜಿಲ್ಲೆಯ ಸಾಗರದ್ದು.    ಪ್ರತಿ ಮೂರು ವಷ೯ಕೆ ಈ ಜಾತ್ರೆ ಆಚರಿಸಲಾಗುತ್ತೆ ಶೂದ್ರ ವಗ೯ದವರು ಭಯ ಮತ್ತು ಭಕ್ತಿಯಿಂದ ಕುರಿ ಕೋಳಿ ಬಲಿ ನೀಡುವ ಪರಂಪರೆ ಇದೆ.ಮಂಗಳವಾರ ಮೇಲು ಜಾತಿಯ ಜನರ ಪೂಜೆ ದೇವಿಯ ತವರು ಮನೆಯಲ್ಲಿ ನಡೆಯುತ್ತದೆ ನಂತರ ರಾತ್ರಿ ಗಂಡನ ಸೇರುವ ಮಾರಿಗೆ ಶೂದ್ರರ ಪೂಜೆ, ಬಲಿ ಮೀಸಲು.    ಮೊದಲೆಲ್ಲ ಮಾರಿಯಮ್ಮನಿಗೆ ಕೊಣನ ಬಲಿ ನೀಡುತ್ತಿದ್ದರು ಈಗ ಇದು ಕಾನೂನು ಪ್ರಕಾರ ನಿಷಿದ್ಧ ಆದರೆ ಈ ಆಚಾರಣೆ ಗುಪ್ತವಾಗಿ ಬೇರೆ ಕಡೆ ನಡೆಸಲಾಗುತ್ತೆ ಅನ್ನುತ್ತಾರೆ.    ಸಾಗರದ ಮಾರಿಕಾ0ಬಾ ಜಾತ್ರೆ ಜಾತ್ರೆಯಿ೦ದ ಜಾತ್ರೆಗೆ ಅದೂರಿಯಾಗಿ ನಡೆಯುತ್ತದೆ, ಕೋಟ್ಯಾoತರ ಹಣದ ವಹಿವಾಟು ಕೂಡ, ಮೊದಲೆಲ್ಲ ಹಣದ ಅಪರಾ ತಪರ ಆಗುತ್ತಿದೆ ಎಂಬ ಗುಲ್ಲು ಇತ್ತು ಆದರೆ ಈಗೆಲ್ಲ ಪಾರದಶ೯ಕವಾಗಿದೆ ಆದರೂ ಈ ಬಾರಿಯ 2017ರ ಜಾತ್ರೆಯಲ್ಲಿ ಅವ್ಯವಹಾರದ ಆರೋಪ ಮಾಡಲಾಗಿದೆ ಈ ವಿಚಾರ ಇಲ್ಲಿ ಅಪ್ರಸ್ತುತ ಆದರೂ ಈ ಬಗ್ಗೆ ಬರೆಯಲು ಕಾರಣ ಕೆಳದಿ ಅರಸರ ಕಾಲದಲ್ಲಿ ಅಂದರೆ 350 ವಷ೯ದ ಹಿಂದೆಯೂ ರಾಜರಿಗೆ ಸಾಗರದ ಮಾರಿಕಾಂಬಾ ಜಾತ್ರೆಯಲ್ಲಿ ಸಾವ೯ಜನಿಕರಿಂದ ಸಂಗ್ರಹಿಸಿದ ಜಾತ...

ರಿಪ್ಪನ್ ಪೇಟೆ ( ಶಿವಮೊಗ್ಗ ಜಿಲ್ಲೆ) ಹೆಸರು ಬಂದಿದ್ದಾದರು ಹೇಗೆ?

#  ರಿಪ್ಪನ್ ಪೇಟೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಪ್ರಮುಖ ಹೋಬಳಿ ಕೇಂದ್ರ ಈ ಆಂಗ್ಲ ಅಧಿಕಾರಿಯ ಹೆಸರು ಇಡಲು ಕಾರಣವಾದ ಘಟನೆ ತುಂಬಾ ಕುತೂಹಲಕಾರಿ# ಸ್ವಲ್ಪ ಕಾಲ ನೀವು ಈ ಲೇಖನ ಓದಿದರೆ ಕಾರಣ ಗೊತ್ತಾಗುತ್ತೆ.    ಆಗ ಬ್ರಿಟಿಷ್ ಸಕಾ೯ರರಕ್ಕೆ ಆಡಳಿತ ಸುಗುಮಕ್ಕೆ ರೈಲು ಮಾಗ೯ ಅತ್ಯಗತ್ಯ ಎಂಬ ಸಕಾರಣ ಮನವರಿಕೆ ಆದ ಕಾಲ ಏಕೆಂದರೆ ಬ್ರಿಟಿಷರು ಅಮೆರಿಕಾ ವಲಸೆಯಲ್ಲಿ ಇದನ್ನ ಮನಗOಡಿದ್ದರು, ಬೆಂಗಳೂಳಿ ರಿಂದ ಶಿವಮೊಗ್ಗ ತಲುಪುವ ರೈಲು ಮಾಗ೯ ತಾಳಗುಪ್ಪಾ ತಲುಪಿದರೆ ಜೋಗ ಜಲಪಾತ ವೀಕ್ಷಣೆಗೆ ಅನುಕೂಲ ಎಂಬುದು ಹಾಗೆ ಮತ್ತೊಂದು ಮ್ಯಸೂರು ಸಕಾ೯ರ ಶರಾವತಿ ನದಿಗೆ ಆಣೆಕಟ್ಟು ಕಟ್ಟಿ.ಜಲ ವಿದ್ಯುತ್ ತಯಾರಿಸಲು ಸಾಮಗ್ರಿ ಸಾಗಾಣಿಕೆಗೆ ಅನುಕೂಲ ಎಂಬ ಕಾರಣದಿಂದ ಶಿವಮೊಗ್ಗದಿಂದ ತಾಳಗುಪ್ಪ ರೈಲು ಮಾಗ೯ ಯೋಜನೆ ಮಾಡಲಾಯಿತು.    ಆಗ ಪ್ಲೇಗ್ ಮಾರಿಯ ಕಾಲ, ಎಲ್ಲೆಲ್ಲೂ ಜನ ಸಾಯುತ್ತಿದ್ದರು ಆಗಲೇ ಈ ರೈಲು ಮಾಗ೯ ಶಿವಮೊಗ್ಗ ಆರಸಾಳಿOದ ದೊಡ್ಡಿನ ಕೊಪ್ಪ (ಈಗಿನ ರಿಪ್ಪನ್ ಪೇಟೆ) ಆನಂದಪುರಂ ಮಾಗ೯ ನಿಗದಿ ಆಗಿತ್ತು ಆದರೆ ಈ ಭಾಗದಲ್ಲಿ ಒಂದು  ವದಂತಿ ಈ ಬಾಗದಲ್ಲಿ ಹರಡಿತ್ತು ಅದೇನೆಂದರೆ ರೈಲು ಬಂದರೆ ಪ್ಲೇ ಗು ಬರುತ್ತೆ  ಅಂತ.    ಹಾಗಾಗಿ ಈ ಭಾಗದಲ್ಲಿನ ಜಾಗೃತ ಜನ ನಾಯಕರುಗಳು ಹೇಗಾದರು ಮಾಡಿ ರೈಲು ಬರದಂತೆ ಮಾಡಲು ಎಲ್ಲಾ ರೀತಿಯ ಪ್ರಯತ್ನ ಮಾಡಲು ಪ್ರಾರಂಭಿಸಿದರು.     ಇದೇ ಸಂದಭ೯ದಲ್ಲ...