Skip to main content

Blog number 984. ಆನಂದಪುರಂ ಇತಿಹಾಸ ಸಂಖ್ಯೆ 82. ಕೆಳದಿ ಶಿವಪ್ಪನಾಯಕ ಕೃಷಿ- ತೋಟಗಾರಿಕಾ ವಿಜ್ಞಾನ ವಿಶ್ವವಿದ್ಯಾಲಯ ಆನಂದಪುರಂ ಹೋಬಳಿಯ ಯಡೇಹಳ್ಳಿ ಗ್ರಾಮ ಪಂಚಾಯತ್ ನ 777 ಎಕರೆಯಲ್ಲಿ ಪ್ರಾರಂಭವಾಗಿ ಮೊದಲ ಘಟಿಕೋತ್ಸವ ಸಮಾರಂಭ ನಡೆಯಲಿದೆ

#ಆನಂದಪುರಂ_ಇತಿಹಾಸ_82.

#ಆನಂದಪುರಂ_ಹೋಬಳಿಯ_ಇರುವಕ್ಕಿಯಲ್ಲಿ

#ಕೆಳದಿ_ಶಿವಪ್ಪನಾಯಕ_ಕೃಷಿ_ತೋಟಗಾರಿಕಾ_ವಿಜ್ಞಾನ_ವಿಶ್ವವಿದ್ಯಾಲಯ_ಪ್ರಾರಂಭ_ಆಗಿದೆ.

#ರಾಷ್ಟ್ರೀಯ_ಹೆದ್ದಾರಿ_69_ಯಡೇಹಳ್ಳಿ_ಅಂಬೇಡ್ಕರ್_ವೃತ್ತದಿಂದ_ಹೊಸನಗರ_ರಸ್ತೆಯಲ್ಲಿ_3_ಕಿಮಿ_ಅಂತರದಲ್ಲಿದೆ

#ರಾಷ್ಟ್ರದಲ್ಲಿ_777_ಎಕರೆ_ಅರಣ್ಯದಲ್ಲಿರುವ_ಏಕೈಕ_ಕೃಷಿ_ತೋಟಗಾರಿಕಾ_ವಿಜ್ಞಾನ_ವಿಶ್ವವಿದ್ಯಾಲಯ.

   28- ಸೆಪ್ಟೆಂಬರ್ -2022 ರಂದು ಇರುವಕ್ಕಿಯ ಕೆಳದಿ ಶಿವಪ್ಪ ನಾಯಕ ಕೃಷಿ ತೋಟಗಾರಿಕಾ ವಿಶ್ವವಿದ್ಯಾಲಯದ ನೂತನ ಅವರಣದಲ್ಲಿ ಮೊದಲ  ಘಟಿಕೋತ್ಸವ ಸಮಾರಂಭ ನಡೆಯಲಿದೆ, ಘನವೆತ್ತ ರಾಜ್ಯಪಾಲರಾದ ಗೆಹ್ಲೋಟ್ ಆಗಮಿಸಲಿದ್ದಾರೆ.
  ಸದರಿ ವಿಶ್ವ ವಿಶ್ವವಿದ್ಯಾಲಯದ 7 ನೇ ಘಟಿಕೋತ್ಸವ ಇದು ಮೊದಲಿನ ಆರು ಘಟಿಕೋತ್ಸವ ಇರುವಕ್ಕಿಯ ನೂತನ ಕಾಂಪ್ಲೆಕ್ಸ್ ಕಾಮಗಾರಿ ಪೂರ್ಣವಾಗದ್ದರಿಂದ ಶಿವಮೊಗ್ಗದ ಕೃಷಿ ಕಾಲೇಜಿನ ಆವರಣದಲ್ಲೇ ನಡೆಸಲಾಗಿತ್ತು.
   ಕೃಷಿ ವಿಶ್ವವಿದ್ಯಾಲಯಕ್ಕೆ ಜಿಲ್ಲೆಯಲ್ಲಿನ ಇರುವಕ್ಕಿ ಮತ್ತು ಹಾಯ್ ಹೊಳೆ ಹತ್ತಿರ ಭೂಮಿ ಗುರುತಿಸಲಾಗಿತ್ತು ಮತ್ತು ಹಾಯ್ ಹೊಳೆಯ ಭೂಮಿಯಲ್ಲೇ ಕೃಷಿ ವಿಶ್ವವಿದ್ಯಾಲಯ ಮಾಡಬೇಕೆಂಬ ಒತ್ತಡವಿತ್ತು ಕಾರಣ ಅಲ್ಲಿ ಬೇನಾಮಿ ಹೆಸರಲ್ಲಿ ರಾಜಕೀಯ ಪಕ್ಷಗಳ ಮುಖಂಡರು ಭೂಮಿ ಖರೀದಿಸಿದ್ದರು ಅವರ ಭೂಮಿಗೆ ಬಂಗಾರದ ಬೆಲೆ ಬರಬೇಕೆಂದರೆ ಕೃಷಿ ವಿಶ್ವವಿದ್ಯಾಲಯ ಬರಬೇಕು ಎಂಬುದು.
  ಸಾಗರ ತಾಲ್ಲೂಕಿನ ಆನಂದಪುರಂ ಹೋಬಳಿಯ ಯಡೇಹಳ್ಳಿಯ ಇರುವಕ್ಕಿ ಗ್ರಾಮದಲ್ಲಿ ದಟ್ಟ ಅರಣ್ಯ ಇರುವ 777 ಎಕರೆ ರೆವಿನ್ಯೂ ಜಮೀನು ಕೃಷಿ ವಿಶ್ವವಿದ್ಯಾಲಯಕ್ಕೆ ಸೂಕ್ತವಾಗಿತ್ತು ಆದರೆ ರಿಯಲ್ ಎಸ್ಟೇಟ್ ಮಾಪಿಯಾ ಇರುವಕ್ಕಿಯಲ್ಲಿ ಕೃಷಿ ವಿಶ್ವವಿದ್ಯಾಲಯ ಮಾಡಬೇಡಿ ಎಂಬ ಪ್ರತಿಭಟನೆ ಮಾಡಿತ್ತು.
  ಇದರ ಹೂರಣ ಅರಿತಿದ್ದ ಯಡ್ಯೂರಪ್ಪ ಮತ್ತು ಕಾಗೋಡು ತಿಮ್ಮಪ್ಪ ಸಾಗರ ತಾಲ್ಲೂಕಿನ ಇರುವಕ್ಕಿಯಲ್ಲೇ ಕೃಷಿ ವಿಶ್ವವಿದ್ಯಾಲಯಕ್ಕೆ ಜಾಗ ಮಂಜೂರು ಮಾಡಿಸಿದರು.
    ಆಗಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕೃಷಿ ಮಂತ್ರಿ ಕೃಷ್ಣ ಬೈರೇಗೌಡರು ಹಣ ಮಂಜೂರು ಮಾಡಿದರು.
  ಶಂಕುಸ್ಥಾಪನೆ ನೆರವೇರಿಸಿದವರು ಕೃಷಿ ಸಚಿವ ಕೃಷ್ಣ ಬೈರೇಗೌಡರು, ಇವರ ತಂದೆ ಬೈರೇಗೌಡರು ಕೃಷಿ ಮಂತ್ರಿಗಳಾಗಿದ್ದಾಗ 1996 - 97ರಲ್ಲಿ ಸಾಗರ ತಾಲ್ಲೂಕಿನಲ್ಲಿ ನಡೆದ ಭೂಸಾರ ಸಂರಕ್ಷಣಾ ಇಲಾಖೆಯ ಅವ್ಯವಹಾರ ಪರಿಶೀಲನೆಗೆ ಆನಂದಪುರಂ ಹೋಬಳಿಗೆ ಬಂದು 7 ಜನ ಕೃಷಿ ಇಲಾಖಾ ಅಧಿಕಾರಿಗಳನ್ನು ಜೈಲಿಗೆ ಕಳಿಸಿದ್ದರು.
   ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲ್ಲುಕಿನ ಈಸೂರಿನ ಚಿಂಡಿ ವಾಸುದೇವ ಈ ವಿಶ್ವವಿದ್ಯಾಲಯದ ಮೊದಲ ಕುಲಪತಿಗಳು.
  ಮೊದಲ ಪಾರಂ ಇನ್ ಚಾಜ್೯ ಹುಂಚಾ ಸಮೀಪದ ಡಾ.ಗಣಪತಿ.
  ಮೊದಲ ಕಾನೂನು ಸಲಹೆಗಾರರು ರಿಪ್ಪನ್ ಪೇಟೆ ಸಮೀಪದ ಹಾಲಿ ಶಿವಮೊಗ್ಗದ ನ್ಯಾಯಾಲಯದಲ್ಲಿ ವಕೀಲರಾಗಿರುವ ಕುಬಟೂರು ರಾಮಚಂದ್ರ.
  ಇರುವಕ್ಕಿಯ 777 ಎಕರೆ ಕೃಷಿ ವಿಶ್ವವಿದ್ಯಾಲಯ ಭೂಮಿ ಮಂಜೂರಾತಿ ಮಾಡಿಸಲು ವಿಶೇಷ ಪ್ರಯತ್ನ ಮಾಡಿದ ಆಗಿನ ಕೃಷಿ ವಿಶ್ವವಿದ್ಯಾಲಯದ ಅಧಿಕಾರಿ ಸಾಗರ ತಾಲೂಕಿನ ಮಂಚಾಲೆಯ ಡಾ.ವಿಘ್ನೇಶ್ ಮುಖ್ಯ ಕಾರಣ.
  ಸಾಗರ ತಾಲೂಕಿನ ಆನಂದಪುರಂ ನಾಡ ಕಚೇರಿಯ ಉಪ ತಹಸೀಲ್ದಾರ್ ಆಗಿದ್ದ ಕಲ್ಲಪ್ಪ ಮೆಣಸಿನ ಹಾಳ್ ಇರುವಕ್ಕಿಯ ರೆವಿನ್ಯೂ ಭೂಮಿ ಕೃಷಿ ವಿಶ್ವವಿದ್ಯಾಲಯಕ್ಕೆ ಹಸ್ತಾಂತರಿಸಲು ಹೆಚ್ಚು ಶ್ರಮಿಸಿದ್ದಾರೆ.
  ಹೀಗೆ ಅನೇಕರ ಸಹಕಾರದಿಂದ ಸಾಗರ ತಾಲ್ಲೂಕಿನ ಆನಂದಪುರಂ ಹೋಬಳಿಯ ಯಡೇಹಳ್ಳಿಯ ಇರುವಕ್ಕಿಯಲ್ಲಿ ಪ್ರತಿಷ್ಟಿತ ಕೆಳದಿ ಶಿವಪ್ಪ ನಾಯಕ ಕೃಷಿ ತೋಟಗಾರಿಕಾ ವಿಜ್ಞಾನ ವಿಶ್ವವಿದ್ಯಾಲಯ ಪ್ರಾರಂಭವಾಗಿದೆ.
  ಯಡೇಹಳ್ಳಿ ಗ್ರಾಮ ಪಂಚಾಯತಿ ಸದಸ್ಯ - ಉಪಾಧ್ಯಕ್ಷ - ಆನಂದಪುರಂ ಜಿಲ್ಲಾ ಪಂಚಾಯತ್ ಸದಸ್ಯನಾಗಿದ್ದ ನಾನು ಶಂಕುಸ್ಥಾಪನೆಗೆ ಬಂದಿದ್ದ ಕೃಷಿ ಸಚಿವ ಕೃಷ್ಣ ಬೈರೇಗೌಡ ಮತ್ತು ಎಲ್ಲಾ ಅತಿಥಿಗಳಿಗೆ ಚಹಾ-ಮತ್ತು ಮಧ್ಯಾಹ್ನ ಮಲೆನಾಡಿನ ಶೈಲಿಯ ಊಟದ ಆತಿಥ್ಯ ನೀಡಿದ ಹಿರಿಮೆ ನನ್ನದು ಅದೇ ರೀತಿ ಅಂದಿನ ಕಾರ್ಯಕ್ರಮದಲ್ಲಿ ಭಾಗವಹಿಸಿದ ಪತ್ರಕರ್ತರು, ಗಣ್ಯರು ಮತ್ತು ಪೋಲಿಸ್ ಇಲಾಖಾ ಸಿಬ್ಬಂದಿಗಳಿಗೆ ನನ್ನ ಕೃಷ್ಣ ಸರಸ ಕಲ್ಯಾಣ ಮಂಟಪದಲ್ಲಿ ಮಲೆನಾಡಿನ ಸಂಪ್ರದಾಯಿಕ ಊಟ ಆಗಿನ ಕುಲಪತಿ ಚಿಂಡಿ ವಾಸುದೇವರ ಮನವಿ ಮೇರೆಗೆ ಉಣ ಬಡಿಸಿದ ಸಂತೃಪ್ತಿ ನನ್ನದು.
  ಮುಂದಿನ ಪ್ರತಿ ವರ್ಷ ವಿಶ್ವವಿದ್ಯಾಲಯದ ಕುಲಾದಿಪತಿಗಳಾದ ರಾಜ್ಯಪಾಲರು ಘಟಿಕೋತ್ಸವಕ್ಕೆ ತಪ್ಪದೇ ಬರುತ್ತಾರೆ, ಈ ಭಾಗದ ಮುಂದಿನ ತಲೆಮಾರಿನ ಮಕ್ಕಳು ವಿದ್ಯಾವಂತರಾಗುವ ಹೊಸ ಹುಮ್ಮಸ್ಸು ಹೊಂದುತ್ತಾರೆ ಒಟ್ಟಾರೆ ಆನಂದಪುರಂ ಹೋಬಳಿ ಸರ್ವತ್ತೋಮುಖ ಅಭಿವೃದ್ದಿ ಕಾಣಲಿದೆ.

Comments

Popular posts from this blog

Blog number 1782. ಅರಳಸುರಳಿಯ ರಾಘವೇಂದ್ರ ಕೇಕೋಡರ ಕುಟುಂಬದ ತಪ್ಪು ನಿರ್ದಾರದ ದುರಂತ.

#ತೀರ್ಥಹಳ್ಳಿಯ_ಅರಳಸುರಳಿಯ_ಒಂದೇ_ಕುಟುಂಬದ_ನಾಲ್ವರು_ಮೃತರಾದ_ರಹಸ್ಯವೇನು? #ಈ_ಬಗ್ಗೆ_ಆ_ಊರಿನ_ಸಮೀಪದ_ಈ_ಕುಟುಂಬದ_ಪರಿಚಯ_ಇರುವವರಿಗೆ_ವಿಚಾರಿಸಿದ್ದೆ. #ಅವರು_ಈ_ಘಟನೆ_ಬಗ್ಗೆ_ಸವಿಸ್ತಾರವಾಗಿ_ಲಿಖಿತ_ಲೇಖನ_ಬರೆದಿದ್ದಾರೆ. #ಅವರ_ವಿನಂತಿ_ಅವರ_ಹೆಸರು_ಬಹಿರಂಗಗೊಳಿಸ_ಬಾರದು. #ಆದ್ದರಿಂದ_ಈ_ಲೇಖನ_ಪೋಸ್ಟ್_ಮಾಡಬಾರದೆಂದಿದ್ದೆ_ಆದರೆ_ಇದು_ಮಲೆನಾಡಿಗರ_ಮನೆ_ಮನೆಯ_ಕಥೆ #ಆದ್ದರಿಂದ_ಇಲ್ಲಿ_ಪೋಸ್ಟ್_ಮಾಡಿದೆ.    ಇಲ್ಲಿ ತಪ್ಪು ಯಾರದ್ದೂ ಇಲ್ಲ... ಪಶ್ಚಾತ್ತಾಪದ ಪ್ರಾಯಶ್ಚಿತ ಕೇಳಲು ಅವರಾರು ಇಲ್ಲ .....ಆದರೆ ಈ ರೀತಿ ಜೀವ ತ್ಯಾಗ ಮಾಡುವ ಆತುರದ ಕೆಟ್ಟ ನಿರ್ದಾರ ಮಾತ್ರ ಸರಿ ಅಲ್ಲ.     ಇವರ ಅಣ್ಣ ಆರ್.ಎಸ್.ಎಸ್. ಪ್ರಚಾರಕರಾಗಿ ದೆಹಲಿಯಲ್ಲಿ ಏಳು ವಷ೯ ಮೋದಿ ಜೊತೆ ಒಂದೇ ಕೋಣೆ ಹಂಚಿಕೊಂಡವರು, ಇನ್ನೊಬ್ಬ ಸಹೋದರ ಮೂಳೆ ತಜ್ಞರಾಗಿ ಶಿವಮೊಗ್ಗದಲ್ಲಿ ಆಸ್ಪತ್ರೆ ಮಾಡಿಕೊಂಡಿದ್ದಾರೆ.   #ದೀರ್ಘವಾದರೂ_ಪೂರ್ಣ_ಲೇಖನ_ಓದಿ   #ಹೀಗೊಂದು_ಸುಕುಟುಂಬ_ಆತ್ಮಾಘಾತ_ಮತ್ತು_ತದನಂತರದ_ಸಹಾಗಮನ.... ಮೂಡಣದಲ್ಲಿ ರವಿ ಮೂಡಲು ಅಣಿ ಯಾಗುತ್ತಿಧ್ದ .. ಹಾದಿಗಣಪತಿ ದೇವರು ಗರ್ಭಗುಡಿಯ ನಂದಾದೀಪದ ಮಂದ ಬೆಳಕಿನಲ್ಲಿ ತನ್ನ ಗುಡಿಯ ಎದುರಿನ ತಗ್ಗಿನಲ್ಲಿದ್ದ  ರಾಘವೇಂದ್ರ ಕೇಕೋಡರ ಮನೆಯನ್ನು ಎವೆಯಕ್ಕದೇ ನೋಡುತ್ತಲಿದ್ದ... ಊರ ಎಲ್ಲಾ ಮನೆಯಂತೆ ಆ ಮನೆಯಲ್ಲೂ ಆ ಬೆಳಗಿನಲ್ಲಿ ಮನೆಯೊಡತಿ ನಾಗರತ್ನಕ್ಕ ಆ ಸಮಯದಲ್ಲಿ ದೇವರಿಗೆ ದೀಪ ಹಚ್ಚಿ ಹೊಸ್ತಿಲು ಪೂಜೆ ಮಾಡ

Blog number 1037. ರಾಜಕುಮಾರಿ ಶಾಂತವ್ವ ಮತ್ತು ದಲಿತ ಯುವಕ ಸಿದ್ದೇಶ್ವರರ ಅಮರ ಪ್ರೇಮದ ಸ್ಮಾರಕ, ಅನ್ಯ ಜಾತಿ ವಿವಾಹವಾದ್ದರಿಂದ ರಾಜಕುಮಾರಿಗೆ ಸೂಳೆ ಪಟ್ಟ ನೀಡಿದ ಸಮಾಜ. ಸಮಾಜದ ಒಳಿತಿಗಾಗಿ ಶಾಂತವ್ವ ಕಟ್ಟಿಸಿದ ಬೃಹತ್ ಕೆರೆಗೆ ಜನ ಕರೆದದ್ದು ಸೂಳೆ ಕಟ್ಟಿಸಿದ ಕೆರೆ ಅದೇ ಸೂಳೆಕೆರೆ / ಶಾಂತಿ ಸಾಗರ

# ಸೂಳೆಕೆರೆ (ಶಾಂತಿ ಸಾಗರ) ಅಂತರ್ ಜಾತಿ ಪ್ರೇಮ ವಿವಾಹದ ದುರOತ ಕಥೆ. #ಅಕ್ಟೋಬರ್ 2019 ರಲ್ಲಿ ತುಂಬಿ ತುಳುಕಿತ್ತು.  ಚಿತ್ರದುಗ೯, ದಾವಣಗೆರೆ ಬಳ್ಳಾರಿ ಮುಂತಾದ ಮಳೆ ಕಡಿಮೆ ಆಗುತ್ತಿದ್ದ ಜಿಲ್ಲೆಗಳಲ್ಲಿ ಅದೂ ಅಕ್ಟೋಬರ್ ತಿಂಗಳ 2019 ರಲ್ಲಿ  ಬಂದಿದ್ದ ಬಾರಿ ಮಳೆ ಎಲ್ಲಾ ಕೆರೆ, ಹೊಂಡಗಳು ತುಂಬಿ ತುಳುಕಿದೆ, ಸಾಮಾಜಿಕ ಜಾಲ ತಾಣದಲ್ಲಿ 40 ವಷ೯ದಲ್ಲಿ ಇಂತ ಮಳೆ ಬಂದಿಲ್ಲ ಅಂತ ಸುದ್ದಿ ಹರಿದಾಡುತ್ತಿತ್ತು ಮತ್ತು  ಸೂಳೆಕೆರೆ ತುಂಬಿ ಕೋಡಿ ಬಿದ್ದಿದೆ ಅಂತೆಲ್ಲ Post ನೋಡಿ ಬೆಂಗಳೂರಿಂದ ಬರುವಾಗ ಚಿತ್ರದುಗ೯ ಮಾಗ೯ವಾಗಿ ಚನ್ನಗಿರಿ ತಲುಪಿ ಸೂಳೆಕೆರೆ ನೋಡಲು ಹೋಗಿದ್ದೆ.  11ನೇ ಶತಮಾನದಲ್ಲಿ (1128ರಲ್ಲಿ)ಕೇವಲ 3 ವಷ೯ದಲ್ಲಿ ಈ ಕೆರೆ ನಿಮಾ೯ಣ ಮಾಡಿಸಿದ್ದು ಶಾಂತವ್ವ ಎಂಬ ರಾಜ ಕುಮಾರಿ ಅವಳು ಸ್ವಣ೯ವತಿ ಪಟ್ಟಣದ ದೊರೆ ವಿಕ್ರಮ ರಾಜನ ಮಗಳು, ಸಿದ್ದೇಶ್ವರ ಎಂಬ ಅನ್ಯ ಜಾತಿಯ ಯುವಕನೊ೦ದಿಗೆ ಗಾಂದವ೯ ವಿವಾಹ ಆಗುತ್ತಾಳೆ ಇದನ್ನ ಸಹಿಸದ ಮತ್ತು ಒಪ್ಪದ ಜನತೆ ಸೂಳೆ ಎಂದು ಮೂದಲಿಸುತ್ತಾರOತೆ ಈ ರೀತಿ ತನಗೆ ಬಂದ ಕಳಂಕ ಕಳೆಯಲು ಈ ಬೃಹತ್ ಕೆರೆ ತನ್ನ ಪತಿ ಸಿದ್ದೇಶ್ವರನ ಜೊತೆ ಸೇರಿ ನಿಮಿ೯ಸಿ ಕೆರೆಗೆ ಹಾರವಾದಳೆoಬ ಇತಿಹಾಸ ಇದೆ ಇದರಿಂದ ನೊಂದ ಪತಿ ಸಿದ್ಧೇಶ್ವರ ಕೂಡ ಎದುರಿನ ಗುಡ್ಡದಲ್ಲಿ ಜೀವ ತ್ಯಾಗ ಮಾಡುತ್ತಾನೆ ಈಗ ಅಲ್ಲಿ ಸಿದ್ದೇಶ್ವರ ದೇವಸ್ಥಾನವಿದೆ.   ಈ ಕೆರೆ ಈಗಲೂ ಸೂಳೆಕೆರೆ ಎಂದೆ ಹೆಸರಾಗಿದೆ ಈ

# ಜುಟ್ಟು ಕಾಳಿಂಗ ಸಪ೯ದ ಆಸ್ತಿತ್ವದ ಮಲೆನಾಡಿನ ಮಿಥ್ಯೆ#

  # ಕಾಳಿ೦ಗ ಸಪ೯ದಲ್ಲಿ ಜುಟ್ಟು ಕಾಳಿಂಗ ಸಪ೯ ಅಂತ ಇದೇ ಅನ್ನುವ ಯಾರು ನೋಡದ ಸಪ೯ದ ಅಸ್ತಿತ್ವ#    ಮಲೆನಾಡಿನ ಹಳ್ಳಿಗಳಲ್ಲಿ, ಅದು ಕಾಳಿ೦ಗ ಸಪ೯ದ ವಾಸಸ್ಥಳದ ಪರಿಸರದಲ್ಲಿ ಜುಟ್ಟು ಕಾಳಿಂಗ ಸಪ೯ ಇದೆ ಅನ್ನುವ ಮಾತು ಆಗಾಗ್ಗೆ ಕೇಳುತ್ತಿರುತ್ತೇವೆ. ಆದರೆ ಆ ರೀತಿಯ ಹಾವು ಇಲ್ಲ ಎಂದು ಹಾವಿನ ಬಗ್ಗೆ ಸಂಶೋದನೆ ಮಾಡುವವರು, ಅರಣ್ಯ ಇಲಾಖೆಯವರು, ಹಾವು ಹಿಡಿಯುವವರು ಖಡಾಖಂಡಿತವಾಗಿ ಹೇಳುತ್ತಾರಾದರು, ಈ ವದಂತಿ ಹೇಗೆ ಹರಡಿದೆ?.    ಇದು ಒಂದು ಊರು ಹಳ್ಳಿಯಲ್ಲ ನಾನು ನೋಡಿದಂತೆ ಮಹಾರಾಷ್ಟ್ರದ ರತ್ನಗಿರಿಯಿ೦ದ ಕೇರಳದ ಕಾಸರಗೋಡಿನ ತನಕ ಜುಟ್ಟು ಕಾಳಿಂಗದ ಅನೇಕ ರೋಚಕ ಕಥೆ ಕೇಳಿದ್ದೇನೆ.   ಪ್ರತ್ಯಕ್ಷ ನೋಡಿದವರು ತಾವು ಎನ್ನುವ ಅನೇಕರಲ್ಲಿ ಮಾತಾಡಿದ್ದೇನೆ ಆದರೆ ಅದು ನಂಬಲಹ೯ ಮಾಹಿತಿ ಅನಿಸಲಿಲ್ಲ, ಒಂದು ರೀತಿ ಕಾಲ್ಪನಿಕ ತ್ರಿಲ್ಲರ್ ಕಥೆ ಅಷ್ಟೇ ಅನ್ನಬಹುದು.    ಜಡೆ ಕಾಳಿಂಗ ಸಪ೯ಕ್ಕೆ ರೋಷ ಜಾಸ್ತಿ, ಹೆಡೆ ಮೇಲೆ ಕೂದಲಿನ ಜುಟ್ಟು ಇರುತ್ತೆ, ಮನುಷ್ಯರನ್ನ ಕಂಡರೆ ಓಡಿಸಿಕೊಂಡು ಬರುತ್ತೆ, ಅದರಿಂದ ತಪ್ಪಿಸಿಕೊಳ್ಳಲು ಒಂದೇ ದಾರಿ ಅದೇನೆಂದರೆ ತಗ್ಗಿನ ಪ್ರದೇಶದಲ್ಲಿ ಓಡುವುದು.     ಯಾಕೆ೦ದರೆ ಓಡಿಸಿಕೊಂಡು ಬರುವ ಜುಟ್ಟು ಕಾಳಿಂಗದ ಜುಟ್ಟು, ಇಳಿಜಾರಿನಲ್ಲಿ ಅದರ ತಲೆಯಿ೦ದ ಇಳಿಜಾರಿಗೆ ಸರಿಯುವುದರಿಂದ  ಕಣ್ಣಿನ ಮೇಲೆ ಕೂದಲ ಜುಟ್ಟು ಮುಚ್ಚುವುದರಿಂದ ಕಣ್ಣು ಕಾಣುವುದಿಲ್ಲ, ಆಗಲೇ ತಪ್ಪಿಸಿಕೊಳ್ಳಬೇಕು ಅಂತ ಬಿದನೂರು ನಗರ ಸಮೀಪದ ದೇವಗಂಗೆ ಎಂಬ ಕೆಳದಿ