Skip to main content

Blog number 1001. ಕೃಷಿ ವಿಜ್ಞಾನಿ ಎಂದೇ ನಾನು ಕರೆಯುವ, ಜೇನು ಮಿತ್ರ - ಎರೆಹುಳದ ಗೊಬ್ಬರದ ಉತ್ಪಾದಕ - ಪಶು ಆಹಾರ ತಯಾರಕ ನಾಗೇಂದ್ರ ಸಾಗರ್ ಕಳಿಸಿದೆ ದೇಸಿ ಕೆಂಪಕ್ಕಿ

ಇವತ್ತು ಗೆಳೆಯ ನಾಗೇಂದ್ರ ಸಾಗರ್ ತಂದು ಕೊಟ್ಟ ಸಾವಯವ ಆಕ್ಕಿ ಅನ್ನ ಮಾಡಿ ಊಟ ಮಾಡಿದಾಗ ಆದ ಪರಮಾನಂದ ವಣಿ೯ಸಲು ಸಾಧ್ಯವಿಲ್ಲ.
  ಇವರು ಈ ಭಾಗದ ಕೃಷಿ ವಿಜ್ಞಾನಿ, ಜೇನು ಸಾಗಾಣಿಕೆ ತರಬೇತುದಾರರು, ಎರೆಹುಳದ ಗೊಬ್ಬರ ದೊಡ್ಡ ಪ್ರಮಾಣದಲ್ಲಿ ತಯಾರಿಸುವ ಉದ್ದಿಮೆದಾರರು, ಡೈರಿ ಮಾಲಿಕರು, ಪಶು ಆಹಾರ ತಯಾರಕರು, ಹನಿ ನೀರಾವಾರಿ, ನಸ೯ರಿ, ಅಪರೂಪದ ಹೂವು, ಹಣ್ಣಿನ ತಳಿ ಸಂರಕ್ಷರು.
  ಇವರ ಹತ್ತಿರ ಸಾವಯವ ಅಕ್ಕಿ, ಎರೆಹುಳ ಗೊಬ್ಬರ, ಸೂಜಿ ಮೆಣಸು, ಮಲೆನಾಡು ಗಿಡ್ಡದ ಪರಿಶುದ್ಧ ತುಪ್ಪಾ, ತುಡುವೆ ಜೇನುತುಪ್ಪಾ, ಕೆಂಪು ಜೋಳಗದ ಅಕ್ಕಿ, ಮಲೆನಾಡಿನ ಅಪರೂಪದ ಮಾವಿನ ಮಿಡಿ ಉಪ್ಪಿನ ಕಾಯಿ ಹೀಗೆ ಮಾರುಕಟ್ಟೆಯಲ್ಲಿ ಸಿಗದ ವಸ್ತುಗಳಿಗೆ ನಾನು ಅವರನ್ನ ಪೀಡಿಸುತ್ತೇನೆ, ಎಲ್ಲಿಂದಲೋ ಸಂಗ್ರಹಿಸಿ ಕೊಡುತ್ತಾರೆ.
 ಆದರೆ ಇವರ ಹಿನ್ನೆಲೆ ಕೇಳಿ ಒಂದು ಕಾಲದ ಖ್ಯಾತ ಪತ್ರಕತ೯ರಾದ ವಿ.ಎನ್.ಸುಬ್ಬರಾವ್ರರ ಶಿಷ್ಯ, ಇವತ್ತಿನ ಪಬ್ಲಿಕ್ ಟಿವಿ ರಂಗನಾಥ, ಸುದ್ದಿ ಟಿವಿ ಸ೦ಪಾದಕರು, ರವಿ ಬೆಳೆಗೆರೆ, ನಟ ಪ್ರಕಾಶ್ ರೈ ರ ಗೆಳೆಯರಾದವರು, ಬೆಂಗಳೂರು ಬೇಡ ಅನ್ನಿಸಿ ಹಳ್ಳಿಗೆ ಬಂದವರು ಆನಂದಪುರದ ಸಮೀಪದಲ್ಲಿ ಅವರ ಪಿತ್ರಾಜಿ೯ತ ಜಮೀನಿನಲ್ಲಿ ರಬ್ಬರ್ ಬೇಸಾಯ ಪ್ರಾರಂಬಿಸಿ ಸಾಗರದ ಮಾರಿಕಾಂಬ ದೇವಾಲಯದ ಹಿಂಬಾಗದಲ್ಲಿ ಸಾಗರ್ ಅಗ್ರಿ ಕೋ ಎಂಬ ರೈತರ ಅವಶ್ಯಕತೆಯ ನೀರಿನ ಪಂಪ್, ಡ್ರಿಪ್ ನೀರಾವರಿ ಇತ್ಯಾದಿ ಸಲಕರಣೆ ಮಾರಾಟ ಮಳಿಗೆ ಸಾಗರದಲ್ಲಿ ಮೊಟ್ಟ ಮೊದಲಿಗೆ ಪ್ರಾರ೦ಬಿಸಿದರು.
 ಪ್ರಾರಂಭದಲ್ಲಿ ದೊಡ್ಡ ನಷ್ಟ ಅನುಭವಿಸಿದರು, ಗೆಳೆಯರು ಮತ್ತು ಕುಟುಂಬದಲ್ಲೇ ವಿಶ್ವಾಸ ದ್ರೋಹದಿಂದ ಎಲ್ಲಾ ಕಳೆದು ಕೊಂಡು ವರದಾ ನದಿ ಮೂಲ ಸಮೀಪದ ಚಿಪ್ಪಳಿ ಎಂಬಲ್ಲಿ ಹೊಸ ಜೀವನ ಪ್ರಾರಂಬಿಸಿ ಈಗ ಆಥಿ೯ಕವಾಗಿ, ಸಾಮಾಜಿಕವಾಗಿ ಪ್ರಗತಿ ಕಂಡಿದ್ದಾರೆ.
 ಇವರ ಪತ್ನಿ ವಿಜ್ಞಾನದಲ್ಲಿ ಸ್ನಾತಕೊತರ ಪದವಿಧಾರರು ಗಂಡನ ಸಂಕಟಷ್ಟಕ್ಕಾಗಿ ಡಾಕ್ಟರೇಟ್ ಪದವಿಯ ಆಸೆ ಕೈಬಿಟ್ಟು ಎಲ್ಲಾ ಕೃಷಿ ಪ್ರಯೋಗದಲ್ಲಿ ಬಾಗಿಯಾಗಿ ಯಶಸ್ವಿಯಾಗಿದ್ದಾರೆ.
  ದುರಾಸೆ ಇಲ್ಲದ, ಸಮಾಜದಲ್ಲಿ ಎಲ್ಲರೊಡನೆ ಮಾಹಿತಿ ಹಂಚಿಕೊಳ್ಳುವ ಅತ್ಯುತ್ತಮ ಓದು ಬರಹ ಜೀವನ ಅನುಭವ ಇರುವ ನಾಗೇಂದ್ರ ಸಾಗರ್ ಒಬ್ಬ ಕೃಷಿ ವಿಜ್ಞಾನಿ ಆಗಿ ಹಳ್ಳಿಯಲ್ಲಿ ಸ್ವಗ೯ ನಿಮಿ೯ಸಿಕೊಂಡಿದ್ದಾರೆ.
  ಪೇಟೆ ಜೀವನ ಸಾಕು ಹಳ್ಳಿ ಜೀವನ ಬೇಕು ಅನ್ನುವವರು ಅವರನ್ನು ಭೇಟಿ ಆಗಿ ಪ್ರತ್ಯಕ್ಷ ಅವರ ಅನುಭವ ಪಡೆಯಬಹುದು.

Comments

Popular posts from this blog

# ಜುಟ್ಟು ಕಾಳಿಂಗ ಸಪ೯ದ ಆಸ್ತಿತ್ವದ ಮಲೆನಾಡಿನ ಮಿಥ್ಯೆ#

  # ಕಾಳಿ೦ಗ ಸಪ೯ದಲ್ಲಿ ಜುಟ್ಟು ಕಾಳಿಂಗ ಸಪ೯ ಅಂತ ಇದೇ ಅನ್ನುವ ಯಾರು ನೋಡದ ಸಪ೯ದ ಅಸ್ತಿತ್ವ#    ಮಲೆನಾಡಿನ ಹಳ್ಳಿಗಳಲ್ಲಿ, ಅದು ಕಾಳಿ೦ಗ ಸಪ೯ದ ವಾಸಸ್ಥಳದ ಪರಿಸರದಲ್ಲಿ ಜುಟ್ಟು ಕಾಳಿಂಗ ಸಪ೯ ಇದೆ ಅನ್ನುವ ಮಾತು ಆಗಾಗ್ಗೆ ಕೇಳುತ್ತಿರುತ್ತೇವೆ. ಆದರೆ ಆ ರೀತಿಯ ಹಾವು ಇಲ್ಲ ಎಂದು ಹಾವಿನ ಬಗ್ಗೆ ಸಂಶೋದನೆ ಮಾಡುವವರು, ಅರಣ್ಯ ಇಲಾಖೆಯವರು, ಹಾವು ಹಿಡಿಯುವವರು ಖಡಾಖಂಡಿತವಾಗಿ ಹೇಳುತ್ತಾರಾದರು, ಈ ವದಂತಿ ಹೇಗೆ ಹರಡಿದೆ?.    ಇದು ಒಂದು ಊರು ಹಳ್ಳಿಯಲ್ಲ ನಾನು ನೋಡಿದಂತೆ ಮಹಾರಾಷ್ಟ್ರದ ರತ್ನಗಿರಿಯಿ೦ದ ಕೇರಳದ ಕಾಸರಗೋಡಿನ ತನಕ ಜುಟ್ಟು ಕಾಳಿಂಗದ ಅನೇಕ ರೋಚಕ ಕಥೆ ಕೇಳಿದ್ದೇನೆ.   ಪ್ರತ್ಯಕ್ಷ ನೋಡಿದವರು ತಾವು ಎನ್ನುವ ಅನೇಕರಲ್ಲಿ ಮಾತಾಡಿದ್ದೇನೆ ಆದರೆ ಅದು ನಂಬಲಹ೯ ಮಾಹಿತಿ ಅನಿಸಲಿಲ್ಲ, ಒಂದು ರೀತಿ ಕಾಲ್ಪನಿಕ ತ್ರಿಲ್ಲರ್ ಕಥೆ ಅಷ್ಟೇ ಅನ್ನಬಹುದು.    ಜಡೆ ಕಾಳಿಂಗ ಸಪ೯ಕ್ಕೆ ರೋಷ ಜಾಸ್ತಿ, ಹೆಡೆ ಮೇಲೆ ಕೂದಲಿನ ಜುಟ್ಟು ಇರುತ್ತೆ, ಮನುಷ್ಯರನ್ನ ಕಂಡರೆ ಓಡಿಸಿಕೊಂಡು ಬರುತ್ತೆ, ಅದರಿಂದ ತಪ್ಪಿಸಿಕೊಳ್ಳಲು ಒಂದೇ ದಾರಿ ಅದೇನೆಂದರೆ ತಗ್ಗಿನ ಪ್ರದೇಶದಲ್ಲಿ ಓಡುವುದು.     ಯಾಕೆ೦ದರೆ ಓಡಿಸಿಕೊಂಡು ಬರುವ ಜುಟ್ಟು ಕಾಳಿಂಗದ ಜುಟ್ಟು, ಇಳಿಜಾರಿನಲ್ಲಿ ಅದರ ತಲೆಯಿ೦ದ ಇಳಿಜಾರಿಗೆ ಸರಿಯುವುದರಿಂದ  ಕಣ್ಣಿನ ಮೇಲೆ ಕೂದಲ ಜುಟ್ಟು ಮುಚ್ಚುವುದರಿಂದ ಕಣ್ಣು ಕಾಣುವುದಿಲ್ಲ, ಆಗಲೇ ತಪ್...

HISTORICAL SAGAR MARIKAMBA JATRA.ಐತಿಹಾಸಿಕ ಸಾಗರದ ಮಾರಿಕಾಂಬಾ ಜಾತ್ರೆ

     ಸಾಗರದ ಮಾರಿಕಾಂಬಾ ಜಾತ್ರೆ ಐತಿಹಾಸಿಕ ಚರಿತ್ರೆಯಲ್ಲಿ ದಾಖಲೆ.        ಕನಾ೯ಟಕ ರಾಜ್ಯದಲ್ಲಿ ಎರೆಡು ಮಾರಿಕಾಂಬಾ ಜಾತ್ರೆಗಳು ಪ್ರಸಿದ್ಧಿ ಪಡೆದಿದೆ ಅದು ಉತ್ತರ ಕನ್ನಡ ಜಿಲ್ಲೆಯ ಸಿಸಿ೯ಯದ್ದು ಮತ್ತು ಶಿವಮೊಗ್ಗ ಜಿಲ್ಲೆಯ ಸಾಗರದ್ದು.    ಪ್ರತಿ ಮೂರು ವಷ೯ಕೆ ಈ ಜಾತ್ರೆ ಆಚರಿಸಲಾಗುತ್ತೆ ಶೂದ್ರ ವಗ೯ದವರು ಭಯ ಮತ್ತು ಭಕ್ತಿಯಿಂದ ಕುರಿ ಕೋಳಿ ಬಲಿ ನೀಡುವ ಪರಂಪರೆ ಇದೆ.ಮಂಗಳವಾರ ಮೇಲು ಜಾತಿಯ ಜನರ ಪೂಜೆ ದೇವಿಯ ತವರು ಮನೆಯಲ್ಲಿ ನಡೆಯುತ್ತದೆ ನಂತರ ರಾತ್ರಿ ಗಂಡನ ಸೇರುವ ಮಾರಿಗೆ ಶೂದ್ರರ ಪೂಜೆ, ಬಲಿ ಮೀಸಲು.    ಮೊದಲೆಲ್ಲ ಮಾರಿಯಮ್ಮನಿಗೆ ಕೊಣನ ಬಲಿ ನೀಡುತ್ತಿದ್ದರು ಈಗ ಇದು ಕಾನೂನು ಪ್ರಕಾರ ನಿಷಿದ್ಧ ಆದರೆ ಈ ಆಚಾರಣೆ ಗುಪ್ತವಾಗಿ ಬೇರೆ ಕಡೆ ನಡೆಸಲಾಗುತ್ತೆ ಅನ್ನುತ್ತಾರೆ.    ಸಾಗರದ ಮಾರಿಕಾ0ಬಾ ಜಾತ್ರೆ ಜಾತ್ರೆಯಿ೦ದ ಜಾತ್ರೆಗೆ ಅದೂರಿಯಾಗಿ ನಡೆಯುತ್ತದೆ, ಕೋಟ್ಯಾoತರ ಹಣದ ವಹಿವಾಟು ಕೂಡ, ಮೊದಲೆಲ್ಲ ಹಣದ ಅಪರಾ ತಪರ ಆಗುತ್ತಿದೆ ಎಂಬ ಗುಲ್ಲು ಇತ್ತು ಆದರೆ ಈಗೆಲ್ಲ ಪಾರದಶ೯ಕವಾಗಿದೆ ಆದರೂ ಈ ಬಾರಿಯ 2017ರ ಜಾತ್ರೆಯಲ್ಲಿ ಅವ್ಯವಹಾರದ ಆರೋಪ ಮಾಡಲಾಗಿದೆ ಈ ವಿಚಾರ ಇಲ್ಲಿ ಅಪ್ರಸ್ತುತ ಆದರೂ ಈ ಬಗ್ಗೆ ಬರೆಯಲು ಕಾರಣ ಕೆಳದಿ ಅರಸರ ಕಾಲದಲ್ಲಿ ಅಂದರೆ 350 ವಷ೯ದ ಹಿಂದೆಯೂ ರಾಜರಿಗೆ ಸಾಗರದ ಮಾರಿಕಾಂಬಾ ಜಾತ್ರೆಯಲ್ಲಿ ಸಾವ೯ಜನಿಕರಿಂದ ಸಂಗ್ರಹಿಸಿದ ಜಾತ...

ರಿಪ್ಪನ್ ಪೇಟೆ ( ಶಿವಮೊಗ್ಗ ಜಿಲ್ಲೆ) ಹೆಸರು ಬಂದಿದ್ದಾದರು ಹೇಗೆ?

#  ರಿಪ್ಪನ್ ಪೇಟೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಪ್ರಮುಖ ಹೋಬಳಿ ಕೇಂದ್ರ ಈ ಆಂಗ್ಲ ಅಧಿಕಾರಿಯ ಹೆಸರು ಇಡಲು ಕಾರಣವಾದ ಘಟನೆ ತುಂಬಾ ಕುತೂಹಲಕಾರಿ# ಸ್ವಲ್ಪ ಕಾಲ ನೀವು ಈ ಲೇಖನ ಓದಿದರೆ ಕಾರಣ ಗೊತ್ತಾಗುತ್ತೆ.    ಆಗ ಬ್ರಿಟಿಷ್ ಸಕಾ೯ರರಕ್ಕೆ ಆಡಳಿತ ಸುಗುಮಕ್ಕೆ ರೈಲು ಮಾಗ೯ ಅತ್ಯಗತ್ಯ ಎಂಬ ಸಕಾರಣ ಮನವರಿಕೆ ಆದ ಕಾಲ ಏಕೆಂದರೆ ಬ್ರಿಟಿಷರು ಅಮೆರಿಕಾ ವಲಸೆಯಲ್ಲಿ ಇದನ್ನ ಮನಗOಡಿದ್ದರು, ಬೆಂಗಳೂಳಿ ರಿಂದ ಶಿವಮೊಗ್ಗ ತಲುಪುವ ರೈಲು ಮಾಗ೯ ತಾಳಗುಪ್ಪಾ ತಲುಪಿದರೆ ಜೋಗ ಜಲಪಾತ ವೀಕ್ಷಣೆಗೆ ಅನುಕೂಲ ಎಂಬುದು ಹಾಗೆ ಮತ್ತೊಂದು ಮ್ಯಸೂರು ಸಕಾ೯ರ ಶರಾವತಿ ನದಿಗೆ ಆಣೆಕಟ್ಟು ಕಟ್ಟಿ.ಜಲ ವಿದ್ಯುತ್ ತಯಾರಿಸಲು ಸಾಮಗ್ರಿ ಸಾಗಾಣಿಕೆಗೆ ಅನುಕೂಲ ಎಂಬ ಕಾರಣದಿಂದ ಶಿವಮೊಗ್ಗದಿಂದ ತಾಳಗುಪ್ಪ ರೈಲು ಮಾಗ೯ ಯೋಜನೆ ಮಾಡಲಾಯಿತು.    ಆಗ ಪ್ಲೇಗ್ ಮಾರಿಯ ಕಾಲ, ಎಲ್ಲೆಲ್ಲೂ ಜನ ಸಾಯುತ್ತಿದ್ದರು ಆಗಲೇ ಈ ರೈಲು ಮಾಗ೯ ಶಿವಮೊಗ್ಗ ಆರಸಾಳಿOದ ದೊಡ್ಡಿನ ಕೊಪ್ಪ (ಈಗಿನ ರಿಪ್ಪನ್ ಪೇಟೆ) ಆನಂದಪುರಂ ಮಾಗ೯ ನಿಗದಿ ಆಗಿತ್ತು ಆದರೆ ಈ ಭಾಗದಲ್ಲಿ ಒಂದು  ವದಂತಿ ಈ ಬಾಗದಲ್ಲಿ ಹರಡಿತ್ತು ಅದೇನೆಂದರೆ ರೈಲು ಬಂದರೆ ಪ್ಲೇ ಗು ಬರುತ್ತೆ  ಅಂತ.    ಹಾಗಾಗಿ ಈ ಭಾಗದಲ್ಲಿನ ಜಾಗೃತ ಜನ ನಾಯಕರುಗಳು ಹೇಗಾದರು ಮಾಡಿ ರೈಲು ಬರದಂತೆ ಮಾಡಲು ಎಲ್ಲಾ ರೀತಿಯ ಪ್ರಯತ್ನ ಮಾಡಲು ಪ್ರಾರಂಭಿಸಿದರು.     ಇದೇ ಸಂದಭ೯ದಲ್ಲ...