Skip to main content

Blog number 1009. ಡ್ರೈಯರ್ ನಲ್ಲಿ ಒಣಗಿಸುವ ಎಲೆ ಕೋಸು ಎಲೆಗಳಿಗೆ ಕಾಶ್ಮೀರದಲ್ಲಿ ಬಾರೀ ಡಿಮ್ಯಾಂಡ್, ಮಲೆನಾಡಿನ ಮುಂಗಾರಿನ ವಿಶೇಷ ಸಸ್ಯಗಳನ್ನು ಒಣಗಿಸಿ ಬಳಸಿ ಮಾರುಕಟ್ಟೆ ಮಾಡಬಹುದಾ?

#ಒಣಗಿದ_ಎಲೆಕೋಸು_ಬೇಡಿಕೆಯ_ತರಕಾರಿ.

#ಮಲೆನಾಡಿನ_ಅನೇಕ_ತಂಬುಳಿ_ಸೊಪ್ಪು_ಡ್ರೈಯರ್_ಬಳಸಿ_ಮಾರುಕಟ್ಟೆ_ಮಾಡಬಹುದು.

#ನಾಗೇಂದ್ರಸಾಗರ್_ತಲವಾಟ_ರಾಘವೇಂದ್ರಶರ್ಮಾ_ಗಮನಿಸಲಿ.

#ಒಣಗಿಸಿದ_ಪಶ್ಚಿಮಘಟ್ಟದ_ವೈವಿಧ್ಯಮಯ_ಸೊಪ್ಪುಗಳಿಗೆ_ವಿಸ್ತಾರ_ಮಾರುಕಟ್ಟೆ_ಸಾಧ್ಯತೆ.

   ಡ್ರೈ ಕೊಲಾಡ್೯ ಗ್ರೀನ್ (Dry Collard green) ಎಂಬ ಒಣಗಿಸಿದ ಎಲೆ ಕೋಸು ಎಲೆಗಳಿಗೆ ಕಾಶ್ಮೀರದಲ್ಲಿ ಬಾರಿ ಬೇಡಿಕೆಯ ಪದಾರ್ಥವಾಗಿದೆ ಇದರಿಂದ ಅಲ್ಲಿ ನೂರಾರು ರೀತಿಯಲ್ಲಿ ವಿಶೇಷ ಅಡುಗೆಗಳು ಮಾಡುತ್ತಾರೆ.
   ಇದು ಆರೋಗ್ಯಕ್ಕೆ ಒಳ್ಳೆಯದು ಮತ್ತು ಎಲ್ಲಾ ಕಾಲದಲ್ಲೂ ಸಂಗ್ರಹಿಸಿ ಬಳಸಬಹುದಾಗಿದೆ.
   ಇದು ಕಾಶ್ಮೀರ ಮಾತ್ರವಲ್ಲ ವಿಶ್ವದಾದ್ಯಂತ ಅಡುಗೆಗೆ ಬಳಸುವ ಖಾದ್ಯವಾಗಿ ಜನಪ್ರಿಯವಾಗಿದೆ.
   ಕಾಶ್ಮೀರದಲ್ಲಿ ಮಾಂಸದ ಜೊತೆಯ ಹಾಕ್ ಮಟನ್ ಮತ್ತು ಸಾಗ್ ಮಟನ್ ಎಂಬ ಹಸಿರು ಬಣ್ಣದ ಅಡುಗೆ ತುಂಬಾ ಪ್ರಸಿದ್ದಿ ಪಡೆದಿದೆ ಅದೇ ರೀತಿ ಕಾಶ್ಮೀರಿ ಪಂಡಿತರ ಸಾಗ್ ಎಂಬ ಸಸ್ಯಹಾರಿ ಅಡುಗೆ ಕೂಡ.
   ಕಾಶ್ಮೀರದಲ್ಲಿ ಈ ಎಲೆ ಕೋಸುಗಳನ್ನು ದೇಸಿ ಪದ್ಧತಿಯಲ್ಲಿ ಮನೆ ಮನೆಯಲ್ಲಿ ಒಣಗಿಸುತ್ತಿದ್ದರು ಈಗ ವಿವಿದ ಮಾದರಿಯ ವಿದ್ಯುತ್ ಮತ್ತು ಸೋಲಾರ್ ಡ್ರೈಯರ್ ಬಳಸುತ್ತಾರೆ.
    ಸಾಗರ ತಾಲ್ಲೂಕಿನ ಕೃಷಿ ವಿಜ್ಞಾನಿ ನಾಗೇಂದ್ರ ಸಾಗರ್ ಈಗಾಗಲೇ ಮಲೆನಾಡಿನ ರೈತರಿಗೆ ವಿವಿಧ ಡ್ರೈಯರ್ ಪರಿಚಯಿಸಿದ್ದಾರೆ ಅದರಲ್ಲಿ ಅನಾನಸ್ - ಬಾಳೆ ಹಣ್ಣು - ಸಪೋಟ-ಅಂಜೂರ ಹಣ್ಣುಗಳ ಸಂಸ್ಕರಿಸಿ ಮಾರಾಟ ಮಾಡುವ ತರಬೇತಿ ನೀಡುತ್ತಿದ್ದಾರೆ.
 ಅದೇ ರೀತಿ ಪತ್ರಕರ್ತ ತಲವಾಟ ರಾಘವೇಂದ್ರ ಶಮಾ೯ ಕೂಡ ಸ್ಪಂತ ಬಳಕೆಗೆ ಟೇಬಲ್ ಟಾಪ್ ವಿದ್ಯುತ್ ಡ್ರೈಯರ್ ಖರೀದಿಸಿ ಬಳಸುತ್ತಿದ್ದಾರೆ ಅವರು ವಿವಿದ ಹಣ್ಣು ತರಕಾರಿ ಜೊತೆ ಕಳಲೆಯನ್ನೂ ಒಣಗಿಸಿ ಬಳಸಿ ನೋಡಿದ್ದಾರೆ.
   ಅವರೆಲ್ಲ ಮುಂದಿನ ದಿನಗಳಲ್ಲಿ ಮಲೆನಾಡಿನ ಜನರಿಗೆ ಪೆವರಿಟ್ ಆಗಿರುವ ಮುಂಗಾರಿನಲ್ಲಿ ಮಾತ್ರ ಸಿಗುವ ಅನೇಕ ಸೊಪ್ಪುಗಳನ್ನು ಒಣಗಿಸಿ ಬಳಸಿ ನೋಡಿ ಅದನ್ನು ಮಾರುಕಟ್ಟೆಯಲ್ಲಿ ಮಾರಾಟ ಮಾಡುವ ಕಾಲ ಬಂದೀತು.

Comments

Popular posts from this blog

# ಜುಟ್ಟು ಕಾಳಿಂಗ ಸಪ೯ದ ಆಸ್ತಿತ್ವದ ಮಲೆನಾಡಿನ ಮಿಥ್ಯೆ#

  # ಕಾಳಿ೦ಗ ಸಪ೯ದಲ್ಲಿ ಜುಟ್ಟು ಕಾಳಿಂಗ ಸಪ೯ ಅಂತ ಇದೇ ಅನ್ನುವ ಯಾರು ನೋಡದ ಸಪ೯ದ ಅಸ್ತಿತ್ವ#    ಮಲೆನಾಡಿನ ಹಳ್ಳಿಗಳಲ್ಲಿ, ಅದು ಕಾಳಿ೦ಗ ಸಪ೯ದ ವಾಸಸ್ಥಳದ ಪರಿಸರದಲ್ಲಿ ಜುಟ್ಟು ಕಾಳಿಂಗ ಸಪ೯ ಇದೆ ಅನ್ನುವ ಮಾತು ಆಗಾಗ್ಗೆ ಕೇಳುತ್ತಿರುತ್ತೇವೆ. ಆದರೆ ಆ ರೀತಿಯ ಹಾವು ಇಲ್ಲ ಎಂದು ಹಾವಿನ ಬಗ್ಗೆ ಸಂಶೋದನೆ ಮಾಡುವವರು, ಅರಣ್ಯ ಇಲಾಖೆಯವರು, ಹಾವು ಹಿಡಿಯುವವರು ಖಡಾಖಂಡಿತವಾಗಿ ಹೇಳುತ್ತಾರಾದರು, ಈ ವದಂತಿ ಹೇಗೆ ಹರಡಿದೆ?.    ಇದು ಒಂದು ಊರು ಹಳ್ಳಿಯಲ್ಲ ನಾನು ನೋಡಿದಂತೆ ಮಹಾರಾಷ್ಟ್ರದ ರತ್ನಗಿರಿಯಿ೦ದ ಕೇರಳದ ಕಾಸರಗೋಡಿನ ತನಕ ಜುಟ್ಟು ಕಾಳಿಂಗದ ಅನೇಕ ರೋಚಕ ಕಥೆ ಕೇಳಿದ್ದೇನೆ.   ಪ್ರತ್ಯಕ್ಷ ನೋಡಿದವರು ತಾವು ಎನ್ನುವ ಅನೇಕರಲ್ಲಿ ಮಾತಾಡಿದ್ದೇನೆ ಆದರೆ ಅದು ನಂಬಲಹ೯ ಮಾಹಿತಿ ಅನಿಸಲಿಲ್ಲ, ಒಂದು ರೀತಿ ಕಾಲ್ಪನಿಕ ತ್ರಿಲ್ಲರ್ ಕಥೆ ಅಷ್ಟೇ ಅನ್ನಬಹುದು.    ಜಡೆ ಕಾಳಿಂಗ ಸಪ೯ಕ್ಕೆ ರೋಷ ಜಾಸ್ತಿ, ಹೆಡೆ ಮೇಲೆ ಕೂದಲಿನ ಜುಟ್ಟು ಇರುತ್ತೆ, ಮನುಷ್ಯರನ್ನ ಕಂಡರೆ ಓಡಿಸಿಕೊಂಡು ಬರುತ್ತೆ, ಅದರಿಂದ ತಪ್ಪಿಸಿಕೊಳ್ಳಲು ಒಂದೇ ದಾರಿ ಅದೇನೆಂದರೆ ತಗ್ಗಿನ ಪ್ರದೇಶದಲ್ಲಿ ಓಡುವುದು.     ಯಾಕೆ೦ದರೆ ಓಡಿಸಿಕೊಂಡು ಬರುವ ಜುಟ್ಟು ಕಾಳಿಂಗದ ಜುಟ್ಟು, ಇಳಿಜಾರಿನಲ್ಲಿ ಅದರ ತಲೆಯಿ೦ದ ಇಳಿಜಾರಿಗೆ ಸರಿಯುವುದರಿಂದ  ಕಣ್ಣಿನ ಮೇಲೆ ಕೂದಲ ಜುಟ್ಟು ಮುಚ್ಚುವುದರಿಂದ ಕಣ್ಣು ಕಾಣುವುದಿಲ್ಲ, ಆಗಲೇ ತಪ್...

HISTORICAL SAGAR MARIKAMBA JATRA.ಐತಿಹಾಸಿಕ ಸಾಗರದ ಮಾರಿಕಾಂಬಾ ಜಾತ್ರೆ

     ಸಾಗರದ ಮಾರಿಕಾಂಬಾ ಜಾತ್ರೆ ಐತಿಹಾಸಿಕ ಚರಿತ್ರೆಯಲ್ಲಿ ದಾಖಲೆ.        ಕನಾ೯ಟಕ ರಾಜ್ಯದಲ್ಲಿ ಎರೆಡು ಮಾರಿಕಾಂಬಾ ಜಾತ್ರೆಗಳು ಪ್ರಸಿದ್ಧಿ ಪಡೆದಿದೆ ಅದು ಉತ್ತರ ಕನ್ನಡ ಜಿಲ್ಲೆಯ ಸಿಸಿ೯ಯದ್ದು ಮತ್ತು ಶಿವಮೊಗ್ಗ ಜಿಲ್ಲೆಯ ಸಾಗರದ್ದು.    ಪ್ರತಿ ಮೂರು ವಷ೯ಕೆ ಈ ಜಾತ್ರೆ ಆಚರಿಸಲಾಗುತ್ತೆ ಶೂದ್ರ ವಗ೯ದವರು ಭಯ ಮತ್ತು ಭಕ್ತಿಯಿಂದ ಕುರಿ ಕೋಳಿ ಬಲಿ ನೀಡುವ ಪರಂಪರೆ ಇದೆ.ಮಂಗಳವಾರ ಮೇಲು ಜಾತಿಯ ಜನರ ಪೂಜೆ ದೇವಿಯ ತವರು ಮನೆಯಲ್ಲಿ ನಡೆಯುತ್ತದೆ ನಂತರ ರಾತ್ರಿ ಗಂಡನ ಸೇರುವ ಮಾರಿಗೆ ಶೂದ್ರರ ಪೂಜೆ, ಬಲಿ ಮೀಸಲು.    ಮೊದಲೆಲ್ಲ ಮಾರಿಯಮ್ಮನಿಗೆ ಕೊಣನ ಬಲಿ ನೀಡುತ್ತಿದ್ದರು ಈಗ ಇದು ಕಾನೂನು ಪ್ರಕಾರ ನಿಷಿದ್ಧ ಆದರೆ ಈ ಆಚಾರಣೆ ಗುಪ್ತವಾಗಿ ಬೇರೆ ಕಡೆ ನಡೆಸಲಾಗುತ್ತೆ ಅನ್ನುತ್ತಾರೆ.    ಸಾಗರದ ಮಾರಿಕಾ0ಬಾ ಜಾತ್ರೆ ಜಾತ್ರೆಯಿ೦ದ ಜಾತ್ರೆಗೆ ಅದೂರಿಯಾಗಿ ನಡೆಯುತ್ತದೆ, ಕೋಟ್ಯಾoತರ ಹಣದ ವಹಿವಾಟು ಕೂಡ, ಮೊದಲೆಲ್ಲ ಹಣದ ಅಪರಾ ತಪರ ಆಗುತ್ತಿದೆ ಎಂಬ ಗುಲ್ಲು ಇತ್ತು ಆದರೆ ಈಗೆಲ್ಲ ಪಾರದಶ೯ಕವಾಗಿದೆ ಆದರೂ ಈ ಬಾರಿಯ 2017ರ ಜಾತ್ರೆಯಲ್ಲಿ ಅವ್ಯವಹಾರದ ಆರೋಪ ಮಾಡಲಾಗಿದೆ ಈ ವಿಚಾರ ಇಲ್ಲಿ ಅಪ್ರಸ್ತುತ ಆದರೂ ಈ ಬಗ್ಗೆ ಬರೆಯಲು ಕಾರಣ ಕೆಳದಿ ಅರಸರ ಕಾಲದಲ್ಲಿ ಅಂದರೆ 350 ವಷ೯ದ ಹಿಂದೆಯೂ ರಾಜರಿಗೆ ಸಾಗರದ ಮಾರಿಕಾಂಬಾ ಜಾತ್ರೆಯಲ್ಲಿ ಸಾವ೯ಜನಿಕರಿಂದ ಸಂಗ್ರಹಿಸಿದ ಜಾತ...

ರಿಪ್ಪನ್ ಪೇಟೆ ( ಶಿವಮೊಗ್ಗ ಜಿಲ್ಲೆ) ಹೆಸರು ಬಂದಿದ್ದಾದರು ಹೇಗೆ?

#  ರಿಪ್ಪನ್ ಪೇಟೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಪ್ರಮುಖ ಹೋಬಳಿ ಕೇಂದ್ರ ಈ ಆಂಗ್ಲ ಅಧಿಕಾರಿಯ ಹೆಸರು ಇಡಲು ಕಾರಣವಾದ ಘಟನೆ ತುಂಬಾ ಕುತೂಹಲಕಾರಿ# ಸ್ವಲ್ಪ ಕಾಲ ನೀವು ಈ ಲೇಖನ ಓದಿದರೆ ಕಾರಣ ಗೊತ್ತಾಗುತ್ತೆ.    ಆಗ ಬ್ರಿಟಿಷ್ ಸಕಾ೯ರರಕ್ಕೆ ಆಡಳಿತ ಸುಗುಮಕ್ಕೆ ರೈಲು ಮಾಗ೯ ಅತ್ಯಗತ್ಯ ಎಂಬ ಸಕಾರಣ ಮನವರಿಕೆ ಆದ ಕಾಲ ಏಕೆಂದರೆ ಬ್ರಿಟಿಷರು ಅಮೆರಿಕಾ ವಲಸೆಯಲ್ಲಿ ಇದನ್ನ ಮನಗOಡಿದ್ದರು, ಬೆಂಗಳೂಳಿ ರಿಂದ ಶಿವಮೊಗ್ಗ ತಲುಪುವ ರೈಲು ಮಾಗ೯ ತಾಳಗುಪ್ಪಾ ತಲುಪಿದರೆ ಜೋಗ ಜಲಪಾತ ವೀಕ್ಷಣೆಗೆ ಅನುಕೂಲ ಎಂಬುದು ಹಾಗೆ ಮತ್ತೊಂದು ಮ್ಯಸೂರು ಸಕಾ೯ರ ಶರಾವತಿ ನದಿಗೆ ಆಣೆಕಟ್ಟು ಕಟ್ಟಿ.ಜಲ ವಿದ್ಯುತ್ ತಯಾರಿಸಲು ಸಾಮಗ್ರಿ ಸಾಗಾಣಿಕೆಗೆ ಅನುಕೂಲ ಎಂಬ ಕಾರಣದಿಂದ ಶಿವಮೊಗ್ಗದಿಂದ ತಾಳಗುಪ್ಪ ರೈಲು ಮಾಗ೯ ಯೋಜನೆ ಮಾಡಲಾಯಿತು.    ಆಗ ಪ್ಲೇಗ್ ಮಾರಿಯ ಕಾಲ, ಎಲ್ಲೆಲ್ಲೂ ಜನ ಸಾಯುತ್ತಿದ್ದರು ಆಗಲೇ ಈ ರೈಲು ಮಾಗ೯ ಶಿವಮೊಗ್ಗ ಆರಸಾಳಿOದ ದೊಡ್ಡಿನ ಕೊಪ್ಪ (ಈಗಿನ ರಿಪ್ಪನ್ ಪೇಟೆ) ಆನಂದಪುರಂ ಮಾಗ೯ ನಿಗದಿ ಆಗಿತ್ತು ಆದರೆ ಈ ಭಾಗದಲ್ಲಿ ಒಂದು  ವದಂತಿ ಈ ಬಾಗದಲ್ಲಿ ಹರಡಿತ್ತು ಅದೇನೆಂದರೆ ರೈಲು ಬಂದರೆ ಪ್ಲೇ ಗು ಬರುತ್ತೆ  ಅಂತ.    ಹಾಗಾಗಿ ಈ ಭಾಗದಲ್ಲಿನ ಜಾಗೃತ ಜನ ನಾಯಕರುಗಳು ಹೇಗಾದರು ಮಾಡಿ ರೈಲು ಬರದಂತೆ ಮಾಡಲು ಎಲ್ಲಾ ರೀತಿಯ ಪ್ರಯತ್ನ ಮಾಡಲು ಪ್ರಾರಂಭಿಸಿದರು.     ಇದೇ ಸಂದಭ೯ದಲ್ಲ...