Skip to main content

Blog number 1028.ಕರಾವಳಿಯ ದೈವಾರಾದನೆಯ೦ತದ್ದೇ ಮಲೆನಾಡಿನ ಗ್ರಾಮ ರಕ್ಷಕ ಬೂತಗಳಿಗೆ ದೀಪಾವಳಿಯಲ್ಲಿ ಸಾಮೂಹಿಕ ಪೂಜೆ ಬಲಿ ನೀಡುವ ನೋನಿ ಎಂಬ ಹಬ್ಬ, ಇದಕ್ಕೆ ಜಾತಿ ಬೇದವಿಲ್ಲ ಆದರೆ ಹುಟ್ಟು - ಸಾವು - ಮುಟ್ಟಿನ ಸೂತಕವಿದೆ, ಸೂತಕದಿಂದ ಪಾರಾಗುವ ಸುಲಭ ಮಾರ್ಗವೂ ಇದೆ

#ಮಲೆನಾಡಿನಲ್ಲಿ_ಊರ_ಕಾಯುವ_ಬೂತಗಳಿಗೆ_ನೋನಿಎಂಬ_ಕುರಿ_ಕೋಳಿ_ಬಲಿ_ನೀಡುವ_ಹಬ್ಬದ_ಆಚರಣೆ.

#ನೋನಿಗೆ_ಜಾತಿ_ಬೇದ_ಇಲ್ಲ_ಆದರೆ_ಹುಟ್ಟು_ಸಾವು_ಮುಟ್ಟಿನ_ಸೂತಕ_ಇದೆ.

#ಸೂತಕ_ಆದರೆ_ನೋನಿ_ಆಚರಿಸುವಂತಿಲ್ಲ

#ನೋನಿ_ಸಂಭ್ರಮಕ್ಕೆ_ಸೂತಕವನ್ನೆ_ನಿವಾರಿಸುವ_ಉಪಾಯ

#ಮುಟ್ಟಿನ_ಸಾಧ್ಯತೆಯ_ಹೆಣ್ಣು_ಮಕ್ಕಳು_ತಾತ್ಕಾಲಿಕವಾಗಿ_ಊರು_ಬಿಡುವುದು

    ಅಜ್ಜಿಯ ಮತ್ತು ತಾಯಿ ಕಡೆಯಿಂದ ಕರಾವಳಿ ದೈವಗಳು ಹಾಗೂ ಘಟ್ಟದ ಮೇಲೆ ನೆಲೆಸಿದ್ದರಿಂದ ಗ್ರಾಮಗಳ ಕಾಪಾಡುವ ಬೂತಗಳೂ ನಮಗೆ ಪೂಜಾರ್ಹವೇ ಆಗಿದೆ.
      ರಾಮಕ್ಷತ್ರಿಯ ಸಮಾಜದ ಬಗ್ಗೆ ಒಂದು ಪುಸ್ತಕ ಬರೆಯುವ ಉಮೇದಿನಲ್ಲಿ (ಪ್ರಕಟ ಆಗಿಲ್ಲ) ಮಹಾರಾಷ್ಟ್ರದ ವಿಜಯ ದುರ್ಗದಿಂದ ಕಾಸರಗೋಡಿನವರೆಗೆ ಓಡಾಡಿದಾಗ ಕು೦ಬಳೆಯ ಕೋಟೆ ಆ೦ಜನೇಯ ದೇವಾಲಯದ ವಾರ್ಷಿಕೊತ್ಸವದಲ್ಲಿ ಬೂತಾರಾಧನೆ - ಕೆಂಡ ಹಾಯುವುದು - ಕೋಲಾ ನೋಡಿದ್ದೆ ಈ ಬಗ್ಗೆ ತಿಳಿದದ್ದು ಇದು ರಾಮಕ್ಷತ್ರಿಯರ ಆಚರಣೆ ಅಲ್ಲ ಆದರೆ ಅದನ್ನು ಕೆಳದಿ ಅರಸರ ಕೋಟೆ ನಿರ್ವಹಣೆ ಮಾಡುವ ಈ ಸಮಾಜದವರು ಸ್ಥಳಿಯರ ನಂಬಿಕೆಗೆ ಗೌರವ ಕೊಡಲು ಅದಕ್ಕೆ ತಕ್ಕ ಹಾಗೆ ವರ್ತಿಸಿ ಅವರ ಜೊತೆ ಜೀರೋ ಟಾಲರೆನ್ಸ್ ಕಾಪಾಡಿಕೊಂಡಿದ್ದರೆಂದು ತಿಳಿದು ಬರುತ್ತದೆ.
  ಕಾಂತಾರ ಸಿನಿಮಾದಿಂದ ಮತ್ತು ಕೊರಗಜ್ಜರ ಕಾರಣಿಕಗಳಿಂದ ದೈವಗಳ ಬೂತಾರಾಧನೆ ಬಗ್ಗೆ ಹೆಚ್ಚು ಹೆಚ್ಚು ಮಾಹಿತಿ ಆಸಕ್ತಿ ಹರಿದಾಡುತ್ತಿದೆ, ಮಲೆನಾಡಿನಲ್ಲಿ ಗ್ರಾಮ ರಕ್ಷಣೆಯ ದೈವಗಳನ್ನು ಗಾಮದ ದೇವರು, ಬೂತ ಅಂತನೇ ಕರೆಯುತ್ತಾರೆ ಮತ್ತು ವರ್ಷಕೊಮ್ಮೆ ದೀಪಾವಳಿಯಲ್ಲಿ ಸಾಮೂಹಿಕ ಪೂಜೆ - ಬಲಿಯ ನೋನಿ ಎಂಬ ಗ್ರಾಮದ ಹಬ್ಬವೂ ನಡೆಯುತ್ತದೆ.
    ಶಿವಮೊಗ್ಗ ಜಿಲ್ಲೆಯ ಆನಂದಪುರಂ ಹೋಬಳಿಯಲ್ಲಿ ದೀಪಾವಳಿ ಹಬ್ಬದಲ್ಲಿ ಗ್ರಾಮಗಳಲ್ಲಿ ಗಾಮದ ಹಬ್ಬ / ನೋನಿ ಎಂಬ ಗ್ರಾಮದ ಎಲ್ಲಾ ದೇವಾನು ದೇವತೆಗಳಿಗೆ, ಊರ ಕಾಯುವ ಬೂತಗಳಿಗೆ ಸಾಮೂಹಿಕವಾಗಿ (ಇದು ಕೆಲ ಕಡೆ ನೂರಕ್ಕೂ ಹೆಚ್ಚು ) ಪೂಜೆ ನಂತರ ಬಲಿ ನೀಡುವ ಕ್ರಮ ಇದೆ.
 ಮೇಲ್ಜಾತಿಯವರು ಈ ಪೂಜೆಗೆ ಸಹಕರಿಸುತ್ತಾರೆ, ಬಲಿಗೆ ತರುವ ಕೋಳಿ ಕುರಿಗೆ ತಮ್ಮ ಪಾಲಿನ ಹಣ ಗ್ರಾಮದ ಜನ ನಿದ೯ರಿಸಿದಂತೆ ನೀಡುತ್ತಾರೆ ಆದರೆ ಬಲಿ ಮಾಂಸದ ಪಾಲು ಅವರ ಮನೆಯ ನಿಷ್ಟ ಕೆಲಸಗಾರನಿಗೆ (ಶೂದ್ರನಿಗೆ) ನೀಡುವಂತೆ ಹೇಳುತ್ತಾರೆ.
 ದೀಪಾವಳಿ ನಂತರ ಕೆಲ ದಿನ ಈ ನೋನಿ ನಡೆಯುತ್ತದೆ ಇದಕ್ಕೆ ಆಚರಣೆಯ ಕ್ರಮ ಹೇಳುವವ ಊರಿನ ಮುಖಂಡ ಅಥವ ಹಿರಿಯ ಇಲ್ಲಿಯೂ ಬಹುಸಂಖ್ಯಾತ ಜಾತಿಯವರ ಮಾತು ಹೆಚ್ಚು ಕೃತಿಗೆ.
  ಇಲ್ಲಿ ಜಾತಿ ಮಡಿ ಇಲ್ಲ ಆದರೆ ಹುಟ್ಟು - ಸಾವು - ಮುಟ್ಟುವಿನ ಸೂತಕ ಇದೆ.  ಸದರಿ ನೋನಿ ದಿನ ಊರಲ್ಲಿ ಯಾರಾದರೂ ಮುಟ್ಟಾದರೆ  ಈ ಪೂಜ ಕಾಯ೯ಕ್ರಮ ಮುಂದೂಡಲಾಗುತ್ತೆ.
   ಇಲ್ಲಿ ಬಾಡೂಟದ ಗಮ್ಮತ್ತು ಇರುವುದರಿಂದ ಈ ಕಾಯ೯ಕ್ರಮ ಮುಂದೂಡಲು ಹೆಚ್ಚಿನವರಿಗೆ ಇಷ್ಟ ಇರುವುದಿಲ್ಲ ಅದಕ್ಕಾಗಿ ಸೂತಕಗಳನ್ನೇ ನಿವಾರಿಸಿಕೊಳ್ಳುವ ಹೊಸ ಯೋಜನೆ ಆಚರಣೆಯಲ್ಲಿದೆ.
    ಅದೇನೆ೦ದರೆ ಮುಟ್ಟಾಗುವ ಮುನ್ನವೆ ಹೆಣ್ಣು ಮಕ್ಕಳು ಹಳ್ಳಿ ತೊರೆದು ನೋನಿ ಇಲ್ಲದ ಹಳ್ಳಿಯ ನೆಂಟರ ಮನೆಗೆ ಹೋಗಬೇಕು.
   ಮುಟ್ಟು ಮೌಡ್ಯವಲ್ಲ ಸಹಜ ಕ್ರಿಯೆ, ಮುಟ್ಟು ಸೂತಕ ಎಂಬುದು ಮೂಡನಂಬಿಕೆ,ಮೊದಲೆಲ್ಲ ಮುಟ್ಟಾದರೆ ಮೂರು ದಿನ ಮನೆಯಲ್ಲೇ ಪ್ರತ್ಯೇಕವಾಗಿ ಅಸ್ಪೃಶ್ಯರಾಗಿರಬೇಕಾದ ಆಚರಣೆ ಈಗಿಲ್ಲ ಆದರೂ ಇದು ವ್ಯೆಜ್ಞಾನಿಕ ಯುಗದಲ್ಲಿ ಸಂಪೂರ್ಣವಾಗಿ ನಿಂತಿಲ್ಲ.
   ಇಂತಹ ಆಚರಣೆ ಸಂಪೂರ್ಣ ನಿಲ್ಲಿಸಲು ಮಹಿಳೆಯರಲ್ಲಿಯೇ ಜಾಗೃತಿ ಆಗಬೇಕು.

Comments

Popular posts from this blog

Blog number 1782. ಅರಳಸುರಳಿಯ ರಾಘವೇಂದ್ರ ಕೇಕೋಡರ ಕುಟುಂಬದ ತಪ್ಪು ನಿರ್ದಾರದ ದುರಂತ.

#ತೀರ್ಥಹಳ್ಳಿಯ_ಅರಳಸುರಳಿಯ_ಒಂದೇ_ಕುಟುಂಬದ_ನಾಲ್ವರು_ಮೃತರಾದ_ರಹಸ್ಯವೇನು? #ಈ_ಬಗ್ಗೆ_ಆ_ಊರಿನ_ಸಮೀಪದ_ಈ_ಕುಟುಂಬದ_ಪರಿಚಯ_ಇರುವವರಿಗೆ_ವಿಚಾರಿಸಿದ್ದೆ. #ಅವರು_ಈ_ಘಟನೆ_ಬಗ್ಗೆ_ಸವಿಸ್ತಾರವಾಗಿ_ಲಿಖಿತ_ಲೇಖನ_ಬರೆದಿದ್ದಾರೆ. #ಅವರ_ವಿನಂತಿ_ಅವರ_ಹೆಸರು_ಬಹಿರಂಗಗೊಳಿಸ_ಬಾರದು. #ಆದ್ದರಿಂದ_ಈ_ಲೇಖನ_ಪೋಸ್ಟ್_ಮಾಡಬಾರದೆಂದಿದ್ದೆ_ಆದರೆ_ಇದು_ಮಲೆನಾಡಿಗರ_ಮನೆ_ಮನೆಯ_ಕಥೆ #ಆದ್ದರಿಂದ_ಇಲ್ಲಿ_ಪೋಸ್ಟ್_ಮಾಡಿದೆ.    ಇಲ್ಲಿ ತಪ್ಪು ಯಾರದ್ದೂ ಇಲ್ಲ... ಪಶ್ಚಾತ್ತಾಪದ ಪ್ರಾಯಶ್ಚಿತ ಕೇಳಲು ಅವರಾರು ಇಲ್ಲ .....ಆದರೆ ಈ ರೀತಿ ಜೀವ ತ್ಯಾಗ ಮಾಡುವ ಆತುರದ ಕೆಟ್ಟ ನಿರ್ದಾರ ಮಾತ್ರ ಸರಿ ಅಲ್ಲ.     ಇವರ ಅಣ್ಣ ಆರ್.ಎಸ್.ಎಸ್. ಪ್ರಚಾರಕರಾಗಿ ದೆಹಲಿಯಲ್ಲಿ ಏಳು ವಷ೯ ಮೋದಿ ಜೊತೆ ಒಂದೇ ಕೋಣೆ ಹಂಚಿಕೊಂಡವರು, ಇನ್ನೊಬ್ಬ ಸಹೋದರ ಮೂಳೆ ತಜ್ಞರಾಗಿ ಶಿವಮೊಗ್ಗದಲ್ಲಿ ಆಸ್ಪತ್ರೆ ಮಾಡಿಕೊಂಡಿದ್ದಾರೆ.   #ದೀರ್ಘವಾದರೂ_ಪೂರ್ಣ_ಲೇಖನ_ಓದಿ   #ಹೀಗೊಂದು_ಸುಕುಟುಂಬ_ಆತ್ಮಾಘಾತ_ಮತ್ತು_ತದನಂತರದ_ಸಹಾಗಮನ.... ಮೂಡಣದಲ್ಲಿ ರವಿ ಮೂಡಲು ಅಣಿ ಯಾಗುತ್ತಿಧ್ದ .. ಹಾದಿಗಣಪತಿ ದೇವರು ಗರ್ಭಗುಡಿಯ ನಂದಾದೀಪದ ಮಂದ ಬೆಳಕಿನಲ್ಲಿ ತನ್ನ ಗುಡಿಯ ಎದುರಿನ ತಗ್ಗಿನಲ್ಲಿದ್ದ  ರಾಘವೇಂದ್ರ ಕೇಕೋಡರ ಮನೆಯನ್ನು ಎವೆಯಕ್ಕದೇ ನೋಡುತ್ತಲಿದ್ದ... ಊರ ಎಲ್ಲಾ ಮನೆಯಂತೆ ಆ ಮನೆಯಲ್ಲೂ ಆ ಬೆಳಗಿನಲ್ಲಿ ಮನೆಯೊಡತಿ ನಾಗರತ್ನಕ್ಕ ಆ ಸಮಯದಲ್ಲಿ ದೇವರಿಗೆ ದೀಪ ಹಚ್ಚಿ ಹೊಸ್ತಿಲು ಪೂಜೆ ಮಾಡ

Blog number 1037. ರಾಜಕುಮಾರಿ ಶಾಂತವ್ವ ಮತ್ತು ದಲಿತ ಯುವಕ ಸಿದ್ದೇಶ್ವರರ ಅಮರ ಪ್ರೇಮದ ಸ್ಮಾರಕ, ಅನ್ಯ ಜಾತಿ ವಿವಾಹವಾದ್ದರಿಂದ ರಾಜಕುಮಾರಿಗೆ ಸೂಳೆ ಪಟ್ಟ ನೀಡಿದ ಸಮಾಜ. ಸಮಾಜದ ಒಳಿತಿಗಾಗಿ ಶಾಂತವ್ವ ಕಟ್ಟಿಸಿದ ಬೃಹತ್ ಕೆರೆಗೆ ಜನ ಕರೆದದ್ದು ಸೂಳೆ ಕಟ್ಟಿಸಿದ ಕೆರೆ ಅದೇ ಸೂಳೆಕೆರೆ / ಶಾಂತಿ ಸಾಗರ

# ಸೂಳೆಕೆರೆ (ಶಾಂತಿ ಸಾಗರ) ಅಂತರ್ ಜಾತಿ ಪ್ರೇಮ ವಿವಾಹದ ದುರOತ ಕಥೆ. #ಅಕ್ಟೋಬರ್ 2019 ರಲ್ಲಿ ತುಂಬಿ ತುಳುಕಿತ್ತು.  ಚಿತ್ರದುಗ೯, ದಾವಣಗೆರೆ ಬಳ್ಳಾರಿ ಮುಂತಾದ ಮಳೆ ಕಡಿಮೆ ಆಗುತ್ತಿದ್ದ ಜಿಲ್ಲೆಗಳಲ್ಲಿ ಅದೂ ಅಕ್ಟೋಬರ್ ತಿಂಗಳ 2019 ರಲ್ಲಿ  ಬಂದಿದ್ದ ಬಾರಿ ಮಳೆ ಎಲ್ಲಾ ಕೆರೆ, ಹೊಂಡಗಳು ತುಂಬಿ ತುಳುಕಿದೆ, ಸಾಮಾಜಿಕ ಜಾಲ ತಾಣದಲ್ಲಿ 40 ವಷ೯ದಲ್ಲಿ ಇಂತ ಮಳೆ ಬಂದಿಲ್ಲ ಅಂತ ಸುದ್ದಿ ಹರಿದಾಡುತ್ತಿತ್ತು ಮತ್ತು  ಸೂಳೆಕೆರೆ ತುಂಬಿ ಕೋಡಿ ಬಿದ್ದಿದೆ ಅಂತೆಲ್ಲ Post ನೋಡಿ ಬೆಂಗಳೂರಿಂದ ಬರುವಾಗ ಚಿತ್ರದುಗ೯ ಮಾಗ೯ವಾಗಿ ಚನ್ನಗಿರಿ ತಲುಪಿ ಸೂಳೆಕೆರೆ ನೋಡಲು ಹೋಗಿದ್ದೆ.  11ನೇ ಶತಮಾನದಲ್ಲಿ (1128ರಲ್ಲಿ)ಕೇವಲ 3 ವಷ೯ದಲ್ಲಿ ಈ ಕೆರೆ ನಿಮಾ೯ಣ ಮಾಡಿಸಿದ್ದು ಶಾಂತವ್ವ ಎಂಬ ರಾಜ ಕುಮಾರಿ ಅವಳು ಸ್ವಣ೯ವತಿ ಪಟ್ಟಣದ ದೊರೆ ವಿಕ್ರಮ ರಾಜನ ಮಗಳು, ಸಿದ್ದೇಶ್ವರ ಎಂಬ ಅನ್ಯ ಜಾತಿಯ ಯುವಕನೊ೦ದಿಗೆ ಗಾಂದವ೯ ವಿವಾಹ ಆಗುತ್ತಾಳೆ ಇದನ್ನ ಸಹಿಸದ ಮತ್ತು ಒಪ್ಪದ ಜನತೆ ಸೂಳೆ ಎಂದು ಮೂದಲಿಸುತ್ತಾರOತೆ ಈ ರೀತಿ ತನಗೆ ಬಂದ ಕಳಂಕ ಕಳೆಯಲು ಈ ಬೃಹತ್ ಕೆರೆ ತನ್ನ ಪತಿ ಸಿದ್ದೇಶ್ವರನ ಜೊತೆ ಸೇರಿ ನಿಮಿ೯ಸಿ ಕೆರೆಗೆ ಹಾರವಾದಳೆoಬ ಇತಿಹಾಸ ಇದೆ ಇದರಿಂದ ನೊಂದ ಪತಿ ಸಿದ್ಧೇಶ್ವರ ಕೂಡ ಎದುರಿನ ಗುಡ್ಡದಲ್ಲಿ ಜೀವ ತ್ಯಾಗ ಮಾಡುತ್ತಾನೆ ಈಗ ಅಲ್ಲಿ ಸಿದ್ದೇಶ್ವರ ದೇವಸ್ಥಾನವಿದೆ.   ಈ ಕೆರೆ ಈಗಲೂ ಸೂಳೆಕೆರೆ ಎಂದೆ ಹೆಸರಾಗಿದೆ ಈ

# ಜುಟ್ಟು ಕಾಳಿಂಗ ಸಪ೯ದ ಆಸ್ತಿತ್ವದ ಮಲೆನಾಡಿನ ಮಿಥ್ಯೆ#

  # ಕಾಳಿ೦ಗ ಸಪ೯ದಲ್ಲಿ ಜುಟ್ಟು ಕಾಳಿಂಗ ಸಪ೯ ಅಂತ ಇದೇ ಅನ್ನುವ ಯಾರು ನೋಡದ ಸಪ೯ದ ಅಸ್ತಿತ್ವ#    ಮಲೆನಾಡಿನ ಹಳ್ಳಿಗಳಲ್ಲಿ, ಅದು ಕಾಳಿ೦ಗ ಸಪ೯ದ ವಾಸಸ್ಥಳದ ಪರಿಸರದಲ್ಲಿ ಜುಟ್ಟು ಕಾಳಿಂಗ ಸಪ೯ ಇದೆ ಅನ್ನುವ ಮಾತು ಆಗಾಗ್ಗೆ ಕೇಳುತ್ತಿರುತ್ತೇವೆ. ಆದರೆ ಆ ರೀತಿಯ ಹಾವು ಇಲ್ಲ ಎಂದು ಹಾವಿನ ಬಗ್ಗೆ ಸಂಶೋದನೆ ಮಾಡುವವರು, ಅರಣ್ಯ ಇಲಾಖೆಯವರು, ಹಾವು ಹಿಡಿಯುವವರು ಖಡಾಖಂಡಿತವಾಗಿ ಹೇಳುತ್ತಾರಾದರು, ಈ ವದಂತಿ ಹೇಗೆ ಹರಡಿದೆ?.    ಇದು ಒಂದು ಊರು ಹಳ್ಳಿಯಲ್ಲ ನಾನು ನೋಡಿದಂತೆ ಮಹಾರಾಷ್ಟ್ರದ ರತ್ನಗಿರಿಯಿ೦ದ ಕೇರಳದ ಕಾಸರಗೋಡಿನ ತನಕ ಜುಟ್ಟು ಕಾಳಿಂಗದ ಅನೇಕ ರೋಚಕ ಕಥೆ ಕೇಳಿದ್ದೇನೆ.   ಪ್ರತ್ಯಕ್ಷ ನೋಡಿದವರು ತಾವು ಎನ್ನುವ ಅನೇಕರಲ್ಲಿ ಮಾತಾಡಿದ್ದೇನೆ ಆದರೆ ಅದು ನಂಬಲಹ೯ ಮಾಹಿತಿ ಅನಿಸಲಿಲ್ಲ, ಒಂದು ರೀತಿ ಕಾಲ್ಪನಿಕ ತ್ರಿಲ್ಲರ್ ಕಥೆ ಅಷ್ಟೇ ಅನ್ನಬಹುದು.    ಜಡೆ ಕಾಳಿಂಗ ಸಪ೯ಕ್ಕೆ ರೋಷ ಜಾಸ್ತಿ, ಹೆಡೆ ಮೇಲೆ ಕೂದಲಿನ ಜುಟ್ಟು ಇರುತ್ತೆ, ಮನುಷ್ಯರನ್ನ ಕಂಡರೆ ಓಡಿಸಿಕೊಂಡು ಬರುತ್ತೆ, ಅದರಿಂದ ತಪ್ಪಿಸಿಕೊಳ್ಳಲು ಒಂದೇ ದಾರಿ ಅದೇನೆಂದರೆ ತಗ್ಗಿನ ಪ್ರದೇಶದಲ್ಲಿ ಓಡುವುದು.     ಯಾಕೆ೦ದರೆ ಓಡಿಸಿಕೊಂಡು ಬರುವ ಜುಟ್ಟು ಕಾಳಿಂಗದ ಜುಟ್ಟು, ಇಳಿಜಾರಿನಲ್ಲಿ ಅದರ ತಲೆಯಿ೦ದ ಇಳಿಜಾರಿಗೆ ಸರಿಯುವುದರಿಂದ  ಕಣ್ಣಿನ ಮೇಲೆ ಕೂದಲ ಜುಟ್ಟು ಮುಚ್ಚುವುದರಿಂದ ಕಣ್ಣು ಕಾಣುವುದಿಲ್ಲ, ಆಗಲೇ ತಪ್ಪಿಸಿಕೊಳ್ಳಬೇಕು ಅಂತ ಬಿದನೂರು ನಗರ ಸಮೀಪದ ದೇವಗಂಗೆ ಎಂಬ ಕೆಳದಿ