Skip to main content

Blog number 1028.ಕರಾವಳಿಯ ದೈವಾರಾದನೆಯ೦ತದ್ದೇ ಮಲೆನಾಡಿನ ಗ್ರಾಮ ರಕ್ಷಕ ಬೂತಗಳಿಗೆ ದೀಪಾವಳಿಯಲ್ಲಿ ಸಾಮೂಹಿಕ ಪೂಜೆ ಬಲಿ ನೀಡುವ ನೋನಿ ಎಂಬ ಹಬ್ಬ, ಇದಕ್ಕೆ ಜಾತಿ ಬೇದವಿಲ್ಲ ಆದರೆ ಹುಟ್ಟು - ಸಾವು - ಮುಟ್ಟಿನ ಸೂತಕವಿದೆ, ಸೂತಕದಿಂದ ಪಾರಾಗುವ ಸುಲಭ ಮಾರ್ಗವೂ ಇದೆ

#ಮಲೆನಾಡಿನಲ್ಲಿ_ಊರ_ಕಾಯುವ_ಬೂತಗಳಿಗೆ_ನೋನಿಎಂಬ_ಕುರಿ_ಕೋಳಿ_ಬಲಿ_ನೀಡುವ_ಹಬ್ಬದ_ಆಚರಣೆ.

#ನೋನಿಗೆ_ಜಾತಿ_ಬೇದ_ಇಲ್ಲ_ಆದರೆ_ಹುಟ್ಟು_ಸಾವು_ಮುಟ್ಟಿನ_ಸೂತಕ_ಇದೆ.

#ಸೂತಕ_ಆದರೆ_ನೋನಿ_ಆಚರಿಸುವಂತಿಲ್ಲ

#ನೋನಿ_ಸಂಭ್ರಮಕ್ಕೆ_ಸೂತಕವನ್ನೆ_ನಿವಾರಿಸುವ_ಉಪಾಯ

#ಮುಟ್ಟಿನ_ಸಾಧ್ಯತೆಯ_ಹೆಣ್ಣು_ಮಕ್ಕಳು_ತಾತ್ಕಾಲಿಕವಾಗಿ_ಊರು_ಬಿಡುವುದು

    ಅಜ್ಜಿಯ ಮತ್ತು ತಾಯಿ ಕಡೆಯಿಂದ ಕರಾವಳಿ ದೈವಗಳು ಹಾಗೂ ಘಟ್ಟದ ಮೇಲೆ ನೆಲೆಸಿದ್ದರಿಂದ ಗ್ರಾಮಗಳ ಕಾಪಾಡುವ ಬೂತಗಳೂ ನಮಗೆ ಪೂಜಾರ್ಹವೇ ಆಗಿದೆ.
      ರಾಮಕ್ಷತ್ರಿಯ ಸಮಾಜದ ಬಗ್ಗೆ ಒಂದು ಪುಸ್ತಕ ಬರೆಯುವ ಉಮೇದಿನಲ್ಲಿ (ಪ್ರಕಟ ಆಗಿಲ್ಲ) ಮಹಾರಾಷ್ಟ್ರದ ವಿಜಯ ದುರ್ಗದಿಂದ ಕಾಸರಗೋಡಿನವರೆಗೆ ಓಡಾಡಿದಾಗ ಕು೦ಬಳೆಯ ಕೋಟೆ ಆ೦ಜನೇಯ ದೇವಾಲಯದ ವಾರ್ಷಿಕೊತ್ಸವದಲ್ಲಿ ಬೂತಾರಾಧನೆ - ಕೆಂಡ ಹಾಯುವುದು - ಕೋಲಾ ನೋಡಿದ್ದೆ ಈ ಬಗ್ಗೆ ತಿಳಿದದ್ದು ಇದು ರಾಮಕ್ಷತ್ರಿಯರ ಆಚರಣೆ ಅಲ್ಲ ಆದರೆ ಅದನ್ನು ಕೆಳದಿ ಅರಸರ ಕೋಟೆ ನಿರ್ವಹಣೆ ಮಾಡುವ ಈ ಸಮಾಜದವರು ಸ್ಥಳಿಯರ ನಂಬಿಕೆಗೆ ಗೌರವ ಕೊಡಲು ಅದಕ್ಕೆ ತಕ್ಕ ಹಾಗೆ ವರ್ತಿಸಿ ಅವರ ಜೊತೆ ಜೀರೋ ಟಾಲರೆನ್ಸ್ ಕಾಪಾಡಿಕೊಂಡಿದ್ದರೆಂದು ತಿಳಿದು ಬರುತ್ತದೆ.
  ಕಾಂತಾರ ಸಿನಿಮಾದಿಂದ ಮತ್ತು ಕೊರಗಜ್ಜರ ಕಾರಣಿಕಗಳಿಂದ ದೈವಗಳ ಬೂತಾರಾಧನೆ ಬಗ್ಗೆ ಹೆಚ್ಚು ಹೆಚ್ಚು ಮಾಹಿತಿ ಆಸಕ್ತಿ ಹರಿದಾಡುತ್ತಿದೆ, ಮಲೆನಾಡಿನಲ್ಲಿ ಗ್ರಾಮ ರಕ್ಷಣೆಯ ದೈವಗಳನ್ನು ಗಾಮದ ದೇವರು, ಬೂತ ಅಂತನೇ ಕರೆಯುತ್ತಾರೆ ಮತ್ತು ವರ್ಷಕೊಮ್ಮೆ ದೀಪಾವಳಿಯಲ್ಲಿ ಸಾಮೂಹಿಕ ಪೂಜೆ - ಬಲಿಯ ನೋನಿ ಎಂಬ ಗ್ರಾಮದ ಹಬ್ಬವೂ ನಡೆಯುತ್ತದೆ.
    ಶಿವಮೊಗ್ಗ ಜಿಲ್ಲೆಯ ಆನಂದಪುರಂ ಹೋಬಳಿಯಲ್ಲಿ ದೀಪಾವಳಿ ಹಬ್ಬದಲ್ಲಿ ಗ್ರಾಮಗಳಲ್ಲಿ ಗಾಮದ ಹಬ್ಬ / ನೋನಿ ಎಂಬ ಗ್ರಾಮದ ಎಲ್ಲಾ ದೇವಾನು ದೇವತೆಗಳಿಗೆ, ಊರ ಕಾಯುವ ಬೂತಗಳಿಗೆ ಸಾಮೂಹಿಕವಾಗಿ (ಇದು ಕೆಲ ಕಡೆ ನೂರಕ್ಕೂ ಹೆಚ್ಚು ) ಪೂಜೆ ನಂತರ ಬಲಿ ನೀಡುವ ಕ್ರಮ ಇದೆ.
 ಮೇಲ್ಜಾತಿಯವರು ಈ ಪೂಜೆಗೆ ಸಹಕರಿಸುತ್ತಾರೆ, ಬಲಿಗೆ ತರುವ ಕೋಳಿ ಕುರಿಗೆ ತಮ್ಮ ಪಾಲಿನ ಹಣ ಗ್ರಾಮದ ಜನ ನಿದ೯ರಿಸಿದಂತೆ ನೀಡುತ್ತಾರೆ ಆದರೆ ಬಲಿ ಮಾಂಸದ ಪಾಲು ಅವರ ಮನೆಯ ನಿಷ್ಟ ಕೆಲಸಗಾರನಿಗೆ (ಶೂದ್ರನಿಗೆ) ನೀಡುವಂತೆ ಹೇಳುತ್ತಾರೆ.
 ದೀಪಾವಳಿ ನಂತರ ಕೆಲ ದಿನ ಈ ನೋನಿ ನಡೆಯುತ್ತದೆ ಇದಕ್ಕೆ ಆಚರಣೆಯ ಕ್ರಮ ಹೇಳುವವ ಊರಿನ ಮುಖಂಡ ಅಥವ ಹಿರಿಯ ಇಲ್ಲಿಯೂ ಬಹುಸಂಖ್ಯಾತ ಜಾತಿಯವರ ಮಾತು ಹೆಚ್ಚು ಕೃತಿಗೆ.
  ಇಲ್ಲಿ ಜಾತಿ ಮಡಿ ಇಲ್ಲ ಆದರೆ ಹುಟ್ಟು - ಸಾವು - ಮುಟ್ಟುವಿನ ಸೂತಕ ಇದೆ.  ಸದರಿ ನೋನಿ ದಿನ ಊರಲ್ಲಿ ಯಾರಾದರೂ ಮುಟ್ಟಾದರೆ  ಈ ಪೂಜ ಕಾಯ೯ಕ್ರಮ ಮುಂದೂಡಲಾಗುತ್ತೆ.
   ಇಲ್ಲಿ ಬಾಡೂಟದ ಗಮ್ಮತ್ತು ಇರುವುದರಿಂದ ಈ ಕಾಯ೯ಕ್ರಮ ಮುಂದೂಡಲು ಹೆಚ್ಚಿನವರಿಗೆ ಇಷ್ಟ ಇರುವುದಿಲ್ಲ ಅದಕ್ಕಾಗಿ ಸೂತಕಗಳನ್ನೇ ನಿವಾರಿಸಿಕೊಳ್ಳುವ ಹೊಸ ಯೋಜನೆ ಆಚರಣೆಯಲ್ಲಿದೆ.
    ಅದೇನೆ೦ದರೆ ಮುಟ್ಟಾಗುವ ಮುನ್ನವೆ ಹೆಣ್ಣು ಮಕ್ಕಳು ಹಳ್ಳಿ ತೊರೆದು ನೋನಿ ಇಲ್ಲದ ಹಳ್ಳಿಯ ನೆಂಟರ ಮನೆಗೆ ಹೋಗಬೇಕು.
   ಮುಟ್ಟು ಮೌಡ್ಯವಲ್ಲ ಸಹಜ ಕ್ರಿಯೆ, ಮುಟ್ಟು ಸೂತಕ ಎಂಬುದು ಮೂಡನಂಬಿಕೆ,ಮೊದಲೆಲ್ಲ ಮುಟ್ಟಾದರೆ ಮೂರು ದಿನ ಮನೆಯಲ್ಲೇ ಪ್ರತ್ಯೇಕವಾಗಿ ಅಸ್ಪೃಶ್ಯರಾಗಿರಬೇಕಾದ ಆಚರಣೆ ಈಗಿಲ್ಲ ಆದರೂ ಇದು ವ್ಯೆಜ್ಞಾನಿಕ ಯುಗದಲ್ಲಿ ಸಂಪೂರ್ಣವಾಗಿ ನಿಂತಿಲ್ಲ.
   ಇಂತಹ ಆಚರಣೆ ಸಂಪೂರ್ಣ ನಿಲ್ಲಿಸಲು ಮಹಿಳೆಯರಲ್ಲಿಯೇ ಜಾಗೃತಿ ಆಗಬೇಕು.

Comments

Popular posts from this blog

# ಜುಟ್ಟು ಕಾಳಿಂಗ ಸಪ೯ದ ಆಸ್ತಿತ್ವದ ಮಲೆನಾಡಿನ ಮಿಥ್ಯೆ#

  # ಕಾಳಿ೦ಗ ಸಪ೯ದಲ್ಲಿ ಜುಟ್ಟು ಕಾಳಿಂಗ ಸಪ೯ ಅಂತ ಇದೇ ಅನ್ನುವ ಯಾರು ನೋಡದ ಸಪ೯ದ ಅಸ್ತಿತ್ವ#    ಮಲೆನಾಡಿನ ಹಳ್ಳಿಗಳಲ್ಲಿ, ಅದು ಕಾಳಿ೦ಗ ಸಪ೯ದ ವಾಸಸ್ಥಳದ ಪರಿಸರದಲ್ಲಿ ಜುಟ್ಟು ಕಾಳಿಂಗ ಸಪ೯ ಇದೆ ಅನ್ನುವ ಮಾತು ಆಗಾಗ್ಗೆ ಕೇಳುತ್ತಿರುತ್ತೇವೆ. ಆದರೆ ಆ ರೀತಿಯ ಹಾವು ಇಲ್ಲ ಎಂದು ಹಾವಿನ ಬಗ್ಗೆ ಸಂಶೋದನೆ ಮಾಡುವವರು, ಅರಣ್ಯ ಇಲಾಖೆಯವರು, ಹಾವು ಹಿಡಿಯುವವರು ಖಡಾಖಂಡಿತವಾಗಿ ಹೇಳುತ್ತಾರಾದರು, ಈ ವದಂತಿ ಹೇಗೆ ಹರಡಿದೆ?.    ಇದು ಒಂದು ಊರು ಹಳ್ಳಿಯಲ್ಲ ನಾನು ನೋಡಿದಂತೆ ಮಹಾರಾಷ್ಟ್ರದ ರತ್ನಗಿರಿಯಿ೦ದ ಕೇರಳದ ಕಾಸರಗೋಡಿನ ತನಕ ಜುಟ್ಟು ಕಾಳಿಂಗದ ಅನೇಕ ರೋಚಕ ಕಥೆ ಕೇಳಿದ್ದೇನೆ.   ಪ್ರತ್ಯಕ್ಷ ನೋಡಿದವರು ತಾವು ಎನ್ನುವ ಅನೇಕರಲ್ಲಿ ಮಾತಾಡಿದ್ದೇನೆ ಆದರೆ ಅದು ನಂಬಲಹ೯ ಮಾಹಿತಿ ಅನಿಸಲಿಲ್ಲ, ಒಂದು ರೀತಿ ಕಾಲ್ಪನಿಕ ತ್ರಿಲ್ಲರ್ ಕಥೆ ಅಷ್ಟೇ ಅನ್ನಬಹುದು.    ಜಡೆ ಕಾಳಿಂಗ ಸಪ೯ಕ್ಕೆ ರೋಷ ಜಾಸ್ತಿ, ಹೆಡೆ ಮೇಲೆ ಕೂದಲಿನ ಜುಟ್ಟು ಇರುತ್ತೆ, ಮನುಷ್ಯರನ್ನ ಕಂಡರೆ ಓಡಿಸಿಕೊಂಡು ಬರುತ್ತೆ, ಅದರಿಂದ ತಪ್ಪಿಸಿಕೊಳ್ಳಲು ಒಂದೇ ದಾರಿ ಅದೇನೆಂದರೆ ತಗ್ಗಿನ ಪ್ರದೇಶದಲ್ಲಿ ಓಡುವುದು.     ಯಾಕೆ೦ದರೆ ಓಡಿಸಿಕೊಂಡು ಬರುವ ಜುಟ್ಟು ಕಾಳಿಂಗದ ಜುಟ್ಟು, ಇಳಿಜಾರಿನಲ್ಲಿ ಅದರ ತಲೆಯಿ೦ದ ಇಳಿಜಾರಿಗೆ ಸರಿಯುವುದರಿಂದ  ಕಣ್ಣಿನ ಮೇಲೆ ಕೂದಲ ಜುಟ್ಟು ಮುಚ್ಚುವುದರಿಂದ ಕಣ್ಣು ಕಾಣುವುದಿಲ್ಲ, ಆಗಲೇ ತಪ್...

ಶರಾವತಿ ನದಿ ಉಗಮ ಸ್ಥಾನ ಅಂಬುತೀಥ೯.

ಇಡೀ ರಾಜ್ಯಕ್ಕೆ ವಿದ್ಯುತ್ ನೀಡುವ ಶರಾವತಿ ನದಿಯ ಉಗಮ ಸ್ಥಾನ ಅಂಬುತೀಥ೯, ಆರಗ ಸಮೀಪದ ತೀಥ೯ಳ್ಳಿ ತಾಲ್ಲೂಕಿನಲ್ಲಿದೆ( ಶಿವಮೊಗ್ಗ ಜಿಲ್ಲೆ)    ಅಂಬು ತೀಥ೯ದಲ್ಲಿ ಶ್ರೀ ರಾಮ ವನವಾಸದಲ್ಲಿದ್ದಾಗ ಸೀತಾ ಮಾತೆಗೆ ಪೂಜೆಗೆ ನೀರು ಸಿಗದಿದ್ದಾಗ ರಾಮ ತನ್ನ ಅಂಬಿನಿಂದ (ಬಿಲ್ಲಿನ ಬಾಣದಿಂದ) ನೆಲ ಸೀಳಿ ನೀರು ತಂದರೆ೦ದು ರಾಮಾಯಣದಲ್ಲಿ ಉಲ್ಲೇಖವಿದೆ, ಹಾಗಾಗಿ ಈ ಸ್ಥಳಕ್ಕೆ ಅಂಬುತೀಥ೯ ಎಂಬ ಹೆಸರು ಬ೦ತು ಎಂಬುದು ಸ್ಥಳ ಪುರಾಣ.    ಇಲ್ಲಿ ಸಣ್ಣ ತೊರೆಯಾಗಿ ಹುಟ್ಟುವ ನದಿ ಬಾಣದಿಂದ ಹುಟ್ಟಿದ್ದರಿಂದ ಶರಾವತಿ ಎ೦ಬ ಹೆಸರು ಪಡೆದು ಪೂವ೯ಕ್ಕೆ ಹರಿದು ನಂತರ ಪಶ್ಚಿಮ ಮುಖವಾಗಿ ತಿರುಗಿ ಹೊಸನಗರ ತಾಲ್ಲೂಕನ್ನ ದಾಟಿ ಸಾಗರ ತಾಲ್ಲೂಕಿನ ಜೋಗದಲ್ಲಿ ಜಲಪಾತವಾಗಿ ದಟ್ಟ ಕಾನನದ ಕಣಿವೆ ಮುಖಾಂತರ ಹರಿದು ಹೊನ್ನಾವರದಲ್ಲಿ ಅರಬ್ಬಿ ಸಮುದ್ರ ಸೇರುತ್ತದೆ.   ಈ ನದಿಗೆ ಮೊದಲಿಗೆ ಹೀರೇ ಬಾಸ್ಕರ ಎಂಬಲ್ಲಿ ನಂತರ ಲಿಂಗನಮಕ್ಕಿಯಲ್ಲಿ ಆಣೆಕಟ್ಟು ಕಟ್ಟಿ ರಾಜ್ಯಕ್ಕೆ ಜಲ ವಿದ್ಯುತ್ ನೀಡುತ್ತಿರುವುದರಿಂದ ಲಕ್ಷಾಂತರ ಎಕರೆ ಕಾಡು, ಜಮೀನು ಅನೇಕ ಊರು ಮುಳುಗಡೆ ಆಯಿತು ಸಾವಿರಾರು ಕುಟುಂಬಗಳು ಸಂತ್ರಸ್ಥರಾದದ್ದು ಇತಿಹಾಸ.    ಈ ನದಿ ಜೋಗದಲ್ಲಿ ದುಮುಕುವ ಜಲಪಾತ ವಿಶ್ವದ ಸುಂದರ ಜಲಪಾತದಲ್ಲಿ ಒಂದಾಗಿದೆ.    ಹಾಗಾಗಿ ಶರಾವತಿ ನದಿಯ ಉಗಮ ಸ್ಥಾನಕ್ಕೆ ಮಹತ್ವವಿದೆ, ಒಮ್ಮೆಯಾದರೂ ಈ ನದಿ ಮೂಲ ಸಂದಶಿ೯ಸಬೇಕು ಆದರೆ ಇಲ್ಲಿ ಶರಾವತಿ ವ...

HISTORICAL SAGAR MARIKAMBA JATRA.ಐತಿಹಾಸಿಕ ಸಾಗರದ ಮಾರಿಕಾಂಬಾ ಜಾತ್ರೆ

     ಸಾಗರದ ಮಾರಿಕಾಂಬಾ ಜಾತ್ರೆ ಐತಿಹಾಸಿಕ ಚರಿತ್ರೆಯಲ್ಲಿ ದಾಖಲೆ.        ಕನಾ೯ಟಕ ರಾಜ್ಯದಲ್ಲಿ ಎರೆಡು ಮಾರಿಕಾಂಬಾ ಜಾತ್ರೆಗಳು ಪ್ರಸಿದ್ಧಿ ಪಡೆದಿದೆ ಅದು ಉತ್ತರ ಕನ್ನಡ ಜಿಲ್ಲೆಯ ಸಿಸಿ೯ಯದ್ದು ಮತ್ತು ಶಿವಮೊಗ್ಗ ಜಿಲ್ಲೆಯ ಸಾಗರದ್ದು.    ಪ್ರತಿ ಮೂರು ವಷ೯ಕೆ ಈ ಜಾತ್ರೆ ಆಚರಿಸಲಾಗುತ್ತೆ ಶೂದ್ರ ವಗ೯ದವರು ಭಯ ಮತ್ತು ಭಕ್ತಿಯಿಂದ ಕುರಿ ಕೋಳಿ ಬಲಿ ನೀಡುವ ಪರಂಪರೆ ಇದೆ.ಮಂಗಳವಾರ ಮೇಲು ಜಾತಿಯ ಜನರ ಪೂಜೆ ದೇವಿಯ ತವರು ಮನೆಯಲ್ಲಿ ನಡೆಯುತ್ತದೆ ನಂತರ ರಾತ್ರಿ ಗಂಡನ ಸೇರುವ ಮಾರಿಗೆ ಶೂದ್ರರ ಪೂಜೆ, ಬಲಿ ಮೀಸಲು.    ಮೊದಲೆಲ್ಲ ಮಾರಿಯಮ್ಮನಿಗೆ ಕೊಣನ ಬಲಿ ನೀಡುತ್ತಿದ್ದರು ಈಗ ಇದು ಕಾನೂನು ಪ್ರಕಾರ ನಿಷಿದ್ಧ ಆದರೆ ಈ ಆಚಾರಣೆ ಗುಪ್ತವಾಗಿ ಬೇರೆ ಕಡೆ ನಡೆಸಲಾಗುತ್ತೆ ಅನ್ನುತ್ತಾರೆ.    ಸಾಗರದ ಮಾರಿಕಾ0ಬಾ ಜಾತ್ರೆ ಜಾತ್ರೆಯಿ೦ದ ಜಾತ್ರೆಗೆ ಅದೂರಿಯಾಗಿ ನಡೆಯುತ್ತದೆ, ಕೋಟ್ಯಾoತರ ಹಣದ ವಹಿವಾಟು ಕೂಡ, ಮೊದಲೆಲ್ಲ ಹಣದ ಅಪರಾ ತಪರ ಆಗುತ್ತಿದೆ ಎಂಬ ಗುಲ್ಲು ಇತ್ತು ಆದರೆ ಈಗೆಲ್ಲ ಪಾರದಶ೯ಕವಾಗಿದೆ ಆದರೂ ಈ ಬಾರಿಯ 2017ರ ಜಾತ್ರೆಯಲ್ಲಿ ಅವ್ಯವಹಾರದ ಆರೋಪ ಮಾಡಲಾಗಿದೆ ಈ ವಿಚಾರ ಇಲ್ಲಿ ಅಪ್ರಸ್ತುತ ಆದರೂ ಈ ಬಗ್ಗೆ ಬರೆಯಲು ಕಾರಣ ಕೆಳದಿ ಅರಸರ ಕಾಲದಲ್ಲಿ ಅಂದರೆ 350 ವಷ೯ದ ಹಿಂದೆಯೂ ರಾಜರಿಗೆ ಸಾಗರದ ಮಾರಿಕಾಂಬಾ ಜಾತ್ರೆಯಲ್ಲಿ ಸಾವ೯ಜನಿಕರಿಂದ ಸಂಗ್ರಹಿಸಿದ ಜಾತ...