Skip to main content

Blog number 1028.70 ದಶಕದಲ್ಲಿ ಸಾಗರದ ಕ್ರಿಕೆಟ್ ಜಗತ್ತಿನ ಐಕಾನ್ ನಾಗೇಂದ್ರ ಪಂಡಿತ್ ಸಾಗರದ ಅವರ ಕ್ರಿಕೇಟ್ ಅಕಾಡೆಮಿಯಲ್ಲಿ ಅತ್ಯುತ್ತಮ ತರಬೇತಿ ನೀಡಿ ಉದಯೋನ್ಮುಖ ಕ್ರಿಕೆಟ್ ಆಟಗಾರರನ್ನು ತಯಾರಿ ಮಾಡುತ್ತಿದ್ದಾರೆ.

ಸಾಗರದ ಒಂದು ಕಾಲದ ಯುವ ಐಕಾನ್ ನಾಗೇ೦ದ್ರ ಪಂಡಿತರಿಂದ ಎರಡನೆ ಇನಿ೦ಗ್ಸ್ 

ನಾಗೇ೦ದ್ರ ಪ೦ಡಿತ್ ಕ್ರಿಕೇಟ್ ಆಕಾಡಮಿ
                     ಸಾಗರ

   ಒಂದು ಕಾಲದಲ್ಲಿ ಅಂದರೆ 1975ರಿಂದ 1980ರಲ್ಲಿ ಸಾಗರದಲ್ಲಿ ಲೆದರ್ ಬಾಲ್ ಕ್ರಿಕೆಟ್ ಹವಾ ಜೋರಾಗಿತ್ತು ಅದರಲ್ಲೂ ಎಲ್.ಬಿ. ಕಾಲೇಜಿನ ನಾಗೇ೦ದ್ರಪಂಡಿತರೆಂದರೆ ಸಾಗರದ ಗಾವಸ್ಕರ್, ಸಿನಿಮಾ ನಟರಂತೆ ಸುಂದರಾಂಗ, ಯುನಿವಸಿ೯ಟಿ ಕೋಟ್ ಪಡೆದ ಏಕೈಕ ಕ್ರಿಕೆಟ್ ಆಟಗಾರ.
  ನಾವೆಲ್ಲ 1978 ರಲ್ಲಿ ರೈಲಿನಲ್ಲಿ ಸಾಗರದ ಮುನ್ಸಿಪಲ್ ಹೈಸ್ಕೂಲಿಗೆ 8ನೇ ತರಗತಿಗೆ ಹೋಗುತ್ತಿದ್ದರು ನಾಗೇ೦ದ್ರ ಪಂಡಿತರ ಬ್ಯಾಟಿಂಗ್ ನೋಡಲು ಎಲ್.ಬಿ. ಕಾಲೇಜಿನ ಕ್ರಿಡಾ೦ಗಣಕ್ಕೆ ನಡೆದು ಹೋಗುತ್ತಿದ್ದೆವು, ಅವರ ಬ್ಯಾಟಿಂಗ್ ಸ್ಟೈಲ್ ಹಾಗಿತ್ತು, ಬೌ೦ಡರಿ ಸಿಕ್ಸ್ ರ್ ಗಳ ಸುರಿಮಳೆ.
  ಭಾರತದ ರಾಷ್ಟ್ರಿಯ ಕ್ರಿಕೆಟ್ ಆಟಗಾರರಾಗಿ ಆಯ್ಕೆ ಆಗುವಂತ ಅವಕಾಶದಿ೦ದ ವಂಚಿತರಾಗಿದ್ದು ದುರಾದೃಷ್ಟ.
   ಈಗ UAE ಯ ಅಬುದಾಬಿಯ Exchage ನಲ್ಲಿ ಉಪಾಧ್ಯಕ್ಷರಾಗಿ ಪ್ರತಿಷ್ಟಿತ ದೊಡ್ದ ಹುದ್ದೆಯಲ್ಲಿದ್ದಾರೆ ಆದರೂ ತಮ್ಮ ಹುಟ್ಟಿದ ಊರು ಸಾಗರದಲ್ಲಿನ ಯುವ ಜನತೆಗೆ ಏನಾದರೂ ಮಾಡಬೇಕೆಂಬ ತುಡಿತ ಅವರಿಗೆ ಈಗಿನ ಅವರ ಸಾಮಥ್ಯ೯ದಲ್ಲಿ ಬೆಂಗಳೂರಿನಲ್ಲಿ ಪ್ರಾರಂಬಿಸ ಬಹುದಾದ ಕ್ರಿಕೆಟ್ ಆಕಾಡಮಿ ಸಾಗರದಲ್ಲಿ ಪ್ರಾರಂಬಿಸಿದ್ದಾರೆ, ಅದೂ ಅವರದ್ದೇ ಹೆಸರಿನ ಬ್ರಾಂಡ್ ನಲ್ಲಿ.
  ನಾಗೇ೦ದ್ರ ಪಂಡಿತ್ ಕ್ರಿಕೇಟ್ ಅಕಾಡೆಮಿ ಯಶಸ್ವಿಯಾಗಲಿ ಸಾಗರದ ಯುವಕರಿಗೆ ಕ್ರೀಡೆಯಲ್ಲಿ ಅತ್ಯುತ್ತಮ ಮಾಗ೯ದಶ೯ನ ಅವರಿಂದ ಸಿಗಲಿ ಎಂದು ಹಾರೈಸೋಣ.
  ಈಗಾಗಲೇ ಹೆಸರು ನೊ೦ದಾಯಿಸಿ ಕೊಂಡು ತರಬೇತಿ ಪಡೆದ ಕ್ರೀಡಾಪಟುಗಳು ಅನೇಕ ಕ್ರಿಕೆಟ್ ಪಂದ್ಯಾವಳಿಗಳಲ್ಲಿ ಸಾದನೆ ಮಾಡಿ ಮುಂದಿನ ದಿನದಲ್ಲಿ ರಾಜ್ಯ - ದೇಶವನ್ನು ಪ್ರತಿನಿಧಿಸುವ ನಿರೀಕ್ಷೆ ಇದೆ.    ಇವರ ಅಕಾಡಮಿಯಲ್ಲಿ ಭಾಗವಹಿಸಿ ತರಬೇತಿ ಪಡೆಯಲು  ಅವಕಾಶ ಕಲ್ಪಿಸಿದ್ದಾರೆ.
  ಆಸಕ್ತರು ಹೆಸರು ನೊಂದಾಯಿಸಿಕೊಳ್ಳಲು ಕೆಳಕಂಡ ವೆಬ್ ಸೈಟ್ / ಈ ಮೇಲ್ ಮೂಲಕ ಸಂಪಕಿ೯ಸ ಬಹುದು
www.npca.in.net
cricket@npca.in.net

*Second Innings From Nagendra Pandit - Nagendra Pandit Cricket Academy*
The craze for leather ball cricket was at its peak during 1975 to 1980 in Sagar. Nagendra Pandit, handsome cricket player of L.B College.
While  studying in Sagara Municipal Highschool, we used to walk to LB college's grounds to watch him play. His batting was so alluring with rain of sixers and fours, we didn't mind walking that far to watch him play.
Now he is vice President in Abudhabi's Stock exchange. Still his heart thrives to do something good for the youth of Sagar.
He is starting a cricket academy in Sagar in his name so that youngsters of this region could get proper training and guidance.
The registration process has been started. For registration, interested candidates can contact the academy via the following link : http://www.npca.in.net
          cricket@npca.in.net
I wish him success in this venture

Comments

Popular posts from this blog

Blog number 1782. ಅರಳಸುರಳಿಯ ರಾಘವೇಂದ್ರ ಕೇಕೋಡರ ಕುಟುಂಬದ ತಪ್ಪು ನಿರ್ದಾರದ ದುರಂತ.

#ತೀರ್ಥಹಳ್ಳಿಯ_ಅರಳಸುರಳಿಯ_ಒಂದೇ_ಕುಟುಂಬದ_ನಾಲ್ವರು_ಮೃತರಾದ_ರಹಸ್ಯವೇನು? #ಈ_ಬಗ್ಗೆ_ಆ_ಊರಿನ_ಸಮೀಪದ_ಈ_ಕುಟುಂಬದ_ಪರಿಚಯ_ಇರುವವರಿಗೆ_ವಿಚಾರಿಸಿದ್ದೆ. #ಅವರು_ಈ_ಘಟನೆ_ಬಗ್ಗೆ_ಸವಿಸ್ತಾರವಾಗಿ_ಲಿಖಿತ_ಲೇಖನ_ಬರೆದಿದ್ದಾರೆ. #ಅವರ_ವಿನಂತಿ_ಅವರ_ಹೆಸರು_ಬಹಿರಂಗಗೊಳಿಸ_ಬಾರದು. #ಆದ್ದರಿಂದ_ಈ_ಲೇಖನ_ಪೋಸ್ಟ್_ಮಾಡಬಾರದೆಂದಿದ್ದೆ_ಆದರೆ_ಇದು_ಮಲೆನಾಡಿಗರ_ಮನೆ_ಮನೆಯ_ಕಥೆ #ಆದ್ದರಿಂದ_ಇಲ್ಲಿ_ಪೋಸ್ಟ್_ಮಾಡಿದೆ.    ಇಲ್ಲಿ ತಪ್ಪು ಯಾರದ್ದೂ ಇಲ್ಲ... ಪಶ್ಚಾತ್ತಾಪದ ಪ್ರಾಯಶ್ಚಿತ ಕೇಳಲು ಅವರಾರು ಇಲ್ಲ .....ಆದರೆ ಈ ರೀತಿ ಜೀವ ತ್ಯಾಗ ಮಾಡುವ ಆತುರದ ಕೆಟ್ಟ ನಿರ್ದಾರ ಮಾತ್ರ ಸರಿ ಅಲ್ಲ.     ಇವರ ಅಣ್ಣ ಆರ್.ಎಸ್.ಎಸ್. ಪ್ರಚಾರಕರಾಗಿ ದೆಹಲಿಯಲ್ಲಿ ಏಳು ವಷ೯ ಮೋದಿ ಜೊತೆ ಒಂದೇ ಕೋಣೆ ಹಂಚಿಕೊಂಡವರು, ಇನ್ನೊಬ್ಬ ಸಹೋದರ ಮೂಳೆ ತಜ್ಞರಾಗಿ ಶಿವಮೊಗ್ಗದಲ್ಲಿ ಆಸ್ಪತ್ರೆ ಮಾಡಿಕೊಂಡಿದ್ದಾರೆ.   #ದೀರ್ಘವಾದರೂ_ಪೂರ್ಣ_ಲೇಖನ_ಓದಿ   #ಹೀಗೊಂದು_ಸುಕುಟುಂಬ_ಆತ್ಮಾಘಾತ_ಮತ್ತು_ತದನಂತರದ_ಸಹಾಗಮನ.... ಮೂಡಣದಲ್ಲಿ ರವಿ ಮೂಡಲು ಅಣಿ ಯಾಗುತ್ತಿಧ್ದ .. ಹಾದಿಗಣಪತಿ ದೇವರು ಗರ್ಭಗುಡಿಯ ನಂದಾದೀಪದ ಮಂದ ಬೆಳಕಿನಲ್ಲಿ ತನ್ನ ಗುಡಿಯ ಎದುರಿನ ತಗ್ಗಿನಲ್ಲಿದ್ದ  ರಾಘವೇಂದ್ರ ಕೇಕೋಡರ ಮನೆಯನ್ನು ಎವೆಯಕ್ಕದೇ ನೋಡುತ್ತಲಿದ್ದ... ಊರ ಎಲ್ಲಾ ಮನೆಯಂತೆ ಆ ಮನೆಯಲ್ಲೂ ಆ ಬೆಳಗಿನಲ್ಲಿ ಮನೆಯೊಡತಿ ನಾಗರತ್ನಕ್ಕ ಆ ಸಮಯದಲ್ಲಿ ದೇವರಿಗೆ ದೀಪ ಹಚ್ಚಿ ಹೊಸ್ತಿಲು ಪೂಜೆ ಮಾಡ

Blog number 1037. ರಾಜಕುಮಾರಿ ಶಾಂತವ್ವ ಮತ್ತು ದಲಿತ ಯುವಕ ಸಿದ್ದೇಶ್ವರರ ಅಮರ ಪ್ರೇಮದ ಸ್ಮಾರಕ, ಅನ್ಯ ಜಾತಿ ವಿವಾಹವಾದ್ದರಿಂದ ರಾಜಕುಮಾರಿಗೆ ಸೂಳೆ ಪಟ್ಟ ನೀಡಿದ ಸಮಾಜ. ಸಮಾಜದ ಒಳಿತಿಗಾಗಿ ಶಾಂತವ್ವ ಕಟ್ಟಿಸಿದ ಬೃಹತ್ ಕೆರೆಗೆ ಜನ ಕರೆದದ್ದು ಸೂಳೆ ಕಟ್ಟಿಸಿದ ಕೆರೆ ಅದೇ ಸೂಳೆಕೆರೆ / ಶಾಂತಿ ಸಾಗರ

# ಸೂಳೆಕೆರೆ (ಶಾಂತಿ ಸಾಗರ) ಅಂತರ್ ಜಾತಿ ಪ್ರೇಮ ವಿವಾಹದ ದುರOತ ಕಥೆ. #ಅಕ್ಟೋಬರ್ 2019 ರಲ್ಲಿ ತುಂಬಿ ತುಳುಕಿತ್ತು.  ಚಿತ್ರದುಗ೯, ದಾವಣಗೆರೆ ಬಳ್ಳಾರಿ ಮುಂತಾದ ಮಳೆ ಕಡಿಮೆ ಆಗುತ್ತಿದ್ದ ಜಿಲ್ಲೆಗಳಲ್ಲಿ ಅದೂ ಅಕ್ಟೋಬರ್ ತಿಂಗಳ 2019 ರಲ್ಲಿ  ಬಂದಿದ್ದ ಬಾರಿ ಮಳೆ ಎಲ್ಲಾ ಕೆರೆ, ಹೊಂಡಗಳು ತುಂಬಿ ತುಳುಕಿದೆ, ಸಾಮಾಜಿಕ ಜಾಲ ತಾಣದಲ್ಲಿ 40 ವಷ೯ದಲ್ಲಿ ಇಂತ ಮಳೆ ಬಂದಿಲ್ಲ ಅಂತ ಸುದ್ದಿ ಹರಿದಾಡುತ್ತಿತ್ತು ಮತ್ತು  ಸೂಳೆಕೆರೆ ತುಂಬಿ ಕೋಡಿ ಬಿದ್ದಿದೆ ಅಂತೆಲ್ಲ Post ನೋಡಿ ಬೆಂಗಳೂರಿಂದ ಬರುವಾಗ ಚಿತ್ರದುಗ೯ ಮಾಗ೯ವಾಗಿ ಚನ್ನಗಿರಿ ತಲುಪಿ ಸೂಳೆಕೆರೆ ನೋಡಲು ಹೋಗಿದ್ದೆ.  11ನೇ ಶತಮಾನದಲ್ಲಿ (1128ರಲ್ಲಿ)ಕೇವಲ 3 ವಷ೯ದಲ್ಲಿ ಈ ಕೆರೆ ನಿಮಾ೯ಣ ಮಾಡಿಸಿದ್ದು ಶಾಂತವ್ವ ಎಂಬ ರಾಜ ಕುಮಾರಿ ಅವಳು ಸ್ವಣ೯ವತಿ ಪಟ್ಟಣದ ದೊರೆ ವಿಕ್ರಮ ರಾಜನ ಮಗಳು, ಸಿದ್ದೇಶ್ವರ ಎಂಬ ಅನ್ಯ ಜಾತಿಯ ಯುವಕನೊ೦ದಿಗೆ ಗಾಂದವ೯ ವಿವಾಹ ಆಗುತ್ತಾಳೆ ಇದನ್ನ ಸಹಿಸದ ಮತ್ತು ಒಪ್ಪದ ಜನತೆ ಸೂಳೆ ಎಂದು ಮೂದಲಿಸುತ್ತಾರOತೆ ಈ ರೀತಿ ತನಗೆ ಬಂದ ಕಳಂಕ ಕಳೆಯಲು ಈ ಬೃಹತ್ ಕೆರೆ ತನ್ನ ಪತಿ ಸಿದ್ದೇಶ್ವರನ ಜೊತೆ ಸೇರಿ ನಿಮಿ೯ಸಿ ಕೆರೆಗೆ ಹಾರವಾದಳೆoಬ ಇತಿಹಾಸ ಇದೆ ಇದರಿಂದ ನೊಂದ ಪತಿ ಸಿದ್ಧೇಶ್ವರ ಕೂಡ ಎದುರಿನ ಗುಡ್ಡದಲ್ಲಿ ಜೀವ ತ್ಯಾಗ ಮಾಡುತ್ತಾನೆ ಈಗ ಅಲ್ಲಿ ಸಿದ್ದೇಶ್ವರ ದೇವಸ್ಥಾನವಿದೆ.   ಈ ಕೆರೆ ಈಗಲೂ ಸೂಳೆಕೆರೆ ಎಂದೆ ಹೆಸರಾಗಿದೆ ಈ

# ಜುಟ್ಟು ಕಾಳಿಂಗ ಸಪ೯ದ ಆಸ್ತಿತ್ವದ ಮಲೆನಾಡಿನ ಮಿಥ್ಯೆ#

  # ಕಾಳಿ೦ಗ ಸಪ೯ದಲ್ಲಿ ಜುಟ್ಟು ಕಾಳಿಂಗ ಸಪ೯ ಅಂತ ಇದೇ ಅನ್ನುವ ಯಾರು ನೋಡದ ಸಪ೯ದ ಅಸ್ತಿತ್ವ#    ಮಲೆನಾಡಿನ ಹಳ್ಳಿಗಳಲ್ಲಿ, ಅದು ಕಾಳಿ೦ಗ ಸಪ೯ದ ವಾಸಸ್ಥಳದ ಪರಿಸರದಲ್ಲಿ ಜುಟ್ಟು ಕಾಳಿಂಗ ಸಪ೯ ಇದೆ ಅನ್ನುವ ಮಾತು ಆಗಾಗ್ಗೆ ಕೇಳುತ್ತಿರುತ್ತೇವೆ. ಆದರೆ ಆ ರೀತಿಯ ಹಾವು ಇಲ್ಲ ಎಂದು ಹಾವಿನ ಬಗ್ಗೆ ಸಂಶೋದನೆ ಮಾಡುವವರು, ಅರಣ್ಯ ಇಲಾಖೆಯವರು, ಹಾವು ಹಿಡಿಯುವವರು ಖಡಾಖಂಡಿತವಾಗಿ ಹೇಳುತ್ತಾರಾದರು, ಈ ವದಂತಿ ಹೇಗೆ ಹರಡಿದೆ?.    ಇದು ಒಂದು ಊರು ಹಳ್ಳಿಯಲ್ಲ ನಾನು ನೋಡಿದಂತೆ ಮಹಾರಾಷ್ಟ್ರದ ರತ್ನಗಿರಿಯಿ೦ದ ಕೇರಳದ ಕಾಸರಗೋಡಿನ ತನಕ ಜುಟ್ಟು ಕಾಳಿಂಗದ ಅನೇಕ ರೋಚಕ ಕಥೆ ಕೇಳಿದ್ದೇನೆ.   ಪ್ರತ್ಯಕ್ಷ ನೋಡಿದವರು ತಾವು ಎನ್ನುವ ಅನೇಕರಲ್ಲಿ ಮಾತಾಡಿದ್ದೇನೆ ಆದರೆ ಅದು ನಂಬಲಹ೯ ಮಾಹಿತಿ ಅನಿಸಲಿಲ್ಲ, ಒಂದು ರೀತಿ ಕಾಲ್ಪನಿಕ ತ್ರಿಲ್ಲರ್ ಕಥೆ ಅಷ್ಟೇ ಅನ್ನಬಹುದು.    ಜಡೆ ಕಾಳಿಂಗ ಸಪ೯ಕ್ಕೆ ರೋಷ ಜಾಸ್ತಿ, ಹೆಡೆ ಮೇಲೆ ಕೂದಲಿನ ಜುಟ್ಟು ಇರುತ್ತೆ, ಮನುಷ್ಯರನ್ನ ಕಂಡರೆ ಓಡಿಸಿಕೊಂಡು ಬರುತ್ತೆ, ಅದರಿಂದ ತಪ್ಪಿಸಿಕೊಳ್ಳಲು ಒಂದೇ ದಾರಿ ಅದೇನೆಂದರೆ ತಗ್ಗಿನ ಪ್ರದೇಶದಲ್ಲಿ ಓಡುವುದು.     ಯಾಕೆ೦ದರೆ ಓಡಿಸಿಕೊಂಡು ಬರುವ ಜುಟ್ಟು ಕಾಳಿಂಗದ ಜುಟ್ಟು, ಇಳಿಜಾರಿನಲ್ಲಿ ಅದರ ತಲೆಯಿ೦ದ ಇಳಿಜಾರಿಗೆ ಸರಿಯುವುದರಿಂದ  ಕಣ್ಣಿನ ಮೇಲೆ ಕೂದಲ ಜುಟ್ಟು ಮುಚ್ಚುವುದರಿಂದ ಕಣ್ಣು ಕಾಣುವುದಿಲ್ಲ, ಆಗಲೇ ತಪ್ಪಿಸಿಕೊಳ್ಳಬೇಕು ಅಂತ ಬಿದನೂರು ನಗರ ಸಮೀಪದ ದೇವಗಂಗೆ ಎಂಬ ಕೆಳದಿ