Skip to main content

Blog number 1038. ಪ್ರವಾಸಿ ಕಂಡ ಇಂಡಿಯಾ ಪುಸ್ತಕದಲ್ಲಿನ ವೃತ್ತಾಂತ

#ಪ್ರವಾಸಿ ಕಂಡ ಇಂಡಿಯಾ ಪುಸ್ತಕದಲ್ಲಿ ಬುದ್ಧಿವಂತ ಬ್ರಾಹ್ಮಣ ಪುರೋಹಿತರ ಒಂದು ವೃತ್ತಾಂತವನ್ನ ಪ್ರವಾಸಿ ಎಬಿ ಡೂಬಾ ಬರೆದಿದ್ದಾರೆ ಓದಿ#
https://www.bookbrahma.com/book/pravasi-kanda-india-8-pustakagalu-seri

     18 ಅಥವಾ 19 ನೇ ಶತಮಾನದಲ್ಲಿ ಒಂದು ಊರಿನಲ್ಲಿ 11 ಜನ ಪುರೋಹಿತರು ಬರಗಾಲದ ಕಾರಣ ಉದ್ಯೋಗ ಅರಸಿಕೊಂಡು ಬೇರೆ ಊರಿಗೆ ಹೋಗುತ್ತಾರೆ, ಮಾಗ೯ದಲ್ಲಿ ಊಟ ಉಪಚಾರಕ್ಕಾಗಿ ಬೇಕಾದ ಆಹಾರ ಧಾನ್ಯಗಳನ್ನ ಕಟ್ಟಿಕೊಂಡು ತೆಗೆದು ಕೊಂಡು ಹೋಗುತ್ತಾರೆ.
  ಮುಂದಿನ ಊರು ತಲುಪಿ, ಒಲೆ ಹೂಡಿ, ಅಡುಗೆ ಮಾಡಲು ಹೊಸ ಮಡಿಕೆ ತರಲು ಊರ ಒಳಗೆ ಹೋಗುತ್ತಾರೆ. ಆದರೆ ಅವರ ದುರಾದೃಷ್ಟ ಇಡೀ ಊರೇ ಬರಗಾಲದಿಂದ ಗುಳೆ ಹೋಗಿರುತ್ತೆ, ಹೇಗೋ ಏನೋ ಒಬ್ಬ ಅಗಸ ಉಳಿದಿರುತ್ತಾನೆ ಅವನ ಹತ್ತಿರ ಇವರ ಅಡುಗೆಗೆ ಬೇಕಾದ ಹೊಸ ಮಡಿಕೆ ಕೇಳುತ್ತಾರೆ. ಆದರೆ ಅವನ ಹತ್ತಿರ ಹೊಸ ಮಡಕೆಗಳು ಇರುವುದಿಲ್ಲ. ಆದರೆ ಆತ ಬಳಸಿದ ಮಡಕೆಗಳನ್ನ ಇವರು ಕೇಳಿದರೂ ಆತ ಕೊಡುವುದಿಲ್ಲ ಕಾರಣ ಶೂದ್ರ ಬಳಸಿದ ಮಡಿಕೆ ಬ್ರಾಹ್ಮಣ ಬಳಸುವಂತಿಲ್ಲ ಬಳಸಿದರೆ ಅದು ನೀಡಿದವನಿಗೆ ಪಾಪ ಬರುತ್ತೆ ಅಂತ. ಬರಗಾಲದ ಊರಿನಲ್ಲಿ ಇದೆಲ್ಲ ಪಾಲಿಸಲು ಹೋದರೆ ಉಪವಾಸದಿಂದ ಸಾಯಬೇಕೆಂದು ಬಳಸಿದ ಮಡಕೆಯನ್ನ ಒತ್ತಾಯದಿಂದ ತರುತ್ತಾರೆ. ಇವರಲ್ಲಿನ ಒಬ್ಬ ಪುರೋಹಿತ ಇದು ಧಮ೯ ವಿರೋಧ ಅಂತ ಇವರು ತಯಾರಿಸಿದ ಅಡುಗೆ ನಿರಾಕರಿಸಿ ಉಪವಾಸ ಉಳಿಯುತ್ತಾನೆ.
 ಮರು ದಿನ ಮುಂದಿನ ಊರಿಗೆ ತಲುಪಿದಾಗ ಅಲ್ಲಿನ ಸ್ವಜಾತಿ ಬಾಂಧವರ ಎದುರು ಈ ವಿಚಾರ ಪ್ರಸ್ತಾಪ ಆಗಿ ಹಿಂದಿನ ದಿನ ಶೂದ್ರರು ಬಳಸಿದ ಮಡಕೆಯಲ್ಲಿ 10 ಜನ ಪುರೋಹಿತರು ಅಡುಗೆ ತಯಾರಿಸಿ ಊಟ ಮಾಡಿದ್ದರಿಂದ ಧಮ೯ ವಿರೋಧಿ ಕಾಯ೯ ನಡೆಸಿ ಜಾತಿ ಭ್ರಷ್ಟರಾಗಿದ್ದಾರೆಂದು ಈ ಅಡುಗೆ ಬಳಸದೆ ಉಪವಾಸ ಉಳಿದ ಪುರೋಹಿತ ದೂರುತ್ತಾನೆ.
  ನಂತರ ಉಳಿದ ಬುದ್ಧಿವಂತ 10 ಬ್ರಾಹ್ಮಣರು ಹಿಂದಿನ ದಿನ ತಾವು ಎಷ್ಟು ತಡೆದರೂ ಕೇಳದೆ ಈಗ ದೂರು ನೀಡುತ್ತಿರುವವನೆ ಅಗಸ ಬಳಸಿದ ಮಡಕೆಯಲ್ಲಿ ಅಡುಗೆ ಮಾಡಿ ಊಟ ಮಾಡಿದ ಎಂದು, ತಾವು ಪರಿಪರಿ ಆಗಿ ಶಾಸ್ತ್ರ ನಿಷೇಧ ವಿವರಿಸಿದರೂ ಕೇಳಲಿಲ್ಲ ಎಂದಾಗ ಹತ್ತು ಜನರ ಒಗ್ಗಟ್ಟಿನ ಸಾಕ್ಷದ ಎದುರು ನಿಜ ಶಾಸ್ತ್ರ ನಿಷ್ಠ ಬ್ರಾಹ್ಮಣನ ವಾದ ಬಿದ್ದು ಹೋಗಿ ಅವನನ್ನ ಧಮ೯ ವಿರೋಧಿ ಎಂದು ಜಾತಿಯಿಂದ ಬಹಿಷ್ಕಾರ ಹಾಕಿ ಊರಿಂದ ಓಡಿಸಿ ಬಿಡುತ್ತಾರೆ.

Comments

Popular posts from this blog

# ಜುಟ್ಟು ಕಾಳಿಂಗ ಸಪ೯ದ ಆಸ್ತಿತ್ವದ ಮಲೆನಾಡಿನ ಮಿಥ್ಯೆ#

  # ಕಾಳಿ೦ಗ ಸಪ೯ದಲ್ಲಿ ಜುಟ್ಟು ಕಾಳಿಂಗ ಸಪ೯ ಅಂತ ಇದೇ ಅನ್ನುವ ಯಾರು ನೋಡದ ಸಪ೯ದ ಅಸ್ತಿತ್ವ#    ಮಲೆನಾಡಿನ ಹಳ್ಳಿಗಳಲ್ಲಿ, ಅದು ಕಾಳಿ೦ಗ ಸಪ೯ದ ವಾಸಸ್ಥಳದ ಪರಿಸರದಲ್ಲಿ ಜುಟ್ಟು ಕಾಳಿಂಗ ಸಪ೯ ಇದೆ ಅನ್ನುವ ಮಾತು ಆಗಾಗ್ಗೆ ಕೇಳುತ್ತಿರುತ್ತೇವೆ. ಆದರೆ ಆ ರೀತಿಯ ಹಾವು ಇಲ್ಲ ಎಂದು ಹಾವಿನ ಬಗ್ಗೆ ಸಂಶೋದನೆ ಮಾಡುವವರು, ಅರಣ್ಯ ಇಲಾಖೆಯವರು, ಹಾವು ಹಿಡಿಯುವವರು ಖಡಾಖಂಡಿತವಾಗಿ ಹೇಳುತ್ತಾರಾದರು, ಈ ವದಂತಿ ಹೇಗೆ ಹರಡಿದೆ?.    ಇದು ಒಂದು ಊರು ಹಳ್ಳಿಯಲ್ಲ ನಾನು ನೋಡಿದಂತೆ ಮಹಾರಾಷ್ಟ್ರದ ರತ್ನಗಿರಿಯಿ೦ದ ಕೇರಳದ ಕಾಸರಗೋಡಿನ ತನಕ ಜುಟ್ಟು ಕಾಳಿಂಗದ ಅನೇಕ ರೋಚಕ ಕಥೆ ಕೇಳಿದ್ದೇನೆ.   ಪ್ರತ್ಯಕ್ಷ ನೋಡಿದವರು ತಾವು ಎನ್ನುವ ಅನೇಕರಲ್ಲಿ ಮಾತಾಡಿದ್ದೇನೆ ಆದರೆ ಅದು ನಂಬಲಹ೯ ಮಾಹಿತಿ ಅನಿಸಲಿಲ್ಲ, ಒಂದು ರೀತಿ ಕಾಲ್ಪನಿಕ ತ್ರಿಲ್ಲರ್ ಕಥೆ ಅಷ್ಟೇ ಅನ್ನಬಹುದು.    ಜಡೆ ಕಾಳಿಂಗ ಸಪ೯ಕ್ಕೆ ರೋಷ ಜಾಸ್ತಿ, ಹೆಡೆ ಮೇಲೆ ಕೂದಲಿನ ಜುಟ್ಟು ಇರುತ್ತೆ, ಮನುಷ್ಯರನ್ನ ಕಂಡರೆ ಓಡಿಸಿಕೊಂಡು ಬರುತ್ತೆ, ಅದರಿಂದ ತಪ್ಪಿಸಿಕೊಳ್ಳಲು ಒಂದೇ ದಾರಿ ಅದೇನೆಂದರೆ ತಗ್ಗಿನ ಪ್ರದೇಶದಲ್ಲಿ ಓಡುವುದು.     ಯಾಕೆ೦ದರೆ ಓಡಿಸಿಕೊಂಡು ಬರುವ ಜುಟ್ಟು ಕಾಳಿಂಗದ ಜುಟ್ಟು, ಇಳಿಜಾರಿನಲ್ಲಿ ಅದರ ತಲೆಯಿ೦ದ ಇಳಿಜಾರಿಗೆ ಸರಿಯುವುದರಿಂದ  ಕಣ್ಣಿನ ಮೇಲೆ ಕೂದಲ ಜುಟ್ಟು ಮುಚ್ಚುವುದರಿಂದ ಕಣ್ಣು ಕಾಣುವುದಿಲ್ಲ, ಆಗಲೇ ತಪ್...

ಶರಾವತಿ ನದಿ ಉಗಮ ಸ್ಥಾನ ಅಂಬುತೀಥ೯.

ಇಡೀ ರಾಜ್ಯಕ್ಕೆ ವಿದ್ಯುತ್ ನೀಡುವ ಶರಾವತಿ ನದಿಯ ಉಗಮ ಸ್ಥಾನ ಅಂಬುತೀಥ೯, ಆರಗ ಸಮೀಪದ ತೀಥ೯ಳ್ಳಿ ತಾಲ್ಲೂಕಿನಲ್ಲಿದೆ( ಶಿವಮೊಗ್ಗ ಜಿಲ್ಲೆ)    ಅಂಬು ತೀಥ೯ದಲ್ಲಿ ಶ್ರೀ ರಾಮ ವನವಾಸದಲ್ಲಿದ್ದಾಗ ಸೀತಾ ಮಾತೆಗೆ ಪೂಜೆಗೆ ನೀರು ಸಿಗದಿದ್ದಾಗ ರಾಮ ತನ್ನ ಅಂಬಿನಿಂದ (ಬಿಲ್ಲಿನ ಬಾಣದಿಂದ) ನೆಲ ಸೀಳಿ ನೀರು ತಂದರೆ೦ದು ರಾಮಾಯಣದಲ್ಲಿ ಉಲ್ಲೇಖವಿದೆ, ಹಾಗಾಗಿ ಈ ಸ್ಥಳಕ್ಕೆ ಅಂಬುತೀಥ೯ ಎಂಬ ಹೆಸರು ಬ೦ತು ಎಂಬುದು ಸ್ಥಳ ಪುರಾಣ.    ಇಲ್ಲಿ ಸಣ್ಣ ತೊರೆಯಾಗಿ ಹುಟ್ಟುವ ನದಿ ಬಾಣದಿಂದ ಹುಟ್ಟಿದ್ದರಿಂದ ಶರಾವತಿ ಎ೦ಬ ಹೆಸರು ಪಡೆದು ಪೂವ೯ಕ್ಕೆ ಹರಿದು ನಂತರ ಪಶ್ಚಿಮ ಮುಖವಾಗಿ ತಿರುಗಿ ಹೊಸನಗರ ತಾಲ್ಲೂಕನ್ನ ದಾಟಿ ಸಾಗರ ತಾಲ್ಲೂಕಿನ ಜೋಗದಲ್ಲಿ ಜಲಪಾತವಾಗಿ ದಟ್ಟ ಕಾನನದ ಕಣಿವೆ ಮುಖಾಂತರ ಹರಿದು ಹೊನ್ನಾವರದಲ್ಲಿ ಅರಬ್ಬಿ ಸಮುದ್ರ ಸೇರುತ್ತದೆ.   ಈ ನದಿಗೆ ಮೊದಲಿಗೆ ಹೀರೇ ಬಾಸ್ಕರ ಎಂಬಲ್ಲಿ ನಂತರ ಲಿಂಗನಮಕ್ಕಿಯಲ್ಲಿ ಆಣೆಕಟ್ಟು ಕಟ್ಟಿ ರಾಜ್ಯಕ್ಕೆ ಜಲ ವಿದ್ಯುತ್ ನೀಡುತ್ತಿರುವುದರಿಂದ ಲಕ್ಷಾಂತರ ಎಕರೆ ಕಾಡು, ಜಮೀನು ಅನೇಕ ಊರು ಮುಳುಗಡೆ ಆಯಿತು ಸಾವಿರಾರು ಕುಟುಂಬಗಳು ಸಂತ್ರಸ್ಥರಾದದ್ದು ಇತಿಹಾಸ.    ಈ ನದಿ ಜೋಗದಲ್ಲಿ ದುಮುಕುವ ಜಲಪಾತ ವಿಶ್ವದ ಸುಂದರ ಜಲಪಾತದಲ್ಲಿ ಒಂದಾಗಿದೆ.    ಹಾಗಾಗಿ ಶರಾವತಿ ನದಿಯ ಉಗಮ ಸ್ಥಾನಕ್ಕೆ ಮಹತ್ವವಿದೆ, ಒಮ್ಮೆಯಾದರೂ ಈ ನದಿ ಮೂಲ ಸಂದಶಿ೯ಸಬೇಕು ಆದರೆ ಇಲ್ಲಿ ಶರಾವತಿ ವ...

HISTORICAL SAGAR MARIKAMBA JATRA.ಐತಿಹಾಸಿಕ ಸಾಗರದ ಮಾರಿಕಾಂಬಾ ಜಾತ್ರೆ

     ಸಾಗರದ ಮಾರಿಕಾಂಬಾ ಜಾತ್ರೆ ಐತಿಹಾಸಿಕ ಚರಿತ್ರೆಯಲ್ಲಿ ದಾಖಲೆ.        ಕನಾ೯ಟಕ ರಾಜ್ಯದಲ್ಲಿ ಎರೆಡು ಮಾರಿಕಾಂಬಾ ಜಾತ್ರೆಗಳು ಪ್ರಸಿದ್ಧಿ ಪಡೆದಿದೆ ಅದು ಉತ್ತರ ಕನ್ನಡ ಜಿಲ್ಲೆಯ ಸಿಸಿ೯ಯದ್ದು ಮತ್ತು ಶಿವಮೊಗ್ಗ ಜಿಲ್ಲೆಯ ಸಾಗರದ್ದು.    ಪ್ರತಿ ಮೂರು ವಷ೯ಕೆ ಈ ಜಾತ್ರೆ ಆಚರಿಸಲಾಗುತ್ತೆ ಶೂದ್ರ ವಗ೯ದವರು ಭಯ ಮತ್ತು ಭಕ್ತಿಯಿಂದ ಕುರಿ ಕೋಳಿ ಬಲಿ ನೀಡುವ ಪರಂಪರೆ ಇದೆ.ಮಂಗಳವಾರ ಮೇಲು ಜಾತಿಯ ಜನರ ಪೂಜೆ ದೇವಿಯ ತವರು ಮನೆಯಲ್ಲಿ ನಡೆಯುತ್ತದೆ ನಂತರ ರಾತ್ರಿ ಗಂಡನ ಸೇರುವ ಮಾರಿಗೆ ಶೂದ್ರರ ಪೂಜೆ, ಬಲಿ ಮೀಸಲು.    ಮೊದಲೆಲ್ಲ ಮಾರಿಯಮ್ಮನಿಗೆ ಕೊಣನ ಬಲಿ ನೀಡುತ್ತಿದ್ದರು ಈಗ ಇದು ಕಾನೂನು ಪ್ರಕಾರ ನಿಷಿದ್ಧ ಆದರೆ ಈ ಆಚಾರಣೆ ಗುಪ್ತವಾಗಿ ಬೇರೆ ಕಡೆ ನಡೆಸಲಾಗುತ್ತೆ ಅನ್ನುತ್ತಾರೆ.    ಸಾಗರದ ಮಾರಿಕಾ0ಬಾ ಜಾತ್ರೆ ಜಾತ್ರೆಯಿ೦ದ ಜಾತ್ರೆಗೆ ಅದೂರಿಯಾಗಿ ನಡೆಯುತ್ತದೆ, ಕೋಟ್ಯಾoತರ ಹಣದ ವಹಿವಾಟು ಕೂಡ, ಮೊದಲೆಲ್ಲ ಹಣದ ಅಪರಾ ತಪರ ಆಗುತ್ತಿದೆ ಎಂಬ ಗುಲ್ಲು ಇತ್ತು ಆದರೆ ಈಗೆಲ್ಲ ಪಾರದಶ೯ಕವಾಗಿದೆ ಆದರೂ ಈ ಬಾರಿಯ 2017ರ ಜಾತ್ರೆಯಲ್ಲಿ ಅವ್ಯವಹಾರದ ಆರೋಪ ಮಾಡಲಾಗಿದೆ ಈ ವಿಚಾರ ಇಲ್ಲಿ ಅಪ್ರಸ್ತುತ ಆದರೂ ಈ ಬಗ್ಗೆ ಬರೆಯಲು ಕಾರಣ ಕೆಳದಿ ಅರಸರ ಕಾಲದಲ್ಲಿ ಅಂದರೆ 350 ವಷ೯ದ ಹಿಂದೆಯೂ ರಾಜರಿಗೆ ಸಾಗರದ ಮಾರಿಕಾಂಬಾ ಜಾತ್ರೆಯಲ್ಲಿ ಸಾವ೯ಜನಿಕರಿಂದ ಸಂಗ್ರಹಿಸಿದ ಜಾತ...