Skip to main content

Blog number 1041. ಆಹಮ್ಮದ್ ಆಲೀ ಖಾನ್ ಸಾಹೇಬರು ಮೂರು ವರ್ಷದ ಹಿಂದೆ ಇದೇ ದಿನ ನಮ್ಮಲ್ಲಿಗೆ ಬಂದಿದ್ದರು ಅವರು ಈಗ ಇಲ್ಲ ಅವರ ನೆನಪು ನಾವು ಮರೆತಿಲ್ಲ

   ನಮ್ಮ ಹೊಸ ಕಚೇರಿಗೆ ಆಗಮಿಸಿದ ನನ್ನ ನೆಚ್ಚಿನ ನಾಯಕರಾದ ಆಹಮದ್ ಆಲೀ ಖಾನ್ ಸಾಹೇಬರ ನೆನಪುಗಳು
  28 ಅಕ್ಟೋಬರ್ 2019 ರಂದು ಸಂಜೆ ಖಾನ್ ಸಾಹೇಬರು ಅವರ ಮಗ ಮತ್ತು ನನ್ನ ಕ್ಲಾಸ್ ಮೇಟ್ ಮೋಹಿಸಿನ್ ಆಲೀ ಖಾನ್ ಮತ್ತು ಮೊಹಿಸಿನ್ಅವರ ಮಗನ ಜೊತೆ ಬಂದಿದ್ದರು.
   ಸಾಗರದ ಆಹಮದ್ ಆಲೀ ಖಾನ್ ಸಾಹೇಬರ ಜೀವನದ ಬಗ್ಗೆ ಬರೆದರೆ ಒಂದು ಸ್ವಾರಸ್ಯಕರವಾದ ಗ್ರ೦ಥವೇ ಆದೀತು, 1978-79ರಲ್ಲಿ ಸಾಗರದ ನಿಮ೯ಲ ಹೈಸ್ಕೂಲ್ ಎದರು ಜನತಾ ಪಕ್ಷದ ಸಾಗರದ ಮಾಜಿ ಶಾಸಕರಾದ ಕಾಗೋಡು ತಿಮ್ಮಪ್ಪ ಜನತಾ ಪಕ್ಷ ತೊರೆದು ಕಾ೦ಗ್ರೇಸ್ ಸೇರುವ ಸಭೆ ಇದೆ ಅಂತ ಸಾವ೯ಜನಿಕ ಪ್ರಕಟನೆ ಕೇಳಿ ಮುನ್ಸಿಪಲ್ ಹೈಸ್ಕೂಲ್ ನ 8ನೇ ತರಗತಿಗೆ ಚಕ್ಕರ್ ಹೊಡೆದು ಈ ಸಭೆ ನೋಡಲು ಹೋಗಿದ್ದೆ, ಅಲ್ಲಿ ಕಾಗೋಡು ಜನತಾ ಪಕ್ಷದವರು ನನ್ನ ಬೆನ್ನಿಗೆ ಚೂರಿ ಹಾಕಿದ್ದಾರೆ ಅಂತ ಭಾಷಣ ಮಾಡಿದ್ದು ಮತ್ತು ಖಾನ್ ಸಾಹೇಬರು ಅವರನ್ನ ಕಾಂಗ್ರೇಸ್ ಗೆ ಸೇರಿಸಿಕೊಂಡ ಕ್ಷಣ ಜನರ ಚಪ್ಪಾಳೆ ಅಭೂತ ಪೂವ೯ ಬೆಂಬಲದ ಕ್ಷಣ ಅವತ್ತು 15 ವಷ೯ ಪ್ರಾಯದ ನನ್ನ ಮೆದುಳಲ್ಲಿ ಅಚ್ಚಳಿಯದೆ ಉಳಿದಿದೆ.
  ಆಗ ದೇಶದ ಪ್ರದಾನಿ ಇಂದಿರಾ ಗಾಂಧಿ ನನ್ನ ಮೂರನೆ ಮಗ ಎನ್ನುತ್ತಿದ್ದ ಮಡಿಕೆರೆಯ ಎಪ್.ಎಂ.ಖಾನ್ ಮತ್ತು ಸಾಗರದ  ಆಹಮದಾಲಿ ಖಾನ್ ಖಾಸಾ ಖಾಸಾ, ಗುಂಡುರಾವ್ ರನ್ನ ಮುಖ್ಯಮಂತ್ರಿ ಮಾಡಿದ್ದರಿಂದ ಸೊರಬದ ಬಂಗಾರಪ್ಪ ದೂರ ಆಗಿದ್ದರು ಆಗ ಸಾಗರದ ಶಾಸಕರು ಕಾ೦ಗ್ರೇಸ್ ನ ಎಲ್.ಟಿ. ತಿಮ್ಮಪ್ಪ ಹೆಗ್ಗಡೆ ಚುನಾವಣೆಯಲ್ಲಿ ಜನತಾ ಪಕ್ಷದ ಕಾಗೋಡು ತಿಮ್ಮಪ್ಪರನ್ನ ಸೋಲಿಸಿದ್ದರು.
  ಬಂಗಾರಪ್ಪರನ್ನ ಕೌ೦ಟರ್ ಮಾಡಲೆಂದೇ  ಕಾಗೋಡರನ್ನ ಕಾಂಗ್ರೆಸ್ ಗೆ ಸೇರಿಸಿ, ವಿಧಾನ ಪರಿಷತ್ ಸದಸ್ಯರನ್ನ ಮಾಡಿ PWD ಮಂತ್ರಿ ಮಾಡುವ ಮೂಲಕ ರಾಜಕಾರಣದ ಗಾಡ್ ಪಾದರ್ ಈ ಆಹಮದ್ ಆಲೀ ಖಾನ್ ಸಾಹೇಬರು ಮತ್ತು ಅವತ್ತಿನ ಸಭೆಯ ಉದ್ದೇಶ ಮತ್ತು ಅದರ ರೂವಾರಿ ಖಾನ್ ಸಾಹೇಬರು.
  ಇದರಿಂದ ಕಾಗೋಡರ ರಾಜಕೀಯ ಜೀವನ, ಶಾಂತವೇರಿ ಗೋಪಾಲ ಗೌಡರ ಸಮಾಜ ವಾದದ ಮೂಸೆಯಿಂದ ಬಂದ ಕಾಗೋಡು ಬಂಗಾರಪ್ಪ ಬದ್ದ ಶತ್ರುಗಳಾಗಿದ್ದು ಇತಿಹಾಸ.
  ಈ ಎಲ್ಲಾ ಕಾರಣದಿಂದ ಖಾನ್ ಸಾಹೇಬರು ವಿದಾನ ಪರಿಷತ್ ಸದಸ್ಯರಾಗಿ ಮಂತ್ರಿಗಳಾಗುವ ಅಹ೯ತೆ ಇದ್ದರೂ ಸಕಾ೯ರದಲ್ಲಿ ನಿಗಮದ ಅಧ್ಯಕ್ಷರೂ ಆಗಿ ಮಾಡದಿದ್ದು ದುರಂತ.
   ಈ ಇಳಿ ವಯಸ್ಸಿನಲ್ಲಿ ಶಿವಮೊಗ್ಗದಿಂದ ಸಾಗರ ತೆರಳುವ ಮಾಗ೯ ಮಧ್ಯದಲ್ಲಿ ಬ೦ದವರನ್ನ ಒತ್ತಾಯದಿಂದ ನನ್ನ ಕುಚಿ೯ಯಲ್ಲಿ ಕೂರಿಸಿ ಶಾಲು ಹೊದಿಸಿ ಸನ್ಮಾನ ಮಾಡಿ ನಾವೆಲ್ಲ ಸಂತೋಷಪಟ್ಟಿವು, ನಿಜಕ್ಕೂ ಈ ಅವಕಾಶ ಪಡೆದ ನಾವು ದನ್ಯರು ನಮ್ಮ ನೂತನ ಉದ್ದಿಮೆಗೆ ಶುಭ ಹಾರೈಸಿದರು.
   ಈಗ ಖಾನ್ ಸಾಹೇಬರು ಇಲ್ಲ ನಾವು ಅವರನ್ನು ಮರೆತಿಲ್ಲ

Comments

Popular posts from this blog

Blog number 1782. ಅರಳಸುರಳಿಯ ರಾಘವೇಂದ್ರ ಕೇಕೋಡರ ಕುಟುಂಬದ ತಪ್ಪು ನಿರ್ದಾರದ ದುರಂತ.

#ತೀರ್ಥಹಳ್ಳಿಯ_ಅರಳಸುರಳಿಯ_ಒಂದೇ_ಕುಟುಂಬದ_ನಾಲ್ವರು_ಮೃತರಾದ_ರಹಸ್ಯವೇನು? #ಈ_ಬಗ್ಗೆ_ಆ_ಊರಿನ_ಸಮೀಪದ_ಈ_ಕುಟುಂಬದ_ಪರಿಚಯ_ಇರುವವರಿಗೆ_ವಿಚಾರಿಸಿದ್ದೆ. #ಅವರು_ಈ_ಘಟನೆ_ಬಗ್ಗೆ_ಸವಿಸ್ತಾರವಾಗಿ_ಲಿಖಿತ_ಲೇಖನ_ಬರೆದಿದ್ದಾರೆ. #ಅವರ_ವಿನಂತಿ_ಅವರ_ಹೆಸರು_ಬಹಿರಂಗಗೊಳಿಸ_ಬಾರದು. #ಆದ್ದರಿಂದ_ಈ_ಲೇಖನ_ಪೋಸ್ಟ್_ಮಾಡಬಾರದೆಂದಿದ್ದೆ_ಆದರೆ_ಇದು_ಮಲೆನಾಡಿಗರ_ಮನೆ_ಮನೆಯ_ಕಥೆ #ಆದ್ದರಿಂದ_ಇಲ್ಲಿ_ಪೋಸ್ಟ್_ಮಾಡಿದೆ.    ಇಲ್ಲಿ ತಪ್ಪು ಯಾರದ್ದೂ ಇಲ್ಲ... ಪಶ್ಚಾತ್ತಾಪದ ಪ್ರಾಯಶ್ಚಿತ ಕೇಳಲು ಅವರಾರು ಇಲ್ಲ .....ಆದರೆ ಈ ರೀತಿ ಜೀವ ತ್ಯಾಗ ಮಾಡುವ ಆತುರದ ಕೆಟ್ಟ ನಿರ್ದಾರ ಮಾತ್ರ ಸರಿ ಅಲ್ಲ.     ಇವರ ಅಣ್ಣ ಆರ್.ಎಸ್.ಎಸ್. ಪ್ರಚಾರಕರಾಗಿ ದೆಹಲಿಯಲ್ಲಿ ಏಳು ವಷ೯ ಮೋದಿ ಜೊತೆ ಒಂದೇ ಕೋಣೆ ಹಂಚಿಕೊಂಡವರು, ಇನ್ನೊಬ್ಬ ಸಹೋದರ ಮೂಳೆ ತಜ್ಞರಾಗಿ ಶಿವಮೊಗ್ಗದಲ್ಲಿ ಆಸ್ಪತ್ರೆ ಮಾಡಿಕೊಂಡಿದ್ದಾರೆ.   #ದೀರ್ಘವಾದರೂ_ಪೂರ್ಣ_ಲೇಖನ_ಓದಿ   #ಹೀಗೊಂದು_ಸುಕುಟುಂಬ_ಆತ್ಮಾಘಾತ_ಮತ್ತು_ತದನಂತರದ_ಸಹಾಗಮನ.... ಮೂಡಣದಲ್ಲಿ ರವಿ ಮೂಡಲು ಅಣಿ ಯಾಗುತ್ತಿಧ್ದ .. ಹಾದಿಗಣಪತಿ ದೇವರು ಗರ್ಭಗುಡಿಯ ನಂದಾದೀಪದ ಮಂದ ಬೆಳಕಿನಲ್ಲಿ ತನ್ನ ಗುಡಿಯ ಎದುರಿನ ತಗ್ಗಿನಲ್ಲಿದ್ದ  ರಾಘವೇಂದ್ರ ಕೇಕೋಡರ ಮನೆಯನ್ನು ಎವೆಯಕ್ಕದೇ ನೋಡುತ್ತಲಿದ್ದ... ಊರ ಎಲ್ಲಾ ಮನೆಯಂತೆ ಆ ಮನೆಯಲ್ಲೂ ಆ ಬೆಳಗಿನಲ್ಲಿ ಮನೆಯೊಡತಿ ನಾಗರತ್ನಕ್ಕ ಆ ಸಮಯದಲ್ಲಿ ದೇವರಿಗೆ ದೀಪ ಹಚ್ಚಿ ಹೊಸ್ತಿಲು ಪೂಜೆ ಮಾಡ

Blog number 1037. ರಾಜಕುಮಾರಿ ಶಾಂತವ್ವ ಮತ್ತು ದಲಿತ ಯುವಕ ಸಿದ್ದೇಶ್ವರರ ಅಮರ ಪ್ರೇಮದ ಸ್ಮಾರಕ, ಅನ್ಯ ಜಾತಿ ವಿವಾಹವಾದ್ದರಿಂದ ರಾಜಕುಮಾರಿಗೆ ಸೂಳೆ ಪಟ್ಟ ನೀಡಿದ ಸಮಾಜ. ಸಮಾಜದ ಒಳಿತಿಗಾಗಿ ಶಾಂತವ್ವ ಕಟ್ಟಿಸಿದ ಬೃಹತ್ ಕೆರೆಗೆ ಜನ ಕರೆದದ್ದು ಸೂಳೆ ಕಟ್ಟಿಸಿದ ಕೆರೆ ಅದೇ ಸೂಳೆಕೆರೆ / ಶಾಂತಿ ಸಾಗರ

# ಸೂಳೆಕೆರೆ (ಶಾಂತಿ ಸಾಗರ) ಅಂತರ್ ಜಾತಿ ಪ್ರೇಮ ವಿವಾಹದ ದುರOತ ಕಥೆ. #ಅಕ್ಟೋಬರ್ 2019 ರಲ್ಲಿ ತುಂಬಿ ತುಳುಕಿತ್ತು.  ಚಿತ್ರದುಗ೯, ದಾವಣಗೆರೆ ಬಳ್ಳಾರಿ ಮುಂತಾದ ಮಳೆ ಕಡಿಮೆ ಆಗುತ್ತಿದ್ದ ಜಿಲ್ಲೆಗಳಲ್ಲಿ ಅದೂ ಅಕ್ಟೋಬರ್ ತಿಂಗಳ 2019 ರಲ್ಲಿ  ಬಂದಿದ್ದ ಬಾರಿ ಮಳೆ ಎಲ್ಲಾ ಕೆರೆ, ಹೊಂಡಗಳು ತುಂಬಿ ತುಳುಕಿದೆ, ಸಾಮಾಜಿಕ ಜಾಲ ತಾಣದಲ್ಲಿ 40 ವಷ೯ದಲ್ಲಿ ಇಂತ ಮಳೆ ಬಂದಿಲ್ಲ ಅಂತ ಸುದ್ದಿ ಹರಿದಾಡುತ್ತಿತ್ತು ಮತ್ತು  ಸೂಳೆಕೆರೆ ತುಂಬಿ ಕೋಡಿ ಬಿದ್ದಿದೆ ಅಂತೆಲ್ಲ Post ನೋಡಿ ಬೆಂಗಳೂರಿಂದ ಬರುವಾಗ ಚಿತ್ರದುಗ೯ ಮಾಗ೯ವಾಗಿ ಚನ್ನಗಿರಿ ತಲುಪಿ ಸೂಳೆಕೆರೆ ನೋಡಲು ಹೋಗಿದ್ದೆ.  11ನೇ ಶತಮಾನದಲ್ಲಿ (1128ರಲ್ಲಿ)ಕೇವಲ 3 ವಷ೯ದಲ್ಲಿ ಈ ಕೆರೆ ನಿಮಾ೯ಣ ಮಾಡಿಸಿದ್ದು ಶಾಂತವ್ವ ಎಂಬ ರಾಜ ಕುಮಾರಿ ಅವಳು ಸ್ವಣ೯ವತಿ ಪಟ್ಟಣದ ದೊರೆ ವಿಕ್ರಮ ರಾಜನ ಮಗಳು, ಸಿದ್ದೇಶ್ವರ ಎಂಬ ಅನ್ಯ ಜಾತಿಯ ಯುವಕನೊ೦ದಿಗೆ ಗಾಂದವ೯ ವಿವಾಹ ಆಗುತ್ತಾಳೆ ಇದನ್ನ ಸಹಿಸದ ಮತ್ತು ಒಪ್ಪದ ಜನತೆ ಸೂಳೆ ಎಂದು ಮೂದಲಿಸುತ್ತಾರOತೆ ಈ ರೀತಿ ತನಗೆ ಬಂದ ಕಳಂಕ ಕಳೆಯಲು ಈ ಬೃಹತ್ ಕೆರೆ ತನ್ನ ಪತಿ ಸಿದ್ದೇಶ್ವರನ ಜೊತೆ ಸೇರಿ ನಿಮಿ೯ಸಿ ಕೆರೆಗೆ ಹಾರವಾದಳೆoಬ ಇತಿಹಾಸ ಇದೆ ಇದರಿಂದ ನೊಂದ ಪತಿ ಸಿದ್ಧೇಶ್ವರ ಕೂಡ ಎದುರಿನ ಗುಡ್ಡದಲ್ಲಿ ಜೀವ ತ್ಯಾಗ ಮಾಡುತ್ತಾನೆ ಈಗ ಅಲ್ಲಿ ಸಿದ್ದೇಶ್ವರ ದೇವಸ್ಥಾನವಿದೆ.   ಈ ಕೆರೆ ಈಗಲೂ ಸೂಳೆಕೆರೆ ಎಂದೆ ಹೆಸರಾಗಿದೆ ಈ

# ಜುಟ್ಟು ಕಾಳಿಂಗ ಸಪ೯ದ ಆಸ್ತಿತ್ವದ ಮಲೆನಾಡಿನ ಮಿಥ್ಯೆ#

  # ಕಾಳಿ೦ಗ ಸಪ೯ದಲ್ಲಿ ಜುಟ್ಟು ಕಾಳಿಂಗ ಸಪ೯ ಅಂತ ಇದೇ ಅನ್ನುವ ಯಾರು ನೋಡದ ಸಪ೯ದ ಅಸ್ತಿತ್ವ#    ಮಲೆನಾಡಿನ ಹಳ್ಳಿಗಳಲ್ಲಿ, ಅದು ಕಾಳಿ೦ಗ ಸಪ೯ದ ವಾಸಸ್ಥಳದ ಪರಿಸರದಲ್ಲಿ ಜುಟ್ಟು ಕಾಳಿಂಗ ಸಪ೯ ಇದೆ ಅನ್ನುವ ಮಾತು ಆಗಾಗ್ಗೆ ಕೇಳುತ್ತಿರುತ್ತೇವೆ. ಆದರೆ ಆ ರೀತಿಯ ಹಾವು ಇಲ್ಲ ಎಂದು ಹಾವಿನ ಬಗ್ಗೆ ಸಂಶೋದನೆ ಮಾಡುವವರು, ಅರಣ್ಯ ಇಲಾಖೆಯವರು, ಹಾವು ಹಿಡಿಯುವವರು ಖಡಾಖಂಡಿತವಾಗಿ ಹೇಳುತ್ತಾರಾದರು, ಈ ವದಂತಿ ಹೇಗೆ ಹರಡಿದೆ?.    ಇದು ಒಂದು ಊರು ಹಳ್ಳಿಯಲ್ಲ ನಾನು ನೋಡಿದಂತೆ ಮಹಾರಾಷ್ಟ್ರದ ರತ್ನಗಿರಿಯಿ೦ದ ಕೇರಳದ ಕಾಸರಗೋಡಿನ ತನಕ ಜುಟ್ಟು ಕಾಳಿಂಗದ ಅನೇಕ ರೋಚಕ ಕಥೆ ಕೇಳಿದ್ದೇನೆ.   ಪ್ರತ್ಯಕ್ಷ ನೋಡಿದವರು ತಾವು ಎನ್ನುವ ಅನೇಕರಲ್ಲಿ ಮಾತಾಡಿದ್ದೇನೆ ಆದರೆ ಅದು ನಂಬಲಹ೯ ಮಾಹಿತಿ ಅನಿಸಲಿಲ್ಲ, ಒಂದು ರೀತಿ ಕಾಲ್ಪನಿಕ ತ್ರಿಲ್ಲರ್ ಕಥೆ ಅಷ್ಟೇ ಅನ್ನಬಹುದು.    ಜಡೆ ಕಾಳಿಂಗ ಸಪ೯ಕ್ಕೆ ರೋಷ ಜಾಸ್ತಿ, ಹೆಡೆ ಮೇಲೆ ಕೂದಲಿನ ಜುಟ್ಟು ಇರುತ್ತೆ, ಮನುಷ್ಯರನ್ನ ಕಂಡರೆ ಓಡಿಸಿಕೊಂಡು ಬರುತ್ತೆ, ಅದರಿಂದ ತಪ್ಪಿಸಿಕೊಳ್ಳಲು ಒಂದೇ ದಾರಿ ಅದೇನೆಂದರೆ ತಗ್ಗಿನ ಪ್ರದೇಶದಲ್ಲಿ ಓಡುವುದು.     ಯಾಕೆ೦ದರೆ ಓಡಿಸಿಕೊಂಡು ಬರುವ ಜುಟ್ಟು ಕಾಳಿಂಗದ ಜುಟ್ಟು, ಇಳಿಜಾರಿನಲ್ಲಿ ಅದರ ತಲೆಯಿ೦ದ ಇಳಿಜಾರಿಗೆ ಸರಿಯುವುದರಿಂದ  ಕಣ್ಣಿನ ಮೇಲೆ ಕೂದಲ ಜುಟ್ಟು ಮುಚ್ಚುವುದರಿಂದ ಕಣ್ಣು ಕಾಣುವುದಿಲ್ಲ, ಆಗಲೇ ತಪ್ಪಿಸಿಕೊಳ್ಳಬೇಕು ಅಂತ ಬಿದನೂರು ನಗರ ಸಮೀಪದ ದೇವಗಂಗೆ ಎಂಬ ಕೆಳದಿ