Skip to main content

Blog number 1044. ತೊಂದರೆ ಕೊಡುವವರೂ ಸಮಾಜದಲ್ಲಿರುವಂತೆ ಆಪತ್ಕಾಲದಲ್ಲಿ ಸಹಾಯ ಮಾಡುವ ದೈವ ಸಮಾನರೂ ಇರುತ್ತಾರೆ ಅಂತವರಲ್ಲಿ ಶಿವಮೊಗ್ಗದ ಪ್ರಖ್ಯಾತರಾದ ಮಧು ಲಾಯರ್, ರವಿಬೆಳೆಗೆರೆಯವರ ಪ್ರಾರ್ಥನಾ ಶಾಲೆ ಸಿಇಒ ಉಮೇಶ್ ಹೆಗ್ಗಡೆ, ಅಬ್ಬಲಗೆರೆ ಎಸ್ಸಾರ್ ಪೆಟ್ರೋಲ್ ಪಂಪ್ ಗಂಗಾದರ್ ಹಂದಿಗೋಳ್ ಮತ್ತು ಶಿವಮೊಗ್ಗ ಕೆ.ಎಸ್.ಎಫ್.ಸಿ. ಉದ್ಯೋಗಿ ಶಾಲಾ ಸಹಪಾಠಿ ದಾಸಕೊಪ್ಪ ನಾಗರಾಜ್ ರ ಉಪಕಾರ ಜೀವಮಾನದಲ್ಲಿ ಮರೆಯಲಾರೆ.

#ಶಿವಮೊಗ್ಗದ_ಪ್ರಖ್ಯಾತ_ವಕೀಲರಾದ_ಮದುಲಾಯರ್.

#ತೊಂದರೆ_ಕೊಡುವವರೂ_ಸಮಾಜದಲ್ಲಿ_ಇರುವಂತೆ_ಸಹಾಯ_ಮಾಡುವವರೂ_ಇರುತ್ತಾರೆ.

#ಜಿಲ್ಲಾಪಂಚಾಯತ್_ಸದಸ್ಯ_ಅವಧಿ_ಮುಗಿಯುವಾಗ_ಅಕ್ಷರಶಃ_ಪಾಪರ್_ಆಗಿದ್ದೆ.

#ಉಪಕಾರ_ಮಾಡಿದವರ_ಸ್ಮರಿಸಲೇ_ಬೇಕು

#ರವಿಬೆಳೆಗೆರೆಯ_ಪ್ರಾರ್ಥನಾ_ಶಾಲೆ_ಸಿಇಓ_ಉಮೇಶ್_ಹೆಗಡೆ.

#ಅಬ್ಬಲಗೆರೆಯ_ಪೆಟ್ರೋಲ್_ಬಂಕ್_ಮಾಲಿಕರಾದ_ಗಂಗಾದರ್_ಹಂದಿಗೋಳ್

#ದಾಸಕೊಪ್ಪ_ನಾಗರಾಜ್_ಕೆ_ಎಸ್_ಎಪ್_ಸಿ_ಶಿವಮೊಗ

#ಆಪತ್_ಕಾಲದಲ್ಲಿ_ಆಪತ್ಬಾ೦ದವರ_ನೆನಪಿನ_ಆಪ್ತ_ಲೇಖನ_ಪುನಃ_ಪುನಃ_ಓದುವಂತೆ_ಮಾಡುತ್ತದೆ.

#ಸಹಾಯ_ಪಡೆದವರೂ_ಗೆಳೆಯರೂ_ಹಣ_ಅಧಿಕಾರ_ಕಳೆದುಕೊಂಡ_ಮಿತ್ರನಿಂದ_ದೂರವಾಗಿದ್ದ_ಕಾಲ

  ಶಿವಮೊಗ್ಗದ ಪ್ರಖ್ಯಾತ  ಮದು ಲಾಯರ್  ಅವರ FBಯಲ್ಲಿ ತಮ್ಮ ಮತ್ತು ತಮ್ಮ ಶ್ರೀಮತಿಯೊಂದಿಗಿನ ಬಾವ ಚಿತ್ರ ಹಾಕಿದ್ದು ನೋಡಿ ನನ್ನ ನೆನಪು 25 ವರ್ಷದ ಹಿಂದಕ್ಕೆ ಓಡಿತು.
  ನನ್ನ ಅನೇಕ ಸಂಕಷ್ಟಗಳಿಗೆ ಆಗ ನಾನು ಜಿಲ್ಲಾ ಪಂಚಾಯತ್ ಸದಸ್ಯನಾಗಿದ್ದೆ ಕಾರಣ ಆಗಿತ್ತು.
  ಬಂಗಾರಪ್ಪನವರು ನನಗೆ ನೀಡಿದ ಪ್ರೋತ್ಸಾಹ ಕಾಗೋಡು ತಿಮ್ಮಪ್ಪರನ್ನ ಕೆರಳಿಸಿತು, ಅವರ ಸುತ್ತಲೂ ಇದ್ದವರು ನನ್ನ ಮೇಲೆ ಮುರುಕೊಂಡು ಬಿದ್ದ ಪರಿ ಇತ್ತಲ್ಲ ಅದನ್ನು ಜೀವಮಾನದಲ್ಲಿ ಮರೆಯಲಾರದ ದಿನಗಳು.
   ಮಂತ್ರಿಗಳ ಅಧಿಕಾರದ ಪ್ರಬಾವಲಯದಲ್ಲಿರುವ ಅವರ ಹಿಂಬಾಲಕರು ಅಧಿಕಾರ ಬಳಸಿಕೊಂಡು ದ್ವೇಷ ಸಾಧನೆ ಮಾಡಿದರೆ, ಅದಕ್ಕೆ ಅಧಿಕಾರಿಗಳೂ ಒಲೈಸುತ್ತಾ ಸಾಥ್ ನೀಡಿ  ಮಂತ್ರಿಗಳಿಂದ ಲಾಭ ಪಡೆಯಲು ಅವರವರಲ್ಲೇ ಪೈಪೋಟಿ ಉಂಟಾಗಿ ನನ್ನ ಮತ್ತು ನನ್ನ ಸಂಗಡಿಗರ ಮೇಲೆ ವಿವಿದ 22 ಕೇಸ್ ಸಾಗರದಲ್ಲಿ, ಶಿವಮೊಗ್ಗ ಜಿಲ್ಲಾ ಕೇಂದ್ರದಲ್ಲಿ 4 ಕೇಸ್ ಗಳು,ರೌಡಿ ಶೀಟರ್ ದಾಖಲೆ, ವ್ಯವಹಾರಗಳಲ್ಲಿ ತೊಂದರೆ ಇದರಿಂದ ನನ್ನ ವ್ಯವಹಾರ ನೆಲ ಕಚ್ಚಿತ್ತು.
   ರೈಸ್ ಮಿಲ್ ಕೆ.ಎಸ್.ಪ್ ಸಿ ಹರಾಜಿಗೆ ತಂದಿತ್ತು,ಅಲ್ಲಿ ವ್ಯವಸ್ಥಾಪಕ ಆದವರು ನನ್ನ ಜಿಲ್ಲಾ ಪಂಚಾಯತ್ ವ್ಯಾಪ್ತಿಯ ಸಾಮಾನ್ಯ ಕುಟುಂಬದ ಪ್ರತಿಭಾವಂತ ಯುವಕ ಆದರೆ ಆತನನ್ನು ವಿರೋದಿಗಳು ಬಳಸಿಕೊಂಡಿದ್ದರಿಂದ ಇಲ್ಲದ ತೊಂದರೆ ಅವಮಾನ ಆತ ಸತತವಾಗಿ ನೀಡಿದ ಇದಕ್ಕಾಗಿ ಸಕಾ೯ರದ ಜೀಪನ್ನು ಬಳಸುತ್ತಿದ್ದರು.
  ವಾಸದ ಮನೆ ಸಾಗರದ SBI ಜಪ್ತಿಗೆ ಮತ್ತು ಜಮೀನುಗಳು ಬೀಮನ ಕೋಣೆಯ ಪಿ.ಎಲ್.ಡಿ ಬ್ಯಾಂಕ್ ಗೆ ಅಡಮಾನ ಆಗಿ ಬಿಟ್ಟಿತ್ತು.
  ಜಿಲ್ಲಾ ಪಂಚಾಯತ್ ಸದಸ್ಯನಾಗುವ ಮುನ್ನ ಇದ್ದ ಕಾರು, ಬೈಕ್ ಗಳು ಕಳೆದುಕೊಂಡು ಬಸ್ಸಿನಲ್ಲೇ ಪ್ರಯಾಣಿಸುತ್ತಿದ್ದೆ.
  ಜಿಲ್ಲಾ ಪಂಚಾಯತ್ ಅಧಿಕಾರ ಮುಗಿದ ತಕ್ಷಣ ಗೆಳೆಯರು ನನ್ನಿಂದ ಅನುಕೂಲ ಪಡೆದವರೂ  ದೂರ ಆದರು, ಅಧಿಕಾರ ಹಣ ಎರೆಡೂ ಇಲ್ಲದ ಮತ್ತು ಸಕಾ೯ರದ ಮಂತ್ರಿಗಳ ದ್ವೇಷಕ್ಕೆ ತುತ್ತಾದ ಉಪಯೋಗಕ್ಕೆ ಭಾರದ ಗೆಳೆಯನ ಸಮೀಪ ಇದ್ದರೆ ಆಗುವ ನಷ್ಟದ ಪರಿಜ್ಞಾನ ಅವರಿಗಿತ್ತು.
  ಆಗಲೆ ಸಾಗರದ SBI ಬ್ಯಾಂಕ್ ಗೆ ವಗ೯ವಾಗಿ ಬಂದ ಉಮೇಶ್ ಹೆಗ್ಗಡೆ (ಈಗ ರವಿ ಬೆಳೆಗೆರೆ ಹಾಯ್ ಬೆಂಗಳೂರು ಮತ್ತು ಅವರ ಶಿಕ್ಷಣ ಸಂಸ್ಥೆ ಪ್ರಾರ್ಥನಾ CEO).ಕೆ.ಎಸ್.ಎಫ್.ಸಿ ಯಲ್ಲಿದ್ದ ಶಾಲಾ ಸಹಪಾಟಿ ನಮ್ಮ ಊರಿನ ದಾಸಕೊಪ್ಪದ ನಾಗರಾಜ್ .
 ಪಿ.ಎಲ್.ಡಿ. ಬ್ಯಾಂಕಿನ ವ್ಯವಸ್ಥಾಪಕರಾಗಿದ್ದ ಹಂದಿಗೋಳ್ ಸಾಹೇಬರು (ನಂತರ ಜಿಲ್ಲಾ ವ್ಯವಸ್ಥಾಪಕರಾಗಿ ನಂತರ ರಾಜ್ಯ ಮಟ್ಟದ ಹುದ್ದೆ ನಿರ್ವಹಿಸಿ ಈಗ ಶಿವಮೊಗ್ಗ ಸಮೀಪದ ಅಬ್ಬಲಗೆರೆಯ ಎಸ್ಸಾರ್‌ ಪೆಟ್ರೋಲ್ ಬಂಕ್ ಮಾಲಿಕರಾಗಿದ್ದಾರೆ) ಇವರೆಲ್ಲ ನನಗೆ ದೈಯ೯ ನೀಡಿದ್ದರಿಂದ ಮತ್ತು ತೊಂದರೆ ನಿವಾರಿಸಿದ್ದರಿಂದ ಸಾಲ ತೀರುವಳಿ ಮಾಡಿ ಆಸ್ತಿ ಉಳಿಸಿಕೊಂಡೆ.
  ಆಗ ಮದು ಲಾಯರ್ ನನ್ನ ಪರಿಸ್ಥಿತಿ ಅರಿತು ಅವತ್ತು ಹೇಳಿದ್ದು "ಅರುಣ್ ಪ್ರಸಾದ್ ನಿಮ್ಮ ಎಲ್ಲಾ ಕೇಸ್ ಗಳನ್ನ ಉಚಿತವಾಗಿ ನಡೆಸಿ ಗೆದ್ದು ಕೊಡುತ್ತೇನೆ, ನೀವು ಕೋಟ್೯ಗೆ ಮಾತ್ರ ತಪ್ಪದೇ ಬರಬೇಕು" ಅಂತ ಹೇಳಿ ಶಿವಮೊಗ್ಗದ ಕೋಟ್೯ ಪಕ್ಕದ ಡಿಸಿಸಿ ಬ್ಯಾಂಕ್ ಅವರಣದ ಕ್ಯಾಂಟೀನ್ ನಲ್ಲಿ ಕಾಫಿ ಕುಡಿಸಿದ್ದರು ಮತ್ತು ಅದರಂತೆ ನಡೆದರು.
  ಮದು ಲಾಯರ್ ಮಾಡಿದ ಉಪಕಾರ ಯಾವತ್ತೂ ಮರೆಯಲುಂಟಾ? ಇವತ್ತು ಮದುಲಾಯರ್ ದಂಪತಿ ಪೋಟೋ ಪೇಸ್ ಬುಕ್ ನಲ್ಲಿ ಪೋಸ್ಟ್ ಆಗಿದ್ದು ನೋಡಿ ನೆನಪಾಯಿತು.
  ಇವತ್ತಿಗೂ ಶಿವಮೊಗ್ಗ ಜಿಲ್ಲೆಯಲ್ಲಿ ಮದು ಲಾಯರ್ ಸುಪ್ರಸಿದ್ದರು.

Comments

Popular posts from this blog

Blog number 1782. ಅರಳಸುರಳಿಯ ರಾಘವೇಂದ್ರ ಕೇಕೋಡರ ಕುಟುಂಬದ ತಪ್ಪು ನಿರ್ದಾರದ ದುರಂತ.

#ತೀರ್ಥಹಳ್ಳಿಯ_ಅರಳಸುರಳಿಯ_ಒಂದೇ_ಕುಟುಂಬದ_ನಾಲ್ವರು_ಮೃತರಾದ_ರಹಸ್ಯವೇನು? #ಈ_ಬಗ್ಗೆ_ಆ_ಊರಿನ_ಸಮೀಪದ_ಈ_ಕುಟುಂಬದ_ಪರಿಚಯ_ಇರುವವರಿಗೆ_ವಿಚಾರಿಸಿದ್ದೆ. #ಅವರು_ಈ_ಘಟನೆ_ಬಗ್ಗೆ_ಸವಿಸ್ತಾರವಾಗಿ_ಲಿಖಿತ_ಲೇಖನ_ಬರೆದಿದ್ದಾರೆ. #ಅವರ_ವಿನಂತಿ_ಅವರ_ಹೆಸರು_ಬಹಿರಂಗಗೊಳಿಸ_ಬಾರದು. #ಆದ್ದರಿಂದ_ಈ_ಲೇಖನ_ಪೋಸ್ಟ್_ಮಾಡಬಾರದೆಂದಿದ್ದೆ_ಆದರೆ_ಇದು_ಮಲೆನಾಡಿಗರ_ಮನೆ_ಮನೆಯ_ಕಥೆ #ಆದ್ದರಿಂದ_ಇಲ್ಲಿ_ಪೋಸ್ಟ್_ಮಾಡಿದೆ.    ಇಲ್ಲಿ ತಪ್ಪು ಯಾರದ್ದೂ ಇಲ್ಲ... ಪಶ್ಚಾತ್ತಾಪದ ಪ್ರಾಯಶ್ಚಿತ ಕೇಳಲು ಅವರಾರು ಇಲ್ಲ .....ಆದರೆ ಈ ರೀತಿ ಜೀವ ತ್ಯಾಗ ಮಾಡುವ ಆತುರದ ಕೆಟ್ಟ ನಿರ್ದಾರ ಮಾತ್ರ ಸರಿ ಅಲ್ಲ.     ಇವರ ಅಣ್ಣ ಆರ್.ಎಸ್.ಎಸ್. ಪ್ರಚಾರಕರಾಗಿ ದೆಹಲಿಯಲ್ಲಿ ಏಳು ವಷ೯ ಮೋದಿ ಜೊತೆ ಒಂದೇ ಕೋಣೆ ಹಂಚಿಕೊಂಡವರು, ಇನ್ನೊಬ್ಬ ಸಹೋದರ ಮೂಳೆ ತಜ್ಞರಾಗಿ ಶಿವಮೊಗ್ಗದಲ್ಲಿ ಆಸ್ಪತ್ರೆ ಮಾಡಿಕೊಂಡಿದ್ದಾರೆ.   #ದೀರ್ಘವಾದರೂ_ಪೂರ್ಣ_ಲೇಖನ_ಓದಿ   #ಹೀಗೊಂದು_ಸುಕುಟುಂಬ_ಆತ್ಮಾಘಾತ_ಮತ್ತು_ತದನಂತರದ_ಸಹಾಗಮನ.... ಮೂಡಣದಲ್ಲಿ ರವಿ ಮೂಡಲು ಅಣಿ ಯಾಗುತ್ತಿಧ್ದ .. ಹಾದಿಗಣಪತಿ ದೇವರು ಗರ್ಭಗುಡಿಯ ನಂದಾದೀಪದ ಮಂದ ಬೆಳಕಿನಲ್ಲಿ ತನ್ನ ಗುಡಿಯ ಎದುರಿನ ತಗ್ಗಿನಲ್ಲಿದ್ದ  ರಾಘವೇಂದ್ರ ಕೇಕೋಡರ ಮನೆಯನ್ನು ಎವೆಯಕ್ಕದೇ ನೋಡುತ್ತಲಿದ್ದ... ಊರ ಎಲ್ಲಾ ಮನೆಯಂತೆ ಆ ಮನೆಯಲ್ಲೂ ಆ ಬೆಳಗಿನಲ್ಲಿ ಮನೆಯೊಡತಿ ನಾಗರತ್ನಕ್ಕ ಆ ಸಮಯದಲ್ಲಿ ದೇವರಿಗೆ ದೀಪ ಹಚ್ಚಿ ಹೊಸ್ತಿಲು ಪೂಜೆ ಮಾಡ

Blog number 1037. ರಾಜಕುಮಾರಿ ಶಾಂತವ್ವ ಮತ್ತು ದಲಿತ ಯುವಕ ಸಿದ್ದೇಶ್ವರರ ಅಮರ ಪ್ರೇಮದ ಸ್ಮಾರಕ, ಅನ್ಯ ಜಾತಿ ವಿವಾಹವಾದ್ದರಿಂದ ರಾಜಕುಮಾರಿಗೆ ಸೂಳೆ ಪಟ್ಟ ನೀಡಿದ ಸಮಾಜ. ಸಮಾಜದ ಒಳಿತಿಗಾಗಿ ಶಾಂತವ್ವ ಕಟ್ಟಿಸಿದ ಬೃಹತ್ ಕೆರೆಗೆ ಜನ ಕರೆದದ್ದು ಸೂಳೆ ಕಟ್ಟಿಸಿದ ಕೆರೆ ಅದೇ ಸೂಳೆಕೆರೆ / ಶಾಂತಿ ಸಾಗರ

# ಸೂಳೆಕೆರೆ (ಶಾಂತಿ ಸಾಗರ) ಅಂತರ್ ಜಾತಿ ಪ್ರೇಮ ವಿವಾಹದ ದುರOತ ಕಥೆ. #ಅಕ್ಟೋಬರ್ 2019 ರಲ್ಲಿ ತುಂಬಿ ತುಳುಕಿತ್ತು.  ಚಿತ್ರದುಗ೯, ದಾವಣಗೆರೆ ಬಳ್ಳಾರಿ ಮುಂತಾದ ಮಳೆ ಕಡಿಮೆ ಆಗುತ್ತಿದ್ದ ಜಿಲ್ಲೆಗಳಲ್ಲಿ ಅದೂ ಅಕ್ಟೋಬರ್ ತಿಂಗಳ 2019 ರಲ್ಲಿ  ಬಂದಿದ್ದ ಬಾರಿ ಮಳೆ ಎಲ್ಲಾ ಕೆರೆ, ಹೊಂಡಗಳು ತುಂಬಿ ತುಳುಕಿದೆ, ಸಾಮಾಜಿಕ ಜಾಲ ತಾಣದಲ್ಲಿ 40 ವಷ೯ದಲ್ಲಿ ಇಂತ ಮಳೆ ಬಂದಿಲ್ಲ ಅಂತ ಸುದ್ದಿ ಹರಿದಾಡುತ್ತಿತ್ತು ಮತ್ತು  ಸೂಳೆಕೆರೆ ತುಂಬಿ ಕೋಡಿ ಬಿದ್ದಿದೆ ಅಂತೆಲ್ಲ Post ನೋಡಿ ಬೆಂಗಳೂರಿಂದ ಬರುವಾಗ ಚಿತ್ರದುಗ೯ ಮಾಗ೯ವಾಗಿ ಚನ್ನಗಿರಿ ತಲುಪಿ ಸೂಳೆಕೆರೆ ನೋಡಲು ಹೋಗಿದ್ದೆ.  11ನೇ ಶತಮಾನದಲ್ಲಿ (1128ರಲ್ಲಿ)ಕೇವಲ 3 ವಷ೯ದಲ್ಲಿ ಈ ಕೆರೆ ನಿಮಾ೯ಣ ಮಾಡಿಸಿದ್ದು ಶಾಂತವ್ವ ಎಂಬ ರಾಜ ಕುಮಾರಿ ಅವಳು ಸ್ವಣ೯ವತಿ ಪಟ್ಟಣದ ದೊರೆ ವಿಕ್ರಮ ರಾಜನ ಮಗಳು, ಸಿದ್ದೇಶ್ವರ ಎಂಬ ಅನ್ಯ ಜಾತಿಯ ಯುವಕನೊ೦ದಿಗೆ ಗಾಂದವ೯ ವಿವಾಹ ಆಗುತ್ತಾಳೆ ಇದನ್ನ ಸಹಿಸದ ಮತ್ತು ಒಪ್ಪದ ಜನತೆ ಸೂಳೆ ಎಂದು ಮೂದಲಿಸುತ್ತಾರOತೆ ಈ ರೀತಿ ತನಗೆ ಬಂದ ಕಳಂಕ ಕಳೆಯಲು ಈ ಬೃಹತ್ ಕೆರೆ ತನ್ನ ಪತಿ ಸಿದ್ದೇಶ್ವರನ ಜೊತೆ ಸೇರಿ ನಿಮಿ೯ಸಿ ಕೆರೆಗೆ ಹಾರವಾದಳೆoಬ ಇತಿಹಾಸ ಇದೆ ಇದರಿಂದ ನೊಂದ ಪತಿ ಸಿದ್ಧೇಶ್ವರ ಕೂಡ ಎದುರಿನ ಗುಡ್ಡದಲ್ಲಿ ಜೀವ ತ್ಯಾಗ ಮಾಡುತ್ತಾನೆ ಈಗ ಅಲ್ಲಿ ಸಿದ್ದೇಶ್ವರ ದೇವಸ್ಥಾನವಿದೆ.   ಈ ಕೆರೆ ಈಗಲೂ ಸೂಳೆಕೆರೆ ಎಂದೆ ಹೆಸರಾಗಿದೆ ಈ

# ಜುಟ್ಟು ಕಾಳಿಂಗ ಸಪ೯ದ ಆಸ್ತಿತ್ವದ ಮಲೆನಾಡಿನ ಮಿಥ್ಯೆ#

  # ಕಾಳಿ೦ಗ ಸಪ೯ದಲ್ಲಿ ಜುಟ್ಟು ಕಾಳಿಂಗ ಸಪ೯ ಅಂತ ಇದೇ ಅನ್ನುವ ಯಾರು ನೋಡದ ಸಪ೯ದ ಅಸ್ತಿತ್ವ#    ಮಲೆನಾಡಿನ ಹಳ್ಳಿಗಳಲ್ಲಿ, ಅದು ಕಾಳಿ೦ಗ ಸಪ೯ದ ವಾಸಸ್ಥಳದ ಪರಿಸರದಲ್ಲಿ ಜುಟ್ಟು ಕಾಳಿಂಗ ಸಪ೯ ಇದೆ ಅನ್ನುವ ಮಾತು ಆಗಾಗ್ಗೆ ಕೇಳುತ್ತಿರುತ್ತೇವೆ. ಆದರೆ ಆ ರೀತಿಯ ಹಾವು ಇಲ್ಲ ಎಂದು ಹಾವಿನ ಬಗ್ಗೆ ಸಂಶೋದನೆ ಮಾಡುವವರು, ಅರಣ್ಯ ಇಲಾಖೆಯವರು, ಹಾವು ಹಿಡಿಯುವವರು ಖಡಾಖಂಡಿತವಾಗಿ ಹೇಳುತ್ತಾರಾದರು, ಈ ವದಂತಿ ಹೇಗೆ ಹರಡಿದೆ?.    ಇದು ಒಂದು ಊರು ಹಳ್ಳಿಯಲ್ಲ ನಾನು ನೋಡಿದಂತೆ ಮಹಾರಾಷ್ಟ್ರದ ರತ್ನಗಿರಿಯಿ೦ದ ಕೇರಳದ ಕಾಸರಗೋಡಿನ ತನಕ ಜುಟ್ಟು ಕಾಳಿಂಗದ ಅನೇಕ ರೋಚಕ ಕಥೆ ಕೇಳಿದ್ದೇನೆ.   ಪ್ರತ್ಯಕ್ಷ ನೋಡಿದವರು ತಾವು ಎನ್ನುವ ಅನೇಕರಲ್ಲಿ ಮಾತಾಡಿದ್ದೇನೆ ಆದರೆ ಅದು ನಂಬಲಹ೯ ಮಾಹಿತಿ ಅನಿಸಲಿಲ್ಲ, ಒಂದು ರೀತಿ ಕಾಲ್ಪನಿಕ ತ್ರಿಲ್ಲರ್ ಕಥೆ ಅಷ್ಟೇ ಅನ್ನಬಹುದು.    ಜಡೆ ಕಾಳಿಂಗ ಸಪ೯ಕ್ಕೆ ರೋಷ ಜಾಸ್ತಿ, ಹೆಡೆ ಮೇಲೆ ಕೂದಲಿನ ಜುಟ್ಟು ಇರುತ್ತೆ, ಮನುಷ್ಯರನ್ನ ಕಂಡರೆ ಓಡಿಸಿಕೊಂಡು ಬರುತ್ತೆ, ಅದರಿಂದ ತಪ್ಪಿಸಿಕೊಳ್ಳಲು ಒಂದೇ ದಾರಿ ಅದೇನೆಂದರೆ ತಗ್ಗಿನ ಪ್ರದೇಶದಲ್ಲಿ ಓಡುವುದು.     ಯಾಕೆ೦ದರೆ ಓಡಿಸಿಕೊಂಡು ಬರುವ ಜುಟ್ಟು ಕಾಳಿಂಗದ ಜುಟ್ಟು, ಇಳಿಜಾರಿನಲ್ಲಿ ಅದರ ತಲೆಯಿ೦ದ ಇಳಿಜಾರಿಗೆ ಸರಿಯುವುದರಿಂದ  ಕಣ್ಣಿನ ಮೇಲೆ ಕೂದಲ ಜುಟ್ಟು ಮುಚ್ಚುವುದರಿಂದ ಕಣ್ಣು ಕಾಣುವುದಿಲ್ಲ, ಆಗಲೇ ತಪ್ಪಿಸಿಕೊಳ್ಳಬೇಕು ಅಂತ ಬಿದನೂರು ನಗರ ಸಮೀಪದ ದೇವಗಂಗೆ ಎಂಬ ಕೆಳದಿ