Skip to main content

Blog number 1052. ಶಿವಮೊಗ್ಗ ತಾಳಗುಪ್ಪ ರೈಲು ಮಾರ್ಗ ನಷ್ಟದ ಮಾರ್ಗ ಎಂದು ರದ್ದು ಮಾಡುವ ಸಂದರ್ಭದಲ್ಲಿ ಈ ರೈಲು ಮಾರ್ಗ ಉಳಿಸಿಕೊಳ್ಳುವ ತಂತ್ರವಾಗಿ ಸಾಗರ ರೈಲು ನಿಲ್ದಾಣಕ್ಕೆ ಡಾ.ರಾಮಮನೋಹರ ಲೋಹಿಯಾ ಎಂದು ನಾಮಕರಣ ಮಾಡಿಸಲು ಶಿವಮೊಗ್ಗದಿಂದ ದೆಹಲಿ ಚಲೋ 22 ವರ್ಷದ ಹಿಂದಿನ ನೆನಪು.

#ನಿನ್ನೆ_ನನ್ನ_ಡಿಸ್ಪ್ಲೇ_ಪೋಟೊ_ಪ್ರೊಪೈಲ್_ಪೋಟೋ_ಜಾರ್ಜ್_ಪರ್ನಾಂಡೀಸ್

#ಶಿವಮೊಗ್ಗ_ತಾಳಗುಪ್ಪ_ಬ್ರಾಡ್_ಗೇಜ್_ಒತ್ತಾಯಿಸಿ_35_ಜನರ_ನಿಯೋಗದ_ದೆಹಲಿ_ಚಲೋ

#ನಿಯೋಗ_ನೇತೃತ್ವದ_ಕಾಗೋಡು_ಹೋರಾಟದ_ನೇತಾರ_ಗಣಪತಿಯಪ್ಪನವರು.

#ದೆಹಲಿಯಲ್ಲಿ_ಜಾರ್ಜ್_ಪರ್ನಾಂಡೀಸ್_ಶ್ರೀನಿವಾಸಪ್ರಸಾದ್_ರಾಜ್ಯಸಭಾ_ಸದಸ್ಯರಾದ_ಜವರೇಗೌಡರು

#ಎರೆಡು_ಸಾವಿರ_ಇಸವಿಯ_ದೆಹಲಿ_ಚಲೋ_ನೆನಪು

    ಷರೀಪರು ರೈಲ್ವೇ ಮಂತ್ರಿಗಳಾಗಿದ್ದಾಗ ಆನಂದಪುರಂನ ಮಾಜಿ ಸಂಸದರು, ವಿದ್ಯಾ ಮಂತ್ರಿಗಳೂ ಆಗಿದ್ದ ವಯೋವೃದ್ದ ಬದರೀನಾರಾಯಣ ಅಯ್ಯಂಗಾರ್ ರನ್ನು ಹೆಲಿಕಾಪ್ಟರ್ ನಲ್ಲಿ ಕರೆತಂದು ಶಿವಮೊಗ್ಗ ತಾಳಗುಪ್ಪ ರೈಲು ಮಾರ್ಗ ಮೀಟರ್ ಗೇಜ್ ಪರಿವರ್ತನೆ ಭೂಮಿ ಪೂಜೆ ನೆರವೇರಿಸಿದ್ದರು ಇದೇ ಬದರೀನಾರಾಯಣ ಅಯ್ಯಂಗಾರರ ಶಿವಮೊಗ್ಗ ಜಿಲ್ಲೆಯ ಕೊನೆಯ ಬೇಟಿ.
   ಬ್ರಾಡ್ ಗೇಜ್ ಪರಿವರ್ತನೆ ಮಾಡಲು ಆಗಿನ ಮೀಟರ್ ಗೇಜ್ ರೈಲು ನಿಲ್ಲಿಸಿದರು ನಂತರ ಬೀರೂರು ಶಿವಮೊಗ್ಗ ಬ್ರಾಡ್ ಗೇಜ್ ಆದರೂ ಶಿವಮೊಗ ತಾಳಗುಪ್ಪ ಬ್ರಾಡ್ ಗೇಜ್ ಪರಿವರ್ತನೆ ಪ್ರಾರಂಭವಾಗಲೇ ಇಲ್ಲ.
  ಇದರ ಮಧ್ಯದಲ್ಲೆ ದೆಹಲಿ ರೈಲ್ವೇ ಅಧಿಕಾರಿಗಳು ಶಿವಮೊಗ್ಗ - ತಾಳಗುಪ್ಪ ರೈಲು ಮಾರ್ಗ ನಷ್ಟದ ಮಾರ್ಗ ಎಂದು ಘೋಷಿಸಿ ಬಿಟ್ಟರು ಆದ್ದರಿಂದ ಈ ಮಾರ್ಗ ಬ್ರಾಡ್ ಗೇಜ್ ಮಾಡುವ ಅವಶ್ಯಕತೆಯೇ ಇಲ್ಲ ಎಂದು ನಿರ್ದರಿಸಿ ಬಿಟ್ಟರು.
  ಈ ವೇಳೆಯಲ್ಲಿ ಕಾಗೋಡು ಹೋರಾಟದ ನೇತಾರ ಗಣಪತಿಯಪ್ಪ, ಶಿವಮೊಗ್ಗದ ಮಾಜಿ ವಿದಾನ ಪರಿಷತ್ ಸದಸ್ಯರಾದ ಜಿ.ಮಾದಪ್ಪ, ಸಮಾಜವಾದಿ ಲೇಖಕ ಕೋಣಂದೂರು ವೆಂಕಪ್ಪ ಗೌಡರು, ಹೋರಾಟಗಾರ ಕಲ್ಲೂರು ಮೇಘರಾಜ್ ಮತ್ತು ನಾನು ಸೇರಿ ಈ ಬಗ್ಗೆ ಸಮಾಲೋಚನೆ ಮಾಡಿದೆವು.
 ಡಾ.ರಾಮಮನೋಹರ ಲೋಹಿಯಾರು ಕಾಗೋಡು ರೈತ ಹೋರಾಟಕ್ಕೆ ಬಂದು ಭಾಗವಹಿಸಿದಾಗ ಸಾಗರ ರೈಲು ನಿಲ್ದಾಣದ ವಿಶ್ರಾಂತಿ ಕೊಠಡಿಯಲ್ಲಿ ತಂಗಿದ್ದಾಗ ಅವರ ಬಂದನವಾಗಿದ್ದು ಆ ಕಾಲದಲ್ಲಿ ಬಹು ದೊಡ್ಡ ಸುದ್ದಿ, ಬಿಬಿಸಿ ವಾರ್ತೆ, ರಷ್ಯಾದ ಆಗಿನ ಪ್ರಸಿದ್ದ ಪತ್ರಿಕೆ ಪ್ರಾವ್ಡಾದಲ್ಲಿ ಮುಖ ಪುಟದ ಸುದ್ಧಿ ಆಗಿತ್ತು ಆ ಐತಿಹಾಸಿಕ ಘಟನೆ ಆದರಿಸಿ ಡಾ.ರಾಮಮನೋಹರರ ಒಡನಾಡಿ ಜಾರ್ಜ್ ಪನಾ೯ಂಡೀಸರ ಮೂಲಕ ಸಾಗರ ರೈಲು ನಿಲ್ದಾಣಕ್ಕೆ ಡಾ.ರಾಮಮನೋಹರ ಲೋಹಿಯಾ ರೈಲು ನಿಲ್ದಾಣ ನಾಮಕರಣದ ಹೋರಾಟ ಪ್ರಾರಂಬಿಸಿದರೆ ಶಿವಮೊಗ್ಗ ತಾಳಗುಪ್ಪ ರೈಲು ಮಾರ್ಗ ನಷ್ಟದ ಕಾರಣದಿಂದ ಮುಚ್ಚುವ ಅಧಿಕಾರಿಗಳ ಉದ್ದೇಶ ಕೈ ಬಿಡುತ್ತಾರೆಂಬ ಆಶಾಭಾವನೆ ಮತ್ತು ತಂತ್ರವಾಗಿತ್ತು.
   ಜೊತೆಗೆ ಹಂದಿಗೋಡು ಕಾಯಿಲೆ ಪೀಡಿತರ ಪುನರ್ವಸತಿಗಾಗಿ ಮನವಿ ನೀಡಲು ಸ್ವತಃ ಹಂದಿಗೋಡು ಕಾಯಿಲೆ ಪೀಡಿತರಾದ ರಿಪ್ಪನ್ ಪೇಟೆ ಸಮೀಪದ ಬರುವೆ ಶ್ರೀದರ್ ಕೂಡ ಜೊತೆಯಾಗಿದ್ದರು.
  ಆಗಿನ ರಾಜ್ಯಸಭಾ ಸದಸ್ಯರಾದ ಜವರೇಗೌಡರು ದೆಹಲಿಯ ಪೂಸಾ ಅಗ್ರಿಕಲ್ಚರಲ್ ಯುನಿವರ್ಸಿಟಿಯ ಗೆಸ್ಟ್ ಹೌಸ್ ನಲ್ಲಿ ಕರ್ನಾಟಕದ ನಮ್ಮ ನಿಯೋಗ ತಂಗಲು ವ್ಯವಸ್ಥೆ ಮಾಡಿದ್ದರು.
  ಆಗಿನ ಕೇಂದ್ರ ಮಂತ್ರಿ ಶ್ರೀನಿವಾಸ್ ಪ್ರಸಾದ್ ರೂ ನಮ್ಮ ಹೋರಾಟಕ್ಕೆ ಸಂಪೂಣ೯ ಬೆಂಬಲ ನೀಡಿದ್ದರು.
   ಶಿವಮೊಗ್ಗ ಜಿಲ್ಲೆಯ ಅಭಿವೃದ್ದಿ ಬಗ್ಗೆ ಆಸಕ್ತಿ ಹೊಂದಿದ್ದ ಈಗ 22 ವರ್ಷದ ಹಿಂದೆ ನಮ್ಮ ದೆಹಲಿ ಚಲೋ ಯಾತ್ರೆಯ ಸಂಗಾತಿಗಳಾಗಿದ್ದವರು ತೀರ್ಥಹಳ್ಳಿಯ ಬಸವಾನಿಯ ಕೆ.ಶ್ವೇತ ಕುಮಾರ್, ಪತ್ರಕರ್ತ ಕಬಸೆ ಅಶೋಕ್ ಮೂರ್ತಿ, ಮೇಗರವಳ್ಳಿ ಪ್ರೀತಿ ಶರತ್, ಹೊಸನಗರ ತಾಲೂಕಿನ ಉಮಾಕಾಂತ್, ಪರಮೇಶ್ವರಪ್ಪ, ಗರ್ತಿಕೆರೆ ಬಿಳಿ ನಾಯಕ್, ಪಾ. ನಾ. ಜಗದೀಶ್, ಸಾಗರ ತಾಲ್ಲೂಕಿನ ಅಬ್ಬಾಸ್ ಕಾಕಾ, ಯಡೇಹಳ್ಳಿ ಕೆರಿಯಪ್ಪ, ಆನಂದಪುರಂ ಮಂಜುನಾಥ್ ಶೇಟ್, ತಾಳಗುಪ್ಪದ ಲಿಂಗರಾಜ ಯಾದವ್, ಹೋಟೆಲ್ ಅಣ್ಣಪ್ಪ ಪೂಜಾರ್, ರಿಪ್ಪನ್ ಪೇಟೆಯ ರೈತ ಸಂಘದ ಟೈಲರ್ ಮಂಜಪ್ಪ, ಕುಕ್ಕಳ್ಳಿಯ ರೈತ ಮುಖಂಡರುಗಳು, ಆರ್.ಎ.ಅಬ್ದುಲ್ ಖಾದರ್, ಕೆರೆಹಳ್ಳಿ ಕೀರ್ತಿರಾಜ್, ಮಾದಾಪುರ ಲೋಕಪ್ಪ, ಆರ್.ಎನ್.ಮಂಜಪ್ಪ, ಕೆರೆಹಳ್ಳಿ ದೇವರಾಜ್, ಯೋಗೇಶ್ವರ್ ಗೌಡರು, ಮಂಜುನಾಥ ಆಚಾರ್, ಶ್ರೀಮತಿ ನಾಗರತ್ನಮ್ಮ, ಶ್ರೀಮತಿ ಭಾನುಮತಿ ಶೆಟ್ಟಿ, ಚಿದಾನಂದ, ಅಯನೂರು ವಾಸು ನಾಯ್ಕ, ಉಳ್ಳೂರು ರಾಜೇಂದ್ರ, ಅಬ್ಬಾಸ್‌ ಕಾಕ, ಹಿರೇಮನೆ ಅನಂತ್‌ ವಕೀಲರು,ಭದ್ರಾವತಿ ಹೆಚ್.ಎಂ.ಮಂಜುನಾಥ ಮುಂತಾದ 35 ಜನ ಶಿವಮೊಗ್ಗ ತಾಳಗುಪ್ಪ ಬ್ರಾಡ್ ಗೇಜ್ ಪರಿವರ್ತನೆಗೆ ಒತ್ತಾಯಿಸಿ ದೆಹಲಿ ಚಲೋ ಮಾಡಿದ್ದರು.
    ಆಗಿನ ಉಪ ಪ್ರದಾನಿ ಎಲ್.ಕೆ.ಅಡ್ವಾನಿಯವರು ಈ ನಿಯೋಗದ ಮನವಿ ಪುರಸ್ಕರಿಸಿ ಕರ್ನಾಟಕ ಸರ್ಕಾರಕ್ಕೆ ಡಾ.ರಾಮಮನೋಹರ ಲೋಹಿಯಾ ಎಂದು ಸಾಗರದ ರೈಲು ನಿಲ್ದಾಣಕ್ಕೆ ಪುನರ್ ನಾಮಕರಣಕ್ಕೆ ಪರಿಶೀಲನೆಗಾಗಿ ಕಳಿಸಿದ್ದರು, ಸದರಿ ಮನವಿ ಕರ್ನಾಟಕ ಸಕಾ೯ರ ಶಿವಮೊಗ್ಗ ಜಿಲ್ಲಾಡಳಿತ ವರದಿ ಮತ್ತು ಸಾಗರದ ಆಗಿನ ಪುರಸಭೆಯ ಒಪ್ಪಿಗೆಯೊಂದಿಗೆ ಉಪ ಪ್ರಧಾನಿ ಕಛೇರಿಗೆ ರಾಜ್ಯ ಸರ್ಕಾರ ತನ್ನ ನಿರಾಕ್ಷೇಪಣಿ ನೀಡಿದ ಆದಾರದಿಂದ ಉಪ ಪ್ರಧಾನಿಗಳು ರೈಲ್ವೆ ಇಲಾಖೆಗೆ ಸಾಗರ ಜಂಬಗಾರು ಎಂಬ ಹೆಸರು ಡಾ.ರಾಮಮನೋಹರ ಲೋಹಿಯಾ ಎಂದು ಮರು ನಾಮಕರಣ ಮಾಡಲು ಅದೇಶಿಸಿದ್ದು 22 ವಷ೯ದಿಂದ ರೈಲ್ವೆ ಇಲಾಖೆ ಕಾಯ೯ರೂಪಕ್ಕೆ ತರದೆ ತಡೆ ಹಿಡಿದಿದೆ.
   ನಿನ್ನೆ ನನ್ನ ಡಿಸ್ಪ್ಲೇ ಪೋಟೋ (DP) ಮತ್ತು ಪ್ರೊಪೈಲ್ ಪೋಟೋ (PP) ದೆಹಲಿ ಚಲೋ ಯಾತ್ರೆಯಲ್ಲಿ ರಕ್ಷಣಾ ಮಂತ್ರಿ ಜಾರ್ಜ್ ಪನಾ೯೦ಡೀಸ್ ಬೇಟಿ ಪೋಟೋ ಹಾಕಿದ್ದು 22 ವರ್ಷದ ಹಿಂದಿನ ನೆನಪು ತಂದಿತು.
  ಈಗ ತಾಳಗುಪ್ಪದಿಂದ ಬೆಂಗಳೂರಿಗೆ ಮೈಸೂರಿಗೆ ರೈಲುಗಳು ಸಂಚರಿಸುತ್ತಿದೆ ಮೊನ್ನೆ ಇದೇ ರೈಲಲ್ಲಿ ನಾನು ಬೆಳಿಗ್ಗೆ ಬೆಂಗಳೂರಿಗೆ ಹೋಗಿ ರಾತ್ರಿ ವಾಪಾಸು ಬಂದೆ.

Comments

Popular posts from this blog

# ಜುಟ್ಟು ಕಾಳಿಂಗ ಸಪ೯ದ ಆಸ್ತಿತ್ವದ ಮಲೆನಾಡಿನ ಮಿಥ್ಯೆ#

  # ಕಾಳಿ೦ಗ ಸಪ೯ದಲ್ಲಿ ಜುಟ್ಟು ಕಾಳಿಂಗ ಸಪ೯ ಅಂತ ಇದೇ ಅನ್ನುವ ಯಾರು ನೋಡದ ಸಪ೯ದ ಅಸ್ತಿತ್ವ#    ಮಲೆನಾಡಿನ ಹಳ್ಳಿಗಳಲ್ಲಿ, ಅದು ಕಾಳಿ೦ಗ ಸಪ೯ದ ವಾಸಸ್ಥಳದ ಪರಿಸರದಲ್ಲಿ ಜುಟ್ಟು ಕಾಳಿಂಗ ಸಪ೯ ಇದೆ ಅನ್ನುವ ಮಾತು ಆಗಾಗ್ಗೆ ಕೇಳುತ್ತಿರುತ್ತೇವೆ. ಆದರೆ ಆ ರೀತಿಯ ಹಾವು ಇಲ್ಲ ಎಂದು ಹಾವಿನ ಬಗ್ಗೆ ಸಂಶೋದನೆ ಮಾಡುವವರು, ಅರಣ್ಯ ಇಲಾಖೆಯವರು, ಹಾವು ಹಿಡಿಯುವವರು ಖಡಾಖಂಡಿತವಾಗಿ ಹೇಳುತ್ತಾರಾದರು, ಈ ವದಂತಿ ಹೇಗೆ ಹರಡಿದೆ?.    ಇದು ಒಂದು ಊರು ಹಳ್ಳಿಯಲ್ಲ ನಾನು ನೋಡಿದಂತೆ ಮಹಾರಾಷ್ಟ್ರದ ರತ್ನಗಿರಿಯಿ೦ದ ಕೇರಳದ ಕಾಸರಗೋಡಿನ ತನಕ ಜುಟ್ಟು ಕಾಳಿಂಗದ ಅನೇಕ ರೋಚಕ ಕಥೆ ಕೇಳಿದ್ದೇನೆ.   ಪ್ರತ್ಯಕ್ಷ ನೋಡಿದವರು ತಾವು ಎನ್ನುವ ಅನೇಕರಲ್ಲಿ ಮಾತಾಡಿದ್ದೇನೆ ಆದರೆ ಅದು ನಂಬಲಹ೯ ಮಾಹಿತಿ ಅನಿಸಲಿಲ್ಲ, ಒಂದು ರೀತಿ ಕಾಲ್ಪನಿಕ ತ್ರಿಲ್ಲರ್ ಕಥೆ ಅಷ್ಟೇ ಅನ್ನಬಹುದು.    ಜಡೆ ಕಾಳಿಂಗ ಸಪ೯ಕ್ಕೆ ರೋಷ ಜಾಸ್ತಿ, ಹೆಡೆ ಮೇಲೆ ಕೂದಲಿನ ಜುಟ್ಟು ಇರುತ್ತೆ, ಮನುಷ್ಯರನ್ನ ಕಂಡರೆ ಓಡಿಸಿಕೊಂಡು ಬರುತ್ತೆ, ಅದರಿಂದ ತಪ್ಪಿಸಿಕೊಳ್ಳಲು ಒಂದೇ ದಾರಿ ಅದೇನೆಂದರೆ ತಗ್ಗಿನ ಪ್ರದೇಶದಲ್ಲಿ ಓಡುವುದು.     ಯಾಕೆ೦ದರೆ ಓಡಿಸಿಕೊಂಡು ಬರುವ ಜುಟ್ಟು ಕಾಳಿಂಗದ ಜುಟ್ಟು, ಇಳಿಜಾರಿನಲ್ಲಿ ಅದರ ತಲೆಯಿ೦ದ ಇಳಿಜಾರಿಗೆ ಸರಿಯುವುದರಿಂದ  ಕಣ್ಣಿನ ಮೇಲೆ ಕೂದಲ ಜುಟ್ಟು ಮುಚ್ಚುವುದರಿಂದ ಕಣ್ಣು ಕಾಣುವುದಿಲ್ಲ, ಆಗಲೇ ತಪ್...

HISTORICAL SAGAR MARIKAMBA JATRA.ಐತಿಹಾಸಿಕ ಸಾಗರದ ಮಾರಿಕಾಂಬಾ ಜಾತ್ರೆ

     ಸಾಗರದ ಮಾರಿಕಾಂಬಾ ಜಾತ್ರೆ ಐತಿಹಾಸಿಕ ಚರಿತ್ರೆಯಲ್ಲಿ ದಾಖಲೆ.        ಕನಾ೯ಟಕ ರಾಜ್ಯದಲ್ಲಿ ಎರೆಡು ಮಾರಿಕಾಂಬಾ ಜಾತ್ರೆಗಳು ಪ್ರಸಿದ್ಧಿ ಪಡೆದಿದೆ ಅದು ಉತ್ತರ ಕನ್ನಡ ಜಿಲ್ಲೆಯ ಸಿಸಿ೯ಯದ್ದು ಮತ್ತು ಶಿವಮೊಗ್ಗ ಜಿಲ್ಲೆಯ ಸಾಗರದ್ದು.    ಪ್ರತಿ ಮೂರು ವಷ೯ಕೆ ಈ ಜಾತ್ರೆ ಆಚರಿಸಲಾಗುತ್ತೆ ಶೂದ್ರ ವಗ೯ದವರು ಭಯ ಮತ್ತು ಭಕ್ತಿಯಿಂದ ಕುರಿ ಕೋಳಿ ಬಲಿ ನೀಡುವ ಪರಂಪರೆ ಇದೆ.ಮಂಗಳವಾರ ಮೇಲು ಜಾತಿಯ ಜನರ ಪೂಜೆ ದೇವಿಯ ತವರು ಮನೆಯಲ್ಲಿ ನಡೆಯುತ್ತದೆ ನಂತರ ರಾತ್ರಿ ಗಂಡನ ಸೇರುವ ಮಾರಿಗೆ ಶೂದ್ರರ ಪೂಜೆ, ಬಲಿ ಮೀಸಲು.    ಮೊದಲೆಲ್ಲ ಮಾರಿಯಮ್ಮನಿಗೆ ಕೊಣನ ಬಲಿ ನೀಡುತ್ತಿದ್ದರು ಈಗ ಇದು ಕಾನೂನು ಪ್ರಕಾರ ನಿಷಿದ್ಧ ಆದರೆ ಈ ಆಚಾರಣೆ ಗುಪ್ತವಾಗಿ ಬೇರೆ ಕಡೆ ನಡೆಸಲಾಗುತ್ತೆ ಅನ್ನುತ್ತಾರೆ.    ಸಾಗರದ ಮಾರಿಕಾ0ಬಾ ಜಾತ್ರೆ ಜಾತ್ರೆಯಿ೦ದ ಜಾತ್ರೆಗೆ ಅದೂರಿಯಾಗಿ ನಡೆಯುತ್ತದೆ, ಕೋಟ್ಯಾoತರ ಹಣದ ವಹಿವಾಟು ಕೂಡ, ಮೊದಲೆಲ್ಲ ಹಣದ ಅಪರಾ ತಪರ ಆಗುತ್ತಿದೆ ಎಂಬ ಗುಲ್ಲು ಇತ್ತು ಆದರೆ ಈಗೆಲ್ಲ ಪಾರದಶ೯ಕವಾಗಿದೆ ಆದರೂ ಈ ಬಾರಿಯ 2017ರ ಜಾತ್ರೆಯಲ್ಲಿ ಅವ್ಯವಹಾರದ ಆರೋಪ ಮಾಡಲಾಗಿದೆ ಈ ವಿಚಾರ ಇಲ್ಲಿ ಅಪ್ರಸ್ತುತ ಆದರೂ ಈ ಬಗ್ಗೆ ಬರೆಯಲು ಕಾರಣ ಕೆಳದಿ ಅರಸರ ಕಾಲದಲ್ಲಿ ಅಂದರೆ 350 ವಷ೯ದ ಹಿಂದೆಯೂ ರಾಜರಿಗೆ ಸಾಗರದ ಮಾರಿಕಾಂಬಾ ಜಾತ್ರೆಯಲ್ಲಿ ಸಾವ೯ಜನಿಕರಿಂದ ಸಂಗ್ರಹಿಸಿದ ಜಾತ...

ರಿಪ್ಪನ್ ಪೇಟೆ ( ಶಿವಮೊಗ್ಗ ಜಿಲ್ಲೆ) ಹೆಸರು ಬಂದಿದ್ದಾದರು ಹೇಗೆ?

#  ರಿಪ್ಪನ್ ಪೇಟೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಪ್ರಮುಖ ಹೋಬಳಿ ಕೇಂದ್ರ ಈ ಆಂಗ್ಲ ಅಧಿಕಾರಿಯ ಹೆಸರು ಇಡಲು ಕಾರಣವಾದ ಘಟನೆ ತುಂಬಾ ಕುತೂಹಲಕಾರಿ# ಸ್ವಲ್ಪ ಕಾಲ ನೀವು ಈ ಲೇಖನ ಓದಿದರೆ ಕಾರಣ ಗೊತ್ತಾಗುತ್ತೆ.    ಆಗ ಬ್ರಿಟಿಷ್ ಸಕಾ೯ರರಕ್ಕೆ ಆಡಳಿತ ಸುಗುಮಕ್ಕೆ ರೈಲು ಮಾಗ೯ ಅತ್ಯಗತ್ಯ ಎಂಬ ಸಕಾರಣ ಮನವರಿಕೆ ಆದ ಕಾಲ ಏಕೆಂದರೆ ಬ್ರಿಟಿಷರು ಅಮೆರಿಕಾ ವಲಸೆಯಲ್ಲಿ ಇದನ್ನ ಮನಗOಡಿದ್ದರು, ಬೆಂಗಳೂಳಿ ರಿಂದ ಶಿವಮೊಗ್ಗ ತಲುಪುವ ರೈಲು ಮಾಗ೯ ತಾಳಗುಪ್ಪಾ ತಲುಪಿದರೆ ಜೋಗ ಜಲಪಾತ ವೀಕ್ಷಣೆಗೆ ಅನುಕೂಲ ಎಂಬುದು ಹಾಗೆ ಮತ್ತೊಂದು ಮ್ಯಸೂರು ಸಕಾ೯ರ ಶರಾವತಿ ನದಿಗೆ ಆಣೆಕಟ್ಟು ಕಟ್ಟಿ.ಜಲ ವಿದ್ಯುತ್ ತಯಾರಿಸಲು ಸಾಮಗ್ರಿ ಸಾಗಾಣಿಕೆಗೆ ಅನುಕೂಲ ಎಂಬ ಕಾರಣದಿಂದ ಶಿವಮೊಗ್ಗದಿಂದ ತಾಳಗುಪ್ಪ ರೈಲು ಮಾಗ೯ ಯೋಜನೆ ಮಾಡಲಾಯಿತು.    ಆಗ ಪ್ಲೇಗ್ ಮಾರಿಯ ಕಾಲ, ಎಲ್ಲೆಲ್ಲೂ ಜನ ಸಾಯುತ್ತಿದ್ದರು ಆಗಲೇ ಈ ರೈಲು ಮಾಗ೯ ಶಿವಮೊಗ್ಗ ಆರಸಾಳಿOದ ದೊಡ್ಡಿನ ಕೊಪ್ಪ (ಈಗಿನ ರಿಪ್ಪನ್ ಪೇಟೆ) ಆನಂದಪುರಂ ಮಾಗ೯ ನಿಗದಿ ಆಗಿತ್ತು ಆದರೆ ಈ ಭಾಗದಲ್ಲಿ ಒಂದು  ವದಂತಿ ಈ ಬಾಗದಲ್ಲಿ ಹರಡಿತ್ತು ಅದೇನೆಂದರೆ ರೈಲು ಬಂದರೆ ಪ್ಲೇ ಗು ಬರುತ್ತೆ  ಅಂತ.    ಹಾಗಾಗಿ ಈ ಭಾಗದಲ್ಲಿನ ಜಾಗೃತ ಜನ ನಾಯಕರುಗಳು ಹೇಗಾದರು ಮಾಡಿ ರೈಲು ಬರದಂತೆ ಮಾಡಲು ಎಲ್ಲಾ ರೀತಿಯ ಪ್ರಯತ್ನ ಮಾಡಲು ಪ್ರಾರಂಭಿಸಿದರು.     ಇದೇ ಸಂದಭ೯ದಲ್ಲ...