Skip to main content

Blog number 1061. ಹೊನ್ನಾವರದ ಗಜಾನನ ಮಹಾಲೆ ಸಾಮಾಜಿಕ ಜಾಲತಾಣದಲ್ಲಿ ಸದಾ ಸಕ್ರಿಯವಾಗಿರುವವರು ನನ್ನ ಕಥಾ ಸಂಕಲನ ಬಿಲಾಲಿ ಬಿಲ್ಲಿ ಅಭ್ಯ೦ಜನ ಓದಿ ತಮ್ಮ ಅಭಿಪ್ರಾಯ ಪೇಸ್ ಬುಕ್ ಲ್ಲಿ ಬರೆದಿದ್ದಾರೆ.

#ಗ್ರಾಮೀಣಲೋಕದ_ಗಟ್ಟಿ_ಕಥೆಗಳು 

ಹಿರಿಯ ಸ್ನೇಹಿತ ಕೆ. ಅರುಣ್ ಪ್ರಸಾದ್ ತಮ್ಮ ಕಥಾ ಸಂಕಲನ "ಭಟ್ಟರ ಬೊಂಡಾದ ಬಾಂಡ್ಲಿಯಲ್ಲಿ ಬಿಲಾಲಿ ಬಿಲ್ಲಿ ಅಭ್ಯಂಜನ" ಎಂಬ ಪುಸ್ತಕವನ್ನು ಕಳಿಸಿದ್ದು ದೀಪಾವಳಿಗೆ ನಾಲ್ಕು ದಿನಗಳಿರುವಾಗ. ದೀಪಾವಳಿಯ ಸಡಗರ ಮುಗಿದ ಮೇಲೆ ಬಿಡುವು ಮಾಡಿಕೊಂಡು ಓದೋಣ ಎಂದು ಕಾದು, ಈಗಷ್ಟೇ ಓದಿ ಮುಗಿಸಿದೆ. ಎಷ್ಟು ಖುಷಿಯಾಗಿ ಓದಿಸಿಕೊಳ್ಳುವ ತಾಕತ್ತಿನ ಕಥೆಗಳೆಂದರೆ, ಅರೆ... ಓದಿ ಮುಗಿದೇ ಹೋಯ್ತಾ... ಮತ್ತಷ್ಟು ಕಥೆಗಳು ಇರ್ಬೇಕಿತ್ತು ಅನ್ನಿಸಿತು...

ಶಿವಮೊಗ್ಗ ಜಿಲ್ಲೆಯ, ಬೇರೆ ಬೇರೆ ಗ್ರಾಮೀಣ ಪ್ರದೇಶಗಳಲ್ಲೇ ನಡೆದ, ತಮ್ಮ ಜೀವನದ ಭಾಗವಾಗಿಯೇ ಇದ್ದ, ತಾವು ಸಹ ಭಾಗಿಯಾಗಿದ್ದ ಹಲವು ಘಟನೆಗಳನ್ನು ಸಹ ಕಥೆಯಾಗಿಸಿದ್ದಾರೆ ಅರುಣ್. ಇಲ್ಲಿಯ ಕಥೆಗಳನ್ನು ಓದುತ್ತಾ ಹೋದಂತೆ ಹಳ್ಳಿಯ ಬದುಕು, ಸಂಸ್ಕೃತಿ, ನಂಬಿಕೆ, ಪರಂಪರೆ, ಎಲ್ಲಾ ಅನಾವರಣಗೊಳ್ಳುತ್ತಾ ಹೋಗುತ್ತವೆ. ಗ್ರಾಮೀಣ ಭಾರತದ ಪರಿಚಯ ಆಗುವುದರ ಜೊತೆಗೆ ನಾವೂ ಸಹ ಇಂತಹ ಕಥೆಗಳಲ್ಲಿ ಬರುವ ಒಂದು ಪಾತ್ರವಾಗಿ ಬಿಡುತ್ತೇವೆ...
"ಭಟ್ಟರ ಬೊಂಡಾದ ಬಾಂಡ್ಲಿಯಲ್ಲಿ ಬಿಲಾಲಿ ಬಿಲ್ಲಿ ಅಭ್ಯಂಜನ ", "ಮಂಜ ಬ್ರಹ್ಮ ರಾಕ್ಷಸನಾಗಿ ಕಾಡಿದರೆ...!?", "ವಿಲ್ಲಿ ಭೂತವಾಗಿ", "ಇನಾಮುದಾರರ ಮಂಚ", "ಹೋರಿ ಮಂಜ ಮತ್ತು ಗಾಡಿ ಎತ್ತಿನ ಬ್ರಾಂಡಿ" ಸೇರಿದಂತೆ ಒಟ್ಟಿಗೆ 29 ಕಥೆಗಳು ಇರುವ ಈ ಪುಸ್ತದಲ್ಲಿ ಕೆ. ಅರುಣ್ ಪ್ರಸಾದ್ ತಾವು ಒಬ್ಬ ಒಳ್ಳೆಯ ಬರಹಗಾರ ಎಂಬ ಭಾವನೆ ಓದುಗರಲ್ಲಿ ಮೂಡುವಂತೆ ಸೊಗಸಾಗಿ ಕಥೆಗಳಿಗೆ ಜೀವತುಂಬಿದ್ದಾರೆ...

ಹೆಚ್ಚಿನ ಕಥೆಗಳು ನಮ್ಮ ಸುತ್ತ-ಮುತ್ತಲಿನ ಗ್ರಾಮೀಣ ಭಾಗದಲ್ಲಿ ನಡೆದ, ನಡೆಯುವ ಸಂಗತಿಗಳೇ ಅನ್ನಿಸಿ ಆಪ್ತವಾಗಿ ಓದಿಸಿಕೊಂಡು ಹೋಗುತ್ತವೆ. ಹಾವು ಗೊಲ್ಲ ವೆಂಕಟೇಶ್ ಹಿಂದೊಮ್ಮೆ ನಮ್ಮೂರಿಗೆ ಬಂದವನೇ ಇರಬೇಕು,ಡಿಸೋಜ ಡಾಕ್ಟರ್ ನಮ್ಮೂರಿನ ಪಶುವೈದ್ಯ ಇದ್ದವರೇ ಇರಬೇಕು,ಅಮೀರ್ ಸಾಬ್, ಮಂಜ, ಪೆಂಟರ್ ಮುನ್ನ ಇವರೆಲ್ಲ ನಾವೂ ನೋಡಿರುವವರೇ ಎಂಬ ಭಾವನೆ ಬರುವಷ್ಟು ಸಲೀಸಾಗಿ ಕಥೆಗಳ ಪಾತ್ರವಾಗಿರುವುದರಿಂದ ಇಲ್ಲಿಯ ಕಥೆಗಳು ನೈಜ ಘಟನೆಗಳೇ ಇರಬಹುದು ಅನ್ನಿಸಿ ಬಿಡುವಂತೆ ಕಥೆಗಳು ನಮ್ಮನ್ನು ಆವರಿಸಿಕೊಳ್ಳುವಲ್ಲಿ ಸಫಲವಾಗಿವೆ...

ಈ ಪುಸ್ತಕದಲ್ಲಿರುವ ಕಥೆಗಳು ಗ್ರಾಮೀಣ ಲೋಕದ ಗಟ್ಟಿ ಕಥೆಗಳು.ನಾನು ಕಥೆಗಳನ್ನು ಓದಿ ಖುಷಿಯಾಗಿ ಬರೆದ ಪುಸ್ತಕ ಪರಿಚಯ ಇದು. ವಿಮರ್ಶೆ ಅಲ್ಲ. ಒಳ್ಳೆಯ ಕಥೆಗಳನ್ನು ಓದಿ ಖುಷಿ ಪಡಲು ಕಾರಣರಾದ, ಪ್ರೀತಿಯಿಂದ ಪುಸ್ತಕ ಕಳಿಸಿದ, ನಾಲ್ಕು ಸಾಲು ಬರೆಯಲು ಪ್ರೇರಣೆ ಆಗುವಂತೆ ಉತ್ತಮ ಕಥಾಸಂಕಲನವನ್ನು ಕನ್ನಡ ಕಥಾಪ್ರಪಂಚಕ್ಕೆ ನೀಡಿದ ಕೆ. ಅರುಣ್ ಪ್ರಸಾದ್ ರವರಿಗೆ ಅಭಿನಂದನೆಗಳು. ಧನ್ಯವಾದಗಳು...
ಇನ್ನೂ ಹಲವು ಪುಸ್ತಕಗಳು ತಮ್ಮಿಂದ ಮುಂದೆಯೂ ಬರಲಿ ಎಂಬ ಶುಭ ಹಾರೈಕೆಗಳು....

#ಪುಸ್ತಕ_ಪರಿಚಯ

✍️ಗಜಾನನ ಮಹಾಲೆ.
     11-11-2022

Comments

Popular posts from this blog

# ಜುಟ್ಟು ಕಾಳಿಂಗ ಸಪ೯ದ ಆಸ್ತಿತ್ವದ ಮಲೆನಾಡಿನ ಮಿಥ್ಯೆ#

  # ಕಾಳಿ೦ಗ ಸಪ೯ದಲ್ಲಿ ಜುಟ್ಟು ಕಾಳಿಂಗ ಸಪ೯ ಅಂತ ಇದೇ ಅನ್ನುವ ಯಾರು ನೋಡದ ಸಪ೯ದ ಅಸ್ತಿತ್ವ#    ಮಲೆನಾಡಿನ ಹಳ್ಳಿಗಳಲ್ಲಿ, ಅದು ಕಾಳಿ೦ಗ ಸಪ೯ದ ವಾಸಸ್ಥಳದ ಪರಿಸರದಲ್ಲಿ ಜುಟ್ಟು ಕಾಳಿಂಗ ಸಪ೯ ಇದೆ ಅನ್ನುವ ಮಾತು ಆಗಾಗ್ಗೆ ಕೇಳುತ್ತಿರುತ್ತೇವೆ. ಆದರೆ ಆ ರೀತಿಯ ಹಾವು ಇಲ್ಲ ಎಂದು ಹಾವಿನ ಬಗ್ಗೆ ಸಂಶೋದನೆ ಮಾಡುವವರು, ಅರಣ್ಯ ಇಲಾಖೆಯವರು, ಹಾವು ಹಿಡಿಯುವವರು ಖಡಾಖಂಡಿತವಾಗಿ ಹೇಳುತ್ತಾರಾದರು, ಈ ವದಂತಿ ಹೇಗೆ ಹರಡಿದೆ?.    ಇದು ಒಂದು ಊರು ಹಳ್ಳಿಯಲ್ಲ ನಾನು ನೋಡಿದಂತೆ ಮಹಾರಾಷ್ಟ್ರದ ರತ್ನಗಿರಿಯಿ೦ದ ಕೇರಳದ ಕಾಸರಗೋಡಿನ ತನಕ ಜುಟ್ಟು ಕಾಳಿಂಗದ ಅನೇಕ ರೋಚಕ ಕಥೆ ಕೇಳಿದ್ದೇನೆ.   ಪ್ರತ್ಯಕ್ಷ ನೋಡಿದವರು ತಾವು ಎನ್ನುವ ಅನೇಕರಲ್ಲಿ ಮಾತಾಡಿದ್ದೇನೆ ಆದರೆ ಅದು ನಂಬಲಹ೯ ಮಾಹಿತಿ ಅನಿಸಲಿಲ್ಲ, ಒಂದು ರೀತಿ ಕಾಲ್ಪನಿಕ ತ್ರಿಲ್ಲರ್ ಕಥೆ ಅಷ್ಟೇ ಅನ್ನಬಹುದು.    ಜಡೆ ಕಾಳಿಂಗ ಸಪ೯ಕ್ಕೆ ರೋಷ ಜಾಸ್ತಿ, ಹೆಡೆ ಮೇಲೆ ಕೂದಲಿನ ಜುಟ್ಟು ಇರುತ್ತೆ, ಮನುಷ್ಯರನ್ನ ಕಂಡರೆ ಓಡಿಸಿಕೊಂಡು ಬರುತ್ತೆ, ಅದರಿಂದ ತಪ್ಪಿಸಿಕೊಳ್ಳಲು ಒಂದೇ ದಾರಿ ಅದೇನೆಂದರೆ ತಗ್ಗಿನ ಪ್ರದೇಶದಲ್ಲಿ ಓಡುವುದು.     ಯಾಕೆ೦ದರೆ ಓಡಿಸಿಕೊಂಡು ಬರುವ ಜುಟ್ಟು ಕಾಳಿಂಗದ ಜುಟ್ಟು, ಇಳಿಜಾರಿನಲ್ಲಿ ಅದರ ತಲೆಯಿ೦ದ ಇಳಿಜಾರಿಗೆ ಸರಿಯುವುದರಿಂದ  ಕಣ್ಣಿನ ಮೇಲೆ ಕೂದಲ ಜುಟ್ಟು ಮುಚ್ಚುವುದರಿಂದ ಕಣ್ಣು ಕಾಣುವುದಿಲ್ಲ, ಆಗಲೇ ತಪ್...

HISTORICAL SAGAR MARIKAMBA JATRA.ಐತಿಹಾಸಿಕ ಸಾಗರದ ಮಾರಿಕಾಂಬಾ ಜಾತ್ರೆ

     ಸಾಗರದ ಮಾರಿಕಾಂಬಾ ಜಾತ್ರೆ ಐತಿಹಾಸಿಕ ಚರಿತ್ರೆಯಲ್ಲಿ ದಾಖಲೆ.        ಕನಾ೯ಟಕ ರಾಜ್ಯದಲ್ಲಿ ಎರೆಡು ಮಾರಿಕಾಂಬಾ ಜಾತ್ರೆಗಳು ಪ್ರಸಿದ್ಧಿ ಪಡೆದಿದೆ ಅದು ಉತ್ತರ ಕನ್ನಡ ಜಿಲ್ಲೆಯ ಸಿಸಿ೯ಯದ್ದು ಮತ್ತು ಶಿವಮೊಗ್ಗ ಜಿಲ್ಲೆಯ ಸಾಗರದ್ದು.    ಪ್ರತಿ ಮೂರು ವಷ೯ಕೆ ಈ ಜಾತ್ರೆ ಆಚರಿಸಲಾಗುತ್ತೆ ಶೂದ್ರ ವಗ೯ದವರು ಭಯ ಮತ್ತು ಭಕ್ತಿಯಿಂದ ಕುರಿ ಕೋಳಿ ಬಲಿ ನೀಡುವ ಪರಂಪರೆ ಇದೆ.ಮಂಗಳವಾರ ಮೇಲು ಜಾತಿಯ ಜನರ ಪೂಜೆ ದೇವಿಯ ತವರು ಮನೆಯಲ್ಲಿ ನಡೆಯುತ್ತದೆ ನಂತರ ರಾತ್ರಿ ಗಂಡನ ಸೇರುವ ಮಾರಿಗೆ ಶೂದ್ರರ ಪೂಜೆ, ಬಲಿ ಮೀಸಲು.    ಮೊದಲೆಲ್ಲ ಮಾರಿಯಮ್ಮನಿಗೆ ಕೊಣನ ಬಲಿ ನೀಡುತ್ತಿದ್ದರು ಈಗ ಇದು ಕಾನೂನು ಪ್ರಕಾರ ನಿಷಿದ್ಧ ಆದರೆ ಈ ಆಚಾರಣೆ ಗುಪ್ತವಾಗಿ ಬೇರೆ ಕಡೆ ನಡೆಸಲಾಗುತ್ತೆ ಅನ್ನುತ್ತಾರೆ.    ಸಾಗರದ ಮಾರಿಕಾ0ಬಾ ಜಾತ್ರೆ ಜಾತ್ರೆಯಿ೦ದ ಜಾತ್ರೆಗೆ ಅದೂರಿಯಾಗಿ ನಡೆಯುತ್ತದೆ, ಕೋಟ್ಯಾoತರ ಹಣದ ವಹಿವಾಟು ಕೂಡ, ಮೊದಲೆಲ್ಲ ಹಣದ ಅಪರಾ ತಪರ ಆಗುತ್ತಿದೆ ಎಂಬ ಗುಲ್ಲು ಇತ್ತು ಆದರೆ ಈಗೆಲ್ಲ ಪಾರದಶ೯ಕವಾಗಿದೆ ಆದರೂ ಈ ಬಾರಿಯ 2017ರ ಜಾತ್ರೆಯಲ್ಲಿ ಅವ್ಯವಹಾರದ ಆರೋಪ ಮಾಡಲಾಗಿದೆ ಈ ವಿಚಾರ ಇಲ್ಲಿ ಅಪ್ರಸ್ತುತ ಆದರೂ ಈ ಬಗ್ಗೆ ಬರೆಯಲು ಕಾರಣ ಕೆಳದಿ ಅರಸರ ಕಾಲದಲ್ಲಿ ಅಂದರೆ 350 ವಷ೯ದ ಹಿಂದೆಯೂ ರಾಜರಿಗೆ ಸಾಗರದ ಮಾರಿಕಾಂಬಾ ಜಾತ್ರೆಯಲ್ಲಿ ಸಾವ೯ಜನಿಕರಿಂದ ಸಂಗ್ರಹಿಸಿದ ಜಾತ...

ರಿಪ್ಪನ್ ಪೇಟೆ ( ಶಿವಮೊಗ್ಗ ಜಿಲ್ಲೆ) ಹೆಸರು ಬಂದಿದ್ದಾದರು ಹೇಗೆ?

#  ರಿಪ್ಪನ್ ಪೇಟೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಪ್ರಮುಖ ಹೋಬಳಿ ಕೇಂದ್ರ ಈ ಆಂಗ್ಲ ಅಧಿಕಾರಿಯ ಹೆಸರು ಇಡಲು ಕಾರಣವಾದ ಘಟನೆ ತುಂಬಾ ಕುತೂಹಲಕಾರಿ# ಸ್ವಲ್ಪ ಕಾಲ ನೀವು ಈ ಲೇಖನ ಓದಿದರೆ ಕಾರಣ ಗೊತ್ತಾಗುತ್ತೆ.    ಆಗ ಬ್ರಿಟಿಷ್ ಸಕಾ೯ರರಕ್ಕೆ ಆಡಳಿತ ಸುಗುಮಕ್ಕೆ ರೈಲು ಮಾಗ೯ ಅತ್ಯಗತ್ಯ ಎಂಬ ಸಕಾರಣ ಮನವರಿಕೆ ಆದ ಕಾಲ ಏಕೆಂದರೆ ಬ್ರಿಟಿಷರು ಅಮೆರಿಕಾ ವಲಸೆಯಲ್ಲಿ ಇದನ್ನ ಮನಗOಡಿದ್ದರು, ಬೆಂಗಳೂಳಿ ರಿಂದ ಶಿವಮೊಗ್ಗ ತಲುಪುವ ರೈಲು ಮಾಗ೯ ತಾಳಗುಪ್ಪಾ ತಲುಪಿದರೆ ಜೋಗ ಜಲಪಾತ ವೀಕ್ಷಣೆಗೆ ಅನುಕೂಲ ಎಂಬುದು ಹಾಗೆ ಮತ್ತೊಂದು ಮ್ಯಸೂರು ಸಕಾ೯ರ ಶರಾವತಿ ನದಿಗೆ ಆಣೆಕಟ್ಟು ಕಟ್ಟಿ.ಜಲ ವಿದ್ಯುತ್ ತಯಾರಿಸಲು ಸಾಮಗ್ರಿ ಸಾಗಾಣಿಕೆಗೆ ಅನುಕೂಲ ಎಂಬ ಕಾರಣದಿಂದ ಶಿವಮೊಗ್ಗದಿಂದ ತಾಳಗುಪ್ಪ ರೈಲು ಮಾಗ೯ ಯೋಜನೆ ಮಾಡಲಾಯಿತು.    ಆಗ ಪ್ಲೇಗ್ ಮಾರಿಯ ಕಾಲ, ಎಲ್ಲೆಲ್ಲೂ ಜನ ಸಾಯುತ್ತಿದ್ದರು ಆಗಲೇ ಈ ರೈಲು ಮಾಗ೯ ಶಿವಮೊಗ್ಗ ಆರಸಾಳಿOದ ದೊಡ್ಡಿನ ಕೊಪ್ಪ (ಈಗಿನ ರಿಪ್ಪನ್ ಪೇಟೆ) ಆನಂದಪುರಂ ಮಾಗ೯ ನಿಗದಿ ಆಗಿತ್ತು ಆದರೆ ಈ ಭಾಗದಲ್ಲಿ ಒಂದು  ವದಂತಿ ಈ ಬಾಗದಲ್ಲಿ ಹರಡಿತ್ತು ಅದೇನೆಂದರೆ ರೈಲು ಬಂದರೆ ಪ್ಲೇ ಗು ಬರುತ್ತೆ  ಅಂತ.    ಹಾಗಾಗಿ ಈ ಭಾಗದಲ್ಲಿನ ಜಾಗೃತ ಜನ ನಾಯಕರುಗಳು ಹೇಗಾದರು ಮಾಡಿ ರೈಲು ಬರದಂತೆ ಮಾಡಲು ಎಲ್ಲಾ ರೀತಿಯ ಪ್ರಯತ್ನ ಮಾಡಲು ಪ್ರಾರಂಭಿಸಿದರು.     ಇದೇ ಸಂದಭ೯ದಲ್ಲ...