Skip to main content

Blog number 1061. ಹೊನ್ನಾವರದ ಗಜಾನನ ಮಹಾಲೆ ಸಾಮಾಜಿಕ ಜಾಲತಾಣದಲ್ಲಿ ಸದಾ ಸಕ್ರಿಯವಾಗಿರುವವರು ನನ್ನ ಕಥಾ ಸಂಕಲನ ಬಿಲಾಲಿ ಬಿಲ್ಲಿ ಅಭ್ಯ೦ಜನ ಓದಿ ತಮ್ಮ ಅಭಿಪ್ರಾಯ ಪೇಸ್ ಬುಕ್ ಲ್ಲಿ ಬರೆದಿದ್ದಾರೆ.

#ಗ್ರಾಮೀಣಲೋಕದ_ಗಟ್ಟಿ_ಕಥೆಗಳು 

ಹಿರಿಯ ಸ್ನೇಹಿತ ಕೆ. ಅರುಣ್ ಪ್ರಸಾದ್ ತಮ್ಮ ಕಥಾ ಸಂಕಲನ "ಭಟ್ಟರ ಬೊಂಡಾದ ಬಾಂಡ್ಲಿಯಲ್ಲಿ ಬಿಲಾಲಿ ಬಿಲ್ಲಿ ಅಭ್ಯಂಜನ" ಎಂಬ ಪುಸ್ತಕವನ್ನು ಕಳಿಸಿದ್ದು ದೀಪಾವಳಿಗೆ ನಾಲ್ಕು ದಿನಗಳಿರುವಾಗ. ದೀಪಾವಳಿಯ ಸಡಗರ ಮುಗಿದ ಮೇಲೆ ಬಿಡುವು ಮಾಡಿಕೊಂಡು ಓದೋಣ ಎಂದು ಕಾದು, ಈಗಷ್ಟೇ ಓದಿ ಮುಗಿಸಿದೆ. ಎಷ್ಟು ಖುಷಿಯಾಗಿ ಓದಿಸಿಕೊಳ್ಳುವ ತಾಕತ್ತಿನ ಕಥೆಗಳೆಂದರೆ, ಅರೆ... ಓದಿ ಮುಗಿದೇ ಹೋಯ್ತಾ... ಮತ್ತಷ್ಟು ಕಥೆಗಳು ಇರ್ಬೇಕಿತ್ತು ಅನ್ನಿಸಿತು...

ಶಿವಮೊಗ್ಗ ಜಿಲ್ಲೆಯ, ಬೇರೆ ಬೇರೆ ಗ್ರಾಮೀಣ ಪ್ರದೇಶಗಳಲ್ಲೇ ನಡೆದ, ತಮ್ಮ ಜೀವನದ ಭಾಗವಾಗಿಯೇ ಇದ್ದ, ತಾವು ಸಹ ಭಾಗಿಯಾಗಿದ್ದ ಹಲವು ಘಟನೆಗಳನ್ನು ಸಹ ಕಥೆಯಾಗಿಸಿದ್ದಾರೆ ಅರುಣ್. ಇಲ್ಲಿಯ ಕಥೆಗಳನ್ನು ಓದುತ್ತಾ ಹೋದಂತೆ ಹಳ್ಳಿಯ ಬದುಕು, ಸಂಸ್ಕೃತಿ, ನಂಬಿಕೆ, ಪರಂಪರೆ, ಎಲ್ಲಾ ಅನಾವರಣಗೊಳ್ಳುತ್ತಾ ಹೋಗುತ್ತವೆ. ಗ್ರಾಮೀಣ ಭಾರತದ ಪರಿಚಯ ಆಗುವುದರ ಜೊತೆಗೆ ನಾವೂ ಸಹ ಇಂತಹ ಕಥೆಗಳಲ್ಲಿ ಬರುವ ಒಂದು ಪಾತ್ರವಾಗಿ ಬಿಡುತ್ತೇವೆ...
"ಭಟ್ಟರ ಬೊಂಡಾದ ಬಾಂಡ್ಲಿಯಲ್ಲಿ ಬಿಲಾಲಿ ಬಿಲ್ಲಿ ಅಭ್ಯಂಜನ ", "ಮಂಜ ಬ್ರಹ್ಮ ರಾಕ್ಷಸನಾಗಿ ಕಾಡಿದರೆ...!?", "ವಿಲ್ಲಿ ಭೂತವಾಗಿ", "ಇನಾಮುದಾರರ ಮಂಚ", "ಹೋರಿ ಮಂಜ ಮತ್ತು ಗಾಡಿ ಎತ್ತಿನ ಬ್ರಾಂಡಿ" ಸೇರಿದಂತೆ ಒಟ್ಟಿಗೆ 29 ಕಥೆಗಳು ಇರುವ ಈ ಪುಸ್ತದಲ್ಲಿ ಕೆ. ಅರುಣ್ ಪ್ರಸಾದ್ ತಾವು ಒಬ್ಬ ಒಳ್ಳೆಯ ಬರಹಗಾರ ಎಂಬ ಭಾವನೆ ಓದುಗರಲ್ಲಿ ಮೂಡುವಂತೆ ಸೊಗಸಾಗಿ ಕಥೆಗಳಿಗೆ ಜೀವತುಂಬಿದ್ದಾರೆ...

ಹೆಚ್ಚಿನ ಕಥೆಗಳು ನಮ್ಮ ಸುತ್ತ-ಮುತ್ತಲಿನ ಗ್ರಾಮೀಣ ಭಾಗದಲ್ಲಿ ನಡೆದ, ನಡೆಯುವ ಸಂಗತಿಗಳೇ ಅನ್ನಿಸಿ ಆಪ್ತವಾಗಿ ಓದಿಸಿಕೊಂಡು ಹೋಗುತ್ತವೆ. ಹಾವು ಗೊಲ್ಲ ವೆಂಕಟೇಶ್ ಹಿಂದೊಮ್ಮೆ ನಮ್ಮೂರಿಗೆ ಬಂದವನೇ ಇರಬೇಕು,ಡಿಸೋಜ ಡಾಕ್ಟರ್ ನಮ್ಮೂರಿನ ಪಶುವೈದ್ಯ ಇದ್ದವರೇ ಇರಬೇಕು,ಅಮೀರ್ ಸಾಬ್, ಮಂಜ, ಪೆಂಟರ್ ಮುನ್ನ ಇವರೆಲ್ಲ ನಾವೂ ನೋಡಿರುವವರೇ ಎಂಬ ಭಾವನೆ ಬರುವಷ್ಟು ಸಲೀಸಾಗಿ ಕಥೆಗಳ ಪಾತ್ರವಾಗಿರುವುದರಿಂದ ಇಲ್ಲಿಯ ಕಥೆಗಳು ನೈಜ ಘಟನೆಗಳೇ ಇರಬಹುದು ಅನ್ನಿಸಿ ಬಿಡುವಂತೆ ಕಥೆಗಳು ನಮ್ಮನ್ನು ಆವರಿಸಿಕೊಳ್ಳುವಲ್ಲಿ ಸಫಲವಾಗಿವೆ...

ಈ ಪುಸ್ತಕದಲ್ಲಿರುವ ಕಥೆಗಳು ಗ್ರಾಮೀಣ ಲೋಕದ ಗಟ್ಟಿ ಕಥೆಗಳು.ನಾನು ಕಥೆಗಳನ್ನು ಓದಿ ಖುಷಿಯಾಗಿ ಬರೆದ ಪುಸ್ತಕ ಪರಿಚಯ ಇದು. ವಿಮರ್ಶೆ ಅಲ್ಲ. ಒಳ್ಳೆಯ ಕಥೆಗಳನ್ನು ಓದಿ ಖುಷಿ ಪಡಲು ಕಾರಣರಾದ, ಪ್ರೀತಿಯಿಂದ ಪುಸ್ತಕ ಕಳಿಸಿದ, ನಾಲ್ಕು ಸಾಲು ಬರೆಯಲು ಪ್ರೇರಣೆ ಆಗುವಂತೆ ಉತ್ತಮ ಕಥಾಸಂಕಲನವನ್ನು ಕನ್ನಡ ಕಥಾಪ್ರಪಂಚಕ್ಕೆ ನೀಡಿದ ಕೆ. ಅರುಣ್ ಪ್ರಸಾದ್ ರವರಿಗೆ ಅಭಿನಂದನೆಗಳು. ಧನ್ಯವಾದಗಳು...
ಇನ್ನೂ ಹಲವು ಪುಸ್ತಕಗಳು ತಮ್ಮಿಂದ ಮುಂದೆಯೂ ಬರಲಿ ಎಂಬ ಶುಭ ಹಾರೈಕೆಗಳು....

#ಪುಸ್ತಕ_ಪರಿಚಯ

✍️ಗಜಾನನ ಮಹಾಲೆ.
     11-11-2022

Comments

Popular posts from this blog

# ಜುಟ್ಟು ಕಾಳಿಂಗ ಸಪ೯ದ ಆಸ್ತಿತ್ವದ ಮಲೆನಾಡಿನ ಮಿಥ್ಯೆ#

  # ಕಾಳಿ೦ಗ ಸಪ೯ದಲ್ಲಿ ಜುಟ್ಟು ಕಾಳಿಂಗ ಸಪ೯ ಅಂತ ಇದೇ ಅನ್ನುವ ಯಾರು ನೋಡದ ಸಪ೯ದ ಅಸ್ತಿತ್ವ#    ಮಲೆನಾಡಿನ ಹಳ್ಳಿಗಳಲ್ಲಿ, ಅದು ಕಾಳಿ೦ಗ ಸಪ೯ದ ವಾಸಸ್ಥಳದ ಪರಿಸರದಲ್ಲಿ ಜುಟ್ಟು ಕಾಳಿಂಗ ಸಪ೯ ಇದೆ ಅನ್ನುವ ಮಾತು ಆಗಾಗ್ಗೆ ಕೇಳುತ್ತಿರುತ್ತೇವೆ. ಆದರೆ ಆ ರೀತಿಯ ಹಾವು ಇಲ್ಲ ಎಂದು ಹಾವಿನ ಬಗ್ಗೆ ಸಂಶೋದನೆ ಮಾಡುವವರು, ಅರಣ್ಯ ಇಲಾಖೆಯವರು, ಹಾವು ಹಿಡಿಯುವವರು ಖಡಾಖಂಡಿತವಾಗಿ ಹೇಳುತ್ತಾರಾದರು, ಈ ವದಂತಿ ಹೇಗೆ ಹರಡಿದೆ?.    ಇದು ಒಂದು ಊರು ಹಳ್ಳಿಯಲ್ಲ ನಾನು ನೋಡಿದಂತೆ ಮಹಾರಾಷ್ಟ್ರದ ರತ್ನಗಿರಿಯಿ೦ದ ಕೇರಳದ ಕಾಸರಗೋಡಿನ ತನಕ ಜುಟ್ಟು ಕಾಳಿಂಗದ ಅನೇಕ ರೋಚಕ ಕಥೆ ಕೇಳಿದ್ದೇನೆ.   ಪ್ರತ್ಯಕ್ಷ ನೋಡಿದವರು ತಾವು ಎನ್ನುವ ಅನೇಕರಲ್ಲಿ ಮಾತಾಡಿದ್ದೇನೆ ಆದರೆ ಅದು ನಂಬಲಹ೯ ಮಾಹಿತಿ ಅನಿಸಲಿಲ್ಲ, ಒಂದು ರೀತಿ ಕಾಲ್ಪನಿಕ ತ್ರಿಲ್ಲರ್ ಕಥೆ ಅಷ್ಟೇ ಅನ್ನಬಹುದು.    ಜಡೆ ಕಾಳಿಂಗ ಸಪ೯ಕ್ಕೆ ರೋಷ ಜಾಸ್ತಿ, ಹೆಡೆ ಮೇಲೆ ಕೂದಲಿನ ಜುಟ್ಟು ಇರುತ್ತೆ, ಮನುಷ್ಯರನ್ನ ಕಂಡರೆ ಓಡಿಸಿಕೊಂಡು ಬರುತ್ತೆ, ಅದರಿಂದ ತಪ್ಪಿಸಿಕೊಳ್ಳಲು ಒಂದೇ ದಾರಿ ಅದೇನೆಂದರೆ ತಗ್ಗಿನ ಪ್ರದೇಶದಲ್ಲಿ ಓಡುವುದು.     ಯಾಕೆ೦ದರೆ ಓಡಿಸಿಕೊಂಡು ಬರುವ ಜುಟ್ಟು ಕಾಳಿಂಗದ ಜುಟ್ಟು, ಇಳಿಜಾರಿನಲ್ಲಿ ಅದರ ತಲೆಯಿ೦ದ ಇಳಿಜಾರಿಗೆ ಸರಿಯುವುದರಿಂದ  ಕಣ್ಣಿನ ಮೇಲೆ ಕೂದಲ ಜುಟ್ಟು ಮುಚ್ಚುವುದರಿಂದ ಕಣ್ಣು ಕಾಣುವುದಿಲ್ಲ, ಆಗಲೇ ತಪ್...

ಶರಾವತಿ ನದಿ ಉಗಮ ಸ್ಥಾನ ಅಂಬುತೀಥ೯.

ಇಡೀ ರಾಜ್ಯಕ್ಕೆ ವಿದ್ಯುತ್ ನೀಡುವ ಶರಾವತಿ ನದಿಯ ಉಗಮ ಸ್ಥಾನ ಅಂಬುತೀಥ೯, ಆರಗ ಸಮೀಪದ ತೀಥ೯ಳ್ಳಿ ತಾಲ್ಲೂಕಿನಲ್ಲಿದೆ( ಶಿವಮೊಗ್ಗ ಜಿಲ್ಲೆ)    ಅಂಬು ತೀಥ೯ದಲ್ಲಿ ಶ್ರೀ ರಾಮ ವನವಾಸದಲ್ಲಿದ್ದಾಗ ಸೀತಾ ಮಾತೆಗೆ ಪೂಜೆಗೆ ನೀರು ಸಿಗದಿದ್ದಾಗ ರಾಮ ತನ್ನ ಅಂಬಿನಿಂದ (ಬಿಲ್ಲಿನ ಬಾಣದಿಂದ) ನೆಲ ಸೀಳಿ ನೀರು ತಂದರೆ೦ದು ರಾಮಾಯಣದಲ್ಲಿ ಉಲ್ಲೇಖವಿದೆ, ಹಾಗಾಗಿ ಈ ಸ್ಥಳಕ್ಕೆ ಅಂಬುತೀಥ೯ ಎಂಬ ಹೆಸರು ಬ೦ತು ಎಂಬುದು ಸ್ಥಳ ಪುರಾಣ.    ಇಲ್ಲಿ ಸಣ್ಣ ತೊರೆಯಾಗಿ ಹುಟ್ಟುವ ನದಿ ಬಾಣದಿಂದ ಹುಟ್ಟಿದ್ದರಿಂದ ಶರಾವತಿ ಎ೦ಬ ಹೆಸರು ಪಡೆದು ಪೂವ೯ಕ್ಕೆ ಹರಿದು ನಂತರ ಪಶ್ಚಿಮ ಮುಖವಾಗಿ ತಿರುಗಿ ಹೊಸನಗರ ತಾಲ್ಲೂಕನ್ನ ದಾಟಿ ಸಾಗರ ತಾಲ್ಲೂಕಿನ ಜೋಗದಲ್ಲಿ ಜಲಪಾತವಾಗಿ ದಟ್ಟ ಕಾನನದ ಕಣಿವೆ ಮುಖಾಂತರ ಹರಿದು ಹೊನ್ನಾವರದಲ್ಲಿ ಅರಬ್ಬಿ ಸಮುದ್ರ ಸೇರುತ್ತದೆ.   ಈ ನದಿಗೆ ಮೊದಲಿಗೆ ಹೀರೇ ಬಾಸ್ಕರ ಎಂಬಲ್ಲಿ ನಂತರ ಲಿಂಗನಮಕ್ಕಿಯಲ್ಲಿ ಆಣೆಕಟ್ಟು ಕಟ್ಟಿ ರಾಜ್ಯಕ್ಕೆ ಜಲ ವಿದ್ಯುತ್ ನೀಡುತ್ತಿರುವುದರಿಂದ ಲಕ್ಷಾಂತರ ಎಕರೆ ಕಾಡು, ಜಮೀನು ಅನೇಕ ಊರು ಮುಳುಗಡೆ ಆಯಿತು ಸಾವಿರಾರು ಕುಟುಂಬಗಳು ಸಂತ್ರಸ್ಥರಾದದ್ದು ಇತಿಹಾಸ.    ಈ ನದಿ ಜೋಗದಲ್ಲಿ ದುಮುಕುವ ಜಲಪಾತ ವಿಶ್ವದ ಸುಂದರ ಜಲಪಾತದಲ್ಲಿ ಒಂದಾಗಿದೆ.    ಹಾಗಾಗಿ ಶರಾವತಿ ನದಿಯ ಉಗಮ ಸ್ಥಾನಕ್ಕೆ ಮಹತ್ವವಿದೆ, ಒಮ್ಮೆಯಾದರೂ ಈ ನದಿ ಮೂಲ ಸಂದಶಿ೯ಸಬೇಕು ಆದರೆ ಇಲ್ಲಿ ಶರಾವತಿ ವ...

Blog number 1037. ರಾಜಕುಮಾರಿ ಶಾಂತವ್ವ ಮತ್ತು ದಲಿತ ಯುವಕ ಸಿದ್ದೇಶ್ವರರ ಅಮರ ಪ್ರೇಮದ ಸ್ಮಾರಕ, ಅನ್ಯ ಜಾತಿ ವಿವಾಹವಾದ್ದರಿಂದ ರಾಜಕುಮಾರಿಗೆ ಸೂಳೆ ಪಟ್ಟ ನೀಡಿದ ಸಮಾಜ. ಸಮಾಜದ ಒಳಿತಿಗಾಗಿ ಶಾಂತವ್ವ ಕಟ್ಟಿಸಿದ ಬೃಹತ್ ಕೆರೆಗೆ ಜನ ಕರೆದದ್ದು ಸೂಳೆ ಕಟ್ಟಿಸಿದ ಕೆರೆ ಅದೇ ಸೂಳೆಕೆರೆ / ಶಾಂತಿ ಸಾಗರ

# ಸೂಳೆಕೆರೆ (ಶಾಂತಿ ಸಾಗರ) ಅಂತರ್ ಜಾತಿ ಪ್ರೇಮ ವಿವಾಹದ ದುರOತ ಕಥೆ. #ಅಕ್ಟೋಬರ್ 2019 ರಲ್ಲಿ ತುಂಬಿ ತುಳುಕಿತ್ತು.  ಚಿತ್ರದುಗ೯, ದಾವಣಗೆರೆ ಬಳ್ಳಾರಿ ಮುಂತಾದ ಮಳೆ ಕಡಿಮೆ ಆಗುತ್ತಿದ್ದ ಜಿಲ್ಲೆಗಳಲ್ಲಿ ಅದೂ ಅಕ್ಟೋಬರ್ ತಿಂಗಳ 2019 ರಲ್ಲಿ  ಬಂದಿದ್ದ ಬಾರಿ ಮಳೆ ಎಲ್ಲಾ ಕೆರೆ, ಹೊಂಡಗಳು ತುಂಬಿ ತುಳುಕಿದೆ, ಸಾಮಾಜಿಕ ಜಾಲ ತಾಣದಲ್ಲಿ 40 ವಷ೯ದಲ್ಲಿ ಇಂತ ಮಳೆ ಬಂದಿಲ್ಲ ಅಂತ ಸುದ್ದಿ ಹರಿದಾಡುತ್ತಿತ್ತು ಮತ್ತು  ಸೂಳೆಕೆರೆ ತುಂಬಿ ಕೋಡಿ ಬಿದ್ದಿದೆ ಅಂತೆಲ್ಲ Post ನೋಡಿ ಬೆಂಗಳೂರಿಂದ ಬರುವಾಗ ಚಿತ್ರದುಗ೯ ಮಾಗ೯ವಾಗಿ ಚನ್ನಗಿರಿ ತಲುಪಿ ಸೂಳೆಕೆರೆ ನೋಡಲು ಹೋಗಿದ್ದೆ.  11ನೇ ಶತಮಾನದಲ್ಲಿ (1128ರಲ್ಲಿ)ಕೇವಲ 3 ವಷ೯ದಲ್ಲಿ ಈ ಕೆರೆ ನಿಮಾ೯ಣ ಮಾಡಿಸಿದ್ದು ಶಾಂತವ್ವ ಎಂಬ ರಾಜ ಕುಮಾರಿ ಅವಳು ಸ್ವಣ೯ವತಿ ಪಟ್ಟಣದ ದೊರೆ ವಿಕ್ರಮ ರಾಜನ ಮಗಳು, ಸಿದ್ದೇಶ್ವರ ಎಂಬ ಅನ್ಯ ಜಾತಿಯ ಯುವಕನೊ೦ದಿಗೆ ಗಾಂದವ೯ ವಿವಾಹ ಆಗುತ್ತಾಳೆ ಇದನ್ನ ಸಹಿಸದ ಮತ್ತು ಒಪ್ಪದ ಜನತೆ ಸೂಳೆ ಎಂದು ಮೂದಲಿಸುತ್ತಾರOತೆ ಈ ರೀತಿ ತನಗೆ ಬಂದ ಕಳಂಕ ಕಳೆಯಲು ಈ ಬೃಹತ್ ಕೆರೆ ತನ್ನ ಪತಿ ಸಿದ್ದೇಶ್ವರನ ಜೊತೆ ಸೇರಿ ನಿಮಿ೯ಸಿ ಕೆರೆಗೆ ಹಾರವಾದಳೆoಬ ಇತಿಹಾಸ ಇದೆ ಇದರಿಂದ ನೊಂದ ಪತಿ ಸಿದ್ಧೇಶ್ವರ ಕೂಡ ಎದುರಿನ ಗುಡ್ಡದಲ್ಲಿ ಜೀವ ತ್ಯಾಗ ಮಾಡುತ್ತಾನೆ ಈಗ ಅಲ್ಲಿ ಸಿದ್ದೇಶ್ವರ ದೇವಸ್ಥಾನವಿದೆ.   ಈ ಕೆರೆ ಈಗಲೂ ಸೂ...