Skip to main content

Blog number 1064. ರವಿ ಬೆಳೆಗೆರೆ ಅಸ್ತಂಗತರಾಗಿದ್ದಾರೆ ಆದರೆ ಅವರು ಪತ್ರಿಕೊದ್ಯಮ, ಟೆಲಿವಿಷನ್ ಮಾಧ್ಯಮ ಮತ್ತು ಸಾಹಿತ್ಯ ಲೋಕದಲ್ಲಿ ಮಾಡಿರುವ ಸಾದನೆ ಅಸಮಾನ್ಯ, ಅವರ ಅಭಿಮಾನಿ ಆಗಿ ಅವರಿಗೆ ಅತಿಥ್ಯ ನೀಡುವ ಕೆಲವು ಅವಕಾಶ ನನಗೆ ದೊರಕಿತ್ತು ಎಂಬುದು ಜೀವಮಾನ ಪೂರ್ತಿ ನೆನಪಿನಲ್ಲಿ ಉಳಿಯುವುದು.

ರವಿಬೆಳೆಗೆರೆ_ಹಾಯ್_ಬೆಂಗಳೂರು
#ರವಿ ಬೆಳೆಗೆರೆ ಅಸ್ತoಗತರಾಗಿ ಇವತ್ತಿಗೆ ಎರೆಡು ವರ್ಷ.

    ಅವತ್ತು ಅಂದರೆ 2020ರ ನವೆಂಬರ್ 13ರ ಮಧ್ಯ ರಾತ್ರಿ ಪ್ರಜಾವಾಣಿ ವಿಭಾಗೀಯ ಪ್ರಸರಾಣಾಧಿಕಾರಿ ಸಂಗಣ್ಣ ಪ್ರಕಾಶ್ ವಾಟ್ಸ್ ಪ್ ನಲ್ಲಿ ರವಿ ಬೆಳೆಗೆರೆ ಅಸ್ತಂಗತ ಅಂತ ಸುದ್ದಿ ಕಳಿಸಿದ್ದು ನೋಡಿ ನನ್ನ ಮನಸ್ಸು ಸೂತಕದ ಮನೆ ಅಂತಾಯಿತು.
 ಮೊದಲ ಪ್ರತಿ ಹಾಯ್ ಬೆಂಗಳೂರಿಂದ ಇವತ್ತಿನ ಸಾವಿರದ ಇನ್ನೂರು ದಾಟಿದ ಪ್ರತಿ ಪತ್ರಿಕೆ, ಅವರು ಬರೆದ ಅನುವಾದಿಸಿದ ಎಲ್ಲಾ ಪುಸ್ತಕ ಓದಿದ್ದೇನೆ.
  ನನ್ನ ಜೀವನದ ಎಲ್ಲಾ ಏಳು ಬೀಳಿನಲ್ಲಿ ರವಿ ಬೆಳೆಗೆರೆಯ ಬರಹಗಳು ಅವರ ಜೀವನದ ಅನುಭವ ನನಗೆ ವಿಪರೀತ ಪ್ರಭಾವ ಉಂಟು ಮಾಡಿತ್ತು.
  ಇವರ ನನ್ನ ಮೊದಲ ಬೇಟಿ ಹೇಗಾಯಿತೆ೦ದರೆ ಶಿವಮೊಗ್ಗ ಜಿಲ್ಲಾ ಪಂಚಾಯತ್ ಕೋಟ್ಯಾಂತರ ರೂಪಾಯಿ ಹಣ ಕಳಪೆ ಔಷದಿ ಖರೀದಿಸಿ ಲಕ್ಷಾಂತರ ರೂಪಾಯಿ ಹೊಡೆದು ತಿಂದ ಕಥೆ ಅವತ್ತಿನ ಜಿಲ್ಲಾ ಸಜ೯ನ್ ರಹಸ್ಯವಾಗಿ ತಿಳಿಸಿದ್ದನ್ನ ಜಿಲ್ಲಾ ಪಂಚಾಯತ್ ಸಭೆಯಲ್ಲಿ ಮಂಡಿಸಿ ತನಿಖೆಗೆ ಒತ್ತಾಯಿಸಿದ್ದರಿಂದ ಅವತ್ತು ರಾತ್ರಿಯೇ ಈ ಔಷದಿ ಗೋದಾಮ ವಿದ್ಯುತ್ ಅವಘಡದಿಂದ ಸುಟ್ಟು ಹೋಯಿತೆಂದು ಮಾಡಿ ಇದನ್ನು ಪ್ರತಿಭಟಿಸಿದ ನನ್ನ ಮೇಲೆ ಸುಳ್ಳು ಕೇಸ್ ಮಾಡಿ ಜೈಲಿಗೆ ಕಳಿಸಿದ ಪ್ರಕರಣದಲ್ಲಿ ಜಿಲ್ಲಾ ಮಟ್ಟದ ಎಲ್ಲಾ ಅಧಿಕಾರಿಗಳು ಅಧಿಕಾರ ಹೊಂದಿದ್ದ ಎಲ್ಲಾ ರಾಜಕಾರಣಿಗಳು ಪಾಲುದಾರರಾಗಿದ್ದಾಗ ನಾನು ಒಬ್ಬಂಟಿ ಆಗಿದ್ದೆ.
 ಆ ಸಂದಭ೯ದಲ್ಲಿ ಹಾಯ್ ಬೆಂಗಳೂರು ನನ್ನ ಪರವಾಗಿ ಪ್ರಕಟಿಸಿದ ವರದಿ ನನಗೆ ನನ್ನ ಹೋರಾಟದ ನೈತಿಕತೆಗೆ ಹೆಚ್ಚಿನ ಬಲ ಮತ್ತು ಆತ್ಮವಿಶ್ವಾಸ ಉಂಟು ಮಾಡಿತ್ತು ಇದಕ್ಕೆ ಧನ್ಯವಾದ ಹೇಳಲು ರವಿ ಬೆಳೆಗೆರೆಗೆ ಪೋನ್ ಮಾಡಿದಾಗ ಸ್ವತಃ ಬಂದು ಧನ್ಯವಾದ ಹೇಳಿ ಅಂದಿದ್ದರು ಹಾಗಾಗಿ ಬೆಂಗಳೂರಿನ ಅವರ ಕಛೇರಿಗೆ ಹೋಗಿ ಬೇಟಿ ಮಾಡಿದ್ದೆ " ಏನ್ರಿ ಒಂದು ಒಳ್ಳೇ ಪೋಟೋ ಕೊಡೋಕೆ ಆಗಿಲ್ಲೇನ್ರಿ? ಕ್ರಿಮಿನಲ್ ಗಳೇ ಸೂಟು ಬೂಟು ಹಾಕಿ ಪತ್ರಿಕೆಗೆ ಪೋಟೊ ಕೊಡುತ್ತಾರೆ " ಅಂತ ತಮಾಷೆ ಮಾಡಿದ್ದರು.
 ಇದಕ್ಕೆ ಕಾರಣ ನನ್ನ ಬಗ್ಗೆ ವರದಿ ಮಾಡಿದ ಶೃಂಗೇಶರಿಗೆ ಅವತ್ತು ನನ್ನ ಪರಿಚಯ ಇರಲಿಲ್ಲ ಮತ್ತು ಸರಿಯಾದ ಪೋಟೊ ಅವರಿಗೆ ಸಿಕ್ಕಿರಲಿಲ್ಲ.
 ನಂತರ ನನ್ನ ಬಗ್ಗೆ ಅನೇಕ ಲೇಖನಗಳು ಬಂದಿದೆ, ಬಹಿರಂಗ ಸಭೆಯಲ್ಲಿ ರವಿ ಬೆಳೆಗೆರೆ ನನ್ನ ಬಗ್ಗೆ ಮಾತಾಡಿದ್ದು ಎಲ್ಲಾ ಈಗ ನೆನಪು.
 ನಮ್ಮ ಮಲ್ಲಿಕಾ ವೆಜ್ ನ ಇಡ್ಲಿ ವಡಾ ಸಾಂಬಾರು ಮತ್ತು ಕೊಥಾಸ್ ಪಿಲ್ಟರ್ ಕಾಫಿ ಅವರಿಗೆ ತುಂಬಾ ಇಷ್ಟ ಹಾಗೆಯೇ ನಮ್ಮ ಚಂಪಕಾ ಪ್ಯಾರಾಡೈಸ್ ನ ಮಡಿಕೆ ದಮ್ ಬಿರಿಯಾನಿಗೆ ಅವರು ಪಿದಾ ಆಗಿದ್ದರು ಅವರು ಅದನ್ನು ಪೇಸ್ ಬುಕ್ ನಲ್ಲೂ ಬರೆದಿದ್ದರು.
   ಅವರ ನನ್ನ ಕೊನೆಯ ಭೇಟಿ ಲಾಕ್ ಡೌನ್ ಗೆ ಕೆಲ ದಿನ ಮೊದಲು 21 ಜನವರಿ 2020 ರಂದು ಈ ಮಾಗ೯ದಲ್ಲಿ ಬಂದಾಗ ಶೃಂಗೇಶ್ ಬೆಳಗಿನ ಉಪಹಾರಕ್ಕೆ ನಮ್ಮಲ್ಲಿ ಕರೆತಂದಿದ್ದರು ಇಂತಹ ಇಡ್ಲಿ ಸಾಂಬಾರು ಚಟ್ನಿ ಸ್ಟಾರ್ ಹೋಟಲ್ ಲ್ಲಿ ಸಿಗೋದಿಲ್ಲ ಅಂದಿದ್ದರು.
 ನನ್ನ ಗೆಳೆಯರು ಮತ್ತು ನನ್ನ ಸಿಬ್ಬಂದಿಗಳ ಜೊತೆ ಪೋಟೊ ತೆಗೆಸಿಕೊಂಡರು ಅವರನ್ನ ನನ್ನ ಗೆಳೆಯರು ಅವರ ಕ್ರೈಂಡೈರಿ ಬಗ್ಗೆ ನೆನಪಿಸಿದಾಗ ಅವರು ಆ ಬಗ್ಗೆ ಮಾತಾಡಿದ ವಿಡಿಯೋ ತುಣುಕು ಲಗತ್ತಿಸಿದ್ದೇನೆ.
  ಅವತ್ತು ಅವರಿಗಾಗಿ 2 ಬಿರಿಯಾನಿ ಅವರ ಡ್ರೈವರ್ ಗೆ ಒ0ದ ಮೊಟ್ಟೆ ಬಿರಿಯಾನಿ ಕೇಳಿದ್ದರು ಅದನ್ನು ಸಾಗರಕ್ಕೆ ಅವರ ಕೋಟ್೯ ಕಲಾಪ ಮುಗಿಸುವ ಮೊದಲೇ ಅವರಿಗೆ ತಲುಪಿಸಿದ್ದೆ ಅಲ್ಲಿಂದ ಅವರು ಜೋಯಿಡಾ ಹೋದರು ಮುಂದಿನ ಸಾರಿ ಪುನಃ ಬರುವುದಾಗಿ ಹೋದವರು ರಾತ್ರಿ ಇಹಲೋಕ ತ್ಯಜಿಸಿ ಬಾರದ ಲೋಕಕ್ಕೆ ಹೋಗಿದ್ದು ವಿಷಾದನೀಯ.

Comments

Popular posts from this blog

# ಜುಟ್ಟು ಕಾಳಿಂಗ ಸಪ೯ದ ಆಸ್ತಿತ್ವದ ಮಲೆನಾಡಿನ ಮಿಥ್ಯೆ#

  # ಕಾಳಿ೦ಗ ಸಪ೯ದಲ್ಲಿ ಜುಟ್ಟು ಕಾಳಿಂಗ ಸಪ೯ ಅಂತ ಇದೇ ಅನ್ನುವ ಯಾರು ನೋಡದ ಸಪ೯ದ ಅಸ್ತಿತ್ವ#    ಮಲೆನಾಡಿನ ಹಳ್ಳಿಗಳಲ್ಲಿ, ಅದು ಕಾಳಿ೦ಗ ಸಪ೯ದ ವಾಸಸ್ಥಳದ ಪರಿಸರದಲ್ಲಿ ಜುಟ್ಟು ಕಾಳಿಂಗ ಸಪ೯ ಇದೆ ಅನ್ನುವ ಮಾತು ಆಗಾಗ್ಗೆ ಕೇಳುತ್ತಿರುತ್ತೇವೆ. ಆದರೆ ಆ ರೀತಿಯ ಹಾವು ಇಲ್ಲ ಎಂದು ಹಾವಿನ ಬಗ್ಗೆ ಸಂಶೋದನೆ ಮಾಡುವವರು, ಅರಣ್ಯ ಇಲಾಖೆಯವರು, ಹಾವು ಹಿಡಿಯುವವರು ಖಡಾಖಂಡಿತವಾಗಿ ಹೇಳುತ್ತಾರಾದರು, ಈ ವದಂತಿ ಹೇಗೆ ಹರಡಿದೆ?.    ಇದು ಒಂದು ಊರು ಹಳ್ಳಿಯಲ್ಲ ನಾನು ನೋಡಿದಂತೆ ಮಹಾರಾಷ್ಟ್ರದ ರತ್ನಗಿರಿಯಿ೦ದ ಕೇರಳದ ಕಾಸರಗೋಡಿನ ತನಕ ಜುಟ್ಟು ಕಾಳಿಂಗದ ಅನೇಕ ರೋಚಕ ಕಥೆ ಕೇಳಿದ್ದೇನೆ.   ಪ್ರತ್ಯಕ್ಷ ನೋಡಿದವರು ತಾವು ಎನ್ನುವ ಅನೇಕರಲ್ಲಿ ಮಾತಾಡಿದ್ದೇನೆ ಆದರೆ ಅದು ನಂಬಲಹ೯ ಮಾಹಿತಿ ಅನಿಸಲಿಲ್ಲ, ಒಂದು ರೀತಿ ಕಾಲ್ಪನಿಕ ತ್ರಿಲ್ಲರ್ ಕಥೆ ಅಷ್ಟೇ ಅನ್ನಬಹುದು.    ಜಡೆ ಕಾಳಿಂಗ ಸಪ೯ಕ್ಕೆ ರೋಷ ಜಾಸ್ತಿ, ಹೆಡೆ ಮೇಲೆ ಕೂದಲಿನ ಜುಟ್ಟು ಇರುತ್ತೆ, ಮನುಷ್ಯರನ್ನ ಕಂಡರೆ ಓಡಿಸಿಕೊಂಡು ಬರುತ್ತೆ, ಅದರಿಂದ ತಪ್ಪಿಸಿಕೊಳ್ಳಲು ಒಂದೇ ದಾರಿ ಅದೇನೆಂದರೆ ತಗ್ಗಿನ ಪ್ರದೇಶದಲ್ಲಿ ಓಡುವುದು.     ಯಾಕೆ೦ದರೆ ಓಡಿಸಿಕೊಂಡು ಬರುವ ಜುಟ್ಟು ಕಾಳಿಂಗದ ಜುಟ್ಟು, ಇಳಿಜಾರಿನಲ್ಲಿ ಅದರ ತಲೆಯಿ೦ದ ಇಳಿಜಾರಿಗೆ ಸರಿಯುವುದರಿಂದ  ಕಣ್ಣಿನ ಮೇಲೆ ಕೂದಲ ಜುಟ್ಟು ಮುಚ್ಚುವುದರಿಂದ ಕಣ್ಣು ಕಾಣುವುದಿಲ್ಲ, ಆಗಲೇ ತಪ್...

HISTORICAL SAGAR MARIKAMBA JATRA.ಐತಿಹಾಸಿಕ ಸಾಗರದ ಮಾರಿಕಾಂಬಾ ಜಾತ್ರೆ

     ಸಾಗರದ ಮಾರಿಕಾಂಬಾ ಜಾತ್ರೆ ಐತಿಹಾಸಿಕ ಚರಿತ್ರೆಯಲ್ಲಿ ದಾಖಲೆ.        ಕನಾ೯ಟಕ ರಾಜ್ಯದಲ್ಲಿ ಎರೆಡು ಮಾರಿಕಾಂಬಾ ಜಾತ್ರೆಗಳು ಪ್ರಸಿದ್ಧಿ ಪಡೆದಿದೆ ಅದು ಉತ್ತರ ಕನ್ನಡ ಜಿಲ್ಲೆಯ ಸಿಸಿ೯ಯದ್ದು ಮತ್ತು ಶಿವಮೊಗ್ಗ ಜಿಲ್ಲೆಯ ಸಾಗರದ್ದು.    ಪ್ರತಿ ಮೂರು ವಷ೯ಕೆ ಈ ಜಾತ್ರೆ ಆಚರಿಸಲಾಗುತ್ತೆ ಶೂದ್ರ ವಗ೯ದವರು ಭಯ ಮತ್ತು ಭಕ್ತಿಯಿಂದ ಕುರಿ ಕೋಳಿ ಬಲಿ ನೀಡುವ ಪರಂಪರೆ ಇದೆ.ಮಂಗಳವಾರ ಮೇಲು ಜಾತಿಯ ಜನರ ಪೂಜೆ ದೇವಿಯ ತವರು ಮನೆಯಲ್ಲಿ ನಡೆಯುತ್ತದೆ ನಂತರ ರಾತ್ರಿ ಗಂಡನ ಸೇರುವ ಮಾರಿಗೆ ಶೂದ್ರರ ಪೂಜೆ, ಬಲಿ ಮೀಸಲು.    ಮೊದಲೆಲ್ಲ ಮಾರಿಯಮ್ಮನಿಗೆ ಕೊಣನ ಬಲಿ ನೀಡುತ್ತಿದ್ದರು ಈಗ ಇದು ಕಾನೂನು ಪ್ರಕಾರ ನಿಷಿದ್ಧ ಆದರೆ ಈ ಆಚಾರಣೆ ಗುಪ್ತವಾಗಿ ಬೇರೆ ಕಡೆ ನಡೆಸಲಾಗುತ್ತೆ ಅನ್ನುತ್ತಾರೆ.    ಸಾಗರದ ಮಾರಿಕಾ0ಬಾ ಜಾತ್ರೆ ಜಾತ್ರೆಯಿ೦ದ ಜಾತ್ರೆಗೆ ಅದೂರಿಯಾಗಿ ನಡೆಯುತ್ತದೆ, ಕೋಟ್ಯಾoತರ ಹಣದ ವಹಿವಾಟು ಕೂಡ, ಮೊದಲೆಲ್ಲ ಹಣದ ಅಪರಾ ತಪರ ಆಗುತ್ತಿದೆ ಎಂಬ ಗುಲ್ಲು ಇತ್ತು ಆದರೆ ಈಗೆಲ್ಲ ಪಾರದಶ೯ಕವಾಗಿದೆ ಆದರೂ ಈ ಬಾರಿಯ 2017ರ ಜಾತ್ರೆಯಲ್ಲಿ ಅವ್ಯವಹಾರದ ಆರೋಪ ಮಾಡಲಾಗಿದೆ ಈ ವಿಚಾರ ಇಲ್ಲಿ ಅಪ್ರಸ್ತುತ ಆದರೂ ಈ ಬಗ್ಗೆ ಬರೆಯಲು ಕಾರಣ ಕೆಳದಿ ಅರಸರ ಕಾಲದಲ್ಲಿ ಅಂದರೆ 350 ವಷ೯ದ ಹಿಂದೆಯೂ ರಾಜರಿಗೆ ಸಾಗರದ ಮಾರಿಕಾಂಬಾ ಜಾತ್ರೆಯಲ್ಲಿ ಸಾವ೯ಜನಿಕರಿಂದ ಸಂಗ್ರಹಿಸಿದ ಜಾತ...

ರಿಪ್ಪನ್ ಪೇಟೆ ( ಶಿವಮೊಗ್ಗ ಜಿಲ್ಲೆ) ಹೆಸರು ಬಂದಿದ್ದಾದರು ಹೇಗೆ?

#  ರಿಪ್ಪನ್ ಪೇಟೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಪ್ರಮುಖ ಹೋಬಳಿ ಕೇಂದ್ರ ಈ ಆಂಗ್ಲ ಅಧಿಕಾರಿಯ ಹೆಸರು ಇಡಲು ಕಾರಣವಾದ ಘಟನೆ ತುಂಬಾ ಕುತೂಹಲಕಾರಿ# ಸ್ವಲ್ಪ ಕಾಲ ನೀವು ಈ ಲೇಖನ ಓದಿದರೆ ಕಾರಣ ಗೊತ್ತಾಗುತ್ತೆ.    ಆಗ ಬ್ರಿಟಿಷ್ ಸಕಾ೯ರರಕ್ಕೆ ಆಡಳಿತ ಸುಗುಮಕ್ಕೆ ರೈಲು ಮಾಗ೯ ಅತ್ಯಗತ್ಯ ಎಂಬ ಸಕಾರಣ ಮನವರಿಕೆ ಆದ ಕಾಲ ಏಕೆಂದರೆ ಬ್ರಿಟಿಷರು ಅಮೆರಿಕಾ ವಲಸೆಯಲ್ಲಿ ಇದನ್ನ ಮನಗOಡಿದ್ದರು, ಬೆಂಗಳೂಳಿ ರಿಂದ ಶಿವಮೊಗ್ಗ ತಲುಪುವ ರೈಲು ಮಾಗ೯ ತಾಳಗುಪ್ಪಾ ತಲುಪಿದರೆ ಜೋಗ ಜಲಪಾತ ವೀಕ್ಷಣೆಗೆ ಅನುಕೂಲ ಎಂಬುದು ಹಾಗೆ ಮತ್ತೊಂದು ಮ್ಯಸೂರು ಸಕಾ೯ರ ಶರಾವತಿ ನದಿಗೆ ಆಣೆಕಟ್ಟು ಕಟ್ಟಿ.ಜಲ ವಿದ್ಯುತ್ ತಯಾರಿಸಲು ಸಾಮಗ್ರಿ ಸಾಗಾಣಿಕೆಗೆ ಅನುಕೂಲ ಎಂಬ ಕಾರಣದಿಂದ ಶಿವಮೊಗ್ಗದಿಂದ ತಾಳಗುಪ್ಪ ರೈಲು ಮಾಗ೯ ಯೋಜನೆ ಮಾಡಲಾಯಿತು.    ಆಗ ಪ್ಲೇಗ್ ಮಾರಿಯ ಕಾಲ, ಎಲ್ಲೆಲ್ಲೂ ಜನ ಸಾಯುತ್ತಿದ್ದರು ಆಗಲೇ ಈ ರೈಲು ಮಾಗ೯ ಶಿವಮೊಗ್ಗ ಆರಸಾಳಿOದ ದೊಡ್ಡಿನ ಕೊಪ್ಪ (ಈಗಿನ ರಿಪ್ಪನ್ ಪೇಟೆ) ಆನಂದಪುರಂ ಮಾಗ೯ ನಿಗದಿ ಆಗಿತ್ತು ಆದರೆ ಈ ಭಾಗದಲ್ಲಿ ಒಂದು  ವದಂತಿ ಈ ಬಾಗದಲ್ಲಿ ಹರಡಿತ್ತು ಅದೇನೆಂದರೆ ರೈಲು ಬಂದರೆ ಪ್ಲೇ ಗು ಬರುತ್ತೆ  ಅಂತ.    ಹಾಗಾಗಿ ಈ ಭಾಗದಲ್ಲಿನ ಜಾಗೃತ ಜನ ನಾಯಕರುಗಳು ಹೇಗಾದರು ಮಾಡಿ ರೈಲು ಬರದಂತೆ ಮಾಡಲು ಎಲ್ಲಾ ರೀತಿಯ ಪ್ರಯತ್ನ ಮಾಡಲು ಪ್ರಾರಂಭಿಸಿದರು.     ಇದೇ ಸಂದಭ೯ದಲ್ಲ...