Skip to main content

Blog number 1081. ಸಾಗರದ ಆರ್ ಟಿ . ವಿಠಲಮೂರ್ತಿ ಈಗ ರಾಜ್ಯ ಮಟ್ಟದ ಪತ್ರಕರ್ತರ ಸಾಲಿನಲ್ಲಿ ಅಗ್ರಗಣ್ಯರು ಅವರ ಇದೊಂಥರಾ ಆತ್ಮಚರಿತ್ರೆ ಪುಸ್ತಕ ಬಿಡುಗಡೆ ಆಗಿದೆ ಓದಿ

ಸಾಗರ ತಾಲ್ಲೂಕಿನ ಹೆಸರು ಪತ್ರಿಕೋದ್ಯಮದಲ್ಲಿ ಉತ್ತುಂಗಕ್ಕೆ ಏರಿಸಿದ ಆರ್.ಟಿ. ವಿಠಲ್ ಮೂತಿ೯#

   ಆರ್.ಟಿ.ವಿ. ಸಾಗರದವರು ಇವರಣ್ಣ ಸಾಗರದ ಮುನ್ಸಿಪಲ್ ಹೈಸ್ಕೂಲಲ್ಲಿ ನನಗೆ ಕ್ಲಾಸ್ ಮೇಟ್, ಆರ್.ಟಿ.ವಿ.ಜೂನಿಯರ್  ನಮಗೆಲ್ಲರಿಗೂ ಹಾಲಿ ಮOತ್ರಿ ಶ್ರೀನಿವಾಸ ಪೂಜಾರ್ ರ ಈಗಿನ ವಿಶೇಷ ಕತ೯ವ್ಯಧಿಕಾರಿ ಆಗಿರುವ ಕೆ.ದಮ೯ಪ್ಪ ಸಾಹೇಬರು ಆಗ ಗುರುಗಳು, ಆರ್.ಟಿ.ವಿ ರವಿ ಬೆಳೆಗೆರೆ ಜೊತೆ ಸೇರಿ ಹಾಯ್ ಬೆಂಗಳೂರು ವಾರ ಪತ್ರಿಕೆಯಲ್ಲಿ ಬರೆಯಲು ಶುರು ಮಾಡಿದಾಗ ನಮಗೆಲ್ಲ ಅವರು ಸ್ಟಾರ್ ಪತ್ರಕತ೯ರು.
   ನಾನು ಹೊಸದಾಗಿ ಜಿಲ್ಲಾ ಪಂಚಾಯತ್ ಸದಸ್ಯನಾಗಿ 1995 ರಲ್ಲಿ ಆಯ್ಕೆ ಆದಾಗ ಕಾಗೋಡು ತಿಮ್ಮಪ್ಪರ ಜೊತೆ ಹಳ್ಳಿ ತಿರುಗಾಟದಲ್ಲಿ ಹೋಗುವಾಗ ಹಳ್ಳಿಯ ರೈತರು ಕೃಷಿ ಇಲಾಖೆಯ ಭೂ ಸಂರಕ್ಷಣಾ ಇಲಾಖೆಯ ಬಗ್ಗೆ ದೂರುತ್ತಿದ್ದರು ಆಗ ಕಾಗೋಡು ನನಗೆ ಇದನ್ನೆಲ್ಲ ಪರಿಶೀಲನೆ ಮಾಡಲು ತಿಳಿಸಿದರು, ಹುಮ್ಮಸ್ಸಿನಿಂದ ಪರಿಶೀಲಿಸಿದಾಗ ಸಾಗರ ತಾಲ್ಲೂಕಿನಲ್ಲಿ ಕೋಟ್ಯಾ೦ತರ ರೂಪಾಯಿ ಅಪರಾ ತಪರಾ ಆಗಿದ್ದು ಬಯಲಾಯಿತು.
  ತನಿಖೆ ಮಾಡಿದ ನಮ್ಮ ಕೈಕಟ್ಟಿ ಹಾಕುವ ಕೆಲಸ ಪ್ರಾರಂಭ ಆಯಿತು ಆಗ ಸಾಗರದ ಉತ್ಸಾಹಿ ಯುವಕ (ಈಗ ಕೆ.ಪಿ.ಸಿ.ಸಿ. ಸದಸ್ಯ) ತಾಳಗುಪ್ಪದ ಸಲೀo ವೈಕುಂಟ ರಾಜುರವರ ವಾರಪತ್ರಿಕೆಯಲ್ಲಿ ಆಗ ವರದಿಗಾರರಾಗಿದ್ದ ವಿಠಲ ಮೂತಿ೯ಯವರನ್ನ ಕರೆತಂದರು, ಸ್ಥಳ ಪರಿಶೀಲಿಸಿ ನಮ್ಮ ಆರೋಪದ ಸತ್ಯಾಸತ್ಯತೆ ತಿಳಿದ ಆರ್.ಟಿ.ವಿ. ವಾರಪತ್ರಿಕೆಯಲ್ಲಿ ವಿಶೇಷ ಲೇಖನ ಮಾಡಿದ್ದಲ್ಲದೆ ಆಗಿನ ಕೃಷಿ ಮಂತ್ರಿ ಬೈರೇಗೌಡರೇ ಆನಂದಪುರಕ್ಕೆ ಬರುವಂತೆ ಮಾಡಿದರು, ಇದರಿಂದ 8 ಜನ ಕೃಷಿ ಅಧಿಕಾರಿಗಳು ಜೈಲಿಗೆ ಮತ್ತು ತಕ್ಷಣದಿಂದ ಭೂಸಾರ ಸಂರಕ್ಷಣಾ ಇಲಾಖೆಯನ್ನೆ ಬೈರೇಗೌಡರು ರದ್ದು ಮಾಡಿದ್ದು ಇತಿಹಾಸ ಇಂತಹ ದೊಡ್ಡ ಉಪಕಾರ ಸಹಾಯ ಆರ್.ಟಿ.ವಿಯಿOದ ಹೋರಾಟ ಮಾಡಿದ ನಮಗಾಗಿದ್ದು ಮರೆಯುವುದು ಹೇಗೆ?
  ಅವರ "ಇದೊಂಥರಾ ಆತ್ಮಚರಿತ್ರೆ" ಬಿಡುಗಡೆ ಆಗಿದೆ ಅವರು ಸಹಿ ಮಾಡಿದ 10 ಪುಸ್ತಕ ಪಡೆದಿದ್ದೇನೆ,ಮಗಳ ಮದುವೆ ಸಮಾರಂಭದಿಂದ ಓದಲಾಗಲಿಲ್ಲ ಇವತ್ತು ಸಂಜೆ 5ರಿಂದ ಪ್ರಾರ೦ಭಿಸಿ ರಾತ್ರಿ 10ರ ತನಕ ಮುಗಿಸಿದೆ, ಈ ಪುಸ್ತಕದ ಹೆಚ್ಚಿನ ಲೇಖನ ಅವರ fb ನಲ್ಲಿ ಓದಿದ್ದೆ ಇನ್ನೊಮ್ಮೆ ಓದಿದೆ, ರಾಜಕಾರಣಿಗಳು, ಪತ್ರಕತ೯ರು, ಪತ್ರಿಕೋದ್ಯಮದ ವಿದ್ಯಾಥಿ೯ಗಳು ವಿಶೇಷವಾಗಿ ಸಾಗರ ತಾಲ್ಲೂಕಿನವರು ಓದಿ ಸಂಗ್ರಹದಲ್ಲಿ ಇಡುವ ಪುಸ್ತಕ ಇದು.
  ಇವರ ಅಜ್ಜಿ ತುಳಸಿ ಬಾಯಿ ಆನಂದಪುರದಲ್ಲಿನ ಸಂತೆಯಲ್ಲಿ ಬಟ್ಟೆ ವ್ಯಾಪಾರ ಮಾಡಿ ವಾರಕ್ಕೆ 5 ಪೈಸೆ ನೀಡುತ್ತಿದ್ದದ್ದು, ಬಡತನದ ಬಾಲ್ಯದಲ್ಲಿ ತಂದೆ ತಾಯಿಯ ನೀತಿ ಪಾಠ, ಸಿಗರೇಟು ಪ್ಯಾಕಿನಲ್ಲಿ ಹಿರಿಯ ಪತ್ರಕತ೯ ಸಾ.ಚ. ಶಿಪಾರಸ್ಸು ಪತ್ರ ಬರೆದು ಬೆಂಗಳೂರಲ್ಲಿ ವಿಧಾನ ಸೌದದಲ್ಲಿ ವರದಿ ಮಾಡಲು ಪತ್ರಿಕೆಗೆ ಸೇರಿಸಿದ್ದು, ಜಿಲ್ಲೆಯ ಕಾಗೋಡು, ಬಂಗಾರಪ್ಪ, ಪಟೇಲರು, ಸಾಗರದ ದೋಸೆ ಕೃಷ್ಣಪ್ಪ ಹೀಗೆ ಅನೇಕ ಸ್ವಾರಸ್ಯದ ನೆನಪಿನ ಬುತ್ತಿ ಇದೆ.
  ರಾಜ್ಯವಾಳಿದ 17 ಮುಖ್ಯಮಂತ್ರಿಗಳ ಒಡನಾಟ ಸಂದಶ೯ನ ಮಾಡಿದ ಏಕೈಕ ಪತ್ರಕತ೯ ನಮ್ಮ ಸಾಗರದ ಆರ್.ಟಿ.ವಿಠಲ್ ಮೂತಿ೯ ಎಂಬುವುದು ಹೆಮ್ಮೆ ಮತ್ತು ಪತ್ರಿಕೋದ್ಯಮದಲ್ಲಿ ದಾಖಲೆ ಕೂಡ.
 ಆನ್ ಲೈನ್ ನಲ್ಲಿ ಪ್ರಸ್ತಕ ಖರೀದಿಸಬಹುದು 
online book store: bahurupi.in

Comments

Popular posts from this blog

# ಜುಟ್ಟು ಕಾಳಿಂಗ ಸಪ೯ದ ಆಸ್ತಿತ್ವದ ಮಲೆನಾಡಿನ ಮಿಥ್ಯೆ#

  # ಕಾಳಿ೦ಗ ಸಪ೯ದಲ್ಲಿ ಜುಟ್ಟು ಕಾಳಿಂಗ ಸಪ೯ ಅಂತ ಇದೇ ಅನ್ನುವ ಯಾರು ನೋಡದ ಸಪ೯ದ ಅಸ್ತಿತ್ವ#    ಮಲೆನಾಡಿನ ಹಳ್ಳಿಗಳಲ್ಲಿ, ಅದು ಕಾಳಿ೦ಗ ಸಪ೯ದ ವಾಸಸ್ಥಳದ ಪರಿಸರದಲ್ಲಿ ಜುಟ್ಟು ಕಾಳಿಂಗ ಸಪ೯ ಇದೆ ಅನ್ನುವ ಮಾತು ಆಗಾಗ್ಗೆ ಕೇಳುತ್ತಿರುತ್ತೇವೆ. ಆದರೆ ಆ ರೀತಿಯ ಹಾವು ಇಲ್ಲ ಎಂದು ಹಾವಿನ ಬಗ್ಗೆ ಸಂಶೋದನೆ ಮಾಡುವವರು, ಅರಣ್ಯ ಇಲಾಖೆಯವರು, ಹಾವು ಹಿಡಿಯುವವರು ಖಡಾಖಂಡಿತವಾಗಿ ಹೇಳುತ್ತಾರಾದರು, ಈ ವದಂತಿ ಹೇಗೆ ಹರಡಿದೆ?.    ಇದು ಒಂದು ಊರು ಹಳ್ಳಿಯಲ್ಲ ನಾನು ನೋಡಿದಂತೆ ಮಹಾರಾಷ್ಟ್ರದ ರತ್ನಗಿರಿಯಿ೦ದ ಕೇರಳದ ಕಾಸರಗೋಡಿನ ತನಕ ಜುಟ್ಟು ಕಾಳಿಂಗದ ಅನೇಕ ರೋಚಕ ಕಥೆ ಕೇಳಿದ್ದೇನೆ.   ಪ್ರತ್ಯಕ್ಷ ನೋಡಿದವರು ತಾವು ಎನ್ನುವ ಅನೇಕರಲ್ಲಿ ಮಾತಾಡಿದ್ದೇನೆ ಆದರೆ ಅದು ನಂಬಲಹ೯ ಮಾಹಿತಿ ಅನಿಸಲಿಲ್ಲ, ಒಂದು ರೀತಿ ಕಾಲ್ಪನಿಕ ತ್ರಿಲ್ಲರ್ ಕಥೆ ಅಷ್ಟೇ ಅನ್ನಬಹುದು.    ಜಡೆ ಕಾಳಿಂಗ ಸಪ೯ಕ್ಕೆ ರೋಷ ಜಾಸ್ತಿ, ಹೆಡೆ ಮೇಲೆ ಕೂದಲಿನ ಜುಟ್ಟು ಇರುತ್ತೆ, ಮನುಷ್ಯರನ್ನ ಕಂಡರೆ ಓಡಿಸಿಕೊಂಡು ಬರುತ್ತೆ, ಅದರಿಂದ ತಪ್ಪಿಸಿಕೊಳ್ಳಲು ಒಂದೇ ದಾರಿ ಅದೇನೆಂದರೆ ತಗ್ಗಿನ ಪ್ರದೇಶದಲ್ಲಿ ಓಡುವುದು.     ಯಾಕೆ೦ದರೆ ಓಡಿಸಿಕೊಂಡು ಬರುವ ಜುಟ್ಟು ಕಾಳಿಂಗದ ಜುಟ್ಟು, ಇಳಿಜಾರಿನಲ್ಲಿ ಅದರ ತಲೆಯಿ೦ದ ಇಳಿಜಾರಿಗೆ ಸರಿಯುವುದರಿಂದ  ಕಣ್ಣಿನ ಮೇಲೆ ಕೂದಲ ಜುಟ್ಟು ಮುಚ್ಚುವುದರಿಂದ ಕಣ್ಣು ಕಾಣುವುದಿಲ್ಲ, ಆಗಲೇ ತಪ್...

ಶರಾವತಿ ನದಿ ಉಗಮ ಸ್ಥಾನ ಅಂಬುತೀಥ೯.

ಇಡೀ ರಾಜ್ಯಕ್ಕೆ ವಿದ್ಯುತ್ ನೀಡುವ ಶರಾವತಿ ನದಿಯ ಉಗಮ ಸ್ಥಾನ ಅಂಬುತೀಥ೯, ಆರಗ ಸಮೀಪದ ತೀಥ೯ಳ್ಳಿ ತಾಲ್ಲೂಕಿನಲ್ಲಿದೆ( ಶಿವಮೊಗ್ಗ ಜಿಲ್ಲೆ)    ಅಂಬು ತೀಥ೯ದಲ್ಲಿ ಶ್ರೀ ರಾಮ ವನವಾಸದಲ್ಲಿದ್ದಾಗ ಸೀತಾ ಮಾತೆಗೆ ಪೂಜೆಗೆ ನೀರು ಸಿಗದಿದ್ದಾಗ ರಾಮ ತನ್ನ ಅಂಬಿನಿಂದ (ಬಿಲ್ಲಿನ ಬಾಣದಿಂದ) ನೆಲ ಸೀಳಿ ನೀರು ತಂದರೆ೦ದು ರಾಮಾಯಣದಲ್ಲಿ ಉಲ್ಲೇಖವಿದೆ, ಹಾಗಾಗಿ ಈ ಸ್ಥಳಕ್ಕೆ ಅಂಬುತೀಥ೯ ಎಂಬ ಹೆಸರು ಬ೦ತು ಎಂಬುದು ಸ್ಥಳ ಪುರಾಣ.    ಇಲ್ಲಿ ಸಣ್ಣ ತೊರೆಯಾಗಿ ಹುಟ್ಟುವ ನದಿ ಬಾಣದಿಂದ ಹುಟ್ಟಿದ್ದರಿಂದ ಶರಾವತಿ ಎ೦ಬ ಹೆಸರು ಪಡೆದು ಪೂವ೯ಕ್ಕೆ ಹರಿದು ನಂತರ ಪಶ್ಚಿಮ ಮುಖವಾಗಿ ತಿರುಗಿ ಹೊಸನಗರ ತಾಲ್ಲೂಕನ್ನ ದಾಟಿ ಸಾಗರ ತಾಲ್ಲೂಕಿನ ಜೋಗದಲ್ಲಿ ಜಲಪಾತವಾಗಿ ದಟ್ಟ ಕಾನನದ ಕಣಿವೆ ಮುಖಾಂತರ ಹರಿದು ಹೊನ್ನಾವರದಲ್ಲಿ ಅರಬ್ಬಿ ಸಮುದ್ರ ಸೇರುತ್ತದೆ.   ಈ ನದಿಗೆ ಮೊದಲಿಗೆ ಹೀರೇ ಬಾಸ್ಕರ ಎಂಬಲ್ಲಿ ನಂತರ ಲಿಂಗನಮಕ್ಕಿಯಲ್ಲಿ ಆಣೆಕಟ್ಟು ಕಟ್ಟಿ ರಾಜ್ಯಕ್ಕೆ ಜಲ ವಿದ್ಯುತ್ ನೀಡುತ್ತಿರುವುದರಿಂದ ಲಕ್ಷಾಂತರ ಎಕರೆ ಕಾಡು, ಜಮೀನು ಅನೇಕ ಊರು ಮುಳುಗಡೆ ಆಯಿತು ಸಾವಿರಾರು ಕುಟುಂಬಗಳು ಸಂತ್ರಸ್ಥರಾದದ್ದು ಇತಿಹಾಸ.    ಈ ನದಿ ಜೋಗದಲ್ಲಿ ದುಮುಕುವ ಜಲಪಾತ ವಿಶ್ವದ ಸುಂದರ ಜಲಪಾತದಲ್ಲಿ ಒಂದಾಗಿದೆ.    ಹಾಗಾಗಿ ಶರಾವತಿ ನದಿಯ ಉಗಮ ಸ್ಥಾನಕ್ಕೆ ಮಹತ್ವವಿದೆ, ಒಮ್ಮೆಯಾದರೂ ಈ ನದಿ ಮೂಲ ಸಂದಶಿ೯ಸಬೇಕು ಆದರೆ ಇಲ್ಲಿ ಶರಾವತಿ ವ...

HISTORICAL SAGAR MARIKAMBA JATRA.ಐತಿಹಾಸಿಕ ಸಾಗರದ ಮಾರಿಕಾಂಬಾ ಜಾತ್ರೆ

     ಸಾಗರದ ಮಾರಿಕಾಂಬಾ ಜಾತ್ರೆ ಐತಿಹಾಸಿಕ ಚರಿತ್ರೆಯಲ್ಲಿ ದಾಖಲೆ.        ಕನಾ೯ಟಕ ರಾಜ್ಯದಲ್ಲಿ ಎರೆಡು ಮಾರಿಕಾಂಬಾ ಜಾತ್ರೆಗಳು ಪ್ರಸಿದ್ಧಿ ಪಡೆದಿದೆ ಅದು ಉತ್ತರ ಕನ್ನಡ ಜಿಲ್ಲೆಯ ಸಿಸಿ೯ಯದ್ದು ಮತ್ತು ಶಿವಮೊಗ್ಗ ಜಿಲ್ಲೆಯ ಸಾಗರದ್ದು.    ಪ್ರತಿ ಮೂರು ವಷ೯ಕೆ ಈ ಜಾತ್ರೆ ಆಚರಿಸಲಾಗುತ್ತೆ ಶೂದ್ರ ವಗ೯ದವರು ಭಯ ಮತ್ತು ಭಕ್ತಿಯಿಂದ ಕುರಿ ಕೋಳಿ ಬಲಿ ನೀಡುವ ಪರಂಪರೆ ಇದೆ.ಮಂಗಳವಾರ ಮೇಲು ಜಾತಿಯ ಜನರ ಪೂಜೆ ದೇವಿಯ ತವರು ಮನೆಯಲ್ಲಿ ನಡೆಯುತ್ತದೆ ನಂತರ ರಾತ್ರಿ ಗಂಡನ ಸೇರುವ ಮಾರಿಗೆ ಶೂದ್ರರ ಪೂಜೆ, ಬಲಿ ಮೀಸಲು.    ಮೊದಲೆಲ್ಲ ಮಾರಿಯಮ್ಮನಿಗೆ ಕೊಣನ ಬಲಿ ನೀಡುತ್ತಿದ್ದರು ಈಗ ಇದು ಕಾನೂನು ಪ್ರಕಾರ ನಿಷಿದ್ಧ ಆದರೆ ಈ ಆಚಾರಣೆ ಗುಪ್ತವಾಗಿ ಬೇರೆ ಕಡೆ ನಡೆಸಲಾಗುತ್ತೆ ಅನ್ನುತ್ತಾರೆ.    ಸಾಗರದ ಮಾರಿಕಾ0ಬಾ ಜಾತ್ರೆ ಜಾತ್ರೆಯಿ೦ದ ಜಾತ್ರೆಗೆ ಅದೂರಿಯಾಗಿ ನಡೆಯುತ್ತದೆ, ಕೋಟ್ಯಾoತರ ಹಣದ ವಹಿವಾಟು ಕೂಡ, ಮೊದಲೆಲ್ಲ ಹಣದ ಅಪರಾ ತಪರ ಆಗುತ್ತಿದೆ ಎಂಬ ಗುಲ್ಲು ಇತ್ತು ಆದರೆ ಈಗೆಲ್ಲ ಪಾರದಶ೯ಕವಾಗಿದೆ ಆದರೂ ಈ ಬಾರಿಯ 2017ರ ಜಾತ್ರೆಯಲ್ಲಿ ಅವ್ಯವಹಾರದ ಆರೋಪ ಮಾಡಲಾಗಿದೆ ಈ ವಿಚಾರ ಇಲ್ಲಿ ಅಪ್ರಸ್ತುತ ಆದರೂ ಈ ಬಗ್ಗೆ ಬರೆಯಲು ಕಾರಣ ಕೆಳದಿ ಅರಸರ ಕಾಲದಲ್ಲಿ ಅಂದರೆ 350 ವಷ೯ದ ಹಿಂದೆಯೂ ರಾಜರಿಗೆ ಸಾಗರದ ಮಾರಿಕಾಂಬಾ ಜಾತ್ರೆಯಲ್ಲಿ ಸಾವ೯ಜನಿಕರಿಂದ ಸಂಗ್ರಹಿಸಿದ ಜಾತ...