Skip to main content

Blog number 1087. ಹೊಯ್ಸಳ ಸಾಮ್ರಾಜ್ಯದ ಉಗಮ ಸ್ಥಾನ ಚಿಕ್ಕಮಗಳೂರು ಜಿಲ್ಲೆಯ ಮುಡುಗೆರೆ ತಾಲ್ಲೂಕಿನ ಅಂಗಡಿ ಗ್ರಾಮದ ವಾಸಂತಿಕ ಪರಮೇಶ್ವರಿ ದೇವಸ್ಥಾನದ ಪ್ರದಾನ ಅರ್ಚಕರು ಸಾಗರ ತಾಲೂಕಿನ ಕರೂರು ಹೋಬಳಿಯ ಕಮಕೋಡಿನ ದತ್ತಾತ್ರೇಯ ಭಟ್ಟರು ನನ್ನ ಕಾದಂಬರಿ ಚ೦ಪಕ ಸರಸ್ಸು ಓದಿ ಅಭಿಪ್ರಾಯ ತಿಳಿಸಿದ್ದಾರೆ.

#ಐತಿಹಾಸಿಕ_ಹೊಯ್ಸಳ_ಖ್ಯಾತಿಯ_ವಾಸಂತಿಕಪರಮೇಶ್ವರಿ_ದೇವಾಲಯದ_ಪ್ರದಾನ_ಅಚ೯ಕರಾದ 

#ಸಾಗರ_ತಾಲ್ಲೂಕಿನ_ಕರೂರು_ಮೂಲದ_ಕಮಕೋಡು_ದತ್ತಾತ್ರೇಯ ಭಟ್ಟರು.

#ಈ_ದೇವಾಲಯದ_ಎದುರಿನ_ಎರೆಡು_ಸಂಪಿಗೆ_ಮರ_ಸಾವಿರ_ವಷ೯ದ್ದು

#ಸಾಗರ_ತಾಲ್ಲೂಕಿನ_ಕರೂರು_ಹೋಬಳಿಯ_ಕಮಕೋಡು_ಕೆಳದಿ_ಅರಸರ_ಸೈನಿಕ_ತರಬೇತಿ_ಕೇಂದ್ರ

 ಚಿಕ್ಕಮಗಳೂರು ಜಿಲ್ಲೆಯ ಮುಡಿಗೆರೆ ತಾಲ್ಲೂಕಿನ ಅಂಗಡಿ ಗ್ರಾಮದ ಪುರಾಣ ಪ್ರಸಿದ್ದ ವಾಸಂತಿಕ ಪರಮೇಶ್ವರಿ ದೇವಸ್ಥಾನ ಐತಿಹಾಸಿಕವಾಗಿಯೂ ಪ್ರಮುಖ ಸ್ಥಳ ಹೊಯ್ಸಳ ವಂಶ ಸ್ಥಾಪಕ ಸಳ ತನ್ನ ವಿದ್ಯಾಬ್ಯಾಸದ ಕಾಲದಲ್ಲಿ ಗುರುಗಳ ಆದೇಶ "ಹೊಯ್ - ಸಳ " ಎಂದಿದ್ದರಿಂದ ಎದುರಿಗೆ ಬಂದಿದ್ದ ಹುಲಿ ಸಂಹಾರ ಮಾಡಿದ್ದ ಸ್ಥಳವೂ ಇದೇ.
  ಈ ದೇವಾಲಯದ ಎದುರು ಬೃಹದಾಕಾರದ ಎರೆಡು ಸಂಪಿಗೆ ಮರವೂ ಇದೆ, ಇದನ್ನ ಕಾಬ೯ನ್ ಟೆಸ್ಟಿಂಗ್ ನಲ್ಲಿ ಒಂದು ಸಾವಿರ ವರ್ಷ ಪುರಾತನವಾಗಿದ್ದೆಂದು ಸಾಬೀತಾಗಿದೆ.
  ವಾಸಂತಿಕ ದೇವಿ ವಿಗ್ರಹ  ಮಣ್ಣಿನದ್ದು (ಕಡು ಶಾಕ೯ರ ಪಾಕ), ಚಿಕ್ಕಮಗಳೂರು ಮತ್ತು ಹಾಸನ ಜಿಲ್ಲೆಯವರಿಗೆ ಇದೆಲ್ಲ ಗೊತ್ತಿದೆ ಆದರೆ ರಾಜ್ಯದ ಇತರ ಜಿಲ್ಲೆಯವರಿಗೆ ಇದರ ಮಾಹಿತಿ ಕಡಿಮೆ, ನಾನು ಈ ದೇವಾಲಯ ನೋಡಿದ್ದೇನೆ.
 ಈ ದೇವಾಲಯದ ಪ್ರದಾನ ಅಚ೯ಕರು #ಕಮಕೋಡು_ದತ್ತಾತ್ರೇಯ ಭಟ್ಟರು ಇವರು ಸಾಗರ ತಾಲ್ಲೂಕಿನ ಕರೂರು ಹೋಬಳಿ ಮೂಲದವರು, ಇವರು ನಿಟ್ಟೂರು ಸಮೀಪದ ಮುಳುಗಡೆ ಆದ ಕಮಕೋಡಿನವರು ಈ ಊರು ಕೆಳದಿ ಸಂಸ್ಥಾನದ ಸೈನಿಕ ತರಬೇತಿ ಪ್ರದೇಶ ಇದನ್ನೆಲ್ಲ ಇಲ್ಲಿ ಉಲ್ಲೇಖಿಸಲು ಕಾರಣ ನನ್ನ ಬೆಸ್ತರ ರಾಣಿ ಚಂಪಕಾ ಇವರು ಓದಿದ್ದಾರೆ ಮತ್ತು ಈ ಪುಸ್ತಕದ ವಿಮಷೆ೯ #ನಿಟ್ಟೂರು_ರವೀಶ್ ಮಾಡುವಾಗ ಈ ಕಮಕೋಡು ಕೆಳದಿ ಅರಸರ ಸೇನಾ ಶಿಬಿರ, ತರಬೇತಿ ಮತ್ತು ಶಸ್ತ್ರಾಗಾರ ತಯಾರಿ ಕೇಂದ್ರವೂ ಆಗಿತ್ತು ಅಂತ ಬರೆದಿದ್ದು ಇವರ ಪೂವಿ೯ಕರ ಊರು ನೆನಪಿಸಿದೆ ಒಮ್ಮೆ ಅಲ್ಲಿಗೆ ಬೇಟಿ ನೀಡುವ ಬಯಕೆ ಬಂದಿದೆ.
  ಮುಳುಗಡೆ ಆದಾಗ ಅಲ್ಲಿಂದ ಅವರ ಪೂವಿ೯ಕರು ಪೂಜಿಸುತ್ತಿದ್ದ ಶಿಲಾ ಗಣಪತಿ ತಂದು ಆವಿನಳ್ಳಿಯ ಯಾವುದೋ ದೇವಸ್ಥಾನಲ್ಲಿ ಇಟ್ಟಿದ್ದಾರಂತೆ.
  ಒಂದು ಪುಸ್ತಕ ಹೇಗೆ ಪುರಾತನ ನೆನಪು, ಇತಿಹಾಸಗಳ ಸರಪಳಿಯ ಕೊಂಡಿಯನ್ನು ಜೊಡಿಸುತ್ತದೆ ಅನ್ನುವುದು ನನಗಾದ ಅನುಭವ, ಕಮಗೋಡು ದತ್ತಾತ್ರೇಯ ಭಟ್ಟರು ನನ್ನ ಪುಸ್ತಕದ ಬಗ್ಗೆ ಹೀಗೆ ಬರೆದಿದ್ದಾರೆ.
 
 " ನಿಮ್ಮ ಪುಸ್ತಕಕ್ಕೆ ಬಂದ ವಿಮರ್ಶೆಗಳು ಹಾಗೂ ಅಭಿಪ್ರಾಯಗಳು ಒಂದು ಹೊಸ ಸಂಚಲನವನ್ನೇ ಸೃಷ್ಟಿಸಿದೆ, ಗೌರವಾನ್ವಿತ ಡಾ. ಗುಂಡಾಜೋಯಿಸರ   ಸಾಧನೆ ಹಾಗೂ ತಮ್ಮ ಪುಸ್ತಕದ ಬಗ್ಗೆ ಬರೆದ ಅಭಿಪ್ರಾಯಗಳು ಪ್ರಶಂಸನೀಯ, ಕೆಳದಿ ಇತಿಹಾಸದ ಬಗೆಗಿನ ಅವರ ಆಸಕ್ತಿಯ ಪ್ರಯತ್ನಗಳಿಗೆ ಅಭಿನಂದನೆಗಳು. ಚಂಪಕರಾಣಿ ಪುಸ್ತಕ ಇತಿಹಾಸ ತಜ್ಞರಿಂದ ಹಿಡಿದು ಸಾಮಾನ್ಯರ ಗಮನವನ್ನೂ ಸೆಳೆದಿರುವುದು ತಮ್ಮ ಪ್ರಯತ್ನಕ್ಕೆ ಸಂದ ಜಯ ಮತ್ತು ಉತ್ತಮ ಬೆಳವಣಿಗೆ ". - ಕಮಕೋಡು ದತ್ತಾತ್ರೇಯ ಭಟ್ಟರು 9483527839.

Comments

Popular posts from this blog

Blog number 1782. ಅರಳಸುರಳಿಯ ರಾಘವೇಂದ್ರ ಕೇಕೋಡರ ಕುಟುಂಬದ ತಪ್ಪು ನಿರ್ದಾರದ ದುರಂತ.

#ತೀರ್ಥಹಳ್ಳಿಯ_ಅರಳಸುರಳಿಯ_ಒಂದೇ_ಕುಟುಂಬದ_ನಾಲ್ವರು_ಮೃತರಾದ_ರಹಸ್ಯವೇನು? #ಈ_ಬಗ್ಗೆ_ಆ_ಊರಿನ_ಸಮೀಪದ_ಈ_ಕುಟುಂಬದ_ಪರಿಚಯ_ಇರುವವರಿಗೆ_ವಿಚಾರಿಸಿದ್ದೆ. #ಅವರು_ಈ_ಘಟನೆ_ಬಗ್ಗೆ_ಸವಿಸ್ತಾರವಾಗಿ_ಲಿಖಿತ_ಲೇಖನ_ಬರೆದಿದ್ದಾರೆ. #ಅವರ_ವಿನಂತಿ_ಅವರ_ಹೆಸರು_ಬಹಿರಂಗಗೊಳಿಸ_ಬಾರದು. #ಆದ್ದರಿಂದ_ಈ_ಲೇಖನ_ಪೋಸ್ಟ್_ಮಾಡಬಾರದೆಂದಿದ್ದೆ_ಆದರೆ_ಇದು_ಮಲೆನಾಡಿಗರ_ಮನೆ_ಮನೆಯ_ಕಥೆ #ಆದ್ದರಿಂದ_ಇಲ್ಲಿ_ಪೋಸ್ಟ್_ಮಾಡಿದೆ.    ಇಲ್ಲಿ ತಪ್ಪು ಯಾರದ್ದೂ ಇಲ್ಲ... ಪಶ್ಚಾತ್ತಾಪದ ಪ್ರಾಯಶ್ಚಿತ ಕೇಳಲು ಅವರಾರು ಇಲ್ಲ .....ಆದರೆ ಈ ರೀತಿ ಜೀವ ತ್ಯಾಗ ಮಾಡುವ ಆತುರದ ಕೆಟ್ಟ ನಿರ್ದಾರ ಮಾತ್ರ ಸರಿ ಅಲ್ಲ.     ಇವರ ಅಣ್ಣ ಆರ್.ಎಸ್.ಎಸ್. ಪ್ರಚಾರಕರಾಗಿ ದೆಹಲಿಯಲ್ಲಿ ಏಳು ವಷ೯ ಮೋದಿ ಜೊತೆ ಒಂದೇ ಕೋಣೆ ಹಂಚಿಕೊಂಡವರು, ಇನ್ನೊಬ್ಬ ಸಹೋದರ ಮೂಳೆ ತಜ್ಞರಾಗಿ ಶಿವಮೊಗ್ಗದಲ್ಲಿ ಆಸ್ಪತ್ರೆ ಮಾಡಿಕೊಂಡಿದ್ದಾರೆ.   #ದೀರ್ಘವಾದರೂ_ಪೂರ್ಣ_ಲೇಖನ_ಓದಿ   #ಹೀಗೊಂದು_ಸುಕುಟುಂಬ_ಆತ್ಮಾಘಾತ_ಮತ್ತು_ತದನಂತರದ_ಸಹಾಗಮನ.... ಮೂಡಣದಲ್ಲಿ ರವಿ ಮೂಡಲು ಅಣಿ ಯಾಗುತ್ತಿಧ್ದ .. ಹಾದಿಗಣಪತಿ ದೇವರು ಗರ್ಭಗುಡಿಯ ನಂದಾದೀಪದ ಮಂದ ಬೆಳಕಿನಲ್ಲಿ ತನ್ನ ಗುಡಿಯ ಎದುರಿನ ತಗ್ಗಿನಲ್ಲಿದ್ದ  ರಾಘವೇಂದ್ರ ಕೇಕೋಡರ ಮನೆಯನ್ನು ಎವೆಯಕ್ಕದೇ ನೋಡುತ್ತಲಿದ್ದ... ಊರ ಎಲ್ಲಾ ಮನೆಯಂತೆ ಆ ಮನೆಯಲ್ಲೂ ಆ ಬೆಳಗಿನಲ್ಲಿ ಮನೆಯೊಡತಿ ನಾಗರತ್ನಕ್ಕ ಆ ಸಮಯದಲ್ಲಿ ದೇವರಿಗೆ ದೀಪ ಹಚ್ಚಿ ಹೊಸ್ತಿಲು ಪೂಜೆ ಮಾಡ

Blog number 1037. ರಾಜಕುಮಾರಿ ಶಾಂತವ್ವ ಮತ್ತು ದಲಿತ ಯುವಕ ಸಿದ್ದೇಶ್ವರರ ಅಮರ ಪ್ರೇಮದ ಸ್ಮಾರಕ, ಅನ್ಯ ಜಾತಿ ವಿವಾಹವಾದ್ದರಿಂದ ರಾಜಕುಮಾರಿಗೆ ಸೂಳೆ ಪಟ್ಟ ನೀಡಿದ ಸಮಾಜ. ಸಮಾಜದ ಒಳಿತಿಗಾಗಿ ಶಾಂತವ್ವ ಕಟ್ಟಿಸಿದ ಬೃಹತ್ ಕೆರೆಗೆ ಜನ ಕರೆದದ್ದು ಸೂಳೆ ಕಟ್ಟಿಸಿದ ಕೆರೆ ಅದೇ ಸೂಳೆಕೆರೆ / ಶಾಂತಿ ಸಾಗರ

# ಸೂಳೆಕೆರೆ (ಶಾಂತಿ ಸಾಗರ) ಅಂತರ್ ಜಾತಿ ಪ್ರೇಮ ವಿವಾಹದ ದುರOತ ಕಥೆ. #ಅಕ್ಟೋಬರ್ 2019 ರಲ್ಲಿ ತುಂಬಿ ತುಳುಕಿತ್ತು.  ಚಿತ್ರದುಗ೯, ದಾವಣಗೆರೆ ಬಳ್ಳಾರಿ ಮುಂತಾದ ಮಳೆ ಕಡಿಮೆ ಆಗುತ್ತಿದ್ದ ಜಿಲ್ಲೆಗಳಲ್ಲಿ ಅದೂ ಅಕ್ಟೋಬರ್ ತಿಂಗಳ 2019 ರಲ್ಲಿ  ಬಂದಿದ್ದ ಬಾರಿ ಮಳೆ ಎಲ್ಲಾ ಕೆರೆ, ಹೊಂಡಗಳು ತುಂಬಿ ತುಳುಕಿದೆ, ಸಾಮಾಜಿಕ ಜಾಲ ತಾಣದಲ್ಲಿ 40 ವಷ೯ದಲ್ಲಿ ಇಂತ ಮಳೆ ಬಂದಿಲ್ಲ ಅಂತ ಸುದ್ದಿ ಹರಿದಾಡುತ್ತಿತ್ತು ಮತ್ತು  ಸೂಳೆಕೆರೆ ತುಂಬಿ ಕೋಡಿ ಬಿದ್ದಿದೆ ಅಂತೆಲ್ಲ Post ನೋಡಿ ಬೆಂಗಳೂರಿಂದ ಬರುವಾಗ ಚಿತ್ರದುಗ೯ ಮಾಗ೯ವಾಗಿ ಚನ್ನಗಿರಿ ತಲುಪಿ ಸೂಳೆಕೆರೆ ನೋಡಲು ಹೋಗಿದ್ದೆ.  11ನೇ ಶತಮಾನದಲ್ಲಿ (1128ರಲ್ಲಿ)ಕೇವಲ 3 ವಷ೯ದಲ್ಲಿ ಈ ಕೆರೆ ನಿಮಾ೯ಣ ಮಾಡಿಸಿದ್ದು ಶಾಂತವ್ವ ಎಂಬ ರಾಜ ಕುಮಾರಿ ಅವಳು ಸ್ವಣ೯ವತಿ ಪಟ್ಟಣದ ದೊರೆ ವಿಕ್ರಮ ರಾಜನ ಮಗಳು, ಸಿದ್ದೇಶ್ವರ ಎಂಬ ಅನ್ಯ ಜಾತಿಯ ಯುವಕನೊ೦ದಿಗೆ ಗಾಂದವ೯ ವಿವಾಹ ಆಗುತ್ತಾಳೆ ಇದನ್ನ ಸಹಿಸದ ಮತ್ತು ಒಪ್ಪದ ಜನತೆ ಸೂಳೆ ಎಂದು ಮೂದಲಿಸುತ್ತಾರOತೆ ಈ ರೀತಿ ತನಗೆ ಬಂದ ಕಳಂಕ ಕಳೆಯಲು ಈ ಬೃಹತ್ ಕೆರೆ ತನ್ನ ಪತಿ ಸಿದ್ದೇಶ್ವರನ ಜೊತೆ ಸೇರಿ ನಿಮಿ೯ಸಿ ಕೆರೆಗೆ ಹಾರವಾದಳೆoಬ ಇತಿಹಾಸ ಇದೆ ಇದರಿಂದ ನೊಂದ ಪತಿ ಸಿದ್ಧೇಶ್ವರ ಕೂಡ ಎದುರಿನ ಗುಡ್ಡದಲ್ಲಿ ಜೀವ ತ್ಯಾಗ ಮಾಡುತ್ತಾನೆ ಈಗ ಅಲ್ಲಿ ಸಿದ್ದೇಶ್ವರ ದೇವಸ್ಥಾನವಿದೆ.   ಈ ಕೆರೆ ಈಗಲೂ ಸೂಳೆಕೆರೆ ಎಂದೆ ಹೆಸರಾಗಿದೆ ಈ

# ಜುಟ್ಟು ಕಾಳಿಂಗ ಸಪ೯ದ ಆಸ್ತಿತ್ವದ ಮಲೆನಾಡಿನ ಮಿಥ್ಯೆ#

  # ಕಾಳಿ೦ಗ ಸಪ೯ದಲ್ಲಿ ಜುಟ್ಟು ಕಾಳಿಂಗ ಸಪ೯ ಅಂತ ಇದೇ ಅನ್ನುವ ಯಾರು ನೋಡದ ಸಪ೯ದ ಅಸ್ತಿತ್ವ#    ಮಲೆನಾಡಿನ ಹಳ್ಳಿಗಳಲ್ಲಿ, ಅದು ಕಾಳಿ೦ಗ ಸಪ೯ದ ವಾಸಸ್ಥಳದ ಪರಿಸರದಲ್ಲಿ ಜುಟ್ಟು ಕಾಳಿಂಗ ಸಪ೯ ಇದೆ ಅನ್ನುವ ಮಾತು ಆಗಾಗ್ಗೆ ಕೇಳುತ್ತಿರುತ್ತೇವೆ. ಆದರೆ ಆ ರೀತಿಯ ಹಾವು ಇಲ್ಲ ಎಂದು ಹಾವಿನ ಬಗ್ಗೆ ಸಂಶೋದನೆ ಮಾಡುವವರು, ಅರಣ್ಯ ಇಲಾಖೆಯವರು, ಹಾವು ಹಿಡಿಯುವವರು ಖಡಾಖಂಡಿತವಾಗಿ ಹೇಳುತ್ತಾರಾದರು, ಈ ವದಂತಿ ಹೇಗೆ ಹರಡಿದೆ?.    ಇದು ಒಂದು ಊರು ಹಳ್ಳಿಯಲ್ಲ ನಾನು ನೋಡಿದಂತೆ ಮಹಾರಾಷ್ಟ್ರದ ರತ್ನಗಿರಿಯಿ೦ದ ಕೇರಳದ ಕಾಸರಗೋಡಿನ ತನಕ ಜುಟ್ಟು ಕಾಳಿಂಗದ ಅನೇಕ ರೋಚಕ ಕಥೆ ಕೇಳಿದ್ದೇನೆ.   ಪ್ರತ್ಯಕ್ಷ ನೋಡಿದವರು ತಾವು ಎನ್ನುವ ಅನೇಕರಲ್ಲಿ ಮಾತಾಡಿದ್ದೇನೆ ಆದರೆ ಅದು ನಂಬಲಹ೯ ಮಾಹಿತಿ ಅನಿಸಲಿಲ್ಲ, ಒಂದು ರೀತಿ ಕಾಲ್ಪನಿಕ ತ್ರಿಲ್ಲರ್ ಕಥೆ ಅಷ್ಟೇ ಅನ್ನಬಹುದು.    ಜಡೆ ಕಾಳಿಂಗ ಸಪ೯ಕ್ಕೆ ರೋಷ ಜಾಸ್ತಿ, ಹೆಡೆ ಮೇಲೆ ಕೂದಲಿನ ಜುಟ್ಟು ಇರುತ್ತೆ, ಮನುಷ್ಯರನ್ನ ಕಂಡರೆ ಓಡಿಸಿಕೊಂಡು ಬರುತ್ತೆ, ಅದರಿಂದ ತಪ್ಪಿಸಿಕೊಳ್ಳಲು ಒಂದೇ ದಾರಿ ಅದೇನೆಂದರೆ ತಗ್ಗಿನ ಪ್ರದೇಶದಲ್ಲಿ ಓಡುವುದು.     ಯಾಕೆ೦ದರೆ ಓಡಿಸಿಕೊಂಡು ಬರುವ ಜುಟ್ಟು ಕಾಳಿಂಗದ ಜುಟ್ಟು, ಇಳಿಜಾರಿನಲ್ಲಿ ಅದರ ತಲೆಯಿ೦ದ ಇಳಿಜಾರಿಗೆ ಸರಿಯುವುದರಿಂದ  ಕಣ್ಣಿನ ಮೇಲೆ ಕೂದಲ ಜುಟ್ಟು ಮುಚ್ಚುವುದರಿಂದ ಕಣ್ಣು ಕಾಣುವುದಿಲ್ಲ, ಆಗಲೇ ತಪ್ಪಿಸಿಕೊಳ್ಳಬೇಕು ಅಂತ ಬಿದನೂರು ನಗರ ಸಮೀಪದ ದೇವಗಂಗೆ ಎಂಬ ಕೆಳದಿ