Skip to main content

Blog number 1089. ನಾನೂ ನನ್ನ ಸಹೋದರ ಮತ್ತು ನಮ್ಮಿಬ್ಬರ ಜೀವನ - ವ್ಯವಹಾರ

#ನಾನು_ನನ್ನ_ಸಹೋದರ

ಹೆಚ್ಚಿನ ಕುಟುಂಬದಲ್ಲಿ ಸಹೋದರರು ಮದುವೆ ಆಗುತ್ತಲೇ ಆಸ್ತಿ ಪಾಲು ಮಾಡಿಕೊಂಡು ಅಥವ ಪಿತ್ರಾಜಿ೯ತ ಆಸ್ತಿ ಮಾರಿಕೊಂಡು ಹಣ ಹಂಚಿಕೊಂಡು ಪ್ರತ್ಯೇಕರಾಗಿ ಬಿಡುತ್ತಾರೆ.
 ಪರಸ್ಪರ ಹೊಡೆದಾಟ ದ್ವೇಷದಲ್ಲಿ ಒಂದೇ ತಾಯಿ ಮಕ್ಕಳಲ್ಲ ಎನ್ನುವಂತೆ ವತಿ೯ಸುತ್ತಾರೆ.
 ನಾನು ಬಾಲ್ಯದಲ್ಲೇ ಒ0ದು ತೀಮಾ೯ನ ಮಾಡಿದ್ದೆ ನಾನು ನನ್ನ ಅಣ್ಣ ಜೀವನ ಪಯ೯೦ತ ಜೊತೆಯಲ್ಲಿರಬೇಕು ಅಂತ.
 ನನ್ನೆಲ್ಲ ದಶಾವತಾರಗಳನ್ನ ಹತ್ತು ಹಲವು ವ್ಯವಹಾರಗಳನ್ನ ನನ್ನಣ್ಣ ಪ್ರಶ್ನಿಸದೇ ಸಹಕರಿಸಿದ್ದ, ನಮ್ಮ ತಂದೆ ದೇಹಾಂತ್ಯದ ನಂತರ ಬ್ಯಾಂಕಿನ ಸಾಲ ಸೋಲಗಳಿಗೂ ಕಣ್ಣು ಮುಚ್ಚಿ ಸಹಿ ಹಾಕಿದ್ದ, ನಂತರ ಉದ್ದಿಮೆಯಲ್ಲಿ ನಷ್ಟವಾಗಿ ಸಾಲ ತೀರಿಸಲಾಗದೇ ಆಸ್ತಿ ಹರಾಜಿಗೆ ಬಂದರೂ "ನಿನ್ನಿ೦ದ ನಾನು ಆಸ್ತಿ ಕಳೆದುಕೊಂಡೆ " ಅಂತ ಒಂದು ದಿನವೂ ಅನ್ನಲಿಲ್ಲ.
 ದೇವರ ದಯೆಯಿಂದ ಎಲ್ಲಾ ಸಾಲಗಳನ್ನು ತೀರಿಸಿ ಆಸ್ತಿ ಉಳಿಸಿಕೊಂಡೆವು 2015 ರ ತನಕ ಒಂದೇ ಮನೆಯಲ್ಲಿ ವಾಸವಾಗಿದ್ದೆವು ನಂತರ ಒಂದೇ ತರದ ಎರೆಡು ಮನೆ ನಿಮಿ೯ಸಿ ಅಕ್ಕ ಪಕ್ಕದಲ್ಲಿ ಇದ್ದೇವೆ.
 ನಮ್ಮೆಲ್ಲ ವ್ಯವಹಾರ ಈಗಲೂ ಅಧಿಕೃತ ಕಾನೂನು ಬದ್ದ ಪಾಲುದಾರಿಕೆಯಲ್ಲಿ ಲಾಭ ನಷ್ಟದಲ್ಲಿ ಸರಿ ಸಮನಾಗಿ ನಡೆಸುತ್ತಿದ್ದೇವೆ.
 ಈಗಲೂ ಲೆಖ್ಖ ಪತ್ರ ನಾನೇ ನೋಡುತ್ತೇನೆ ಆದರೆ ಬ್ಯಾಂಕ್ ಅಕೌಂಟ್ ಮತ್ತು ಚೆಕ್ ಗೆ ನನ್ನ ಅಣ್ಣನೆ ಸಹಿ ಮಾಡಬೇಕು, ಊರಲ್ಲಿ ಅನೇಕ ನನ್ನ ತಂದೆಯ ಮಿತ್ರರು ನಮ್ಮಿಬ್ಬರ ಸಹೋದರ ಸೌಹಾರ್ದತೆಗೆ ಶಹಬ್ಬಾಷ್ ಅನ್ನುತ್ತಾರೆ.
 ಇದೆಲ್ಲ ಏಕೆ ನೆನಪಾಯಿತೆಂದರೆ ಗ್ರಾಮೀಣ ಪ್ರದೇಶದಲ್ಲಿ ಕೃಷಿ ಉದ್ಯೋಗ ಮಾಡುವವರು ಪಾಲುದಾರಿಕೆಯಲ್ಲಿ ವ್ಯವಹಾರ ಮತ್ತು ಕೃಷಿ ನಡೆಸಿ ಆದಾಯದಲ್ಲಿ ಪಾಲು ಹಂಚಿ ಕೊಂಡರೆ ಒಟ್ಟು ಆಸ್ತಿಯೂ ಉಳಿಯುತ್ತದೆ ಮತ್ತು ಆಸ್ತಿ ಮೌಲ್ಯವೂ ಕಾಲ ಕಾಲಕ್ಕೆ ಹೆಚ್ಚು ಆಗುತ್ತದೆ ಅದರ ಮೇಲೆ ಸಾಲ ಸೌಲಭ್ಯವೂ ಸಿಗುತ್ತದೆ.
  ಆದರೆ ಹೆಚ್ಚಿನ ಸಹೋದರರು ಅವರವರ ಬಂದುಗಳ ಅಥವ ಗೆಳೆಯರು ನೀಡುವ ಆಯೋಗ್ಯ ಸಲಹೆಗೆ ಆಸ್ತಿ ಹಿಸ್ಸೆ ಪಂಚಾಯಿತಿಗೆ ಮುಂದಾಗಿ ದೂರಾಲೋಚನೆ ಜಾಗದಲ್ಲಿ ದುರಾಲೋಚನೆ ಮಾಡುತ್ತಾರೆ.
  ತಂದೆ ತಾಯಿ ಹೆಸರಲ್ಲಿ ಕಲ್ಯಾಣ ಮಂಟಪ ನಿಮಿ೯ಸಿದ್ದೇವೆ,ಊರಿಗಾಗಿ ವರಸಿದ್ದಿ ವಿನಾಯಕ ಸ್ವಾಮಿ ದೇವಾಲಯ ನಿರ್ಮಿಸಿ ಪ್ರತಿಷ್ಟಾಪಿಸಿ ಸಮಪಿ೯ಸಿದ್ದೇವೆ, ಇಬ್ಬರ ಹೆಸರಲ್ಲಿ ಪ್ರತ್ಯೇಕ ಖಾತೆಯಲ್ಲಿ ರಬ್ಬರ್ ಪ್ಲಾಂಟೀಶನ್ ಇದೆ ಅದರ ನಿವ೯ಹಣೆ ಒಟ್ಟಿಗೆ ಮಾಡುತ್ತೇವೆ.
  ಲಾಡ್ಜ್ ಮತ್ತು ರೆಸ್ಟೋರೆಂಟ್ ಗಳು ಪಾಲುದಾರಿಕೆಯಲ್ಲಿ ಒಟ್ಟಾಗಿ ಎಲ್ಲರೂ ಶ್ರಮಿಸುತ್ತೇವೆ.

Comments

Popular posts from this blog

# ಜುಟ್ಟು ಕಾಳಿಂಗ ಸಪ೯ದ ಆಸ್ತಿತ್ವದ ಮಲೆನಾಡಿನ ಮಿಥ್ಯೆ#

  # ಕಾಳಿ೦ಗ ಸಪ೯ದಲ್ಲಿ ಜುಟ್ಟು ಕಾಳಿಂಗ ಸಪ೯ ಅಂತ ಇದೇ ಅನ್ನುವ ಯಾರು ನೋಡದ ಸಪ೯ದ ಅಸ್ತಿತ್ವ#    ಮಲೆನಾಡಿನ ಹಳ್ಳಿಗಳಲ್ಲಿ, ಅದು ಕಾಳಿ೦ಗ ಸಪ೯ದ ವಾಸಸ್ಥಳದ ಪರಿಸರದಲ್ಲಿ ಜುಟ್ಟು ಕಾಳಿಂಗ ಸಪ೯ ಇದೆ ಅನ್ನುವ ಮಾತು ಆಗಾಗ್ಗೆ ಕೇಳುತ್ತಿರುತ್ತೇವೆ. ಆದರೆ ಆ ರೀತಿಯ ಹಾವು ಇಲ್ಲ ಎಂದು ಹಾವಿನ ಬಗ್ಗೆ ಸಂಶೋದನೆ ಮಾಡುವವರು, ಅರಣ್ಯ ಇಲಾಖೆಯವರು, ಹಾವು ಹಿಡಿಯುವವರು ಖಡಾಖಂಡಿತವಾಗಿ ಹೇಳುತ್ತಾರಾದರು, ಈ ವದಂತಿ ಹೇಗೆ ಹರಡಿದೆ?.    ಇದು ಒಂದು ಊರು ಹಳ್ಳಿಯಲ್ಲ ನಾನು ನೋಡಿದಂತೆ ಮಹಾರಾಷ್ಟ್ರದ ರತ್ನಗಿರಿಯಿ೦ದ ಕೇರಳದ ಕಾಸರಗೋಡಿನ ತನಕ ಜುಟ್ಟು ಕಾಳಿಂಗದ ಅನೇಕ ರೋಚಕ ಕಥೆ ಕೇಳಿದ್ದೇನೆ.   ಪ್ರತ್ಯಕ್ಷ ನೋಡಿದವರು ತಾವು ಎನ್ನುವ ಅನೇಕರಲ್ಲಿ ಮಾತಾಡಿದ್ದೇನೆ ಆದರೆ ಅದು ನಂಬಲಹ೯ ಮಾಹಿತಿ ಅನಿಸಲಿಲ್ಲ, ಒಂದು ರೀತಿ ಕಾಲ್ಪನಿಕ ತ್ರಿಲ್ಲರ್ ಕಥೆ ಅಷ್ಟೇ ಅನ್ನಬಹುದು.    ಜಡೆ ಕಾಳಿಂಗ ಸಪ೯ಕ್ಕೆ ರೋಷ ಜಾಸ್ತಿ, ಹೆಡೆ ಮೇಲೆ ಕೂದಲಿನ ಜುಟ್ಟು ಇರುತ್ತೆ, ಮನುಷ್ಯರನ್ನ ಕಂಡರೆ ಓಡಿಸಿಕೊಂಡು ಬರುತ್ತೆ, ಅದರಿಂದ ತಪ್ಪಿಸಿಕೊಳ್ಳಲು ಒಂದೇ ದಾರಿ ಅದೇನೆಂದರೆ ತಗ್ಗಿನ ಪ್ರದೇಶದಲ್ಲಿ ಓಡುವುದು.     ಯಾಕೆ೦ದರೆ ಓಡಿಸಿಕೊಂಡು ಬರುವ ಜುಟ್ಟು ಕಾಳಿಂಗದ ಜುಟ್ಟು, ಇಳಿಜಾರಿನಲ್ಲಿ ಅದರ ತಲೆಯಿ೦ದ ಇಳಿಜಾರಿಗೆ ಸರಿಯುವುದರಿಂದ  ಕಣ್ಣಿನ ಮೇಲೆ ಕೂದಲ ಜುಟ್ಟು ಮುಚ್ಚುವುದರಿಂದ ಕಣ್ಣು ಕಾಣುವುದಿಲ್ಲ, ಆಗಲೇ ತಪ್...

HISTORICAL SAGAR MARIKAMBA JATRA.ಐತಿಹಾಸಿಕ ಸಾಗರದ ಮಾರಿಕಾಂಬಾ ಜಾತ್ರೆ

     ಸಾಗರದ ಮಾರಿಕಾಂಬಾ ಜಾತ್ರೆ ಐತಿಹಾಸಿಕ ಚರಿತ್ರೆಯಲ್ಲಿ ದಾಖಲೆ.        ಕನಾ೯ಟಕ ರಾಜ್ಯದಲ್ಲಿ ಎರೆಡು ಮಾರಿಕಾಂಬಾ ಜಾತ್ರೆಗಳು ಪ್ರಸಿದ್ಧಿ ಪಡೆದಿದೆ ಅದು ಉತ್ತರ ಕನ್ನಡ ಜಿಲ್ಲೆಯ ಸಿಸಿ೯ಯದ್ದು ಮತ್ತು ಶಿವಮೊಗ್ಗ ಜಿಲ್ಲೆಯ ಸಾಗರದ್ದು.    ಪ್ರತಿ ಮೂರು ವಷ೯ಕೆ ಈ ಜಾತ್ರೆ ಆಚರಿಸಲಾಗುತ್ತೆ ಶೂದ್ರ ವಗ೯ದವರು ಭಯ ಮತ್ತು ಭಕ್ತಿಯಿಂದ ಕುರಿ ಕೋಳಿ ಬಲಿ ನೀಡುವ ಪರಂಪರೆ ಇದೆ.ಮಂಗಳವಾರ ಮೇಲು ಜಾತಿಯ ಜನರ ಪೂಜೆ ದೇವಿಯ ತವರು ಮನೆಯಲ್ಲಿ ನಡೆಯುತ್ತದೆ ನಂತರ ರಾತ್ರಿ ಗಂಡನ ಸೇರುವ ಮಾರಿಗೆ ಶೂದ್ರರ ಪೂಜೆ, ಬಲಿ ಮೀಸಲು.    ಮೊದಲೆಲ್ಲ ಮಾರಿಯಮ್ಮನಿಗೆ ಕೊಣನ ಬಲಿ ನೀಡುತ್ತಿದ್ದರು ಈಗ ಇದು ಕಾನೂನು ಪ್ರಕಾರ ನಿಷಿದ್ಧ ಆದರೆ ಈ ಆಚಾರಣೆ ಗುಪ್ತವಾಗಿ ಬೇರೆ ಕಡೆ ನಡೆಸಲಾಗುತ್ತೆ ಅನ್ನುತ್ತಾರೆ.    ಸಾಗರದ ಮಾರಿಕಾ0ಬಾ ಜಾತ್ರೆ ಜಾತ್ರೆಯಿ೦ದ ಜಾತ್ರೆಗೆ ಅದೂರಿಯಾಗಿ ನಡೆಯುತ್ತದೆ, ಕೋಟ್ಯಾoತರ ಹಣದ ವಹಿವಾಟು ಕೂಡ, ಮೊದಲೆಲ್ಲ ಹಣದ ಅಪರಾ ತಪರ ಆಗುತ್ತಿದೆ ಎಂಬ ಗುಲ್ಲು ಇತ್ತು ಆದರೆ ಈಗೆಲ್ಲ ಪಾರದಶ೯ಕವಾಗಿದೆ ಆದರೂ ಈ ಬಾರಿಯ 2017ರ ಜಾತ್ರೆಯಲ್ಲಿ ಅವ್ಯವಹಾರದ ಆರೋಪ ಮಾಡಲಾಗಿದೆ ಈ ವಿಚಾರ ಇಲ್ಲಿ ಅಪ್ರಸ್ತುತ ಆದರೂ ಈ ಬಗ್ಗೆ ಬರೆಯಲು ಕಾರಣ ಕೆಳದಿ ಅರಸರ ಕಾಲದಲ್ಲಿ ಅಂದರೆ 350 ವಷ೯ದ ಹಿಂದೆಯೂ ರಾಜರಿಗೆ ಸಾಗರದ ಮಾರಿಕಾಂಬಾ ಜಾತ್ರೆಯಲ್ಲಿ ಸಾವ೯ಜನಿಕರಿಂದ ಸಂಗ್ರಹಿಸಿದ ಜಾತ...

ರಿಪ್ಪನ್ ಪೇಟೆ ( ಶಿವಮೊಗ್ಗ ಜಿಲ್ಲೆ) ಹೆಸರು ಬಂದಿದ್ದಾದರು ಹೇಗೆ?

#  ರಿಪ್ಪನ್ ಪೇಟೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಪ್ರಮುಖ ಹೋಬಳಿ ಕೇಂದ್ರ ಈ ಆಂಗ್ಲ ಅಧಿಕಾರಿಯ ಹೆಸರು ಇಡಲು ಕಾರಣವಾದ ಘಟನೆ ತುಂಬಾ ಕುತೂಹಲಕಾರಿ# ಸ್ವಲ್ಪ ಕಾಲ ನೀವು ಈ ಲೇಖನ ಓದಿದರೆ ಕಾರಣ ಗೊತ್ತಾಗುತ್ತೆ.    ಆಗ ಬ್ರಿಟಿಷ್ ಸಕಾ೯ರರಕ್ಕೆ ಆಡಳಿತ ಸುಗುಮಕ್ಕೆ ರೈಲು ಮಾಗ೯ ಅತ್ಯಗತ್ಯ ಎಂಬ ಸಕಾರಣ ಮನವರಿಕೆ ಆದ ಕಾಲ ಏಕೆಂದರೆ ಬ್ರಿಟಿಷರು ಅಮೆರಿಕಾ ವಲಸೆಯಲ್ಲಿ ಇದನ್ನ ಮನಗOಡಿದ್ದರು, ಬೆಂಗಳೂಳಿ ರಿಂದ ಶಿವಮೊಗ್ಗ ತಲುಪುವ ರೈಲು ಮಾಗ೯ ತಾಳಗುಪ್ಪಾ ತಲುಪಿದರೆ ಜೋಗ ಜಲಪಾತ ವೀಕ್ಷಣೆಗೆ ಅನುಕೂಲ ಎಂಬುದು ಹಾಗೆ ಮತ್ತೊಂದು ಮ್ಯಸೂರು ಸಕಾ೯ರ ಶರಾವತಿ ನದಿಗೆ ಆಣೆಕಟ್ಟು ಕಟ್ಟಿ.ಜಲ ವಿದ್ಯುತ್ ತಯಾರಿಸಲು ಸಾಮಗ್ರಿ ಸಾಗಾಣಿಕೆಗೆ ಅನುಕೂಲ ಎಂಬ ಕಾರಣದಿಂದ ಶಿವಮೊಗ್ಗದಿಂದ ತಾಳಗುಪ್ಪ ರೈಲು ಮಾಗ೯ ಯೋಜನೆ ಮಾಡಲಾಯಿತು.    ಆಗ ಪ್ಲೇಗ್ ಮಾರಿಯ ಕಾಲ, ಎಲ್ಲೆಲ್ಲೂ ಜನ ಸಾಯುತ್ತಿದ್ದರು ಆಗಲೇ ಈ ರೈಲು ಮಾಗ೯ ಶಿವಮೊಗ್ಗ ಆರಸಾಳಿOದ ದೊಡ್ಡಿನ ಕೊಪ್ಪ (ಈಗಿನ ರಿಪ್ಪನ್ ಪೇಟೆ) ಆನಂದಪುರಂ ಮಾಗ೯ ನಿಗದಿ ಆಗಿತ್ತು ಆದರೆ ಈ ಭಾಗದಲ್ಲಿ ಒಂದು  ವದಂತಿ ಈ ಬಾಗದಲ್ಲಿ ಹರಡಿತ್ತು ಅದೇನೆಂದರೆ ರೈಲು ಬಂದರೆ ಪ್ಲೇ ಗು ಬರುತ್ತೆ  ಅಂತ.    ಹಾಗಾಗಿ ಈ ಭಾಗದಲ್ಲಿನ ಜಾಗೃತ ಜನ ನಾಯಕರುಗಳು ಹೇಗಾದರು ಮಾಡಿ ರೈಲು ಬರದಂತೆ ಮಾಡಲು ಎಲ್ಲಾ ರೀತಿಯ ಪ್ರಯತ್ನ ಮಾಡಲು ಪ್ರಾರಂಭಿಸಿದರು.     ಇದೇ ಸಂದಭ೯ದಲ್ಲ...