Skip to main content

Blog number 1092. ಗೋರಕ್ ಪುರದ ನಾಥಪಂತದ ಯೋಗಿ ಆದಿತ್ಯನಾಥರ ಆಡಳಿತಕ್ಕೆ ಸೇರಿದ ಕುಂದಾಪುರ ತಾಲ್ಲೂಕಿನ ಕಮಲಶಿಲೆ ಸಮೀಪದ ಯಡಮೊಗೆಯ ಶ್ರೀ ಕ್ಷೇತ್ರ ಸಿದ್ದ ಪೀಠ ಕೊಡಚಾದ್ರಿ ಹಲವರಿ ಮಠದ ಶ್ರೀ ಫೀರ್ ಯೋಗಿ ಜಗದೀಶ್ ನಾಥಜೀ ನನ್ನ ಸಂಸ್ಥೆಗೆ ಬೇಟಿ ನೀಡಿದಾಗ

 ಬಾರ ಪಂತ್ ಗೆ (ನಾಥ ಪoತದ) ಸೇರಿದ ಉಡುಪಿ ಜಿಲ್ಲೆಯ ಹಲವಾರಿ ಮಠದ ಶ್ರೀ ಜಗದೀಶ್ ಸ್ವಾಮಿಜಿ .
  2017ರಲ್ಲಿ ನಾಸಿಕ್ ನಿ೦ದ ನಡೆದು ಬಂದ 630 ಸನ್ಯಾಸಿಗಳ ಬಾರ ಪಂತ್ ಯಾತ್ರೆ ಉಡುಪಿ ಜಿಲ್ಲೆಯ ಸಿದ್ದಾಪುರ ಸಮೀಪದ ಕಮಲಶಿಲೆ ಹತ್ತಿರದ 5000ಕ್ಕೂ ಹೆಚ್ಚು ವಷ೯ದ ಇತಿಹಾಸ ಪ್ರಸಿದ್ದ ಹಲವಾರಿ ಮಠಕ್ಕೆ ಶ್ರೀ ಜಗದೀಶ್ ಸ್ವಾಮಿಜಿಯವರನ್ನ ಮಠದ ಅಧಿಪತಿ ಆಗಿ ನಿಯಮಿಸಿದ್ದಾರೆ.
  ಈ ಮಠದಲ್ಲಿ 34 ವಷ೯ ದೀಘ೯ ಅವದಿಗೆ ಸ್ವಾಮಿಗಳಾಗಿದ್ದ ಶ್ರೀ ಸೋಮನಾಥ ಪೀರ್ ಸ್ವಾಮಿಜಿ ಬಾರ ಪಂತ್ ಬರುವ 2 ವಷ೯ ಮೊದಲೇ ಇಹಲೋಕ ತ್ಯಜಿಸಿದ್ದರು.
  ಉತ್ತರ ಪ್ರದೇಶದ ಹಾಲಿ ಮುಖ್ಯಮಂತ್ರಿ ಆದಿತ್ಯನಾಥರು ಗೋರಕ್ ಪುರದ ಸಂತರು ಇವರಿಗೆ ಮುಖ್ಯಸ್ಥರು.
   ಹಿಂದಿನ ಸೋಮನಾಥ ಪೀರ್ ಸ್ವಾಮಿಗಳು ನನ್ನ ಗುರುಗಳು, ಇವತ್ತು ಅವರ ಕೃಪಕಟಾಕ್ಷ ನನ್ನ ಮೇಲಿದೆ ಅಂತಹ ಅನೇಕ ಆಗೋಚರ ಅನುಭವ ನನ್ನ ಮೇಲೆ ಆಗುತ್ತಿರುತ್ತದೆ.
  ಜಗದೀಶ್ ಸ್ವಾಮಿಗಳು ಆದಿಚುಂಚನ ಗಿರಿ ಸ್ವಾಮಿಜಿಗಳ ಆಮಂತ್ರಣದ ಮೇರೆಗೆ ಆದಿಚುಂಚನಗಿರಿಯ ಕಾಲ ಬೈರವೇಶ್ವರ ಸನ್ನಿದಿಗೆ ಹೋಗುವ ಮಾಗ೯ದಲ್ಲಿ ನಮ್ಮ ನೂತನ ಲಾಡ್ಜ್ ಕಚೇರಿಗೆ ಆಗಮಿಸಿದ್ದರು.               ಸೋಮನಾಥ ಪೀರ್ ಸ್ವಾಮಿಗಳು ಇದ್ದಾಗ ಕುಂದಾಪುರದಿಂದ ಬರುವಾಗ  ಒಂದು ರಾತ್ರಿ ನಾನು ಹಲವಾರಿ ಮಠಕ್ಕೆ ಹೋದಾಗ ಇದೇ ಜಗದೀಶ್ ಸ್ವಾಮಿಜಿ (ಆಗ ಪೀಠಾದೀಶರಾಗಿರಲಿಲ್ಲ) ಅಲ್ಲಿಗೆ ಬಂದು ತಂಗಿದ್ದರು, ಅವರೇ ನಮಗೆ ಗೋದಿ ರೊಟ್ಟಿ ಆಲೂ ಪಲ್ಯ ಮಾಡಿ ಬಡಿಸಿದ್ದರು ಅದನ್ನ ನೆನಪಿಸಿದೆ ಅವರಿಗೂ ನೆನಪಾಯಿತು.
   ಹಿರಿಯ ಸೋಮ ನಾಥಪೀರ್ ಸ್ವಾಮಿಜಿ 2009ರ ಜಾತ್ರಾ ಮಹೋತ್ಸವದ ರಥೋತ್ಸವ ಉದ್ಘಾಟಿಸಿದ್ದರು ಈ ಸಂದಭ೯ದಲ್ಲಿ ಅವರ ಗಮನಕ್ಕೂ ತರಲಾಯಿತು.
  ಪ್ರತಿ 12 ವಷ೯ಕ್ಕೆ ಮಹಾರಾಷ್ಟ್ರದ ನಾಸಿಕ್ ನಿಂದ ಕುಂಭಮೇಳದ ಮರುದಿನ ಪ್ರಾರಂಭಿಸಿ ಪಶ್ಚಿಮ ಘಟ್ಟದ ಮಧ್ಯದಲ್ಲಿ ನಡೆದು ಬರುವ ನೂರಾರು ಸಾದು ಸಂತರ ಬಾರ ಪಂತ್ ಯಾತ್ರೆ ಸಾಗರದ ಗಣಪತಿ ದೇವಸ್ಥಾನದಲ್ಲಿ ತಂಗಿ ನಂತರ ಆಲಗೇರಿ ಮಂಡ್ರಿ, ಬಿದನೂರು ನಗರ, ಹಲವಾರಿ ಮಠ ಮುಖಾಂತರ ಮಂಗಳೂರಿನ ಕದ್ರಿ ಮಠದಲ್ಲಿ ಸಮಾಪ್ತಿಯಾಗುತ್ತದೆ ಸುಮಾರು 6 ತಿಂಗಳ ಕಾಲ ಪಾತ್ರ ದೇವತೆಯನ್ನ ತಲೆ ಮೇಲೆ ಹೊತ್ತು ತರುತ್ತಾರೆ, ಇದರ ಬಗ್ಗೆ ಕನ್ನಡದ ಪ್ರಖ್ಯಾತ ಸಾಹಿತಿ ರಹಮತ್ ತರೀಕೆರೆ ಒಂದು ಸಂಶೋದನ ಗ್ರ೦ಥವೇ ತಂದಿದ್ದಾರೆ.
  ನೂತನ ಸ್ವಾಮಿಜಿಗಳ ಆಗಮನ ಆಶ್ರೀವಾದದಿಂದ ನನಗೆ ಸಂತೃಪ್ತಿಯ ಬಾವನೆ ಪ್ರಾಪ್ತಿ ಆಗಿದೆ.

Comments

Popular posts from this blog

# ಜುಟ್ಟು ಕಾಳಿಂಗ ಸಪ೯ದ ಆಸ್ತಿತ್ವದ ಮಲೆನಾಡಿನ ಮಿಥ್ಯೆ#

  # ಕಾಳಿ೦ಗ ಸಪ೯ದಲ್ಲಿ ಜುಟ್ಟು ಕಾಳಿಂಗ ಸಪ೯ ಅಂತ ಇದೇ ಅನ್ನುವ ಯಾರು ನೋಡದ ಸಪ೯ದ ಅಸ್ತಿತ್ವ#    ಮಲೆನಾಡಿನ ಹಳ್ಳಿಗಳಲ್ಲಿ, ಅದು ಕಾಳಿ೦ಗ ಸಪ೯ದ ವಾಸಸ್ಥಳದ ಪರಿಸರದಲ್ಲಿ ಜುಟ್ಟು ಕಾಳಿಂಗ ಸಪ೯ ಇದೆ ಅನ್ನುವ ಮಾತು ಆಗಾಗ್ಗೆ ಕೇಳುತ್ತಿರುತ್ತೇವೆ. ಆದರೆ ಆ ರೀತಿಯ ಹಾವು ಇಲ್ಲ ಎಂದು ಹಾವಿನ ಬಗ್ಗೆ ಸಂಶೋದನೆ ಮಾಡುವವರು, ಅರಣ್ಯ ಇಲಾಖೆಯವರು, ಹಾವು ಹಿಡಿಯುವವರು ಖಡಾಖಂಡಿತವಾಗಿ ಹೇಳುತ್ತಾರಾದರು, ಈ ವದಂತಿ ಹೇಗೆ ಹರಡಿದೆ?.    ಇದು ಒಂದು ಊರು ಹಳ್ಳಿಯಲ್ಲ ನಾನು ನೋಡಿದಂತೆ ಮಹಾರಾಷ್ಟ್ರದ ರತ್ನಗಿರಿಯಿ೦ದ ಕೇರಳದ ಕಾಸರಗೋಡಿನ ತನಕ ಜುಟ್ಟು ಕಾಳಿಂಗದ ಅನೇಕ ರೋಚಕ ಕಥೆ ಕೇಳಿದ್ದೇನೆ.   ಪ್ರತ್ಯಕ್ಷ ನೋಡಿದವರು ತಾವು ಎನ್ನುವ ಅನೇಕರಲ್ಲಿ ಮಾತಾಡಿದ್ದೇನೆ ಆದರೆ ಅದು ನಂಬಲಹ೯ ಮಾಹಿತಿ ಅನಿಸಲಿಲ್ಲ, ಒಂದು ರೀತಿ ಕಾಲ್ಪನಿಕ ತ್ರಿಲ್ಲರ್ ಕಥೆ ಅಷ್ಟೇ ಅನ್ನಬಹುದು.    ಜಡೆ ಕಾಳಿಂಗ ಸಪ೯ಕ್ಕೆ ರೋಷ ಜಾಸ್ತಿ, ಹೆಡೆ ಮೇಲೆ ಕೂದಲಿನ ಜುಟ್ಟು ಇರುತ್ತೆ, ಮನುಷ್ಯರನ್ನ ಕಂಡರೆ ಓಡಿಸಿಕೊಂಡು ಬರುತ್ತೆ, ಅದರಿಂದ ತಪ್ಪಿಸಿಕೊಳ್ಳಲು ಒಂದೇ ದಾರಿ ಅದೇನೆಂದರೆ ತಗ್ಗಿನ ಪ್ರದೇಶದಲ್ಲಿ ಓಡುವುದು.     ಯಾಕೆ೦ದರೆ ಓಡಿಸಿಕೊಂಡು ಬರುವ ಜುಟ್ಟು ಕಾಳಿಂಗದ ಜುಟ್ಟು, ಇಳಿಜಾರಿನಲ್ಲಿ ಅದರ ತಲೆಯಿ೦ದ ಇಳಿಜಾರಿಗೆ ಸರಿಯುವುದರಿಂದ  ಕಣ್ಣಿನ ಮೇಲೆ ಕೂದಲ ಜುಟ್ಟು ಮುಚ್ಚುವುದರಿಂದ ಕಣ್ಣು ಕಾಣುವುದಿಲ್ಲ, ಆಗಲೇ ತಪ್...

ಶರಾವತಿ ನದಿ ಉಗಮ ಸ್ಥಾನ ಅಂಬುತೀಥ೯.

ಇಡೀ ರಾಜ್ಯಕ್ಕೆ ವಿದ್ಯುತ್ ನೀಡುವ ಶರಾವತಿ ನದಿಯ ಉಗಮ ಸ್ಥಾನ ಅಂಬುತೀಥ೯, ಆರಗ ಸಮೀಪದ ತೀಥ೯ಳ್ಳಿ ತಾಲ್ಲೂಕಿನಲ್ಲಿದೆ( ಶಿವಮೊಗ್ಗ ಜಿಲ್ಲೆ)    ಅಂಬು ತೀಥ೯ದಲ್ಲಿ ಶ್ರೀ ರಾಮ ವನವಾಸದಲ್ಲಿದ್ದಾಗ ಸೀತಾ ಮಾತೆಗೆ ಪೂಜೆಗೆ ನೀರು ಸಿಗದಿದ್ದಾಗ ರಾಮ ತನ್ನ ಅಂಬಿನಿಂದ (ಬಿಲ್ಲಿನ ಬಾಣದಿಂದ) ನೆಲ ಸೀಳಿ ನೀರು ತಂದರೆ೦ದು ರಾಮಾಯಣದಲ್ಲಿ ಉಲ್ಲೇಖವಿದೆ, ಹಾಗಾಗಿ ಈ ಸ್ಥಳಕ್ಕೆ ಅಂಬುತೀಥ೯ ಎಂಬ ಹೆಸರು ಬ೦ತು ಎಂಬುದು ಸ್ಥಳ ಪುರಾಣ.    ಇಲ್ಲಿ ಸಣ್ಣ ತೊರೆಯಾಗಿ ಹುಟ್ಟುವ ನದಿ ಬಾಣದಿಂದ ಹುಟ್ಟಿದ್ದರಿಂದ ಶರಾವತಿ ಎ೦ಬ ಹೆಸರು ಪಡೆದು ಪೂವ೯ಕ್ಕೆ ಹರಿದು ನಂತರ ಪಶ್ಚಿಮ ಮುಖವಾಗಿ ತಿರುಗಿ ಹೊಸನಗರ ತಾಲ್ಲೂಕನ್ನ ದಾಟಿ ಸಾಗರ ತಾಲ್ಲೂಕಿನ ಜೋಗದಲ್ಲಿ ಜಲಪಾತವಾಗಿ ದಟ್ಟ ಕಾನನದ ಕಣಿವೆ ಮುಖಾಂತರ ಹರಿದು ಹೊನ್ನಾವರದಲ್ಲಿ ಅರಬ್ಬಿ ಸಮುದ್ರ ಸೇರುತ್ತದೆ.   ಈ ನದಿಗೆ ಮೊದಲಿಗೆ ಹೀರೇ ಬಾಸ್ಕರ ಎಂಬಲ್ಲಿ ನಂತರ ಲಿಂಗನಮಕ್ಕಿಯಲ್ಲಿ ಆಣೆಕಟ್ಟು ಕಟ್ಟಿ ರಾಜ್ಯಕ್ಕೆ ಜಲ ವಿದ್ಯುತ್ ನೀಡುತ್ತಿರುವುದರಿಂದ ಲಕ್ಷಾಂತರ ಎಕರೆ ಕಾಡು, ಜಮೀನು ಅನೇಕ ಊರು ಮುಳುಗಡೆ ಆಯಿತು ಸಾವಿರಾರು ಕುಟುಂಬಗಳು ಸಂತ್ರಸ್ಥರಾದದ್ದು ಇತಿಹಾಸ.    ಈ ನದಿ ಜೋಗದಲ್ಲಿ ದುಮುಕುವ ಜಲಪಾತ ವಿಶ್ವದ ಸುಂದರ ಜಲಪಾತದಲ್ಲಿ ಒಂದಾಗಿದೆ.    ಹಾಗಾಗಿ ಶರಾವತಿ ನದಿಯ ಉಗಮ ಸ್ಥಾನಕ್ಕೆ ಮಹತ್ವವಿದೆ, ಒಮ್ಮೆಯಾದರೂ ಈ ನದಿ ಮೂಲ ಸಂದಶಿ೯ಸಬೇಕು ಆದರೆ ಇಲ್ಲಿ ಶರಾವತಿ ವ...

HISTORICAL SAGAR MARIKAMBA JATRA.ಐತಿಹಾಸಿಕ ಸಾಗರದ ಮಾರಿಕಾಂಬಾ ಜಾತ್ರೆ

     ಸಾಗರದ ಮಾರಿಕಾಂಬಾ ಜಾತ್ರೆ ಐತಿಹಾಸಿಕ ಚರಿತ್ರೆಯಲ್ಲಿ ದಾಖಲೆ.        ಕನಾ೯ಟಕ ರಾಜ್ಯದಲ್ಲಿ ಎರೆಡು ಮಾರಿಕಾಂಬಾ ಜಾತ್ರೆಗಳು ಪ್ರಸಿದ್ಧಿ ಪಡೆದಿದೆ ಅದು ಉತ್ತರ ಕನ್ನಡ ಜಿಲ್ಲೆಯ ಸಿಸಿ೯ಯದ್ದು ಮತ್ತು ಶಿವಮೊಗ್ಗ ಜಿಲ್ಲೆಯ ಸಾಗರದ್ದು.    ಪ್ರತಿ ಮೂರು ವಷ೯ಕೆ ಈ ಜಾತ್ರೆ ಆಚರಿಸಲಾಗುತ್ತೆ ಶೂದ್ರ ವಗ೯ದವರು ಭಯ ಮತ್ತು ಭಕ್ತಿಯಿಂದ ಕುರಿ ಕೋಳಿ ಬಲಿ ನೀಡುವ ಪರಂಪರೆ ಇದೆ.ಮಂಗಳವಾರ ಮೇಲು ಜಾತಿಯ ಜನರ ಪೂಜೆ ದೇವಿಯ ತವರು ಮನೆಯಲ್ಲಿ ನಡೆಯುತ್ತದೆ ನಂತರ ರಾತ್ರಿ ಗಂಡನ ಸೇರುವ ಮಾರಿಗೆ ಶೂದ್ರರ ಪೂಜೆ, ಬಲಿ ಮೀಸಲು.    ಮೊದಲೆಲ್ಲ ಮಾರಿಯಮ್ಮನಿಗೆ ಕೊಣನ ಬಲಿ ನೀಡುತ್ತಿದ್ದರು ಈಗ ಇದು ಕಾನೂನು ಪ್ರಕಾರ ನಿಷಿದ್ಧ ಆದರೆ ಈ ಆಚಾರಣೆ ಗುಪ್ತವಾಗಿ ಬೇರೆ ಕಡೆ ನಡೆಸಲಾಗುತ್ತೆ ಅನ್ನುತ್ತಾರೆ.    ಸಾಗರದ ಮಾರಿಕಾ0ಬಾ ಜಾತ್ರೆ ಜಾತ್ರೆಯಿ೦ದ ಜಾತ್ರೆಗೆ ಅದೂರಿಯಾಗಿ ನಡೆಯುತ್ತದೆ, ಕೋಟ್ಯಾoತರ ಹಣದ ವಹಿವಾಟು ಕೂಡ, ಮೊದಲೆಲ್ಲ ಹಣದ ಅಪರಾ ತಪರ ಆಗುತ್ತಿದೆ ಎಂಬ ಗುಲ್ಲು ಇತ್ತು ಆದರೆ ಈಗೆಲ್ಲ ಪಾರದಶ೯ಕವಾಗಿದೆ ಆದರೂ ಈ ಬಾರಿಯ 2017ರ ಜಾತ್ರೆಯಲ್ಲಿ ಅವ್ಯವಹಾರದ ಆರೋಪ ಮಾಡಲಾಗಿದೆ ಈ ವಿಚಾರ ಇಲ್ಲಿ ಅಪ್ರಸ್ತುತ ಆದರೂ ಈ ಬಗ್ಗೆ ಬರೆಯಲು ಕಾರಣ ಕೆಳದಿ ಅರಸರ ಕಾಲದಲ್ಲಿ ಅಂದರೆ 350 ವಷ೯ದ ಹಿಂದೆಯೂ ರಾಜರಿಗೆ ಸಾಗರದ ಮಾರಿಕಾಂಬಾ ಜಾತ್ರೆಯಲ್ಲಿ ಸಾವ೯ಜನಿಕರಿಂದ ಸಂಗ್ರಹಿಸಿದ ಜಾತ...