Skip to main content

Blog number 1102. ಸಿಪಾಯಿ ದಂಗೆ 1857 ರಲ್ಲಿ ಸಿಲುಕಿ ಬದುಕಿ ಬಂದ ಪೂನಾದ ವಿಷ್ಣು ಭಟ್ ಗೋಡಶೆ ವರಸಯಿಕರ ಎಂಬ ಪುರೋಹಿತರು ಅಂತಿಮವಾಗಿ ಊರು ಸೇರಿದ್ದು ಪವಿತ್ರ ಗಂಗಾಜಲದ ಜೊತೆ ಅವರು ಬರೆದ ಮರಾಠಿ ಮಜ ಪ್ರವಾಸ್ ಪುಸ್ತಕ ಇಂಗ್ಲಿಷ್ ನಲ್ಲಿ ಟ್ರಾವೆಲ್ಸ್ 1857 ಕನ್ನಡದಲ್ಲಿ ದಂಗೆಯ ಸುಳಿಯಲ್ಲಿ ನಾನು ಪುಸ್ತಕ ಒಮ್ಮೆ ಓದಿದರೆ ಪುನಃ ಪುನಃ ಓದಬೇಕಾದ ಪುಸ್ತಕ

#ಈ_ಪುಸ್ತಕ_ಮೂರು_ಬಾರಿ_ಓದಿದ್ದೆ

#ಪದೇ_ಪದೇ_ಓದ_ಬೇಕೆನ್ನಿಸುತ್ತದೆ_ಆದರೆ_ಪುಸ್ತಕ_ಕಳೆದು_ಕೊಂಡಿದ್ದೆ

#ಇವತ್ತು_ಮಗ_ಮತ್ತೊಂದು_ತರಿಸಿದ್ದಾನೆ

#ದಂಗೆಯ_ಸುಳಿಯಲ್ಲಿ_ನಾನು_ಎಂಬ_ಪುಸ್ತಕ

#ವಿಷ್ಣು_ಭಟ್_ಗೋಡಶೆ_ವರಸಾಯಿಕರ_ಎಂಬ_ಮರಾಠಿ_ಪುರೋಹಿತರು_ಬರೆದ_ಪ್ರತ್ಯಕ್ಷ_ಅನುಭವ_ಕಥನ

#ಸಿಪಾಯಿ_ದಂಗೆ_1857ರನ್ನು_ಪ್ರತ್ಯಕ್ಷವಾಗಿ_ನೋಡಿ_ದಾಖಲಿಸಿದ_ದಾಖಲೆ.
  
   ವಿಷ್ಣು ಭಟ್ಟ ಗೋಡಶೆ ವರಸಾಯಿಕರ ಸಂಸ್ಕೃತ ವಿದ್ಯಾ ಪಾರಂಗತ ಯಜ್ಞ ಯಾಗಗಳು, ಪೂಜೆ ಪುನಸ್ಕಾರಗಳನ್ನು ಮಾಡಿಸುವುದರಲ್ಲಿ ನಿಸ್ಸೀಮರು ಇವರು ಮಹಾರಾಷ್ಟ್ರದ  ಪುಣೆಯ ಬಳಿಯ ವರಸ ಊರಿನವರು, ಪೇಷ್ವೆಯಿಂದ ಪತನದ ನಂತರ ತನ್ನ ಪರಿಸರದಲ್ಲಿ ಬ್ರಾಹ್ಮಣ ವೃತ್ತಿಗೆ ಪ್ರೋತ್ಸಾಹ ಸಿಗದ ಕಾರಣ ಬ್ರಹ್ಮಾವರ್ತದಲ್ಲಿ (ಕಾನ್ಪುರದಲ್ಲಿ) ದಿವ೦ಗತ ಪೇಷ್ವೆ ಇಮ್ಮಡಿ ಬಾಜಿ ರಾಯನ ದತ್ತು ಪುತ್ರ ನಾನಾ ಸಾಹೇಬನ ಆಶ್ರಯದಲ್ಲಿದ್ದರೆ ಅಲ್ಲಿದ್ದ ತನ್ನ ಚಿಕ್ಕಪ್ಪನ ಸಹಾಯದಿಂದ ಹಣಗಳಿಸಬಹುದೆಂದು ಉತ್ತರ ಭಾರತದ ತೀರ್ಥಕ್ಷೇತ್ರ ಸಂದರ್ಶಿಸುವ ಉದ್ದೇಶದಿಂದ ತನ್ನ ಇನ್ನೊಬ್ಬ ಚಿಕ್ಕಪ್ಪನ ಜೊತೆ ನಡೆಸಿದ ದೀರ್ಘ ಪ್ರವಾಸ ಕಥನ ಇದು.
  ಕಾಲು ನಡಿಗೆಯಲ್ಲೇ ಈ ಪ್ರವಾಸ ಕಾಲದಲ್ಲಿ ಇವರು ಅನುಭವಿಸಿದ ಕಷ್ಟಗಳು, ಕಳ್ಳರ ಹಾವಳಿ, ಆಗಲೇ ಬ್ರಿಟಿಷರ ವಿರುದ್ದ ಸಿಡಿದೆದ್ದ ಸಿಪಾಯಿಗಳ ದಂಗೆ ಈ ಎಲ್ಲಾ ಕಷ್ಟಗಳು ಇದರಲ್ಲಿ ದಾಖಲಿಸಿದ್ದಾರೆ.
  ಝಾನ್ಸಿ ರಾಣಿ ಲಕ್ಷ್ಮೀ ಬಾಯಿ, ನಾನಾ ಸಾಹೇಬರ ಇವರನ್ನೆಲ್ಲ ಬೇಟಿ ಮಾಡುತ್ತಾರೆ ಅಕ್ಷರಶಃ ಯುದ್ದದ ಮದ್ಯೆ ಇವರು ಜೀವ ಉಳಿದದ್ದು ಆಶ್ಚರ್ಯವೇ.
   ಇವರು ಹೋದಲ್ಲೆಲ್ಲ ದಂಗೆ ಆರಂಭವಾಗುತ್ತದೆ, ಕೊನೆಗೆ ಕಾಶಿಗೆ ಹೋಗಿ ಗಂಗಾಜಲ ತೆಗೆದು ಕೊಂಡು ಬರಿಗೈಯಲ್ಲಿ ಸ್ವಗ್ರಾಮ ತಲುಪುತ್ತಾರೆ.
  138 ಪುಟದ ಈ ಪುಸ್ತಕ ಒಮ್ಮೆ ಓದಿದರೆ ಪುನಃ ಪುನಃ ಈ ಪುಸ್ತಕ ಓದದೇ ಬಿಡುವುದಿಲ್ಲ.
  ಅಮೃತ್ ಲಾಲ್ ಸಾಗರ್ ಹಿಂದಿಗೆ ಅನುವಾದಿಸಿದ ಪುಸ್ತಕ ಕನ್ನಡಕ್ಕೆ ಅನುವಾದಿಸಿದವರು ಪ್ರೇಮ ಎನ್.ರಾವ್ ಅರಸಿಕೆರೆ .

https://www.totalkannada.com/products/839c8aa4-9dea-4111-b625-45797d93d28f.html?ref=catalogue&product-name=Dangeya%20Suliyalli%20Naanu
☝️ ಈ ಲಿಂಕ್ ನಿಂದ ಪುಸ್ತಕ ತರಿಸಿದ್ದೆ.

Comments

Popular posts from this blog

Blog number 1782. ಅರಳಸುರಳಿಯ ರಾಘವೇಂದ್ರ ಕೇಕೋಡರ ಕುಟುಂಬದ ತಪ್ಪು ನಿರ್ದಾರದ ದುರಂತ.

#ತೀರ್ಥಹಳ್ಳಿಯ_ಅರಳಸುರಳಿಯ_ಒಂದೇ_ಕುಟುಂಬದ_ನಾಲ್ವರು_ಮೃತರಾದ_ರಹಸ್ಯವೇನು? #ಈ_ಬಗ್ಗೆ_ಆ_ಊರಿನ_ಸಮೀಪದ_ಈ_ಕುಟುಂಬದ_ಪರಿಚಯ_ಇರುವವರಿಗೆ_ವಿಚಾರಿಸಿದ್ದೆ. #ಅವರು_ಈ_ಘಟನೆ_ಬಗ್ಗೆ_ಸವಿಸ್ತಾರವಾಗಿ_ಲಿಖಿತ_ಲೇಖನ_ಬರೆದಿದ್ದಾರೆ. #ಅವರ_ವಿನಂತಿ_ಅವರ_ಹೆಸರು_ಬಹಿರಂಗಗೊಳಿಸ_ಬಾರದು. #ಆದ್ದರಿಂದ_ಈ_ಲೇಖನ_ಪೋಸ್ಟ್_ಮಾಡಬಾರದೆಂದಿದ್ದೆ_ಆದರೆ_ಇದು_ಮಲೆನಾಡಿಗರ_ಮನೆ_ಮನೆಯ_ಕಥೆ #ಆದ್ದರಿಂದ_ಇಲ್ಲಿ_ಪೋಸ್ಟ್_ಮಾಡಿದೆ.    ಇಲ್ಲಿ ತಪ್ಪು ಯಾರದ್ದೂ ಇಲ್ಲ... ಪಶ್ಚಾತ್ತಾಪದ ಪ್ರಾಯಶ್ಚಿತ ಕೇಳಲು ಅವರಾರು ಇಲ್ಲ .....ಆದರೆ ಈ ರೀತಿ ಜೀವ ತ್ಯಾಗ ಮಾಡುವ ಆತುರದ ಕೆಟ್ಟ ನಿರ್ದಾರ ಮಾತ್ರ ಸರಿ ಅಲ್ಲ.     ಇವರ ಅಣ್ಣ ಆರ್.ಎಸ್.ಎಸ್. ಪ್ರಚಾರಕರಾಗಿ ದೆಹಲಿಯಲ್ಲಿ ಏಳು ವಷ೯ ಮೋದಿ ಜೊತೆ ಒಂದೇ ಕೋಣೆ ಹಂಚಿಕೊಂಡವರು, ಇನ್ನೊಬ್ಬ ಸಹೋದರ ಮೂಳೆ ತಜ್ಞರಾಗಿ ಶಿವಮೊಗ್ಗದಲ್ಲಿ ಆಸ್ಪತ್ರೆ ಮಾಡಿಕೊಂಡಿದ್ದಾರೆ.   #ದೀರ್ಘವಾದರೂ_ಪೂರ್ಣ_ಲೇಖನ_ಓದಿ   #ಹೀಗೊಂದು_ಸುಕುಟುಂಬ_ಆತ್ಮಾಘಾತ_ಮತ್ತು_ತದನಂತರದ_ಸಹಾಗಮನ.... ಮೂಡಣದಲ್ಲಿ ರವಿ ಮೂಡಲು ಅಣಿ ಯಾಗುತ್ತಿಧ್ದ .. ಹಾದಿಗಣಪತಿ ದೇವರು ಗರ್ಭಗುಡಿಯ ನಂದಾದೀಪದ ಮಂದ ಬೆಳಕಿನಲ್ಲಿ ತನ್ನ ಗುಡಿಯ ಎದುರಿನ ತಗ್ಗಿನಲ್ಲಿದ್ದ  ರಾಘವೇಂದ್ರ ಕೇಕೋಡರ ಮನೆಯನ್ನು ಎವೆಯಕ್ಕದೇ ನೋಡುತ್ತಲಿದ್ದ... ಊರ ಎಲ್ಲಾ ಮನೆಯಂತೆ ಆ ಮನೆಯಲ್ಲೂ ಆ ಬೆಳಗಿನಲ್ಲಿ ಮನೆಯೊಡತಿ ನಾಗರತ್ನಕ್ಕ ಆ ಸಮಯದಲ್ಲಿ ದೇವರಿಗೆ ದೀಪ ಹಚ್ಚಿ ಹೊಸ್ತಿಲು ಪೂಜೆ ಮಾಡ

Blog number 1037. ರಾಜಕುಮಾರಿ ಶಾಂತವ್ವ ಮತ್ತು ದಲಿತ ಯುವಕ ಸಿದ್ದೇಶ್ವರರ ಅಮರ ಪ್ರೇಮದ ಸ್ಮಾರಕ, ಅನ್ಯ ಜಾತಿ ವಿವಾಹವಾದ್ದರಿಂದ ರಾಜಕುಮಾರಿಗೆ ಸೂಳೆ ಪಟ್ಟ ನೀಡಿದ ಸಮಾಜ. ಸಮಾಜದ ಒಳಿತಿಗಾಗಿ ಶಾಂತವ್ವ ಕಟ್ಟಿಸಿದ ಬೃಹತ್ ಕೆರೆಗೆ ಜನ ಕರೆದದ್ದು ಸೂಳೆ ಕಟ್ಟಿಸಿದ ಕೆರೆ ಅದೇ ಸೂಳೆಕೆರೆ / ಶಾಂತಿ ಸಾಗರ

# ಸೂಳೆಕೆರೆ (ಶಾಂತಿ ಸಾಗರ) ಅಂತರ್ ಜಾತಿ ಪ್ರೇಮ ವಿವಾಹದ ದುರOತ ಕಥೆ. #ಅಕ್ಟೋಬರ್ 2019 ರಲ್ಲಿ ತುಂಬಿ ತುಳುಕಿತ್ತು.  ಚಿತ್ರದುಗ೯, ದಾವಣಗೆರೆ ಬಳ್ಳಾರಿ ಮುಂತಾದ ಮಳೆ ಕಡಿಮೆ ಆಗುತ್ತಿದ್ದ ಜಿಲ್ಲೆಗಳಲ್ಲಿ ಅದೂ ಅಕ್ಟೋಬರ್ ತಿಂಗಳ 2019 ರಲ್ಲಿ  ಬಂದಿದ್ದ ಬಾರಿ ಮಳೆ ಎಲ್ಲಾ ಕೆರೆ, ಹೊಂಡಗಳು ತುಂಬಿ ತುಳುಕಿದೆ, ಸಾಮಾಜಿಕ ಜಾಲ ತಾಣದಲ್ಲಿ 40 ವಷ೯ದಲ್ಲಿ ಇಂತ ಮಳೆ ಬಂದಿಲ್ಲ ಅಂತ ಸುದ್ದಿ ಹರಿದಾಡುತ್ತಿತ್ತು ಮತ್ತು  ಸೂಳೆಕೆರೆ ತುಂಬಿ ಕೋಡಿ ಬಿದ್ದಿದೆ ಅಂತೆಲ್ಲ Post ನೋಡಿ ಬೆಂಗಳೂರಿಂದ ಬರುವಾಗ ಚಿತ್ರದುಗ೯ ಮಾಗ೯ವಾಗಿ ಚನ್ನಗಿರಿ ತಲುಪಿ ಸೂಳೆಕೆರೆ ನೋಡಲು ಹೋಗಿದ್ದೆ.  11ನೇ ಶತಮಾನದಲ್ಲಿ (1128ರಲ್ಲಿ)ಕೇವಲ 3 ವಷ೯ದಲ್ಲಿ ಈ ಕೆರೆ ನಿಮಾ೯ಣ ಮಾಡಿಸಿದ್ದು ಶಾಂತವ್ವ ಎಂಬ ರಾಜ ಕುಮಾರಿ ಅವಳು ಸ್ವಣ೯ವತಿ ಪಟ್ಟಣದ ದೊರೆ ವಿಕ್ರಮ ರಾಜನ ಮಗಳು, ಸಿದ್ದೇಶ್ವರ ಎಂಬ ಅನ್ಯ ಜಾತಿಯ ಯುವಕನೊ೦ದಿಗೆ ಗಾಂದವ೯ ವಿವಾಹ ಆಗುತ್ತಾಳೆ ಇದನ್ನ ಸಹಿಸದ ಮತ್ತು ಒಪ್ಪದ ಜನತೆ ಸೂಳೆ ಎಂದು ಮೂದಲಿಸುತ್ತಾರOತೆ ಈ ರೀತಿ ತನಗೆ ಬಂದ ಕಳಂಕ ಕಳೆಯಲು ಈ ಬೃಹತ್ ಕೆರೆ ತನ್ನ ಪತಿ ಸಿದ್ದೇಶ್ವರನ ಜೊತೆ ಸೇರಿ ನಿಮಿ೯ಸಿ ಕೆರೆಗೆ ಹಾರವಾದಳೆoಬ ಇತಿಹಾಸ ಇದೆ ಇದರಿಂದ ನೊಂದ ಪತಿ ಸಿದ್ಧೇಶ್ವರ ಕೂಡ ಎದುರಿನ ಗುಡ್ಡದಲ್ಲಿ ಜೀವ ತ್ಯಾಗ ಮಾಡುತ್ತಾನೆ ಈಗ ಅಲ್ಲಿ ಸಿದ್ದೇಶ್ವರ ದೇವಸ್ಥಾನವಿದೆ.   ಈ ಕೆರೆ ಈಗಲೂ ಸೂಳೆಕೆರೆ ಎಂದೆ ಹೆಸರಾಗಿದೆ ಈ

# ಜುಟ್ಟು ಕಾಳಿಂಗ ಸಪ೯ದ ಆಸ್ತಿತ್ವದ ಮಲೆನಾಡಿನ ಮಿಥ್ಯೆ#

  # ಕಾಳಿ೦ಗ ಸಪ೯ದಲ್ಲಿ ಜುಟ್ಟು ಕಾಳಿಂಗ ಸಪ೯ ಅಂತ ಇದೇ ಅನ್ನುವ ಯಾರು ನೋಡದ ಸಪ೯ದ ಅಸ್ತಿತ್ವ#    ಮಲೆನಾಡಿನ ಹಳ್ಳಿಗಳಲ್ಲಿ, ಅದು ಕಾಳಿ೦ಗ ಸಪ೯ದ ವಾಸಸ್ಥಳದ ಪರಿಸರದಲ್ಲಿ ಜುಟ್ಟು ಕಾಳಿಂಗ ಸಪ೯ ಇದೆ ಅನ್ನುವ ಮಾತು ಆಗಾಗ್ಗೆ ಕೇಳುತ್ತಿರುತ್ತೇವೆ. ಆದರೆ ಆ ರೀತಿಯ ಹಾವು ಇಲ್ಲ ಎಂದು ಹಾವಿನ ಬಗ್ಗೆ ಸಂಶೋದನೆ ಮಾಡುವವರು, ಅರಣ್ಯ ಇಲಾಖೆಯವರು, ಹಾವು ಹಿಡಿಯುವವರು ಖಡಾಖಂಡಿತವಾಗಿ ಹೇಳುತ್ತಾರಾದರು, ಈ ವದಂತಿ ಹೇಗೆ ಹರಡಿದೆ?.    ಇದು ಒಂದು ಊರು ಹಳ್ಳಿಯಲ್ಲ ನಾನು ನೋಡಿದಂತೆ ಮಹಾರಾಷ್ಟ್ರದ ರತ್ನಗಿರಿಯಿ೦ದ ಕೇರಳದ ಕಾಸರಗೋಡಿನ ತನಕ ಜುಟ್ಟು ಕಾಳಿಂಗದ ಅನೇಕ ರೋಚಕ ಕಥೆ ಕೇಳಿದ್ದೇನೆ.   ಪ್ರತ್ಯಕ್ಷ ನೋಡಿದವರು ತಾವು ಎನ್ನುವ ಅನೇಕರಲ್ಲಿ ಮಾತಾಡಿದ್ದೇನೆ ಆದರೆ ಅದು ನಂಬಲಹ೯ ಮಾಹಿತಿ ಅನಿಸಲಿಲ್ಲ, ಒಂದು ರೀತಿ ಕಾಲ್ಪನಿಕ ತ್ರಿಲ್ಲರ್ ಕಥೆ ಅಷ್ಟೇ ಅನ್ನಬಹುದು.    ಜಡೆ ಕಾಳಿಂಗ ಸಪ೯ಕ್ಕೆ ರೋಷ ಜಾಸ್ತಿ, ಹೆಡೆ ಮೇಲೆ ಕೂದಲಿನ ಜುಟ್ಟು ಇರುತ್ತೆ, ಮನುಷ್ಯರನ್ನ ಕಂಡರೆ ಓಡಿಸಿಕೊಂಡು ಬರುತ್ತೆ, ಅದರಿಂದ ತಪ್ಪಿಸಿಕೊಳ್ಳಲು ಒಂದೇ ದಾರಿ ಅದೇನೆಂದರೆ ತಗ್ಗಿನ ಪ್ರದೇಶದಲ್ಲಿ ಓಡುವುದು.     ಯಾಕೆ೦ದರೆ ಓಡಿಸಿಕೊಂಡು ಬರುವ ಜುಟ್ಟು ಕಾಳಿಂಗದ ಜುಟ್ಟು, ಇಳಿಜಾರಿನಲ್ಲಿ ಅದರ ತಲೆಯಿ೦ದ ಇಳಿಜಾರಿಗೆ ಸರಿಯುವುದರಿಂದ  ಕಣ್ಣಿನ ಮೇಲೆ ಕೂದಲ ಜುಟ್ಟು ಮುಚ್ಚುವುದರಿಂದ ಕಣ್ಣು ಕಾಣುವುದಿಲ್ಲ, ಆಗಲೇ ತಪ್ಪಿಸಿಕೊಳ್ಳಬೇಕು ಅಂತ ಬಿದನೂರು ನಗರ ಸಮೀಪದ ದೇವಗಂಗೆ ಎಂಬ ಕೆಳದಿ