Skip to main content

Blog number 1109. ಶಿವಮೊಗ್ಗ ಜಿಲ್ಲೆಯ ಆನೆ - ಚಿರತೆ ರೈತರ ಬೆಳೆ ಸಂರಕ್ಷಣೆಗಾಗಿ ಜೀವ ತ್ಯಾಗ .ಪಶ್ಚಿಮ ಘಟ್ಟದ ಕಾಡು ಪ್ರಾಣಿಗಳು ಜನವಸತಿ ಕೇಂದ್ರಗಳಿಗೆ ಪ್ರವೇಶಿಸುವುದು ಏಕೆ? ಜೀವ ಕಳೆದುಕೊಳ್ಳುವುದು ಯಾಕೆ? ದಟ್ಟ ಅರಣ್ಯದಲ್ಲಿ ವನ್ಯಜೀವಿಗಳಿಗೆ ಏನು ಕೊರತೆ ಆಗುತ್ತಿದೆ? ವನ್ಯ ಸಂರಕ್ಷಣ ಕಾನೂನು ಬಾರತೀಯ ವನ್ಯಜೀವಿಗಳ ಜೀವನ ಕ್ರಮ ಅಧ್ಯಯನ ಮಾಡಿ ಜಾರಿಗೆ ತಂದದ್ದಾ? ಅಥವ ವಿದೇಶಿ ಕ್ರಮದ ಅನುಕರಣೆಯ ?

#ಶಿವಮೊಗ್ಗ_ಜಿಲ್ಲೆ_ಪಶ್ಚಿಮಘಟ್ಟದ_ಕರ್ನಾಟಕ_ರಾಜ್ಯದ_ಪ್ರಮುಖ_ಜಿಲ್ಲೆ.

#ಕಸ್ತೂರಿ_ರಂಗನ್_ವರದಿಯಲ್ಲಿ_ಅತಿ_ಹೆಚ್ಚು_ಭೂಪ್ರದೇಶ_ಅರಣ್ಯಕ್ಕೆ_ಸೇರಿದೆ

#ಈ_ಮದ್ಯೆ_ಈ_ಎರೆಡು_ಘಟನೆ_ನೀಡುವ_ಸಂದೇಶ_ಏನು?
#ಎರೆಡು_ತಿಂಗಳ_ಹಿಂದೆ_ಕಾಡಾನೆ_ರೈತರು_ಪಸಲು_ರಕ್ಷಣೆಗೆ_ಬೇಲಿಗೆ_ವಿದ್ಯುತ್_ನೀಡಿದ್ದರಿಂದ_ಮೃತ_ಪಟ್ಟಿದ_ಘಟನೆ.

#ನಿನ್ನೆ_ನಮ್ಮ_ಊರಿನ_ಸಮೀಪದಲ್ಲಿ_ಉರುಳಿಗೆ_ಸಿಲುಕಿ_ಸತ್ತ_ಚಿರತೆ.

  70 ವಷ೯ದ ಹಿಂದಿನ ದಟ್ಟ ಅರಣ್ಯ ಶಿವಮೊಗ್ಗ ಜಿಲ್ಲೆಯಲ್ಲಿದ್ದಾಗ ಕಾಡಾನೆ , ನರಭಕ್ಷಕಗಳ ಹಾವಳಿ ಇದ್ದಿತ್ತೆಂಬ ಅನೇಕ ಘಟನೆಗಳು ದಾಖಲಾಗಿದೆ ಆದರೆ ಈಗ ಅರಣ್ಯ ಪ್ರದೇಶವನ್ನೆಲ್ಲ ಜನವಸತಿ ಕೇಂದ್ರಗಳಾಗಿಸಿ ಆಗಿದೆ.
  ಆದರೆ ಈಗ ಮತ್ತೆ ಕಾಡಾನೆ, ಹುಲಿ, ಚಿರತೆ, ಕಾಳಿಂಗ ಸರ್ಪ, ಕಾಡುಕೋಣಗಳು ಊರೊಳಗೆ ಬರುತ್ತಿರುವುದು ಏಕೆ?
  ಸಂರಕ್ಷಿತ ಅರಣ್ಯದ ಗಡಿ ನಿಗದಿ ಆಗಿದೆ, ವನ್ಯ ಪ್ರಾಣಿಗಳ ಸಂರಕ್ಷಣೆಗಾಗಿ ಹಂದಿಯಂತ ಪ್ರಾಣಿಗಳನ್ನೂ ರೈತರು ಪಸಲು ಸಂರಕ್ಷಣೆಗಾಗಿ ಕೊಂದರೆ ಜೈಲಿಗೆ ಹಾಕುವ ಕಾನೂನಿದ್ದರೂ ಕಾಡಾನೆ, ಚಿರತೆಗಳು ಜೀವ ಕಳೆದ ಎರೆಡು ಘಟನೆಗೆ ಕಾರಣ ಏನು?
  ಪಸಲು ರಕ್ಷಣೆಗಾಗಿ ಬೇಲಿಗೆ ವಿದ್ಯುತ್ ಹರಿಸಿದ ರೈತರಿಂದ ಆನೆ ಹತ್ಯೆ ಅಂತ ಜೈಲು ಕೇಸು ಮಾಡಬಹುದು ಅದೇ ರೀತಿ ಚಿರತೆ ಮೊಲ ಅಥವ ಕಾಡು ಹಂದಿಯ ಬೇಟೆಗಾಗಿ ಹಾಕಿದ್ದ ತಂತಿಯ ಉರುಳಿನಲ್ಲಿ ಸಿಲುಕಿ ನರಳಿ ಸತ್ತದ್ದಕ್ಕೆ ಕಾರಣರಾದವರನ್ನು ಬಂದಿಸಬಹುದು.
  ಆದರೆ ಇಲ್ಲಿ ಸರಿಯಾದ ರೀತಿಯಲ್ಲಿ ಸಂಶೋದನೆ ಆಗಬೇಕು ಕಾಡು ಪ್ರಾಣಿಗಳು ಜನವಸತಿ ಕೇಂದ್ರದ ಒಳಗೆ ಬರಲು ಕಾರಣ ಏನು?
  ವನ್ಯ ಸಂರಕ್ಷಣಾ ಕಾನೂನು ಕಠಿಣವಾದರೂ ರೈತರ ಪಸಲು ವನ್ಯ ಪ್ರಾಣಿಗಳ ಸಂರಕ್ಷಣೆಗೆ ಯಾವ ಮಾನದಂಡ ಜಾರಿ ಇದೆ?.. ರೈತರ ಪಸಲು ಉಳಿಯಬೇಕು ವನ್ಯ ಪ್ರಾಣಿಗಳೂ ಉಳಿಯಬೇಕೆಂಬ ರೀತಿಯ ಕಾನೂನು ಜಾರಿ ಆಗದಿದ್ದರೆ ಮು೦ದಿನ ದಿನಗಳಲ್ಲಿ ಇನ್ನೂ ಎಷ್ಟು ಇಂತಹ ಘಟನೆಗಳಿಗೆ ನಾವೆಲ್ಲ ಪ್ರತ್ಯಕ್ಷ ದರ್ಶಿಗಳಾಗಬೇಕೋ?

Comments

Popular posts from this blog

# ಜುಟ್ಟು ಕಾಳಿಂಗ ಸಪ೯ದ ಆಸ್ತಿತ್ವದ ಮಲೆನಾಡಿನ ಮಿಥ್ಯೆ#

  # ಕಾಳಿ೦ಗ ಸಪ೯ದಲ್ಲಿ ಜುಟ್ಟು ಕಾಳಿಂಗ ಸಪ೯ ಅಂತ ಇದೇ ಅನ್ನುವ ಯಾರು ನೋಡದ ಸಪ೯ದ ಅಸ್ತಿತ್ವ#    ಮಲೆನಾಡಿನ ಹಳ್ಳಿಗಳಲ್ಲಿ, ಅದು ಕಾಳಿ೦ಗ ಸಪ೯ದ ವಾಸಸ್ಥಳದ ಪರಿಸರದಲ್ಲಿ ಜುಟ್ಟು ಕಾಳಿಂಗ ಸಪ೯ ಇದೆ ಅನ್ನುವ ಮಾತು ಆಗಾಗ್ಗೆ ಕೇಳುತ್ತಿರುತ್ತೇವೆ. ಆದರೆ ಆ ರೀತಿಯ ಹಾವು ಇಲ್ಲ ಎಂದು ಹಾವಿನ ಬಗ್ಗೆ ಸಂಶೋದನೆ ಮಾಡುವವರು, ಅರಣ್ಯ ಇಲಾಖೆಯವರು, ಹಾವು ಹಿಡಿಯುವವರು ಖಡಾಖಂಡಿತವಾಗಿ ಹೇಳುತ್ತಾರಾದರು, ಈ ವದಂತಿ ಹೇಗೆ ಹರಡಿದೆ?.    ಇದು ಒಂದು ಊರು ಹಳ್ಳಿಯಲ್ಲ ನಾನು ನೋಡಿದಂತೆ ಮಹಾರಾಷ್ಟ್ರದ ರತ್ನಗಿರಿಯಿ೦ದ ಕೇರಳದ ಕಾಸರಗೋಡಿನ ತನಕ ಜುಟ್ಟು ಕಾಳಿಂಗದ ಅನೇಕ ರೋಚಕ ಕಥೆ ಕೇಳಿದ್ದೇನೆ.   ಪ್ರತ್ಯಕ್ಷ ನೋಡಿದವರು ತಾವು ಎನ್ನುವ ಅನೇಕರಲ್ಲಿ ಮಾತಾಡಿದ್ದೇನೆ ಆದರೆ ಅದು ನಂಬಲಹ೯ ಮಾಹಿತಿ ಅನಿಸಲಿಲ್ಲ, ಒಂದು ರೀತಿ ಕಾಲ್ಪನಿಕ ತ್ರಿಲ್ಲರ್ ಕಥೆ ಅಷ್ಟೇ ಅನ್ನಬಹುದು.    ಜಡೆ ಕಾಳಿಂಗ ಸಪ೯ಕ್ಕೆ ರೋಷ ಜಾಸ್ತಿ, ಹೆಡೆ ಮೇಲೆ ಕೂದಲಿನ ಜುಟ್ಟು ಇರುತ್ತೆ, ಮನುಷ್ಯರನ್ನ ಕಂಡರೆ ಓಡಿಸಿಕೊಂಡು ಬರುತ್ತೆ, ಅದರಿಂದ ತಪ್ಪಿಸಿಕೊಳ್ಳಲು ಒಂದೇ ದಾರಿ ಅದೇನೆಂದರೆ ತಗ್ಗಿನ ಪ್ರದೇಶದಲ್ಲಿ ಓಡುವುದು.     ಯಾಕೆ೦ದರೆ ಓಡಿಸಿಕೊಂಡು ಬರುವ ಜುಟ್ಟು ಕಾಳಿಂಗದ ಜುಟ್ಟು, ಇಳಿಜಾರಿನಲ್ಲಿ ಅದರ ತಲೆಯಿ೦ದ ಇಳಿಜಾರಿಗೆ ಸರಿಯುವುದರಿಂದ  ಕಣ್ಣಿನ ಮೇಲೆ ಕೂದಲ ಜುಟ್ಟು ಮುಚ್ಚುವುದರಿಂದ ಕಣ್ಣು ಕಾಣುವುದಿಲ್ಲ, ಆಗಲೇ ತಪ್...

HISTORICAL SAGAR MARIKAMBA JATRA.ಐತಿಹಾಸಿಕ ಸಾಗರದ ಮಾರಿಕಾಂಬಾ ಜಾತ್ರೆ

     ಸಾಗರದ ಮಾರಿಕಾಂಬಾ ಜಾತ್ರೆ ಐತಿಹಾಸಿಕ ಚರಿತ್ರೆಯಲ್ಲಿ ದಾಖಲೆ.        ಕನಾ೯ಟಕ ರಾಜ್ಯದಲ್ಲಿ ಎರೆಡು ಮಾರಿಕಾಂಬಾ ಜಾತ್ರೆಗಳು ಪ್ರಸಿದ್ಧಿ ಪಡೆದಿದೆ ಅದು ಉತ್ತರ ಕನ್ನಡ ಜಿಲ್ಲೆಯ ಸಿಸಿ೯ಯದ್ದು ಮತ್ತು ಶಿವಮೊಗ್ಗ ಜಿಲ್ಲೆಯ ಸಾಗರದ್ದು.    ಪ್ರತಿ ಮೂರು ವಷ೯ಕೆ ಈ ಜಾತ್ರೆ ಆಚರಿಸಲಾಗುತ್ತೆ ಶೂದ್ರ ವಗ೯ದವರು ಭಯ ಮತ್ತು ಭಕ್ತಿಯಿಂದ ಕುರಿ ಕೋಳಿ ಬಲಿ ನೀಡುವ ಪರಂಪರೆ ಇದೆ.ಮಂಗಳವಾರ ಮೇಲು ಜಾತಿಯ ಜನರ ಪೂಜೆ ದೇವಿಯ ತವರು ಮನೆಯಲ್ಲಿ ನಡೆಯುತ್ತದೆ ನಂತರ ರಾತ್ರಿ ಗಂಡನ ಸೇರುವ ಮಾರಿಗೆ ಶೂದ್ರರ ಪೂಜೆ, ಬಲಿ ಮೀಸಲು.    ಮೊದಲೆಲ್ಲ ಮಾರಿಯಮ್ಮನಿಗೆ ಕೊಣನ ಬಲಿ ನೀಡುತ್ತಿದ್ದರು ಈಗ ಇದು ಕಾನೂನು ಪ್ರಕಾರ ನಿಷಿದ್ಧ ಆದರೆ ಈ ಆಚಾರಣೆ ಗುಪ್ತವಾಗಿ ಬೇರೆ ಕಡೆ ನಡೆಸಲಾಗುತ್ತೆ ಅನ್ನುತ್ತಾರೆ.    ಸಾಗರದ ಮಾರಿಕಾ0ಬಾ ಜಾತ್ರೆ ಜಾತ್ರೆಯಿ೦ದ ಜಾತ್ರೆಗೆ ಅದೂರಿಯಾಗಿ ನಡೆಯುತ್ತದೆ, ಕೋಟ್ಯಾoತರ ಹಣದ ವಹಿವಾಟು ಕೂಡ, ಮೊದಲೆಲ್ಲ ಹಣದ ಅಪರಾ ತಪರ ಆಗುತ್ತಿದೆ ಎಂಬ ಗುಲ್ಲು ಇತ್ತು ಆದರೆ ಈಗೆಲ್ಲ ಪಾರದಶ೯ಕವಾಗಿದೆ ಆದರೂ ಈ ಬಾರಿಯ 2017ರ ಜಾತ್ರೆಯಲ್ಲಿ ಅವ್ಯವಹಾರದ ಆರೋಪ ಮಾಡಲಾಗಿದೆ ಈ ವಿಚಾರ ಇಲ್ಲಿ ಅಪ್ರಸ್ತುತ ಆದರೂ ಈ ಬಗ್ಗೆ ಬರೆಯಲು ಕಾರಣ ಕೆಳದಿ ಅರಸರ ಕಾಲದಲ್ಲಿ ಅಂದರೆ 350 ವಷ೯ದ ಹಿಂದೆಯೂ ರಾಜರಿಗೆ ಸಾಗರದ ಮಾರಿಕಾಂಬಾ ಜಾತ್ರೆಯಲ್ಲಿ ಸಾವ೯ಜನಿಕರಿಂದ ಸಂಗ್ರಹಿಸಿದ ಜಾತ...

ರಿಪ್ಪನ್ ಪೇಟೆ ( ಶಿವಮೊಗ್ಗ ಜಿಲ್ಲೆ) ಹೆಸರು ಬಂದಿದ್ದಾದರು ಹೇಗೆ?

#  ರಿಪ್ಪನ್ ಪೇಟೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಪ್ರಮುಖ ಹೋಬಳಿ ಕೇಂದ್ರ ಈ ಆಂಗ್ಲ ಅಧಿಕಾರಿಯ ಹೆಸರು ಇಡಲು ಕಾರಣವಾದ ಘಟನೆ ತುಂಬಾ ಕುತೂಹಲಕಾರಿ# ಸ್ವಲ್ಪ ಕಾಲ ನೀವು ಈ ಲೇಖನ ಓದಿದರೆ ಕಾರಣ ಗೊತ್ತಾಗುತ್ತೆ.    ಆಗ ಬ್ರಿಟಿಷ್ ಸಕಾ೯ರರಕ್ಕೆ ಆಡಳಿತ ಸುಗುಮಕ್ಕೆ ರೈಲು ಮಾಗ೯ ಅತ್ಯಗತ್ಯ ಎಂಬ ಸಕಾರಣ ಮನವರಿಕೆ ಆದ ಕಾಲ ಏಕೆಂದರೆ ಬ್ರಿಟಿಷರು ಅಮೆರಿಕಾ ವಲಸೆಯಲ್ಲಿ ಇದನ್ನ ಮನಗOಡಿದ್ದರು, ಬೆಂಗಳೂಳಿ ರಿಂದ ಶಿವಮೊಗ್ಗ ತಲುಪುವ ರೈಲು ಮಾಗ೯ ತಾಳಗುಪ್ಪಾ ತಲುಪಿದರೆ ಜೋಗ ಜಲಪಾತ ವೀಕ್ಷಣೆಗೆ ಅನುಕೂಲ ಎಂಬುದು ಹಾಗೆ ಮತ್ತೊಂದು ಮ್ಯಸೂರು ಸಕಾ೯ರ ಶರಾವತಿ ನದಿಗೆ ಆಣೆಕಟ್ಟು ಕಟ್ಟಿ.ಜಲ ವಿದ್ಯುತ್ ತಯಾರಿಸಲು ಸಾಮಗ್ರಿ ಸಾಗಾಣಿಕೆಗೆ ಅನುಕೂಲ ಎಂಬ ಕಾರಣದಿಂದ ಶಿವಮೊಗ್ಗದಿಂದ ತಾಳಗುಪ್ಪ ರೈಲು ಮಾಗ೯ ಯೋಜನೆ ಮಾಡಲಾಯಿತು.    ಆಗ ಪ್ಲೇಗ್ ಮಾರಿಯ ಕಾಲ, ಎಲ್ಲೆಲ್ಲೂ ಜನ ಸಾಯುತ್ತಿದ್ದರು ಆಗಲೇ ಈ ರೈಲು ಮಾಗ೯ ಶಿವಮೊಗ್ಗ ಆರಸಾಳಿOದ ದೊಡ್ಡಿನ ಕೊಪ್ಪ (ಈಗಿನ ರಿಪ್ಪನ್ ಪೇಟೆ) ಆನಂದಪುರಂ ಮಾಗ೯ ನಿಗದಿ ಆಗಿತ್ತು ಆದರೆ ಈ ಭಾಗದಲ್ಲಿ ಒಂದು  ವದಂತಿ ಈ ಬಾಗದಲ್ಲಿ ಹರಡಿತ್ತು ಅದೇನೆಂದರೆ ರೈಲು ಬಂದರೆ ಪ್ಲೇ ಗು ಬರುತ್ತೆ  ಅಂತ.    ಹಾಗಾಗಿ ಈ ಭಾಗದಲ್ಲಿನ ಜಾಗೃತ ಜನ ನಾಯಕರುಗಳು ಹೇಗಾದರು ಮಾಡಿ ರೈಲು ಬರದಂತೆ ಮಾಡಲು ಎಲ್ಲಾ ರೀತಿಯ ಪ್ರಯತ್ನ ಮಾಡಲು ಪ್ರಾರಂಭಿಸಿದರು.     ಇದೇ ಸಂದಭ೯ದಲ್ಲ...