Skip to main content

Blog number 1113. ಭಾಗ-1. ಆನಂದಪುರಂ ಸಾಹಿತ್ಯ ಹಬ್ಬ ಸ್ಥಳ : ಕೃಷ್ಣ ಸರಸ ಕನ್ವೆನ್ಷನ್ ಹಾಲ್ ದಿನಾಂಕ 11-ಡಿಸೆಂಬರ್ 2022

#ಭಾಗ_1.

#ಆನಂದಪುರಂ_ಸಾಹಿತ್ಯಹಬ್ಬ

#ನನ್ನ_ಕಾದಂಬರಿ_ಮತ್ತು_ಕಥಾಸಂಕಲದ_ಅವಲೋಕನ

#ವಿಶ್ವದಾಖಲೆಯ_ಹಬ್ಬು_ಕುಟುಂಬದೊಡನೆ_ಸಾಹಿತ್ಯ_ಸಂವಾದ.

#ಆನಂದಪುರಂ_ಹೋಬಳಿ_ಮತ್ತು_ಸಾಗರ_ತಾಲ್ಲೂಕ್_ಸಾಹಿತ್ಯ_ಪರಿಷತ್_ಆಯೋಜಿಸಿತ್ತು.

  ಮಳೆಯ ಕಾರಣದಿಂದ ನಮ್ಮ ಕಲ್ಯಾಣ ಮಂಟಪದಲ್ಲಿ ಆನಂದಪುರಂ ಸಾಹಿತ್ಯ ಹಬ್ಬದ ಕಾರ್ಯಕ್ರಮ ಒಂದು ಘಂಟಿ ತಡವಾಯಿತು.
  ಶಿವಮೊಗ್ಗ ಜಿಲ್ಲಾ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ಮಂಜುನಾಥರು ಕನ್ನಡ ಸಾಹಿತ್ಯ ಲೋಕದಲ್ಲಿ ವಿಶ್ವ ದಾಖಲೆ ಅಂದರೆ ಹಬ್ಬು ಕುಟುಂಬದ ತಂದೆ ಮತ್ತು ಅವರ ಆರು ಮಕ್ಕಳು ಸಾಹಿತ್ಯ ರಚಿಸಿದವರು ಅವರ ಪುಸ್ತಕ ಪ್ರದರ್ಶನ ಉದ್ಘಾಟಿಸಿದರು.
  ಸಾಹಿತ್ಯ ಹಬ್ಬದ ಕಾರ್ಯಕ್ರಮ ಖ್ಯಾತ ಲೇಖಕ ಅಂಕಣಕಾರ ಶಿಕ್ಷಣ ತಜ್ಞ ಅರವಿಂದ ಚೊಕ್ಕಾಡಿ ದೀಪ ಬೆಳಗುವ ಮೂಲಕ ಉಧ್ಘಾಟಿಸಿದರು.
   ಅಧ್ಯಕ್ಷತೆ ಸ್ಥಳಿಯ ಆನಂದಪುರಂ ಹೋಬಳಿ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ಬಿ.ಡಿ ರವಿಕುಮಾರ್ ವಹಿಸಿದ್ದರು.
  ವೇದಿಕೆಯಲ್ಲಿ TV 18 ಬ್ರಾಡ್ ಕಾಸ್ಟ್ ಲಿ. ದಕ್ಷಿಣ ಬಾರತದ ಎಡಿಟೋರಿಯಲ್ ಗ್ರೂಪ್ ಅಡ್ವೈಸರ್  CNN NEWS 18, Net work 18. ಡಿ.ಪಿ. ಸತೀಶ್, ಸಾಗರ ತಾಲೂಕಿನ ಸಾಹಿತ್ಯ ಪರಿಷತ್ತು ಅಧ್ಯಕ್ಷ ವಿ.ಟಿ. ಸ್ವಾಮಿ, ಕನ್ನಡ ಸಾಹಿತ್ಯ ಕ್ಷೇತ್ರದ ವಿಶಿಷ್ಟ ಸಾದನೆಗ್ಯೆದ ಹಬ್ಬು ಕುಟುಂಬದ ಅಂಕೋಲದ ಮೊಹನ್ ಹಬ್ಬು, ಹೊನ್ನಾವರದ ರಾಮಚಂದ್ರ ಹಬ್ಬು, ಹುಬ್ಬಳ್ಳಿಯ ಅರುಣ್ ಕುಮಾರ್ ಹಬ್ಬು, ಮ೦ಗಳೂರಿನ ಉದಯ ಕುಮಾರ್ ಹಬ್ಬು, ಬನವಾಸಿಯ ಜಯಪ್ರಕಾಶ್ ಹಬ್ಬು ಉಪಸ್ಥಿತರಿದ್ದರು.
  ಪ್ರಾರ್ಥನೆ ಸ್ಥಳಿಯ ಗ್ರಾಮ ಪಂಚಾಯಿತಿ ಸದಸ್ಯೆ ಜ್ಯೋತಿ, ಸ್ವಾಗತ ಸಾದನ ವಿದ್ಯಾ ಕೇಂದ್ರದ ಮುಖ್ಯೋಪಾಧ್ಯಾಯರಾದ ರಘು ಹೆಬ್ಬೋಡಿ, ನಿರೂಪಣೆ ಆನಂದಪುರಂನ ಮಾರಿಕಾಂಬ ಜಾತ್ರಾ ಸಮಿತಿ ಪ್ರದಾನ ಕಾರ್ಯದರ್ಶಿ ಉಮೇಶ್ ನಿವ೯ಹಿಸಿದ್ದರು.
   ಆಯ್ದ ಸೀಮಿತ ಸಾಹಿತ್ಯ ಆಸಕ್ತ ಸಬಿಕರ ಜೊತೆ ಮಾಜಿ ಜಿಲ್ಲಾ ಕಾಂಗ್ರೇಸ್ ಅಧ್ಯಕ್ಷ ತೀ.ನಾ. ಶ್ರೀನಿವಾಸ್, ಪ್ರಗತಿ ಪರ ಕೃಷಿ ಉದ್ಯಮಿ ನಾಗೇಂದ್ರ ಸಾಗರ್, ಜಲಯೋಗಿ ಈಜು ತರಬೇತುದಾರ ಹರೀಶ್ ನವಾತೆ, ಪ್ರಶಸ್ತಿ ವಿಜೇತ ಅಂತರ್ ರಾಷ್ಟ್ರೀಯ ಡೊಳ್ಳು ಕಲಾವಿದ ಜೆ.ಸಿ.ಮಂಜಪ್ಪ, ಸಾಗರ ತಾಲೂಕಿನ ನಿವೃತ್ತ ಸರಕಾರಿ ನೌಕರರ ಸಂಘದ ಅಧ್ಯಕ್ಷ ಉಮೇಶ್ ಗಣಪತಿಯಪ್ಪ, ಸಾಗರದ ಎಲ್ ಬಿ ಕಾಲೇಜ್ ಉಪನ್ಯಾಸಕರು ವಿಜಯ ಕರ್ನಾಟಕ ವರದಿಗಾರರು ಆದ ಯೋಗಿಶ್ ಜಿ ಎಸ್ ಭಟ್ಟರು, ಹೊಸನಗರ ತಾಲೂಕಿನ ಸಾಹಿತ್ಯ ಪರಿಷತ್ ಅಧ್ಯಕ್ಷ ತ.ಮ.ನರಸಿಂಹ, ಮಾಜಿ ಅಧ್ಯಕ್ಷರಾದ ಕಾಮತ್ ಕನ್ನಡ ಸಂಘದ ಪದಾಧಿಕಾರಿಗಳು, ಪತ್ರಕರ್ತರೂ ಭಾಗವಹಿಸಿದ್ದರು.
  ಕಾಯ೯ಕ್ರಮದ ಚಿತ್ರಗಳು ಇಲ್ಲಿದೆ.
  ನಾಳೆ ಭಾಗ - 2 ಹಬ್ಬು ಪುಸ್ತಕ ಪ್ರದರ್ಶನ ಉದ್ಘಾಟಿಸಿದ ಜಿಲ್ಲಾ ಸಾಹಿತ್ಯ ಪರಿಷತ್ ಅಧ್ಯಕ್ಷ ಮಂಜುನಾಥರ ವಿಡಿಯೊ .

Comments

Popular posts from this blog

# ಜುಟ್ಟು ಕಾಳಿಂಗ ಸಪ೯ದ ಆಸ್ತಿತ್ವದ ಮಲೆನಾಡಿನ ಮಿಥ್ಯೆ#

  # ಕಾಳಿ೦ಗ ಸಪ೯ದಲ್ಲಿ ಜುಟ್ಟು ಕಾಳಿಂಗ ಸಪ೯ ಅಂತ ಇದೇ ಅನ್ನುವ ಯಾರು ನೋಡದ ಸಪ೯ದ ಅಸ್ತಿತ್ವ#    ಮಲೆನಾಡಿನ ಹಳ್ಳಿಗಳಲ್ಲಿ, ಅದು ಕಾಳಿ೦ಗ ಸಪ೯ದ ವಾಸಸ್ಥಳದ ಪರಿಸರದಲ್ಲಿ ಜುಟ್ಟು ಕಾಳಿಂಗ ಸಪ೯ ಇದೆ ಅನ್ನುವ ಮಾತು ಆಗಾಗ್ಗೆ ಕೇಳುತ್ತಿರುತ್ತೇವೆ. ಆದರೆ ಆ ರೀತಿಯ ಹಾವು ಇಲ್ಲ ಎಂದು ಹಾವಿನ ಬಗ್ಗೆ ಸಂಶೋದನೆ ಮಾಡುವವರು, ಅರಣ್ಯ ಇಲಾಖೆಯವರು, ಹಾವು ಹಿಡಿಯುವವರು ಖಡಾಖಂಡಿತವಾಗಿ ಹೇಳುತ್ತಾರಾದರು, ಈ ವದಂತಿ ಹೇಗೆ ಹರಡಿದೆ?.    ಇದು ಒಂದು ಊರು ಹಳ್ಳಿಯಲ್ಲ ನಾನು ನೋಡಿದಂತೆ ಮಹಾರಾಷ್ಟ್ರದ ರತ್ನಗಿರಿಯಿ೦ದ ಕೇರಳದ ಕಾಸರಗೋಡಿನ ತನಕ ಜುಟ್ಟು ಕಾಳಿಂಗದ ಅನೇಕ ರೋಚಕ ಕಥೆ ಕೇಳಿದ್ದೇನೆ.   ಪ್ರತ್ಯಕ್ಷ ನೋಡಿದವರು ತಾವು ಎನ್ನುವ ಅನೇಕರಲ್ಲಿ ಮಾತಾಡಿದ್ದೇನೆ ಆದರೆ ಅದು ನಂಬಲಹ೯ ಮಾಹಿತಿ ಅನಿಸಲಿಲ್ಲ, ಒಂದು ರೀತಿ ಕಾಲ್ಪನಿಕ ತ್ರಿಲ್ಲರ್ ಕಥೆ ಅಷ್ಟೇ ಅನ್ನಬಹುದು.    ಜಡೆ ಕಾಳಿಂಗ ಸಪ೯ಕ್ಕೆ ರೋಷ ಜಾಸ್ತಿ, ಹೆಡೆ ಮೇಲೆ ಕೂದಲಿನ ಜುಟ್ಟು ಇರುತ್ತೆ, ಮನುಷ್ಯರನ್ನ ಕಂಡರೆ ಓಡಿಸಿಕೊಂಡು ಬರುತ್ತೆ, ಅದರಿಂದ ತಪ್ಪಿಸಿಕೊಳ್ಳಲು ಒಂದೇ ದಾರಿ ಅದೇನೆಂದರೆ ತಗ್ಗಿನ ಪ್ರದೇಶದಲ್ಲಿ ಓಡುವುದು.     ಯಾಕೆ೦ದರೆ ಓಡಿಸಿಕೊಂಡು ಬರುವ ಜುಟ್ಟು ಕಾಳಿಂಗದ ಜುಟ್ಟು, ಇಳಿಜಾರಿನಲ್ಲಿ ಅದರ ತಲೆಯಿ೦ದ ಇಳಿಜಾರಿಗೆ ಸರಿಯುವುದರಿಂದ  ಕಣ್ಣಿನ ಮೇಲೆ ಕೂದಲ ಜುಟ್ಟು ಮುಚ್ಚುವುದರಿಂದ ಕಣ್ಣು ಕಾಣುವುದಿಲ್ಲ, ಆಗಲೇ ತಪ್...

HISTORICAL SAGAR MARIKAMBA JATRA.ಐತಿಹಾಸಿಕ ಸಾಗರದ ಮಾರಿಕಾಂಬಾ ಜಾತ್ರೆ

     ಸಾಗರದ ಮಾರಿಕಾಂಬಾ ಜಾತ್ರೆ ಐತಿಹಾಸಿಕ ಚರಿತ್ರೆಯಲ್ಲಿ ದಾಖಲೆ.        ಕನಾ೯ಟಕ ರಾಜ್ಯದಲ್ಲಿ ಎರೆಡು ಮಾರಿಕಾಂಬಾ ಜಾತ್ರೆಗಳು ಪ್ರಸಿದ್ಧಿ ಪಡೆದಿದೆ ಅದು ಉತ್ತರ ಕನ್ನಡ ಜಿಲ್ಲೆಯ ಸಿಸಿ೯ಯದ್ದು ಮತ್ತು ಶಿವಮೊಗ್ಗ ಜಿಲ್ಲೆಯ ಸಾಗರದ್ದು.    ಪ್ರತಿ ಮೂರು ವಷ೯ಕೆ ಈ ಜಾತ್ರೆ ಆಚರಿಸಲಾಗುತ್ತೆ ಶೂದ್ರ ವಗ೯ದವರು ಭಯ ಮತ್ತು ಭಕ್ತಿಯಿಂದ ಕುರಿ ಕೋಳಿ ಬಲಿ ನೀಡುವ ಪರಂಪರೆ ಇದೆ.ಮಂಗಳವಾರ ಮೇಲು ಜಾತಿಯ ಜನರ ಪೂಜೆ ದೇವಿಯ ತವರು ಮನೆಯಲ್ಲಿ ನಡೆಯುತ್ತದೆ ನಂತರ ರಾತ್ರಿ ಗಂಡನ ಸೇರುವ ಮಾರಿಗೆ ಶೂದ್ರರ ಪೂಜೆ, ಬಲಿ ಮೀಸಲು.    ಮೊದಲೆಲ್ಲ ಮಾರಿಯಮ್ಮನಿಗೆ ಕೊಣನ ಬಲಿ ನೀಡುತ್ತಿದ್ದರು ಈಗ ಇದು ಕಾನೂನು ಪ್ರಕಾರ ನಿಷಿದ್ಧ ಆದರೆ ಈ ಆಚಾರಣೆ ಗುಪ್ತವಾಗಿ ಬೇರೆ ಕಡೆ ನಡೆಸಲಾಗುತ್ತೆ ಅನ್ನುತ್ತಾರೆ.    ಸಾಗರದ ಮಾರಿಕಾ0ಬಾ ಜಾತ್ರೆ ಜಾತ್ರೆಯಿ೦ದ ಜಾತ್ರೆಗೆ ಅದೂರಿಯಾಗಿ ನಡೆಯುತ್ತದೆ, ಕೋಟ್ಯಾoತರ ಹಣದ ವಹಿವಾಟು ಕೂಡ, ಮೊದಲೆಲ್ಲ ಹಣದ ಅಪರಾ ತಪರ ಆಗುತ್ತಿದೆ ಎಂಬ ಗುಲ್ಲು ಇತ್ತು ಆದರೆ ಈಗೆಲ್ಲ ಪಾರದಶ೯ಕವಾಗಿದೆ ಆದರೂ ಈ ಬಾರಿಯ 2017ರ ಜಾತ್ರೆಯಲ್ಲಿ ಅವ್ಯವಹಾರದ ಆರೋಪ ಮಾಡಲಾಗಿದೆ ಈ ವಿಚಾರ ಇಲ್ಲಿ ಅಪ್ರಸ್ತುತ ಆದರೂ ಈ ಬಗ್ಗೆ ಬರೆಯಲು ಕಾರಣ ಕೆಳದಿ ಅರಸರ ಕಾಲದಲ್ಲಿ ಅಂದರೆ 350 ವಷ೯ದ ಹಿಂದೆಯೂ ರಾಜರಿಗೆ ಸಾಗರದ ಮಾರಿಕಾಂಬಾ ಜಾತ್ರೆಯಲ್ಲಿ ಸಾವ೯ಜನಿಕರಿಂದ ಸಂಗ್ರಹಿಸಿದ ಜಾತ...

ರಿಪ್ಪನ್ ಪೇಟೆ ( ಶಿವಮೊಗ್ಗ ಜಿಲ್ಲೆ) ಹೆಸರು ಬಂದಿದ್ದಾದರು ಹೇಗೆ?

#  ರಿಪ್ಪನ್ ಪೇಟೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಪ್ರಮುಖ ಹೋಬಳಿ ಕೇಂದ್ರ ಈ ಆಂಗ್ಲ ಅಧಿಕಾರಿಯ ಹೆಸರು ಇಡಲು ಕಾರಣವಾದ ಘಟನೆ ತುಂಬಾ ಕುತೂಹಲಕಾರಿ# ಸ್ವಲ್ಪ ಕಾಲ ನೀವು ಈ ಲೇಖನ ಓದಿದರೆ ಕಾರಣ ಗೊತ್ತಾಗುತ್ತೆ.    ಆಗ ಬ್ರಿಟಿಷ್ ಸಕಾ೯ರರಕ್ಕೆ ಆಡಳಿತ ಸುಗುಮಕ್ಕೆ ರೈಲು ಮಾಗ೯ ಅತ್ಯಗತ್ಯ ಎಂಬ ಸಕಾರಣ ಮನವರಿಕೆ ಆದ ಕಾಲ ಏಕೆಂದರೆ ಬ್ರಿಟಿಷರು ಅಮೆರಿಕಾ ವಲಸೆಯಲ್ಲಿ ಇದನ್ನ ಮನಗOಡಿದ್ದರು, ಬೆಂಗಳೂಳಿ ರಿಂದ ಶಿವಮೊಗ್ಗ ತಲುಪುವ ರೈಲು ಮಾಗ೯ ತಾಳಗುಪ್ಪಾ ತಲುಪಿದರೆ ಜೋಗ ಜಲಪಾತ ವೀಕ್ಷಣೆಗೆ ಅನುಕೂಲ ಎಂಬುದು ಹಾಗೆ ಮತ್ತೊಂದು ಮ್ಯಸೂರು ಸಕಾ೯ರ ಶರಾವತಿ ನದಿಗೆ ಆಣೆಕಟ್ಟು ಕಟ್ಟಿ.ಜಲ ವಿದ್ಯುತ್ ತಯಾರಿಸಲು ಸಾಮಗ್ರಿ ಸಾಗಾಣಿಕೆಗೆ ಅನುಕೂಲ ಎಂಬ ಕಾರಣದಿಂದ ಶಿವಮೊಗ್ಗದಿಂದ ತಾಳಗುಪ್ಪ ರೈಲು ಮಾಗ೯ ಯೋಜನೆ ಮಾಡಲಾಯಿತು.    ಆಗ ಪ್ಲೇಗ್ ಮಾರಿಯ ಕಾಲ, ಎಲ್ಲೆಲ್ಲೂ ಜನ ಸಾಯುತ್ತಿದ್ದರು ಆಗಲೇ ಈ ರೈಲು ಮಾಗ೯ ಶಿವಮೊಗ್ಗ ಆರಸಾಳಿOದ ದೊಡ್ಡಿನ ಕೊಪ್ಪ (ಈಗಿನ ರಿಪ್ಪನ್ ಪೇಟೆ) ಆನಂದಪುರಂ ಮಾಗ೯ ನಿಗದಿ ಆಗಿತ್ತು ಆದರೆ ಈ ಭಾಗದಲ್ಲಿ ಒಂದು  ವದಂತಿ ಈ ಬಾಗದಲ್ಲಿ ಹರಡಿತ್ತು ಅದೇನೆಂದರೆ ರೈಲು ಬಂದರೆ ಪ್ಲೇ ಗು ಬರುತ್ತೆ  ಅಂತ.    ಹಾಗಾಗಿ ಈ ಭಾಗದಲ್ಲಿನ ಜಾಗೃತ ಜನ ನಾಯಕರುಗಳು ಹೇಗಾದರು ಮಾಡಿ ರೈಲು ಬರದಂತೆ ಮಾಡಲು ಎಲ್ಲಾ ರೀತಿಯ ಪ್ರಯತ್ನ ಮಾಡಲು ಪ್ರಾರಂಭಿಸಿದರು.     ಇದೇ ಸಂದಭ೯ದಲ್ಲ...