Skip to main content

Blog number 1116. ಭಾಗ - 3 .ಆನಂದಪುರಂ ಸಾಹಿತ್ಯ ಹಬ್ಬ, ತಾಳಗುಪ್ಪ - ಮೈಸೂರು ಎಕ್ಸ್ ಪ್ರೆಸ್ ರೈಲಿಗೆ ರಾಷ್ಟ್ರಕವಿ ಕುವೆಂಪು ನಾಮಕರಣಕ್ಕೆ ಕಾರಣರಾದ ಖ್ಯಾತ ಪತ್ರಕರ್ತ ಡಿ.ಪಿ. ಸತೀಶ್ ಗೆ ಸಾಗರ ತಾಲ್ಲೂಕ್ ಮತ್ತು ಆನಂದಪುರಂ ಹೋಬಳಿ ಸಾಹಿತ್ಯ ಪರಿಷತ್ ನಿಂದ ಅಭಿನಂದನೆ ಸಲ್ಲಿಕೆ.

ಭಾಗ_3.

#ಆನಂದಪುರಂ_ಸಾಹಿತ್ಯ_ಹಬ್ಬ

#ಸಬೆ_ಸಮಾರಂಭ_ಸನ್ಮಾನಗಳಲ್ಲಿ_ಭಾಗಿ_ಆಗದವರು_ನನ್ನ_ಅತಿಥಿ

#ತಾಳಗುಪ್ಪ_ಮ್ಮೆಸೂರು_ಎಕ್ಸಪ್ರೆಸ್_ರೈಲಿಗೆ_ಕುವೆಂಪು_ನಾಮಕರಣ_ಮಾಡಿಸಿದವರು.

#CNN_NEWS_18_Group_Editorial_Advisor_South_ಡಿ_ಪಿ_ಸತೀಶ್

  ಸಾಗರ ತಾಲ್ಲೂಕಿನ ಕಾರ್ಗಲ್ ಸಮೀಪದ ಕೊಳಚಗಾರಿನ ಡಿ.ಪಿ. ಸತೀಶ್ ತಾಳಗುಪ್ಪದ ನಲ೦ದಾ ಪ್ರೌಡ ಶಾಲಾ ವಿದ್ಯಾರ್ಥಿ ನಂತರ ಸಾಗರದ ಲಾಲ್ ಬಹದ್ದೂರ್ ಕಾಲೇಜ್ ಪದವಿ ವ್ಯಾಸಂಗ ಮಾಡಿ ಚೆನೈನಲ್ಲಿ ಏಷಿಯನ್ ಏಜ್ ಕಾಲೇಜ್ ಆಫ್ ಜನ೯ಲಿಸಂ ನಲ್ಲಿ ರ್ಯಾಂಕ್ ಪಡೆದು ಮೊದಲ ವೃತ್ತಿ ಪಾರ್ಲಿಮೆಂಟ್ ವರದಿಗಾರರಾಗಿ ಸಿಸೋಡಿಯರ ಜೊತೆ (ದೆಹಲಿಯ ಈಗಿನ ಆಮ್ ಆದ್ಮಿ ಪಾರ್ಟಿ ಉಪ ಮುಖ್ಯಮಂತ್ರಿ) ದೆಹಲಿಯಲ್ಲಿ ಪ್ರಾರಂಬಿಸಿದ್ದರು.
   ಈಗ ದೇಶ ಅಂತಾರಾಷ್ಟ್ರೀಯ ಪತ್ರಿಕೋಧ್ಯಮದಲ್ಲಿ ಇವರದ್ದು ದೊಡ್ಡ ಹೆಸರು ಹಾಲಿ TV 18 ಬ್ರಾಡ್ ಕಾಸ್ಟ್ ಲಿಮಿಟೆಡ್ ಗ್ರೂಪ್ ಎಡಿಟೋರಿಯಲ್ ಅಡ್ವೆಸರ್ ಆಗಿ ದಕ್ಷಿಣ ಭಾರತ, ಶ್ರೀಲಂಕ ಮತ್ತು ಮಾರಿಷಸ್ ಗಳ ಉಸ್ತುವಾರಿ ಇವರದ್ದು IBN Live, IBN 7, HISTORY Tv18,Forbes,CNBC TV18,CNN NEWS18 ಹೀಗೆ ಅನೇಕ ಚಾನಲ್ ಗಳ ಸಂಸ್ಥೆಯಲ್ಲಿದ್ದಾರೆ.
   ತಾಳಗುಪ್ಪ ಮೈಸೂರು ಎಕ್ಸ್ ಪ್ರೆಸ್ ರೈಲಿಗೆ ರಾಷ್ಟ್ರಕವಿ ಕುವೆಂಪು ಅವರ ಹೆಸರು ಕೇಂದ್ರ ಸರ್ಕಾರ ನಾಮಕರಣ ಮಾಡಲು ಇವರೇ ಕಾರಣಕರ್ತರು.
   ನನ್ನ ಎರೆಡೂ ಪುಸ್ತಕ ಓದಿದ್ದಾರೆ ಮತ್ತು ಮುಂದಿನ ವರ್ಷ ಪ್ರಕಟವಾಗಲಿರುವ ನನ್ನ ಮೂರನೆ ಪುಸ್ತಕ ಆನಂದಪುರಂ ಇತಿಹಾಸ ಪುಸ್ತಕಕ್ಕೆ ಇವರ ಪ್ರೇರಣೆ ಆದ್ದರಿಂದಲೇ ಆನಂದಪುರಂ ನಲ್ಲಿ ಸಾಹಿತ್ಯ ಪರಿಷತ್ ನನ್ನ ಪುಸ್ತಕಗಳ ಅವಲೋಕನದ ಸಾಹಿತ್ಯ ಹಬ್ಬಕ್ಕೆ ಇವರನ್ನ ಅತಿಥಿ ಆಗಿ ಆಹ್ವಾನಿಸಿದ್ದೆ, ಯಾವುದೇ ಸಬೆ - ಸಮಾರಂಭ - ಸನ್ಮಾನದಿಂದ ದೂರವಿರುವ ಸತೀಶ್ ನನ್ನ ಕರೆಗೆ ಓಗೊಟ್ಟು ಬಂದು ಸಭೆಯಲ್ಲಿ ಬಾಷಣವೂ ಮಾಡಿದರೂ ಅವರಿಗೆ ಇಷ್ಟ ಇಲ್ಲದಿದ್ದರೂ ತಾಳಗುಪ್ಪ - ಮೈಸೂರು ಎಕ್ಸ್ ಪ್ರೆಸ್ ರೈಲಿಗೆ ಕುವೆಂಪು ಹೆಸರಿನ ನಾಮಕರಣಕ್ಕೆ ಕಾರಣಕರ್ತರಾದ ಇವರಿಗೆ ಸಾಗರ ಸಾಹಿತ್ಯ ಪರಿಷತ್‌ ಮತ್ತು ಆನಂದಪುರಂ ಹೋಬಳಿ ಸಾಹಿತ್ಯ ಪರಿಷತ್‌ನಿಂದ ಸನ್ಮಾನಿಸಲಾಯಿತು.
    ನೇರ ನಡೆ ನುಡಿಯ ಡಿ.ಪಿ.ಸತೀಶರ ಭಾಷಣದ ವಿಡಿಯೋ ಇಲ್ಲಿದೆ.

Comments

Popular posts from this blog

# ಜುಟ್ಟು ಕಾಳಿಂಗ ಸಪ೯ದ ಆಸ್ತಿತ್ವದ ಮಲೆನಾಡಿನ ಮಿಥ್ಯೆ#

  # ಕಾಳಿ೦ಗ ಸಪ೯ದಲ್ಲಿ ಜುಟ್ಟು ಕಾಳಿಂಗ ಸಪ೯ ಅಂತ ಇದೇ ಅನ್ನುವ ಯಾರು ನೋಡದ ಸಪ೯ದ ಅಸ್ತಿತ್ವ#    ಮಲೆನಾಡಿನ ಹಳ್ಳಿಗಳಲ್ಲಿ, ಅದು ಕಾಳಿ೦ಗ ಸಪ೯ದ ವಾಸಸ್ಥಳದ ಪರಿಸರದಲ್ಲಿ ಜುಟ್ಟು ಕಾಳಿಂಗ ಸಪ೯ ಇದೆ ಅನ್ನುವ ಮಾತು ಆಗಾಗ್ಗೆ ಕೇಳುತ್ತಿರುತ್ತೇವೆ. ಆದರೆ ಆ ರೀತಿಯ ಹಾವು ಇಲ್ಲ ಎಂದು ಹಾವಿನ ಬಗ್ಗೆ ಸಂಶೋದನೆ ಮಾಡುವವರು, ಅರಣ್ಯ ಇಲಾಖೆಯವರು, ಹಾವು ಹಿಡಿಯುವವರು ಖಡಾಖಂಡಿತವಾಗಿ ಹೇಳುತ್ತಾರಾದರು, ಈ ವದಂತಿ ಹೇಗೆ ಹರಡಿದೆ?.    ಇದು ಒಂದು ಊರು ಹಳ್ಳಿಯಲ್ಲ ನಾನು ನೋಡಿದಂತೆ ಮಹಾರಾಷ್ಟ್ರದ ರತ್ನಗಿರಿಯಿ೦ದ ಕೇರಳದ ಕಾಸರಗೋಡಿನ ತನಕ ಜುಟ್ಟು ಕಾಳಿಂಗದ ಅನೇಕ ರೋಚಕ ಕಥೆ ಕೇಳಿದ್ದೇನೆ.   ಪ್ರತ್ಯಕ್ಷ ನೋಡಿದವರು ತಾವು ಎನ್ನುವ ಅನೇಕರಲ್ಲಿ ಮಾತಾಡಿದ್ದೇನೆ ಆದರೆ ಅದು ನಂಬಲಹ೯ ಮಾಹಿತಿ ಅನಿಸಲಿಲ್ಲ, ಒಂದು ರೀತಿ ಕಾಲ್ಪನಿಕ ತ್ರಿಲ್ಲರ್ ಕಥೆ ಅಷ್ಟೇ ಅನ್ನಬಹುದು.    ಜಡೆ ಕಾಳಿಂಗ ಸಪ೯ಕ್ಕೆ ರೋಷ ಜಾಸ್ತಿ, ಹೆಡೆ ಮೇಲೆ ಕೂದಲಿನ ಜುಟ್ಟು ಇರುತ್ತೆ, ಮನುಷ್ಯರನ್ನ ಕಂಡರೆ ಓಡಿಸಿಕೊಂಡು ಬರುತ್ತೆ, ಅದರಿಂದ ತಪ್ಪಿಸಿಕೊಳ್ಳಲು ಒಂದೇ ದಾರಿ ಅದೇನೆಂದರೆ ತಗ್ಗಿನ ಪ್ರದೇಶದಲ್ಲಿ ಓಡುವುದು.     ಯಾಕೆ೦ದರೆ ಓಡಿಸಿಕೊಂಡು ಬರುವ ಜುಟ್ಟು ಕಾಳಿಂಗದ ಜುಟ್ಟು, ಇಳಿಜಾರಿನಲ್ಲಿ ಅದರ ತಲೆಯಿ೦ದ ಇಳಿಜಾರಿಗೆ ಸರಿಯುವುದರಿಂದ  ಕಣ್ಣಿನ ಮೇಲೆ ಕೂದಲ ಜುಟ್ಟು ಮುಚ್ಚುವುದರಿಂದ ಕಣ್ಣು ಕಾಣುವುದಿಲ್ಲ, ಆಗಲೇ ತಪ್...

ಶರಾವತಿ ನದಿ ಉಗಮ ಸ್ಥಾನ ಅಂಬುತೀಥ೯.

ಇಡೀ ರಾಜ್ಯಕ್ಕೆ ವಿದ್ಯುತ್ ನೀಡುವ ಶರಾವತಿ ನದಿಯ ಉಗಮ ಸ್ಥಾನ ಅಂಬುತೀಥ೯, ಆರಗ ಸಮೀಪದ ತೀಥ೯ಳ್ಳಿ ತಾಲ್ಲೂಕಿನಲ್ಲಿದೆ( ಶಿವಮೊಗ್ಗ ಜಿಲ್ಲೆ)    ಅಂಬು ತೀಥ೯ದಲ್ಲಿ ಶ್ರೀ ರಾಮ ವನವಾಸದಲ್ಲಿದ್ದಾಗ ಸೀತಾ ಮಾತೆಗೆ ಪೂಜೆಗೆ ನೀರು ಸಿಗದಿದ್ದಾಗ ರಾಮ ತನ್ನ ಅಂಬಿನಿಂದ (ಬಿಲ್ಲಿನ ಬಾಣದಿಂದ) ನೆಲ ಸೀಳಿ ನೀರು ತಂದರೆ೦ದು ರಾಮಾಯಣದಲ್ಲಿ ಉಲ್ಲೇಖವಿದೆ, ಹಾಗಾಗಿ ಈ ಸ್ಥಳಕ್ಕೆ ಅಂಬುತೀಥ೯ ಎಂಬ ಹೆಸರು ಬ೦ತು ಎಂಬುದು ಸ್ಥಳ ಪುರಾಣ.    ಇಲ್ಲಿ ಸಣ್ಣ ತೊರೆಯಾಗಿ ಹುಟ್ಟುವ ನದಿ ಬಾಣದಿಂದ ಹುಟ್ಟಿದ್ದರಿಂದ ಶರಾವತಿ ಎ೦ಬ ಹೆಸರು ಪಡೆದು ಪೂವ೯ಕ್ಕೆ ಹರಿದು ನಂತರ ಪಶ್ಚಿಮ ಮುಖವಾಗಿ ತಿರುಗಿ ಹೊಸನಗರ ತಾಲ್ಲೂಕನ್ನ ದಾಟಿ ಸಾಗರ ತಾಲ್ಲೂಕಿನ ಜೋಗದಲ್ಲಿ ಜಲಪಾತವಾಗಿ ದಟ್ಟ ಕಾನನದ ಕಣಿವೆ ಮುಖಾಂತರ ಹರಿದು ಹೊನ್ನಾವರದಲ್ಲಿ ಅರಬ್ಬಿ ಸಮುದ್ರ ಸೇರುತ್ತದೆ.   ಈ ನದಿಗೆ ಮೊದಲಿಗೆ ಹೀರೇ ಬಾಸ್ಕರ ಎಂಬಲ್ಲಿ ನಂತರ ಲಿಂಗನಮಕ್ಕಿಯಲ್ಲಿ ಆಣೆಕಟ್ಟು ಕಟ್ಟಿ ರಾಜ್ಯಕ್ಕೆ ಜಲ ವಿದ್ಯುತ್ ನೀಡುತ್ತಿರುವುದರಿಂದ ಲಕ್ಷಾಂತರ ಎಕರೆ ಕಾಡು, ಜಮೀನು ಅನೇಕ ಊರು ಮುಳುಗಡೆ ಆಯಿತು ಸಾವಿರಾರು ಕುಟುಂಬಗಳು ಸಂತ್ರಸ್ಥರಾದದ್ದು ಇತಿಹಾಸ.    ಈ ನದಿ ಜೋಗದಲ್ಲಿ ದುಮುಕುವ ಜಲಪಾತ ವಿಶ್ವದ ಸುಂದರ ಜಲಪಾತದಲ್ಲಿ ಒಂದಾಗಿದೆ.    ಹಾಗಾಗಿ ಶರಾವತಿ ನದಿಯ ಉಗಮ ಸ್ಥಾನಕ್ಕೆ ಮಹತ್ವವಿದೆ, ಒಮ್ಮೆಯಾದರೂ ಈ ನದಿ ಮೂಲ ಸಂದಶಿ೯ಸಬೇಕು ಆದರೆ ಇಲ್ಲಿ ಶರಾವತಿ ವ...

HISTORICAL SAGAR MARIKAMBA JATRA.ಐತಿಹಾಸಿಕ ಸಾಗರದ ಮಾರಿಕಾಂಬಾ ಜಾತ್ರೆ

     ಸಾಗರದ ಮಾರಿಕಾಂಬಾ ಜಾತ್ರೆ ಐತಿಹಾಸಿಕ ಚರಿತ್ರೆಯಲ್ಲಿ ದಾಖಲೆ.        ಕನಾ೯ಟಕ ರಾಜ್ಯದಲ್ಲಿ ಎರೆಡು ಮಾರಿಕಾಂಬಾ ಜಾತ್ರೆಗಳು ಪ್ರಸಿದ್ಧಿ ಪಡೆದಿದೆ ಅದು ಉತ್ತರ ಕನ್ನಡ ಜಿಲ್ಲೆಯ ಸಿಸಿ೯ಯದ್ದು ಮತ್ತು ಶಿವಮೊಗ್ಗ ಜಿಲ್ಲೆಯ ಸಾಗರದ್ದು.    ಪ್ರತಿ ಮೂರು ವಷ೯ಕೆ ಈ ಜಾತ್ರೆ ಆಚರಿಸಲಾಗುತ್ತೆ ಶೂದ್ರ ವಗ೯ದವರು ಭಯ ಮತ್ತು ಭಕ್ತಿಯಿಂದ ಕುರಿ ಕೋಳಿ ಬಲಿ ನೀಡುವ ಪರಂಪರೆ ಇದೆ.ಮಂಗಳವಾರ ಮೇಲು ಜಾತಿಯ ಜನರ ಪೂಜೆ ದೇವಿಯ ತವರು ಮನೆಯಲ್ಲಿ ನಡೆಯುತ್ತದೆ ನಂತರ ರಾತ್ರಿ ಗಂಡನ ಸೇರುವ ಮಾರಿಗೆ ಶೂದ್ರರ ಪೂಜೆ, ಬಲಿ ಮೀಸಲು.    ಮೊದಲೆಲ್ಲ ಮಾರಿಯಮ್ಮನಿಗೆ ಕೊಣನ ಬಲಿ ನೀಡುತ್ತಿದ್ದರು ಈಗ ಇದು ಕಾನೂನು ಪ್ರಕಾರ ನಿಷಿದ್ಧ ಆದರೆ ಈ ಆಚಾರಣೆ ಗುಪ್ತವಾಗಿ ಬೇರೆ ಕಡೆ ನಡೆಸಲಾಗುತ್ತೆ ಅನ್ನುತ್ತಾರೆ.    ಸಾಗರದ ಮಾರಿಕಾ0ಬಾ ಜಾತ್ರೆ ಜಾತ್ರೆಯಿ೦ದ ಜಾತ್ರೆಗೆ ಅದೂರಿಯಾಗಿ ನಡೆಯುತ್ತದೆ, ಕೋಟ್ಯಾoತರ ಹಣದ ವಹಿವಾಟು ಕೂಡ, ಮೊದಲೆಲ್ಲ ಹಣದ ಅಪರಾ ತಪರ ಆಗುತ್ತಿದೆ ಎಂಬ ಗುಲ್ಲು ಇತ್ತು ಆದರೆ ಈಗೆಲ್ಲ ಪಾರದಶ೯ಕವಾಗಿದೆ ಆದರೂ ಈ ಬಾರಿಯ 2017ರ ಜಾತ್ರೆಯಲ್ಲಿ ಅವ್ಯವಹಾರದ ಆರೋಪ ಮಾಡಲಾಗಿದೆ ಈ ವಿಚಾರ ಇಲ್ಲಿ ಅಪ್ರಸ್ತುತ ಆದರೂ ಈ ಬಗ್ಗೆ ಬರೆಯಲು ಕಾರಣ ಕೆಳದಿ ಅರಸರ ಕಾಲದಲ್ಲಿ ಅಂದರೆ 350 ವಷ೯ದ ಹಿಂದೆಯೂ ರಾಜರಿಗೆ ಸಾಗರದ ಮಾರಿಕಾಂಬಾ ಜಾತ್ರೆಯಲ್ಲಿ ಸಾವ೯ಜನಿಕರಿಂದ ಸಂಗ್ರಹಿಸಿದ ಜಾತ...