Skip to main content

Blog number 1127. ದಿನೇಶ್ ಶಿರವಾಳ ಮತ್ತು ಕೆಳದಿ ಈ.ರಮೇಶ್ ಬಂದಿದ್ದರು, ಅವರ ಹೋರಾಟದ ಕರಪತ್ರ ನೀಡಿದರು. ಕಾಗೋಡು ಹೋರಾಟದ ರೂವಾರಿ ಗಣಪತಿಯಪ್ಪನವರು 1948 ರಲ್ಲಿ ಸ್ಥಾಪಿಸಿದ್ದ ರೈತ ಸಂಘ ಇವರೆಲ್ಲ ಸೇರಿ ಈಗ ಪುನರ್ ಸಂಘಟಿಸಿದ್ದಾರೆ.

#ಸಾಗರದ_ಹೋರಾಟದಲ್ಲಿ_ಹೊಸ_ಚಿಂತನೆಯ_ಹೋರಾಟಗಾರರಾದ

#ದಿನೇಶ್_ಶಿರವಾಳ_ಮತ್ತು_ಕೆಳದಿ_ರಮೇಶ್_ನಿನ್ನೆ_ಬಂದಿದ್ದರು.

#ಕಾಗೋಡು_ಹೋರಾಟದ_ರೂವಾರಿ_ಹೆಚ್_ಗಣಪತಿಯಪ್ಪರು_1_ಜನವರಿ_1948ರಲ್ಲಿ_ಸ್ಥಾಪಿಸಿದ್ದ

#ರೈತಸಂಘ_ಮರು_ಸ್ಥಾಪಿಸಿದ್ದಾರೆ.

#ಶ್ರಮಜೀವಿ_ಕೃಷಿಕ_ವಾಘ್ಮಿ_ಸಂಘಟನ_ಚತುರ_ಯುವ_ಪಡೆ_ಇವರದ್ದು.

https://youtu.be/0qhIfPHSBGs

  ಸುಮಾರು 75 ವರ್ಷಗಳ ಹಿಂದೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನಲ್ಲಿ ಪ್ರಸಿದ್ಧ ನಾಯಕರಾದ ಕಡಿದಾಳು ಮಂಜಪ್ಪ ಗೌಡರ ನೇತೃತ್ವದಲ್ಲಿ ಬಸವಾನಿ ರಾಮ ಶರ್ಮರು, ಹೆದ್ದೂರು ಹೆಚ್. ಹೆಚ್. ಮಂಜಪ್ಪ ಗೌಡರ ರೈತ ಸಂಘ .
  ಉತ್ತರ ಕನ್ನಡ ಜಿಲ್ಲೆಯ ಶಿರಸಿ, ಸಿದ್ದಾಪುರ, ಅಂಕೋಲ, ಕುಮಟಾ, ಹೊನ್ನಾವರ, ಭಟ್ಕಳ ಮುಂತಾದ ಭಾಗಗಳಲ್ಲಿ ಕವಿ, ಸಮಾಜವಾದಿ ದಿನಕರ ದೇಸಾಯಿ ನೇತೃತ್ವದಲ್ಲಿನ ರೈತ ಸಂಘಗಳು ಜನ ಜಾಗೃತಿ ಮೂಡಿಸುವ ಕೆಲಸ ಮಾಡುತ್ತಿತ್ತು.
   ಬಡ ರೈತರು, ಗೇಣಿದಾರರು ತಮ್ಮ ಅಸ್ತಿತ್ವಕ್ಕಾಗಿ ಸಂಘಟನೆಗೊಂಡು ಸಂಘರ್ಷ ನಡೆಸಲೇ ಬೇಕಾದ ಪರ್ವ ಕಾಲವದು ಆ ಸಂದರ್ಭದಲ್ಲೇ ತೀರ್ಥಹಳ್ಳಿಯಲ್ಲಿ ಶಾಂತವೇರಿ ಗೋಪಾಲಗೌಡರು ರೈತ ಸಮಾವೇಷ ನಡೆಸುತ್ತಾರೆ ಅದರಲ್ಲಿ ರಮಾನಂದ ಮಿಶ್ರ ಮತ್ತು ಕಮಲಾದೇವಿ ಚಟ್ಟೋಪಾಧ್ಯಾಯ ಭಾಗವಹಿಸುತ್ತಾರೆ ಇದೆಲ್ಲದರ ಪ್ರೇರಣೆಯಿಂದ ಸಾಗರ ತಾಲ್ಲೂಕಿನಲ್ಲಿ 1- ಜನವರಿ -1948 ರಲ್ಲಿ ಗಣಪತಿಯಷ್ಟ ರೈತ ಸಂಘದ ಸ್ಥಾಪನೆಯ ಸಭೆ ನಡೆಸುತ್ತಾರೆ.
  ಈ ಸಭೆಗೆ ಕೆ.ಜಿ. ಒಡೆಯರ್, ಆನಂದಪುರಂನ ಬದರಿನಾರಾಯಣ ಅಯ್ಯಂಗಾರ್,ಬರದಳ್ಳಿ ಚೆನ್ನಬಸಪ್ಪ ಗೌಡರು, ಮರೂರು ರುದ್ರಪ್ಪ ಗೌಡರು, ಶಿರವಂತೆ ವೀರಭದ್ರಪ್ಪ ಗೌಡರು, ತುಂಬೆ ಸುಬ್ರಾಯರು, ಸಾಗರದ ಅಬ್ದುಲ್ ಕರಿಂ ಸಾಹೇಬರು, ಹಳದಿ ರಂಗಪ್ಪನವರು, ರಿಪ್ಪನ್ ಪೇಟೆ ಆನಂದರಾಯರು, ಕಾಂಗ್ರೆಸ್ ನಾಯಕ ದೇವಪ್ಪನವರು, ಸೀತಾರಾಮ ರಾವ್, ಸಾಗರದ ಖ್ಯಾತ ವಕೀಲ ಸ್ವಾತಂತ್ರ್ಯ ಹೋರಾಟಗಾರ ಮೃತ್ಯುಂಜಯ ಬಾಪಟ್ ರವರು, ವಕೀಲ್ ಬಸವಣ್ಣನವರು ಮುಂತಾದ ಪ್ರಮುಖ ನಾಯಕರು ಗಣಪತಿಯಪ್ಪರ ಆಹ್ವಾನದ ಮೇರೆಗೆ ಭಾಗವಹಿಸುತ್ತಾರೆ.
  ದಿನಾಂಕ 4- ಜನವರಿ -1948 ರಂದು ಮರತ್ತೂರಿನಲ್ಲಿ ಇನ್ನೊಂದು ರೈತ ಸಂಘದ ಸಭೆ ಮೃತ್ಯುಂಜಯ ಬಾಪಟ್ ರ ಅಧ್ಯಕ್ಷತೆಯಲ್ಲಿ ನಡೆದು ಅವರ ಆದೇಶದಂತೆ ಡಿ.ಮೂಕಪ್ಪನವರು ಅಧ್ಯಕ್ಷರಾಗಿ, ಸಂಸ್ಥಾಪಕ ಗಣಪತಿಯಪ್ಪ ಕಾರ್ಯದರ್ಶಿ ಆಗುತ್ತಾರೆ ನಂತರ ನಡೆಯುವುದೇ ಐತಿಹಾಸಿಕ ಕಾಗೋಡು ರೈತ ಚಳವಳಿ.
    ಇದೇ ರೈತ ಸಂಘ 70 ವರ್ಷದ ನಂತರ ಡಾ. ಹೆಚ್.ಗಣಪತಿಯಪ್ಪ ಸ್ಥಾಪಿತ 1948 #ತಾಲ್ಲೂಕ್_ರೈತ_ಸಂಘ_ಸಾಗರ ಅಂತ ಪುನರ್ ಸ್ಥಾಪನೆ ಆಗಿ ತಾಲ್ಲೂಕಿನಾದ್ಯಂತ ಹೊಸ ಯುವಕರ ಪಡೆ ಸಕ್ರಿಯವಾಗಿರುವುದು ನೋಡುತ್ತಿದ್ದೆ.
   ನ್ಯಾಯಕ್ಕಾಗಿ ಗಾಂಧೀ ಮಾರ್ಗದಲ್ಲಿ ವಿನೂತನ ಹೋರಾಟಗಳು ಜನರ ಗಮನ ಸೆಳೆಯುತ್ತಿದೆ ಈ ಸಂಘಟನೆಯ ಅಧ್ಯಕ್ಷ ದಿನೇಶ್ ಶಿರವಾಳರ ಕಂಚಿನ ಕಂಠದ ಕರಾರುವಕ್ಕಾದ ಮಾತುಗಳು ಅವರ ಬಾಡಿ ಲಾಂಗ್ವೇಜ್ ನನಗೆ ಇಷ್ಟ ಆಗಿತ್ತು.
   ಪರಸ್ಪರ ಬೇಟಿ ಆಗಿರಲಿಲ್ಲ ನಿನ್ನೆ ಮಧ್ಯಾಹ್ನ ದಿನೇಶ್ ಶಿರವಾಳ ಮತ್ತು ಇವರ ಜೊತೆ ಹೆಗಲು ಜೋಡಿಸಿರುವ ಇನ್ನೊಬ್ಬ ಹೋರಾಟಗಾರ ಕೆಳದಿಯ ಈ ರಮೇಶ್ ಬಂದಿದ್ದರು.
   ಇವರ ಆಶಯಗಳು ಗುರಿಗಳು ನಿಜಕ್ಕೂ ಗಣಪತಿಯಪ್ಪರ ಆದರ್ಶಗಳ ಕಾಪಾಡುವ ನಿಟ್ಟಿನಲ್ಲಿ ಇದೆ.
  38 ವಷ೯ದ ದಿನೇಶ್ ಶಿರವಾಳ ಚಿಕ್ಕ೦ದಿನಿ೦ದ ತಾಯಿ ಜೊತೆ ತಾವು ಬೆಳೆದ ತರಕಾರಿ ತಲೆ ಮೇಲೆ ಹೊತ್ತು ನಿತ್ಯ ಸಾಗರದ ಪೇಟೆಯಲ್ಲಿ ಮಾರಾಟ ಮಾಡುತ್ತಿದ್ದ, ಸುಖ ಸಾಗರ ಹೋಟೆಲ್ ನಲ್ಲಿ ಕೆಲಸ ಮಾಡಿದ್ದು, ಬೆಂಗಳೂರಲ್ಲಿ ಕರ್ನಾಟಕ ಬ್ರಿವರಿಸ್ ನಲ್ಲಿ ದಿನಗೂಲಿ ವೃತ್ತಿ, ನಂತರ ಟ್ರಾಕ್ಟರ್ ಖರೀದಿಸಿ ಬಾಡಿಗೆ, ಈಗ ಇವರ ತಂದೆ ನಾರಾಯಣಪ್ಪ ತಾಯಿ ಚೌಡಮ್ಮರ ಪಿತ್ರಾರ್ಜಿತ ಆಸ್ತಿ ನಾಲ್ಕು ಎಕರೆಯಲ್ಲಿ ಸ್ಟತಃ ಕೃಷಿ ಮಾಡುತ್ತಾ, ಏಳು ವರ್ಷದಿಂದ ತಮ್ಮ ಕನಸಿನ ಮನೆಯ ಗೋಡೆಗಳನ್ನು ಇವರು ಮತ್ತು ಇವರ ಪತ್ನಿ ಇಬ್ಬರೇ ಕಟ್ಟಿದ ತನಕ ಮಾತಾಡಿದೆವು.
  ಶ್ರಮ ಜೀವಿ, ಕೃಷಿಕ ಮತ್ತು ಜನರ ಜೊತೆ ಬೆರೆಯುವ, ಓದುವ ಬರೆಯುವ ಜೊತೆಗೆ ಸಂಘಟನೆಯ ಚತುರತೆಗಳ ಹೊಂದಿರುವ ದಿನೇಶ್ ಶಿರವಾಳ ಅತ್ಯುತ್ತಮ ವಾಗ್ಮಿ ಕೂಡ ಆಗಿದ್ದಾರೆ.
   ಇವರ ವಿಚಾರ ಸರಣಿಯ ವಿಚಾರವಂತ ಯುವ ಪಡೆಯನ್ನು ತಾಲ್ಲೂಕಿನ ಆದ್ಯಂತ ಸಂಘಟಿಸಿದ್ದಾರೆ. ನಾಳೆ ಸೋಮವಾರ ತಾಳಗುಪ್ಪದಿಂದ ಸಾಗರದ ತಾಲ್ಲೂಕ್ ಕಛೇರಿವರೆಗೆ ನ್ಯಾಯದ ನಡಿಗೆ ಎಂಬ ಪಾದಯಾತ್ರೆ ಹಮ್ಮಿಕೊಂಡಿದ್ದಾರೆ ಇದರ ಕರಪತ್ರ ನೀಡಿದರು ಈ ಹೋರಾಟ ಅಲ್ಲಿನ ರೈತರ ದಾರಿ ಸಮಸ್ಯೆ ಮತ್ತು ಮಠಕ್ಕೆ ದಾನವಾಗಿ ನೀಡಿದ ಜಮೀನು ಸೈಟ್ ಆಗಿ ಮಾರಾಟದ ವಿರುದ್ಧವಂತೆ.
   ರಾಮಕೃಷ್ಣ ಹೆಗಡೆಯವರು ಮತ್ತು ಗುಂಡೂರಾಯರು ಮುಖ್ಯಮಂತ್ರಿ ಆಗಿದ್ದಾಗ ಅವರ ವಿಶೇಷ ಕಾಯ೯ದರ್ಶಿಗಳಾಗಿದ್ದ ತಾಳಗುಪ್ಪದ ರಾಮಪ್ಪನವರ ಕುಟುಂಬ ಮಠಕ್ಕೆ ಐದು ಎಕರೆ ದಾನ ನೀಡಿತ್ತಂತೆ.
    ಇತ್ತೀಚಿಗೆ ಬಡವರ ಪರ ಹೋರಾಟ ಮಾಡುವ ಯುವಕರೇ ಇಲ್ಲವಾಗಿದ್ದಾರೆ,ರಾಜಕೀಯ ಪಕ್ಷದ ಕಾರ್ಯಕರ್ತರಾಗಿದ್ದಾರೆ, ಅನ್ಯಾಯದ ವಿರುದ್ದ ಪ್ರತಿಭಟನೆ ಮಾಡಿದರೆ ಪಕ್ಷ - ನಾಯಕರ ವಿರೋದ ಕಟ್ಟಿಕೊಂಡು ನಷ್ಟ ಅನುಭವಿಸಬೇಕೆಂಬ ಭಯದಿಂದ ಅವರೆಲ್ಲ ಸೇಪರ್ ಜೋನ್ ಆದ ರಾಜಕೀಯ ವೇದಿಕೆಗಳಲ್ಲಿ ಕರಗಿ ಹೋಗಿದ್ದರಿಂದ ತಾಲ್ಲೂಕಿನಲ್ಲಿ ನ್ಯಾಯದ ಪರವಾದ ಕೂಗು ಕ್ಷೀಣವಾಗಿತ್ತು ಈ ಸಂದಭ೯ದಲ್ಲಿ ನನ್ನ ಗುರು ಗಣಪತಿಯಪ್ಪರ ತತ್ವ ಸಿದ್ಧಾಂತದ ರೈತ ಸಂಘ ಪುನಃ ಸಂಘಟಿಸಿ ನ್ಯಾಯದ ಪರ ಹೋರಾಟಕ್ಕೆ ತೊಡಗಿರುವ ದಿನೇಶ್ ಶಿರವಾಳ, ಕೆಳದಿ ರಮೇಶ್, ಗಣಪತಿಯಪ್ಪರ ಪುತ್ರ ಹೊಯ್ಸಳ ಮತ್ತು ಇವರ ಜೊತೆ ಕೈ ಜೋಡಿಸಿದ ಎಲ್ಲಾ ಜನಪರ ಕಾಳಜಿಯ ಹೋರಾಟಗಾರ ಯುವಕರಿಗೆ ಅಭಿನಂದಿಸುತ್ತೇನೆ.

Comments

Popular posts from this blog

Blog number 1782. ಅರಳಸುರಳಿಯ ರಾಘವೇಂದ್ರ ಕೇಕೋಡರ ಕುಟುಂಬದ ತಪ್ಪು ನಿರ್ದಾರದ ದುರಂತ.

#ತೀರ್ಥಹಳ್ಳಿಯ_ಅರಳಸುರಳಿಯ_ಒಂದೇ_ಕುಟುಂಬದ_ನಾಲ್ವರು_ಮೃತರಾದ_ರಹಸ್ಯವೇನು? #ಈ_ಬಗ್ಗೆ_ಆ_ಊರಿನ_ಸಮೀಪದ_ಈ_ಕುಟುಂಬದ_ಪರಿಚಯ_ಇರುವವರಿಗೆ_ವಿಚಾರಿಸಿದ್ದೆ. #ಅವರು_ಈ_ಘಟನೆ_ಬಗ್ಗೆ_ಸವಿಸ್ತಾರವಾಗಿ_ಲಿಖಿತ_ಲೇಖನ_ಬರೆದಿದ್ದಾರೆ. #ಅವರ_ವಿನಂತಿ_ಅವರ_ಹೆಸರು_ಬಹಿರಂಗಗೊಳಿಸ_ಬಾರದು. #ಆದ್ದರಿಂದ_ಈ_ಲೇಖನ_ಪೋಸ್ಟ್_ಮಾಡಬಾರದೆಂದಿದ್ದೆ_ಆದರೆ_ಇದು_ಮಲೆನಾಡಿಗರ_ಮನೆ_ಮನೆಯ_ಕಥೆ #ಆದ್ದರಿಂದ_ಇಲ್ಲಿ_ಪೋಸ್ಟ್_ಮಾಡಿದೆ.    ಇಲ್ಲಿ ತಪ್ಪು ಯಾರದ್ದೂ ಇಲ್ಲ... ಪಶ್ಚಾತ್ತಾಪದ ಪ್ರಾಯಶ್ಚಿತ ಕೇಳಲು ಅವರಾರು ಇಲ್ಲ .....ಆದರೆ ಈ ರೀತಿ ಜೀವ ತ್ಯಾಗ ಮಾಡುವ ಆತುರದ ಕೆಟ್ಟ ನಿರ್ದಾರ ಮಾತ್ರ ಸರಿ ಅಲ್ಲ.     ಇವರ ಅಣ್ಣ ಆರ್.ಎಸ್.ಎಸ್. ಪ್ರಚಾರಕರಾಗಿ ದೆಹಲಿಯಲ್ಲಿ ಏಳು ವಷ೯ ಮೋದಿ ಜೊತೆ ಒಂದೇ ಕೋಣೆ ಹಂಚಿಕೊಂಡವರು, ಇನ್ನೊಬ್ಬ ಸಹೋದರ ಮೂಳೆ ತಜ್ಞರಾಗಿ ಶಿವಮೊಗ್ಗದಲ್ಲಿ ಆಸ್ಪತ್ರೆ ಮಾಡಿಕೊಂಡಿದ್ದಾರೆ.   #ದೀರ್ಘವಾದರೂ_ಪೂರ್ಣ_ಲೇಖನ_ಓದಿ   #ಹೀಗೊಂದು_ಸುಕುಟುಂಬ_ಆತ್ಮಾಘಾತ_ಮತ್ತು_ತದನಂತರದ_ಸಹಾಗಮನ.... ಮೂಡಣದಲ್ಲಿ ರವಿ ಮೂಡಲು ಅಣಿ ಯಾಗುತ್ತಿಧ್ದ .. ಹಾದಿಗಣಪತಿ ದೇವರು ಗರ್ಭಗುಡಿಯ ನಂದಾದೀಪದ ಮಂದ ಬೆಳಕಿನಲ್ಲಿ ತನ್ನ ಗುಡಿಯ ಎದುರಿನ ತಗ್ಗಿನಲ್ಲಿದ್ದ  ರಾಘವೇಂದ್ರ ಕೇಕೋಡರ ಮನೆಯನ್ನು ಎವೆಯಕ್ಕದೇ ನೋಡುತ್ತಲಿದ್ದ... ಊರ ಎಲ್ಲಾ ಮನೆಯಂತೆ ಆ ಮನೆಯಲ್ಲೂ ಆ ಬೆಳಗಿನಲ್ಲಿ ಮನೆಯೊಡತಿ ನಾಗರತ್ನಕ್ಕ ಆ ಸಮಯದಲ್ಲಿ ದೇವರಿಗೆ ದೀಪ ಹಚ್ಚಿ ಹೊಸ್ತಿಲು ಪೂಜೆ ಮಾಡ

Blog number 1037. ರಾಜಕುಮಾರಿ ಶಾಂತವ್ವ ಮತ್ತು ದಲಿತ ಯುವಕ ಸಿದ್ದೇಶ್ವರರ ಅಮರ ಪ್ರೇಮದ ಸ್ಮಾರಕ, ಅನ್ಯ ಜಾತಿ ವಿವಾಹವಾದ್ದರಿಂದ ರಾಜಕುಮಾರಿಗೆ ಸೂಳೆ ಪಟ್ಟ ನೀಡಿದ ಸಮಾಜ. ಸಮಾಜದ ಒಳಿತಿಗಾಗಿ ಶಾಂತವ್ವ ಕಟ್ಟಿಸಿದ ಬೃಹತ್ ಕೆರೆಗೆ ಜನ ಕರೆದದ್ದು ಸೂಳೆ ಕಟ್ಟಿಸಿದ ಕೆರೆ ಅದೇ ಸೂಳೆಕೆರೆ / ಶಾಂತಿ ಸಾಗರ

# ಸೂಳೆಕೆರೆ (ಶಾಂತಿ ಸಾಗರ) ಅಂತರ್ ಜಾತಿ ಪ್ರೇಮ ವಿವಾಹದ ದುರOತ ಕಥೆ. #ಅಕ್ಟೋಬರ್ 2019 ರಲ್ಲಿ ತುಂಬಿ ತುಳುಕಿತ್ತು.  ಚಿತ್ರದುಗ೯, ದಾವಣಗೆರೆ ಬಳ್ಳಾರಿ ಮುಂತಾದ ಮಳೆ ಕಡಿಮೆ ಆಗುತ್ತಿದ್ದ ಜಿಲ್ಲೆಗಳಲ್ಲಿ ಅದೂ ಅಕ್ಟೋಬರ್ ತಿಂಗಳ 2019 ರಲ್ಲಿ  ಬಂದಿದ್ದ ಬಾರಿ ಮಳೆ ಎಲ್ಲಾ ಕೆರೆ, ಹೊಂಡಗಳು ತುಂಬಿ ತುಳುಕಿದೆ, ಸಾಮಾಜಿಕ ಜಾಲ ತಾಣದಲ್ಲಿ 40 ವಷ೯ದಲ್ಲಿ ಇಂತ ಮಳೆ ಬಂದಿಲ್ಲ ಅಂತ ಸುದ್ದಿ ಹರಿದಾಡುತ್ತಿತ್ತು ಮತ್ತು  ಸೂಳೆಕೆರೆ ತುಂಬಿ ಕೋಡಿ ಬಿದ್ದಿದೆ ಅಂತೆಲ್ಲ Post ನೋಡಿ ಬೆಂಗಳೂರಿಂದ ಬರುವಾಗ ಚಿತ್ರದುಗ೯ ಮಾಗ೯ವಾಗಿ ಚನ್ನಗಿರಿ ತಲುಪಿ ಸೂಳೆಕೆರೆ ನೋಡಲು ಹೋಗಿದ್ದೆ.  11ನೇ ಶತಮಾನದಲ್ಲಿ (1128ರಲ್ಲಿ)ಕೇವಲ 3 ವಷ೯ದಲ್ಲಿ ಈ ಕೆರೆ ನಿಮಾ೯ಣ ಮಾಡಿಸಿದ್ದು ಶಾಂತವ್ವ ಎಂಬ ರಾಜ ಕುಮಾರಿ ಅವಳು ಸ್ವಣ೯ವತಿ ಪಟ್ಟಣದ ದೊರೆ ವಿಕ್ರಮ ರಾಜನ ಮಗಳು, ಸಿದ್ದೇಶ್ವರ ಎಂಬ ಅನ್ಯ ಜಾತಿಯ ಯುವಕನೊ೦ದಿಗೆ ಗಾಂದವ೯ ವಿವಾಹ ಆಗುತ್ತಾಳೆ ಇದನ್ನ ಸಹಿಸದ ಮತ್ತು ಒಪ್ಪದ ಜನತೆ ಸೂಳೆ ಎಂದು ಮೂದಲಿಸುತ್ತಾರOತೆ ಈ ರೀತಿ ತನಗೆ ಬಂದ ಕಳಂಕ ಕಳೆಯಲು ಈ ಬೃಹತ್ ಕೆರೆ ತನ್ನ ಪತಿ ಸಿದ್ದೇಶ್ವರನ ಜೊತೆ ಸೇರಿ ನಿಮಿ೯ಸಿ ಕೆರೆಗೆ ಹಾರವಾದಳೆoಬ ಇತಿಹಾಸ ಇದೆ ಇದರಿಂದ ನೊಂದ ಪತಿ ಸಿದ್ಧೇಶ್ವರ ಕೂಡ ಎದುರಿನ ಗುಡ್ಡದಲ್ಲಿ ಜೀವ ತ್ಯಾಗ ಮಾಡುತ್ತಾನೆ ಈಗ ಅಲ್ಲಿ ಸಿದ್ದೇಶ್ವರ ದೇವಸ್ಥಾನವಿದೆ.   ಈ ಕೆರೆ ಈಗಲೂ ಸೂಳೆಕೆರೆ ಎಂದೆ ಹೆಸರಾಗಿದೆ ಈ

# ಜುಟ್ಟು ಕಾಳಿಂಗ ಸಪ೯ದ ಆಸ್ತಿತ್ವದ ಮಲೆನಾಡಿನ ಮಿಥ್ಯೆ#

  # ಕಾಳಿ೦ಗ ಸಪ೯ದಲ್ಲಿ ಜುಟ್ಟು ಕಾಳಿಂಗ ಸಪ೯ ಅಂತ ಇದೇ ಅನ್ನುವ ಯಾರು ನೋಡದ ಸಪ೯ದ ಅಸ್ತಿತ್ವ#    ಮಲೆನಾಡಿನ ಹಳ್ಳಿಗಳಲ್ಲಿ, ಅದು ಕಾಳಿ೦ಗ ಸಪ೯ದ ವಾಸಸ್ಥಳದ ಪರಿಸರದಲ್ಲಿ ಜುಟ್ಟು ಕಾಳಿಂಗ ಸಪ೯ ಇದೆ ಅನ್ನುವ ಮಾತು ಆಗಾಗ್ಗೆ ಕೇಳುತ್ತಿರುತ್ತೇವೆ. ಆದರೆ ಆ ರೀತಿಯ ಹಾವು ಇಲ್ಲ ಎಂದು ಹಾವಿನ ಬಗ್ಗೆ ಸಂಶೋದನೆ ಮಾಡುವವರು, ಅರಣ್ಯ ಇಲಾಖೆಯವರು, ಹಾವು ಹಿಡಿಯುವವರು ಖಡಾಖಂಡಿತವಾಗಿ ಹೇಳುತ್ತಾರಾದರು, ಈ ವದಂತಿ ಹೇಗೆ ಹರಡಿದೆ?.    ಇದು ಒಂದು ಊರು ಹಳ್ಳಿಯಲ್ಲ ನಾನು ನೋಡಿದಂತೆ ಮಹಾರಾಷ್ಟ್ರದ ರತ್ನಗಿರಿಯಿ೦ದ ಕೇರಳದ ಕಾಸರಗೋಡಿನ ತನಕ ಜುಟ್ಟು ಕಾಳಿಂಗದ ಅನೇಕ ರೋಚಕ ಕಥೆ ಕೇಳಿದ್ದೇನೆ.   ಪ್ರತ್ಯಕ್ಷ ನೋಡಿದವರು ತಾವು ಎನ್ನುವ ಅನೇಕರಲ್ಲಿ ಮಾತಾಡಿದ್ದೇನೆ ಆದರೆ ಅದು ನಂಬಲಹ೯ ಮಾಹಿತಿ ಅನಿಸಲಿಲ್ಲ, ಒಂದು ರೀತಿ ಕಾಲ್ಪನಿಕ ತ್ರಿಲ್ಲರ್ ಕಥೆ ಅಷ್ಟೇ ಅನ್ನಬಹುದು.    ಜಡೆ ಕಾಳಿಂಗ ಸಪ೯ಕ್ಕೆ ರೋಷ ಜಾಸ್ತಿ, ಹೆಡೆ ಮೇಲೆ ಕೂದಲಿನ ಜುಟ್ಟು ಇರುತ್ತೆ, ಮನುಷ್ಯರನ್ನ ಕಂಡರೆ ಓಡಿಸಿಕೊಂಡು ಬರುತ್ತೆ, ಅದರಿಂದ ತಪ್ಪಿಸಿಕೊಳ್ಳಲು ಒಂದೇ ದಾರಿ ಅದೇನೆಂದರೆ ತಗ್ಗಿನ ಪ್ರದೇಶದಲ್ಲಿ ಓಡುವುದು.     ಯಾಕೆ೦ದರೆ ಓಡಿಸಿಕೊಂಡು ಬರುವ ಜುಟ್ಟು ಕಾಳಿಂಗದ ಜುಟ್ಟು, ಇಳಿಜಾರಿನಲ್ಲಿ ಅದರ ತಲೆಯಿ೦ದ ಇಳಿಜಾರಿಗೆ ಸರಿಯುವುದರಿಂದ  ಕಣ್ಣಿನ ಮೇಲೆ ಕೂದಲ ಜುಟ್ಟು ಮುಚ್ಚುವುದರಿಂದ ಕಣ್ಣು ಕಾಣುವುದಿಲ್ಲ, ಆಗಲೇ ತಪ್ಪಿಸಿಕೊಳ್ಳಬೇಕು ಅಂತ ಬಿದನೂರು ನಗರ ಸಮೀಪದ ದೇವಗಂಗೆ ಎಂಬ ಕೆಳದಿ