Skip to main content

Blog number 1130. ಭಾಗ - 11. ಆನಂದಪುರಂ ಸಾಹಿತ್ಯ ಹಬ್ಬ. ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ಈ ಕುಟಂಬ ವಿಶ್ವ ದಾಖಲೆಯಲ್ಲಿ ದಾಖಲಾಗಿದೆ, ಜಯಪ್ರಕಾಶ್ ಹಬ್ಬು ಸನ್ಮಾನ ಸ್ವೀಕರಿಸಿ ಮಾತನಾಡಿದ್ದಾರೆ.

#ಆನಂದಪುರಂ_ಸಾಹಿತ್ಯಹಬ್ಬ_ಭಾಗ_11.

#ಹಬ್ಬು_ಸಹೋದರರಲ್ಲಿ_ಜಯಪ್ರಕಾಶ್_ಹಬ್ಬು_ಮಾತುಗಳು .

#ಇವರ_ಆತ್ಮ_ಚರಿತ್ರೆ_ನೆನಪಿನ_ಜರಡಿಯಲ್ಲಿ

#ಮುದ್ರಕ_ಗುತ್ತಿಗೆದಾರ_ಬಿಲ್ಡರ್_ಕೃಷಿಕರಾಗಿ

#ಕಾರವಾರದಲ್ಲಿ_ಮನೋಹರ_ಪ್ರಿಂಟರ್ಸ_ಮಾಲಿಕರಾಗಿ

#ಆನಂದಪುರಂ_ಸಾಹಿತ್ಯ_ಹಬ್ಬದಲ್ಲಿ_ಸಾಗರ_ತಾಲ್ಲುಕು_ಸಾಹಿತ್ಯ_ಪರಿಷತ್ತಿನಿಂದ_ಸನ್ಮಾನ.

   ಒಂದು ಕುಟುಂಬದ ತಂದೆ ಮತ್ತು ಅವರ ಆರು ಮಕ್ಕಳೂ ಸಾಹಿತ್ಯ ಕೃತಿಗಳ ರಚಿಸಿ ಪ್ರಕಟಿಸಿದ ವಿಶ್ವ ದಾಖಲೆಯ ಈ ಕುಟುಂಬವನ್ನು ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆನಂದಪುರಂನ ಶ್ರೀ ಕೃಷ್ಣ ಸರಸ ಕನ್ವೆನ್ಷನ್ ಹಾಲ್ ನಲ್ಲಿ ಸಾಗರ ತಾಲ್ಲೂಕ್ ಕನ್ನಡ ಸಾಹಿತ್ಯ ಪರಿಷತ್ ಮತ್ತು ಆನಂದಪುರಂ ಹೋಬಳಿ ಸಾಹಿತ್ಯ ಪರಿಷತ್ ಆಶ್ರಯದಲ್ಲಿ ಆನಂದಪುರಂ ಸಾಹಿತ್ಯ ಹಬ್ಬ ಕಾಯ೯ಕ್ರಮದಲ್ಲಿ ದಿನಾಂಕ 11-ಡಿಸೆಂಬರ್ -2022ರಂದು ಸನ್ಮಾನಿಸಲಾಯಿತು.
  ಈ ವಿಶಿಷ್ಟ ಕುಟುಂಬದ ಎಲ್ಲಾ ಸದಸ್ಯರ ಪ್ರಕಟಿತ ಪುಸ್ತಕ ಪ್ರದರ್ಶನವನ್ನು ಶಿವಮೊಗ್ಗ ಜಿಲ್ಲಾ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ಮಂಜುನಾಥ್ ಉದ್ಘಾಟಿಸಿದರು.
  ಕಾಯ೯ಕ್ರಮದ ಉದ್ಘಾಟನೆ ಖ್ಯಾತ ಶಿಕ್ಷಣ ತಜ್ಞ - ಸಾಹಿತಿ-ಅಂಕಣಕಾರ ಅರವಿಂದ್ ಚೊಕ್ಕಾಡಿ ನೆರವೇರಿಸಿದರು.
  ವೇದಿಕೆಯಲ್ಲಿ ಸಾಗರ ತಾಲ್ಲೂಕ್ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ವಿ.ಟಿ. ಸ್ವಾಮಿ, ಖ್ಯಾತ ಅಂತಾರಾಷ್ಟ್ರೀಯ ಪತ್ರಕರ್ತ ಡಿ.ಪಿ. ಸತೀಶ್, ಎಲ್ಲಾ ಹಬ್ಬು ಸಹೋದರರು ಮತ್ತು ಅಧ್ಯಕ್ಷತೆಯನ್ನು ಆನಂದಪುರಂ ಹೋಬಳಿ ಸಾಹಿತ್ಯ ಪರಿಷತ್ತು ಅಧ್ಯಕ್ಷ ಬಿ.ಡಿ.ರವಿ ವಹಿಸಿದ್ದರು.
  ಸನ್ಮಾನ ಸ್ವೀಕರಿಸಿ ಜಯಪ್ರಕಾಶ್ ಹಬ್ಬು ಮಾಡಿದ ಬಾಷಣ ಈ ಲಿಂಕ್ ಕ್ಲಿಕ್ ಮಾಡಿ ನೋಡಬಹುದು.
https://youtu.be/j353IiFPz9g
   2021 ರಲ್ಲಿ ಇವರು ಬರೆದು ಪ್ರಕಟಿಸಿದ #ನೆನಪಿನ_ಜರಡಿಯಲ್ಲಿ ಇವರ ಆತ್ಮಕಥೆ  ಜೀವನದಲ್ಲಿನ ನೋವು ಸೋಲುಗಳಿಂದ ಹತಾಷರಾಗದೇ ಸತತ ಪ್ರಯತ್ನದಿಂದ ದೀರ್ಘ ಕಾಲದ ಅಲೆಮಾರಿ ಬದುಕಾದ ಮುದ್ರಕ - ಕಂಟ್ರಾಕ್ಟರ್ - ಬಿಲ್ಡರ್ - ಕೃಷಿಕರಾಗಿ ಯಶಸ್ವಿಯಾದ ಇವರ ನಿಜ ಜೀವನದ ಕಥೆ ಎಲ್ಲರಿಗೂ ಆತ್ಮವಿಶ್ವಾಸ ತುಂಬುವ ಪುಸ್ತಕವಾಗಿದೆ.
  ಹಬ್ಬು ಸಹೋದರರೆಲ್ಲರೂ ತಮ್ಮ ಮಾತಾ-ಪಿತ್ರರನ್ನು ಆರಾದಿಸುವ ಪರಸ್ಪರ ಪ್ರೀತಿ ವಿಶ್ವಾಸಗಳಿಂದ ಎಲ್ಲರಿ೦ದಲೂ ಗೌರವಿಸಲ್ಪಡುವ ವಿದ್ಯಾವಂತ ಸರಸ್ವತಿ ಪುತ್ರರು ಇವರ ಸರಳ ಸಜ್ಜನಿಕೆಗೆ ಈ ವಿಶ್ವದಾಖಲೆ ಒಂದು ಕಿರಿಟವಾಗಿದೆ

Comments

Popular posts from this blog

# ಜುಟ್ಟು ಕಾಳಿಂಗ ಸಪ೯ದ ಆಸ್ತಿತ್ವದ ಮಲೆನಾಡಿನ ಮಿಥ್ಯೆ#

  # ಕಾಳಿ೦ಗ ಸಪ೯ದಲ್ಲಿ ಜುಟ್ಟು ಕಾಳಿಂಗ ಸಪ೯ ಅಂತ ಇದೇ ಅನ್ನುವ ಯಾರು ನೋಡದ ಸಪ೯ದ ಅಸ್ತಿತ್ವ#    ಮಲೆನಾಡಿನ ಹಳ್ಳಿಗಳಲ್ಲಿ, ಅದು ಕಾಳಿ೦ಗ ಸಪ೯ದ ವಾಸಸ್ಥಳದ ಪರಿಸರದಲ್ಲಿ ಜುಟ್ಟು ಕಾಳಿಂಗ ಸಪ೯ ಇದೆ ಅನ್ನುವ ಮಾತು ಆಗಾಗ್ಗೆ ಕೇಳುತ್ತಿರುತ್ತೇವೆ. ಆದರೆ ಆ ರೀತಿಯ ಹಾವು ಇಲ್ಲ ಎಂದು ಹಾವಿನ ಬಗ್ಗೆ ಸಂಶೋದನೆ ಮಾಡುವವರು, ಅರಣ್ಯ ಇಲಾಖೆಯವರು, ಹಾವು ಹಿಡಿಯುವವರು ಖಡಾಖಂಡಿತವಾಗಿ ಹೇಳುತ್ತಾರಾದರು, ಈ ವದಂತಿ ಹೇಗೆ ಹರಡಿದೆ?.    ಇದು ಒಂದು ಊರು ಹಳ್ಳಿಯಲ್ಲ ನಾನು ನೋಡಿದಂತೆ ಮಹಾರಾಷ್ಟ್ರದ ರತ್ನಗಿರಿಯಿ೦ದ ಕೇರಳದ ಕಾಸರಗೋಡಿನ ತನಕ ಜುಟ್ಟು ಕಾಳಿಂಗದ ಅನೇಕ ರೋಚಕ ಕಥೆ ಕೇಳಿದ್ದೇನೆ.   ಪ್ರತ್ಯಕ್ಷ ನೋಡಿದವರು ತಾವು ಎನ್ನುವ ಅನೇಕರಲ್ಲಿ ಮಾತಾಡಿದ್ದೇನೆ ಆದರೆ ಅದು ನಂಬಲಹ೯ ಮಾಹಿತಿ ಅನಿಸಲಿಲ್ಲ, ಒಂದು ರೀತಿ ಕಾಲ್ಪನಿಕ ತ್ರಿಲ್ಲರ್ ಕಥೆ ಅಷ್ಟೇ ಅನ್ನಬಹುದು.    ಜಡೆ ಕಾಳಿಂಗ ಸಪ೯ಕ್ಕೆ ರೋಷ ಜಾಸ್ತಿ, ಹೆಡೆ ಮೇಲೆ ಕೂದಲಿನ ಜುಟ್ಟು ಇರುತ್ತೆ, ಮನುಷ್ಯರನ್ನ ಕಂಡರೆ ಓಡಿಸಿಕೊಂಡು ಬರುತ್ತೆ, ಅದರಿಂದ ತಪ್ಪಿಸಿಕೊಳ್ಳಲು ಒಂದೇ ದಾರಿ ಅದೇನೆಂದರೆ ತಗ್ಗಿನ ಪ್ರದೇಶದಲ್ಲಿ ಓಡುವುದು.     ಯಾಕೆ೦ದರೆ ಓಡಿಸಿಕೊಂಡು ಬರುವ ಜುಟ್ಟು ಕಾಳಿಂಗದ ಜುಟ್ಟು, ಇಳಿಜಾರಿನಲ್ಲಿ ಅದರ ತಲೆಯಿ೦ದ ಇಳಿಜಾರಿಗೆ ಸರಿಯುವುದರಿಂದ  ಕಣ್ಣಿನ ಮೇಲೆ ಕೂದಲ ಜುಟ್ಟು ಮುಚ್ಚುವುದರಿಂದ ಕಣ್ಣು ಕಾಣುವುದಿಲ್ಲ, ಆಗಲೇ ತಪ್...

HISTORICAL SAGAR MARIKAMBA JATRA.ಐತಿಹಾಸಿಕ ಸಾಗರದ ಮಾರಿಕಾಂಬಾ ಜಾತ್ರೆ

     ಸಾಗರದ ಮಾರಿಕಾಂಬಾ ಜಾತ್ರೆ ಐತಿಹಾಸಿಕ ಚರಿತ್ರೆಯಲ್ಲಿ ದಾಖಲೆ.        ಕನಾ೯ಟಕ ರಾಜ್ಯದಲ್ಲಿ ಎರೆಡು ಮಾರಿಕಾಂಬಾ ಜಾತ್ರೆಗಳು ಪ್ರಸಿದ್ಧಿ ಪಡೆದಿದೆ ಅದು ಉತ್ತರ ಕನ್ನಡ ಜಿಲ್ಲೆಯ ಸಿಸಿ೯ಯದ್ದು ಮತ್ತು ಶಿವಮೊಗ್ಗ ಜಿಲ್ಲೆಯ ಸಾಗರದ್ದು.    ಪ್ರತಿ ಮೂರು ವಷ೯ಕೆ ಈ ಜಾತ್ರೆ ಆಚರಿಸಲಾಗುತ್ತೆ ಶೂದ್ರ ವಗ೯ದವರು ಭಯ ಮತ್ತು ಭಕ್ತಿಯಿಂದ ಕುರಿ ಕೋಳಿ ಬಲಿ ನೀಡುವ ಪರಂಪರೆ ಇದೆ.ಮಂಗಳವಾರ ಮೇಲು ಜಾತಿಯ ಜನರ ಪೂಜೆ ದೇವಿಯ ತವರು ಮನೆಯಲ್ಲಿ ನಡೆಯುತ್ತದೆ ನಂತರ ರಾತ್ರಿ ಗಂಡನ ಸೇರುವ ಮಾರಿಗೆ ಶೂದ್ರರ ಪೂಜೆ, ಬಲಿ ಮೀಸಲು.    ಮೊದಲೆಲ್ಲ ಮಾರಿಯಮ್ಮನಿಗೆ ಕೊಣನ ಬಲಿ ನೀಡುತ್ತಿದ್ದರು ಈಗ ಇದು ಕಾನೂನು ಪ್ರಕಾರ ನಿಷಿದ್ಧ ಆದರೆ ಈ ಆಚಾರಣೆ ಗುಪ್ತವಾಗಿ ಬೇರೆ ಕಡೆ ನಡೆಸಲಾಗುತ್ತೆ ಅನ್ನುತ್ತಾರೆ.    ಸಾಗರದ ಮಾರಿಕಾ0ಬಾ ಜಾತ್ರೆ ಜಾತ್ರೆಯಿ೦ದ ಜಾತ್ರೆಗೆ ಅದೂರಿಯಾಗಿ ನಡೆಯುತ್ತದೆ, ಕೋಟ್ಯಾoತರ ಹಣದ ವಹಿವಾಟು ಕೂಡ, ಮೊದಲೆಲ್ಲ ಹಣದ ಅಪರಾ ತಪರ ಆಗುತ್ತಿದೆ ಎಂಬ ಗುಲ್ಲು ಇತ್ತು ಆದರೆ ಈಗೆಲ್ಲ ಪಾರದಶ೯ಕವಾಗಿದೆ ಆದರೂ ಈ ಬಾರಿಯ 2017ರ ಜಾತ್ರೆಯಲ್ಲಿ ಅವ್ಯವಹಾರದ ಆರೋಪ ಮಾಡಲಾಗಿದೆ ಈ ವಿಚಾರ ಇಲ್ಲಿ ಅಪ್ರಸ್ತುತ ಆದರೂ ಈ ಬಗ್ಗೆ ಬರೆಯಲು ಕಾರಣ ಕೆಳದಿ ಅರಸರ ಕಾಲದಲ್ಲಿ ಅಂದರೆ 350 ವಷ೯ದ ಹಿಂದೆಯೂ ರಾಜರಿಗೆ ಸಾಗರದ ಮಾರಿಕಾಂಬಾ ಜಾತ್ರೆಯಲ್ಲಿ ಸಾವ೯ಜನಿಕರಿಂದ ಸಂಗ್ರಹಿಸಿದ ಜಾತ...

ರಿಪ್ಪನ್ ಪೇಟೆ ( ಶಿವಮೊಗ್ಗ ಜಿಲ್ಲೆ) ಹೆಸರು ಬಂದಿದ್ದಾದರು ಹೇಗೆ?

#  ರಿಪ್ಪನ್ ಪೇಟೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಪ್ರಮುಖ ಹೋಬಳಿ ಕೇಂದ್ರ ಈ ಆಂಗ್ಲ ಅಧಿಕಾರಿಯ ಹೆಸರು ಇಡಲು ಕಾರಣವಾದ ಘಟನೆ ತುಂಬಾ ಕುತೂಹಲಕಾರಿ# ಸ್ವಲ್ಪ ಕಾಲ ನೀವು ಈ ಲೇಖನ ಓದಿದರೆ ಕಾರಣ ಗೊತ್ತಾಗುತ್ತೆ.    ಆಗ ಬ್ರಿಟಿಷ್ ಸಕಾ೯ರರಕ್ಕೆ ಆಡಳಿತ ಸುಗುಮಕ್ಕೆ ರೈಲು ಮಾಗ೯ ಅತ್ಯಗತ್ಯ ಎಂಬ ಸಕಾರಣ ಮನವರಿಕೆ ಆದ ಕಾಲ ಏಕೆಂದರೆ ಬ್ರಿಟಿಷರು ಅಮೆರಿಕಾ ವಲಸೆಯಲ್ಲಿ ಇದನ್ನ ಮನಗOಡಿದ್ದರು, ಬೆಂಗಳೂಳಿ ರಿಂದ ಶಿವಮೊಗ್ಗ ತಲುಪುವ ರೈಲು ಮಾಗ೯ ತಾಳಗುಪ್ಪಾ ತಲುಪಿದರೆ ಜೋಗ ಜಲಪಾತ ವೀಕ್ಷಣೆಗೆ ಅನುಕೂಲ ಎಂಬುದು ಹಾಗೆ ಮತ್ತೊಂದು ಮ್ಯಸೂರು ಸಕಾ೯ರ ಶರಾವತಿ ನದಿಗೆ ಆಣೆಕಟ್ಟು ಕಟ್ಟಿ.ಜಲ ವಿದ್ಯುತ್ ತಯಾರಿಸಲು ಸಾಮಗ್ರಿ ಸಾಗಾಣಿಕೆಗೆ ಅನುಕೂಲ ಎಂಬ ಕಾರಣದಿಂದ ಶಿವಮೊಗ್ಗದಿಂದ ತಾಳಗುಪ್ಪ ರೈಲು ಮಾಗ೯ ಯೋಜನೆ ಮಾಡಲಾಯಿತು.    ಆಗ ಪ್ಲೇಗ್ ಮಾರಿಯ ಕಾಲ, ಎಲ್ಲೆಲ್ಲೂ ಜನ ಸಾಯುತ್ತಿದ್ದರು ಆಗಲೇ ಈ ರೈಲು ಮಾಗ೯ ಶಿವಮೊಗ್ಗ ಆರಸಾಳಿOದ ದೊಡ್ಡಿನ ಕೊಪ್ಪ (ಈಗಿನ ರಿಪ್ಪನ್ ಪೇಟೆ) ಆನಂದಪುರಂ ಮಾಗ೯ ನಿಗದಿ ಆಗಿತ್ತು ಆದರೆ ಈ ಭಾಗದಲ್ಲಿ ಒಂದು  ವದಂತಿ ಈ ಬಾಗದಲ್ಲಿ ಹರಡಿತ್ತು ಅದೇನೆಂದರೆ ರೈಲು ಬಂದರೆ ಪ್ಲೇ ಗು ಬರುತ್ತೆ  ಅಂತ.    ಹಾಗಾಗಿ ಈ ಭಾಗದಲ್ಲಿನ ಜಾಗೃತ ಜನ ನಾಯಕರುಗಳು ಹೇಗಾದರು ಮಾಡಿ ರೈಲು ಬರದಂತೆ ಮಾಡಲು ಎಲ್ಲಾ ರೀತಿಯ ಪ್ರಯತ್ನ ಮಾಡಲು ಪ್ರಾರಂಭಿಸಿದರು.     ಇದೇ ಸಂದಭ೯ದಲ್ಲ...