Skip to main content

Blog number 1133. ಭಾಗ 13, ಆನಂದಪುರಂ ಸಾಹಿತ್ಯ ಹಬ್ಬ, ಇದರ ಕಲ್ಪನೆ ಮತ್ತು ರೂವಾರಿ ಸಾಗರ ತಾಲ್ಲೂಕು ಸಾಹಿತ್ಯ ಪರಿಷತ್ತು ಅಧ್ಯಕ್ಷ ವಿ.ಟಿ. ಸ್ಟಾಮಿಯವರದ್ದು.

#ಭಾಗ_13 

#ಆನಂದಪುರಂ_ಸಾಹಿತ್ಯ_ಹಬ್ಬ

#ಪ್ರಾಸ್ತಾವಿಕ_ಭಾಷಣ_ಮಾಡಿದ_ಸಾಗರ_ತಾಲ್ಲೂಕ್_ಸಾಹಿತ್ಯ_ಪರಿಷತ್
#ಅಧ್ಯಕ್ಷರಾದ_ವಿ_ಟಿ_ಸ್ವಾಮಿ.

#ಆನಂದಪುರಂ_ಸಾಹಿತ್ಯ_ಹಬ್ಬದ_ಕಲ್ಪನೆ_ಇವರದ್ದೆ.

  ವಿ.ಟಿ. ಸ್ವಾಮಿ ಸರ್ಕಾರಿ ಶಾಲಾ ಶಿಕ್ಷಕರು, ಸಾಹಿತಿಗಳು, ಶಿಕ್ಷಕರ ಸಂಘದ ಸಂಘಟನಾಕಾರರು, ಜೈನ ಸಮಾಜದ ಪ್ರಮುಖರು ಮತ್ತು ಹಾಲಿ ಸಾಗರ ತಾಲ್ಲೂಕಿನ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರು.
  ಸುಮಾರು ಇಪ್ಪತ್ತೈದು ವರ್ಷಗಳ ಹಿಂದೆ ಆನಂದಪುರಂ ಹೋಬಳಿಯ ಮುರುಘಾಮಠದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಅತ್ಯುತ್ತಮ ಶಿಕ್ಷಕರೆಂದು ಹೆಸರು ಮಾಡಿದ್ದರು.
  ಆ ಸಂದರ್ಭದಲ್ಲಿ ನಾನು ಸ್ಥಳಿಯ ಜಿಲ್ಲಾ ಪಂಚಾಯತ್ ಸದಸ್ಯನಾಗಿ ಆ ಶಾಲಾ ಅವರಣದಲ್ಲಿ ಮ್ಯಾಗ್ಸೆಸೆ ಪ್ರಶಸ್ತಿ ವಿಜೇತ ಕೆ.ವಿ.ಸುಬ್ಬಣ್ಣರ ಹೆಸರಿನ ರಂಗ ಮಂದಿರ ನಿರ್ಮಿಸಿ  ಉದ್ಘಾಟಿಸುವಾಗ ಇದ್ದವರು.
  ಇವರು ಇಲ್ಲಿನ ತೀರ್ಥದಲ್ಲಿರುವ ಕಲ್ಯಾಣಿ ಚಾಲುಕ್ಯ ರಾಜ ಇಮ್ಮಡಿ ಜಯಸಿಂಹನ ಸಾಮಂತ ಮಾಚ ರಾಜನ ಶಾಸನ ಉಲ್ಲೇಖಿಸಿ ಅನೇಕ ದಾಖಲೆಗಳ ಆಚಾಪುರ ಎಂಬ ಪುಸ್ತಕ ಕೂಡ ಪ್ರಕಟಿಸಿದ್ದಾರೆ.
   ಆಚಾಪುರದ ಮೂಲ ಹೆಸರು ಮಾಚರಾಜಪುರ 943 ವಷ೯ಗಳಲ್ಲಿ ಮಾಚರಾಜಪುರ  ಆಚಾಪುರ ಎಂದಾಗಿದೆ.
 ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ ಈ ಶಾಸನ ಓದಬಹುದು.
https://arunprasadhombuja.blogspot.com/2022/01/71-25-1079.html.
  ಇವರ ಸಂಶೋದನೆಯಲ್ಲಿ ಇಲ್ಲಿನ ಸ್ಥಳಿಯರ ಮೂಲ ಶಾಲಾ ದಾಖಲೆಗಳಲ್ಲಿ ಜಾತಿ ಕಾಲಮ್ ನಲ್ಲಿ ಜೈನರೆಂದೇ ನಮೂದಾಗಿದೆ ಆದರೆ ಅದು ಕಾಲಾಂತರದಲ್ಲಿ ಬದಲಾಗಿದ್ದು ಹೇಗೆ ಎಂಬುದು ಸಂಶೋದನೆ ಆಗಬೇಕು.
  ಯಾವತ್ತೂ ನೆನಪಿನಲ್ಲಿಡುವಂತಹ ಆನಂದಪುರಂ ಸಾಹಿತ್ಯ ಹಬ್ಬ ಮತ್ತು ಈ ಕಾಯ೯ಕ್ರಮದಲ್ಲಿ ನಾನು ಸಾಹಿತಿ ಅಲ್ಲ ಹವ್ಯಾಸಿ ಬರಹಗಾರನೆಂದರೂ ಬಿಡದೆ ನನ್ನ ಎರೆಡು ಕೃತಿಗಳಾದ ಕೆಳದಿ ಸಾಮ್ರಾಜ್ಯ ಇತಿಹಾಸ ಮರೆತ #ಬೆಸ್ತರ_ರಾಣಿಚಂಪಕಾ ಕಾದಂಬರಿ ಮತ್ತು ಭಟ್ಟರ ಬೊಂಡಾ ಬಾಂಡಲಿಯಲ್ಲಿ #ಬಿಲಾಲಿ_ಬಿಲ್ಲಿ_ಅಭ್ಯಂಜನ ಎಂಬ ಕಥಾ ಸಂಕಲನದ ಅವಲೋಕನ ಕೂಡ ಆಗಲು ಇವರು ಕಾರಣ ಇವರಿಗೆ ನನ್ನ ಕೃತಜ್ಞತೆಗಳು ಈ ಮೂಲಕ ಅರ್ಪಿಸುತ್ತೇನೆ.

Comments

Popular posts from this blog

# ಜುಟ್ಟು ಕಾಳಿಂಗ ಸಪ೯ದ ಆಸ್ತಿತ್ವದ ಮಲೆನಾಡಿನ ಮಿಥ್ಯೆ#

  # ಕಾಳಿ೦ಗ ಸಪ೯ದಲ್ಲಿ ಜುಟ್ಟು ಕಾಳಿಂಗ ಸಪ೯ ಅಂತ ಇದೇ ಅನ್ನುವ ಯಾರು ನೋಡದ ಸಪ೯ದ ಅಸ್ತಿತ್ವ#    ಮಲೆನಾಡಿನ ಹಳ್ಳಿಗಳಲ್ಲಿ, ಅದು ಕಾಳಿ೦ಗ ಸಪ೯ದ ವಾಸಸ್ಥಳದ ಪರಿಸರದಲ್ಲಿ ಜುಟ್ಟು ಕಾಳಿಂಗ ಸಪ೯ ಇದೆ ಅನ್ನುವ ಮಾತು ಆಗಾಗ್ಗೆ ಕೇಳುತ್ತಿರುತ್ತೇವೆ. ಆದರೆ ಆ ರೀತಿಯ ಹಾವು ಇಲ್ಲ ಎಂದು ಹಾವಿನ ಬಗ್ಗೆ ಸಂಶೋದನೆ ಮಾಡುವವರು, ಅರಣ್ಯ ಇಲಾಖೆಯವರು, ಹಾವು ಹಿಡಿಯುವವರು ಖಡಾಖಂಡಿತವಾಗಿ ಹೇಳುತ್ತಾರಾದರು, ಈ ವದಂತಿ ಹೇಗೆ ಹರಡಿದೆ?.    ಇದು ಒಂದು ಊರು ಹಳ್ಳಿಯಲ್ಲ ನಾನು ನೋಡಿದಂತೆ ಮಹಾರಾಷ್ಟ್ರದ ರತ್ನಗಿರಿಯಿ೦ದ ಕೇರಳದ ಕಾಸರಗೋಡಿನ ತನಕ ಜುಟ್ಟು ಕಾಳಿಂಗದ ಅನೇಕ ರೋಚಕ ಕಥೆ ಕೇಳಿದ್ದೇನೆ.   ಪ್ರತ್ಯಕ್ಷ ನೋಡಿದವರು ತಾವು ಎನ್ನುವ ಅನೇಕರಲ್ಲಿ ಮಾತಾಡಿದ್ದೇನೆ ಆದರೆ ಅದು ನಂಬಲಹ೯ ಮಾಹಿತಿ ಅನಿಸಲಿಲ್ಲ, ಒಂದು ರೀತಿ ಕಾಲ್ಪನಿಕ ತ್ರಿಲ್ಲರ್ ಕಥೆ ಅಷ್ಟೇ ಅನ್ನಬಹುದು.    ಜಡೆ ಕಾಳಿಂಗ ಸಪ೯ಕ್ಕೆ ರೋಷ ಜಾಸ್ತಿ, ಹೆಡೆ ಮೇಲೆ ಕೂದಲಿನ ಜುಟ್ಟು ಇರುತ್ತೆ, ಮನುಷ್ಯರನ್ನ ಕಂಡರೆ ಓಡಿಸಿಕೊಂಡು ಬರುತ್ತೆ, ಅದರಿಂದ ತಪ್ಪಿಸಿಕೊಳ್ಳಲು ಒಂದೇ ದಾರಿ ಅದೇನೆಂದರೆ ತಗ್ಗಿನ ಪ್ರದೇಶದಲ್ಲಿ ಓಡುವುದು.     ಯಾಕೆ೦ದರೆ ಓಡಿಸಿಕೊಂಡು ಬರುವ ಜುಟ್ಟು ಕಾಳಿಂಗದ ಜುಟ್ಟು, ಇಳಿಜಾರಿನಲ್ಲಿ ಅದರ ತಲೆಯಿ೦ದ ಇಳಿಜಾರಿಗೆ ಸರಿಯುವುದರಿಂದ  ಕಣ್ಣಿನ ಮೇಲೆ ಕೂದಲ ಜುಟ್ಟು ಮುಚ್ಚುವುದರಿಂದ ಕಣ್ಣು ಕಾಣುವುದಿಲ್ಲ, ಆಗಲೇ ತಪ್...

ಶರಾವತಿ ನದಿ ಉಗಮ ಸ್ಥಾನ ಅಂಬುತೀಥ೯.

ಇಡೀ ರಾಜ್ಯಕ್ಕೆ ವಿದ್ಯುತ್ ನೀಡುವ ಶರಾವತಿ ನದಿಯ ಉಗಮ ಸ್ಥಾನ ಅಂಬುತೀಥ೯, ಆರಗ ಸಮೀಪದ ತೀಥ೯ಳ್ಳಿ ತಾಲ್ಲೂಕಿನಲ್ಲಿದೆ( ಶಿವಮೊಗ್ಗ ಜಿಲ್ಲೆ)    ಅಂಬು ತೀಥ೯ದಲ್ಲಿ ಶ್ರೀ ರಾಮ ವನವಾಸದಲ್ಲಿದ್ದಾಗ ಸೀತಾ ಮಾತೆಗೆ ಪೂಜೆಗೆ ನೀರು ಸಿಗದಿದ್ದಾಗ ರಾಮ ತನ್ನ ಅಂಬಿನಿಂದ (ಬಿಲ್ಲಿನ ಬಾಣದಿಂದ) ನೆಲ ಸೀಳಿ ನೀರು ತಂದರೆ೦ದು ರಾಮಾಯಣದಲ್ಲಿ ಉಲ್ಲೇಖವಿದೆ, ಹಾಗಾಗಿ ಈ ಸ್ಥಳಕ್ಕೆ ಅಂಬುತೀಥ೯ ಎಂಬ ಹೆಸರು ಬ೦ತು ಎಂಬುದು ಸ್ಥಳ ಪುರಾಣ.    ಇಲ್ಲಿ ಸಣ್ಣ ತೊರೆಯಾಗಿ ಹುಟ್ಟುವ ನದಿ ಬಾಣದಿಂದ ಹುಟ್ಟಿದ್ದರಿಂದ ಶರಾವತಿ ಎ೦ಬ ಹೆಸರು ಪಡೆದು ಪೂವ೯ಕ್ಕೆ ಹರಿದು ನಂತರ ಪಶ್ಚಿಮ ಮುಖವಾಗಿ ತಿರುಗಿ ಹೊಸನಗರ ತಾಲ್ಲೂಕನ್ನ ದಾಟಿ ಸಾಗರ ತಾಲ್ಲೂಕಿನ ಜೋಗದಲ್ಲಿ ಜಲಪಾತವಾಗಿ ದಟ್ಟ ಕಾನನದ ಕಣಿವೆ ಮುಖಾಂತರ ಹರಿದು ಹೊನ್ನಾವರದಲ್ಲಿ ಅರಬ್ಬಿ ಸಮುದ್ರ ಸೇರುತ್ತದೆ.   ಈ ನದಿಗೆ ಮೊದಲಿಗೆ ಹೀರೇ ಬಾಸ್ಕರ ಎಂಬಲ್ಲಿ ನಂತರ ಲಿಂಗನಮಕ್ಕಿಯಲ್ಲಿ ಆಣೆಕಟ್ಟು ಕಟ್ಟಿ ರಾಜ್ಯಕ್ಕೆ ಜಲ ವಿದ್ಯುತ್ ನೀಡುತ್ತಿರುವುದರಿಂದ ಲಕ್ಷಾಂತರ ಎಕರೆ ಕಾಡು, ಜಮೀನು ಅನೇಕ ಊರು ಮುಳುಗಡೆ ಆಯಿತು ಸಾವಿರಾರು ಕುಟುಂಬಗಳು ಸಂತ್ರಸ್ಥರಾದದ್ದು ಇತಿಹಾಸ.    ಈ ನದಿ ಜೋಗದಲ್ಲಿ ದುಮುಕುವ ಜಲಪಾತ ವಿಶ್ವದ ಸುಂದರ ಜಲಪಾತದಲ್ಲಿ ಒಂದಾಗಿದೆ.    ಹಾಗಾಗಿ ಶರಾವತಿ ನದಿಯ ಉಗಮ ಸ್ಥಾನಕ್ಕೆ ಮಹತ್ವವಿದೆ, ಒಮ್ಮೆಯಾದರೂ ಈ ನದಿ ಮೂಲ ಸಂದಶಿ೯ಸಬೇಕು ಆದರೆ ಇಲ್ಲಿ ಶರಾವತಿ ವ...

HISTORICAL SAGAR MARIKAMBA JATRA.ಐತಿಹಾಸಿಕ ಸಾಗರದ ಮಾರಿಕಾಂಬಾ ಜಾತ್ರೆ

     ಸಾಗರದ ಮಾರಿಕಾಂಬಾ ಜಾತ್ರೆ ಐತಿಹಾಸಿಕ ಚರಿತ್ರೆಯಲ್ಲಿ ದಾಖಲೆ.        ಕನಾ೯ಟಕ ರಾಜ್ಯದಲ್ಲಿ ಎರೆಡು ಮಾರಿಕಾಂಬಾ ಜಾತ್ರೆಗಳು ಪ್ರಸಿದ್ಧಿ ಪಡೆದಿದೆ ಅದು ಉತ್ತರ ಕನ್ನಡ ಜಿಲ್ಲೆಯ ಸಿಸಿ೯ಯದ್ದು ಮತ್ತು ಶಿವಮೊಗ್ಗ ಜಿಲ್ಲೆಯ ಸಾಗರದ್ದು.    ಪ್ರತಿ ಮೂರು ವಷ೯ಕೆ ಈ ಜಾತ್ರೆ ಆಚರಿಸಲಾಗುತ್ತೆ ಶೂದ್ರ ವಗ೯ದವರು ಭಯ ಮತ್ತು ಭಕ್ತಿಯಿಂದ ಕುರಿ ಕೋಳಿ ಬಲಿ ನೀಡುವ ಪರಂಪರೆ ಇದೆ.ಮಂಗಳವಾರ ಮೇಲು ಜಾತಿಯ ಜನರ ಪೂಜೆ ದೇವಿಯ ತವರು ಮನೆಯಲ್ಲಿ ನಡೆಯುತ್ತದೆ ನಂತರ ರಾತ್ರಿ ಗಂಡನ ಸೇರುವ ಮಾರಿಗೆ ಶೂದ್ರರ ಪೂಜೆ, ಬಲಿ ಮೀಸಲು.    ಮೊದಲೆಲ್ಲ ಮಾರಿಯಮ್ಮನಿಗೆ ಕೊಣನ ಬಲಿ ನೀಡುತ್ತಿದ್ದರು ಈಗ ಇದು ಕಾನೂನು ಪ್ರಕಾರ ನಿಷಿದ್ಧ ಆದರೆ ಈ ಆಚಾರಣೆ ಗುಪ್ತವಾಗಿ ಬೇರೆ ಕಡೆ ನಡೆಸಲಾಗುತ್ತೆ ಅನ್ನುತ್ತಾರೆ.    ಸಾಗರದ ಮಾರಿಕಾ0ಬಾ ಜಾತ್ರೆ ಜಾತ್ರೆಯಿ೦ದ ಜಾತ್ರೆಗೆ ಅದೂರಿಯಾಗಿ ನಡೆಯುತ್ತದೆ, ಕೋಟ್ಯಾoತರ ಹಣದ ವಹಿವಾಟು ಕೂಡ, ಮೊದಲೆಲ್ಲ ಹಣದ ಅಪರಾ ತಪರ ಆಗುತ್ತಿದೆ ಎಂಬ ಗುಲ್ಲು ಇತ್ತು ಆದರೆ ಈಗೆಲ್ಲ ಪಾರದಶ೯ಕವಾಗಿದೆ ಆದರೂ ಈ ಬಾರಿಯ 2017ರ ಜಾತ್ರೆಯಲ್ಲಿ ಅವ್ಯವಹಾರದ ಆರೋಪ ಮಾಡಲಾಗಿದೆ ಈ ವಿಚಾರ ಇಲ್ಲಿ ಅಪ್ರಸ್ತುತ ಆದರೂ ಈ ಬಗ್ಗೆ ಬರೆಯಲು ಕಾರಣ ಕೆಳದಿ ಅರಸರ ಕಾಲದಲ್ಲಿ ಅಂದರೆ 350 ವಷ೯ದ ಹಿಂದೆಯೂ ರಾಜರಿಗೆ ಸಾಗರದ ಮಾರಿಕಾಂಬಾ ಜಾತ್ರೆಯಲ್ಲಿ ಸಾವ೯ಜನಿಕರಿಂದ ಸಂಗ್ರಹಿಸಿದ ಜಾತ...