Skip to main content

Blog number 1135. ಆನಂದಪುರಂ ಸಾಹಿತ್ಯ ಹಬ್ಬ ಭಾಗ 14. ಸಾಹಿತ್ಯ ಲೋಕದ ವಿಶ್ವ ದಾಖಲೆಯ ಹಬ್ಬು ಸಹೋದರಲ್ಲಿ ಐದನೆಯವರಾದ ಕಾರ್ಕಳ ತಾಲೂಕಿನ ಮುಂಡುಕೋಡು ಪದವಿ ಪೂರ್ವ ಕಾಲೇಜಿನ ನಿವೃತ್ತ ಪ್ರಾಂಶುಪಾಲರಾದ ಉದಯ ಕುಮಾರ್ ಹಬ್ಬು 50ಕ್ಕೂ ಹೆಚ್ಚು ಪುಸ್ತಕ ಪ್ರಕಟವಾಗಿದೆ.


https://youtu.be/-fYOC7H8kK8

#ಆನಂದಪುರಂ_ಸಾಹಿತ್ಯ_ಹಬ್ಬ_ಭಾಗ_14
(ಅಂತಿಮ ಭಾಗ)

#ಕನ್ನಡ_ಕೃತಿ_ರಚನೆಯಲ್ಲಿ_ವಿಶ್ವ_ದಾಖಲೆಯ_ಏಕೈಕ_ಕುಟು೦ಬ

#ಹಬ್ಬು_ಕುಟುಂಬದಲ್ಲಿ_50ಕ್ಕೂ_ಹೆಚ್ಚು_ಪುಸ್ತಕ_ಪ್ರಕಟಿಸಿರುವ_ಉದಯ_ಕುಮಾರ್_ಹಬ್ಬು

#ನನ್ನ_ಇವರ_ಗೆಳೆತನಕ್ಕೆ_ಪೇಸ್_ಬುಕ್_ಸೇತುವೆ

#ನನ್ನ_ಕಾದಂಬರಿ_ಬೆಸ್ತರ_ರಾಣಿ_ಅರವಿಂದ_ಚೊಕ್ಕಾಡಿ_ಅವರ_ವಿಮರ್ಶೆಯಿಂದ_ಸಂಪರ್ಕ

#ಹಬ್ಬು_ಕುಟುಂಬದ_ಎಲ್ಲರೂ_ಆನಂದಪುರಂಗೆ_ಬಂದಿದ್ದು_ವಿಶೇಷ.

   ಉಡುಪಿ ಜಿಲ್ಲೆಯ ಕಾರ್ಕಳ ತಾಲ್ಲೂಕಿನ ಮುಂಡುಕೋಡು ಪದವಿ ಪೂರ್ವ ಕಾಲೇಜಿನ ನಿವೃತ್ತ ಪ್ರಾ೦ಶುಪಾಲರಾಗಿ ಮಂಗಳೂರಿನ ಕಿನ್ನಿಗೋಳಿಯಲ್ಲಿ ನೆಲೆಸಿರುವ ಉದಯ ಕುಮಾರ್ ಹಬ್ಬು ಹಬ್ಬು ಕುಟುಂಬದ ಆರು ಸಹೋದರರಲ್ಲಿ ಐದನೆಯವರು.
  ಇವರು ಬರೆದು ಪ್ರಕಟಿಸಿದ ಪುಸ್ತಕಗಳು 50ಕ್ಕೂ ಹೆಚ್ಚು, ಪತ್ರಿಕೆಗಳಲ್ಲಿ ಪ್ರಕಟವಾದ ಇವರ ಬರಹ - ವಿಮರ್ಶೆಗಳು ಸಾವಿರಕ್ಕೂ ಹೆಚ್ಚು.
 

ಇವರ ತಂದೆ ಮತ್ತು ಆರು ಜನ ಸಹೋದರರು ಸಾಹಿತಿಗಳಾಗಿರುವುದರಿಂದ ಈ ಹಬ್ಬು ಕುಟುಂಬ ವಿಶ್ವದಾಖಲೆಗೆ ಸೇರಿದೆ ಈಗಾಗಲೇ ಇಂಡಿಯನ್ ಬುಕ್ ಆಫ್ ವಲ್ಡ್೯ ರೆಕಾರ್ಡ್ ಗೆ ಸೇರಲ್ಪಟ್ಟಿದೆ ಮತ್ತು ಗಿನ್ನೆಸ್ ದಾಖಲೆಗೆ ಕಾಯುತ್ತಿದೆ.
   ನನ್ನ ಮತ್ತು ಉದಯ ಕುಮಾರ್ ಹಬ್ಬು ಪರಿಪಯ ಅಕಸ್ಮಿಕವಾಗಿ ಪೇಸ್ ಬುಕ್ ನಿಂದ ಆಯಿತು ಆ ಸಂದರ್ಭದಲ್ಲಿ ನನ್ನ ಕಾದಂಬರಿ ಬೆಸ್ತರ ರಾಣಿ ಚಂಪಕಾ ಬಗ್ಗೆ ಖ್ಯಾತ ಸಾಹಿತಿ, ಅಂಕಣಕಾರ ಮತ್ತು ಶಿಕ್ಷಣ ತಜ್ಞರಾದ ಅರವಿಂದ ಚೊಕ್ಕಾಡಿ ಅವರು ವಿಮರ್ಶೆ ಬರೆದದ್ದು ಓದಿ ಈ ಕಾದಂಬರಿಗಾಗಿ ಉದಯ ಕುಮಾರ್ ಹಬ್ಬು ನನ್ನ ಸಂಪರ್ಕ ಮಾಡಿದ್ದರು.
   ನಂತರ ಕಾದಂಬರಿ ಓದಿ ವಿಮರ್ಶೆಯೂ ಮಾಡಿದ್ದರು ಹೀಗೆ ಈ ಸಜ್ಜನರ ಸಂಪರ್ಕವಾಯಿತು.
  ನಂತರ ಇವರ ಪೇಸ್ ಬುಕ್ ಲೇಖನಗಳಿಂದ ಇವರ ಇಡೀ ಕುಟುಂಬವೇ ಸಾಹಿತ್ಯ ರಚನೆಯಲ್ಲಿರುವುದು ತಿಳಿದು ನಾನು ಬರೆದ ಲೇಖನದಿಂದ (ಇಲ್ಲಿ ಕ್ಲಿಕ್ ಮಾಡಿ https://arunprasadhombuja.blogspot.com/2022/10/blog-number-1008.html ) ಇಡೀ ಹಬ್ಬು ಕುಟುಂಬ ಆನಂದಪುರಂಗೆ ಬಂದು ನನ್ನ ಅತಿಥಿಗಳಾಗಿ ಸಾಗರ ತಾಲ್ಲೂಕ್ ಸಾಹಿತ್ಯ ಪರಿಷತ್ ಮತ್ತು ಆನಂದಪುರಂ ಹೋಬಳಿ ಸಾಹಿತ್ಯ ಪರಿಷತ್ ಜಂಟಿಯಾಗಿ ಆಯೋಜಿಸಿದ್ದ ಆನಂದಪುರಂ ಸಾಹಿತ್ಯ ಹಬ್ಬ ( ದಿನಾಂಕ 11-ಡಿಸೆಂಬರ್ -2022 ಬಾನುವಾರ - ಸ್ಥಳ ಶ್ರೀ ಕೃಷ್ಣ ಸರಸ ಕನ್ವೆನ್ಷನ್ ಹಾಲ್ ನಲ್ಲಿ) ಈ ಹಬ್ಬು ಕುಟುಂಬದ ಎಲ್ಲಾ ಪ್ರಕಟಿತ ಪುಸ್ತಕಗಳ ಪ್ರದರ್ಶನ ಶಿವಮೊಗ್ಗ ಜಿಲ್ಲಾ ಸಾಹಿತ್ಯ ಪರಿಷತ್ ಅಧ್ಯಕ್ಷ ಮಂಜುನಾಥರಿಂದ ಉದ್ಘಾಟನೆಗೊಂಡಿತು.
  ಆನಂದಪುರಂ ಸಾಹಿತ್ಯ ಹಬ್ಬದ ಕಾರ್ಯಕ್ರಮ ಅರವಿಂದ ಚೊಕ್ಕಾಡಿಯವರು ಉದ್ಘಾಟಿಸಿದರು, ವೇದಿಕೆಯಲ್ಲಿ ಖ್ಯಾತ ಪತ್ರಕರ್ತ ಡಿ.ಪಿ. ಸತೀಶ್, ತಾಲ್ಲುಕ್ ಸಾಹಿತ್ಯ ಪರಿಷತ್ ಅಧ್ಯಕ್ಷ ವಿ.ಟಿ. ಸ್ವಾಮಿ, ಹೋಬಳಿ ಸಾಹಿತ್ಯ ಪರಿಷತ್ ಅಧ್ಯಕ್ಷ ಬಿ.ಡಿ.ರವಿ ಕುಮಾರ್ ಉಪಸ್ಥಿತರಿದ್ದರು.
ವಿಶ್ವ ದಾಖಲೆಗೆ ಕಾರಣರಾದ ಹುಬ್ಬು ಸಹೋದರರಾದ ಮೋಹನ್ ಹಬ್ಬು ಅಂಕೋಲ, ರಾಮಚಂದ್ರ ಹಬ್ಬು ಕಾರವಾರ, ಅರುಣ್ ಕುಮಾರ್ ಹಬ್ಬು ಹುಬ್ಬಳ್ಳಿ, ಉದಯ ಕುಮಾರ್ ಹಬ್ಬು ಮಂಗಳೂರು, ಜಯಪ್ರಕಾಶ್ ಹಬ್ಬು ಬನವಾಸಿ ಮತ್ತು ಶ್ರೀಮತಿ ಶರಾವತಿ ಸುಭಾಷ್ ಚಂದ್ರ ಹಬ್ಬು ಸಾಗರ ಇವರುಗಳನ್ನು ಸನ್ಮಾನಿಸಲಾಯಿತು ಮತ್ತು ಇವರುಗಳು ಮಾತಾಡಿದ್ದನ್ನು ಆನಂದಪುರಂ ಸಾಹಿತ್ಯ ಹಬ್ಬ  ಕಂತುಗಳಲ್ಲಿ ಪ್ರಕಟಿಸಿದ್ದೇನೆ.
  ಈ ಕಾರ್ಯಕ್ರಮದಲ್ಲಿ ನನ್ನ ಕಾದಂಬರಿ ಬೆಸ್ತರ ರಾಣಿ ಚಂಪಕಾ ಮತ್ತು ಬಿಲಾಲಿ ಬಿಲ್ಲಿ ಕಥಾ ಸಂಕಲನದ ಅವಲೋಕನ ಅರವಿಂದ ಚೊಕ್ಕಾಡಿಯವರಿಂದ ನಡೆದದ್ದು ನನಗೊಂದು ಕಿರೀಟವಾದ ಹಿರಿಮೆ ಆಯಿತು.
   ಇದು ಅಂತಿಮ 14ನೇ ಕಂತು, ಈ ಕಾಯ೯ಕ್ರಮ ಯಶಸ್ವಿಗೆ ಕಾರಣರಾದ ಎಲ್ಲರಿಗೂ ಕೃತಜ್ಞತೆಗಳು.

Comments

Popular posts from this blog

Blog number 1782. ಅರಳಸುರಳಿಯ ರಾಘವೇಂದ್ರ ಕೇಕೋಡರ ಕುಟುಂಬದ ತಪ್ಪು ನಿರ್ದಾರದ ದುರಂತ.

#ತೀರ್ಥಹಳ್ಳಿಯ_ಅರಳಸುರಳಿಯ_ಒಂದೇ_ಕುಟುಂಬದ_ನಾಲ್ವರು_ಮೃತರಾದ_ರಹಸ್ಯವೇನು? #ಈ_ಬಗ್ಗೆ_ಆ_ಊರಿನ_ಸಮೀಪದ_ಈ_ಕುಟುಂಬದ_ಪರಿಚಯ_ಇರುವವರಿಗೆ_ವಿಚಾರಿಸಿದ್ದೆ. #ಅವರು_ಈ_ಘಟನೆ_ಬಗ್ಗೆ_ಸವಿಸ್ತಾರವಾಗಿ_ಲಿಖಿತ_ಲೇಖನ_ಬರೆದಿದ್ದಾರೆ. #ಅವರ_ವಿನಂತಿ_ಅವರ_ಹೆಸರು_ಬಹಿರಂಗಗೊಳಿಸ_ಬಾರದು. #ಆದ್ದರಿಂದ_ಈ_ಲೇಖನ_ಪೋಸ್ಟ್_ಮಾಡಬಾರದೆಂದಿದ್ದೆ_ಆದರೆ_ಇದು_ಮಲೆನಾಡಿಗರ_ಮನೆ_ಮನೆಯ_ಕಥೆ #ಆದ್ದರಿಂದ_ಇಲ್ಲಿ_ಪೋಸ್ಟ್_ಮಾಡಿದೆ.    ಇಲ್ಲಿ ತಪ್ಪು ಯಾರದ್ದೂ ಇಲ್ಲ... ಪಶ್ಚಾತ್ತಾಪದ ಪ್ರಾಯಶ್ಚಿತ ಕೇಳಲು ಅವರಾರು ಇಲ್ಲ .....ಆದರೆ ಈ ರೀತಿ ಜೀವ ತ್ಯಾಗ ಮಾಡುವ ಆತುರದ ಕೆಟ್ಟ ನಿರ್ದಾರ ಮಾತ್ರ ಸರಿ ಅಲ್ಲ.     ಇವರ ಅಣ್ಣ ಆರ್.ಎಸ್.ಎಸ್. ಪ್ರಚಾರಕರಾಗಿ ದೆಹಲಿಯಲ್ಲಿ ಏಳು ವಷ೯ ಮೋದಿ ಜೊತೆ ಒಂದೇ ಕೋಣೆ ಹಂಚಿಕೊಂಡವರು, ಇನ್ನೊಬ್ಬ ಸಹೋದರ ಮೂಳೆ ತಜ್ಞರಾಗಿ ಶಿವಮೊಗ್ಗದಲ್ಲಿ ಆಸ್ಪತ್ರೆ ಮಾಡಿಕೊಂಡಿದ್ದಾರೆ.   #ದೀರ್ಘವಾದರೂ_ಪೂರ್ಣ_ಲೇಖನ_ಓದಿ   #ಹೀಗೊಂದು_ಸುಕುಟುಂಬ_ಆತ್ಮಾಘಾತ_ಮತ್ತು_ತದನಂತರದ_ಸಹಾಗಮನ.... ಮೂಡಣದಲ್ಲಿ ರವಿ ಮೂಡಲು ಅಣಿ ಯಾಗುತ್ತಿಧ್ದ .. ಹಾದಿಗಣಪತಿ ದೇವರು ಗರ್ಭಗುಡಿಯ ನಂದಾದೀಪದ ಮಂದ ಬೆಳಕಿನಲ್ಲಿ ತನ್ನ ಗುಡಿಯ ಎದುರಿನ ತಗ್ಗಿನಲ್ಲಿದ್ದ  ರಾಘವೇಂದ್ರ ಕೇಕೋಡರ ಮನೆಯನ್ನು ಎವೆಯಕ್ಕದೇ ನೋಡುತ್ತಲಿದ್ದ... ಊರ ಎಲ್ಲಾ ಮನೆಯಂತೆ ಆ ಮನೆಯಲ್ಲೂ ಆ ಬೆಳಗಿನಲ್ಲಿ ಮನೆಯೊಡತಿ ನಾಗರತ್ನಕ್ಕ ಆ ಸಮಯದಲ್ಲಿ ದೇವರಿಗೆ ದೀಪ ಹಚ್ಚಿ ಹೊಸ್ತಿಲು ಪೂಜೆ ಮಾಡ

Blog number 1037. ರಾಜಕುಮಾರಿ ಶಾಂತವ್ವ ಮತ್ತು ದಲಿತ ಯುವಕ ಸಿದ್ದೇಶ್ವರರ ಅಮರ ಪ್ರೇಮದ ಸ್ಮಾರಕ, ಅನ್ಯ ಜಾತಿ ವಿವಾಹವಾದ್ದರಿಂದ ರಾಜಕುಮಾರಿಗೆ ಸೂಳೆ ಪಟ್ಟ ನೀಡಿದ ಸಮಾಜ. ಸಮಾಜದ ಒಳಿತಿಗಾಗಿ ಶಾಂತವ್ವ ಕಟ್ಟಿಸಿದ ಬೃಹತ್ ಕೆರೆಗೆ ಜನ ಕರೆದದ್ದು ಸೂಳೆ ಕಟ್ಟಿಸಿದ ಕೆರೆ ಅದೇ ಸೂಳೆಕೆರೆ / ಶಾಂತಿ ಸಾಗರ

# ಸೂಳೆಕೆರೆ (ಶಾಂತಿ ಸಾಗರ) ಅಂತರ್ ಜಾತಿ ಪ್ರೇಮ ವಿವಾಹದ ದುರOತ ಕಥೆ. #ಅಕ್ಟೋಬರ್ 2019 ರಲ್ಲಿ ತುಂಬಿ ತುಳುಕಿತ್ತು.  ಚಿತ್ರದುಗ೯, ದಾವಣಗೆರೆ ಬಳ್ಳಾರಿ ಮುಂತಾದ ಮಳೆ ಕಡಿಮೆ ಆಗುತ್ತಿದ್ದ ಜಿಲ್ಲೆಗಳಲ್ಲಿ ಅದೂ ಅಕ್ಟೋಬರ್ ತಿಂಗಳ 2019 ರಲ್ಲಿ  ಬಂದಿದ್ದ ಬಾರಿ ಮಳೆ ಎಲ್ಲಾ ಕೆರೆ, ಹೊಂಡಗಳು ತುಂಬಿ ತುಳುಕಿದೆ, ಸಾಮಾಜಿಕ ಜಾಲ ತಾಣದಲ್ಲಿ 40 ವಷ೯ದಲ್ಲಿ ಇಂತ ಮಳೆ ಬಂದಿಲ್ಲ ಅಂತ ಸುದ್ದಿ ಹರಿದಾಡುತ್ತಿತ್ತು ಮತ್ತು  ಸೂಳೆಕೆರೆ ತುಂಬಿ ಕೋಡಿ ಬಿದ್ದಿದೆ ಅಂತೆಲ್ಲ Post ನೋಡಿ ಬೆಂಗಳೂರಿಂದ ಬರುವಾಗ ಚಿತ್ರದುಗ೯ ಮಾಗ೯ವಾಗಿ ಚನ್ನಗಿರಿ ತಲುಪಿ ಸೂಳೆಕೆರೆ ನೋಡಲು ಹೋಗಿದ್ದೆ.  11ನೇ ಶತಮಾನದಲ್ಲಿ (1128ರಲ್ಲಿ)ಕೇವಲ 3 ವಷ೯ದಲ್ಲಿ ಈ ಕೆರೆ ನಿಮಾ೯ಣ ಮಾಡಿಸಿದ್ದು ಶಾಂತವ್ವ ಎಂಬ ರಾಜ ಕುಮಾರಿ ಅವಳು ಸ್ವಣ೯ವತಿ ಪಟ್ಟಣದ ದೊರೆ ವಿಕ್ರಮ ರಾಜನ ಮಗಳು, ಸಿದ್ದೇಶ್ವರ ಎಂಬ ಅನ್ಯ ಜಾತಿಯ ಯುವಕನೊ೦ದಿಗೆ ಗಾಂದವ೯ ವಿವಾಹ ಆಗುತ್ತಾಳೆ ಇದನ್ನ ಸಹಿಸದ ಮತ್ತು ಒಪ್ಪದ ಜನತೆ ಸೂಳೆ ಎಂದು ಮೂದಲಿಸುತ್ತಾರOತೆ ಈ ರೀತಿ ತನಗೆ ಬಂದ ಕಳಂಕ ಕಳೆಯಲು ಈ ಬೃಹತ್ ಕೆರೆ ತನ್ನ ಪತಿ ಸಿದ್ದೇಶ್ವರನ ಜೊತೆ ಸೇರಿ ನಿಮಿ೯ಸಿ ಕೆರೆಗೆ ಹಾರವಾದಳೆoಬ ಇತಿಹಾಸ ಇದೆ ಇದರಿಂದ ನೊಂದ ಪತಿ ಸಿದ್ಧೇಶ್ವರ ಕೂಡ ಎದುರಿನ ಗುಡ್ಡದಲ್ಲಿ ಜೀವ ತ್ಯಾಗ ಮಾಡುತ್ತಾನೆ ಈಗ ಅಲ್ಲಿ ಸಿದ್ದೇಶ್ವರ ದೇವಸ್ಥಾನವಿದೆ.   ಈ ಕೆರೆ ಈಗಲೂ ಸೂಳೆಕೆರೆ ಎಂದೆ ಹೆಸರಾಗಿದೆ ಈ

# ಜುಟ್ಟು ಕಾಳಿಂಗ ಸಪ೯ದ ಆಸ್ತಿತ್ವದ ಮಲೆನಾಡಿನ ಮಿಥ್ಯೆ#

  # ಕಾಳಿ೦ಗ ಸಪ೯ದಲ್ಲಿ ಜುಟ್ಟು ಕಾಳಿಂಗ ಸಪ೯ ಅಂತ ಇದೇ ಅನ್ನುವ ಯಾರು ನೋಡದ ಸಪ೯ದ ಅಸ್ತಿತ್ವ#    ಮಲೆನಾಡಿನ ಹಳ್ಳಿಗಳಲ್ಲಿ, ಅದು ಕಾಳಿ೦ಗ ಸಪ೯ದ ವಾಸಸ್ಥಳದ ಪರಿಸರದಲ್ಲಿ ಜುಟ್ಟು ಕಾಳಿಂಗ ಸಪ೯ ಇದೆ ಅನ್ನುವ ಮಾತು ಆಗಾಗ್ಗೆ ಕೇಳುತ್ತಿರುತ್ತೇವೆ. ಆದರೆ ಆ ರೀತಿಯ ಹಾವು ಇಲ್ಲ ಎಂದು ಹಾವಿನ ಬಗ್ಗೆ ಸಂಶೋದನೆ ಮಾಡುವವರು, ಅರಣ್ಯ ಇಲಾಖೆಯವರು, ಹಾವು ಹಿಡಿಯುವವರು ಖಡಾಖಂಡಿತವಾಗಿ ಹೇಳುತ್ತಾರಾದರು, ಈ ವದಂತಿ ಹೇಗೆ ಹರಡಿದೆ?.    ಇದು ಒಂದು ಊರು ಹಳ್ಳಿಯಲ್ಲ ನಾನು ನೋಡಿದಂತೆ ಮಹಾರಾಷ್ಟ್ರದ ರತ್ನಗಿರಿಯಿ೦ದ ಕೇರಳದ ಕಾಸರಗೋಡಿನ ತನಕ ಜುಟ್ಟು ಕಾಳಿಂಗದ ಅನೇಕ ರೋಚಕ ಕಥೆ ಕೇಳಿದ್ದೇನೆ.   ಪ್ರತ್ಯಕ್ಷ ನೋಡಿದವರು ತಾವು ಎನ್ನುವ ಅನೇಕರಲ್ಲಿ ಮಾತಾಡಿದ್ದೇನೆ ಆದರೆ ಅದು ನಂಬಲಹ೯ ಮಾಹಿತಿ ಅನಿಸಲಿಲ್ಲ, ಒಂದು ರೀತಿ ಕಾಲ್ಪನಿಕ ತ್ರಿಲ್ಲರ್ ಕಥೆ ಅಷ್ಟೇ ಅನ್ನಬಹುದು.    ಜಡೆ ಕಾಳಿಂಗ ಸಪ೯ಕ್ಕೆ ರೋಷ ಜಾಸ್ತಿ, ಹೆಡೆ ಮೇಲೆ ಕೂದಲಿನ ಜುಟ್ಟು ಇರುತ್ತೆ, ಮನುಷ್ಯರನ್ನ ಕಂಡರೆ ಓಡಿಸಿಕೊಂಡು ಬರುತ್ತೆ, ಅದರಿಂದ ತಪ್ಪಿಸಿಕೊಳ್ಳಲು ಒಂದೇ ದಾರಿ ಅದೇನೆಂದರೆ ತಗ್ಗಿನ ಪ್ರದೇಶದಲ್ಲಿ ಓಡುವುದು.     ಯಾಕೆ೦ದರೆ ಓಡಿಸಿಕೊಂಡು ಬರುವ ಜುಟ್ಟು ಕಾಳಿಂಗದ ಜುಟ್ಟು, ಇಳಿಜಾರಿನಲ್ಲಿ ಅದರ ತಲೆಯಿ೦ದ ಇಳಿಜಾರಿಗೆ ಸರಿಯುವುದರಿಂದ  ಕಣ್ಣಿನ ಮೇಲೆ ಕೂದಲ ಜುಟ್ಟು ಮುಚ್ಚುವುದರಿಂದ ಕಣ್ಣು ಕಾಣುವುದಿಲ್ಲ, ಆಗಲೇ ತಪ್ಪಿಸಿಕೊಳ್ಳಬೇಕು ಅಂತ ಬಿದನೂರು ನಗರ ಸಮೀಪದ ದೇವಗಂಗೆ ಎಂಬ ಕೆಳದಿ