Skip to main content

Blog number 1140. ಶಿವಮೊಗ್ಗ ಮುನೀರ್ ನೆನಪಿನ ಸರಣಿ-4. ಸಹ್ಯಾದ್ರಿ ಕಾಲೇಜಿನಲ್ಲಿ ನಿತ್ಯೋತ್ಸವ ಕವಿ ನಿಸಾರ್ ಆಹಮದ್ ಗುರುಗಳಾಗಿದ್ದು, ಬೆಂಗಳೂರಲ್ಲಿ ಬಿ.ವಿ.ಕಾರಂತರ ನಿರ್ಧೇಶನದಲ್ಲಿ ಪ್ರದರ್ಶನ ಕಂಡ ಹಯವದನ ನಾಟಕದ ಪ್ರಾಯೋಜಕತ್ವ ಶಿವಮೊಗ್ಗದ ಕನ್ನಡಾಭಿಮಾನಿ, ಸಾಹಿತ್ಯ ಪೋಷಕ, ಉದ್ಯಮಿ ಹಿರೇಹಾಳ್ ಇಬ್ರಾಹಿಂ ಸಾಹೇಬರಿಂದ ಅವತ್ತೆ ಇಬ್ರಾಹಿಂ ಸಾಹೇಬರ ಪರಿಚಯ ಮುಂದೆ 45 ವರ್ಷ ಮುಂದುವರಿದ ಕಥೆ.

#ಶಿವಮೊಗ್ಗ_ಮುನೀರ್_ನೆನಪಿನ_ಸರಳಿ_4.

#ನಿತ್ಯೋತ್ಸವದ_ನಿಸಾರ್_ಆಹಮದ್_ಗುರುಗಳು

#ಅವರ_ಶಿಪಾರಸ್ಸಿನಿಂದ_ಹೆಚ್_ಇಬ್ರಾಹಿಂ_ಸಾ೦ಗತ್ಯ

#ನಲವತೈದು_ವರ್ಷಗಳ_ಕಾಲ_ಅವರ_ಸಾಹಿತ್ಯ_ರಾಯಭಾರಿ.

#ಕುವೆಂಪು_ಬರೆದ_ರಕ್ತಾಕ್ಷಿ_ನಾಟಕ_ಶೇಕ್ಸಪೀಯರ್_ಆದಾರಿತ_ಕೆಳದಿ_ವಂಶಸ್ಥರದ್ದು.

#ನಾಟಕ_ಪೂರ್ತಿ_ನೋಡಿದ_ಕುವೆಂಪು.

  

ಶಿವಮೊಗ್ಗ ಮುನೀರ್ ಎಲೆಯ ಮರೆಯ ಕಾಯಿಯಂತೆ ಕನ್ನಡ ಸಾಹಿತ್ಯ ಲೋಕದ ರಾಯಭಾರಿಗಳು ಆದರೆ ಅವರು ಶಿವಮೊಗ್ಗದ ಉಧ್ಯಮಿ ಹಿರೇಹಾಳ್ ಇಬ್ರಾಹಿಂ ಸಾಹೇಬರ ಸಾಹಿತ್ಯದ ರಾಯಬಾರಿ ಆಗಿ ಮಾತ್ರ ನೋಡಿದರೆ ತಪ್ಪಾಗುತ್ತದೆ.
  ಸಹ್ಯಾದ್ರಿ ಕಾಲೇಜಿನಲ್ಲಿ ಕವಿ ನಿತ್ಯೋತ್ಸವದ ಖ್ಯಾತಿಯ ನಿಸಾರ್ ಆಹಮದ್ ಶಿವಮೊಗ್ಗ ಮುನೀರರ ಗುರುಗಳು.
  ಇವರಿಂದಲೇ ಖ್ಯಾತ ಉದ್ಯಮಿ ಕನ್ನಡ ಸಾಹಿತ್ಯದ ಪೋಷಕರಾದ ಹಿರೇಹಾಳ್ ಇಬ್ರಾಹಿಂ ಅವರ ಪರಿಚಯ, ಇದು 1972 ರಲ್ಲಿ ಪ್ರಾರಂಭವಾಗಿ ಅವರ ಅ0ತ್ಯ ಕಾಲ 2017ರ ವರೆಗೆ ಸುಮಾರು 45 ವರ್ಷದಷ್ಟು ದೀರ್ಘಕಾಲ ಮುಂದುವರಿದಿತ್ತು.
  ಬೆಂಗಳೂರಿನಲ್ಲಿ ಗಿರೀಶ್ ಕಾರ್ನಾಡ್ ರು ಬರೆದ ನಾಟಕ ಬಿ.ವಿ.ಕಾರಂತರ ನಿರ್ದೇಶನದಲ್ಲಿ ರಂಗ ಪ್ರದರ್ಶನ ಮಾಡಿದ ಹಯವದನ ನಾಟಕಕ್ಕೆ  ಹಿರೇಹಾಳ್ ಇಬ್ರಾಹಿಂ ಸಾಹೇಬರು ಪ್ರಾಯಾಜೊಕತ್ವದಲ್ಲಿ ನಡೆದಾಗ ಇವರ ಮೊದಲ ಬೇಟಿ.
  ಶಿವಮೊಗ್ಗ ಮುನೀರ್ ಮೈಸೂರಲ್ಲಿ ಪಿಯುಸಿ ವಿದ್ಯಾರ್ಥಿ ಆಗಿದ್ದಾಗ ಕುವೆಂಪು ಅವರು ಶೇಕ್ಸಪಿಯರ್ ನಾಟಕವನ್ನು ಕೆಳದಿ ಸಂಸ್ಥಾನದ ಕೊನೆಯ ರಾಜರ ಆಳ್ವಿಕೆಯ ಘಟನೆಗೆ ಸಮ್ಮಿಳನ ಮಾಡಿದ #ರಕ್ತಾಕ್ಷಿ ನಾಟಕ 5 ನಿಮಿಷ ಮಾತ್ರ ನೋಡಲು ಬಂದ ಕುವೆಂಪು ಅವರು ಪೂತಿ೯ ನಾಟಕ ನೋಡಿ ಅಭಿನಂದಿಸುತ್ತಾರೆ.   ಈ ನಾಟಕದ ಮುಖ್ಯ ಪಾತ್ರ ರುದ್ರಾಂಬೆ ಪಾತ್ರ ಶಿವಮೊಗ್ಗ ಮುನೀರರದ್ದು ಈಗಲೂ ಈ ಪಾತ್ರದ ಸಂಭಾಷಣೆ ಅವರು ಹೇಳುತ್ತಾರೆಂದರೆ ಅವರ ನೆನಪಿನ ಶಕ್ತಿಗೆ ನಮಿಸಲೇ ಬೇಕು.

   

Comments

Popular posts from this blog

# ಜುಟ್ಟು ಕಾಳಿಂಗ ಸಪ೯ದ ಆಸ್ತಿತ್ವದ ಮಲೆನಾಡಿನ ಮಿಥ್ಯೆ#

  # ಕಾಳಿ೦ಗ ಸಪ೯ದಲ್ಲಿ ಜುಟ್ಟು ಕಾಳಿಂಗ ಸಪ೯ ಅಂತ ಇದೇ ಅನ್ನುವ ಯಾರು ನೋಡದ ಸಪ೯ದ ಅಸ್ತಿತ್ವ#    ಮಲೆನಾಡಿನ ಹಳ್ಳಿಗಳಲ್ಲಿ, ಅದು ಕಾಳಿ೦ಗ ಸಪ೯ದ ವಾಸಸ್ಥಳದ ಪರಿಸರದಲ್ಲಿ ಜುಟ್ಟು ಕಾಳಿಂಗ ಸಪ೯ ಇದೆ ಅನ್ನುವ ಮಾತು ಆಗಾಗ್ಗೆ ಕೇಳುತ್ತಿರುತ್ತೇವೆ. ಆದರೆ ಆ ರೀತಿಯ ಹಾವು ಇಲ್ಲ ಎಂದು ಹಾವಿನ ಬಗ್ಗೆ ಸಂಶೋದನೆ ಮಾಡುವವರು, ಅರಣ್ಯ ಇಲಾಖೆಯವರು, ಹಾವು ಹಿಡಿಯುವವರು ಖಡಾಖಂಡಿತವಾಗಿ ಹೇಳುತ್ತಾರಾದರು, ಈ ವದಂತಿ ಹೇಗೆ ಹರಡಿದೆ?.    ಇದು ಒಂದು ಊರು ಹಳ್ಳಿಯಲ್ಲ ನಾನು ನೋಡಿದಂತೆ ಮಹಾರಾಷ್ಟ್ರದ ರತ್ನಗಿರಿಯಿ೦ದ ಕೇರಳದ ಕಾಸರಗೋಡಿನ ತನಕ ಜುಟ್ಟು ಕಾಳಿಂಗದ ಅನೇಕ ರೋಚಕ ಕಥೆ ಕೇಳಿದ್ದೇನೆ.   ಪ್ರತ್ಯಕ್ಷ ನೋಡಿದವರು ತಾವು ಎನ್ನುವ ಅನೇಕರಲ್ಲಿ ಮಾತಾಡಿದ್ದೇನೆ ಆದರೆ ಅದು ನಂಬಲಹ೯ ಮಾಹಿತಿ ಅನಿಸಲಿಲ್ಲ, ಒಂದು ರೀತಿ ಕಾಲ್ಪನಿಕ ತ್ರಿಲ್ಲರ್ ಕಥೆ ಅಷ್ಟೇ ಅನ್ನಬಹುದು.    ಜಡೆ ಕಾಳಿಂಗ ಸಪ೯ಕ್ಕೆ ರೋಷ ಜಾಸ್ತಿ, ಹೆಡೆ ಮೇಲೆ ಕೂದಲಿನ ಜುಟ್ಟು ಇರುತ್ತೆ, ಮನುಷ್ಯರನ್ನ ಕಂಡರೆ ಓಡಿಸಿಕೊಂಡು ಬರುತ್ತೆ, ಅದರಿಂದ ತಪ್ಪಿಸಿಕೊಳ್ಳಲು ಒಂದೇ ದಾರಿ ಅದೇನೆಂದರೆ ತಗ್ಗಿನ ಪ್ರದೇಶದಲ್ಲಿ ಓಡುವುದು.     ಯಾಕೆ೦ದರೆ ಓಡಿಸಿಕೊಂಡು ಬರುವ ಜುಟ್ಟು ಕಾಳಿಂಗದ ಜುಟ್ಟು, ಇಳಿಜಾರಿನಲ್ಲಿ ಅದರ ತಲೆಯಿ೦ದ ಇಳಿಜಾರಿಗೆ ಸರಿಯುವುದರಿಂದ  ಕಣ್ಣಿನ ಮೇಲೆ ಕೂದಲ ಜುಟ್ಟು ಮುಚ್ಚುವುದರಿಂದ ಕಣ್ಣು ಕಾಣುವುದಿಲ್ಲ, ಆಗಲೇ ತಪ್...

ಶರಾವತಿ ನದಿ ಉಗಮ ಸ್ಥಾನ ಅಂಬುತೀಥ೯.

ಇಡೀ ರಾಜ್ಯಕ್ಕೆ ವಿದ್ಯುತ್ ನೀಡುವ ಶರಾವತಿ ನದಿಯ ಉಗಮ ಸ್ಥಾನ ಅಂಬುತೀಥ೯, ಆರಗ ಸಮೀಪದ ತೀಥ೯ಳ್ಳಿ ತಾಲ್ಲೂಕಿನಲ್ಲಿದೆ( ಶಿವಮೊಗ್ಗ ಜಿಲ್ಲೆ)    ಅಂಬು ತೀಥ೯ದಲ್ಲಿ ಶ್ರೀ ರಾಮ ವನವಾಸದಲ್ಲಿದ್ದಾಗ ಸೀತಾ ಮಾತೆಗೆ ಪೂಜೆಗೆ ನೀರು ಸಿಗದಿದ್ದಾಗ ರಾಮ ತನ್ನ ಅಂಬಿನಿಂದ (ಬಿಲ್ಲಿನ ಬಾಣದಿಂದ) ನೆಲ ಸೀಳಿ ನೀರು ತಂದರೆ೦ದು ರಾಮಾಯಣದಲ್ಲಿ ಉಲ್ಲೇಖವಿದೆ, ಹಾಗಾಗಿ ಈ ಸ್ಥಳಕ್ಕೆ ಅಂಬುತೀಥ೯ ಎಂಬ ಹೆಸರು ಬ೦ತು ಎಂಬುದು ಸ್ಥಳ ಪುರಾಣ.    ಇಲ್ಲಿ ಸಣ್ಣ ತೊರೆಯಾಗಿ ಹುಟ್ಟುವ ನದಿ ಬಾಣದಿಂದ ಹುಟ್ಟಿದ್ದರಿಂದ ಶರಾವತಿ ಎ೦ಬ ಹೆಸರು ಪಡೆದು ಪೂವ೯ಕ್ಕೆ ಹರಿದು ನಂತರ ಪಶ್ಚಿಮ ಮುಖವಾಗಿ ತಿರುಗಿ ಹೊಸನಗರ ತಾಲ್ಲೂಕನ್ನ ದಾಟಿ ಸಾಗರ ತಾಲ್ಲೂಕಿನ ಜೋಗದಲ್ಲಿ ಜಲಪಾತವಾಗಿ ದಟ್ಟ ಕಾನನದ ಕಣಿವೆ ಮುಖಾಂತರ ಹರಿದು ಹೊನ್ನಾವರದಲ್ಲಿ ಅರಬ್ಬಿ ಸಮುದ್ರ ಸೇರುತ್ತದೆ.   ಈ ನದಿಗೆ ಮೊದಲಿಗೆ ಹೀರೇ ಬಾಸ್ಕರ ಎಂಬಲ್ಲಿ ನಂತರ ಲಿಂಗನಮಕ್ಕಿಯಲ್ಲಿ ಆಣೆಕಟ್ಟು ಕಟ್ಟಿ ರಾಜ್ಯಕ್ಕೆ ಜಲ ವಿದ್ಯುತ್ ನೀಡುತ್ತಿರುವುದರಿಂದ ಲಕ್ಷಾಂತರ ಎಕರೆ ಕಾಡು, ಜಮೀನು ಅನೇಕ ಊರು ಮುಳುಗಡೆ ಆಯಿತು ಸಾವಿರಾರು ಕುಟುಂಬಗಳು ಸಂತ್ರಸ್ಥರಾದದ್ದು ಇತಿಹಾಸ.    ಈ ನದಿ ಜೋಗದಲ್ಲಿ ದುಮುಕುವ ಜಲಪಾತ ವಿಶ್ವದ ಸುಂದರ ಜಲಪಾತದಲ್ಲಿ ಒಂದಾಗಿದೆ.    ಹಾಗಾಗಿ ಶರಾವತಿ ನದಿಯ ಉಗಮ ಸ್ಥಾನಕ್ಕೆ ಮಹತ್ವವಿದೆ, ಒಮ್ಮೆಯಾದರೂ ಈ ನದಿ ಮೂಲ ಸಂದಶಿ೯ಸಬೇಕು ಆದರೆ ಇಲ್ಲಿ ಶರಾವತಿ ವ...

Blog number 1037. ರಾಜಕುಮಾರಿ ಶಾಂತವ್ವ ಮತ್ತು ದಲಿತ ಯುವಕ ಸಿದ್ದೇಶ್ವರರ ಅಮರ ಪ್ರೇಮದ ಸ್ಮಾರಕ, ಅನ್ಯ ಜಾತಿ ವಿವಾಹವಾದ್ದರಿಂದ ರಾಜಕುಮಾರಿಗೆ ಸೂಳೆ ಪಟ್ಟ ನೀಡಿದ ಸಮಾಜ. ಸಮಾಜದ ಒಳಿತಿಗಾಗಿ ಶಾಂತವ್ವ ಕಟ್ಟಿಸಿದ ಬೃಹತ್ ಕೆರೆಗೆ ಜನ ಕರೆದದ್ದು ಸೂಳೆ ಕಟ್ಟಿಸಿದ ಕೆರೆ ಅದೇ ಸೂಳೆಕೆರೆ / ಶಾಂತಿ ಸಾಗರ

# ಸೂಳೆಕೆರೆ (ಶಾಂತಿ ಸಾಗರ) ಅಂತರ್ ಜಾತಿ ಪ್ರೇಮ ವಿವಾಹದ ದುರOತ ಕಥೆ. #ಅಕ್ಟೋಬರ್ 2019 ರಲ್ಲಿ ತುಂಬಿ ತುಳುಕಿತ್ತು.  ಚಿತ್ರದುಗ೯, ದಾವಣಗೆರೆ ಬಳ್ಳಾರಿ ಮುಂತಾದ ಮಳೆ ಕಡಿಮೆ ಆಗುತ್ತಿದ್ದ ಜಿಲ್ಲೆಗಳಲ್ಲಿ ಅದೂ ಅಕ್ಟೋಬರ್ ತಿಂಗಳ 2019 ರಲ್ಲಿ  ಬಂದಿದ್ದ ಬಾರಿ ಮಳೆ ಎಲ್ಲಾ ಕೆರೆ, ಹೊಂಡಗಳು ತುಂಬಿ ತುಳುಕಿದೆ, ಸಾಮಾಜಿಕ ಜಾಲ ತಾಣದಲ್ಲಿ 40 ವಷ೯ದಲ್ಲಿ ಇಂತ ಮಳೆ ಬಂದಿಲ್ಲ ಅಂತ ಸುದ್ದಿ ಹರಿದಾಡುತ್ತಿತ್ತು ಮತ್ತು  ಸೂಳೆಕೆರೆ ತುಂಬಿ ಕೋಡಿ ಬಿದ್ದಿದೆ ಅಂತೆಲ್ಲ Post ನೋಡಿ ಬೆಂಗಳೂರಿಂದ ಬರುವಾಗ ಚಿತ್ರದುಗ೯ ಮಾಗ೯ವಾಗಿ ಚನ್ನಗಿರಿ ತಲುಪಿ ಸೂಳೆಕೆರೆ ನೋಡಲು ಹೋಗಿದ್ದೆ.  11ನೇ ಶತಮಾನದಲ್ಲಿ (1128ರಲ್ಲಿ)ಕೇವಲ 3 ವಷ೯ದಲ್ಲಿ ಈ ಕೆರೆ ನಿಮಾ೯ಣ ಮಾಡಿಸಿದ್ದು ಶಾಂತವ್ವ ಎಂಬ ರಾಜ ಕುಮಾರಿ ಅವಳು ಸ್ವಣ೯ವತಿ ಪಟ್ಟಣದ ದೊರೆ ವಿಕ್ರಮ ರಾಜನ ಮಗಳು, ಸಿದ್ದೇಶ್ವರ ಎಂಬ ಅನ್ಯ ಜಾತಿಯ ಯುವಕನೊ೦ದಿಗೆ ಗಾಂದವ೯ ವಿವಾಹ ಆಗುತ್ತಾಳೆ ಇದನ್ನ ಸಹಿಸದ ಮತ್ತು ಒಪ್ಪದ ಜನತೆ ಸೂಳೆ ಎಂದು ಮೂದಲಿಸುತ್ತಾರOತೆ ಈ ರೀತಿ ತನಗೆ ಬಂದ ಕಳಂಕ ಕಳೆಯಲು ಈ ಬೃಹತ್ ಕೆರೆ ತನ್ನ ಪತಿ ಸಿದ್ದೇಶ್ವರನ ಜೊತೆ ಸೇರಿ ನಿಮಿ೯ಸಿ ಕೆರೆಗೆ ಹಾರವಾದಳೆoಬ ಇತಿಹಾಸ ಇದೆ ಇದರಿಂದ ನೊಂದ ಪತಿ ಸಿದ್ಧೇಶ್ವರ ಕೂಡ ಎದುರಿನ ಗುಡ್ಡದಲ್ಲಿ ಜೀವ ತ್ಯಾಗ ಮಾಡುತ್ತಾನೆ ಈಗ ಅಲ್ಲಿ ಸಿದ್ದೇಶ್ವರ ದೇವಸ್ಥಾನವಿದೆ.   ಈ ಕೆರೆ ಈಗಲೂ ಸೂ...