Skip to main content

Blog number 1142. ಶಿವಮೊಗ್ಗ ಮುನೀರ್ ನೆನಪಿನ ಸರಣಿ 5,ಡಿವಿಎಸ್ ಕಾಲೇಜಿನ ಕನ್ನಡ ಅಧ್ಯಾಪಕ ಹುದ್ದೆ ಕೊಡಿಸಲು ಸ್ವತಃ ಉದ್ಯಮಿ ಮತ್ತು ಕನ್ನಡ ಸಾಹಿತ್ಯ ಪೋಷಕರಾದ ಹಿರೇಹಾಳ್ ಇಬ್ರಾಹಿಂ ಸಾಹೇಬರು ಮತ್ತು ಶಿವಮೊಗ್ಗ ಗುಲಾಂ ಅಭೀದ್ ಕಾಲೇಜಿನ ಅಧ್ಯಕ್ಷರಾಗಿದ್ದ ಬದರೀನಾರಾಯಣರ ಬೇಟೆಗೆ ಆನಂದಪುರಂಗೆ ಬಂದಿದ್ದ ನೆನಪು.

#ಶಿವಮೊಗ್ಗ_ಮುನೀರ್_ನೆನಪಿನ_ಸರಣಿ_5.

#ಡಿವಿಎಸ್_ಸಂಸ್ಥೆ_ಅಧ್ಯಕ್ಷರಾಗಿದ್ದ_A_R_ಬದರಿನಾರಾಯಣರು.

#ಅವರ_ಬೇಟಿಗೆ_ಆನಂದಪುರಂಗೆ_ಬಂದವರು_ಹಿರೇಹಾಳ್_ಇಬ್ರಾಹಿಂ_ಸಾಹೇಬರು_ಕಾಂಗ್ರೇಸ್_ಮುಖಂಡರಾದ_ಗುಲಾಂ_ಅಬೀದ್ 

#ಕವಿ_ನಿಸಾರ್_ಆಹಮದರ_ಶಿಷ್ಯ_ಇಬ್ರಾಹಿಂ_ಸಾಹೇಬರ_ಆಪ್ತ_ಮುನೀರ್
#ಅವರಿಗೆ_ಡಿವಿಎಸ್_ಸಂಸ್ಥೆ_ಕನ್ನಡ_ಅಧ್ಯಾಪಕ_ಹುದ್ದೆ_ಕೊಡಿಸಲು

  ಆನಂದಪುರಂ ಆರ್.ಬದರಿನಾರಾಯಣ ಅಯ್ಯ೦ಗಾರ್ ದೇಶದ ಮೊದಲ ಚುನಾವಣೆಯಲ್ಲಿ ಸಮಾಜವಾದಿ ಪಕ್ಷದ ಗೋಪಾಲಗೌಡರಿಂದ ಸೋತು ಎರಡನೆ ಚುನಾವಣೆಯಲ್ಲಿ ಗೋಪಾಲಗೌಡರನ್ನು ಸೋಲಿಸಿ ಕಾಂಗ್ರೇಸ್ ನಿಂದ ಶಾಸಕರಾಗಿ, ವಿದ್ಯಾ ಮಂತ್ರಿ, ಸಂಸದ, ವಿಧಾನ ಪರಿಷತ್ ಸದಸ್ಯರಾಗಿದ್ದು ಇತಿಹಾಸ.
   ಇವರು ವಿದ್ಯಾ ಮತ್ತು ಸಂಸ್ಕೃತಿ ಮಂತ್ರಿಗಳಾಗಿದ್ದಾಗ ಇವರು ಮತ್ತು ಆಗಿನ ಮುಖ್ಯಮಂತ್ರಿ ದೇವರಾಜ ಅರಸರು ಜಂಟಿಯಾಗಿ ಕರ್ನಾಟಕ ರಾಜ್ಯ ನಾಮಕರಣ ಮಾಡಿದ್ದು ಇತಿಹಾಸದ ದಾಖಲೆ ಆಗಿದೆ.
    ಬದರಿನಾರಾಯಣರ ಬೇಟಿ ಮಾಡಿ ಅವರು ಅಧ್ಯಕ್ಷರಾಗಿದ್ದ ಶಿವಮೊಗ್ಗದ ಡಿವಿಎಸ್ ಶಿಕ್ಷಣ ಸಂಸ್ಥೆಗೆ ಕರೆದಿರುವ ಕನ್ನಡ ಅಧ್ಯಾಪಕ ಹುದ್ದೆಗೆ ಅರ್ಜಿ ಹಾಕಿದ್ದ ಶಿವಮೊಗ್ಗ ಮುನೀರ್ ಅವರಿಗೆ ಶಿಪಾರಸ್ಸು ಮಾಡಲು ಖ್ಯಾತ ಉದ್ಯಮಿ, ಕನ್ನಡ ಬಾಷಾ ಸಾಹಿತ್ಯ ಪೋಷಕರಾಗಿದ್ದ ಹಿರೇಹಾಳ್ ಇಬ್ರಾಹಿಂ ಸಾಹೇಬರು ಮತ್ತು ಆಗಿನ ಜಿಲ್ಲಾ ಕಾಂಗ್ರೇಸ್ ಮುಖಂಡರಾದ ಗುಲಾಂಅಭೀದರು ಮುನೀರ್ ಅವರನ್ನು ಕರೆದು ಕೊಂಡು ಆನಂದಪುರಂಗೆ ಬದರಿನಾರಾಯಣರ ಮನೆಗೆ ಬರುತ್ತಾರೆ.
  ಬದರಿನಾರಾಯಣ್ ಅಯ್ಯಂಗಾರ್ ಇಬ್ರಾಹಿಂ ಸಾಹೇಬರ ಸ್ವಾಗತಿಸಿದ ಪರಿ, ಯಾವುದೇ ಡಿವಿಎಸ್ ಕಾಲೇಜ್ ಹುದ್ದೆ ಸಂದರ್ಶನದಲ್ಲಿ ಭಾಗವಹಿಸದ ಬದರಿನಾರಾಯಣ ಅಯ್ಯ೦ಗಾರ್ ಈ ಸಂದರ್ಶನದಲ್ಲಿ ಖುದ್ದು ಹಾಜರಾಗಿದ್ದು, ರನ್ನನ ಗಧಾಯುದ್ದ ಪಾಠ ಮಾಡಿ ಸಂದರ್ಶನ ಮಾಡಿದವರಿಗೆ ಸೈ ಎನ್ನಿಸಿದ ಮುನೀರ್ ಇದರಿಂದ ಕನ್ನಡ ಅಧ್ಯಾಪಕರಾಗಿ ಡಿವಿಎಸ್ ಸಂಸ್ಥೆ ಅಧ್ಯಕ್ಷರಿಂದ ನೇಮಕಾತಿ ಪತ್ರ ಪಡೆದ ಶಿವಮೊಗ್ಗ ಮುನೀರ್ ಅವರ ಅನುಭವ ಅವರ ಮಾತಿನಲ್ಲೇ ಕೇಳಿ.

Comments

Popular posts from this blog

# ಜುಟ್ಟು ಕಾಳಿಂಗ ಸಪ೯ದ ಆಸ್ತಿತ್ವದ ಮಲೆನಾಡಿನ ಮಿಥ್ಯೆ#

  # ಕಾಳಿ೦ಗ ಸಪ೯ದಲ್ಲಿ ಜುಟ್ಟು ಕಾಳಿಂಗ ಸಪ೯ ಅಂತ ಇದೇ ಅನ್ನುವ ಯಾರು ನೋಡದ ಸಪ೯ದ ಅಸ್ತಿತ್ವ#    ಮಲೆನಾಡಿನ ಹಳ್ಳಿಗಳಲ್ಲಿ, ಅದು ಕಾಳಿ೦ಗ ಸಪ೯ದ ವಾಸಸ್ಥಳದ ಪರಿಸರದಲ್ಲಿ ಜುಟ್ಟು ಕಾಳಿಂಗ ಸಪ೯ ಇದೆ ಅನ್ನುವ ಮಾತು ಆಗಾಗ್ಗೆ ಕೇಳುತ್ತಿರುತ್ತೇವೆ. ಆದರೆ ಆ ರೀತಿಯ ಹಾವು ಇಲ್ಲ ಎಂದು ಹಾವಿನ ಬಗ್ಗೆ ಸಂಶೋದನೆ ಮಾಡುವವರು, ಅರಣ್ಯ ಇಲಾಖೆಯವರು, ಹಾವು ಹಿಡಿಯುವವರು ಖಡಾಖಂಡಿತವಾಗಿ ಹೇಳುತ್ತಾರಾದರು, ಈ ವದಂತಿ ಹೇಗೆ ಹರಡಿದೆ?.    ಇದು ಒಂದು ಊರು ಹಳ್ಳಿಯಲ್ಲ ನಾನು ನೋಡಿದಂತೆ ಮಹಾರಾಷ್ಟ್ರದ ರತ್ನಗಿರಿಯಿ೦ದ ಕೇರಳದ ಕಾಸರಗೋಡಿನ ತನಕ ಜುಟ್ಟು ಕಾಳಿಂಗದ ಅನೇಕ ರೋಚಕ ಕಥೆ ಕೇಳಿದ್ದೇನೆ.   ಪ್ರತ್ಯಕ್ಷ ನೋಡಿದವರು ತಾವು ಎನ್ನುವ ಅನೇಕರಲ್ಲಿ ಮಾತಾಡಿದ್ದೇನೆ ಆದರೆ ಅದು ನಂಬಲಹ೯ ಮಾಹಿತಿ ಅನಿಸಲಿಲ್ಲ, ಒಂದು ರೀತಿ ಕಾಲ್ಪನಿಕ ತ್ರಿಲ್ಲರ್ ಕಥೆ ಅಷ್ಟೇ ಅನ್ನಬಹುದು.    ಜಡೆ ಕಾಳಿಂಗ ಸಪ೯ಕ್ಕೆ ರೋಷ ಜಾಸ್ತಿ, ಹೆಡೆ ಮೇಲೆ ಕೂದಲಿನ ಜುಟ್ಟು ಇರುತ್ತೆ, ಮನುಷ್ಯರನ್ನ ಕಂಡರೆ ಓಡಿಸಿಕೊಂಡು ಬರುತ್ತೆ, ಅದರಿಂದ ತಪ್ಪಿಸಿಕೊಳ್ಳಲು ಒಂದೇ ದಾರಿ ಅದೇನೆಂದರೆ ತಗ್ಗಿನ ಪ್ರದೇಶದಲ್ಲಿ ಓಡುವುದು.     ಯಾಕೆ೦ದರೆ ಓಡಿಸಿಕೊಂಡು ಬರುವ ಜುಟ್ಟು ಕಾಳಿಂಗದ ಜುಟ್ಟು, ಇಳಿಜಾರಿನಲ್ಲಿ ಅದರ ತಲೆಯಿ೦ದ ಇಳಿಜಾರಿಗೆ ಸರಿಯುವುದರಿಂದ  ಕಣ್ಣಿನ ಮೇಲೆ ಕೂದಲ ಜುಟ್ಟು ಮುಚ್ಚುವುದರಿಂದ ಕಣ್ಣು ಕಾಣುವುದಿಲ್ಲ, ಆಗಲೇ ತಪ್...

HISTORICAL SAGAR MARIKAMBA JATRA.ಐತಿಹಾಸಿಕ ಸಾಗರದ ಮಾರಿಕಾಂಬಾ ಜಾತ್ರೆ

     ಸಾಗರದ ಮಾರಿಕಾಂಬಾ ಜಾತ್ರೆ ಐತಿಹಾಸಿಕ ಚರಿತ್ರೆಯಲ್ಲಿ ದಾಖಲೆ.        ಕನಾ೯ಟಕ ರಾಜ್ಯದಲ್ಲಿ ಎರೆಡು ಮಾರಿಕಾಂಬಾ ಜಾತ್ರೆಗಳು ಪ್ರಸಿದ್ಧಿ ಪಡೆದಿದೆ ಅದು ಉತ್ತರ ಕನ್ನಡ ಜಿಲ್ಲೆಯ ಸಿಸಿ೯ಯದ್ದು ಮತ್ತು ಶಿವಮೊಗ್ಗ ಜಿಲ್ಲೆಯ ಸಾಗರದ್ದು.    ಪ್ರತಿ ಮೂರು ವಷ೯ಕೆ ಈ ಜಾತ್ರೆ ಆಚರಿಸಲಾಗುತ್ತೆ ಶೂದ್ರ ವಗ೯ದವರು ಭಯ ಮತ್ತು ಭಕ್ತಿಯಿಂದ ಕುರಿ ಕೋಳಿ ಬಲಿ ನೀಡುವ ಪರಂಪರೆ ಇದೆ.ಮಂಗಳವಾರ ಮೇಲು ಜಾತಿಯ ಜನರ ಪೂಜೆ ದೇವಿಯ ತವರು ಮನೆಯಲ್ಲಿ ನಡೆಯುತ್ತದೆ ನಂತರ ರಾತ್ರಿ ಗಂಡನ ಸೇರುವ ಮಾರಿಗೆ ಶೂದ್ರರ ಪೂಜೆ, ಬಲಿ ಮೀಸಲು.    ಮೊದಲೆಲ್ಲ ಮಾರಿಯಮ್ಮನಿಗೆ ಕೊಣನ ಬಲಿ ನೀಡುತ್ತಿದ್ದರು ಈಗ ಇದು ಕಾನೂನು ಪ್ರಕಾರ ನಿಷಿದ್ಧ ಆದರೆ ಈ ಆಚಾರಣೆ ಗುಪ್ತವಾಗಿ ಬೇರೆ ಕಡೆ ನಡೆಸಲಾಗುತ್ತೆ ಅನ್ನುತ್ತಾರೆ.    ಸಾಗರದ ಮಾರಿಕಾ0ಬಾ ಜಾತ್ರೆ ಜಾತ್ರೆಯಿ೦ದ ಜಾತ್ರೆಗೆ ಅದೂರಿಯಾಗಿ ನಡೆಯುತ್ತದೆ, ಕೋಟ್ಯಾoತರ ಹಣದ ವಹಿವಾಟು ಕೂಡ, ಮೊದಲೆಲ್ಲ ಹಣದ ಅಪರಾ ತಪರ ಆಗುತ್ತಿದೆ ಎಂಬ ಗುಲ್ಲು ಇತ್ತು ಆದರೆ ಈಗೆಲ್ಲ ಪಾರದಶ೯ಕವಾಗಿದೆ ಆದರೂ ಈ ಬಾರಿಯ 2017ರ ಜಾತ್ರೆಯಲ್ಲಿ ಅವ್ಯವಹಾರದ ಆರೋಪ ಮಾಡಲಾಗಿದೆ ಈ ವಿಚಾರ ಇಲ್ಲಿ ಅಪ್ರಸ್ತುತ ಆದರೂ ಈ ಬಗ್ಗೆ ಬರೆಯಲು ಕಾರಣ ಕೆಳದಿ ಅರಸರ ಕಾಲದಲ್ಲಿ ಅಂದರೆ 350 ವಷ೯ದ ಹಿಂದೆಯೂ ರಾಜರಿಗೆ ಸಾಗರದ ಮಾರಿಕಾಂಬಾ ಜಾತ್ರೆಯಲ್ಲಿ ಸಾವ೯ಜನಿಕರಿಂದ ಸಂಗ್ರಹಿಸಿದ ಜಾತ...

ರಿಪ್ಪನ್ ಪೇಟೆ ( ಶಿವಮೊಗ್ಗ ಜಿಲ್ಲೆ) ಹೆಸರು ಬಂದಿದ್ದಾದರು ಹೇಗೆ?

#  ರಿಪ್ಪನ್ ಪೇಟೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಪ್ರಮುಖ ಹೋಬಳಿ ಕೇಂದ್ರ ಈ ಆಂಗ್ಲ ಅಧಿಕಾರಿಯ ಹೆಸರು ಇಡಲು ಕಾರಣವಾದ ಘಟನೆ ತುಂಬಾ ಕುತೂಹಲಕಾರಿ# ಸ್ವಲ್ಪ ಕಾಲ ನೀವು ಈ ಲೇಖನ ಓದಿದರೆ ಕಾರಣ ಗೊತ್ತಾಗುತ್ತೆ.    ಆಗ ಬ್ರಿಟಿಷ್ ಸಕಾ೯ರರಕ್ಕೆ ಆಡಳಿತ ಸುಗುಮಕ್ಕೆ ರೈಲು ಮಾಗ೯ ಅತ್ಯಗತ್ಯ ಎಂಬ ಸಕಾರಣ ಮನವರಿಕೆ ಆದ ಕಾಲ ಏಕೆಂದರೆ ಬ್ರಿಟಿಷರು ಅಮೆರಿಕಾ ವಲಸೆಯಲ್ಲಿ ಇದನ್ನ ಮನಗOಡಿದ್ದರು, ಬೆಂಗಳೂಳಿ ರಿಂದ ಶಿವಮೊಗ್ಗ ತಲುಪುವ ರೈಲು ಮಾಗ೯ ತಾಳಗುಪ್ಪಾ ತಲುಪಿದರೆ ಜೋಗ ಜಲಪಾತ ವೀಕ್ಷಣೆಗೆ ಅನುಕೂಲ ಎಂಬುದು ಹಾಗೆ ಮತ್ತೊಂದು ಮ್ಯಸೂರು ಸಕಾ೯ರ ಶರಾವತಿ ನದಿಗೆ ಆಣೆಕಟ್ಟು ಕಟ್ಟಿ.ಜಲ ವಿದ್ಯುತ್ ತಯಾರಿಸಲು ಸಾಮಗ್ರಿ ಸಾಗಾಣಿಕೆಗೆ ಅನುಕೂಲ ಎಂಬ ಕಾರಣದಿಂದ ಶಿವಮೊಗ್ಗದಿಂದ ತಾಳಗುಪ್ಪ ರೈಲು ಮಾಗ೯ ಯೋಜನೆ ಮಾಡಲಾಯಿತು.    ಆಗ ಪ್ಲೇಗ್ ಮಾರಿಯ ಕಾಲ, ಎಲ್ಲೆಲ್ಲೂ ಜನ ಸಾಯುತ್ತಿದ್ದರು ಆಗಲೇ ಈ ರೈಲು ಮಾಗ೯ ಶಿವಮೊಗ್ಗ ಆರಸಾಳಿOದ ದೊಡ್ಡಿನ ಕೊಪ್ಪ (ಈಗಿನ ರಿಪ್ಪನ್ ಪೇಟೆ) ಆನಂದಪುರಂ ಮಾಗ೯ ನಿಗದಿ ಆಗಿತ್ತು ಆದರೆ ಈ ಭಾಗದಲ್ಲಿ ಒಂದು  ವದಂತಿ ಈ ಬಾಗದಲ್ಲಿ ಹರಡಿತ್ತು ಅದೇನೆಂದರೆ ರೈಲು ಬಂದರೆ ಪ್ಲೇ ಗು ಬರುತ್ತೆ  ಅಂತ.    ಹಾಗಾಗಿ ಈ ಭಾಗದಲ್ಲಿನ ಜಾಗೃತ ಜನ ನಾಯಕರುಗಳು ಹೇಗಾದರು ಮಾಡಿ ರೈಲು ಬರದಂತೆ ಮಾಡಲು ಎಲ್ಲಾ ರೀತಿಯ ಪ್ರಯತ್ನ ಮಾಡಲು ಪ್ರಾರಂಭಿಸಿದರು.     ಇದೇ ಸಂದಭ೯ದಲ್ಲ...