Skip to main content

Blog number 1154.ಜೆ.ಹೆಚ್.ಪಟೇಲರು ಹೇಳಿದ ಕುಡಿಯೋರೇ ಬೇರೆ... ಕುಡುಕರೆ ಬೇರೆ ಏನಿದರ ಅರ್ಥ?

#ಕುಡುಕರಿಂದ ಕುಡಿಯೋರ
       ಮಯಾ೯ದೆ ಹೋಗ್ತಾ ಇದೆ#
                     - ಜೆ.ಹೆಚ್.ಪಟೇಲರು 
 
       ಶಿವಮೊಗ್ಗದಲ್ಲಿ ಮಿತ್ರರಾದ ಬ್ಯಾಂಕ್ ಕೃಷ್ಣಮೂರ್ತಿ ಅವರ ಭದ್ರಾವತಿ ರಸ್ತೆಯ ಮಲವಗೊಪ್ಪದಲ್ಲಿ ಕದಂಬ ಹೋಟೆಲ್ ಉದ್ಫಾಟನೆ ಇತ್ತು ಅಲ್ಲಿ ಜೆ.ಹೆಚ್.ಪಟೇಲರ ಒಡನಾಡಿ ಸಂಯುಕ್ತ ಜನತಾದಳದ ಲೋಕಪಾಲ ಜೈನರ ಭಾಷಣ ಅವತ್ತಿನ ಸಭೆಯ ಹೈಲೆಟ್ ಆಗಿತ್ತು.
         ಸಭೆಯಲ್ಲಿ ಅನೇಕ ಗೌರವಾನ್ವಿತ ದಂಪತಿಗಳು ಉಪಸ್ಥಿತರಿದ್ದರು.
         ಅವರು ತಮ್ಮ ಬಾಷಣದ ಪ್ರಾರಂಭದಲ್ಲಿ ಕುಡಿಯೋರೆ ಬೇರೆ ಕುಡುಕರೇ ಬೇರೆ ಆದರೆ ನೀವು ಹೆಣ್ಣು ಮಕ್ಕಳು ಕುಡಿಯೋರನ್ನೆಲ್ಲ ಕುಡುಕರ ಸಾಲಿಗೆ ಸೇರಿಸಿ ಬಿಡುತ್ತೀರಿ.... ಇದನ್ನ ಪಟೇಲರು ಒಂದು ಘಟನೆಯಲ್ಲಿ ಹೇಳಿದ್ದು ನೆನಪಾಯಿತು ಕೇಳಿ ಅಂತ ಶುರುಮಾಡಿದರು.
            ಆಗ ಶಾಸಕರ ಭವನದಿಂದ ಮೆಜೆಸ್ಟಿಕ್ ತನಕ ಜನ ಸಂಚಾರ ವಿರಳ ಸಂಜೆ 8 ಆಗುತ್ತಿದ್ದಂತೆ ಪಟೇಲರು ಕೋಡೇಸ್ xxx ರಮ್ಮು ತರಲು ಹುಡುಗರಾದ ನಮ್ಮ ಹತ್ತಿರ ಹಣ ಕೊಟ್ಟು ಕಳಿಸಿದ್ದರು ನಾವು ತೆಗೆದುಕೊಂಡು ಬರುವಾಗ ಶಾಸಕರ ಭವನದ ಎದರು ಇಬ್ಬರು ಹೊಟ್ಟೆ ತುಂಬಾ ಕುಡಿದು ಕೊಂಡು ಜಗಳವಾಡುತ್ತಿದ್ದರು, ಅದನ್ನ ನಾವೆಲ್ಲ ನೋಡುತ್ತಾ ನಿಂತವರಿಗೆ ಸಮಯ ಹೋದದ್ದೇ ಗೊತ್ತಾಗಲಿಲ್ಲ.
   ಆಗ ಮೊಬೈಲ್ ಇಲ್ಲ, ಪಟೇಲರಿಗೆ ಕುಡಿಯುವ ಸಮಯ ಮೀರಿದ್ದರಿಂದ ಚಟಪಟಿಕೆಯಿಂದ ಕೋಪ ಬಂದಿತ್ತು, ಅಂತೂ ಇವರು ಅವರ ರಂ ಜೊತೆ ಅವರ ಕೋಣೆಗೆ ತಲುಪಿದಾಗ ಪಟೇಲರು ಯಾಕಯ್ಯ ಲೇಟ್ ಮಾಡಿದಿರಿ? ಅಂದಾಗ ಇವರು ಕೆಳಗೆ ಇಬ್ಬರು ಪುಲ್ ಟೈಟ್ ಆಗಿ ಜಗಳ ಹೊಡೆದಾಟ ಆಗ್ತಾ ಇತ್ತು ಹಾಗಾಗಿ ಲೇಟ್ ಆಯಿತು ಅಂದೆವು.
    ಆಗ ಸ್ವಲ್ಪ ಹೊತ್ತು ಸುಮ್ಮನಾದ ಪಟೇಲರು ತಮ್ಮ ಗಂಟಲು ರಂನಿಂದ ಒದ್ದೆ ಮಾಡಿಕೊಂಡವರು ಈ ಕುಡುಕರಿOದ ಕುಡಿಯೋರ ಮಯಾ೯ದೆ ಹೋಗ್ತಾ ಇದೆ ಅಂದರು.
  ನಮಗೆ ಇದು ಅಥ೯ ಆಗಲಿಲ್ಲ ವಿವರಿಸಿ ಅಂತ ನಾವೆಲ್ಲ ದಂಬಾಲು ಬಿದ್ದಾಗ ಆಗಷ್ಟ ರಮ್ಮಿನ ಲಯಕ್ಕೆ ಬಂದಿದ್ದ ಪಟೇಲರು ಹೇಳಿದ್ದು ಏನೆಂದರೆ, ಹೆಚ್ಚಿನ ಜನ ರಿಲ್ಯಾಕ್ಸ್ ಗೆ, ಪ್ಯಾಷನ್ ಗೆ ಅಥವ ಟೈo ಪಾಸ್ ಗೆ ಕುಡಿತಾರೆ ಇವರಿಂದ ಅವರ ಕುಟುಂಬಕ್ಕೆ ಸಮಾಜಕ್ಕೆ ಯಾವತ್ತೂ ತೊಂದರೆ ಇಲ್ಲ.
   ಆದರೆ ಈ ಕುಡುಕ ನನ್ನ ಮಕ್ಕಳು ಕುಡಿದು ಬೈಯ್ದಾಡಿ, ಹೊಡೆದಾಟ ಮಾಡಿ ಚರಂಡಿಗೆ ಬಿಳುತ್ತಾರೆ, ಇದರಿಂದ ಕುಡಿತಾರೆ ಅಂದರೆ ಹೆಣ್ಣು ಮಕ್ಕಳೆಲ್ಲ ಎಲ್ಲರೂ ಹಿಂಗೆ ಇತಾ೯ರೆ ಅಂತ ತಿಳಿದಿರುತ್ತಾರೆ ಹಾಗಾಗಿ ಕುಡಿಯೋರ ಮಯಾ೯ದಿ ಈ ಕುಡುಕರಿಂದ ಹೋಗ್ತಾ ಇದೆ ಅಂತ ಪಟೇಲರು ಹೇಳಿದರು ಅಂತ ಲೋಕಪಾಲ್ ಜೈನ್ ಮಾತು ನಿಲ್ಲಿಸಿದಾಗ ಇಡೀ ಕಾಯ೯ಕ್ರಮದಲ್ಲಿ ಭಾಗವಹಿಸಿದವರಿಂದ ಚಪ್ಪಾಳೆ ಮತು ನಗುವಿನ ಕಲರವ ತುಂಬಾ ಹೊತ್ತು ನಿಂತಿರಲಿಲ್ಲ.

Comments

Popular posts from this blog

# ಜುಟ್ಟು ಕಾಳಿಂಗ ಸಪ೯ದ ಆಸ್ತಿತ್ವದ ಮಲೆನಾಡಿನ ಮಿಥ್ಯೆ#

  # ಕಾಳಿ೦ಗ ಸಪ೯ದಲ್ಲಿ ಜುಟ್ಟು ಕಾಳಿಂಗ ಸಪ೯ ಅಂತ ಇದೇ ಅನ್ನುವ ಯಾರು ನೋಡದ ಸಪ೯ದ ಅಸ್ತಿತ್ವ#    ಮಲೆನಾಡಿನ ಹಳ್ಳಿಗಳಲ್ಲಿ, ಅದು ಕಾಳಿ೦ಗ ಸಪ೯ದ ವಾಸಸ್ಥಳದ ಪರಿಸರದಲ್ಲಿ ಜುಟ್ಟು ಕಾಳಿಂಗ ಸಪ೯ ಇದೆ ಅನ್ನುವ ಮಾತು ಆಗಾಗ್ಗೆ ಕೇಳುತ್ತಿರುತ್ತೇವೆ. ಆದರೆ ಆ ರೀತಿಯ ಹಾವು ಇಲ್ಲ ಎಂದು ಹಾವಿನ ಬಗ್ಗೆ ಸಂಶೋದನೆ ಮಾಡುವವರು, ಅರಣ್ಯ ಇಲಾಖೆಯವರು, ಹಾವು ಹಿಡಿಯುವವರು ಖಡಾಖಂಡಿತವಾಗಿ ಹೇಳುತ್ತಾರಾದರು, ಈ ವದಂತಿ ಹೇಗೆ ಹರಡಿದೆ?.    ಇದು ಒಂದು ಊರು ಹಳ್ಳಿಯಲ್ಲ ನಾನು ನೋಡಿದಂತೆ ಮಹಾರಾಷ್ಟ್ರದ ರತ್ನಗಿರಿಯಿ೦ದ ಕೇರಳದ ಕಾಸರಗೋಡಿನ ತನಕ ಜುಟ್ಟು ಕಾಳಿಂಗದ ಅನೇಕ ರೋಚಕ ಕಥೆ ಕೇಳಿದ್ದೇನೆ.   ಪ್ರತ್ಯಕ್ಷ ನೋಡಿದವರು ತಾವು ಎನ್ನುವ ಅನೇಕರಲ್ಲಿ ಮಾತಾಡಿದ್ದೇನೆ ಆದರೆ ಅದು ನಂಬಲಹ೯ ಮಾಹಿತಿ ಅನಿಸಲಿಲ್ಲ, ಒಂದು ರೀತಿ ಕಾಲ್ಪನಿಕ ತ್ರಿಲ್ಲರ್ ಕಥೆ ಅಷ್ಟೇ ಅನ್ನಬಹುದು.    ಜಡೆ ಕಾಳಿಂಗ ಸಪ೯ಕ್ಕೆ ರೋಷ ಜಾಸ್ತಿ, ಹೆಡೆ ಮೇಲೆ ಕೂದಲಿನ ಜುಟ್ಟು ಇರುತ್ತೆ, ಮನುಷ್ಯರನ್ನ ಕಂಡರೆ ಓಡಿಸಿಕೊಂಡು ಬರುತ್ತೆ, ಅದರಿಂದ ತಪ್ಪಿಸಿಕೊಳ್ಳಲು ಒಂದೇ ದಾರಿ ಅದೇನೆಂದರೆ ತಗ್ಗಿನ ಪ್ರದೇಶದಲ್ಲಿ ಓಡುವುದು.     ಯಾಕೆ೦ದರೆ ಓಡಿಸಿಕೊಂಡು ಬರುವ ಜುಟ್ಟು ಕಾಳಿಂಗದ ಜುಟ್ಟು, ಇಳಿಜಾರಿನಲ್ಲಿ ಅದರ ತಲೆಯಿ೦ದ ಇಳಿಜಾರಿಗೆ ಸರಿಯುವುದರಿಂದ  ಕಣ್ಣಿನ ಮೇಲೆ ಕೂದಲ ಜುಟ್ಟು ಮುಚ್ಚುವುದರಿಂದ ಕಣ್ಣು ಕಾಣುವುದಿಲ್ಲ, ಆಗಲೇ ತಪ್...

ಶರಾವತಿ ನದಿ ಉಗಮ ಸ್ಥಾನ ಅಂಬುತೀಥ೯.

ಇಡೀ ರಾಜ್ಯಕ್ಕೆ ವಿದ್ಯುತ್ ನೀಡುವ ಶರಾವತಿ ನದಿಯ ಉಗಮ ಸ್ಥಾನ ಅಂಬುತೀಥ೯, ಆರಗ ಸಮೀಪದ ತೀಥ೯ಳ್ಳಿ ತಾಲ್ಲೂಕಿನಲ್ಲಿದೆ( ಶಿವಮೊಗ್ಗ ಜಿಲ್ಲೆ)    ಅಂಬು ತೀಥ೯ದಲ್ಲಿ ಶ್ರೀ ರಾಮ ವನವಾಸದಲ್ಲಿದ್ದಾಗ ಸೀತಾ ಮಾತೆಗೆ ಪೂಜೆಗೆ ನೀರು ಸಿಗದಿದ್ದಾಗ ರಾಮ ತನ್ನ ಅಂಬಿನಿಂದ (ಬಿಲ್ಲಿನ ಬಾಣದಿಂದ) ನೆಲ ಸೀಳಿ ನೀರು ತಂದರೆ೦ದು ರಾಮಾಯಣದಲ್ಲಿ ಉಲ್ಲೇಖವಿದೆ, ಹಾಗಾಗಿ ಈ ಸ್ಥಳಕ್ಕೆ ಅಂಬುತೀಥ೯ ಎಂಬ ಹೆಸರು ಬ೦ತು ಎಂಬುದು ಸ್ಥಳ ಪುರಾಣ.    ಇಲ್ಲಿ ಸಣ್ಣ ತೊರೆಯಾಗಿ ಹುಟ್ಟುವ ನದಿ ಬಾಣದಿಂದ ಹುಟ್ಟಿದ್ದರಿಂದ ಶರಾವತಿ ಎ೦ಬ ಹೆಸರು ಪಡೆದು ಪೂವ೯ಕ್ಕೆ ಹರಿದು ನಂತರ ಪಶ್ಚಿಮ ಮುಖವಾಗಿ ತಿರುಗಿ ಹೊಸನಗರ ತಾಲ್ಲೂಕನ್ನ ದಾಟಿ ಸಾಗರ ತಾಲ್ಲೂಕಿನ ಜೋಗದಲ್ಲಿ ಜಲಪಾತವಾಗಿ ದಟ್ಟ ಕಾನನದ ಕಣಿವೆ ಮುಖಾಂತರ ಹರಿದು ಹೊನ್ನಾವರದಲ್ಲಿ ಅರಬ್ಬಿ ಸಮುದ್ರ ಸೇರುತ್ತದೆ.   ಈ ನದಿಗೆ ಮೊದಲಿಗೆ ಹೀರೇ ಬಾಸ್ಕರ ಎಂಬಲ್ಲಿ ನಂತರ ಲಿಂಗನಮಕ್ಕಿಯಲ್ಲಿ ಆಣೆಕಟ್ಟು ಕಟ್ಟಿ ರಾಜ್ಯಕ್ಕೆ ಜಲ ವಿದ್ಯುತ್ ನೀಡುತ್ತಿರುವುದರಿಂದ ಲಕ್ಷಾಂತರ ಎಕರೆ ಕಾಡು, ಜಮೀನು ಅನೇಕ ಊರು ಮುಳುಗಡೆ ಆಯಿತು ಸಾವಿರಾರು ಕುಟುಂಬಗಳು ಸಂತ್ರಸ್ಥರಾದದ್ದು ಇತಿಹಾಸ.    ಈ ನದಿ ಜೋಗದಲ್ಲಿ ದುಮುಕುವ ಜಲಪಾತ ವಿಶ್ವದ ಸುಂದರ ಜಲಪಾತದಲ್ಲಿ ಒಂದಾಗಿದೆ.    ಹಾಗಾಗಿ ಶರಾವತಿ ನದಿಯ ಉಗಮ ಸ್ಥಾನಕ್ಕೆ ಮಹತ್ವವಿದೆ, ಒಮ್ಮೆಯಾದರೂ ಈ ನದಿ ಮೂಲ ಸಂದಶಿ೯ಸಬೇಕು ಆದರೆ ಇಲ್ಲಿ ಶರಾವತಿ ವ...

HISTORICAL SAGAR MARIKAMBA JATRA.ಐತಿಹಾಸಿಕ ಸಾಗರದ ಮಾರಿಕಾಂಬಾ ಜಾತ್ರೆ

     ಸಾಗರದ ಮಾರಿಕಾಂಬಾ ಜಾತ್ರೆ ಐತಿಹಾಸಿಕ ಚರಿತ್ರೆಯಲ್ಲಿ ದಾಖಲೆ.        ಕನಾ೯ಟಕ ರಾಜ್ಯದಲ್ಲಿ ಎರೆಡು ಮಾರಿಕಾಂಬಾ ಜಾತ್ರೆಗಳು ಪ್ರಸಿದ್ಧಿ ಪಡೆದಿದೆ ಅದು ಉತ್ತರ ಕನ್ನಡ ಜಿಲ್ಲೆಯ ಸಿಸಿ೯ಯದ್ದು ಮತ್ತು ಶಿವಮೊಗ್ಗ ಜಿಲ್ಲೆಯ ಸಾಗರದ್ದು.    ಪ್ರತಿ ಮೂರು ವಷ೯ಕೆ ಈ ಜಾತ್ರೆ ಆಚರಿಸಲಾಗುತ್ತೆ ಶೂದ್ರ ವಗ೯ದವರು ಭಯ ಮತ್ತು ಭಕ್ತಿಯಿಂದ ಕುರಿ ಕೋಳಿ ಬಲಿ ನೀಡುವ ಪರಂಪರೆ ಇದೆ.ಮಂಗಳವಾರ ಮೇಲು ಜಾತಿಯ ಜನರ ಪೂಜೆ ದೇವಿಯ ತವರು ಮನೆಯಲ್ಲಿ ನಡೆಯುತ್ತದೆ ನಂತರ ರಾತ್ರಿ ಗಂಡನ ಸೇರುವ ಮಾರಿಗೆ ಶೂದ್ರರ ಪೂಜೆ, ಬಲಿ ಮೀಸಲು.    ಮೊದಲೆಲ್ಲ ಮಾರಿಯಮ್ಮನಿಗೆ ಕೊಣನ ಬಲಿ ನೀಡುತ್ತಿದ್ದರು ಈಗ ಇದು ಕಾನೂನು ಪ್ರಕಾರ ನಿಷಿದ್ಧ ಆದರೆ ಈ ಆಚಾರಣೆ ಗುಪ್ತವಾಗಿ ಬೇರೆ ಕಡೆ ನಡೆಸಲಾಗುತ್ತೆ ಅನ್ನುತ್ತಾರೆ.    ಸಾಗರದ ಮಾರಿಕಾ0ಬಾ ಜಾತ್ರೆ ಜಾತ್ರೆಯಿ೦ದ ಜಾತ್ರೆಗೆ ಅದೂರಿಯಾಗಿ ನಡೆಯುತ್ತದೆ, ಕೋಟ್ಯಾoತರ ಹಣದ ವಹಿವಾಟು ಕೂಡ, ಮೊದಲೆಲ್ಲ ಹಣದ ಅಪರಾ ತಪರ ಆಗುತ್ತಿದೆ ಎಂಬ ಗುಲ್ಲು ಇತ್ತು ಆದರೆ ಈಗೆಲ್ಲ ಪಾರದಶ೯ಕವಾಗಿದೆ ಆದರೂ ಈ ಬಾರಿಯ 2017ರ ಜಾತ್ರೆಯಲ್ಲಿ ಅವ್ಯವಹಾರದ ಆರೋಪ ಮಾಡಲಾಗಿದೆ ಈ ವಿಚಾರ ಇಲ್ಲಿ ಅಪ್ರಸ್ತುತ ಆದರೂ ಈ ಬಗ್ಗೆ ಬರೆಯಲು ಕಾರಣ ಕೆಳದಿ ಅರಸರ ಕಾಲದಲ್ಲಿ ಅಂದರೆ 350 ವಷ೯ದ ಹಿಂದೆಯೂ ರಾಜರಿಗೆ ಸಾಗರದ ಮಾರಿಕಾಂಬಾ ಜಾತ್ರೆಯಲ್ಲಿ ಸಾವ೯ಜನಿಕರಿಂದ ಸಂಗ್ರಹಿಸಿದ ಜಾತ...