Skip to main content

Blog number1126.ಆನಂದಪುರಂ ಸಾಹಿತ್ಯ ಹಬ್ಬ ಭಾಗ 9 , ವಿಶ್ವದಾಖಲೆಯ ಹಬ್ಬು ಕುಟುಂಬದ ರಾಮಚಂದ್ರ ಹಬ್ಬು ಅವರು ತಮ್ಮ ಸಾಹಿತ್ಯ ಕೃತಿ ಮತ್ತು ಜೀವನದ ಬಗ್ಗೆ ಆನಂದಪುರಂ ಸಾಹಿತ್ಯ ಹಬ್ಬದಲ್ಲಿ ಮಾತಾಡಿದ್ದಾರೆ

#ಭಾಗ_9.

#ಆನಂದಪುರಂ_ಸಾಹಿತ್ಯ_ಹಬ್ಬ.

#ವಿಶ್ವದಾಖಲೆಯ_ಹಬ್ಬು_ಸಾಹಿತ್ಯ_ಕುಟುಂಬದೊಂದಿಗೆ_ಸಂವಾದ

#ಕಾರವಾರದ_ದಿವೇಕರ_ಕಾಲೇಜಿನ_ನಿವೃತ್ತ_ಪ್ರಾಚಾರ್ಯರಾದ

#ರಾಮಚಂದ್ರ_ಹಬ್ಬು_ಸಂವಾದದಲ್ಲಿ.

 https://photos.app.goo.gl/o7NKC9G9diEkLnx3A

   ಇಂಡಿಯನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ನಲ್ಲಿ ಕನ್ನಡದ ಸಾಹಿತ್ಯ ಕುಟುಂಬದ ದಾಖಲೆ ನಮೂದಾಗಿದೆ ಸದ್ಯದಲ್ಲೇ ಗಿನ್ನೆಸ್ ರೆಕಾರ್ಡ್ ಕೂಡ ಆಗಲಿದೆ.
   ಒಂದು ಕುಟುಂಬದಲ್ಲಿ ತಂದೆ ಮತ್ತು ಆರು ಗಂಡು ಮಕ್ಕಳು ಸಾಹಿತಿಗಳು ಅವರೆಲ್ಲರ ಸಾಹಿತ್ಯ ಕೃತಿಗಳು ಪ್ರಕಟವಾಗಿದೆ.
  ದಿನಾಂಕ 11-ಡಿಸೆಂಬರ್ -2022 ರ ಭಾನುವಾರ ಆನಂದಪುರಂನಲ್ಲಿ ನಮ್ಮ ಶ್ರೀ ಕೃಷ್ಣ ಸರಸ ಕನ್ವೆನ್ಷನ್ ಹಾಲ್ ನಲ್ಲಿ ಹಬ್ಬು ಕುಟುಂಬದ ಪ್ರಕಟಿತ ಪುಸ್ತಕಗಳ ಪ್ರದರ್ಶನವನ್ನ ಶಿವಮೊಗ್ಗದ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ಮಂಜುನಾಥ್ ಉದ್ಘಾಟಿಸಿದ್ದರು.
  ನನ್ನ ಎರೆಡು ಪುಸ್ತಕಗಳ ಅವಲೋಕನ ಮತ್ತು ಹಬ್ಬು ಸಾಹಿತ್ಯದ ಸಂವಾದ ಕಾರ್ಯಕ್ರಮದ ಉದ್ಘಾಟನೆಯನ್ನು ಖ್ಯಾತ ಪತ್ರಕರ್ತ, ಶಿಕ್ಷಣ ತಜ್ಞ ಹಾಗೂ ಸಾಹಿತಿಗಳಾದ ಅರವಿಂದ ಚೊಕ್ಕಾಡಿ ಅವರು ನೆರವೇರಿಸಿದರು.
  ದಿವಂಗತ ಸುಗುಣ ಶಂಕರರು 1930 ರಿಂದ 1940ರವರೆಗೆ ಬರೆದ ಬರಹಗಳು ಅನಾಮಿಕನ ಉಲುಹು ಪುಸ್ತಕ 2004 ರಲ್ಲಿ ಪ್ರಕಟವಾಗಿದೆ.
  ಕುಟುಂಬದ ಹಿರಿಯ ಪುತ್ರ ದಿವಂಗತ ಸುಭಾಶ್ಚಂದ್ರ ಸುಗುಣ ಹಬ್ಬು ಆತ್ಮಕಥೆ ವ್ಯಕ್ತ 2018ರಲ್ಲಿ ಪ್ರಕಟವಾಗಿದೆ.
  ಎರಡನೆ ಪುತ್ರ ಮೋಹನ್ ಹಬ್ಬು ಅವರ ಸಂವಾದದ ವಿಡಿಯೋ ಭಾಗ 8 ರಲ್ಲಿ ಪ್ರಕಟವಾಗಿದೆ.
   ಭಾಗ-9 ರಲ್ಲಿ ಮೂರನೆ ಪುತ್ರ ರಾಮಚಂದ್ರ ಹಬ್ಬು ಅವರು ಆನಂದಪುರಂ ಸಾಹಿತ್ಯ ಹಬ್ಬದಲ್ಲಿ ಸಂವಾದದ ವಿಡಿಯೋ ಇಲ್ಲಿದೆ.
  ಇವರು ಇಂಗ್ಲೀಷ್ ಮೂಲದ ಬಿ.ಆರ್. ನಂದಾ ಅವರ MAHATMA GANDHI JERVANA CHARITHE 2001 ರಲ್ಲಿ ರಾಮಚಂದ್ರ ಹಬ್ಬು ಅವರು ಕನ್ನಡಕ್ಕೆ ಅನುವಾದಿಸಿ ಮಹಾತ್ಮ ಗಾಂಧಿ ಜೀವನ ಚರಿತೆ ಎಂದು 572 ಪುಟಗಳ ಪುಸ್ತಕ ದೆಹಲಿಯ ಆಕ್ಸ್ ಪಡ್೯ ಯುನಿವರ್ಸಿಟಿ ಪ್ರೆಸ್ ಇಂಡಿಯಾ ನವದೆಹಲಿ ಇವರ ಸಹಯೋಗದಿಂದ ಅನುವಾದಗೊಂಡು ಪುಕಟಿಸಲಾಗಿದೆ.
  ರಾಮಚಂದ್ರ ಹಬ್ಬು ಅವರು ಕಾರವಾರದ ದಿವೇಕರ್ ಕಾಲೇಜಿನ ಪ್ರಾಚಾರ್ಯರಾಗಿ ನಿವೃತ್ತರಾಗಿದ್ದಾರೆ, 20 ವರ್ಷ ಕಾರವಾರದಿಂದ ಹಿಂದೂ ಪತ್ರಿಕೆಗೆ ಮತ್ತು 8 ವರ್ಷ ಇಂಡಿಯನ್ ಎಕ್ಸ್ ಪ್ರೆಸ್ ಗೆ ವರದಿಗಾರರಾಗಿದ್ದರು.
https://photos.app.goo.gl/o7NKC9G9diEkLnx3A

Comments

Popular posts from this blog

# ಜುಟ್ಟು ಕಾಳಿಂಗ ಸಪ೯ದ ಆಸ್ತಿತ್ವದ ಮಲೆನಾಡಿನ ಮಿಥ್ಯೆ#

  # ಕಾಳಿ೦ಗ ಸಪ೯ದಲ್ಲಿ ಜುಟ್ಟು ಕಾಳಿಂಗ ಸಪ೯ ಅಂತ ಇದೇ ಅನ್ನುವ ಯಾರು ನೋಡದ ಸಪ೯ದ ಅಸ್ತಿತ್ವ#    ಮಲೆನಾಡಿನ ಹಳ್ಳಿಗಳಲ್ಲಿ, ಅದು ಕಾಳಿ೦ಗ ಸಪ೯ದ ವಾಸಸ್ಥಳದ ಪರಿಸರದಲ್ಲಿ ಜುಟ್ಟು ಕಾಳಿಂಗ ಸಪ೯ ಇದೆ ಅನ್ನುವ ಮಾತು ಆಗಾಗ್ಗೆ ಕೇಳುತ್ತಿರುತ್ತೇವೆ. ಆದರೆ ಆ ರೀತಿಯ ಹಾವು ಇಲ್ಲ ಎಂದು ಹಾವಿನ ಬಗ್ಗೆ ಸಂಶೋದನೆ ಮಾಡುವವರು, ಅರಣ್ಯ ಇಲಾಖೆಯವರು, ಹಾವು ಹಿಡಿಯುವವರು ಖಡಾಖಂಡಿತವಾಗಿ ಹೇಳುತ್ತಾರಾದರು, ಈ ವದಂತಿ ಹೇಗೆ ಹರಡಿದೆ?.    ಇದು ಒಂದು ಊರು ಹಳ್ಳಿಯಲ್ಲ ನಾನು ನೋಡಿದಂತೆ ಮಹಾರಾಷ್ಟ್ರದ ರತ್ನಗಿರಿಯಿ೦ದ ಕೇರಳದ ಕಾಸರಗೋಡಿನ ತನಕ ಜುಟ್ಟು ಕಾಳಿಂಗದ ಅನೇಕ ರೋಚಕ ಕಥೆ ಕೇಳಿದ್ದೇನೆ.   ಪ್ರತ್ಯಕ್ಷ ನೋಡಿದವರು ತಾವು ಎನ್ನುವ ಅನೇಕರಲ್ಲಿ ಮಾತಾಡಿದ್ದೇನೆ ಆದರೆ ಅದು ನಂಬಲಹ೯ ಮಾಹಿತಿ ಅನಿಸಲಿಲ್ಲ, ಒಂದು ರೀತಿ ಕಾಲ್ಪನಿಕ ತ್ರಿಲ್ಲರ್ ಕಥೆ ಅಷ್ಟೇ ಅನ್ನಬಹುದು.    ಜಡೆ ಕಾಳಿಂಗ ಸಪ೯ಕ್ಕೆ ರೋಷ ಜಾಸ್ತಿ, ಹೆಡೆ ಮೇಲೆ ಕೂದಲಿನ ಜುಟ್ಟು ಇರುತ್ತೆ, ಮನುಷ್ಯರನ್ನ ಕಂಡರೆ ಓಡಿಸಿಕೊಂಡು ಬರುತ್ತೆ, ಅದರಿಂದ ತಪ್ಪಿಸಿಕೊಳ್ಳಲು ಒಂದೇ ದಾರಿ ಅದೇನೆಂದರೆ ತಗ್ಗಿನ ಪ್ರದೇಶದಲ್ಲಿ ಓಡುವುದು.     ಯಾಕೆ೦ದರೆ ಓಡಿಸಿಕೊಂಡು ಬರುವ ಜುಟ್ಟು ಕಾಳಿಂಗದ ಜುಟ್ಟು, ಇಳಿಜಾರಿನಲ್ಲಿ ಅದರ ತಲೆಯಿ೦ದ ಇಳಿಜಾರಿಗೆ ಸರಿಯುವುದರಿಂದ  ಕಣ್ಣಿನ ಮೇಲೆ ಕೂದಲ ಜುಟ್ಟು ಮುಚ್ಚುವುದರಿಂದ ಕಣ್ಣು ಕಾಣುವುದಿಲ್ಲ, ಆಗಲೇ ತಪ್...

HISTORICAL SAGAR MARIKAMBA JATRA.ಐತಿಹಾಸಿಕ ಸಾಗರದ ಮಾರಿಕಾಂಬಾ ಜಾತ್ರೆ

     ಸಾಗರದ ಮಾರಿಕಾಂಬಾ ಜಾತ್ರೆ ಐತಿಹಾಸಿಕ ಚರಿತ್ರೆಯಲ್ಲಿ ದಾಖಲೆ.        ಕನಾ೯ಟಕ ರಾಜ್ಯದಲ್ಲಿ ಎರೆಡು ಮಾರಿಕಾಂಬಾ ಜಾತ್ರೆಗಳು ಪ್ರಸಿದ್ಧಿ ಪಡೆದಿದೆ ಅದು ಉತ್ತರ ಕನ್ನಡ ಜಿಲ್ಲೆಯ ಸಿಸಿ೯ಯದ್ದು ಮತ್ತು ಶಿವಮೊಗ್ಗ ಜಿಲ್ಲೆಯ ಸಾಗರದ್ದು.    ಪ್ರತಿ ಮೂರು ವಷ೯ಕೆ ಈ ಜಾತ್ರೆ ಆಚರಿಸಲಾಗುತ್ತೆ ಶೂದ್ರ ವಗ೯ದವರು ಭಯ ಮತ್ತು ಭಕ್ತಿಯಿಂದ ಕುರಿ ಕೋಳಿ ಬಲಿ ನೀಡುವ ಪರಂಪರೆ ಇದೆ.ಮಂಗಳವಾರ ಮೇಲು ಜಾತಿಯ ಜನರ ಪೂಜೆ ದೇವಿಯ ತವರು ಮನೆಯಲ್ಲಿ ನಡೆಯುತ್ತದೆ ನಂತರ ರಾತ್ರಿ ಗಂಡನ ಸೇರುವ ಮಾರಿಗೆ ಶೂದ್ರರ ಪೂಜೆ, ಬಲಿ ಮೀಸಲು.    ಮೊದಲೆಲ್ಲ ಮಾರಿಯಮ್ಮನಿಗೆ ಕೊಣನ ಬಲಿ ನೀಡುತ್ತಿದ್ದರು ಈಗ ಇದು ಕಾನೂನು ಪ್ರಕಾರ ನಿಷಿದ್ಧ ಆದರೆ ಈ ಆಚಾರಣೆ ಗುಪ್ತವಾಗಿ ಬೇರೆ ಕಡೆ ನಡೆಸಲಾಗುತ್ತೆ ಅನ್ನುತ್ತಾರೆ.    ಸಾಗರದ ಮಾರಿಕಾ0ಬಾ ಜಾತ್ರೆ ಜಾತ್ರೆಯಿ೦ದ ಜಾತ್ರೆಗೆ ಅದೂರಿಯಾಗಿ ನಡೆಯುತ್ತದೆ, ಕೋಟ್ಯಾoತರ ಹಣದ ವಹಿವಾಟು ಕೂಡ, ಮೊದಲೆಲ್ಲ ಹಣದ ಅಪರಾ ತಪರ ಆಗುತ್ತಿದೆ ಎಂಬ ಗುಲ್ಲು ಇತ್ತು ಆದರೆ ಈಗೆಲ್ಲ ಪಾರದಶ೯ಕವಾಗಿದೆ ಆದರೂ ಈ ಬಾರಿಯ 2017ರ ಜಾತ್ರೆಯಲ್ಲಿ ಅವ್ಯವಹಾರದ ಆರೋಪ ಮಾಡಲಾಗಿದೆ ಈ ವಿಚಾರ ಇಲ್ಲಿ ಅಪ್ರಸ್ತುತ ಆದರೂ ಈ ಬಗ್ಗೆ ಬರೆಯಲು ಕಾರಣ ಕೆಳದಿ ಅರಸರ ಕಾಲದಲ್ಲಿ ಅಂದರೆ 350 ವಷ೯ದ ಹಿಂದೆಯೂ ರಾಜರಿಗೆ ಸಾಗರದ ಮಾರಿಕಾಂಬಾ ಜಾತ್ರೆಯಲ್ಲಿ ಸಾವ೯ಜನಿಕರಿಂದ ಸಂಗ್ರಹಿಸಿದ ಜಾತ...

ರಿಪ್ಪನ್ ಪೇಟೆ ( ಶಿವಮೊಗ್ಗ ಜಿಲ್ಲೆ) ಹೆಸರು ಬಂದಿದ್ದಾದರು ಹೇಗೆ?

#  ರಿಪ್ಪನ್ ಪೇಟೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಪ್ರಮುಖ ಹೋಬಳಿ ಕೇಂದ್ರ ಈ ಆಂಗ್ಲ ಅಧಿಕಾರಿಯ ಹೆಸರು ಇಡಲು ಕಾರಣವಾದ ಘಟನೆ ತುಂಬಾ ಕುತೂಹಲಕಾರಿ# ಸ್ವಲ್ಪ ಕಾಲ ನೀವು ಈ ಲೇಖನ ಓದಿದರೆ ಕಾರಣ ಗೊತ್ತಾಗುತ್ತೆ.    ಆಗ ಬ್ರಿಟಿಷ್ ಸಕಾ೯ರರಕ್ಕೆ ಆಡಳಿತ ಸುಗುಮಕ್ಕೆ ರೈಲು ಮಾಗ೯ ಅತ್ಯಗತ್ಯ ಎಂಬ ಸಕಾರಣ ಮನವರಿಕೆ ಆದ ಕಾಲ ಏಕೆಂದರೆ ಬ್ರಿಟಿಷರು ಅಮೆರಿಕಾ ವಲಸೆಯಲ್ಲಿ ಇದನ್ನ ಮನಗOಡಿದ್ದರು, ಬೆಂಗಳೂಳಿ ರಿಂದ ಶಿವಮೊಗ್ಗ ತಲುಪುವ ರೈಲು ಮಾಗ೯ ತಾಳಗುಪ್ಪಾ ತಲುಪಿದರೆ ಜೋಗ ಜಲಪಾತ ವೀಕ್ಷಣೆಗೆ ಅನುಕೂಲ ಎಂಬುದು ಹಾಗೆ ಮತ್ತೊಂದು ಮ್ಯಸೂರು ಸಕಾ೯ರ ಶರಾವತಿ ನದಿಗೆ ಆಣೆಕಟ್ಟು ಕಟ್ಟಿ.ಜಲ ವಿದ್ಯುತ್ ತಯಾರಿಸಲು ಸಾಮಗ್ರಿ ಸಾಗಾಣಿಕೆಗೆ ಅನುಕೂಲ ಎಂಬ ಕಾರಣದಿಂದ ಶಿವಮೊಗ್ಗದಿಂದ ತಾಳಗುಪ್ಪ ರೈಲು ಮಾಗ೯ ಯೋಜನೆ ಮಾಡಲಾಯಿತು.    ಆಗ ಪ್ಲೇಗ್ ಮಾರಿಯ ಕಾಲ, ಎಲ್ಲೆಲ್ಲೂ ಜನ ಸಾಯುತ್ತಿದ್ದರು ಆಗಲೇ ಈ ರೈಲು ಮಾಗ೯ ಶಿವಮೊಗ್ಗ ಆರಸಾಳಿOದ ದೊಡ್ಡಿನ ಕೊಪ್ಪ (ಈಗಿನ ರಿಪ್ಪನ್ ಪೇಟೆ) ಆನಂದಪುರಂ ಮಾಗ೯ ನಿಗದಿ ಆಗಿತ್ತು ಆದರೆ ಈ ಭಾಗದಲ್ಲಿ ಒಂದು  ವದಂತಿ ಈ ಬಾಗದಲ್ಲಿ ಹರಡಿತ್ತು ಅದೇನೆಂದರೆ ರೈಲು ಬಂದರೆ ಪ್ಲೇ ಗು ಬರುತ್ತೆ  ಅಂತ.    ಹಾಗಾಗಿ ಈ ಭಾಗದಲ್ಲಿನ ಜಾಗೃತ ಜನ ನಾಯಕರುಗಳು ಹೇಗಾದರು ಮಾಡಿ ರೈಲು ಬರದಂತೆ ಮಾಡಲು ಎಲ್ಲಾ ರೀತಿಯ ಪ್ರಯತ್ನ ಮಾಡಲು ಪ್ರಾರಂಭಿಸಿದರು.     ಇದೇ ಸಂದಭ೯ದಲ್ಲ...